Advertisement

ಪುಸ್ತಕ ಸಂಪಿಗೆ

ಫಾರೆಸ್ಟರ್‌ ಪೊನ್ನಪ್ಪ ಮತ್ತು ಕಾಡಿನ ಕೌತುಕಗಳು

ಫಾರೆಸ್ಟರ್‌ ಪೊನ್ನಪ್ಪ ಮತ್ತು ಕಾಡಿನ ಕೌತುಕಗಳು

ಗಡದ್ದಾಗಿ ತಿಂದು, ಕಾಲು ನೀಡಿ ಲೋಕದ ಪರಿವೇ ಇಲ್ಲದೆ ಗೊರಕೆ ಹೊಡೆಯುತ್ತಿದ್ದ ಸಿದ್ದಣ್ಣನಿಗೆ, ಪೊನ್ನಪ್ಪ ಕಾಲಲ್ಲಿ ಎರಡು ಬಾರಿ ತಿವಿದು ಎಚ್ಚರಿಸಿದ. ಚಕ್ಕನೆ ಎಚ್ಚರಗೊಂಡ ಸಿದ್ದಣ್ಣ, ಮರಗಳ್ಳರು ಬಂದಿದ್ದರಿಂದ ಫಾರೆಸ್ಟರ್ ನನ್ನನ್ನು ಎಬ್ಬಿಸಿರಬಹುದು ಎಂದು ಕಣ್ಣು ಬಿಟ್ಟವನೇ ಗಾಬರಿಯಿಂದ ಸುತ್ತಲೂ ನೋಡತೊಡಗಿದ. ಪೊನ್ನಪ್ಪ ಮೆಲ್ಲನೆ ಅವನ ಕೈಯನ್ನು ಅದುಮಿ, “ಏನೂ ಇಲ್ಲ, ಆತಂಕ ಪಡಬೇಡ, ನಾನು ಸ್ವಲ್ಪಹೊತ್ತು ಮಲಗುತ್ತೇನೆ. ಯಾರಾದರೂ ಬಂದ ಶಬ್ದ ಕೇಳಿಸಿದರೆ ನನ್ನನ್ನು ಎಬ್ಬಿಸು” ಎಂದು ಅವನ ಕಿವಿಯಲ್ಲಿ ಪಿಸುಗುಟ್ಟಿದ.
ನೌಶಾದ್‌ ಜನ್ನತ್ತ್‌ ಹೊಸ ಕಾದಂಬರಿ “ಫಾರೆಸ್ಟರ್‌ ಪೊನ್ನಪ್ಪ” ಇಂದ ಆಯ್ದ ಭಾಗ ನಿಮ್ಮ ಓದಿಗೆ

read more
ಪರಿಸರದ ಪಾಠಕ್ಕೆ ಇದೇ ಸೂಕ್ತ ತಾಣ!

ಪರಿಸರದ ಪಾಠಕ್ಕೆ ಇದೇ ಸೂಕ್ತ ತಾಣ!

ಪ್ರಕೃತಿಯ ಮೊದಲ ಪಾಠಗಳನ್ನು ನಾನು ಕಲಿತದ್ದು ಆ ಹಕ್ಕಲಿನಲ್ಲಿ ಎಂದು ಹೇಳಿದರೆ ತಪ್ಪಾಗದು. ಹಾಗೆ ನೋಡಿದರೆ, ನಮ್ಮ ಹಳ್ಳಿಯ ಮನೆಯ ಪರಿಸರವೇ ಒಂದು ಒಳ್ಳೆಯ ಪಾಠಶಾಲೆ. ಮನೆ ಎದುರು ಗದ್ದೆ, ಮನೆ ಸುತ್ತಲೂ ಮರಗಳು, ಮನೆಯ ಛಾವಣಿಯ ಮೇಲೆ ಚಾಚಿಕೊಂಡ ಭಾರೀ ಗಾತ್ರದ ಹಲಸಿನ ಮರ, ಇಪ್ಪತ್ತು ಅಡಿ ದೂರದಲ್ಲಿರುವ ಬೃಹತ್ ಗಾತ್ರದ ಎರಡು ತಾಳೆ ಮರಗಳ ಒಣಗಿದ ಎಲೆಗಳು ಮಾಡುವ ಬರಬರ ಸದ್ದು, ಅಂಗಳದ ಅಂಚಿನ ಹೂಗಿಡಗಳು, ಬಳ್ಳಿಗಳು, ದಾಸವಾಳ, ಬೆಟ್ಟ ತಾವರೆ – ಪಟ್ಟಿ ಮಾಡುತ್ತಾ ಹೋದರೆ ಬೇಗನೆ ಮುಗಿಯದು. ಜತೆಗೆ ನಾವು ಶಾಲೆಗೆ ಹೋಗುತ್ತಿದ್ದ ದಾರಿಯೂ ಇನ್ನೊಂದು ಪಾಠಶಾಲೆ.
ಇತ್ತೀಚೆಗಷ್ಟೇ ಬಿಡುಗಡೆಯಾದ ಶಶಿಧರ ಹಾಲಾಡಿಯವರ “ನಾ ಸೆರೆಹಿಡಿದ ಕನ್ಯಾಸ್ತ್ರೀ” ಪ್ರಬಂಧ ಸಂಕಲನದ ಒಂದು ಬರಹ ನಿಮ್ಮ ಓದಿಗೆ

