ಜೀವನದ ʼರಂಗ ನೇಪಥ್ಯʼದಿಂದ ಮರೆಯಾದ ಗುಡಿಹಳ್ಳಿ
ಹಿಂದೊಮ್ಮೆ ಗುಡಿಹಳ್ಳಿ ಸರ್ ಅವರ ಬಳಿ ಮಾತಾಡುವಾಗ ತಮಗೆ ಹುಷಾರಿಲ್ಲ ಅಂತ ಅವರು ಹೇಳಿದದ್ದು ನೆನಪಿಗೆ ಬಂತು. ಆದರೆ ಅದು ಸಾವಿನ ರೂಪದಲ್ಲಿ ಕೂತಿದೆ ಎನ್ನುವ ಕಲ್ಪನೆ ನನ್ನಲ್ಲಿ ಇರಲಿಲ್ಲ. ನನ್ನೊಂದಿಗೆ ಮಾತಾಡುವಾಗಲೇ ಅವರ ಧ್ವನಿ ಕ್ಷೀಣಿಸಿದಂತೆ ಅನಿಸುತ್ತಿತ್ತು. ಹೀಗೇ ಏನೋ ವಯೋಮಾನ ಸಹಜವಾಗಿ ಖಾಯಿಲೆ ಅಡರಿ ಕೊಂಡಿರುತ್ತದೆ… ಕಾಲಕ್ರಮದಲ್ಲಿ ಸುಧಾರಿಸುತ್ತದೆ ಅಂದುಕೊಂಡಿದ್ದೆ. ಆದರೆ ಇದು ಅವರ ಚಿತ್ರವನ್ನು ಸಂಪೂರ್ಣ ಕಲಕಿ ಬಿಡಬಹುದು ಎಂಬ ಅಂದಾಜೂ ಇರಲಿಲ್ಲ. ಎನ್.ಸಿ. ಮಹೇಶ್ ಬರೆಯುವ ‘ರಂಗ ವಠಾರ’ ಅಂಕಣ
ಕವಿಶೈಲದ ಹುಲಿಯೂ ದೂರದ ಕುದುರೆಮುಖವೂ
ಭಯವನ್ನು ಅನಾಮತ್ತಾಗಿ ಎತ್ತಿ ಬೆನ್ನ ಹಿಂದಕ್ಕೆ ಬಿಸಾಡಿ, ಕವಿಶೈಲದ ಕಲ್ಲುಬೆಂಚುಗಳ ಬಳಿ ನಿಂತು ಕಣಿವೆಯ ಕಡೆಗೆ ಕಣ್ಣು ಹಾಯಿಸಿದರೆ, ಅಸ್ಪಷ್ಟ ಬೆಳಕುಗಳಲ್ಲಿ ಕಂಡೂ ಕಾಣದಂತಿದ್ದ ದಟ್ಟ ಕಾಡು. ಬೆಳಗ್ಗೆ ಕಂಡಿದ್ದ ನೋಟದ ಅಂದಾಜಿನ ಮೇರೆಗೆ ಮೆಲ್ಲಗೆ ಗೆರೆಗಳನ್ನು ಒಂದೊಂದಾಗಿ ಜೋಡಿಸಿಕೊಳ್ಳುತ್ತ ಹೋದಂತೆ ರೋಮಾಂಚನ. ಅಷ್ಟೊಂದು ಅಗಾಧ ಕಾಡನ್ನು ಕತ್ತಲಲ್ಲಿ ಕಣ್ತುಂಬಿಕೊಳ್ಳುವುದೊಂದು ಅದ್ಭುತ ಪುಳಕ. ನಿಮ್ಮ ಕಂಗಳು ಬರೀ ಕಂಗಳಾಗಿಯಷ್ಟೇ ಉಳಿಯದಂಥ ಜಾದೂ ಅದು.
