ಚಲನಚಿತ್ರ ಭಾಷೆಯ ಕಲಿಕೆ ಮತ್ತು ಘಟಶ್ರಾದ್ಧ…
ಸಿನಿಮಾ ಮಾಧ್ಯಮವನ್ನು ಸಶಕ್ತವಾಗಿ ದುಡಿಸಿಕೊಳ್ಳುವವರು ದೃಶ್ಯ ಬಿಂಬಗಳ ಜೊತೆಗೇ, ಶಾಬ್ದಿಕ ರೂಪದ ಬಿಂಬಗಳನ್ನೂ ಸೃಷ್ಟಿಮಾಡುತ್ತಿರುತ್ತಾರೆ. ಸಂಕಲನ ತಂತ್ರದ ಮೂಲಕವೂ ಬಿಂಬವನ್ನು ಸಂಶ್ಲೇಷಿಸುತ್ತಿರುತ್ತಾರೆ. ವಾಸ್ತು, ವೇಷಭೂಷ, ಸೂಕ್ತ ನಟ ನಟಿಯರ ಬಳಕೆ, ಇತ್ಯಾದಿ ಅಂಶಗಳು ಪರಿಣಾಮಕಾರಿಯಾದ ಬಿಂಬ ನಿರ್ಮಾಣಕ್ಕೆ ಎಷ್ಟು ಅಗತ್ಯವೋ ಸಮಯದ ನಿರ್ವಹಣೆಯಲ್ಲಿ ಕೈಗೋಲಾಗಿ ಬರುವ ಸಂಗೀತ, ಚಿತ್ರದ ಲಯ, ತಂತ್ರ ಸೌಷ್ಠವಗಳೂ ಬಿಂಬ ನಿರ್ಮಾಣದಲ್ಲಿ ಅಷ್ಟೇ ಮುಖ್ಯ ಪಾತ್ರ ವಹಿಸುತ್ತಿರುತ್ತವೆ.
ಖ್ಯಾತ ಸಿನಿಮಾ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರ ಚಲನಚಿತ್ರಗಳ ಸಂಕಥನ “ಬಿಂಬ ಬಿಂಬನ” ನಾಳೆ ಬಿಡುಗಡೆಯಾಗಲಿದ್ದು, ಈ ಕೃತಿಗೆ ಅವರು ಬರೆದ ಮಾತುಗಳು ಹಾಗೂ ಘಟಶ್ರಾದ್ಧ ಚಲನಚಿತ್ರದ ಕುರಿತ ಮಾತುಕತೆಯ ಆಯ್ದ ಭಾಗ ನಿಮ್ಮ ಓದಿಗೆ
ಗಿರೀಶ್ ಕಾಸರವಳ್ಳಿ ಚಿತ್ರಗಳ ಸಂಕಥನ
ನಮ್ಮ ಹೆಚ್ಚಿನ ಚಿತ್ರಗಳಲ್ಲಿ ಮಳೆ ಬಳಕೆಯಾಗುತ್ತಿದ್ದುದು ಒಂದೋ ಹಾಡು, ನೃತ್ಯದ ಚಿತ್ರಣದಲ್ಲಿ, ಇಲ್ಲವೇ ಫೈಟಿಂಗ್ಗೆ ಹಿನ್ನೆಲೆಯಾಗಿ. ಅಲ್ಲೆಲ್ಲಾ ಮಳೆಯು ನಡೆಯುತ್ತಿರುವ ಘಟನೆಗೆ ಹಿನ್ನೆಲೆ ಒದಗಿಸುತ್ತಿತ್ತು ಅಷ್ಟೇ. ಅದು ಪಾತ್ರವಾಗಿ ಬಂದ ಉದಾಹರಣೆ ಕಡಿಮೆ. ಹಾಗೆ ಮಾಡಿದಾಗಲೂ ಮಳೆಯು ಸಿನಿಮಾಕ್ಕೆ ತರುವ ರಮ್ಯತೆಗೇ ಹೆಚ್ಚು ಒತ್ತು ಇರುತ್ತಿತ್ತು. ಹಾಗಾಗದೇ ಮಳೆ ಒಂದು ಪಾತ್ರವೇ ಆಗಬೇಕು ಎಂಬ ಉದ್ದೇಶ ನಮ್ಮದಾಗಿತ್ತು.
ಖ್ಯಾತ ಸಿನಿಮಾ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರ ಚಲನಚಿತ್ರಗಳ ಸಂಕಥನ “ಬಿಂಬ ಬಿಂಬನ” ದಿಂದ “ದ್ವೀಪ” ಚಿತ್ರದ ಕುರಿತ ಮಾತುಕತೆ ನಿಮ್ಮ ಓದಿಗೆ
ಮುಳುಗಡೆಯ ವಿದ್ಯಮಾನಗಳಿಗೆ ಹಿಡಿದ ಕೈಗನ್ನಡಿ: ಕೆ.ಆರ್.ಉಮಾದೇವಿ ಉರಾಳ ಬರಹ
ಪರಿಹಾರದ ಹಣ ಕೈಗೆ ಬರುತ್ತಲೇ ಕೆಲವರು ಕೃಷಿ ವಿಚಾರ ಕೈಬಿಟ್ಟು ಬಸ್ ಅಂಗಡಿ ಹೋಟೆಲ್ ತೆರೆದಿದ್ದು ಅಭ್ಯಾಸವಿಲ್ಲದ ಈ ಉದ್ಯಮಗಳಲ್ಲಿ ಕೈಸುಟ್ಟುಕೊಂಡಿದ್ದರು. ಬಡ್ಡಿ ಆಸೆಗೆ ಬಿದ್ದು ಇದ್ದ ಹಣವನ್ನೆಲ್ಲ ಕಳೆದುಕೊಂಡಿದ್ದರು. ಕೆಲವರು ಅಂದಾದುಂದಿ ವೆಚ್ಚಮಾಡಿ ಸಾಲಗಾರರಾಗಿ ಬರಿಗೈಯಾದರು. ಇಷ್ಟಾಗಿಯೂ ನಾಲ್ಕು ದಶಕಗಳ ನಂತರವೂ ಇನ್ನೂ ಪರಿಹಾರದ ಹಣ ಬರದಿರುವ ಪ್ರಸಂಗಗಳೆಷ್ಟೋ ಇವೆ ಎನ್ನುತ್ತಾರೆ ಲೇಖಕರು.
ಎಂ. ಎಂ. ಪ್ರಭಾಕರ ಕಾರಂತ್ ಬರೆದ “ಮುಳುಗಡೆ ಒಡಲಾಳ” ಕೃತಿಯ ಕುರಿತು ಕೆ.ಆರ್.ಉಮಾದೇವಿ ಉರಾಳ ಬರಹ ನಿಮ್ಮ ಓದಿಗೆ
ಆಧುನಿಕ ಮನೋಧರ್ಮದ ಭರತನ ಚರಿತ್ರೆ: ಚಂದ್ರಮತಿ ಸೋಂದಾ ಬರಹ
ಪಿತೃಪ್ರಧಾನ ವ್ಯವಸ್ಥೆಯ ದೌರ್ಬಲ್ಯಗಳನ್ನು ಸೂಕ್ಷ್ಮವಾಗಿ ಎತ್ತಿ ತೋರಿಸುತ್ತಲೇ ಅದಕ್ಕೆ ವಿಭಿನ್ನವಾದ ಇನ್ನೊಂದು ಮುಖವೂ ಸಾಧ್ಯವಿದೆ ಎನ್ನುವ ಪಿಸುನುಡಿಯೊಂದಿಗೆ ಹೊರಡುವ ಕೃತಿ ನಿಧಾನವಾಗಿ ಅದರ ಸಾಧ್ಯತೆಯನ್ನು ಅನಾವರಣಗೊಳಿಸುತ್ತ, ಸರಿಯಾದ ದಾರಿ ಹೀಗಿರಬೇಕು ಎನ್ನುವಂತೆ ಮುಂದುವರಿಯುತ್ತದೆ. ರಾಜಸತ್ತೆಯಲ್ಲಿ ಹಿರಿಮಗನಿಗೆ ಪಟ್ಟಗಟ್ಟಿದ ಮೇಲೆ ಉಳಿದ ಅಣ್ಣತಮ್ಮಂದಿರು, ಪರಿವಾರದವರು ರಾಜನನ್ನು ಅವಲಂಬಿಸಿಯೇ ಇರಬೇಕೆನ್ನುವ ತಥಾಗತ ನಂಬಿಕೆಯಲ್ಲಿ ಉಳಿದವರ ಮನಃಸ್ಥಿತಿ ಏನಿದ್ದೀತು? ಹೇಗಿದ್ದೀತು?
