ಮಾನವೀಯತೆಯ ಹಾದಿಯನ್ನು ಆರಿಸಿಕೊಂಡವರು..
ಭಾರತವೂ ಸೇರಿದಂತೆ ನಾಲ್ಕು ಖಂಡಗಳಲ್ಲಿ ಅಲ್ಪ ಸ್ವಲ್ಪ ದಿನ ಜೀವಿಸಿ, ಮನುಷ್ಯರಲ್ಲಿ ಎಷ್ಟೊಂದು ಸಹಾಯ ಜೀವಿಗಳು ಇದ್ದಾರೆ ಎಂದು ಸಂತಸವಾಗುತ್ತದೆ. ಕೆನಡಾಗೆ ಬಂದು ಮೂರು ವರ್ಷಗಳಲ್ಲಿ ಮೂರು ಊರುಗಳನ್ನು ಸುತ್ತಾಡಿ ಈಗ ಬಂದಿರುವುದು ಬ್ರಾಂಪ್ಟನ್ ಎನ್ನುವ ಸುಂದರ ನಗರಕ್ಕೆ. ಈ ಊರನ್ನು ಹೂವುಗಳ ಊರು ಎಂದು ಕರೆಯುತ್ತಾರೆ, ಭಾರತೀಯರೇ ಹೆಚ್ಚಾಗಿರುವ ಈ ಊರಿನಲ್ಲಿ, ಕನ್ನಡಿಗರೂ ಹೆಚ್ಚಾಗಿದ್ದಾರೆ. ಕನ್ನಡದ ಜನ ಕೆನಡಾಗೆ ಬಂದಾಗ ಮೊದಲು ಹುಡುಕುವುದೆ ‘ಕನ್ನಡ ಸಂಘ’.
ಭೋಳೇತನದ ನಡುವೆಯೂ ಅರಳುವ ರಿಫ್ರೆಶಿಂಗ್ ಚಿಂತನೆಗಳು
ಈ ಜಗದ ಆಟವನ್ನು ನಿಚ್ಚಳವಾಗಿ ಮತ್ತು ಕಲಾತ್ಮಕವಾಗಿ ಕಾಣಿಸುವ ಹೊಣೆಹೊತ್ತ ರಂಗಭೂಮಿಯವರು ಕೊರೋನ ಕೊಟ್ಟ ವಿರಾಮದಲ್ಲಿ ಕೊಂಚ ನಿರಾಳವಾಗಿದ್ದರು. ನಿಧಾನಕ್ಕೆ ರಂಗಚಟುವಟಿಕೆಗಳು ಗರಿಗೆದರಿಕೊಳ್ಳುತ್ತಿವೆ ಅನಿಸುವ ಹೊತ್ತಿಗೇ ಒಮೈಕ್ರಾನ್ ನಮ್ಮನ್ನು ಬೆರಳೆಣಿಸುತ್ತ ಕೂರುವಂತೆ ಮಾಡುತ್ತಿದೆ. ಇದು ಏರಿಕೆ ಕಂಡು ರಂಗಮಂದಿರಗಳು ಮತ್ತೆ ಮುಚ್ಚಲ್ಪಟ್ಟರೆ ಅಥವಾ ಕೇವಲ ಅರ್ಧದಷ್ಟು ಭರ್ತಿಗೆ ಅವಕಾಶ ಅಂತಾದರೆ ಮುಂದಿನ ಕಥೆ ಏನು ಎಂದು ಕೇಳಿಕೊಳ್ಳುವಂತಾಗಿದೆ. ಆದರೆ ಈ ಎರಡೂ ಎರಡೂವರೆ ವರ್ಷಗಳ ಪರ್ವ ಸಮಯದಲ್ಲಿ…
ದಾದಾಪೀರ್ ಜೈಮನ್ ಹೊಸ ಅಂಕಣ “ಜಂಕ್ಷನ್ ಪಾಯಿಂಟ್” ಇಂದು ಆರಂಭ
‘ನಾವು ಯಾವಾಗಲೂ ಹಾಗೆಯೇ ಅಲ್ಲವಾ? ನಮಗೆ ಗೊತ್ತಿರುವ ಯಾವುದೋ ಎಳೆ, ಬೇರೆಯವರ ಮಾತುಗಳಲ್ಲಿ ಬಂದಾಗ ಮಾತ್ರ ಅವರ ಮೇಲಿನ ವಿಶ್ವಾಸಾರ್ಹತೆ ಮತ್ತು ನಂಬಿಕೆ ಹೆಚ್ಚುತ್ತದೆ. ಅಲ್ಲೂ ಹೀಗೆ ಆಯಿತು’ ಎನ್ನುತ್ತ ಪೀಜಿ ಹಾಸ್ಟೆಲ್ ರೂಮ್ ನಲ್ಲಿ ನಡೆದ ಭೇಟಿಯೊಂದರ ಕುರಿತು ಬರೆದಿದ್ದಾರೆ ಹೊಸ ತಲೆಮಾರಿನ ಕಥೆಗಾರ ದಾದಾಪೀರ್ ಜೈಮನ್. ತಮ್ಮ ಶಿಕ್ಷಣ ಮತ್ತು ವೃತ್ತಿ ನಿರ್ವಹಣೆಯ ಸಂದರ್ಭದಲ್ಲಿ ಹೀಗೆ ಭೇಟಿಯಾದ ವ್ಯಕ್ತಿಗಳ ಕುರಿತು, ಸನ್ನಿವೇಶಗಳ ಕುರಿತು ಅವರು ತಮ್ಮ ಹೊಸ ಅಂಕಣ…
ತಮಿಳಿನ ಮೂರು ಆ್ಯಂಥಾಲಾಜಿ ಸಿನೆಮಾಗಳು
ಈ ಸಿನೆಮಾದ ಎಲ್ಲ ಕತೆಗಳೂ ನಗರದ ಕತೆಗಳು. ಇತ್ತೀಚೆಗೆ ಬರುತ್ತಿರುವ ಭಾರತದ ವಿವಿಧ ಭಾಷೆಗಳ ಹೊಸ ಅಲೆಯ ಸಿನೆಮಾಗಳು ಹಳ್ಳಿಗಳಲ್ಲಿ ನಡೆಯದೇ ನಗರಗಳಲ್ಲಿ ನಡೆಯುತ್ತಿರುವುದನ್ನು ಗಮನಿಸಿ. ಇದು ನಿರ್ದೇಶಕರು ನಗರಗಳಲ್ಲಿ ಹುಟ್ಟಿ ಬೆಳೆದುದರ ಪರಿಣಾಮವೂ ಹೌದು ಮತ್ತು ಭಾರತ ನಗರೀಕರಣವಾಗುತ್ತಿರುವ ಪರಿಣಾಮವೂ ಎಂದು ಅನಿಸುತ್ತದೆ. ಕತೆಗಳು ಮೇಲ್ಮಧ್ಯಮ ಅಥವಾ ಶ್ರೀಮಂತ ವರ್ಗಗಳ ಮನೆಗಳಲ್ಲಿ ನಡೆಯುತ್ತವೆ, ಓಟಿಟಿಯಲ್ಲಿ ನೋಡಿದ ತಮಿಳಿನ ಮೂರು ಆ್ಯಂಥಾಲಾಜಿ ಸಿನೆಮಾಗಳ ಬಗ್ಗೆ ‘ಇಂಗ್ಲೆಂಡ್ ಪತ್ರ’ ಬರೆದಿದ್ದಾರೆ ಕೇಶವ ಕುಲಕರ್ಣಿ
‘ಆಲ್ ಈಸ್ ಕಾಮ್’ ಎನ್ನುವ ಕ್ರಿಸ್ಮಸ್ ಹಬ್ಬ
ಅದು ಚಳಿಗಾಲದಲ್ಲಿ ಬರುವ ಒಂದು ಸಂಕ್ರಮಣದ ದಿನ. ಆ ದಿನದಿಂದ ಸೂರ್ಯನ ಬೆಳಕು ಕ್ರಮೇಣ ಹೆಚ್ಚುತ್ತಾ ಹೋಗುತ್ತದೆ. ‘ಆಲ್ ಈಸ್ ಬ್ರೈಟ್’ ಎನ್ನುವ ಪದಗಳಿಗೆ ಹೊಸ ಅರ್ಥ ಹೊಳೆಯುತ್ತದೆ. ಹೊಸ ಬೆಳಕನ್ನ, ಸೂರ್ಯ ರಶ್ಮಿಯನ್ನ ತರುವ ಚೇತನವೊಂದು ಪ್ರಕೃತಿಯಲ್ಲಿ ಮೂಡಿತೇನೊ ಎನ್ನುವ ನಂಬಿಕೆ ಹುಟ್ಟುತ್ತದೆ. ರೋಮನ್ನರು ಆ ದಿನವನ್ನೇ ಪ್ರಶಸ್ತವೆಂದು ಆರಿಸಿಕೊಂಡರು. ಅವರು ‘ಧರ್ಮಬಾಹಿರ’ವೆಂದು ತಿಳಿದಿದ್ದ ಪೇಗನ್ ಸಂಸ್ಕೃತಿಯ ಹಬ್ಬಗಳ ಹುಟ್ಟಡಗಿಸಲು ಕೂಡ ಡಿಸೆಂಬರ್ ತಿಂಗಳನ್ನ….
