Advertisement

ಅಂಕಣ

ಲಾಂಡೇಯ್: ಅಫ್ಘನ್ ಹೆಣ್ಣುಮಕ್ಕಳ ಅಕ್ಷರಸಮರ

ಲಾಂಡೇಯ್: ಅಫ್ಘನ್ ಹೆಣ್ಣುಮಕ್ಕಳ ಅಕ್ಷರಸಮರ

ಲಾಂಡೇಯ್ ಸುತ್ತಲಿನ ಲೋಕದ ಕುರಿತಾದ ಗಹನ ವಿಚಾರಗಳನ್ನು, ಕಟುವಾಸ್ತವಗಳನ್ನು ಹಿಡಿದಿಡುವ ಮತ್ತು ಇತರರೊಂದಿಗೆ ಹಂಚಿಕೊಳ್ಳುವ ಮಾಧ್ಯಮ. ಹಾಗಾಗಿ, ಲಾಂಡೇಯ್ ರಚನೆಗಳು ನೋವಿನಿಂದ ಕೂಡಿರಬಹುದು ಅಥವಾ ಕಠೋರ ಟೀಕೆಯಿಂದ; ಹಾಸ್ಯದಿಂದ ತುಂಬಿರಬಹುದು ಅಥವಾ ವ್ಯಂಗ್ಯದಿಂದ. ಹಾಗೆಂದು, ಲಾಂಡೇಯ್ ಕೇವಲ ಬಂಡಾಯ ಕಾವ್ಯವೆಂದೇನೂ ಅಲ್ಲ; ಶೋಕ, ಪ್ರೇಮ, ದುರಂತಗಳೂ ಅದಕ್ಕೆ ಗ್ರಾಸವಾಗುವ ವಿಷಯವಾಗಬಹುದು. ಎಲ್ಲ ಕಾವ್ಯವೂ ಮೂಲದಲ್ಲಿ ಲಾಂಡೇಯ್ ತರವೇ ಅಲ್ಲವೇ – ಕರೆಯುವುದು…”

read more
ಹಾಗಾದರೆ ರಾಜಕೀಯದಲ್ಲೂ ಅಡುಗೆ ಮನೆಯದ್ದೇ ಮೌಲ್ಯಮಾಪನವೆಂದಾದರೆ..

ಹಾಗಾದರೆ ರಾಜಕೀಯದಲ್ಲೂ ಅಡುಗೆ ಮನೆಯದ್ದೇ ಮೌಲ್ಯಮಾಪನವೆಂದಾದರೆ..

ಸ್ಟ್ರೇಲಿಯಾದಲ್ಲಿ  ಜೂಲಿಯಾ ಪ್ರಧಾನಮಂತ್ರಿಯಾದ ಹೊಸತರಲ್ಲೇ ಆಕೆಯ ಬಗ್ಗೆ ನಾನಾತರಹದ ಸುದ್ದಿಗಳು, ಅಪನಿಂದನೆಗಳು, ಅವಹೇಳನಕಾರಿ ಮಾತುಗಳು ಹುಟ್ಟಿದ್ದವು. ಉದಾಹರಣೆಗೆ, ಆಕೆಯ ಮನೆ ಅಡುಗೆಮನೆಯ ಫೋಟೋವನ್ನು ಪತ್ರಿಕೆಗಳಲ್ಲಿ ಪ್ರಕಟಿಸಿ, ‘ನೋಡಿ, ಅಡುಗೆಮನೆ ಎಷ್ಟು ಖಾಲಿಯಾಗಿ ಬರಡುಬರಡಾಗಿದೆ, ಆಕೆ ಅಡುಗೆ ಮಾಡುವುದಿಲ್ಲ, ಆಕೆಗೆ ತಾಯ್ತನವೂ ಇಲ್ಲ, ಇಂಥಾ ಹೆಣ್ಣು ನಮ್ಮ ಸಮಾಜಕ್ಕೆ ಮಾದರಿಯಾಗಬಲ್ಲರೇ ಎಂದು ವಿಡಂಬನೆ ಮಾಡಲಾಗಿತ್ತು’. 

