Advertisement

ಪುಸ್ತಕ ಸಂಪಿಗೆ

ವಿಫಲಪ್ರೇಮಿಯ ತಪ್ಪೊಪ್ಪಿಗೆಗಳು: ರಹಮತ್ ತರೀಕೆರೆ

ವಿಫಲಪ್ರೇಮಿಯ ತಪ್ಪೊಪ್ಪಿಗೆಗಳು: ರಹಮತ್ ತರೀಕೆರೆ

ವಿದ್ಯಾರ್ಥಿನಿಯರಲ್ಲಿ ಒಬ್ಬಾಕೆ ಕವಿತೆ ಬರೆಯುತ್ತಿದ್ದಳು. ಸರಳವಾದ ಪದದ ಅರ್ಥ-ಅದನ್ನು ತರಗತಿಯಲ್ಲೂ ಕೇಳಬಹುದಿತ್ತು- ಕೇಳಿಕೊಂಡು ಸ್ಟಾಫ್‌ರೂಮಿಗೆ ಬರುತ್ತಿದ್ದಳು. ಸಹೋದ್ಯೋಗಿಗಳು `ನೀನೇ ಹುಡುಗಿ ತರಹ ನಾಚ್ಕೊತೀ ಯಲ್ಲೋ’ ಎಂದು ಛೇಡಿಸುತ್ತಿದ್ದರು. ಬದುಕಿನ ಬಗ್ಗೆ ಭವಿಷ್ಯದ ಬಗ್ಗೆ ಚಿಂತನೆ ಹೊಣೆಗಾರಿಕೆ ಇಲ್ಲದೆ ಹುಟ್ಟಿದ ಎಳಸು ಆಕರ್ಷಣೆಗಳವು. ಆದರೂ ಒಬ್ಬಾಕೆಯ ದೊಡ್ಡ ಕಣ್ಣುಗಳ ಮುಖ ಚಿತ್ತದಲ್ಲಿ ಉಳಿದುಬಿಟ್ಟಿದೆ. ಚೆಲ್ಲು ವರ್ತನೆಯ ಆಕೆ, ಕನ್ನಡದಲ್ಲಿ ಭಯಂಕರ ಕಾಗುಣಿತ ತಪ್ಪು ಮಾಡುತ್ತಿದ್ದಳು. ಚೆಲುವನ್ನು ಕೊಟ್ಟು ಬುದ್ಧಿಯನ್ನು ಕೊಡದ ವಿಧಿಯನ್ನು ಬೈದುಕೊಂಡು, ಭಾಷಾ ದೋಷಗಳನ್ನು ಉದಾರವಾಗಿ ತಿದ್ದುತ್ತಿದ್ದೆ.
ಡಾ. ರಹಮತ್‌ ತರೀಕೆರೆಯವರ ಆತ್ಮಕಥನ “ಕುಲುಮೆ”ಯ ಒಂದು ಅಧ್ಯಾಯ ನಿಮ್ಮ ಓದಿಗೆ