ಯೂಲಿಸಿಸ್ ಕಾದಂಬರಿಗೆ ಶತಮಾನದ ಮೆರುಗು
ಇಂಗ್ಲೀಷ್ ಭಾಷೆಯ ಅತಿ ಕ್ಲಿಷ್ಟ ಕಾದಂಬರಿ ಎಂದೇ ಹೆಸರುವಾಸಿಯಾಗಿರುವ ಜೇಮ್ಸ್ ಜಾಯ್ಸ್ರ ಯೂಲಿಸಿಸ್ ಬಗ್ಗೆ ಎಷ್ಟು ಬರೆದರೂ ಸಾಕಾಗದೇನೋ. ಹದಿನೆಂಟು ಖಂಡಗಳಲ್ಲಿ ಒಂದೊಂದು ಅಧ್ಯಾಯವನ್ನೂ ಒಂದೊಂದು ಶೈಲಿಯಲ್ಲಿ ಬರೆಯಲಾಗಿದೆ. ಒಂದು ಚಾಪ್ಟರ್ ಸ್ವಗತದ ಶೈಲಿಯಲ್ಲಿದ್ದರೆ ಇನ್ನೊಂದು ಪ್ರಶ್ನೋತ್ತರದ ಮಾದರಿಯಲ್ಲಿದೆ. ಮತ್ತೊಂದು ನಾಟಕದ ಶೈಲಿಯಲ್ಲಿದೆ ಎನ್ನುವ ಕಾವ್ಯಾ ಕಡಮೆ , ಈ ಓದು ಸುಲಭಕ್ಕೆ ದಕ್ಕುವಂತಹುದಲ್ಲ ಎನ್ನುತ್ತಾರೆ. 1922ನೇ ಇಸವಿಯಲ್ಲಿ ಪ್ಯಾರಿಸ್ಸಿನ ಶೇಕ್ಸ್ಪಿಯರ್…
ಹಬ್ಬಗಳಿರಬೇಕು… ಬದುಕನ್ನು ಸವಿಯಲು
ಹಬ್ಬಗಳ ಮಹತ್ವವನ್ನು ಇತ್ತೀಚಿನ ದಿನಗಳಲ್ಲಿ ನಾವು ಕಳೆದುಕೊಳ್ಳುತ್ತಿದ್ದೇವೆ. ಮಕ್ಕಳಿಗೆ ಹಬ್ಬಗಳ ಹೆಸರೆ ಸರಿಯಾಗಿ ಗೊತ್ತಾಗದಾಗಿರುವುದು ವಿಪರ್ಯಾಸ. ಹಬ್ಬಗಳ ಪರಿಚಯವೇ ತಿಳಿಯದಿದ್ದಾಗ, ಅದರ ಪರಂಪರೆ
ಅರಿಯುವುದು ದೂರದ ಮಾತು. ಯಾವುದೇ ಹಬ್ಬವಿರಲಿ, ಯಾವುದೇ ಜನಾಂಗಕ್ಕೆ ಸೇರಿದ್ದಾಗಿರಲಿ, ಅದರ ಬಗ್ಗೆ ತಿಳಿದಾಗ ಆಚರಣೆ ಬಗ್ಗೆ ಗೌರವ ಹೆಚ್ಚುತ್ತದೆ. ಹಿಂದುಗಳಾದವರು ಕ್ರೈಸ್ತರ ಹಬ್ಬಕ್ಕೆ ನಿರ್ಲಕ್ಷ್ಯ ಮಾಡುವುದು, ಕ್ರೈಸ್ತರು ಮುಸಲ್ಮಾನರ ಹಬ್ಬಕ್ಕೆ ಅಗೌರವ ತೋರುವುದು, ಮುಸಲ್ಮಾನರು ಹಿಂದುಗಳ ಹಬ್ಬಕ್ಕೆ…