ಡಾ. ಆರ್ ಸುನಂದಮ್ಮ ಬರೆದ “ಭರತಕಲ್ಪ” ಕೃತಿಯ ಕುರಿತು ಡಾ. ಚಂದ್ರಮತಿ ಸೋಂದಾ ಬರಹ ನಿಮ್ಮ ಓದಿಗೆ
ಒಂದು ಆಕಾಶ, ಹಲವು ಏಣಿಗಳು: ಯೋಗೀಂದ್ರ ಮರವಂತೆ ಬರಹ
ವಿಮಾನಗಳ ಚರಿತ್ರೆಯನ್ನು ಬರೆದವರು ಬೇರೆಬೇರೆ ಕಾಲಘಟ್ಟದಿಂದ ಸ್ಥಳದಿಂದ ಘಟನೆಗಳಿಂದ ತಮ್ಮ ಅಧ್ಯಯನ, ಪುರಾವೆ ಹಾಗು ಅಂದಾಜುಗಳನ್ನು ವಿಶದೀಕರಿಸುವುದಿದೆ. ಆಕಾಶಕ್ಕೆ ನೆಗೆಯಬೇಕು ಎನ್ನುವ ಉತ್ಕಟ ಆಸೆ ಮನುಷ್ಯರಿಗೆ ಎಂದು ಬಂತೋ ಕರಾರುವಕ್ಕಾಗಿ ಹೇಳಿದವರಿಲ್ಲವಾದರೂ ಬಾನಿನಲ್ಲಿ ಸ್ವಚ್ಛಂದವಾಗಿ ಹಾರಿ ಇಳಿಯುವ ಹಕ್ಕಿಗಳನ್ನು ನೋಡಿ ನಮಗೂ ಹಾರುವ ಕನಸು ಹುಟ್ಟಿತು. ಮತ್ತೆ ಆ ನಿಟ್ಟಿನಲ್ಲಿ ಪ್ರಯತ್ನಗಳು ನಿರಂತರವಾಗಿ ಸಾಗಿದವು ಎನ್ನುವ ಉಲ್ಲೇಖಗಳು ಓದಿನಲ್ಲಿ ಸಿಗುತ್ತವೆ.
ಯೋಗೀಂದ್ರ ಮರವಂತೆ ಬರೆದ ವಿಮಾನ ಲೋಕದ ಅಚ್ಚರಿ, ಅನುಭವಗಳ ಕುರಿತ ಹೊಸ ಕೃತಿ “ಏರೋ ಪುರಾಣ”ದ ಒಂದು ಬರಹ ನಿಮ್ಮ ಓದಿಗೆ
ಮೊಟ್ಟೆಕೋಳಿಯೇ ಬೇಕೆಂದ ಅಳಿಯರು!: ಸೂರ್ಯಕೀರ್ತಿ ಪ್ರಬಂಧ
‘ಏನೇ ನಿಮ್ಮವ್ವ ಅಳಿಯಂದ್ರ ನೋಡೋ ಹುಟ್ಟೇನೆ ಇದು, ಇದೊಂದು ಬಾಳಾಟ ಅಂತ ನಾನು ಅಂದುಕೊಂಡಿರಲಿಲ್ಲ, ಅಕ್ಕಪಕ್ಕದವರೆಲ್ಲ ಎಷ್ಟು ಚೆಂದವಾಗಿ ಅಳಿಯರನ್ನು ಕರ್ದು ಕಳಿಸ್ತಾರೆ ಅನ್ನೋದ್ನ ನೋಡಿ ಕಲಿಬೇಕು’ ಎಂದೆಲ್ಲ ಅಂದಿದ್ದನ್ನು ನೋಡಿ. ಮೇಯಲು ಹೋದ ಕೋಳಿಗಳ ಬಿಡದೆ ಅಟ್ಟಾಡಿಸಿಕೊಂಡು ಹಿಡಿದು ಕೂಯ್ದು ತಿಂದು ತಮ್ಮ ಹೆಂಡತಿಯರ ಜೊತೆ ಹೊರಟು ನಿಂತರು. ಅಜ್ಜಿ ಮಕ್ಕಳ ಖುಷಿಯ ನೋಡಿ ತನ್ನೆರಡು ಕೈಗಳ ಎತ್ತಿ ಆಶೀರ್ವಾದದ ಜೊತೆ ಒಂದಿಷ್ಟು ಕಣ್ಣೀರು ಹಾಕಿದಳು. ಎಲ್ಲರಿಗೂ ತಿಂಡಿ ತಿನಸುಗಳ ಕಟ್ಟಿ ‘ಜೋಪಾನ’ ಎಂದು ಹೇಳಿದಳು.