read more
ಹಳ್ಳಿಯ ಅಂತರಾತ್ಮದ ಆರ್ದ್ರ ಕಥನ

ಹಳ್ಳಿಯ ಅಂತರಾತ್ಮದ ಆರ್ದ್ರ ಕಥನ

ಇಡೀ ಕಥೆಗಳ ಅಂತರಾಳದಲ್ಲಿ ವಿಷಾದದ ದನಿಯೊಂದು ಲಘು ಹಾಸ್ಯದ ಲೇಪನದೊಂದಿಗೆ ಅನಾವರಣಗೊಂಡಿದೆ. ಯಾವುದೇ ʻಇಸಂʼನಿಂದ ಮುಕ್ತಗೊಂಡಂತೆ ಕಾಣುವ ಇಲ್ಲಿನ ಲೋಕದಲ್ಲಿ ಮನಕುಲದ ಒಳಿತು ಹಾಗೂ ಜೀವಪರ ತುಡಿತವೇ ಮೇಲುಗೈಯ್ಯಾಗಿದೆ. ಈ ಸಂಕಲನದ ಬಹು ಮುಖ್ಯ ಸಂಗತಿ ಅಂದರೆ, ಇದುಅಪ್ಪಟ ಪ್ರಾದೇಶಿಕ ಸೊಗಡಿನಿಂದ ಲಕಲಕಿಸುತ್ತದೆ. ಅಂತೆಯೇ ಯಾವುದೇ ಮಡಿವಂತಿಕೆಯ ಸೋಗಿಲ್ಲದೆ ಪ್ರಾಮಾಣಿಕವಾಗಿ ಅನಿಸಿದ್ದನ್ನು ನೇರವಾಗಿ ಹೇಳುತ್ತದೆ.
ಮಂಜಯ್ಯ ದೇವರಮನಿ ಕಥಾ ಸಂಕಲನ “ದೇವರ ಹೊಲ”ಕ್ಕೆ ಎಸ್. ಗಂಗಾಧರಯ್ಯ ಬರೆದ ಮುನ್ನುಡಿ

read more
ದೈನಿಕತೆಯಲ್ಲೆ ದೈವಿಕತೆ..

ದೈನಿಕತೆಯಲ್ಲೆ ದೈವಿಕತೆ..

ಕಾಯ್ಕಿಣಿಯವರ ಕಾವ್ಯಗಳಲ್ಲಿ ದಂತಗೋಪುರದ ವಾಸಿ, ವಿಲಾಸಿ, ಪ್ರವಾಸಿಗರು ಕಾಣಸಿಗಲಾರರು; ಏಕೆಂದರೆ, ನಮ್ಮ-ನಿಮ್ಮ ನಡುವೆ, ಆಚೆ-ಈಚೆ, ಕಣ್ಣಿಗೆ ಬಿದ್ದರೂ ಬೀಳದಂತಿರುವ, ಅಥವಾ ನಾವು ನೋಡಿದರೂ ನೋಡದಂತೆ ಮುಂದೆ ಸಾಗುವುದಕ್ಕೆ ಯಾವ ಆಕ್ಷೇಪಣೆಯನ್ನೂ ಮಾಡದ- ಕಷ್ಟವೋ-ಕಾರ‍್ಪಣ್ಯವೋ ಎಲ್ಲಕ್ಕೂ ಎದೆಗೊಡುತ್ತ ಕಾಲ್ಪನಿಕ ರೇಖೆಗಳನ್ನು ಧಿಕ್ಕರಿಸುತ್ತ, ಅಲ್ಲಗಳೆಯುತ್ತ, ತಮ್ಮದೇ ಜೀವನಚಿತ್ರವ ಮೂಡಿಸುವ ಜೀವಭಂಡಾರಿಗಳು- ಕಾಯ್ಕಿಣಿಯವರ ಕಾವ್ಯಪ್ರಪಂಚವನ್ನು ನಿರಾಯಾಸ, ನಿರಪೇಕ್ಷ್ಯವಾಗಿ ಧರಿಸುತ್ತಾರೆ; ಭರಿಸುತ್ತಾರೆ.
ಜಯಂತ ಕಾಯ್ಕಿಣಿಯವರ “ವಿಚಿತ್ರಸೇನನ ವೈಖರಿ” ಕವನ ಸಂಕಲನದ ಕುರಿತು ಗೀತಾ ಹೆಗಡೆ ಬರಹ