read more

ಚಲಿಸುತ್ತಲೇ ಯೋಚಿಸುವ ಮೆವ್ಲುಟ್

ಮೂರು ವರ್ಷಗಳ ಈ ಪತ್ರ ವ್ಯವಹಾರದ ನಂತರ, ಇಬ್ಬರೂ ‘ಓಡಿಹೋಗುವುದು’ ಅಂತ ಓಲೆಗಳ ಮೂಲಕವೇ ತೀರ್ಮಾನವಾಗುತ್ತದೆ. ಕೃತಿಕಾರರೇ ಕಣ್ಣಿಗೆ ಕಟ್ಟುವ ಹಾಗೆ ವರ್ಣಿಸುವಂತೆ, ಅದೆಷ್ಟೋ ದೂರ ‘ಓಡಿ’ ಬಂದ ಮೇಲೆ ಮೆವ್ಲುಟನಿಗೆ ತಾನು ಮನಸೋತ ಹುಡುಗಿ ಇವಳಲ್ಲ ಎಂಬುದು ತಿಳಿಯುತ್ತದೆ. ಮೆವ್ಲುಟನೇ ಹೇಳುವಂತೆ, ಈ ಓಡಿಹೋಗುವುದೆಂದರೆ ಮಹಾ ತಂತ್ರಗಾರಿಕೆಯ ವ್ಯವಹಾರವಾದುದರಿಂದ, ಅವನು ತನ್ನ ಅಂತರಂಗದ ಜ್ವಾಲಾಮುಖಿಯನ್ನು ಅದುಮಿಟ್ಟು, ಮುಖ್ಯವಾಗಿ ಅದನ್ನು ಹೊರಗೆ ತೋರಗೊಡದೇ..”

read more
ಭ್ರಷ್ಟಾಚಾರದ ಕೂಪದಲ್ಲಿ ನರಳುವ ನಾಗರೀಕರು…

ಭ್ರಷ್ಟಾಚಾರದ ಕೂಪದಲ್ಲಿ ನರಳುವ ನಾಗರೀಕರು…

ಭಾರತಕ್ಕೆ ಬಂದ ಮೇಲೆ ನಮ್ಮ ದೇಶಕ್ಕೆ ಮರಳಿದ ಸಂತಸ, ನಮ್ಮ ಸ್ನೇಹಿತರನ್ನು, ಸಂಬಂಧಿಕರನ್ನು ನೋಡಿದಾಗ ಆಗುವ ಆನಂದವೇ ಬೇರೆ. ಹಾಗಾಗಿ ನಮ್ಮ ದೇಶವೇ ನಮಗೆ ಸರಿ ಅನ್ನಿಸಿದ್ದು ಸುಳ್ಳಲ್ಲ. ಮಕ್ಕಳನ್ನು ಮತ್ತೆ ಶಾಲೆಗೆ ಸೇರಿಸಬೇಕಾಯಿತು. ಸರ್ಕಾರಿ ಶಾಲೆಯಲ್ಲಿ ಊಟ ಉಚಿತ, ಆದರೆ ಶುಚಿತ್ವ ಇಲ್ಲ. ಓದು ಉಚಿತ, ಉತ್ತಮ ಸೌಲಭ್ಯವಿಲ್ಲ. ಸಣ್ಣ ಸಣ್ಣ ಕೆಲಸ ಮಾಡುವವರೂ, ದಿನಗೂಲಿ ಮಾಡುವವರೂ ಕೂಡ ಅವರ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸುತ್ತಾರೆ. ವರ್ಷಕ್ಕೆ ಒಂದು ಲಕ್ಷಕ್ಕಿಂತ ಕಡಿಮೆ ಫೀ ತೆಗೆದುಕೊಳ್ಳುವ ಖಾಸಗಿ ಶಾಲೆ ಬೆಂಗಳೂರಿನಲ್ಲಿ ಕಾಣ ಸಿಗದು.
ಪ್ರಶಾಂತ್‌ ಬೀಚಿ ಅಂಕಣ