read more
ಗಾಯಗೊಂಡ ಸಾಲುಗಳು… : ದೀಪಾ ಗೋನಾಳ ಬರಹ

ಗಾಯಗೊಂಡ ಸಾಲುಗಳು… : ದೀಪಾ ಗೋನಾಳ ಬರಹ

ಕವಿಯಾದವನಿಗೆ ತನ್ನ ಪದಗಳ ಗೊಡವೆ ಬೇಡ, ಅದು ಯಾರದ್ದೊ ನೋವು, ಆರ್ತನಾದ ಮಾತ್ರ ನನ್ನದು ಎನ್ನುವ ದೈನ್ಯತೆ ಎಂದಿಗೂ ಬೇಕು. ಅದು ನನ್ನ ಮಿತ್ರನ ಕವಿತೆಗಳಲಿ ತುಂಬಿ ಹೋಗಿದೆ. ಹೀಗಾಗಿಯೇ ಈ ಸಂಕಲನ ‘ಗಾಯಗೊಂಡ ಸಾಲುಗಳು‌’ ಎಂಬ ಹಣೆಪಟ್ಟಿ ಹೊತ್ತು ಹೊರಬಂದಿವೆ. ಗಾಯಗೊಂಡ ಪದಗಳನೇ ಹೆಣೆದು ಬ್ಯಾಂಡೇಜು ಕಟ್ಟಿದ ಪದಗಳಿವು. ಯಾರೂ ಮೂಸದ ಸರ್ಕಾರಿ ಆಸ್ಪತ್ರೆಯ ಕಟ್ಟೆಯ ಮೇಲೆ ಕೂತ ಅನಾಥ ವೃದ್ಧನಂತೆ ಇಲ್ಲಿನ ಕವಿತೆಗಳು ಕಾಣಿಸತೊಡಗುತ್ತವೆ.
ಸದಾಶಿವ ಸೊರಟೂರು ಕವನ ಸಂಕಲನ “ಗಾಯಗೊಂಡ ಸಾಲುಗಳು” ಕುರಿತು ದೀಪಾ ಗೋನಾಳ ಬರಹ

read more
ಬೆರಳಿಗಂಟಿದ ರಕ್ತ ಹಾಗೇ ಇತ್ತು..: “ಕಲ್ಯಾಣ ಕೆಡುವ ಹಾದಿ”ಯ ಕೆಲವು ಪುಟಗಳು

ಬೆರಳಿಗಂಟಿದ ರಕ್ತ ಹಾಗೇ ಇತ್ತು..: “ಕಲ್ಯಾಣ ಕೆಡುವ ಹಾದಿ”ಯ ಕೆಲವು ಪುಟಗಳು

ತಹಸಿಲ್ದಾರರು ಹೊರಟ ನಂತರ ದಲಿತರ ಮೇಲೆ ಹಲ್ಲೆ ಮಾಡಿದ ಮುನಿಪಾಪಣ್ಣನ ಕಡೆಯವರು, ಅವನಿಗೆದುರಾಗಿ ಯಾರ್ಯಾರು ಅರ್ಜಿಯಲ್ಲಿ ಎಡ ಹೆಬ್ಬೆಟ್ಟು ಒತ್ತಿದ್ದಾರೆ ಎಂದು ಖಾತ್ರಿ ಪಡಿಸಿಕೊಂಡಿದ್ದಾರೆ. ನಂತರ ಆತ ಮತ್ತು ಆತನ ಮಕ್ಕಳು ಆ ಐದು ಜನರನ್ನೂ ಹಿಡಿದು, ಅವರೆಲ್ಲರ ಹೆಬ್ಬೆಟ್ಟುಗಳನ್ನೂ ಕತ್ತರಿಸಿ, ‘ಈಗ ಡಿಸಿ ಸಾಹೇಬರಿಗೆ ಹೇಗೆ ಅರ್ಜಿ ಕೊಡುತ್ತೀರೋ ನೋಡೋಣ!’ ಎಂದು ಕೂಗಾಡಿದ್ದಾರೆ. ಆ ಐದೂ ದಲಿತರೂ ಬ್ಯಾಂಡೇಜ್ ತೆಗೆದು, ನನ್ನ ಮುಂದೆ ತಮ್ಮ ಎಡಗೈ ಚಾಚಿದರು.
ಎನ್.‌ ಸಂಧ್ಯಾರಾಣಿ ಅನುವಾದಿಸಿರುವ ರೆಬೆಲ್‌ ಐಎಎಸ್ ಅಧಿಕಾರಿ ವಿ. ಬಾಲಸುಬ್ರಮಣಿಯನ್‌ ಅವರ ಆತ್ಮಕಥನ “ಕಲ್ಯಾಣ ಕೆಡುವ ಹಾದಿ”ಯ ಕೆಲವು ಪುಟಗಳು

