Advertisement

ಪುಸ್ತಕ ಸಂಪಿಗೆ

ಕನಸು ಸಾಕಿಕೊಂಡವರ ಕಣ್ಣ ದೀಪದೆದುರು…

ಕನಸು ಸಾಕಿಕೊಂಡವರ ಕಣ್ಣ ದೀಪದೆದುರು…

ಕನ್ನಡದ ಪ್ರಮುಖ ಬರಹಗಾರ ಪಿ.ಲಂಕೇಶ್ ಹೇಳುವಂತೆ ಒಬ್ಬ ಬರಹಗಾರನ ಭಾಷೆಯೇ ಆತನ ಅಸಲಿ ಮತ್ತು ಖೊಟ್ಟಿತನವನ್ನು ಬಯಲು ಮಾಡುವ ಸಾಧನ. ಬರಹದಲ್ಲಿ ಹೆಚ್ಚು ಹೊತ್ತು ಅದನ್ನು ಅವಿತಿಟ್ಟು ಆಟ ಆಡಲಾಗದು. ಇಲ್ಲಿ ಗೆದ್ದ ಮಾತಿವೆ, ಸೋತ ಮಾತಿವೆ. `ಕವಿಯ ಜೀವನಾನುಭವ ಮತ್ತೆ ಮತ್ತೆ ಕಸಿಗೊಂಡಾಗ ಆತನ ಕಾವ್ಯದಲ್ಲಿ ಹೊಸಕಳೆ ಕಾಣಬಹುದು. ಆ ಕಸುವು ಹೊಂದಿರುವ ಮಂಡಲಗಿರಿ ಪ್ರಸನ್ನ ಅವರ ಮುಂದಿನ ಬರಹಗಳು ಮತ್ತಷ್ಟು ಹೊಸತನದೊಂದಿಗೆ ಓದುಗ ವಲಯಕ್ಕೆ ತಲುಪಲಿ.
ಮಂಡಲಗಿರಿ ಪ್ರಸನ್ನ ಅವರ “ನಿದಿರೆ ಇರದ ಇರುಳು” ಗಜಲ್‌ ಸಂಕಲನಕ್ಕೆ ಡಾ. ರಮೇಶ ಅರೋಲಿ ಬರೆದ ಮುನ್ನುಡಿ

read more
ನಿಷೇಧಿತ ಗಿರಿ ನೆತ್ತಿಯಲ್ಲಿ

ನಿಷೇಧಿತ ಗಿರಿ ನೆತ್ತಿಯಲ್ಲಿ

ಹೀಗೆ ಕಡುಹಿಂಸೆಯಲ್ಲೇ ಹದಿನೈದು ದಿನ ಕಳೆದ ಮೇಲೆ ಕೊನೆಗೊಂದು ದಿನ ಸ್ವತಃ ಮಾಂಟ್ಗೊಮರಿ ಸಾಹೇಬರು, `ಕಾರಕೋರಂ ಶ್ರೇಣಿಯ ಎರಡು ಶಿಖರಗಳ ಅನ್ವೇಷಣೆ ದೊಡ್ಡ ಸಾಧನೆ. ನಂಗಾ ಪರ್ವತದ ವಿವರಗಳನ್ನು ಕಲೆ ಹಾಕಿದ್ದೂ ಸಾರ್ಥಕವಾಯಿತು. ಕಾರಕೋರಂ ಶ್ರೇಣಿಯ ದ್ವಿತೀಯ ಶಿಖರ, ಪೀಕ್ ಹದಿನೈದನ್ನೂ ಮೀರಿಸುವಷ್ಟು ಎತ್ತರ ಇರುವಂತಿದೆ’ ಎಂದು ಹೆಮ್ಮೆಯಿಂದ ಹೇಳಿದ್ದರು. ಉಳಿದವರೂ ತಲೆಯಾಡಿಸಿ ಸಮ್ಮತಿಸಿದ್ದರು. ಅವರ ಸಂಭಾಷಣೆ ಕೇಳಿ, `ಕಾರಕೋರಂ ಕಾಶ್ಮೀರದ ಉತ್ತರದಲ್ಲಿರುವ ಪರ್ವತಶ್ರೇಣಿ ಎಂಬುದು ಯಾರಿಗೆ ಗೊತ್ತಿಲ್ಲ. ಅದರಲ್ಲಿರುವ ಎರಡು ಎತ್ತರದ ಶಿಖರಗಳನ್ನು ಇವರೇ ಶೋಧಿಸಿದರಂತೆ!
ಡಾ. ಗಜಾನನ ಶರ್ಮ ಹೊಸ ಕಾದಂಬರಿ “ಪ್ರಮೇಯ”ದ ಕೆಲವು ಪುಟಗಳು ನಿಮ್ಮ ಓದಿಗೆ