ಇತ್ತೀಚೆಗೆ ಬಿಡುಗಡೆಯಾದ ಸೂರ್ಯಕೀರ್ತಿ ಅವರ ಪ್ರಬಂಧಗಳ ಸಂಕಲನ “ಮಳೆ”ಯ ಒಂದು ಪ್ರಬಂಧ ನಿಮ್ಮ ಓದಿಗೆ
ಲಂಡನ್ ಮತ್ತು ಟಿಪ್ಪೂ ಸುಲ್ತಾನ್: ಜೆ. ಬಾಲಕೃಷ್ಣ ಬರಹ
ಬ್ರಿಟಿಷರಿಗೆ ಆ `ವ್ಯಾಘ್ರಸ್ವಪ್ನ’ ಎಷ್ಟು ನಿದ್ರೆ ಕೆಡಿಸಿತ್ತೆಂದರೆ ಅವರು ಆ ಸಿಟ್ಟನ್ನು ಕಾಡಿನಲ್ಲಿನ ನಿಜವಾದ ಹುಲಿಗಳನ್ನು ಕೊಂದು ಅವುಗಳ ಮೇಲೆ ಕಾಲನ್ನಿಟ್ಟು ಫೋಟೊ ತೆಗೆಸಿಕೊಂಡು ಗರ್ವದಿಂದ ಬೀಗುತ್ತಿದ್ದರು. ಟಿಪ್ಪು ಹುಲಿಯೊಂದಿಗೆ ಸೆಣಸುತ್ತಿರುವ ಹಲವಾರು ಚಿತ್ರಗಳು ಟಿಪ್ಪೂನ ಕಾಲದ ನಂತರ ರಚಿತವಾಗಿವೆ. ಟಿಪ್ಪೂ ನಿಜವಾಗಿ ಹುಲಿಯೊಂದಿಗೆ ಸೆಣಸಿದ ದಾಖಲೆಗಳಿಲ್ಲವೆನ್ನುತ್ತಾರೆ ಚರಿತ್ರಕಾರರು. ಆದರೆ, ಟಿಪ್ಪೂನ ಕಾಲದ್ದೇ ಆದ ದಂತ ಕತೆಯೊಂದರಲ್ಲಿ ಹೈದರಾಲಿ ಟಿಪ್ಪೂನನ್ನು ಹೈದರಾಬಾದ್ಗೆ ಒಪ್ಪಂದವೊಂದರೆ ವಿಚಾರಕ್ಕೆ ಕಳುಹಿಸಿದ್ದಾಗ ಅಲ್ಲಿನ ಕಾಡೊಂದರಲ್ಲಿ ಹುಲಿಯೊಂದನ್ನು ಎದುರಿಸಿದ್ದನಂತೆ.
ಡಾ. ಜೆ. ಬಾಲಕೃಷ್ಣ ಅವರ ಹೊಸ ಕೃತಿ “ನಡೆದಷ್ಟು ದೂರ” ಪ್ರವಾಸ ಕಥನದ ಬರಹ ನಿಮ್ಮ ಓದಿಗೆ
ಐವತ್ತು ಪದ್ಯ, ಮೂವತ್ತಮೂರು ವರ್ಷ…: ದೀಪಾ ಗೋನಾಳ ಬರಹ
ಹೀಗೆ ತೇಲಿ ಹೋದ ಮತ್ತು ಕವಿತೆಯಾಗಿ ಉಳಿದು ಹೋದ ಜೀವ ಕೆತ್ತಿದ ಮೆತ್ತನೆ ಪದಗಳು ಬದುಕನ್ನ ಅವನು ಪಳಗಿಸ ಹೊರಟ ದಾರಿ ನಡುವೆ ನಿಂತು ನಕ್ಕ ದಾರಿಗಲ್ಲು. ಆ ಕಲ್ಲಿಗೂ ಕರುಳುಂಟು ಎನ್ನುವ ಅವನೊಳಗಿನ ಜೀವನಪ್ರೀತಿ. ಕವಿ ತಾನು ಇಲ್ಲದಾಗ ನಾವು ಅವನ ಮನೆಗೆ ಹೋದ್ರೆ ಏನು ಮಾಡಬೇಕು ಅಂತ ಹೇಳಿದ್ದಾನೆ, ಹೇಳಿ ಹೋಗಿದ್ದಾನೆ. ಅವನು ಇದನ್ನೆಲ್ಲ ಯಾಕೆ ಮೊದಲೇ ಇಷ್ಟು ನಿಖರವಾಗಿ ಹೇಳಿದ ಅನ್ನೊ ಪ್ರಶ್ನೆ ನನ್ನದು, ಆದರೆ ಅವನು ಹೇಳಿದ ಮಾತಿಗೆ ಬೆರಗೂ ಹಿಂಬಾಲಿಸೋದು ಕಂಡು ಆಶ್ಚರ್ಯವೂ..