read more
ಸುತ್ತಾಡಿದ ದೇಶಗಳ ಒಳಗೂ-ಹೊರಗೂ: ಕೆ.ಎನ್.ಲಾವಣ್ಯ ಪ್ರಭಾ ಬರಹ

ಸುತ್ತಾಡಿದ ದೇಶಗಳ ಒಳಗೂ-ಹೊರಗೂ: ಕೆ.ಎನ್.ಲಾವಣ್ಯ ಪ್ರಭಾ ಬರಹ

ಒಮ್ಮೆ ಎಸ್ಕಲೇಟರಿನಲ್ಲಿ ಲೇಖಕಿ ಹೋಗುವಾಗ ಅಕಸ್ಮಾತ್ತಾಗಿ ಅವರ ಸೀರೆ ಸಿಕ್ಕಿಕೊಂಡು ಮೊಣಕಾಲಿನವರೆಗೂ ಹರಿದುಹೋಗುತ್ತಿದ್ದರೂ ಅಕ್ಕಪಕ್ಕದ ಜನ ತಮಗೆ ಸಂಬಂಧವೇ ಇಲ್ಲದವರಂತೆ ತಮ್ಮ ಪಾಡಿಗೆ ಹೋಗುವುದು, ಬಸ್‌ನಲ್ಲಿ ಕೂತಾಗ ಸಿಂಗಪುರದ ವಿದ್ಯಾರ್ಥಿನಿಯಿಂದಾದ ವರ್ಣಭೇದದ ಅನುಭವದಿಂದ ಲೇಖಕಿಯ ಮನಸ್ಸು ಮುದುಡುವುದು, ಹದಿನಾಲ್ಕು ಅಂತಸ್ತಿನ ತಮ್ಮ ಮಗನ ಮನೆಯಲ್ಲಿ ಲೇಖಕಿ ಒಬ್ಬರೇ ಇರುವಾಗ ಅದೇ ಕಟ್ಟಡದ ಒಂದು ಮಹಡಿಯ ಮನೆಗೆ ಬೆಂಕಿ ಬಿದ್ದು ಫೈರ್ ಇಂಜಿನ್ ಬಂದು ಬೆಂಕಿ ಆರಿಸುವಾಗಲೂ ಸುತ್ತಮುತ್ತಲಿನ ಜನ ಕಿಂಚಿತ್ತೂ ಗಮನ ಹರಿಸದೆ ಕಣ್ಣೆತ್ತಿಯೂ ನೋಡದೆ ಹೋಗುವುದು…. ಇದೆಂಥಾ ಮುಂದುವರಿದ ದೇಶ ಮಾರ್ರೆ?
ಶಾಂತಾ ನಾಗರಾಜ್‌ ಪ್ರವಾಸ ಕಥನ “ಯಾನ ಸಂಸ್ಕೃತಿ” ಕೃತಿಯ ಕುರಿತು ಕೆ.ಎನ್.‌ ಲಾವಣ್ಯ ಪ್ರಭಾ ಬರಹ

