ಇದು ಎಂಥ ಲೋಕವಮ್ಮ…! : ವಿನತೆ ಶರ್ಮ ಅಂಕಣ
“ಅತೀತ ಲೋಕಕ್ಕೆ ಹೋದವರಂತೆ ಅದೇನೋ ಶಕ್ತಿ ಅವರನ್ನ ವಾಪಸ್ ಎಳೆದು ಹಿಂದಿರುಗಿ ಬಂದವರಂತೆ ಕಾಣುತ್ತಿದ್ದ ಹಲವರು ಈ ಕ್ಯಾಂಪ್ ಸೈಟಿನಲ್ಲಿದ್ದರು. ನಾವೇನೂ ಪ್ರತಿದಿನವೂ ಇಲ್ಲಿಯೇ ಕಾಲ ಹಾಕುತ್ತ ಹಗಲು ಹೊತ್ತಿನಲ್ಲಿ ನೊಣವನ್ನೂ, ಸಂಜೆಯಲ್ಲಿ ಸೊಳ್ಳೆಯನ್ನೂ ಓಡಿಸುತ್ತಾ ಕೂತಿರಲಿಲ್ಲ. ಆದರೂವೆ ಅದ್ಯಾಕೊ ಹೋದ ದಿನದಿಂದ ಹಿಡಿದು ಕ್ರಮೇಣ ದಿನ ಕಳೆದಂತೆ ನಮಗೆ ಕಥೆ ಹೇಳುವ ಮಂದಿ ಹೆಚ್ಚಾದರು. ಮೊತ್ತಮೊದಲ ಕಥೆ ಹೇಳಿದ್ದು, ನಂತರ ಎಲ್ಲರನ್ನೂ ಮೀರಿಸಿ ಅತಿ ಹೆಚ್ಚು ಕಥೆ ಹೇಳಿದ್ದು…”
ನೀನ್ ಬಾ ಪೋಪಂ: ದಿಲೀಪ್ ಕುಮಾರ್ ಅಂಕಣ
“ಬೇಟೆಯಾಡಲು ಬಂದ ಶಂತನುವಿಗೆ ಬಹಳ ದೂರದಲ್ಲಿಂದಲೇ ಯೋಜನಗಂಧಿಯ ದೇಹದಿಂದ ಬರುತ್ತಿದ್ದ ವಾಸನೆ ಸೆಳೆಯುತ್ತದೆ. ಮೊದಲೇ ಬಳಲಿದ್ದವನು ಆ ವಾಸನೆಗೆ ಮರುಳಾಗಿ ದುಂಬಿಯಂತೆ ಅದನ್ನರಸಿ ಬರುತ್ತಾನೆ. ಬರುವಾಗಲೇ ಆ ಮಧುವಿನ ವಾಸನೆಗೆ ಸೋತವನು, ಎಳೆ ಜಿಂಕೆಯ ಹಾಗೆ ಕಣ್ಣುಗಳು ಇರುವವಳನ್ನು ಕಂಡು, ಕಂಡೊಡನೆ ಒಲಿದು, ಸತ್ಯ ಸಾಬೀತುಪಡಿಸಲು ಹಿಡಿಯುವ ದಿಬ್ಯದ ಹಾಗೆ ಅವಳನ್ನು ಹಿಡಿದು ಮಾತು ಪ್ರಾರಂಭ ಮಾಡುತ್ತಾನೆ.”
ನಿಂತ ನೆಲವು ಯಾರದು?: ಮಧುಸೂದನ್ ವೈ.ಎನ್ ಅಂಕಣ
“ಸುತ್ತಮುತ್ತಲ ಕಾರ್ಮಿಕ ಮಕ್ಕಳ ಬಗ್ಗೆ ನಮ್ಮ ಧೋರಣೆ ಹೀಗಿರಲು ಬೀದಿ ಬದಿಯಲ್ಲಿ ಅನಾಥ ಬಿದ್ದಿರುವ ಮಕ್ಕಳನ್ನಂತೂ ಕಂಡೂ ಕಾಣದಂತೆ ಒಂದು ಬಗೆಯಲ್ಲಿ ತಪ್ಪಿಸಿಕೊಂಡು ಓಡಿಬಿಡುತ್ತೇವೆ. ಅಲ್ಲಿ ಕನಿಕರವೂ ಇರುವುದಿಲ್ಲ, ಬದಲಾಗಿ ಎಷ್ಟೋ ಜನಕ್ಕೆ ಅವರು ಕಿರಿಕಿರಿ ಅನಿಸುತ್ತಾರೆ. ಮಕ್ಕಳ ಸಮಸ್ಯೆಗೆ ನಮಗೆ ತಕ್ಷಣಕ್ಕೆ ದೂರಲು ಸಿಗುವುದು ಹೆತ್ತವರು. ಸರ್ಕಾರಗಳೂ ಮೈಕೊಡವಿಕೊಳ್ಳುವುದರಿಂದ ಈ ಕಾರಣವನ್ನು ಎದುರಿಗಿಟ್ಟಿದ್ದೇನೆ.”
