ಕ್ಷಮಾ ವಿ. ಭಾನುಪ್ರಕಾಶ್ ಹೊಸ ಕಥಾ ಸರಣಿ “ಎಳೆಯರಿಗೆ ಸುಲಭ ವಿಜ್ಞಾನ” ಇಂದಿನಿಂದ
“ನಮ್ಮ ತೋಟದಲ್ಲಿ ಎಲ್ಲೆಡೆಯೂ ಕಾಣುವ ಹನಿನೀರಾವರಿ ಪೈಪುಗಳಂತೆ ಈ ಜಲವಾಹಕ ಮತ್ತು ಆಹಾರವಾಹಕ ಕೊಳವೆಗಳೂ, ಸಸ್ಯದ ತುಂಬೆಲ್ಲಾ ಇರತ್ವೆ ಅಲ್ವಾ? ತಮ್ಮ ಪಾಡಿಗೆ ತಮ್ಮ ಕೆಲಸ ಮಾಡುತ್ತಾ ಗಿಡಮರಗಳನ್ನ ಚೆನ್ನಾಗಿಡತ್ವೆ” ಎಂದಳು ನಗುತ್ತಾ. “ಹೌದು ಕಣೋ, ಹಾಗೇನೇ. ಇಲ್ಲಿ ನೋಡು, ಈ ಎಲೆಯನ್ನ!” ಎಂದು ತನ್ನ ಅಂಗಳದಲ್ಲೇ ಸೊಂಪಾಗಿ ಬೆಳೆದಿದ್ದ ಮಲ್ಲಿಗೆಯ ಬಳ್ಳಿಯಿಂದ ಎಲೆಯೊಂದನ್ನು ತೋರಿಸುತ್ತಾ! “ಈ ಎಲೆಯಲ್ಲಿ ಆಚೀಚೆ ಕಾಣುವ ಗೆರೆಗಳನ್ನ ಗಮನಿಸು; ಅದೇ ರೀತಿ ಇಲ್ಲಿ ಅಂಗಳದಲ್ಲಿರುವ ಎಲ್ಲಾ ಗಿಡಗಳನ್ನೂ ಗಮನಿಸು. ಎಲ್ಲಾ ಎಲೆಗಳಲ್ಲೂ ಹೀಗೆ ಗೆರೆಗಳು ಕಾಣಿಸುತ್ತಲ್ವಾ? ಅದೇ ಈ ಜಲವಾಹಕ-ಆಹಾರವಾಹಕಗಳ ಕಂತೆ.
ಕ್ಷಮಾ ವಿ. ಭಾನುಪ್ರಕಾಶ್ ಮಕ್ಕಳಿಗಾಗಿ ಬರೆಯುವ ಹೊಸ ಕಥಾ ಸರಣಿ “ಎಳೆಯರಿಗೆ ಸುಲಭ ವಿಜ್ಞಾನ” ಇಂದಿನಿಂದ ಹದಿನೈದು ದಿನಗಳಿಗೊಮ್ಮೆ ನಿಮ್ಮ ಕೆಂಡಸಂಪಿಗೆಯಲ್ಲಿ
ಮೂಡಿಗೆರೆಯ ಕಾರ್ಗಾಲದ ಮೋಡಿ
ಈ ಗಾಳಿ ಮಳೆ ಕಾಟ ಒಂದೆರಡಲ್ಲ. ಕಳ್ಳರೂ ಬೀಳುವುದುಂಟು. ಗಾಳಿ ಮಳೆ ಕತ್ತಲೆ ಒಳ್ಳೆಯ ಕಾಲ ಅವರಿಗೆ. ಇಂತದೇ ಮತ್ತೊಂದು ಕಗ್ಗತ್ತಲು ರಾತ್ರೆ. ಇನ್ನೂ ನಿದ್ದೆ ಬಂದಿಲ್ಲ. ಕಿಟಕಿಗೆ ಯಾರೋ ಟಾರ್ಚು ಬಿಡುತ್ತಿದ್ದಾರೆ. ಹೆದರಿ ನೀರಾದೆ. ಆ ಬೆಳಕು ಪಕ್ಕದ ಕಿಟಕಿಗೂ ಹೋಯ್ತು. ಇನ್ನೂ ಹೆದರಿಕೆ ಹೆಚ್ಚಾಯ್ತು. ಎದೆ ಡವಡವ ಗುಟ್ಟಿತು. ಎಲ್ಲಾ ಎದುರಿಸಬೇಕಲ್ಲಾ. ಗಟ್ಟಿ ಮನಸ್ಸು ಮಾಡಿ ಎದ್ದು ಕೂತೆ. ಟಾರ್ಚು ಬೆಳಕು ದೂರ ಸರಿಯಿತು. ಮೆಲ್ಲಕೆ ಎದ್ದು ನಿಂತೆ. ಇನ್ನೂ ದೂರ ದೂರ ಹೋಯಿತು ಬೆಳಕು. ಸುಸ್ತು ನಾನು. ಅಷ್ಟರಲ್ಲಿ ಜಗ್ ಜಗ್ ಬೆಳಕು ಹತ್ತಾರು ಆಯಿತು. ಏನದು ಬೆಳುಕು ಎಂಬ ಕುತೂಹಲದ ಬಗ್ಗೆ ರಾಜೇಶ್ವರಿ ತೇಜಸ್ವಿ ಅವರು ಬರೆದ ಬರಹ ಇಂದಿನ ಮೂಡಿಗೆರೆ ಹ್ಯಾಂಡ್ ಪೋಸ್ಟ್ ನಲ್ಲಿ
ಮಲಿಕಜಾನ ಶೇಖ ಬರೆದ ಮಕ್ಕಳ ಕವಿತೆ
“ಸತ್ಯಾಗ್ರಹ ಶಸ್ತ್ರದಿಂದ
ಅಹಿಂಸೆ ಮಾರ್ಗದಲ್ಲಿ
ಬ್ರಿಟಿಷರನ್ನು ನಡುಗಿಸಿಟ್ಟ…”- ಮಲಿಕಜಾನ ಶೇಖ ಬರೆದ ಮಕ್ಕಳ ಕವಿತೆ
ಬೆದರುಬೊಂಬೆ ಮತ್ತು ದಿಲ್ದಾರ್ ಹಕ್ಕಿ: ಎಂ ಆರ್ ಭಗವತಿ ಬರೆದ ಮಕ್ಕಳ ಕಥೆಗಳು
ಪ್ರತಿರಾತ್ರಿ ಬೆಳದಿಂಗಳ ಮೋಡವೊ೦ದು ಹೊಲದಲ್ಲಿ ನಿಂತ ಬೆದರು ಬೊಂಬೆಯನ್ನು ಮಾತನಾಡಿಸಿ ಹೋಗುತ್ತಿತ್ತು. ಬೆದರು ಬೊಂಬೆ ಮೋಡದ ಕುಶಲ…
ಅಂದು ಅಕ್ಟೋಬರ್ ನ ಎರಡನೇ ದಿವಸವಾಗಿತ್ತು…..
ಅವರ ಕೋಲು ಹಿಡಿದು ‘ಹೀಗೆ ಬನ್ನಿ ತಾತ.. ನಾವೆಲ್ರೂ ನಿಮಗೋಸ್ಕರವೇ ಕಾಯ್ತಿದ್ವಿ..’ ಎನ್ನುತ್ತಾ ತನ್ನ ಶಾಲೆಯ ಕಡೆಗೆ ಕರೆದೊಯ್ಯತೊಡಗಿದ. ಆ ಹಾದಿಯಲ್ಲಿ ನಡೆಯುತ್ತಾ ಸ್ವತಃ ಗಾಂಧಿ ಬೆರಗಾಗಿದ್ದರು.
ಕಾಲೇಜು ಸಂಪಿಗೆಯ ಮೊದಲ ಲೇಖನ
ನಾನು ಕ್ರಿಕೆಟ್ ನೆಟ್ ಪ್ರ್ಯಾಕ್ಟಿಸ್ ಮಾಡುತ್ತಿರುವುದು ಅಪ್ಪನಿಗೆ ಇಷ್ಟವಿಲ್ಲ. ಅಮ್ಮ ಮೊದಲು ಓದು ಮುಗಿಸು ಅನ್ನೋದು ತಪ್ಪಿಲ್ಲ. ಹಾಗಂತ ಪ್ರತಿದಿನ ನಾನು ಮೈದಾನದಲ್ಲಿ ಬೆವರಿಳಿಸುವುದು ನಿಂತಿಲ್ಲ.