read more
ಗಾಂಧೀಜಿ ಬದುಕಿನ ಹರಿವುಗಳ ಒಳಾರ್ಥವನ್ನು ತೆರೆದಿಟ್ಟ ಕೃತಿ

ಗಾಂಧೀಜಿ ಬದುಕಿನ ಹರಿವುಗಳ ಒಳಾರ್ಥವನ್ನು ತೆರೆದಿಟ್ಟ ಕೃತಿ

ಗಾಂಧೀಜಿಯವರ ಕುರಿತು ಆಕ್ಷೇಪಗಳು ಬಂದಾಗ ಇದರಲ್ಲಿ ಅವರ ನಡೆ ಆ ಕಾಲದಲ್ಲಿ ಎಷ್ಟು ಸೂಕ್ತವಾಗಿತ್ತು ಎನ್ನುವದನ್ನು ಇಲ್ಲಿ ವಿವರಿಸಲಾಗಿದೆ. ಖಿಲಾಪತ್ ಚಳುವಳಿಯನ್ನು ಗಾಂಧಿ ಸಂಪೂರ್ಣವಾಗಿ ಒಪ್ಪಿಲ್ಲ; ಆದರೆ ಆ ಧರ್ಮದ ಬಗೆಗೆ ಅವರಿಗಿರುವ ಆಳ ದೃಷ್ಟಿಕೋನದಿಂದ ಮುಸಲ್ಮಾನರ ಭಾವನೆಗಳನ್ನು ಗಾಂಧಿ ಅರ್ಥಮಾಡಿಕೊಂಡಿದ್ದರು ಎನ್ನುತ್ತಾರೆ. ಹಾಗೇ ನೋಡಿದರೆ ಖಿಲಾಪತ್ ಚಳುವಳಿಯನ್ನು ಗಾಂಧಿ ಬೆಂಬಲಿಸಿದ ಕಾರಣದಿಂದಲೇ ಗಾಂಧಿ ರಾಷ್ಟ್ರೀಯ ನಾಯಕರಾಗಿ ಹೊಮ್ಮಿದ್ದು ಮತ್ತು 1920ರ ನಾಗಪುರ ಅಧಿವೇಶನದ ನಂತರ ತೀವ್ರವಾದಿಗಳನ್ನು ಬದಿಗೆ ಸರಿಸಿ ಅನಭಿಷಕ್ತ ನಾಯಕರಾಗಿರುವುದು.
ರಾಮಚಂದ್ರ ಹಬ್ಬು ಅನುವಾದಿಸಿರುವ “ಮಹಾತ್ಮ ಗಾಂಧಿ ಜೀವನ ಚರಿತೆ” ಕೃತಿಯ ಕುರಿತು ನಾರಾಯಣ ಯಾಜಿ ವಿಶ್ಲೇಷಣೆ

