ಕ್ಲಾಸ್ಮೇಟ್ಸುಗಳ ಮಕ್ಕಳು ಮತ್ತು ಫಯಾಜ್ನ ಪುಲಾವು
‘ಮದುವೆಯಾದ ನಂತರ ಗಂಡು ಅಡುಗೆ ಮಾಡುವುದು ಅವಮಾನ, ಅದೇನಿದ್ದರೂ ಹೆಂಡತಿಯ ಕೆಲಸ’ ಎಂಬ ಅರೆಬೆಂದ ಅಲಿಖಿತ ಕಟ್ಟುಪಾಡೊಂದು ಉಂಟಲ್ಲ, ಅದು ಮೌಢ್ಯ. ಮದುವೆಯಾದ ನಂತರವೂ ಅಡುಗೆ ಕೆಲಸಗಳನ್ನು ಮಾಡುವುದು ಖಂಡಿತ ಅವಮಾನದ ಸಂಗತಿಯಲ್ಲ. ಬದಲಿಗೆ, ಪ್ರೀತಿ ಹೆಚ್ಚಿಸುವ ಸಂಗತಿ. ಕುಟುಂಬವೊಂದು ಹೀಗಿದ್ದಾಗ, ಅದು ಮಕ್ಕಳ ಯೋಚನಾ ಲಹರಿಯ ಮೇಲೂ ಪರಿಣಾಮ ಬೀರುತ್ತದೆ. ಅಪ್ಪನ ಈ…
ಹೆಸರು ಗುರುತಿಲ್ಲದ ಕಳೆದುಹೋದ ಜನರ ನೆನಪುಗಳ ದಿನ
ಮೊದಲನೇ ಮತ್ತು ಎರಡನೆ ಮಹಾಯುದ್ಧಗಳಲ್ಲಿ ಬ್ರಿಟನ್ನಿನ ಮತ್ತು ಅವರ ಮಿತ್ರರಾಷ್ಟ್ರಗಳ ಪರವಾಗಿ ಪಾಲ್ಗೊಂಡಿದ್ದ ಆಸ್ಟ್ರೇಲಿಯದ ಸೈನಿಕ ಕುಟುಂಬಗಳಿಗೆ ದೇಶದೊಳಗೆ ಅನೇಕ ಮನ್ನಣೆ ಸಂದಿದೆ. ಆದರೆ ಅವರಲ್ಲಿ ಬಹುತೇಕರು ಬಿಳಿಯರು. ಮಿಕ್ಕವರಿಗೆ ಅದೇ ಮಟ್ಟದಲ್ಲಿ ಮನ್ನಣೆ ಸಿಗಲಿಲ್ಲ. ಆ ಮಿಕ್ಕವರಲ್ಲಿ ಮುಖ್ಯವಾಗಿ ಸೇರಿದವರು ಆಸ್ಟ್ರೇಲಿಯನ್ ಅಬೊರಿಜಿನಲ್ ಜನರು, ಸ್ವಲ್ಪಮಟ್ಟಿಗೆ ಬ್ರಿಟಿಷರ ವಸಾಹತು…
ತಂದೆಯಂತೆ ಸಮಾಜಮುಖಿಯಾಗಿದ್ದ ಪುನೀತ್ ನೆನಪುಗಳು
ಪುನೀತ್ ಕನ್ನಡ ಸಿನೆಮಾಕ್ಕೆ ನಾಯಕನಾಗಿ ಬರುವಷ್ಟರಲ್ಲಿ ಶಿವರಾಜಕುಮಾರ್ ಆಗಲೇ ದೊಡ್ಡ ತಾರೆಯಾಗಿದ್ದರು ಮತ್ತು ರಾಘವೇಂದ್ರ ರಾಜಕುಮಾರ್ ಹಲವು ಸಿನೆಮಾ ಮಾಡಿ ತೆರೆಯಿಂದ ಮರೆಯಾಗಿದ್ದರು. ಬಾಲನಟನಾಗಿ ಕನ್ನಡಿಗರ ಮನೆಮಾತಾಗಿದ್ದ ಲೋಹಿತ್, ಪುನೀತ್ ಆಗಿ ತೆರೆಯ ಮೇಲೆ ಹೀರೋ ಆಗಿ ಬಂದು ಶಿವಣ್ಣನ ಹಾದಿ ಹಿಡಿಯುತ್ತಾರೋ ಇಲ್ಲವೋ ಎಂದು ಬಹಳ ಚರ್ಚೆ ನಡೆಯುತ್ತಿತ್ತು. ಪುನೀತ್ ಇಬ್ಬರ ಹಾದಿಯನ್ನೂ ತುಳಿಯದೇ ತಂದೆಯ ಹಾದಿ ಹಿಡಿದರು. ಹೀರೋ ವೈಭವೀಕರಣದ ಸಿನೆಮಾಗಳಿದ್ದರೂ ತಂದೆಯಂತೆ ಸಮಾಜ ಮುಖಿಯಾದ…
ಕಾಜುಗಾರ ಮನೆಯ ಇರುಳ ಬೆಳಕು
ಆ ದಿನ ನಾಗರಪಂಚಮಿ ಹಬ್ಬ. ಇದ್ದ ಸಾಮಾನಿನಲ್ಲಿಯೇ ಸೂಳಿರೊಟ್ಟಿ ಮಾಡಬೇಕೆಂಬುದು ಶಿಕ್ಷಕಿಯರ ಸಂಕಲ್ಪ. ಕರಾವಳಿ ಜನರ ಸಂಪ್ರದಾಯದಂತೆ ಹಬ್ಬಕ್ಕೆ ಮನೆ ಮಂದಿಯೆಲ್ಲ ಸೇರಿ ಮಾಡುವ ಸೂಳಿರೊಟ್ಟಿ ಆ ದಿನದ ವಿಶೇಷ ತಿಂಡಿ. ಇದನ್ನು ಮಾಡಲು ಇಡ್ಲಿ ಬೇಯಿಸುವ ಪಾತ್ರೆ ಬೇಕೆ ಬೇಕು. ಆದರೂ ಹೊಂದಿಸಿ ಗುಣಿಸಿ ಇದ್ದ ಅಡುಗೆ ಪಾತ್ರೆಯಲ್ಲಿಯೆ ಸೂಳಿರೊಟ್ಟಿ ಮಾಡಿ ತಿಂದಾಗ ಒಂದು ಸಾಹಸವೇ ಆಗಿತ್ತು. ಅಷ್ಟೊಂದು ನೀಟಾಗಿ ಬರದ ಸೂಳಿರೊಟ್ಟಿಗಳು ಸಿ.ಆರ್. ನಾಯ್ಕರ ಬಾಯಿಗೂ ಬಿತ್ತು. ಅಣಶಿಯ ಚಳಿ ಮಳೆ ಗಾಳಿಯಲ್ಲಿ ಹಬೆಯಾಡುವ ಬೆಳಗ್ಗಿನ ಬಿಸಿ ಬಿಸಿ ಚಹಾದ ಜೊತೆಗೆ…
ಇದೆಲ್ಲದಕ್ಕೂ ಒಂದು ಅರ್ಥ ಬೇಕಲ್ಲ!
