Advertisement

ಅಂಕಣ

ಸಮರ್ಥ ಕೆಲಸದ ಗುಟ್ಟು… ಎಂದಾದರೂ ಆದೀತೇ ರಟ್ಟು?: ಎಲ್.ಜಿ.ಮೀರಾ ಅಂಕಣ

ಸಮರ್ಥ ಕೆಲಸದ ಗುಟ್ಟು… ಎಂದಾದರೂ ಆದೀತೇ ರಟ್ಟು?: ಎಲ್.ಜಿ.ಮೀರಾ ಅಂಕಣ

ಆ ಇಬ್ಬರು ಹಿರಿಯ ಅಧ್ಯಾಪಕಿಯರ ಮುಖ ನೋಡಿದೆ. ಅವರಲ್ಲೊಬ್ಬರು `ಹೇ… ಸುಲಭ ಇದು. ನೋಡಿ, ಒಬ್ರು ಈ ಕಡೆ, ಇನ್ನೊಬ್ರು ಆ ಪಕ್ಕದ ಕುರ್ಚೀಲಿ ಕೂತ್ಕೊಳಿ. ನಾನು ಇಲ್ಲಿ ಕೂತ್ಕೋತೀನಿ. ನೂರರಿಂದ ಶುರುವಾಗೋ ಅರ್ಜಿ ಎಲ್ಲಾ ನೀವು ತಗೊಳ್ಳಿ, ಇನ್ನೂರರಿಂದ ಶುರುವಾಗೋದು ನೀವು, ಮುನ್ನೂರರಿಂದ ಶುರುವಾಗೋದು ನಾನು ತಗೋತೀನಿ.. ಬೇಗ ಬೇಗ ಇವುಗಳನ್ನ ನಾವು ಪ್ರತ್ಯೇಕ ಮಾಡ್ಬಹುದು’ ಅಂದರು.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಮೂವತ್ತಾರನೆಯ ಬರಹ

read more
ಕೆಂಪು ಕಾರು: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ

ಕೆಂಪು ಕಾರು: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ

ಹೊಸ ಕಾರ್ ಬುಕ್ ಮಾಡಿ ಈ ಕಾರನ್ನು ಎಕ್ಸ್ಚೇಂಜ್‌ನಲ್ಲಿ ಕೊಡುವ ಮಾತುಕತೆ ಆದ ನಂತರ ಮೊದಲಿನ ಲವಲವಿಕೆಯನ್ನು ಈ ಕಾರು ಕಳೆದುಕೊಂಡು ಬಿಟ್ಟಿತು ಅಂತ ಯಾಕೋ ನನ್ನ ಮನಸ್ಸಿಗೆ ತೀವ್ರವಾಗಿ ಅನ್ನಿಸಿತು. ಮರುದಿನ ಕಾರ್ ಸ್ಟಾರ್ಟ್ ಮಾಡುವಾಗ ಇಂಜಿನ್ ಶಬ್ಧ ಬೇರೆಯೇ ತರಹ ಕೇಳಿಸಿದ ಹಾಗಾಯ್ತು. ಏನೋ ಸಮಸ್ಯೆ ಆಗಿದೆ ತೋರಿಸಿಕೊಂಡು ಬನ್ನಿ ಅಂದ ಹೆಂಡತಿ ಮಾತಿಗೆ ಇಲ್ಲ ಅನ್ನಲಾಗದೆ ಸುರತ್ಕಲ್ ಪೇಟೆಗೆ ಒಂದು ಸುತ್ತು ಹಾಕಿ ಬಂದು ಏನಾಗಿಲ್ಲ ಅಂತೆ, ಅಂತ ಸುಳ್ಳು ಹೇಳಿದ್ದರ ಹಿಂದೆ ಕಾರ್ ಮೇಲೆ ನನಗಿದ್ದ ನಂಬಿಕೆಯೇ ಕಾರಣವಾಗಿತ್ತು.
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ “ಇನ್ನೊಂದು ಬದಿ”ಯ ಏಳನೆಯ ಬರಹ