ಸಹ್ಯಾದ್ರಿ ನಾಗರಾಜ್ ಬರೆಯುವ ‘ಸೊಗದೆ’ ಅಂಕಣ
ಕನಸಿಗಿದೆ ಘನತೆ ಎನ್ನುತ ಕಾಡುವ ವಸಂತ
ಬೇರೆಬೇರೆ ದೇಶಗಳಿಂದ ತಂದಿಟ್ಟು ಬೆಳೆದ ಸಸ್ಯಸಂಪತ್ತಿಗೆ ಹೋಲಿಸಿದರೆ ಆಸ್ಟ್ರೇಲಿಯಾದ ಸ್ವಾಭಾವಿಕ, ದೇಶೀಯ ಹೂಗಳು ಇಲ್ಲಿ ಹೆಚ್ಚಾಗಿ ಜನಜನಿತವಾಗಿಲ್ಲ. ಕಾರಣ ನಿಮಗೆ ಹೊಳೆದಿರಬಹುದು. ಸಮಾಜವು ವಸಾಹತುಶಾಹಿ ಆಡಳಿತದಲ್ಲಿ ಇಲ್ಲಿನ ಎಲ್ಲವನ್ನೂ ಇಲ್ಲವಾಗಿಸುವ ಮನೋಭಾವವನ್ನಿಟ್ಟುಕೊಂಡು ದೇಶೀಯ ಹೂಹಣ್ಣುಗಳನ್ನು ಮೂಲೆಗೊತ್ತಿತ್ತು. ಕಳೆದೆರಡು ದಶಕಗಳಲ್ಲಿ ಬದಲಾವಣೆ ಗಾಳಿಗೆ ಶಕ್ತಿಬಂದಿದೆ. ಈಗ ಸರಕಾರಗಳು ಮತ್ತು ತೋಟಗಾರಿಕೆ ಸಮುದಾಯಗಳು ದೇಶೀಯ…”
ಸರಿ ತಪ್ಪುಗಳ ನಡುವೆ ರೇಖೆ ಎಳೆಯುವ ಮೊದಲು
ಒಬ್ಬರಿಗೆ ಸರಿ ಎನ್ನಿಸಿದ್ದು ಇನ್ನೊಬ್ಬರಿಗೆ ತಪ್ಪಾಗುವ ಈ ಚಮತ್ಕಾರವನ್ನು ಲೇಖಕರು ಆನೆ ಮತ್ತು ಮಾವುತನ ಉಪಮೆ ಬಳಸಿ ವಿಶ್ಲೇಷಿಸುತ್ತಾರೆ. ಅಷ್ಟು ದೊಡ್ಡ ಆನೆಯ ಮುಂದೆ ಮಾವುತ ಕಾಣುವುದೇ ಇಲ್ಲ. ಆದರೆ ಕೈಯಲ್ಲಿರುವ ಪುಟ್ಟದಾದ ಅಂಕುಶವನ್ನು ಉಪಯೋಗಿಸಿಕೊಂಡು ಅಂಥ ಬೃಹತ್ ಆಸೆಯನ್ನು ಅವನು ಪಳಗಿಸಬಲ್ಲ. ಹಾಗೆಯೇ ನಮ್ಮ ಯೋಚನೆಗಳನ್ನು ಕೂಡ ನಮ್ಮ ಅಂತರ್ದೃಷ್ಟಿಯೇ ಪಳಗಿಸುತ್ತದೆ, ಅದು ಕಣ್ಣಿಗೆ ಕಾಣಿಸದಿದ್ದರೂ ಬಹಳ ಪ್ರಭಾವಶಾಲಿಯಾದುದು ಎನ್ನುತ್ತಾರೆ.
ಪಯಣಪ್ರಿಯರ ನಾಡಿನ ಕೆಲವು ಮಾತುಗಳು
ನಾನು ಚಿಕ್ಕವನಿದ್ದಾಗ, ‘ಕುಟುಂಬ ಸಮೇತ ಹಾಲಿಡೆʼಗಳೇನಿದ್ದರೂ ತೀರ್ಥಯಾತ್ರೆಗಳೇ! ನಮ್ಮ ನಮ್ಮ ಮನೆಯ ದೇವರುಗಳ ಮತ್ತು ನಂಬಿಕೆಗಳ ಪ್ರಕಾರ ನಮ್ಮ ಹಾಲಿಡೆಯ ಗಮ್ಯಸ್ಥಾನಗಳು ನಿಗದಿಯಾಗಿರುತ್ತಿದ್ದವು. ತುಳಸಿಗೇರಿ, ಯಲಗೂರ, ಬಸವನ ಬಾಗೇವಾಡಿಗಳೇ ಕುಟುಂಬ ಸಮೇತ ಪ್ರಯಾಣದ ‘ಡೇಟ್ರಿಪ್ʼ ಜಾಗಗಳು. ಅವನ್ನು ಬಿಟ್ಟರೆ, ಮಂತ್ರಾಲಯ, ತಿರುಪತಿ, ಧರ್ಮಸ್ಥಳ ಅಥವಾ ಶೃಂಗೇರಿಗಳಿಗೆ ಬಸ್ಸಿನಲ್ಲಿ ಪಯಣಿಸಿ, ಅಲ್ಲಿಯ ಧರ್ಮಛತ್ರಗಳಲ್ಲೇ ತಂಗಿದ್ದು ದೇವರ ದರ್ಶನ ಮಾಡಿ…”
ಬೀಳುವವರನ್ನು ಕೈಹಿಡಿಯಬೇಕಾದವರು ಯಾರು?