ಮನುಕುಲ ಕಂಡ ಘೋರ ದುರಂತಗಳ ಹಸಿ ಹಸಿ ವಿವರಗಳು ಓದುಗರ ಗಂಟಲು ಕಟ್ಟಿಸುತ್ತವೆ. ಅಧಿಕಾರ ಮಾತ್ರದಿಂದ ಒಂದು ಜನಾಂಗಕ್ಕೆ ಸೇರಿದ ಜನರೆಲ್ಲರ ಹೆಸರು, ವಿದ್ಯೆ, ಊರುಗಳನ್ನೆಲ್ಲ ತೊಡೆದು ಹಾಕಿ ಸಂಖ್ಯೆಯೊಂದರಿಂದ ಮಾತ್ರ ಅವರನ್ನೆಲ್ಲ ಸಾಮೂಹಿಕವಾಗಿ ಗುರುತಿಸುವ ಈ ಜಾಗದಲ್ಲಿ ಇರಬೇಕಾಗಿ ಬಂದವರು ಬದುಕನ್ನು ಹೇಗೆ ಕಾಪಾಡಿಕೊಳ್ಳುತ್ತಿದ್ದರು ಎಂಬ ಬಗ್ಗೆ ಜ್ವಲಂತ ವಿವರಣೆಗಳಿವೆ. ಈ ಪುಸ್ತಕದ ಮೊದಲ ಭಾಗದಲ್ಲಿ ಆಸ್ವಿಚ್ ಎಂಬ ಕುಖ್ಯಾತ ನಾಜಿ ಕ್ಯಾಂಪಿನಲ್ಲಿ ಲೇಖಕರನ್ನು ಬಂಧಿಸಿಟ್ಟಾಗ ಅವರು ಅವರ ಸಹಚರರೊಂದಿಗೆ…
ನ್ಯಾಯದ ಹಾದಿಯಲ್ಲಿ ನಡೆಯಲಾಗದೇಕೆ?
ನಿರ್ಗತಿಕರಿಗೆ, ಅಸಹಾಯಕರಿಗೆ, ಹಿಂದುಳಿದವರಿಗೆ, ಅವಕಾಶವಂಚಿತರಿಗೆ ಸರಿ ಸಮಾನವಾದ ಹಕ್ಕು ಸಿಗಲೆಂದು ಹೋರಾಡಿದ ಅಂಬೇಡ್ಕರ್, ಅವರೇ ರಚಿಸಿದ ಸಂವಿಧಾನವನ್ನು ದುರುಪಯೋಗಪಡಿಸಿಕೊಂಡ ರಾಜಕಾರಣಿಗಳಿಂದ ಇವತ್ತಿಗೂ ಬಹು ದೊಡ್ಡ ವರ್ಗ ನಿರ್ಗತಿಕರಾಗಿ, ಅಸಹಾಯಕರಾಗಿ, ಅವಕಾಶವಂಚಿತರಾಗಿ ಬದುಕುತ್ತಿದ್ದಾರೆ. ಇದಕ್ಕೆಲ್ಲಾ ಮೂಲ ಕಾರಣವಾಗಿ ಬಂಡೆಯಂತೆ ಕುಳಿತಿರುವುದು ಲಂಚವೆನ್ನುವ ಭೂತ. ಜೈ ಭೀಮ್ ನಲ್ಲೂ ಕಾಣಬರುವುದು…
ಮಾಸ್ತಿಯವರ ಐತಿಹಾಸಿಕ ಕಾದಂಬರಿಗಳ ಕಥಾವಿಸ್ತಾರ
ಮಾಸ್ತಿಯವರು ಐತಿಹಾಸಿಕ ಕಾದಂಬರಿಗಳನ್ನು ಬರೆಯುವ ಕಾಲಕ್ಕೆ ಆದರ್ಶಪ್ರಾಯ ಚಾರಿತ್ರಿಕ ಕಥಾನಾಯಕರನ್ನು ಚಿತ್ರಿಸುವ ಮಾದರಿ ಒಂದು ಕಡೆ ಇತ್ತು. ಇನ್ನೊಂದು ಕಡೆ ಬಂಗಾಳದ ‘ಆನಂದಮಠ’ದಂಥ ಕಾದಂಬರಿ, ಶಿವಾಜಿ, ರಾಜಸಿಂಹರಂಥ ದೇಶಭಕ್ತರ ಜೀವನವನ್ನು ವೈಭವೀಕರಿಸಿ ಬರೆಯುವ ಮಾದರಿ ಇತ್ತು. ಇವರಿಗೆ ಹೋಲಿಸಿದರೆ ಮಾಸ್ತಿಯವರ ಎರಡೂ ಕಾದಂಬರಿಗಳ ಕಥಾನಾಯಕರು ಇಂಥ ಅದರ್ಶಪೂರ್ಣ ಮಾದರಿಗಳಿಗೆ ಹೊರತಾಗಿದ್ದಾರೆ.
