Advertisement

ಅಂಕಣ

ಕಾಡಿನ ಮನೆಯ ಅಕ್ಕರೆಯ ಕಾವು

ಕಾಡಿನ ಮನೆಯ ಅಕ್ಕರೆಯ ಕಾವು

ಕಾಜುಗಾರ ಅವರು ಕಾಜುವಾಡಾದ ಮನೆಯನ್ನು ಶಿಕ್ಷಕರಿಗೆ ಬಿಟ್ಟುಕೊಟ್ಟಿದ್ದಾರೆ.  ಸದ್ಯಕ್ಕೆ ಅವರ ಮನೆ ಶಿಕ್ಷಕರಿಂದ ತುಂಬಿದೆ. ನಾಲ್ಕೈದು ಜನ ಶಿಕ್ಷಕ ,ಶಿಕ್ಷಕಿಯರು, ಒಂದೇ ಗ್ಯಾಸ್ ಒಲೆಯಲ್ಲಿ ತಯಾರಾಗುವ ಸಾಮೂಹಿಕ ಭೋಜನ. ಅದು ಬೇಕು ಇದು ಇರಲಿ ಎಂಬ ಯಾವುದೇ ತಗಾದೆ ಇಲ್ಲ.  ಇದ್ದ ಸಾಮಾನು ಗಮನಿಸಿ ಆಯಾ ದಿನದ ಮೆನು ರೆಡಿಯಾಗುತ್ತಿತ್ತು. ಏಕೆಂದರೆ ಒಮ್ಮೊಮ್ಮೆ ಅಡುಗೆಗೆ ಬೇಕಾದ ಪದಾರ್ಥಗಳು ಅಣಶಿಯಲ್ಲಿ ಸಿಗುತ್ತಿರಲಿಲ್ಲ. ಅದನ್ನು ದೂರದ ಕುಂಬಾರವಾಡಾ, ಜೋಯಿಡಾದಿಂದ ತರಿಸಬೇಕಿತ್ತು. ಇದ್ದ ಸಾಮಾನಿನಲ್ಲಿಯೆ ‘ಅಗ್ದಿ’ ಬೆಸ್ಟ ಎನಿಸಿದ ‘ಉಂಚಾ ಕ್ವಾಲಿಟಿ’ಯ ಸಾಮಾನು ತೆಗೆದು ಆರಿಸಿ ಅಂಗಡಿಯ ದಿನಕರ ಮಾಮಾ ಅವರು  ಮಾಸ್ತರರಿಗೆ..”

read more
‘ಪ್ರೇಕ್ಷಕರಿಗೆ ರಂಗಭೂಮಿಯೇನೂ ಅನಿವಾರ್ಯವಲ್ಲ’

‘ಪ್ರೇಕ್ಷಕರಿಗೆ ರಂಗಭೂಮಿಯೇನೂ ಅನಿವಾರ್ಯವಲ್ಲ’

ರಂಗಭೂಮಿ ದಣಿದಿಲ್ಲ, ಬದಲಾಗಿ ತುಂಬ ಆ್ಯಕ್ಟಿವ್ ಆಗಿದೆ. ಈ ಕ್ಷೇತ್ರದಲ್ಲಿ ‘ಕೊಬ್ಬು’ ಖಂಡಿತ ಇದೆ ನಿಜ; ಆದರೆ ಅದೇ ಕೊಬ್ಬು ವಾಸ್ತವ ಮರೆಯುವಂತೆ ಮಾಡುತ್ತಿದೆ. ವಿಚಿತ್ರ ಅಂದರೆ ಇದು ರಂಗಭೂಮಿಯಲ್ಲಿ ತೊಡಗಿಸಿಕೊಂಡವರನ್ನು ದಣಿಸುವ ಬದಲು ತುಂಬ ಆ್ಯಕ್ಟಿವ್ ಮಾಡುತ್ತಿದೆ. ಯಾವ ಬಗೆಯ ಆ್ಯಕ್ಟಿವ್‌ನೆಸ್ ಅದು ಎಂದು ನಾವು ಗ್ರಹಿಸಬೇಕು.  ತಮ್ಮ ಪ್ರಯೋಗಗಳ ಮೂಲಕ ಜನರ ಎದುರು ಸೋಲುತ್ತಿರುವ ಪ್ರಕ್ರಿಯೆಯೇ ಅವರನ್ನು ವಿಚಿತ್ರ ರೀತಿಯಲ್ಲಿ ಆ್ಯಕ್ಟಿವ್ ಮಾಡುತ್ತಿದೆ.  -ರಂಗವಠಾರ ಅಂಕಣದಲ್ಲಿ ಎನ್. ಸಿ. ಮಹೇಶ್ ಅವರು ಡಾ. ಶ್ರೀಪಾದ ಭಟ್ ಅವರ ಲೇಖನಕ್ಕೆ ಪ್ರತಿಕ್ರಿಯೆ ದಾಖಲಿಸಿದ್ದಾರೆ.