read more
ಸಾಮಾಜಿಕ ಸಾಮರಸ್ಯದ ಸೂಚಕ ‘ಭರಮದೇವರು’: ತೇಜಾವತಿ ಡಿ.ಎಸ್.‌ ಬರಹ

ಸಾಮಾಜಿಕ ಸಾಮರಸ್ಯದ ಸೂಚಕ ‘ಭರಮದೇವರು’: ತೇಜಾವತಿ ಡಿ.ಎಸ್.‌ ಬರಹ

ಪುರಾಣ ಕಥೆಗಳು ನಮ್ಮ ಪೂರ್ವಜರ ಕಥೆಗಳೆಂದು ನಂಬಿರುವ ಜನಪದರು ಅವುಗಳನ್ನು ತಮ್ಮ ಜ್ಞಾನ ಮಾರ್ಗಗಳೆಂದು ಒಪ್ಪಿಕೊಂಡಿದ್ದಾರೆ. ಬಹುತೇಕ ಇವು ಮತ ಧರ್ಮಗಳನ್ನಾಧರಿಸಿ ಬೆಳೆಯುತ್ತವೆ. ಬಹು ಸಂಸ್ಕೃತಿಯ ದೇಶವಾಗಿರುವ ನಮ್ಮಲ್ಲಿ ಸೃಷ್ಟಿ ಸ್ಥಿತಿ ಲಯದ ರೂಪಗಳಾದ ತ್ರಿಮೂರ್ತಿಗಳ ಕುರಿತು ಅನೇಕ ಪುರಾಣ ಕಥೆಗಳಿವೆ. ಅದರಲ್ಲಿ ಬ್ರಹ್ಮನನ್ನು ಕುರಿತು ಅವನ ಹುಟ್ಟು, ಶಿರಶ್ಚೇದನ, ಸ್ತ್ರೀ ಸಂಬಂಧ ಆಪಾದನೆಗಳು ಬಹಳಷ್ಟು ಇದ್ದು ಬ್ರಹ್ಮನಿಗೆ ಪೂಜೆ ಸಲ್ಲದಿರಲಿ ಎಂಬ ಶಾಪವಿದೆ. ಇವೆಲ್ಲವೂ ಆಯಾ ಕಾಲಮಾನಕ್ಕೆ ತಕ್ಕಂತೆ ಬ್ರಹ್ಮನ ಪ್ರಸಿದ್ಧಿಯನ್ನು ಕಡಿಮೆ ಮಾಡುವ ಹುನ್ನಾರದಿಂದ ಹುಟ್ಟಿಕೊಂಡ ಕಥೆಗಳಾಗಿ ನಮಗೆ ತೋರುತ್ತವೆ.
ಶ್ರೀರಾಮ ಇಟ್ಟಣ್ಣವರ ಬರೆದ “ಭರಮದೇವರು” ಕೃತಿಯ ಕುರಿತು ತೇಜಾವತಿ ಡಿ.ಎಸ್.‌ ಬರಹ

read more
ಭಾವನೆಗಳ ಬಿರುಕ ಹೊಲಿಯಲಾರ ಸಿಂಪಿಗ:  ಚಂದ್ರಶೇಖರ ಪೂಜಾರ ಬರಹ

ಭಾವನೆಗಳ ಬಿರುಕ ಹೊಲಿಯಲಾರ ಸಿಂಪಿಗ: ಚಂದ್ರಶೇಖರ ಪೂಜಾರ ಬರಹ

ಪ್ರೇಮ ಮೋಹ ವ್ಯಾಮೋಹಗಳ ನಡುವೆ ಇದ್ದ ಗಜ಼ಲ್ ಕಾಲ ಹೊರಳಿದಂತೆ ಜೀವನದ ಎಲ್ಲ ಆಯಾಮಗಳನ್ನು ಹೊಂದಿ ಬದುಕಿನ ಸಮಗ್ರ ಕಾವ್ಯವಾಯಿತು. ಗಜ಼ಲ್ ಬರಿ ಶಬ್ಧಾಲಂಕಾರಗಳ ಸರಪಳಿಯಲ್ಲ, ಅಲ್ಲೊಂದು ಕಾವ್ಯದ ಗುಣವಿರಬೇಕು. ಪ್ರತಿಮೆ, ರೂಪಕಗಳ ಮೂಲಕ ಮಾತನಾಡಬೇಕು. ಬೇಟೆಗೆ ಸಿಲುಕಿದ ಜಿಂಕೆಯ ಆಕ್ರಂದನದಂತೆ ಕಾಣುವ ಗಜ಼ಲ್ ಹೃದಯದ ಬಡಿತವಾಗಬೇಕು. ಓದಿದ ಕೂಡಲೇ ಹೃದಯವನ್ನು ಚಕಿತಗೊಳಿಸುವ ಗುಣ, ಓದುಗನೊಬ್ಬನಿಗೆ ನಿಲುಕದ ಅನುಭವಗಳನ್ನು ಒಂದುಗೂಡಿಸುವ ಶಕ್ತಿ ಪಡೆದಿರಬೇಕು. ವ್ಯಕ್ತಿಯೊಬ್ಬನ ಯೋಚನಾ ಲಹರಿಯನ್ನೇ ಬದಲಿಸುವ ಗುಣವನ್ನು ಅದು ಒಳಗೊಂಡಿರಬೇಕು.
ಶಿವಕುಮಾರ ಮೋ. ಕರನಂದಿ ಗಜ಼ಲ್‌ ಸಂಕಲನ “ನೆರಳಿಗಂಟಿದ ನೆನಪು” ಕುರಿತು ಚಂದ್ರಶೇಖರ ಯ. ಪೂಜಾರ ಬರಹ