read more
ಬುದ್ಧನಿಲ್ಲ ಇಲ್ಲಿ!: ಸುಕನ್ಯಾ ಕನಾರಳ್ಳಿ ಅಂಕಣ

ಬುದ್ಧನಿಲ್ಲ ಇಲ್ಲಿ!: ಸುಕನ್ಯಾ ಕನಾರಳ್ಳಿ ಅಂಕಣ

ಮೂರನೆಯ ದಿನದ ಹೊತ್ತಿಗೆ ಹಕ್ಕಿಯಂತೆ ಹಾರಿದರೆ ಮತ್ತೆ ಮರಳುವುದಿಲ್ಲ ಎಂದು ನೂರು ಬಾರಿ ಶಪಥ ಮಾಡಿದ್ದೆ. ಅಷ್ಟರ ಹೊತ್ತಿಗೆ ಇಂಗ್ಲಿಷ್ ಪ್ರವಚನ ಯಾಕೋ ಕೃತಕವೆನ್ನಿಸಿತ್ತು. ಅದೇ ದನಿ ಹಿಂದಿಯಲ್ಲಿ ಕೇಳಿಸಿಕೊಳ್ಳುತ್ತಿದ್ದವರ ಕಡೆಯಿಂದ ಬಂದಾಗ ಅರೆ, ಇದರಲ್ಲಿ ಸಾಕಷ್ಟು ಜೀವಂತಿಕೆ ಇದೆಯಲ್ಲ ಅಂತನ್ನಿಸಿ ಕೊನೆಯ ಪ್ರವಚನವನ್ನು ಕೇಳಲು ಹಿಂದಿಯ ಕಡೆಗೆ ಹೋಗಲು ಪ್ರಯತ್ನಿಸಿದೆ. ‘ಆಚಾರ್ಯರನ್ನು ಕೇಳಿ,’ ಎಂಬ ಆದೇಶ ಬಂತು. ಸರಿ, ಕೇಳಿದೆ. ಪ್ರೈಮರಿ ಸ್ಕೂಲಿನಲ್ಲಿ ‘ಮಿಸ್, ಮಿಸ್, ನಂಗೆ ಬಾತ್ ರೂಮಿಗೆ ಹೋಗಬೇಕು, ಅರ್ಜೆಂಟೂ…’ ನೆನಪಿಗೆ ಬಂದು ಮುಖದಲ್ಲಿ ನಗು ಮೂಡಿತ್ತು.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಹದಿಮೂರನೆಯ ಬರಹ

read more
ತ್ಯಾಗಕ್ಕಿಲ್ಲಿ ಬೆಲೆಯಿದೆಯೇ?: ಜಯಲಕ್ಷ್ಮಿ ಪಾಟೀಲ್ ಅಂಕಣ

ತ್ಯಾಗಕ್ಕಿಲ್ಲಿ ಬೆಲೆಯಿದೆಯೇ?: ಜಯಲಕ್ಷ್ಮಿ ಪಾಟೀಲ್ ಅಂಕಣ

ಸಮಾಜಘಾತುಕ ಕೆಲಸಗಳಿಗಾಗಿ, ಯಾರದೋ ತೇಜೋವಧೆಗಾಗಿ, ಜಾತಿಯನ್ನು ಜರಿಯುವುದಕ್ಕಾಗಿ, ಜಾತಿಯನ್ನಿಟ್ಟುಕೊಂಡು ಮೆರೆಯುವುದಕ್ಕಾಗಿ, ಇನ್ನೊಬ್ಬರ ವಯಕ್ತಿಕ ಬದುಕಿನ ಬಗ್ಗೆ ನಮಗೇನೂ ಗೊತ್ತಿಲ್ಲದಿದ್ದರೂ ಎಲ್ಲ ಬಲ್ಲವರಂತೆ ಆಡಿಕೊಳ್ಳುವುದಕ್ಕಾಗಿ, ಸಂವಿಧಾನವು ದೇಶದ ಸುವ್ಯವಸ್ಥೆಗೊಂದು ರಾಜಮಾರ್ಗ ಎನ್ನುವುದು ತಿಳಿದಿದ್ದರೂ ಅದನ್ನು ವಿಷ’ಯ ಮಾಡಿಕೊಂಡು ಕಿತ್ತಾಡುವುದಕ್ಕಾಗಿ, ರಾಜಕೀಯ ಪಕ್ಷಗಳ ಮೇಲಿನ ಕುರುಡುಮೋಹದಿಂದ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಮಡಿದವರ ಹೆಸರುಗಳಿಗೆ ಮಸಿ ಬಳಿಯುವುದರ ಮೂಲಕ ಸಾಮಾಜಿಕ ವಾತಾವರಣವನ್ನು ಹದಗೆಡಿಸಿ ದ್ವೇಷವನ್ನು ಹರಡುವುದಕ್ಕಾಗಿ, ಇತಿಹಾಸ ತಿರುಚುವ ಮೂಲಕ ಏನೋ ಮಹತ್ತರವಾದುದನ್ನು ಕಡೆದು ಗುಡ್ಡೆ ಹಾಕಿದೆ ಎಂಬಂತಾಡುವುದು, ಎಂಥಾ ನಾಚಿಗ್ಗೇಡಿತನ ಅನ್ನುವ ಅರಿವಾದರೂ ಇರಬೇಕಲ್ಲವೆ?
ಜಯಲಕ್ಷ್ಮಿ ಪಾಟೀಲ್ ಬರೆಯುವ “ಗರ್ದಿ ಗಮ್ಮತ್ತು” ಅಂಕಣ