read more
ಗೋಡೆಯಿಂದ ಹಾರಿದ ಹಾವುಗಳು ಮತ್ತು ಗೋಡೆಗಂಟಿದ ಮನುಷ್ಯರು

ಗೋಡೆಯಿಂದ ಹಾರಿದ ಹಾವುಗಳು ಮತ್ತು ಗೋಡೆಗಂಟಿದ ಮನುಷ್ಯರು

ಊರಿನ ಪ್ರತಿ ಬೀದಿಯನ್ನೂ ಅಲಂಕರಿಸಿದ್ದ ಹೊಗೆಸೊಪ್ಪಿನ ಬ್ಯಾರಲ್‌ಗಳ ಪೈಕಿ ವರ್ಷಕ್ಕೆ ಒಂದಾದರೂ ಬೆಂಕಿಯೊಳಗೆ ಕುಣಿಯುವುದು ಕಾಯಂ ಆದಮೇಲೆ, ಅವುಗಳನ್ನು ಊರಿಂದ ಆಚೆ ಹಾಕುವ ಮಹಾ ಸಂಚಿಕೆಗಳು ಶುರುವಾದವು. ಫಯರ್ ಆಫೀಸಿನವರ ಎಚ್ಚರಿಕೆಗಳು, ಪೊಲೀಸಿನವರ ಖಾರದ ಮಾತು, ಬ್ಯಾರಲ್ ಸುತ್ತಮುತ್ತಲ ಮನೆಗಳ ಮಂದಿಯ ತಕರಾರುಗಳ ಫಲವಾಗಿ ಬಹುತೇಕ ಬ್ಯಾರಲ್‌ಗಳು ಸದ್ದಿಲ್ಲದಂತೆ ಊರಿಂದ ಆಚೆ ನಡೆದವು. ಹಾಗಂತ ಸಮಸ್ಯೆಗಳೂ ಊರಾಚೆ ನಡೆದು ಹೋದವು ಎನ್ನುವ ಹಾಗಿಲ್ಲ. ‘ಸೊಗದೆ’ ಅಂಕಣದಲ್ಲಿ ಸಹ್ಯಾದ್ರಿ ನಾಗರಾಜ್  ಹೊಗೆಸೊಪ್ಪು ಬ್ಯಾರಲ್ ಗಳ ಕುರಿತು ಬರೆದಿದ್ದಾರೆ. 