read more
ಘಾಂದ್ರುಕ್‌ ಮತ್ತು ಸೋಫಿಯ ಎನ್ನುವ ಸೂಜಿಮಲ್ಲಿಗೆ: ಎಚ್.ಆರ್.‌ ರಮೇಶ್‌ ಬರಹ

ಘಾಂದ್ರುಕ್‌ ಮತ್ತು ಸೋಫಿಯ ಎನ್ನುವ ಸೂಜಿಮಲ್ಲಿಗೆ: ಎಚ್.ಆರ್.‌ ರಮೇಶ್‌ ಬರಹ

ಕತೆಗಳು ಹಿಂದಕ್ಕು ಮುಂದಕ್ಕು ಹೋಗುವ ಶೈಲಿ ಹಿಂದುಸ್ತಾನಿ ಸಂಗೀತದ ಯಾವುದೋ ಹೊಸ ರಾಗವೊಂದು ಹೊಮ್ಮಿದಂತೆ ಸಾಗುತ್ತದೆ. ಅದು ಕಾಲದ ಚಲನೆಯಾಗಿ ಓದುಗರನ್ನು ತನ್ನ ಜೊತೆ ಎಳೆದುಕೊಳ್ಳುತ್ತದೆ. ಕ್ಯಾಂಟರ್ ಬರಿ ಟೇಲ್ಸ್‌ನಲ್ಲಿ ಥಾಮಸ್ ಬಕೆಟ್‌ನ ಪುಣ್ಯಕ್ಷೇತ್ರಕ್ಕೆ ಯಾತ್ರೆ ಕೈಗೊಂಡ ಯಾತ್ರಿಕರು ಒಬ್ಬೊಬ್ಬರು ಒಂದೊಂದು ಬದುಕಿನ ಅನನ್ಯ ಅನುಭವದ ಕತೆಯನ್ನು ಹೇಳುವಂತೆ ಇಲ್ಲಿ ಸಿದ್ಧಾರ್ಥ ಮತ್ತು ಸೋಫಿಯಾ ತಮ್ಮ ಬದುಕಿನ ಜೊತೆ ತಮ್ಮ ಬದುಕನ್ನು ಮತ್ತು ಅದನ್ನು ಆವರಿಸಿರುವ ವ್ಯಕ್ತಿಗಳ ಕತೆಯನ್ನು ಹೇಳುತ್ತ ಹೋಗಿರುವ ಪರಿ ಚುಂಬಕ ಶಕ್ತಿಯಂತೆ ಸೆಳೆಯುತ್ತದೆ.
ಸತೀಶ್‌ ಚಪ್ಪರಿಕೆ ಅವರ “ಘಾಂದ್ರುಕ್”‌ ಕಾದಂಬರಿ ಕುರಿತು ಎಚ್.ಆರ್.‌ ರಮೇಶ್‌ ಬರಹ ನಿಮ್ಮ ಓದಿಗೆ