read more
ಸಿನೆಮಾ ನೋಡುವ ಖುಷಿಯ ಹಿಂದಿದೆ ಸುಖದುಃಖಗಳು

ಸಿನೆಮಾ ನೋಡುವ ಖುಷಿಯ ಹಿಂದಿದೆ ಸುಖದುಃಖಗಳು

ಆಗ ಲಾಸ್ಟ್ ಶೋ  ರಾತ್ರಿ ಒಂಬತ್ತು ಗಂಟೆಗೆ ಇರುತ್ತಿತ್ತು; ಆಗಿನ ಕಾಲದಲ್ಲಿ ಒಂಬತ್ತು ಗಂಟೆ ಅಂದರೆ ಒಂಥರ ಅಪರಾತ್ರಿ ಇದ್ದಂತೆ, ಬರೀ ಗೂರ್ಖಾಗಳು, ಕುಡುಕರು, ನಾಯಿಗಳು ಮಾತ್ರ ರಸ್ತೆ ಮೇಲೆ ಕಾಣಸಿಗುತ್ತಿದ್ದರು. ಸಿನೆಮಾ ಬಿಡುತ್ತಿದುದು ರಾತ್ರಿ ಹನ್ನೆರೆಡುವರೆಯೇ ಆಗುತ್ತಿತ್ತು. ಗವ್ ಎನ್ನುವ ಕತ್ತಲೆಯಲ್ಲಿ ಸೋದರ ಮಾವಂದಿರ ಕೈಹಿಡಿದು ನಾಯಿಗಳನ್ನು, ಕಡುಕರನ್ನು ದೂರದಿಂದಲೇ ಗಮನಿಸುತ್ತ, ನೋಡಿರುವ ರಾಜಕುಮಾರನ ಸಿನೆಮಾದ ಬಗ್ಗೆ ಭಯಂಕರ ಚರ್ಚೆ ಮಾಡಿಕೊಂಡು ಬರುತ್ತಿದ್ದೆವು. -ಇಂಗ್ಲೆಂಡ್ ಪತ್ರದಲ್ಲಿ, ತಮಗೆ ಇಂಗ್ಲೆಂಡ್ ನಲ್ಲಿ ಸಿನಿಮಾ ನೋಡಲು ಲಭ್ಯವಾಗುವ ಅವಕಾಶಗಳ ಕುರಿತು ನೆನಪುಗಳನ್ನು ಮೆಲುಕು ಹಾಕಿದ್ದಾರೆ ಡಾ.ಕೇಶವ ಕುಲಕರ್ಣಿ. 