read more
ಶಾಂತಿ, ಕ್ರಾಂತಿ, ಸ್ವಾತಂತ್ರ್ಯದ ಹಗಲುಗನಸು

ಶಾಂತಿ, ಕ್ರಾಂತಿ, ಸ್ವಾತಂತ್ರ್ಯದ ಹಗಲುಗನಸು

ಇಪ್ಪತ್ತೊಂದನೇ ಶತಮಾನದ ಈ ವರ್ಷದಲ್ಲೂ ಆಸ್ಟ್ರೇಲಿಯಾದ ಅಬೊರಿಜಿನಲ್ ಮತ್ತು ದ್ವೀಪವಾಸಿಗಳಿಗೆ ಹೇಳಿಕೊಳ್ಳುವಂತಹ ಸಾಮಾಜಿಕ ನ್ಯಾಯವಿನ್ನೂ ಸಿಕ್ಕಿಲ್ಲ. ದೇಶದ ಒಟ್ಟಾರೆ ಜನಸಂಖ್ಯೆಯಲ್ಲಿ ಕೇವಲ ಮೂರು ಶತಭಾಗ ಮಾತ್ರ ಅಬೊರಿಜಿನಲ್ ಮತ್ತು ದ್ವೀಪವಾಸಿಗಳು. ಕಾರಾಗೃಹಗಳಲ್ಲಿ ಅವರ ಸಂಖ್ಯೆ ಸುಮಾರು ಶೇ 29ರಷ್ಟು. ತಮ್ಮ ಹಕ್ಕುಗಳಿಗೆ ಹೋರಾಡುತ್ತಿರುವ ಅವರು, ಭಾರತದಲ್ಲಿ ಗಾಂಧೀಜಿಯ ಶಾಂತಿ ಮಂತ್ರದಿಂದ ಸ್ವಾತಂತ್ರ್ಯ ಸಿಕ್ಕಂತೆ, ತಮ್ಮಲ್ಲೂ ಪರಿವರ್ತನೆಯ ಬೆಳಕೊಂದು ಮೂಡಿಬರುವಂತಾಗಲಿ ಎಂದು ಹಾರೈಸುತ್ತಾರೆ. ಅಬೊರಿಜಿನಲ್ ಮತ್ತು ದ್ವೀಪವಾಸಿಗಳ ಕುರಿತು ಡಾ. ವಿನತೆ ಶರ್ಮ ಆಸ್ಟ್ರೇಲಿಯಾ ಪತ್ರದಲ್ಲಿ ಬರೆದಿದ್ದಾರೆ.

read more
ಅಜ್ಜ ಕೊಟ್ಟ ಜಾಗಟೆಯ ಮಹಿಮೆ

ಅಜ್ಜ ಕೊಟ್ಟ ಜಾಗಟೆಯ ಮಹಿಮೆ

ದಿವಂಗತ ಹಿರಿಯ ಬಲಿಪ ನಾರಾಯಣ ಭಾಗವತರು ಉಪಯೋಗಿಸುತ್ತಿದ್ದ ಜಾಗಟೆ ಧರ್ಮಸ್ಥಳದ ಧರ್ಮಾಧಿಕಾರಿಗಳಾಗಿದ್ದ ಮಂಜಯ್ಯ ಹೆಗ್ಗಡೆಯವರು ಕೊಟ್ಟದ್ದು. ಇದು ಈಗಲೂ ಬಲಿಪ ಮನೆತನದ ಅತ್ಯಮೂಲ್ಯ ಆಸ್ತಿಯಂತಿದೆ. ಇದು ಕರಾವಳಿಯ ತೆಂಕುತಿಟ್ಟು ಯಕ್ಷಗಾನದ ಅನಭಿಷಿಕ್ತ ಸಾಮ್ರಾಟ ಮುನ್ನಡೆಸಿದ ಯಕ್ಷಗಾನಗಳಿಗೆ ಸಾಕ್ಷಿಯಂತೆ ಇರುವ, ಐತಿಹಾಸಿಕ ಮಹತ್ವವಿರುವ ಜಾಗಟೆ. ಈಗ ಅದು ನೋಡುತ್ತಿರುವುದು ಬಲಿಪ ಪರಂಪರೆಯ ನಾಲ್ಕನೆಯ ತಲೆಮಾರನ್ನು. ‘ಬಲಿಪ ಮಾರ್ಗ’ ಅಂಕಣದಲ್ಲಿ ಕೃಷ್ಣ ಪ್ರಕಾಶ ಉಳಿತ್ತಾಯ ಬರಹ.