read more
ಅಪ್ಪಿಕೋ ಭೂತಾಯಿ ಗೌರಾದೇವಿ!: ಸುಕನ್ಯಾ ಕನಾರಳ್ಳಿ ಅಂಕಣ

ಅಪ್ಪಿಕೋ ಭೂತಾಯಿ ಗೌರಾದೇವಿ!: ಸುಕನ್ಯಾ ಕನಾರಳ್ಳಿ ಅಂಕಣ

ಅಧಿಕಾರಿಗಳಿಗೆ ಈಗ ಪೇಚಿಗಿಟ್ಟುಕೊಂಡಿತು. ಸದ್ಯಕ್ಕೆ ಅಲ್ಲಿಂದ ತೊಲಗಿ ನಂತರ ಬಂದರೆ ಹೇಗೆ? ಆದಿವಾಸಿ ಹೆಂಗಸರಿಗೆ ಸರಕಾರದ ಕುತಂತ್ರಗಳೇನೂ ಅಪರಿಚಿತವಲ್ಲ. ಅವರ ಆಯುಧಗಳನ್ನು ಹೊತ್ತೊಯ್ದು ಕೊಡುವ ನೆಪದಲ್ಲಿ ತಾತ್ಕಾಲಿಕವಾಗಿ ಕಟ್ಟಿದ್ದ ಸೇತುವೆಯನ್ನು ಅದೇ ಅಸ್ತ್ರಗಳಿಂದ ಉರುಳಿಸಿದಾಗ ಸರಕಾರ ಇತ್ತ ಕಡೆಯಲ್ಲಿ, ಇವರೆಲ್ಲ ಅತ್ತ ಕಡೆಯಲ್ಲಿ. ಇಡೀ ರಾತ್ರಿ ಸರಕಾರದ ಮಂದಿ ಮತ್ತೆ ಕಾಡೊಳಗೆ ನುಸುಳದಂತೆ ಹೆಂಗಸರು ಕಾವಲಿದ್ದರು. ಮಾರನೆಯ ದಿನ ಹಳ್ಳಿಗೆ ಹಿಂತಿರುಗಿದ ಗಂಡಸರಿಗೆ ಆಶ್ಚರ್ಯ ಕಾದಿತ್ತು. ಮಾರ್ಚ್ ೩೧, ೧೯೭೪ ರಂದು ಕಣಿವೆಯಲ್ಲಿ ತಮಟೆ ಕಹಳೆಗಳ ಸಮೇತ ಬೃಹತ್ ಪ್ರದರ್ಶನ ನಡೆಯಿತು.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಹನ್ನೆರಡನೆಯ ಬರಹ