‘ಅಪ್ಪನ ಅಂಗಿ’ಗೆ ಬರೆದ ನನ್ನ ಮಾತುಗಳು: ಲಕ್ಷ್ಮಣ ವಿ ಎ ಅಂಕಣ
“ಬೆಳಕು ಹರಿಯುವಷ್ಟರಲ್ಲಿ ಬೆಂಗಳೂರು ತಲುಪಿದೆ. ಅವರಿವರ ವಿಚಾರಿಸಿ ಅಗ್ರಿ ಕಾಲೇಜಿನ ಬಸ್ಸು ಹತ್ತಿ ಪ್ರವೇಶ ಪರೀಕ್ಷೆಯನ್ನೂ ಬರೆದೆ. ಇನ್ನೇನು ಸಂಜೆಯಾಯಿತು ವಾಪಸು ಧಾರವಾಡಕ್ಕೆ ಬಸ್ಸಿರುವುದು ರಾತ್ರಿ ಒಂಬತ್ತೂವರೆಗೆ ಅಲ್ಲಿಯವರೆಗೂ ಏನು ಮಾಡುವುದು? ಸಿನೇಮಾ ನೋಡಲು ಮನಸಿರಲಿಲ್ಲ. ಏಕೆಂದರೆ ಕರೀಶ್ಮಾ ಕಪೂರಳ ಆ ಚೆಲುವು, ಕಾರಿನ ಹೆಡ್ ಲೈಟಿನಂತಹ ಅವಳ ಎರಡು ಕಣ್ಣುಗಳು…”
ಒಂದು ಬಾಗಿಲನ್ನು ಹೊಕ್ಕು ಹೊರಬಂದ ಮೇಲೆ…: ಆಶಾ ಜಗದೀಶ್ ಅಂಕಣ
“ಶಾಂತಿಯವರು ವಸ್ತುವಿನ ಆಯ್ಕೆಯಲ್ಲಿ ತೋರಿಸುವ ಕಾಳಜಿ ಬಹಳ ಮುಖ್ಯ. ಅವರ ಕಥೆಗಳಲ್ಲಿ ವಸ್ತು ವೈವಿಧ್ಯತೆಯನ್ನು ಕಾಣಬಹುದು. ಶಾಂತಿಯವರು ಕಥೆಯ ವಿಚಿತ್ರ ತಿರುವುಗಳು ಮತ್ತು ಕುತೂಹಲವನ್ನು ಕೊನೆಯವರೆಗೂ ಕಾಯ್ದುಕೊಂಡು ಹೋಗುವ ಆಕರ್ಷಕ ರೀತಿಯಿಂದಾಗಿ ಓದುಗರನ್ನು ತುದಿಗಾಲ ಮೇಲೆ ನಿಲ್ಲುವಂತೆ ಮಾಡುತ್ತಾರೆ. ಜಯರಾಮ ಹುಚ್ಚನಾದ ಕಥೆ ಅದಕ್ಕೊಂದು ಉತ್ತಮ ನಿದರ್ಶನ. ಜಯರಾಮ ಹುಚ್ಚ ಯಾಕಾದ ಎನ್ನುವುದನ್ನು ತಿಳಿಯಲಿಕ್ಕೆ ನಾವು ಪೂರಾ ಕಥೆಯನ್ನು ಓದಲೇಬೇಕು.”
ಕೀಳರಿಮೆಯ ರೋಗಕ್ಕೆ ಶಿಕ್ಷಣದ ಮದ್ದರೆದು…: ಶ್ರೀಹರ್ಷ ಸಾಲಿಮಠ ಬರೆಯುವ ಹೊಸ ಅಂಕಣ
“ಒಮ್ಮೆ ಸೈಕಲ್ ಕೊಳ್ಳಲು ಹೋಗಿದ್ದಾಗ ನಾನು ಒಂದು ಸೈಕಲ್ಲನ್ನು ತೊರಿಸಿ “ಇದು ಎಷ್ಟು” ಅಂತ ಕೇಳಿದೆ. ಸೇಲ್ಸ್ ಮನ್ ಬಿಳಿಯ. ಆತ ಬೆಲೆ ಎಷ್ಟು ಅಂತ ಹೇಳದೆ “ಅದು ದುಬಾರಿ” ಎಂದಷ್ಟೇ ಹೇಳಿದ. ನೀನು ಕಂದುಬಣ್ಣದವನು ನಿನಗೆ ಅದನ್ನು ಕೊಳ್ಳುವ ಯೋಗ್ಯತೆಯಿಲ್ಲ ಎಂದು ಆತ ಪರೋಕ್ಷವಾಗಿ ಹೇಳಿದ್ದ. ಅಸಲಿಯತ್ತೆಂದರೆ ನಾನು ಕಟ್ಟುವ ತೆರಿಗೆಯೇ ಆತನ ಆದಾಯಕ್ಕಿಂತ ಹೆಚ್ಚಿತ್ತು!”