read more
ಕನ್ನಡ ವಿಮರ್ಶೆಯ ವಿವೇಕ: ಕೆಲವು ಮಾತುಗಳು

ಕನ್ನಡ ವಿಮರ್ಶೆಯ ವಿವೇಕ: ಕೆಲವು ಮಾತುಗಳು

ಕನ್ನಡದ ಈ ಕಾಲದ ವಿಮರ್ಶೆ ಮೇಲ್ನೋಟಕ್ಕೆ ತನ್ನನ್ನು ‘ನವ್ಯೋತ್ತರ’ವೆನ್ನಬೇಕೋ ‘ಆಧುನಿಕೋತ್ತರ’ವೆನ್ನಬೇಕೋ, ‘ದಲಿತ ಬಂಡಾಯೋತ್ತರ’ ಎನ್ನಬೇಕೋ ಎಂಬ ಸ್ವನಿರೂಪಣೆಯ ಗೊಂದಲದಲ್ಲಿಯೇ ಸಿಲುಕಿದಂತೆ ಕಂಡರೂ, ಅದು ಕನ್ನಡ ವಿಮರ್ಶೆಯ ಕಾರ್ಯಸೂಚಿ ಎಷ್ಟು ಅನಿರ್ದಿಷ್ಟವಾಗಿದೆ ಎಂಬುದರ ಸೂಚಕವೂ ಆಗಿ ಕಾಣಿಸುತ್ತದೆ. ಈಚಿನ ದಶಕಗಳಲ್ಲಿ ಸಂಸ್ಕೃತಿ ಅಧ್ಯಯನ ಹಾಗೂ ಸ್ತ್ರೀವಾದಿ ವಿಮರ್ಶೆಯ ಮಾದರಿಗಳು ಪ್ರಭಾವಶಾಲಿಯಾಗಿ ಬೆಳೆದಿರುವುದು ನಿಜವಾಗಿದೆ. ಡಾ. ಎಸ್. ಸಿರಾಜ್ ಅಹ್ಮದ್  ತಮ್ಮ ಅಂಕಣದಲ್ಲಿ ಪ್ರಸ್ತಾಪಿಸಿದ್ದಾರೆ. 

read more
ಈ ಹೃದಯವೆಂಬ ಏಕಾಂಗಿ ಬೇಟೆಗಾರ

ಈ ಹೃದಯವೆಂಬ ಏಕಾಂಗಿ ಬೇಟೆಗಾರ

ಕೆಲ್ಲಿಯವರ ಮಗಳು ಹನ್ನೆರಡು ವರ್ಷದ ಮಿಕ್‌ಳೊಂದಿಗೆ ಸಿಂಗರ್‌ನ ಸ್ನೇಹ ಶುರುವಾಗುತ್ತದೆ. ಸಂಗೀತದಲ್ಲಿ ತೀವ್ರ ಆಸಕ್ತಿಯಿರುವ ಮಿಕ್‌ಳಿಗೆ ರೆಕಾರ್ಡ್ ಪ್ಲೇಟುಗಳನ್ನು ಉಡುಗೊರೆಯಾಗಿ ಕೊಡುತ್ತಾನೆ ಸಿಂಗರ್. ಆದರೆ ತನ್ನ ಸುತ್ತಲಿನ ಲೋಕದೊಂದಿಗೆ ಈತನ ಸಂವಹನವೇನಿದ್ದರೂ ಏಕ ಮುಖವಾದುದು. ಇವನ ಮನಸ್ಸು ಉಳಿದವರಿಗೆಲ್ಲ ಮುಚ್ಚಿದ ಬಾಗಿಲು. ಯಾರೇ ಮಾತನಾಡಬೇಕಿದ್ದರೂ, ಅವರ ತುಟಿಯ ಚಲನೆ ನೋಡಿದರೆ ಸಾಕು ಅವರು ಏನನ್ನು ಹೇಳುತ್ತಿದ್ದಾರೆ ಅನ್ನುವುದು ಸಿಂಗರ್‌ನಿಗೆ ತಿಳಿದು ಹೋಗುತ್ತದೆ.