read more
ಶಿವಶಿವ ಎಂದರೆ ಭಯವಿಲ್ಲ..: ಕೆ.ಎನ್.‌ ಲಾವಣ್ಯ ಪ್ರಭಾ ಬರಹ

ಶಿವಶಿವ ಎಂದರೆ ಭಯವಿಲ್ಲ..: ಕೆ.ಎನ್.‌ ಲಾವಣ್ಯ ಪ್ರಭಾ ಬರಹ

ನೂತನ ಅವರ ಸುಂದರ ರೋಮಾಂಚನದ ಅನುಭವಗಳ ನಡುವೆಯೇ ಚಾರ್ ಧಾಮ್ ಪ್ರವಾಸದ ಗಿರಿಶಿಖರ ಆಳ ಕಣಿವೆಗಳ ಪ್ರಪಾತದ ರೌದ್ರತೆಯನ್ನೂ ಕಾಣಿಸುತ್ತಾರೆ. ಅವರ ಕನಸುಗಳೊಂದಿಗೆ ಮುಂದೆ ಸಂಭವಿಸಬಹುದಾದ ಘೋರ ಅನುಭವಗಳು ಬೆಸೆದುಕೊಳ್ಳುತ್ತವೆ. ಲಕ್ಷಾಂತರ ಪ್ರವಾಸಿಗರ ಕಾರಣದಿಂದ ಸ್ಥಳದ ನೈರ್ಮಲ್ಯ ಕಾಪಾಡುವ ಜರೂರತ್ತನ್ನು ಮನಗಾಣಿಸುತ್ತಾರೆ. ಅಲ್ಲಿನವರ ಬದುಕು ಅತ್ಯಂತ ದುರ್ಭರವಾದರೂ ಬಹು ಸರಳ. ಆದರೆ ಪ್ರವಾಸಿಗರ ದಟ್ಟಣೆಯಿಂದಾಗಿ ಉಂಟಾಗುವ ಮಾಲಿನ್ಯತೆ ಸ್ಥಳೀಯ ಪರಿಸರದ ಹಾನಿಗೆ ಮಾರಕವಾಗಬಹುದು.
ನೂತನ ದೋಶೆಟ್ಟಿ ಪ್ರವಾಸ ಕಥನ “ಸ್ವರ್ಗದೊಂದಿಗೆ ಅನುಸಂಧಾನ”ದ ಕುರಿತು ಕೆ.ಎನ್.‌ ಲಾವಣ್ಯ ಪ್ರಭಾ ಬರಹ

read more
ಪ್ರೇಮ ಕವಿತೆಗಳಿಲ್ಲದ ಸಾಹಿತ್ಯ ಅಪೂರ್ಣ: ಕಮಲಾಕರ ಕಡವೆ

ಪ್ರೇಮ ಕವಿತೆಗಳಿಲ್ಲದ ಸಾಹಿತ್ಯ ಅಪೂರ್ಣ: ಕಮಲಾಕರ ಕಡವೆ

ಪ್ರೇಮಕವನಗಳನ್ನು ಬರೆಯುವ ಕವಿ ಎದುರಿಸುವ ಮುಖ್ಯ ಸವಾಲು ಅಂದರೆ ಅಭಿವ್ಯಕ್ತಿಯ ಸವಕಲು ಗುಣ. ಅತಿಬಳಕೆಯಿಂದಾಗಿ ಪ್ರೇಮದ ಕುರಿತಾಗಿ ಹೇಳಬಹುದಾದ ಅನೇಕ ಮಾತುಗಳು ತೀರಾ ಸವಕಲಾಗಿ, ಈಗ ಕೃತ್ರಿಮ ಅನಿಸಿಬಿಡುವುದು ಸಹಜ. ಈ ನಿಟ್ಟಿನಲ್ಲಿ ನನಗೆ ಜಬಿವುಲ್ಲಾ ಅವರ ಸೃಜನಶೀಲ ಮರುರೂಪಿಸುವಿಕೆ ಇಷ್ಟವಾಯಿತು. ವ್ಯಾಪಕವಾಗಿ ಬಳಕೆಯಾದ ಭಾವನೆಯೊಂದನ್ನು ಬಳಸುವಾಗ ಅವರು ಅದಕ್ಕೊಂದು ಟ್ವಿಸ್ಟ್ ಕೊಡುತ್ತಾರೆ. ಅವರು ಕೊಡುವ ಈ ತಿರುವು ಆ ಭಾವನೆ ಮತ್ತು ಅಭಿವ್ಯಕ್ತಿಗೆ ಹೊಸ ಚಾಲ್ತಿ ಸಾಧ್ಯವಾಗಿಸುತ್ತದೆ:
ಜಬಿವುಲ್ಲಾ ಅಸದ್ ಕವನ ಸಂಕಲನ “ಪ್ರೇಮಾಯತನ”ಕ್ಕೆ ಕಮಲಾಕರ ಕಡವೆ ಮುನ್ನುಡಿ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