read more
ಹಿನ್ನೀರಿನಲ್ಲೊಂದು ಮುಂಜಾನೆ: ವಿನಾಯಕ ಅರಳಸುರಳಿ ಅಂಕಣ

ಹಿನ್ನೀರಿನಲ್ಲೊಂದು ಮುಂಜಾನೆ: ವಿನಾಯಕ ಅರಳಸುರಳಿ ಅಂಕಣ

ಇದೇ ಅಲೆಯ ಬುಡದಲ್ಲಿ ಒಂದು ಕಾಲದಲ್ಲಿ ಹಳ್ಳಿಯಿತ್ತು. ಗದ್ದೆಯಿತ್ತು. ಮನೆಯಿತ್ತು. ದನಕರುಗಳು ಓಡಾಡುತ್ತಿದ್ದವು. ಮನುಷ್ಯ ವಾಸವಾಗಿದ್ದ. ಅಲ್ಲೆಲ್ಲೋ ದೂರದಲ್ಲಿ ನದಿಯೊಂದರ ದಾರಿಯ ತಡೆದ ಕಾರಣಕ್ಕೆ ಇಲ್ಲಿ ಇವೆಲ್ಲವೂ ಮುಳುಗಿದವು. ಈ ನೀರಡಿಗೀಗ ಏನೇನಿರಬಹುದು? ಮುಳುಗಡೆಯಾಗುವ ಹೊತ್ತಿಗೆ ಎದ್ದು ಹೋದ ಮಗುವೊಂದು ಅರ್ಧಕ್ಕೇ ಆಡಿ ಬಿಟ್ಟ ಆಟಿಕೆಯಿರಬಹುದೇ? ರೈತನೊಬ್ಬ ನೂರಾರು ಕಟ್ಟು ಹುಲ್ಲು ಕೊಯ್ದಿರುವ ಕತ್ತಿಯಿರಬಹುದೇ? ಅಮ್ಮ ಒಬ್ಬಳು ನೂರಾರು ಬಾರಿ ಗಂಜಿ ಕಾಯಿಸಿರುವ ಪಾತ್ರೆಯಿರಬಹುದೇ? ಹಲವು ದೇವಸ್ಥಾನಗಳೂ ಇಲ್ಲಿ ಮುಳುಗಿ ಹೋಗಿವೆಯಂತೆ… ಇನ್ನಾದರೂ ಅಲ್ಲಿ ದೇವರಿರಬಹುದೇ?
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”ಯ ಬರಹ ನಿಮ್ಮ ಓದಿಗೆ

read more
ನ್ಯಾಯದೇವತೆಯ ತಕ್ಕಡಿಯಲ್ಲಿ ಹೊಸ, ಹಳೆ ಅಹವಾಲು: ವಿನತೆ ಶರ್ಮ ಅಂಕಣ

ನ್ಯಾಯದೇವತೆಯ ತಕ್ಕಡಿಯಲ್ಲಿ ಹೊಸ, ಹಳೆ ಅಹವಾಲು: ವಿನತೆ ಶರ್ಮ ಅಂಕಣ

ಇದೆಲ್ಲವನ್ನೂ ನೋಡುತ್ತಿರುವಾಗ ಇಗೋ ಜನವರಿ ೨೬ ಬರುತ್ತಿದೆ. ಅಂದು ಆಸ್ಟ್ರೇಲಿಯಾ ಡೇ – ಕ್ಯಾಪ್ಟನ್ ಜೇಮ್ಸ್ ಕುಕ್ ಸಿಡ್ನಿ ಸಮುದ್ರತೀರಕ್ಕೆ ಬಂದು, ಅವನ ಹಡಗು ಅಲ್ಲಿ ಲಂಗರು ಹಾಕಿ, ಓಹೋ ಈ ಜಾಗದಲ್ಲಿ ಯಾರೂ ಮನುಷ್ಯರು ಇಲ್ಲ, ಆದ್ದರಿಂದ ಇದು ತಮಗೆ ಸೇರಿದ್ದು, ಬ್ರಿಟಿಷರಿಗೆ ಸೇರಿದ ನಾಡು, ಎಂದು ಘೋಷಿತವಾದ ದಿನ. ಅಲ್ಲಿಂದ ಹೊಸ ಆಸ್ಟ್ರೇಲಿಯದ ಹುಟ್ಟು, ಬೆಳವಣಿಗೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