ಅಸಹಾಯಕರು, ನಿರ್ಗತಿಕರು, ಬಡವರು ಹಾಗು ಅವಕಾಶ ವಂಚಿತರು ಪ್ರಪಂಚದ ಯಾವುದೇ ದೇಶದಲ್ಲಿದ್ದರೂ ಅವರು ಶಾಪಗ್ರಸ್ತರೆ. ಎಲ್ಲೋ ಕೆಲವರಿಗೆ ನೆರವು ಸಿಗುತ್ತದೆ, ಎಲ್ಲೋ ಕೆಲವು ನಿರ್ಗತಿಕರು ಸೆಟೆದು ನಿಲ್ಲುತ್ತಾರೆ, ಎಲ್ಲೋ ಕೆಲವು ಬಡವರು ತಿರುಗಿ ಬೀಳುತ್ತಾರೆ, ಕೆಲವರಿಗಷ್ಟೇ ಅವಕಾಶ ಸಿಗುತ್ತದೆ, ಆದರೆ ಉಳಿದವರಿಗೆ ದಾರಿ ಎಲ್ಲಿ. ಹಣವಂತರ ಜಗತ್ತಿನಲ್ಲಿ, ಮೋಸಗಾರರ ವಂಚನೆಯಲ್ಲಿ ಮುಗ್ಧರಿಗೆ ಮತ್ತು ನ್ಯಾಯವಂತರಿಗೆ ಸೋಲು ಕಟ್ಟಿಟ್ಟ ಬುತ್ತಿ. ಸಣ್ಣ ಹೋರಾಟ ನಡೆದರೆ ಅವರನ್ನು ಮಟ್ಟ ಹಾಕಲು ತುದಿಗಾಲಲ್ಲಿ ನಿಂತಿರುತ್ತದೆ ಈ ಜಗತ್ತು. ಪ್ರಶಾಂತ್ ಬೀಚಿ ಅಂಕಣ
ಅರ್ಥಲೋಕದ ಬೆರಗುಗಳ ಅನಾವರಣ
ಈ ಕಾದಂಬರಿಯ ಕಥನ ಶೈಲಿ ಸರಳವಾಗಿಲ್ಲ; ಯಾಕೆಂದರೆ, ಇಕೋ ತಾನು ಪ್ರಸ್ತುತ ಪಡಿಸುತ್ತಿರುವುದು ಮಧ್ಯಯುಗೀಯ ಅಧಿಕೃತ ಹಸ್ತಪ್ರತಿಯೆಂಬ ಕಲ್ಪನೆ ಓದುಗರಲ್ಲಿ ಮೂಡಿಸಲಿಕ್ಕಾಗಿ ಪ್ರಯತ್ನಿಸಿದ್ದಾನೆ. ಮಧ್ಯಯುಗದ ಐತಿಹಾಸಿಕ ವಿವರಗಳು, ಅಂದಿನ ಸಮಕಾಲೀನ ಚರ್ಚೆಗಳು, ಆವಿಷ್ಕಾರಗಳು, ಚರ್ಚು ಮತ್ತದರ ಆಂತರಿಕ ವಿವಾದಗಳು, ಇತ್ಯಾದಿ ಅನೇಕ ವಿವರಗಳನ್ನು ಬಳಸಿಕೊಳ್ಳಲಾಗಿದೆ. ಹಾಗೆಯೇ ಅನೇಕ ಸಮಕಾಲೀನ ವಿದ್ವಾಂಸರು, ಅನೇಕ ಭಾಷೆಗಳಲ್ಲಿರುವ ಅವರ ಬರಹಗಳನ್ನು, ಅನೇಕ ಪುರಾತನ ಉದ್ಧರಣಗಳನ್ನು ಉಲ್ಲೇಖಿಸಲಾಗಿದೆ.