read more
ಹೃದಯದ ಕಲ್ಲು ಮತ್ತು ನದಿಯೊಂದು ನಿದ್ರಿಸಿದಾಗ

ಹೃದಯದ ಕಲ್ಲು ಮತ್ತು ನದಿಯೊಂದು ನಿದ್ರಿಸಿದಾಗ

ನಿದ್ರಿಸುವ ನದಿಯೆಡೆಗೆ ಹೋಗುವವರ ಎದೆಯಲ್ಲಿ ಎಳ್ಳಷ್ಟೂ ಭಯ ಇರಬಾರದು. ಅಕಸ್ಮಾತ್ ನಿನ್ನ ಮನಸ್ಸಿನಲ್ಲಿ ಒಂದೇ ಒಂದು ಕ್ಷಣ ಭಯ ಹೊಕ್ಕರೆ ನೀನು ಸತ್ತಂತೆ ಸರಿ, ನಿನ್ನ ಆತ್ಮಕ್ಕೆ ಅವುಗಳನ್ನು ಎದುರಿಸಲು ಆಗುವುದಿಲ್ಲ. ನೀನು ಪಾಪದ ಕೆಲಸ ಮಾಡಿದ್ದರೆ ಆ ಆತ್ಮಗಳು ನಿನ್ನನ್ನು ಸುಲಭವಾಗಿ ಮುಗಿಸಿಬಿಡುತ್ತವೆ. ಭಯಾನಕ ಅಂತ್ಯ ನಿನ್ನದಾಗುತ್ತದೆ. ಶುದ್ಧ ಮನಸ್ಸು ಮತ್ತು ಒಳ್ಳೆಯ ಹೃದಯ ನಿನ್ನ ರಕ್ಷಣೆ, ನಿದ್ರಿಸುವ ನದಿಯೆಡೆಗೆ ಹೋಗುವಾಗ ಯಾರೊಡನೆಯೂ ದ್ವೇಷ ಹೊಂದಿರಬಾರದು. ಮನಸ್ಸಿನಲ್ಲಿ ಕೆಡುಕು, ದುಷ್ಟತನ ಇರಬಾರದು.
ರವಿಕುಮಾರ್ ಹಂಪಿ ಅನುವಾದಿತ “ನದಿಯೊಂದು ನಿದ್ರಿಸಿದಾಗ” ಕಾದಂಬರಿಯ ಕುರಿತು ಸುಮಿತ್‌ ಮೇತ್ರಿ ಬರಹ

read more
ಕಂದಹಾರ್ ಏರ್‌ಬೇಸಿನ ಅಪಾಯಕಾರಿ ಉಪಕ್ಯಾಂಪುಗಳು

ಕಂದಹಾರ್ ಏರ್‌ಬೇಸಿನ ಅಪಾಯಕಾರಿ ಉಪಕ್ಯಾಂಪುಗಳು

ಕಚೇರಿಗೆ ಬಂದಾಗ ಡಾಕ್ಟರ್ ಕಿರ್ಕಿಗೆ ಕರೆ ಬಂದು ಅಗತ್ಯ ವೈದ್ಯಕೀಯ ನೆರವಿಗಾಗಿ ಅವಘಡ ನಡೆದ ಜಾಗಕ್ಕೆ ಹೋದನೆಂದು ಗೊತ್ತಾಯ್ತು. ಇಂತಹ ಪ್ರಮುಖ ಅವಘಡಗಳಾದಾಗ ಕ್ಯಾಂಪಿನಲ್ಲಿನ ಇಂತಹ ಖಾಸಗಿ ವೈದ್ಯರನ್ನು ಘಟನೆಯ ಜಾಗಕ್ಕೆ ನೆರವಿಗಾಗಿ ಕರೆಸಲಾಗುತ್ತದೆ. ನಾನು ನೋಡಿದ ವಿವರಗಳನ್ನು ಆಂಟೋನಿಯೋ ಮತ್ತು ಅಲ್ಲಿದ್ದ ಇತರೆ ಆಲ್ಬೇನಿಯನ್ ಜನರಿಗೆ ವಿವರಿಸಿದೆ. ಎಲ್ಲರೂ ಆಘಾತಕ್ಕೊಳಗಾದಂತೆ ದೊಡ್ಡ ನಿಟ್ಟುಸಿರುಬಿಟ್ಟರು. ಆಂಟೋನಿಯೋ ಮಾತ್ರ ತುಂಬಾ ಕಂಗಾಲಾದವನಂತೆ ತಲೆಮೇಲೆ ಕೈಹೊತ್ತು ಏನೇನೋ ಮನಸ್ಸಿಗೆ ಬಂದಂತೆ ಅವನ ಭಾಷೆಯಲ್ಲಿ ಗೊಣಗಲು ಶುರುಮಾಡಿದ.
ಮಂಜುನಾಥ್‌ ಕುಣಿಗಲ್‌ ಬರೆದ “ಕುಣಿಗಲ್‌ ಟು ಕಂದಹಾರ್” ಕೃತಿಯಿಂದ ಆಯ್ದ ಲೇಖನ ನಿಮ್ಮ ಓದಿಗೆ