ಯೋಗಿಯೂ ಆಗದ, ಜೋಗಿಯೂ ಆಗದ ಬೇಸಿಗೆ ರಜೆ: ವಿನತೆ ಶರ್ಮಾ ಅಂಕಣ
“ಸಮುದ್ರತಟ ಮತ್ತು ಕಣಿವೆ ಪರಸ್ಪರ ಮುಖವನ್ನ ದೂರಮಾಡಿಕೊಂಡು ಒಂದು ಜೋಗಿಯಾಗಿ ಇನ್ನೊಂದು ಯೋಗಿಯಾಗಿರುವಂತೆ ಅನಿಸುತ್ತದೆ. ಐವತ್ತು ವರ್ಷಗಳ ಹಿಂದೆ ಸ್ಥಳೀಯ ಅಬರಿಜಿನಲ್ ಸಮುದಾಯಗಳು ಜೀವನ ಮಾಡುತ್ತಿದ್ದ ಮತ್ತು ಅಲ್ಲಲ್ಲಿ ಹರಡಿದ್ದ ನೂರಾರು ಎಕರೆ ಫಾರ್ಮ್ ಗಳನ್ನು ಬಿಟ್ಟರೆ ಹೊರಗಿನವರಿಗೆ ಇಲ್ಲಿನ ಬೆಟ್ಟಕಣಿವೆ ಪ್ರದೇಶದ ಪರಿಚಯ ಅಷ್ಟೊಂದಿರಲಿಲ್ಲವಂತೆ. ಜನ ಬೀಚುಗಳಿಗೆ ಬಂದು ಹೋಗುತ್ತಿದ್ದರು.”
2020- ಕನಸು ನನಸುಗಳ ತಂತಿ ಮೀಟುತ್ತಾ…: ಮಧುಸೂದನ್ ವೈ ಎನ್ ಅಂಕಣ
“ಇನ್ನು ಭವಿಷ್ಯತ್ತಿನ ಕಾಲಕ್ಕೆ ಹೊರಳೋಣ. ಇಂದಿನಿಂದ ಇಪ್ಪತ್ತು ವರುಷಗಳ ನಂತರ ಅಂದರೆ 2040ರ ಹೊತ್ತಿಗೆ ನಿಮ್ಮ ಕತೆಯೇನು? “ಕ್ರಿಸ್ತಪೂರ್ವ” ದಂತೆ ಹಿಂದಿನಿಂದ ಲೆಕ್ಕ ಹಾಕಿದರೆ ನಮ್ಮಲ್ಲಿ ಎಷ್ಟೋ ಜನರ ಎಕ್ಸ್ಪೈರಿ ಡೇಟು ಮುಗಿದಿರುತ್ತದೆ! ಶತಾಯುಷಿಯಾಗುವ ಇಚ್ಛೆಯಿರದಿದ್ದಲ್ಲಿ. ಎಲ್ಲ ಚನ್ನಾಗಿದ್ದರೆ ನಾನು 53 ವರ್ಷ ಆಯಸ್ಸು ಸವೆಸಿರುತ್ತೇನೆ. ಇತ್ತಲಾಗೆ ಪೂರ್ತಿ ಮುದುಕನೂ ಅಲ್ಲ ಅತ್ತಲಾಗೆ ದುಡಿವ ವಯಸ್ಕನೂ ಅಲ್ಲ.”
ಗೋಕುಲ ನಿರ್ಗಮನದ ಪುತಿನ ಮತ್ತು ಎಚ್ ಎಸ್ ವಿ: ಲಕ್ಷ್ಮಣ ವಿ.ಎ. ಅಂಕಣ
“ಹಿರಣ್ಯಕಶಪುವಿಗೆ ಕಂಬ ಮಾತ್ರ ಕಂಡಿತು; ಪ್ರಹ್ಲಾದನಿಗೆ ಕಂಬದ ಒಳಗೆ ಅಡಗಿರುವ ನರಸಿಂಹ ಕಂಡ! ಕಾಣಲಿಕ್ಕೆ ದೃಷ್ಟಿಯಷ್ಟೇ ಸಾಲದು…. ಅದೃಷ್ಟವೂ ಇರಬೇಕು. ಅದಕ್ಕೆ ಮಹಾಕವಿಗಳು ಹೇಳಿದ್ದು ಕಂಡ ಕಂಡವರಿಗೆಲ್ಲಾ ಕಾಣುವುದಿಲ್ಲ…. ಕಂಡವರಿಗಷ್ಟೇ ಕಾಣಬೇಕಾದ್ದು ಕಾಣುವುದು ಎಂದು! ಅದನ್ನೇ ನಾವು ದರ್ಶನ ಎನ್ನುವುದು. ಇಂತಹ ದರ್ಶನದಿಂದ ತುಂಬಿರುವುದರಿಂದಲೇ ಪುಟ್ಟಪ್ಪನವರು ತಮ್ಮ ಕಾವ್ಯಕ್ಕೆ ರಾಮಾಯಣ ದರ್ಶನನಂ ಎಂದು ಹೆಸರಿಟ್ಟರು.”