ಎರಡು ವರ್ಷಗಳ ಹಿಂದೆ ತೀರಿಕೊಂಡ ಯುವಕವಿ ಅನಿಲ ಹುಲಮನಿ ಅವರ ಕವನ ಸಂಕಲನ “ಹೊಸ ಅಧ್ಯಾಯ”ವನ್ನು ಧಾರವಾಡದ ಕ್ರಾಂತಿ ಪ್ರಕಾಶನ ಪ್ರಕಟಿಸಿದ್ದು, ಈ ಸಂಕಲನದ ಕುರಿತು ದೀಪಾ ಗೋನಾಳ ಬರಹ
ಕೊನಾರ್ಕ್ನ ಮಿಥುನ ಶಿಲ್ಪಗಳು: ಡಾ. ಜೆ. ಬಾಲಕೃಷ್ಣ ಬರಹ
ಒರಿಸ್ಸಾದ ದೇವಾಲಯಗಳ ಹೊರಭಾಗದಲ್ಲಿ ಯಥೇಚ್ಛವಾಗಿ ಶಿಲ್ಪಕಲೆ ಇರುವಂತೆ ಅದಕ್ಕೆ ತದ್ವಿರುದ್ಧವಾಗಿ ದೇವಾಲಯಗಳ ಒಳಭಾಗ ಭಣ ಭಣಗುಟ್ಟುವಂತೆ ಖಾಲಿಯಾಗಿರುತ್ತದೆ. ಇದನ್ನು ಗಮನಿಸಿದ ಖ್ಯಾತ ಕಲೆ-ಸಂಸ್ಕೃತಿಯ ವಿದ್ವಾಂಸ ಆನಂದ ಕೂಮಾರಸ್ವಾಮಿ, `ಬದುಕೆಂಬುದು ಒಂದು ಮಾಯಾ ಪರದೆ ಇದ್ದಂತೆ. ಅದರ ಹಿಂಭಾಗದಲ್ಲಿ ದೇವರಿದ್ದಾನೆ. ದೇವಾಲಯದ ಹೊರಭಾಗದಲ್ಲಿ ನಮ್ಮ ಬದುಕಿನ, ಸಂಸಾರದ ಚಿತ್ರಣವಿರುತ್ತದೆ. ಅಲ್ಲಿನ ಕೆತ್ತನೆ, ಚಿತ್ರಣಗಳು ಬದುಕೆಂಬ ಮಾಯಾಲೋಕವನ್ನೂ, ಹುಟ್ಟು-ಸಾವುಗಳ ಬದುಕಿನ ಚಕ್ರಕ್ಕೆ ಮನುಷ್ಯನನ್ನು ಬಂಧಿಸಿರುವ ಆತನ ಆಸೆ ಆಕಾಂಕ್ಷೆಗಳನ್ನೂ, ನೋವು ನಲಿವುಗಳನ್ನೂ ಪ್ರತಿಬಿಂಬಿಸುತ್ತವೆ.
ಡಾ. ಜೆ. ಬಾಲಕೃಷ್ಣ ಅವರ ಹೊಸ ಕೃತಿ “ನಡೆದಷ್ಟು ದೂರ” ಪ್ರವಾಸ ಕಥನದ ಬರಹ ನಿಮ್ಮ ಓದಿಗೆ