read more
‘ಒಳ್ಳೆಯ ದೆವ್ವ’ ಕಾದಂಬರಿ: ಮಕ್ಕಳ ಮನಸ್ಸಿನ ವೈದ್ಯ

‘ಒಳ್ಳೆಯ ದೆವ್ವ’ ಕಾದಂಬರಿ: ಮಕ್ಕಳ ಮನಸ್ಸಿನ ವೈದ್ಯ

ಮಂಜುನಾಥ ಶಾಲೆಗೆ ಹೋಗುವಾಗ ದಿನಾಲೂ ಅವನ ತಾಯಿಯನ್ನು ತಬ್ಬಿ ಮುದ್ದಾಡುತ್ತಿದ್ದ. ಅಷ್ಟೊಂದು ಪ್ರೀತಿ ವಾತ್ಸಲ್ಯ ಇಬ್ಬರಲ್ಲೂ ತುಂಬಿತ್ತು. ‘ತಾಯಿ ವಾತ್ಸಲ್ಯ ಮತ್ತು ಮಗನ ಮಂದಹಾಸ ಇದಕ್ಕಿಂತ ಉತ್ತಮವಾಗಿರಲು ಸಾಧ್ಯವಿಲ್ಲ’ ಎನ್ನುವ ಶಿರ್ಷಿಕೆಯೊಂದಿಗೆ ಅದು ಪತ್ರಿಕೆಯ ಮುಖಪುಟದಲ್ಲಿ ಅಚ್ಚಾಗಿತ್ತು. ಅಷ್ಟೊಂದು ಅಮೋಘವಾದ ಪ್ರೀತಿ ಇವರದಾಗಿತ್ತು. ಅದನ್ನು ನೋಡಿ ಮಗ ಫೋಟೋದಂತೆ ಕಟ್ಟು ಹಾಕಿಸಲು ತಾಯಿಗೆ ಹೇಳಿದ. ಬಾಲ್ಯದ ಆ ಅಮೂಲ್ಯ ನೆನಪನ್ನು ಗೆಳೆಯರಾದ ಪಲ್ಲವಿ, ಪವನ, ಆಕಾಶ ನೆನಪಿಸಿಕೊಳ್ಳುತ್ತಾರೆ.
ಡಾ. ಬಸು ಬೇವಿನಗಿಡದ ಬರೆದ “ಒಳ್ಳೆಯ ದೆವ್ವ” ಮಕ್ಕಳ ಕಾದಂಬರಿಯ ಕುರಿತು ನಾಗರಾಜ ಎಂ ಹುಡೇದ ಬರಹ