read more
ಇದ್ದಂತೆ ಇರುವ ಪದ್ಯಸದ್ಯ

ಇದ್ದಂತೆ ಇರುವ ಪದ್ಯಸದ್ಯ

ಕವಿತೆ ಪ್ರಣಾಳಿಕೆಯೋ ವಾಗ್ವಾದವೋ ಉತ್ತರವೋ ಪ್ರತಿಭಟನೆಯೋ ಆಗಿ ಮೆರೆಯುತ್ತಿರುವ ದಿನಗಳಲ್ಲಿ ರಾಜು ಹೆಗಡೆ ಬರೆಯುತ್ತಿರುವ ಪದ್ಯಗಳಿಗೆ ವಿಶಿಷ್ಟವಾದ ಸ್ಥಾನವಿದೆ ಎಂದು ಹೇಳಲು ಅಂಜಿಕೆಯಾಗುತ್ತದೆ. ನಮ್ಮ ಕಾವ್ಯದ ಓದನ್ನು ರಾಜಕೀಯ ನಿಲುವು, ಸೈದ್ಧಾಂತಿಕತೆ ಮತ್ತು ಸಾಮಾಜಿಕನಿಲುವುಗಳು ನಿರ್ಧರಿಸುವ ಕಾಲ ಇದು. ಶುದ್ಧಕವಿತೆ ಎಂಬ ಮಾತನ್ನು ಗೇಲಿ ಮಾಡಲಾಗುತ್ತದೆ ಮತ್ತು ಶುದ್ಧ ಸಾಹಿತ್ಯವನ್ನು ಅಪರಾಧವೆಂಬಂತೆ ನೋಡಲಾಗುತ್ತಿದೆ. ಯಾವುದಾದರೊಂದು ರಾಜಕೀಯ ಪಕ್ಷದ ಅಘೋಷಿತ ಗೊತ್ತುವಳಿಯಂಥ ಸಾಲುಗಳನ್ನು ಪದ್ಯಗಳೆಂದು ಕರೆಯಲಾಗುತ್ತಿದೆ.
ರಾಜು ಹೆಗಡೆ ಕವನ ಸಂಕಲನ “ಕಣ್ಣಿನಲಿ ನಿಂತ ಗಾಳಿ” ಗೆ ಜೋಗಿ ಬರೆದ ಮುನ್ನುಡಿ

read more
ಹೊಸ ಕಾಲವು ಕೊಟ್ಟ ದಿಟ್ಟತೆಯ ಕವಿತೆಗಳಿವೆಯಿಲ್ಲಿ!

ಹೊಸ ಕಾಲವು ಕೊಟ್ಟ ದಿಟ್ಟತೆಯ ಕವಿತೆಗಳಿವೆಯಿಲ್ಲಿ!