ಸೇನಾಪಡೆ ನಿವೃತ್ತಿ ಜೀವನದ ಕಥೆಗಳು
ಸೇನೆಯು ಸೈನಿಕರ ದಿನನಿತ್ಯ ಜೀವನದ ಆಗುಹೋಗುಗಳ ಮೇಲೆ ಹದ್ದಿನಂತೆ ಕಣ್ಣಿಟ್ಟಿರುತ್ತದೆ, ಅವರು ಎಲ್ಲೇ ಹೋಗಲಿ ಬರಲಿ, ಯಾರನ್ನೇ ಭೇಟಿಯಾಗಲಿ, ಎಲ್ಲವೂ ದಾಖಲಾಗುತ್ತದೆ. ರಜೆ ಪಡೆದು ಮನೆಗೆ ಹೋದರು ಕೂಡ ಅವರು ಏನು ಮಾಡುತ್ತಿದ್ದಾರೆ ಎನ್ನುವುದನ್ನು ಮತ್ತೊಬ್ಬರು ಖಾತ್ರಿ ಪಡಿಸಿಕೊಳ್ಳುತ್ತಾರೆ. ಸದಾಕಾಲ ಕಾಲಿನ ಬೆರಳುಗಳ ಮೇಲೆ ನಿಂತಿರುವುದು ಮಾನಸಿಕ ಕ್ಷೋಭೆಗೆ ದಾರಿ ಮಾಡಿಕೊಡುತ್ತದೆ. ಖಾಸಗಿತನವೇ ಇಲ್ಲದೆ ಜೀವನ ಮಾಡುವ ಅವರ ಮಾನಸಿಕ ಸ್ಥಿತಿ ಹೇಗಿರುತ್ತದೆ…
ಸೂರ್ಯನ ಕೃಪೆ ಧರಿಸುವ ಕ್ಲಾರಾ
ಚೇತರಿಸಿಕೊಳ್ಳಲೇ ಸಾಧ್ಯವಾಗದಷ್ಟು ಬಲಹೀನಳಾಗಿದ್ದ ಜೋಸಿ ಒಮ್ಮೆ ಸೂರ್ಯನ ಕಿರಣ ತಾಕಿದ್ದೇ ಚೈತನ್ಯಶೀಲಳಾಗಿದ್ದು ಹೇಗೆ? ಅವಳು ನಿಜದ ಜೋಸಿಯೇ ಅಥವಾ ರೋಬೋ ಜೋಸಿಯೇ? ಮನುಷ್ಯ ಚೈತನ್ಯವನ್ನು ಎಷ್ಟರ ಮಟ್ಟಿಗೆ ಅನುಕರಿಸಬಹುದು? ವ್ಯಕ್ತಿಯೊಬ್ಬಳ ಇರುವು ಆಕೆಗೆ ಮಾತ್ರ ಸಂಬಂಧಿಸಿದ್ದೋ ಅಥವಾ ಅದು ಆಕೆಯ ಸುತ್ತಲಿರುವ, ಆಕೆಯನ್ನು ಬಹುವಾಗಿ ಪ್ರೀತಿಸುವ ಸಮುದಾಯಕ್ಕೆ ಸಂಬಂಧಿಸಿದ್ದೋ? ಮುಂತಾದ ಸಂಕೀರ್ಣ ಪ್ರಶ್ನೆಗಳಿಗೆ ಈ ಕಾದಂಬರಿ ಒಡ್ಡಿಕೊಳ್ಳುತ್ತದೆ.