read more
ಇಸ್ಕೂಲಿನ ಬಿಡುಗಡೆ ಮತ್ತು ಗಣರಾಜ್ಯ ದಿನದ ಸಂಭ್ರಮ

ಇಸ್ಕೂಲಿನ ಬಿಡುಗಡೆ ಮತ್ತು ಗಣರಾಜ್ಯ ದಿನದ ಸಂಭ್ರಮ

ಆರನೆಯ ವರ್ಗದ ಕನ್ನಡ ವಿಷಯದಲ್ಲಿ ಇರುವ `ಮಲ್ಲಜ್ಜನ ಮಳಿಗೆ’ ಎಂಬ ಪಾಠದ ರೀತಿಯಲ್ಲಿ ಇರುವ ಅಂಗಡಿಯಂತೆ ಒಂದೇ ಒಂದು ಅಂಗಡಿ ಅಣಶಿಯಲ್ಲಿಯೂ ಇದೆ. ಅಲ್ಲಿ ತೋರಣ ಕಟ್ಟಲು ಬೇಕಾದ ಸುತ್ಲಿ ಬಳ್ಳಿಯೂ ಸಿಗುತ್ತದೆ. ಬಣ್ಣದ ಕಾಗದಗಳು ಸಿಗುತ್ತವೆ. ಎಲ್ಲ ಒಂದೇ ಅಂಗಡಿಯಲ್ಲಿ ಲಭ್ಯ. ಆ ರಾಮಚಂದ್ರ ಕಾಜೂಗಾರನ ಅಂಗಡಿ ಅಣಶಿಯಲ್ಲಿಯೇ ಫೇಮಸ್. ಅಲ್ಲಿ ಸಿಗುವ ಬಣ್ಣದ ಕಾಗದಗಳು ಕೂಡ ಮೂರೇ ಬಣ್ಣದಲ್ಲಿ ಸಿಕ್ಕಿ ಸುತ್ತಲೂ ಪರಪರೆ ಹಚ್ಚಲು ಸಾಕಾಗದೆ ಚೂರು ಬೇಜಾರಾಗಿದೆ. ಮಕ್ಕಳ ಬೇಜಾರಿಗೆ ರಾಧಕ್ಕೋರು ಒಂದು ಪರಿಹಾರ ಸೂಚಿಸಿದ್ದಾರೆ.
ನಾಳೆ ಅಕ್ಷತಾ ಕೃಷ್ಣಮೂರ್ತಿಯವರ “ಇಸ್ಕೂಲು” ಅಂಕಣ ಬರಹಗಳ ಸಂಕಲನ ಬಿಡುಗಡೆಯಾಗುತ್ತಿದೆ. ಈ ಹೊತ್ತಿನಲ್ಲಿ ಇಸ್ಕೂಲಿನ ಕುರಿತ ಅವರ ಮಾತುಗಳು ನಿಮ್ಮ ಓದಿಗೆ

read more
ಜ್ಞಾನದ ಹೊಸ ಆಯಾಮ ತೋರುವ ಬರಹಗಳು

ಜ್ಞಾನದ ಹೊಸ ಆಯಾಮ ತೋರುವ ಬರಹಗಳು

ಯಾಜಿಯವರು ಸರ್ಚ್‌ಲೈಟ್‌ ಬೀರದ ಸಂಗತಿಗಳು ವಿರಳ. ನಾವೆಲ್ಲ ಮರೆತೇ ಬಿಟ್ಟಿರುವ ವೇದಕಾಲದ ಮಹಾಜ್ಞಾನಿ, ಗಾರ್ಗಿ ವಾಚಕ್ನವಿ ಎಂಬ ಮಹಾಪಂಡಿತೆಯ ಬಗೆಗೂ ಬೆಳಕು ಚೆಲ್ಲುತ್ತಾರೆ. ಗೌತಮ ಬುದ್ಧ ಕರ್ಮಯೋಗವನ್ನು ಪ್ರತಿಪಾದಿಸಿದವನು ಎಂದು ಹೇಳುತ್ತಾ ಬುದ್ಧನೂ ನಮ್ಮ ಪರಂಪರೆಯ ಜತೆಗೆ ಹೊಂದಿರುವ ಸಾಂಗತ್ಯವನ್ನು ಗುರುತಿಸುತ್ತಾರೆ. ಶಂಕರಾಚಾರ್ಯರ ಅದ್ವೈತ ವಿಚಾರದ ವಿಲಾಸವನ್ನು ಬೆರಗಾಗುವಂತೆ ಕಟ್ಟಿಕೊಡುತ್ತಾರೆ. ಹಾಗೆಯೇ ಪುರಾಣದ ಹತಭಾಗ್ಯ ಸ್ತ್ರೀ ಪಾತ್ರಗಳ ಬಗ್ಗೆ ತುಂಬಾ ಮಮತೆಯಿಂದ ಅವರು ಬರೆಯುತ್ತಾರೆ. ಉದಾಹರಣೆಗೆ, ಮಹಾಭಾರತದ ಅಂಬೆ, ಕುಂತಿ, ರಾಮಾಯಣದ ಕೈಕೇಯಿ ಮುಂತಾದವರು.
ನಾರಾಯಣ ಯಾಜಿಯವರ “ನೆಲ ಮುಗಿಲು” ಅಂಕಣ ಬರಹಗಳ ಸಂಕಲನಕ್ಕೆ ಹರಿಪ್ರಕಾಶ್‌ ಕೋಣೆಮನೆ ಬರೆದ ಮುನ್ನುಡಿ