read more
ಉನ್ನತ ವಿಜ್ಞಾನ ಶಿಕ್ಷಣದಲ್ಲಿ ಕನ್ನಡ ಭಾಷೆ: ಡಾ.ಎಲ್.ಜಿ.ಮೀರಾ ಅಂಕಣ

ಉನ್ನತ ವಿಜ್ಞಾನ ಶಿಕ್ಷಣದಲ್ಲಿ ಕನ್ನಡ ಭಾಷೆ: ಡಾ.ಎಲ್.ಜಿ.ಮೀರಾ ಅಂಕಣ

ಮಾತೃ಼ಭಾಷೆ/ಪ್ರಾದೇಶಿಕ ಭಾಷೆಯಲ್ಲಿನ ಶಿಕ್ಷಣಕ್ಕೆ ಒತ್ತು ನೀಡುತ್ತಿರುವ ರಾಷ್ಟ್ರೀಯ ಶಿಕ್ಷಣ ನೀತಿ – 2020 ಈ ವಿಷಯದಲ್ಲಿ ಹೊಸ ಬಾಗಿಲುಗಳನ್ನು ತೆರೆಯುವ ಸಾಧ್ಯತೆಯನ್ನು ತೋರಿಸಿದೆ. ವಿಶ್ವೇಶ್ವರಯ್ಯ ತಂತ್ರಜ್ಞಾನ ವಿಶ್ವವಿದ್ಯಾಲಯ (ವಿಟಿಯು)ದ ಉಪಕುಲಪತಿಗಳಾದ ಡಾ.ಕರಿಸಿದ್ಧಪ್ಪನವರ ಮುಂಚೂಣಿಯಲ್ಲಿ ಯಂತ್ರಜ್ಞಾನಗಳ (ಇಂಜಿನಿಯರಿಂಗ್) ವಿಷಯಗಳಲ್ಲಿ ಕನ್ನಡ ವಿಜ್ಞಾನ ಬೋಧನೆಯ ಪ್ರಯತ್ನಗಳು ಪ್ರಾರಂಭವಾಗಿವೆ. ಇಲ್ಲಿನ ಮೊದಲನೆಯ ವರ್ಷದ ಯಂತ್ರಜ್ಞಾನ ಶಿಕ್ಷಣದ ವಿದ್ಯಾರ್ಥಿಗಳಿಗೆ ಕನ್ನಡ ಪಠ್ಯಪುಸ್ತಕಗಳನ್ನು ಮುತುವರ್ಜಿ ವಹಿಸಿ ತಯಾರಿಸುತ್ತಿರುವುದು ಒಂದು ಸ್ವಾಗತಾರ್ಹ ಬೆಳವಣಿಗೆಯಾಗಿದೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

read more

ಪಾತ್ರ ಪುರಾಣ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ

ಅಕ್ಷರಶಃ ದೀಪವಾರಿದ ಮೇಲಿ ನಿಂಕ ದೀಪದ ಮಲ್ಲಿಯಾದಳು ಶಕುಂತಲೆ. ಅಷ್ಟು ದುರ್ಬಲವೇ ನಮ್ಮ ಪ್ರೇಮ? ಯಾವುದೋ ವಸ್ತುವಿನ ಅವಶ್ಯಕತೆ ಅನಿವಾರ್ಯ ಆಗುವಷ್ಚು? ದಿಕ್ಕುತಪ್ಪಿದಳು, ಏಕಾಂಗಿಯಾದಳು.ಶಕುಂತಲೆಗೆ ದುಷ್ಯಂತನ ಪರಿಚಯವಿತ್ತು.ಸಂಧಿಸಿದ ಕೂಡಲೇ ತನ್ನ ಗುರುತು ಹಿಡಿಯುವನೆಂಬ ಅಪಾರ ಆತ್ಮವಿಶ್ವಾಸವೂ ಇತ್ತು. ಅದಕ್ಕಾಗಿಯೇ, ಅವಳಿಗೆ ದುಷ್ಯಂತ ಗುರುತಿಗಾಗಿಯೇ ಕೊಟ್ಟಿದ್ದ ಉಂಗುರವನ್ನು ಅವಳು ಅಷ್ಟೊಂದು ಮಹತ್ವದ್ದಾಗಿ ಪರಿಗಣಿಸಲೇ ಇಲ್ಲ.
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ “ಇನ್ನೊಂದು ಬದಿ”ಯ ಆರನೆಯ ಬರಹ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