ಆಶಾ ತೀರಾ ವಾಚ್ಯವಾಗಿಸಿ ಯಾವುದನ್ನೂ ಹೇಳುವುದಿಲ್ಲ. ಬಹುಶಃ ಬಂಡಾಯ, ದಲಿತ, ಸ್ತ್ರೀವಾದದ ಘೋಷಣಾ ಸಾಹಿತ್ಯ ಮುಗಿದಂತೆ ಕಾಣುತ್ತಿದೆ. ಆ ಎಲ್ಲ ಚಳುವಳಿಗಳು ಕನ್ನಡದ ಒಟ್ಟೂ ಸಮಾಜದ ಮೇಲೆ, ಸಾಹಿತ್ಯದ ಮೇಲೆ ಉಂಟುಮಾಡಿದ ಅದ್ಭುತ ಚಾಲನಾ ಪ್ರಭಾವವನ್ನು ಅರ್ಥೈಸಿಕೊಂಡು, ಮನದಲ್ಲೂ ಇಟ್ಟುಕೊಂಡು, ಅದೇ ಕಾಲಕ್ಕೆ ಘೋಷಣೆಯ ಕಾಲ್ತೊಡಕುಗಳನ್ನೂ ಕಳಚಿ ಬರೆಯುವ ಹೊಸ ಯುವ ಸಮೂಹವೊಂದು ಕನ್ನಡದಲ್ಲಿ ತಯಾರಾಗಿದೆ. ನಿರ್ವಿವಾದವಾಗಿ ಆಶಾ ಕೂಡಾ ಆ ಪಡೆಯ ಉತ್ತಮ ಸದಸ್ಯೆ.
ಆಶಾ ಜಗದೀಶ್‌ ಕವನ ಸಂಕಲನ “ನಡು ಮಧ್ಯಾಹ್ನದ ಕಣ್ಣು” ಕೃತಿಗೆ ಲಲಿತಾ ಸಿದ್ಧಬಸವಯ್ಯ ಬರೆದ ಮುನ್ನುಡಿ

read more
“ಪಲಾಯನ”ದ ಕತೆಗಳು…

“ಪಲಾಯನ”ದ ಕತೆಗಳು…

ನಿರರ್ಗಳ ನಿರೂಪಣೆ ಕರಗತವಾಗಿರುವ ಲೇಖಕಿಯ ಕತೆಗಳು ಅನಾಯಾಸವಾಗಿ ಓದಿಸಿಕೊಂಡು ಹೋಗುತ್ತವೆ. ಈ ನಿರೂಪಣೆಯ ಉತ್ಸಾಹದಿಂದ ಮುಂದುವರಿಯುವ ಲೇಖಕಿ ಕೆಲವು ಕತೆಗಳ ಅಂತ್ಯದಲ್ಲಿ ತೀರ್ಪುಗಾರಿಕೆ ಕೈಗೆತ್ತಿಕೊಳ್ಳುತ್ತಾರೆ. ಉದಾಹರಣೆಗೆ “ಸಿಂಗಾರಳ್ಳಿ ಗಣಪತಿ” “ಕಾಣೆ” ಕತೆಗಳ ಅಂತ್ಯದಲ್ಲಿ ಪಾತ್ರಗಳ ಕುರಿತ ವ್ಯಾಖ್ಯೆ. ಈ ವಾಚ್ಯತೆ ಅದುವರೆಗಿನ ಕಥನ ಶೈಲಿಯ ನವಿರುಗಾರಿಕೆಯನ್ನು ಮೊಂಡಾಗಿಸಿ ವರದಿಯ ಸ್ವರೂಪ ತಳೆಯುತ್ತದೆ. ಹಾಗೆಯೇ ಕಥನ ಪ್ರಸ್ತುತಪಡಿಸುವಲ್ಲಿ ವಿಭಿನ್ನ ತಂತ್ರಗಳನ್ನು ಅಳವಡಿಸಿಕೊಂಡಲ್ಲಿ ವೈವಿಧ್ಯತೆ ಲಭಿಸುತ್ತದೆ.
ಶಾರದಾ ಮೂರ್ತಿ ಬರೆದ “ ಪಲಾಯನ ಮತ್ತು ಇತರೆ ಕಥೆಗಳು” ಕಥಾಸಂಕಲನದ ಕುರಿತು ಕೆ.ಆರ್. ಉಮಾದೇವಿ ಉರಾಳ ಬರಹ