read more
ಯಕ್ಷಗಾನವೂ ಜಾನಪದವೂ ಶಾಸ್ತ್ರೀಯವೂ

ಯಕ್ಷಗಾನವೂ ಜಾನಪದವೂ ಶಾಸ್ತ್ರೀಯವೂ

ಮೀಮಾಂಸೆಯ ಕ್ಷೇತ್ರ ‘ಶಾಸ್ತ್ರೀಯ’ ಕಲೆಗಳ ಸಾಮಾಜಿಕತೆಯನ್ನೂ ತೋರಿಸಿದೆ. ವೈಯಕ್ತಿಕತೆಯ ಹುಸಿಕಲ್ಪನೆಯನ್ನು ಬಲಪಡಿಸುವುದು, ರಾಷ್ಟ್ರವನ್ನು ಪ್ರತಿನಿಧಿಸುವುದು ಮತ್ತು ಇತರೆ ಕಲೆಗಳಿಂದ ಬೇರ್ಪಡಿಸಿಕೊಂಡು ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವುದು ಇವೆಲ್ಲವೂ ಅದರ ಕೆಲಸವೇ. ‘ಜಾನಪದ’ ಕಲೆಯನ್ನು ಅದರ ಸಾಮಾಜಿಕ ಉಪಯುಕ್ತತೆಗಾಗಿ ನೋಡುವುದು, ‘ಶಾಸ್ತ್ರೀಯ’ವನ್ನು ‘ಶುದ್ಧ ಸೌಂದರ್ಯದ’ ಪರಿಕಲ್ಪನೆಯಲ್ಲಿ ಮಾತ್ರ ನೋಡುವುದು ಕಲಾ ಅಧ್ಯಯನದ ಒಂದು ಮಿತಿಯೇ ಹೌದು. -ಕೃತಿ ಆರ್ ಪುರಪ್ಪೇಮನೆ ಬರಹ

read more
ಕಂಬಾರರ ಕಾವ್ಯ: ಪರಂಪರೆಯ ಸಮೃದ್ಧಿ ಮತ್ತು ಆಧುನಿಕತೆಯ ಬರಡುತನ

ಕಂಬಾರರ ಕಾವ್ಯ: ಪರಂಪರೆಯ ಸಮೃದ್ಧಿ ಮತ್ತು ಆಧುನಿಕತೆಯ ಬರಡುತನ

ಕಾಲದೇಶಗಳನ್ನು ಅಖಂಡವಾಗಿ ಗ್ರಹಿಸುವ ಮನೋಧರ್ಮದಿಂದಲೇ ಕಂಬಾರರ ಬರಹದಲ್ಲಿ ಸಾಮುದಾಯಿಕ ಅನುಭವಗಳು ಸಮೃದ್ಧವಾಗಿವೆ ಮೇಲ್ನೋಟಕ್ಕೆ ನವ್ಯ ಕಾವ್ಯದಿಂದ ಬಹಳ ಭಿನ್ನವಾಗಿ ಕಾಣುವ ಕಂಬಾರರ ಕಾವ್ಯ ಆಳದಲ್ಲಿ ನವ್ಯಕಾವ್ಯದ ಪ್ರಮುಖ ಕಾಳಜಿಗಳನ್ನು ಇತ್ತೀಚಿನವರೆಗೆಯೂ ಪೂರ್ಣವಾಗಿ ಬಿಟ್ಟುಕೊಟ್ಟಂತೆ ಕಾಣುವುದಿಲ್ಲ. ಆದರೆ ನವ್ಯಕಾವ್ಯವು ಹುಡುಕಾಟದಲ್ಲಿದ್ದ ಅಸ್ತಿತ್ವದ ಪ್ರಶ್ನೆಗಳು, ವ್ಯಕ್ತಿತ್ವದ ಒಳಗಿನ ಬಿರುಕುಗಳನ್ನು ಸಮುದಾಯಗಳ, ಜನಪದ ನಂಬಿಕೆಗಳ ವಿಶಾಲಭಿತ್ತಿಯಲ್ಲಿ ಪರೀಕ್ಷಿಸಲು ತೊಡಗಿದ್ದರಿಂದ ಕಂಬಾರರ ಕಾವ್ಯಕ್ಕೆ ದೊಡ್ಡ ಹರಹು ಒದಗಿಬಂದಿದೆ. ಎಸ್. ಸಿರಾಜ್ ಅಹಮದ್ ಅಂಕಣ..