ಇರುಳಿನ ಹೊಸ ಬಣ್ಣ
ಆಗಾಗ ಊರಿನ ಬಂಧುಗಳು ತಂದು ಕೊಡುವ ಕುರ್ಲಿ ಸರಿಯಾಗಿ ಸ್ವಚ್ಛಗೊಳಿಸಿ ಹದವಾದ ಮಸಾಲೆಯೊಂದಿಗೆ ಬೇಯಿಸುವ ಕೆಲಸವು ರಾತ್ರಿಯಾದೊಡನೆ ಶುರುವಾಗುತ್ತದೆ. ಜೋರು ಮಳೆ ಬೀಳುವಾಗ, ಚಳಿ ತನ್ನ ಚಹರೆಯ ತೋರಿಸುತ್ತಿರುವಾಗ ಕಾಜುವಾಡಾದ ಯಾವುದೋ ಓಣಿಯ ಮನೆಯ ಬೆಂಕಿ ಒಲೆಯಲ್ಲಿ ತನ್ನ ತಾ ಹಸಿಯಾಗಿಯೆ ಕೆಂಡದಲ್ಲಿ ಸುಟ್ಟುಕೊಳ್ಳುವ ಏಡಿ ತನ್ನ ಅಮೋಘ ಪರಿಮಳವನ್ನು ಸುತ್ತಲಿನ ಲೋಕಕ್ಕೂ ಹರಡುತ್ತದೆ.
ಪ್ರತಿಭಟನೆಯ ದೃಷ್ಟಿಕೋನ ಮೀರಿ ಯೋಚಿಸುವ ಕೊಡಗಿನ ಗೌರಮ್ಮ
ಮೊದಲ ತಲೆಮಾರಿನ ಲೇಖಕಿಯರು ವಿಧವಾವಿವಾಹ, ಶೋಷಣೆ, ಸ್ತ್ರೀ ಸ್ವಾತಂತ್ರ್ಯ ಮೊದಲಾದ ವಿಷಯಗಳನ್ನು ಕುರಿತು ಬಹಳ ದಿಟ್ಟವಾಗಿ ಬರೆದಿದ್ದರೂ ಸ್ತ್ರೀ ವ್ಯಕ್ತಿತ್ವವನ್ನು ಕೇವಲ ಶೋಷಣೆ ಹಾಗೂ ಅದರ ವಿರುದ್ಧ ಪ್ರತಿಭಟಿಸುವ ಹೆಣ್ಣಿನ ಮಾದರಿಯನ್ನು ಹೊರತುಪಡಿಸಿ ನೋಡಲು ಸಾಧ್ಯವಾದರೆ ಅವಳನ್ನು ಹೊಸದಾದ ದೃಷ್ಟಿಕೋನದಲ್ಲಿ ಅರಿಯಲು ಸಾಧ್ಯವಾಗುತ್ತದೆ ಎಂಬುದು ಕೊಡಗಿನ ಗೌರಮ್ಮ ಅವರ ನಿಲುವಾಗಿತ್ತು. ಈ ಕಾರಣಕ್ಕಾಗಿ ಹೆಣ್ಣೊಬ್ಬಳು ಬದುಕಿದ, ಭಾವಿಸಿದ ಅನುಭವಗಳನ್ನು ಕುರಿತು ಬರೆದು…