read more
ದಾರಕ್ಕೆ ಹಲವು ಸುತ್ತುಗಳು; ಆದರೆ ಗಂಟು ಮಾತ್ರ ಒಂದೇ

ದಾರಕ್ಕೆ ಹಲವು ಸುತ್ತುಗಳು; ಆದರೆ ಗಂಟು ಮಾತ್ರ ಒಂದೇ

ವಿಜಯ ಮತ್ತು ಮಂಗಳಾ ಪದ್ಮಿನಿ ಮತ್ತು ಪ್ರಕಾಶರನ್ನು ಕಾಡುತ್ತಿರುವಂತೆ ಆಕೆಯ ತಾಯಿ ತನ್ನ ಇಳಿ ವಯಸ್ಸಿನಲ್ಲಿ ವಿಧುರ ಅಶೋಕನನ್ನು ಸೇರಿ ಇಬ್ಬರೂ ವಿದೇಶಕ್ಕೆ ಹಾರುವದು ಸಲಿಸಾಗಿ ನಡೆಯುತ್ತದೆ. ಜೀವನದಲ್ಲಿ ಗುರಿ ಇರದೇ ಇದ್ದಾಗಲೂ ಕೆಲವೊಮ್ಮೆ ಅವಕಾಶಗಳು ಹಾದುಹೋಗುತ್ತವೆ. ಅದನ್ನು ತಮ್ಮ ತಮ್ಮ ಅನುಕೂಲತೆಯನ್ನಾಗಿ ಬಳಸಿ ಬದುಕನ್ನು ಹಸನುಗೊಳಿಸಬಹುದೆನ್ನುವದನ್ನು ಅಪರವಯಸ್ಕರ ಕಹಾನಿ ತಿಳಿಸುತ್ತದೆ. ವಿಷಾದವೆನ್ನುವದು ತೀವ್ರವಾದಾಗ ಗುರುವಿನ ಮಾರ್ಗದರ್ಶನವಿದ್ದರೆ ಅದರಿಂದ ಹೊರಬರುವದು ಸಾಧ್ಯವೆನ್ನುವದು ಪದ್ಮಿನಿ ಕಂಡುಕೊಂಡಿದ್ದು ಮತ್ತೋರ್ವ ಗುರು ಪುರುಷೋತ್ತಮನಲ್ಲಿ.
ಕುಸುಮಾ ಆಯರಹಳ್ಳಿ ಕಾದಂಬರಿ “ದಾರಿ”ಯ ಕುರಿತು ನಾರಾಯಣ ಯಾಜಿ ವಿಶ್ಲೇಷಣೆ

read more
ಕನ್ನಡ ಪ್ರಬಂಧಲೋಕದ ಹೊಸ ಕಿಟಕಿ

ಕನ್ನಡ ಪ್ರಬಂಧಲೋಕದ ಹೊಸ ಕಿಟಕಿ

ಪ್ರಬಂಧಕಾರರಾಗಿ ಯೋಗಿಂದ್ರರ ಅಲೆದಾಟಕ್ಕೆ ವೈಚಾರಿಕತೆಯ ನೆಲೆಗಟ್ಟು ಇರುವಂತೆ ಭಾವುಕತೆಯ ಸ್ಪರ್ಶವೂ ಇದೆ. ‘ಬೆಳಕಿನ ಹಬ್ಬಕ್ಕೆ ಊರಿಗೆ ಹೋದದ್ದು’ ಪ್ರಬಂಧ, ಏಕಕಾಲಕ್ಕೆ ಬ್ರಿಟನ್ನು ಮತ್ತು ಮರವಂತೆಯ ನಡುವೆ ಮನೋವ್ಯಾಪಾರ ಸಾಧ್ಯವಾಗಿರುವ ವಿಶಿಷ್ಟ ರಚನೆಯಿದು. ಲೇಖಕ ಊರಿನಲ್ಲಿ ಹೆಜ್ಜೆಯಿಟ್ಟಾಗ ಮುತ್ತಿಕೊಳ್ಳುವ ದೀಪಾವಳಿಯ ಸಹಸ್ರ ಸಹಸ್ರ ದೀಪಗಳಂಥ ನೆನಪುಗಳು ಪ್ರಬಂಧದಲ್ಲಿ ಬೆಳಗಿವೆ. ‘ನಮ್ಮೂರು ಕಟ್ಟುತ್ತಿರುವ ಬೆಳಕಿನ ಮನೆಯೊಳಗೆ ನಾನೂ ಅಲೆದಾಡುತ್ತಿದ್ದೇನೆ’ ಎನ್ನುವ ಪ್ರಬಂಧಕಾರರ ಅನಿಸಿಕೆ ಓದುಗನದೂ ಆಗುತ್ತದೆ.
ಯೋಗೀಂದ್ರ ಮರವಂತೆ ಪ್ರಬಂಧಗಳ ಸಂಕಲನ “ನನ್ನ ಕಿಟಕಿ”ಗೆ ರಘುನಾಥ ಚ.ಹ. ಬರೆದ ಮುನ್ನುಡಿ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