read more
ಯಾವುದನ್ನು ಬರೆದರೆ ಓದುಗರನ್ನು ತಲುಪಬಹುದೆಂಬ ಕುತೂಹಲ

ಯಾವುದನ್ನು ಬರೆದರೆ ಓದುಗರನ್ನು ತಲುಪಬಹುದೆಂಬ ಕುತೂಹಲ

ವಾಕ್ಯದ ಕೊನೆಗೆ ಎಲಿಪ್ಸನ್ನು ಉಪಯೋಗಿಸಿದರೆ, ಇನ್ನೂ ಏನೋ ಮಾತು ಉಳಿದಿದೆ ಎಂದು ಅರ್ಥ. ಸಂಭಾಷಣೆಯ ರೂಪದಲ್ಲಿರುವ ವಾಕ್ಯದ ನಡುವೆ ಎಲಿಪ್ಸ್ ಬರೆದರೆ, ಮಾತನಾಡುವ ವ್ಯಕ್ತಿ ಮಾತನ್ನು ನುಂಗಿದ ಎಂದು ಅರ್ಥ. ಒಟ್ಟಿನಲ್ಲಿ ಎಲಿಪ್ಸನ್ನು ಬಳಸಿದರೆ ಎಲ್ಲೋ ಏನೋ ಬಿಟ್ಟುಹೋಗಿದೆ ಎಂದು ಅರ್ಥ. ಆದ್ದರಿಂದ ಈ ಎಲಿಪ್ಸನ್ನು ಎಷ್ಟು ಕಡಿಮೆಯಾಗುತ್ತೋ ಅಷ್ಟು ಕಡಿಮೆ ಬಳಸುವುದು ಒಳ್ಳೆಯದು ಎನ್ನುತ್ತದೆ ಇಂಗ್ಲೀಷ್ ವ್ಯಾಕರಣ. ಎಲಿಪ್ಸ್ ಚಿಹ್ನೆಯನ್ನು ಎಲ್ಲಿ ಉಪಯೋಗಿಸಬೇಕು, ಎಲ್ಲಿ ಉಪಯೋಗಿಸಬಾರದು…”

read more
ಕನ್ನಡವೆಂದರೆ ಕುಣಿದಾಡುವುದೆನ್ನೆದೆ..

ಕನ್ನಡವೆಂದರೆ ಕುಣಿದಾಡುವುದೆನ್ನೆದೆ..

ಚಿತ್ರ ಬಿಡಿಸುವ ಮಕ್ಕಳನ್ನು ಚಿತ್ರಕಲಾ ಶಾಲೆಗೆ ಸೇರಿಸಬೇಕು ಎನ್ನುವ ಜ್ಞಾನ ಈಗಲೂ ಬಹುತೇಕ ಪಾಲಕರಿಗೆ ಇಲ್ಲ. ಆದರೆ ಚಿತ್ರಕಲೆ ಗೊತ್ತಿದ್ದವರನ್ನು ಸೈನ್ಸ್ ವಿಭಾಗಕ್ಕೆ ಸೇರಿಸುವುದಕ್ಕೆ, ಇಮಾಮ್ ಸಾಬಿ ಮತ್ತು ರಾಮನವಮಿಯ ಸಂಬಂಧ ಎನ್ನಬಹುದು. ಅದೇ ರೀತಿಯಲ್ಲಿ ಇತ್ತೀಚಿನ ಕರ್ನಾಟಕದ ಬಹುತೇಕ ಪಾಲಕರು ಇಂಗ್ಲೀಷ್ ಭಾಷೆಯ ಕಲಿಕೆಯ ಮೇಲೆ ಮಕ್ಕಳ ಜ್ಞಾನವನ್ನು ಅಳಿಯುತ್ತಾರೆ. ಮಾತನಾಡುವಾಗ ಮಧ್ಯೆ ಮಧ್ಯೆ ಇಂಗ್ಲೀಷ್ ಉಪಯೋಗಿಸಿದರೆ ಬುದ್ಧಿವಂತರೆಂದು ಗುರುತಿಸಿಕೊಳ್ಳುತ್ತಾರೆ. ಹಾಗಾಗಿ ಬೆಂಗಳೂರಿಗರ ಕನ್ನಡದಲ್ಲಿ ಕನ್ನಡವನ್ನು ಭೂತಗನ್ನಡಿ ಹಾಕಿ ಹುಡುಕಬೇಕು ಎಂದು ಕೆಲವರು ಕುಹುಕವಾಡುತ್ತಾರೆ.
ಪ್ರಶಾಂತ್‌ ಬೀಚಿ ಬರೆಯುವ ಅಂಕಣ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