read more
ಜೀವನದ ʼರಂಗ ನೇಪಥ್ಯʼದಿಂದ ಮರೆಯಾದ ಗುಡಿಹಳ್ಳಿ

ಜೀವನದ ʼರಂಗ ನೇಪಥ್ಯʼದಿಂದ ಮರೆಯಾದ ಗುಡಿಹಳ್ಳಿ

ಹಿಂದೊಮ್ಮೆ ಗುಡಿಹಳ್ಳಿ ಸರ್ ಅವರ ಬಳಿ ಮಾತಾಡುವಾಗ ತಮಗೆ ಹುಷಾರಿಲ್ಲ ಅಂತ ಅವರು ಹೇಳಿದದ್ದು ನೆನಪಿಗೆ ಬಂತು. ಆದರೆ ಅದು ಸಾವಿನ ರೂಪದಲ್ಲಿ ಕೂತಿದೆ ಎನ್ನುವ ಕಲ್ಪನೆ ನನ್ನಲ್ಲಿ ಇರಲಿಲ್ಲ. ನನ್ನೊಂದಿಗೆ ಮಾತಾಡುವಾಗಲೇ ಅವರ ಧ್ವನಿ ಕ್ಷೀಣಿಸಿದಂತೆ ಅನಿಸುತ್ತಿತ್ತು. ಹೀಗೇ ಏನೋ ವಯೋಮಾನ ಸಹಜವಾಗಿ ಖಾಯಿಲೆ ಅಡರಿ ಕೊಂಡಿರುತ್ತದೆ… ಕಾಲಕ್ರಮದಲ್ಲಿ ಸುಧಾರಿಸುತ್ತದೆ ಅಂದುಕೊಂಡಿದ್ದೆ. ಆದರೆ ಇದು ಅವರ ಚಿತ್ರವನ್ನು ಸಂಪೂರ್ಣ ಕಲಕಿ ಬಿಡಬಹುದು ಎಂಬ ಅಂದಾಜೂ ಇರಲಿಲ್ಲ. ಎನ್.ಸಿ. ಮಹೇಶ್ ಬರೆಯುವ ‘ರಂಗ ವಠಾರ’ ಅಂಕಣ

read more
ಕವಿಶೈಲದ ಹುಲಿಯೂ ದೂರದ ಕುದುರೆಮುಖವೂ

ಕವಿಶೈಲದ ಹುಲಿಯೂ ದೂರದ ಕುದುರೆಮುಖವೂ

ಭಯವನ್ನು ಅನಾಮತ್ತಾಗಿ ಎತ್ತಿ ಬೆನ್ನ ಹಿಂದಕ್ಕೆ ಬಿಸಾಡಿ, ಕವಿಶೈಲದ ಕಲ್ಲುಬೆಂಚುಗಳ ಬಳಿ ನಿಂತು ಕಣಿವೆಯ ಕಡೆಗೆ ಕಣ್ಣು ಹಾಯಿಸಿದರೆ, ಅಸ್ಪಷ್ಟ ಬೆಳಕುಗಳಲ್ಲಿ ಕಂಡೂ ಕಾಣದಂತಿದ್ದ ದಟ್ಟ ಕಾಡು. ಬೆಳಗ್ಗೆ ಕಂಡಿದ್ದ ನೋಟದ ಅಂದಾಜಿನ ಮೇರೆಗೆ ಮೆಲ್ಲಗೆ ಗೆರೆಗಳನ್ನು ಒಂದೊಂದಾಗಿ ಜೋಡಿಸಿಕೊಳ್ಳುತ್ತ ಹೋದಂತೆ ರೋಮಾಂಚನ. ಅಷ್ಟೊಂದು ಅಗಾಧ ಕಾಡನ್ನು ಕತ್ತಲಲ್ಲಿ ಕಣ್ತುಂಬಿಕೊಳ್ಳುವುದೊಂದು ಅದ್ಭುತ ಪುಳಕ. ನಿಮ್ಮ ಕಂಗಳು ಬರೀ ಕಂಗಳಾಗಿಯಷ್ಟೇ ಉಳಿಯದಂಥ ಜಾದೂ ಅದು.
ಸಹ್ಯಾದ್ರಿ ನಾಗರಾಜ್‌ ಬರೆಯುವ ‘ಸೊಗದೆ’ ಅಂಕಣ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