ಉಂಬರ್ಟೋ ಇಕೋ ಬರೆದ “ದ ನೇಮ್ ಆಫ್ ದ ರೋಸ್”ಕಾದಂಬರಿಯ ಕುರಿತು ಬರೆದಿದ್ದಾರೆ ಕಮಲಾಕರ ಕಡವೆ
ತ್ರಿಮೂರ್ತಿಗಳನ್ನು ರಂಗದ ಬದುಕಿನ ಚಿತ್ರಗಳೊಂದಿಗೆ ಸಮೀಕರಿಸುತ್ತ…
‘ಕಾಯೌ ಶ್ರೀಗೌರಿ..’ ಎಂಬ ನಾಡಗೀತೆಯನ್ನು ಅಂದು ಬರೆದಿದ್ದ ಬಸವಪ್ಪ ಶಾಸ್ತ್ರಿಗಳು ನೆನಪಾಗುತ್ತಾರೆ. ಮೈಸೂರನ್ನು ನಾವಿಂದು ಸಾಂಸ್ಕೃತಿಕ ನಗರಿ ಎಂದು ಕರೆದುಕೊಳ್ಳುತ್ತೇವೆ. ವಿದ್ವತ್ತಿಗೆ ಹೆಸರಾದದ್ದು ಎಂದು ತಿಳಿದೇ ಇದೆ. ಇಷ್ಟಿದ್ದೂ ಬಸವಪ್ಪ ಶಾಸ್ತ್ರಿಗಳ ಸ್ಮಾರಕದ ಕಡೆಗೆ ಅಸಡ್ಡೆ ಯಾಕೆ ಮತ್ತು ಹೇಗೆ ಬೆಳೆಯಿತೋ ಗೊತ್ತಿಲ್ಲ. ಮೈಸೂರಿನಲ್ಲಿರುವ ಎಲ್.ಐ.ಸಿ ಬಿಲ್ಡಿಂಗ್ ಬಳಿ ರಸ್ತೆ ಪಕ್ಕದಲ್ಲಿ ಬಸವಪ್ಪ ಶಾಸ್ತ್ರಿಗಳ ಸ್ಮಾರಕವಿದೆ. ಅದರ ಬಣ್ಣ ಮಾಸಿ, ಗೋಡೆಗಳ ಮೇಲೆಲ್ಲ ಬಳ್ಳಿ ಹಬ್ಬಿಕೊಳ್ಳುವಷ್ಟು ನಿರ್ಲಕ್ಷ್ಯವೇಕೆ..”
ಲೇಡೀಸ್ ಹಾಸ್ಟೆಲ್ ದಯ್ಯ ಬಿಡಿಸಿದ ಭಟ್ಕಳದ ಬಾಲೆ
ನನ್ನಲ್ಲಿ ಲೇಡೀಸ್ ಹಾಸ್ಟೆಲ್ ಬಗೆಗೊಂದು ಅಸೀಮ ಕುತೂಹಲ ಬೆಳೆದಿತ್ತು. ಹಾಸ್ಟೆಲ್ ನಲ್ಲಿ ಹುಡುಗಿಯರ ಸಾಮ್ರಾಜ್ಯ ಹೇಗಿದ್ದೀತು? ಹರಟೆಯ ಹೊತ್ತಲ್ಲಿ ಏನೆಲ್ಲ ವಾಗ್ವಾದ ನಡೀಬಹುದು? ಅಡುಗೆ ಸರೀಗಿಲ್ಲ ಅಂದ್ರೆ ಅಡುಗೆಯವ್ರಿಗೆ ಕ್ಲಾಸ್ ತಗೋತಾರಾ? ಪೊಲಿಟಿಕ್ಸ್ ಬಗ್ಗೆ ಮಾತಾಡ್ತಾರಾ? ಹೊಡೆದಾಟಗಳು ನಡೆದ್ರೆ ಹೇಗೆ ನಡೀತದೆ? ಸಂಚುಗಳು ಹೆಂಗೆ ಎಕ್ಸಿಕ್ಯೂಟ್ ಆಗ್ತವೆ? ರೂಮು ಗಲೀಜು ಇಟ್ಕೊಂಡಿರ್ತಾರಾ ಅಥವಾ ಸಿಕ್ಕಾಪಟ್ಟೆ ನೀಟಾಗಿರ್ತದಾ?… ಹೀಗೆ ತರಹೇವಾರಿ ತರ್ಕಗಳು -ಸಹ್ಯಾದ್ರಿ ನಾಗರಾಜ್ ಬರೆಯುವ ‘ಸೊಗದೆ’ ಅಂಕಣ ನಿಮ್ಮ ಓದಿಗೆ.