read more
ಸ್ತ್ರೀ ಸ್ವಾತಂತ್ರ್ಯದ ಮಗ್ಗಲುಗಳು…

ಸ್ತ್ರೀ ಸ್ವಾತಂತ್ರ್ಯದ ಮಗ್ಗಲುಗಳು…

ಸ್ತ್ರೀಯರ ಸ್ವಾತಂತ್ರ್ಯದ ಕುರಿತೇ ಇಲ್ಲಿ ಮಾತನಾಡಿರುವ ಲೇಖಕ, ಯಾಕೆ ಸ್ತ್ರೀಯರಿಗಿನ್ನೂ ಸ್ವಾತಂತ್ರ್ಯ ದಕ್ಕಿಲ್ಲ ಎಂಬ ಪ್ರಶ್ನೆ ಕಾಡಿ ಅದಕ್ಕೆ ಉತ್ತರ ಹುಡುಕುವಾಗ ಕಂಡ ಸಂಗತಿಗಳನ್ನು ಇಲ್ಲಿ ಕತೆಯಾಗಿಸಿದ್ದಾರೆ. “ದೇಹಕ್ಕಾಗಿ ಮೋಹಿಸುವ ಹವ್ಯಾಸವನ್ನೇ ಯುವಜನತೆ ಪ್ರೀತಿಯೆಂದು ಭಾವಿಸಿರುವುದು ವಿಷಾದನೀಯ” ಎಂಬ ಅವರ ಮಾತು ಮನು ಮನಸ್ಸು ಎಷ್ಟು ಸೂಕ್ಷ್ಮಗ್ರಾಹಿ ಎಂಬುದನ್ನು ಸೂಚಿಸುತ್ತದೆ. ಒಬ್ಬ ಗ್ರಾಮೀಣ ಹುಡುಗಿ ತನ್ನ ಜೀವನವನ್ನು ಕಟ್ಟಿಕೊಳ್ಳಲು ಪ್ರಯತ್ನಿಸುವ ಕತೆಯನ್ನು ಓದುಗರ ಮುಂದೆ ತೆರೆದಿಟ್ಟಿರುವುದಾಗಿ ಹೇಳುತ್ತಾರೆ ಮನು. ಇಂದಿಗೂ ಗ್ರಾಮೀಣ ಭಾಗದ ಮಕ್ಕಳು ಉನ್ನತ ಶಿಕ್ಷಣ ಪಡೆಯುವಲ್ಲಿ ಇನ್ನೂ ಎಷ್ಟು ಅಡೆತಡೆಗಳನ್ನು ದಾಟಬೇಕಾಗಿದೆ.
ಮನು ಗುರುಸ್ವಾಮಿ ಬರೆದ “ಅವಳೂ ಕತೆಯಾದಳು” ಕೃತಿಗೆ ಡಾ. ವಿಜಯಕುಮಾರಿ ಎಸ್ ಕರಿಕಲ್ ಬರೆದ ಮುನ್ನುಡಿ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