Advertisement

ಪುಸ್ತಕ ಸಂಪಿಗೆ

ಕಾಲವೇ ಕಾಪಾಡಿ ಪೋಷಿಸಿದ ತಲೆಮಾರಿನ ಕಥೆ: ನಾರಾಯಣ ಯಾಜಿ ಬರಹ

ಕಾಲವೇ ಕಾಪಾಡಿ ಪೋಷಿಸಿದ ತಲೆಮಾರಿನ ಕಥೆ: ನಾರಾಯಣ ಯಾಜಿ ಬರಹ

ಕಾದಂಬರಿಯ ಪಾತ್ರಗಳು ಎರಡನೆಯ ಭಾಗದಲ್ಲಿ ಮುಖಾಮುಖಿಯಾಗುತ್ತವೆಯಾದರೂ ಅದು ತೀವ್ರತೆಗೆ ಎಡೆಮಾಡುವುದಿಲ್ಲ. ಅಲ್ಲೆಲ್ಲ ಒಂದು ಪಾತ್ರ ಸುಮ್ಮನೆ ಆ ಸ್ಥಳವನ್ನು ಬಿಟ್ಟು ದೂರಸರಿಯುತ್ತದೆ. ಚಿದಂಬರನ ಕಾಲಘಟ್ಟದಲ್ಲಿ ಅರವತ್ತರ ನಂತರದ ಸಾಮಾಜಿಕ ನಡವಳಿಕೆಯನ್ನು ಕಾಣಬಹುದು. ಮೊದಲ ಹಂತದಲ್ಲಿ ಗೋವಿಂದ ಮತ್ತು ಸವಿತಾ ದಂಪತಿಗಳ ಶ್ರಮ ಎದ್ದು ಕಾಣಿಸಿದರೆ ಎರಡನೆಯ ಭಾಗದಲ್ಲಿ ಚಿದಂಬರ ಮತ್ತು ಗಿರಿಜಾ ದಂಪತಿಗಳು ಆ ಪಾತ್ರವನ್ನು ನಿರ್ವಹಿಸಿದ್ದಾರೆ. ಇಬ್ಬರದ್ದೂ ಹೋರಾಟದ ಬದುಕು.
ರಾಜಶೇಖರ ಜೋಗಿನ್ಮನೆ ಕಾದಂಬರಿ “ಕೇಳು ಧನಂಜಯ..” ಕುರಿತು ನಾರಾಯಣ ಯಾಜಿ ಬರಹ

read more
ಮಹಿಳಾ ಕಾವ್ಯ- ಅಲಕ್ಷಿತ ಮಹಿಳಾ ಸಾಹಿತ್ಯ ಚರಿತ್ರೆಯ ಆಕರ: ಸಬಿಹಾ ಭೂಮಿಗೌಡ

ಮಹಿಳಾ ಕಾವ್ಯ- ಅಲಕ್ಷಿತ ಮಹಿಳಾ ಸಾಹಿತ್ಯ ಚರಿತ್ರೆಯ ಆಕರ: ಸಬಿಹಾ ಭೂಮಿಗೌಡ

ಕವಯಿತ್ರಿಯರ ಸ್ಮೃತಿಯಲ್ಲಿ ಮತ್ತು ಅನುಭವದಲ್ಲಿ ಅಮ್ಮನ ಪಾತ್ರ, ಕಾರ್ಯ, ಲೋಕದೃಷ್ಟಿಗಳು ವಿಶಿಷ್ಟವಾಗಿವೆ. ಅಮ್ಮನನ್ನು ಅರ್ಥ ಮಾಡಿಕೊಳ್ಳಬೇಕೆಂದರೆ ಮೊದಲು ಅವಳು ಮನೆಯಿಂದ ಹೊರಹಾಕುವ ಕಸವನ್ನು ಅರ್ಥ ಮಾಡಿಕೊಳ್ಳಬೇಕು ಎನ್ನುತ್ತಾರೆ ಹಿರಿಯ ಕವಯಿತ್ರಿ! ಅಮ್ಮ ತನ್ನ ಮನೆಯ, ಮನದ, ಸಂಬಂಧದ ಯಾವ ವಸ್ತು ವಿಚಾರಗಳನ್ನೂ ಅವುಗಳಿಂದ ಪುನರ್ ಬಳಕೆ ಸಾಧ್ಯವಿಲ್ಲ ಎನಿಸುವವರೆಗೂ ಹೊರಹಾಕುವುದಿಲ್ಲ, ಅನಂತರವೇ ವಿವಿಧ ಲಕೋಟೆಗಳಲ್ಲಿ ಹಾಕಿ ಮನೆ, ಮನದಿಂದ ಹೊರ ಅಟ್ಟುತ್ತಾಳೆ ಎಂಬ ಚಿಂತನೆಯು ಹೊಸ ಒಳನೋಟವನ್ನು ನೀಡುತ್ತದೆ.
ಪ್ರೊ. ಸಬಿಹಾ ಭೂಮಿಗೌಡ ಸಂಪಾದಿಸಿದ “ಕನ್ನಡ ಮಹಿಳಾ ಕಾವ್ಯ” ಕೃತಿಗೆ ಬರೆದ ಅವರ ಮಾತುಗಳು ಇಲ್ಲಿವೆ…

read more
ಸಹಜತೆಯ ಚೆಲುವಿನ ಕಥೆಗಳು: ಅನುಪಮಾ ಪ್ರಸಾದ್‌ ಕೃತಿಗೆ ಕೇಶವ ಮಳಗಿ ಮಾತುಗಳು

ಸಹಜತೆಯ ಚೆಲುವಿನ ಕಥೆಗಳು: ಅನುಪಮಾ ಪ್ರಸಾದ್‌ ಕೃತಿಗೆ ಕೇಶವ ಮಳಗಿ ಮಾತುಗಳು

ಸಂಕಲನದ ಕಥೆಗಳು ವಿಷಯ, ವ್ಯಾಪ್ತಿ ಹಾಗೂ ಹರಹುಗಳ ದೃಷ್ಟಿಯಿಂದಲೂ ಗಮನಾರ್ಹ. ಅನುಭವದಿಂದ ಮಾಗಿದ ಕಥೆಗಾರ್ತಿಯ ಈ ಬಗೆಯ ಸೂಕ್ಷ್ಮ ಆಯ್ಕೆಯಿಂದಾಗಿ ಸಂಕಲನಕ್ಕೊಂದು ಸಹಜ ವೈವಿಧ್ಯತೆ ದೊರಕಿ ಓದುಗರು ಪ್ರತಿ ಕಥೆಯ ವಾಚನದಲ್ಲಿಯೂ ಹೊಸ ಅನುಭವವನ್ನು ಪಡೆಯಬಲ್ಲರು. ಯಾವುದೇ ಸಂವೇದನಾಶೀಲ ಲೇಖಕ ಇಂಥದ್ದನ್ನು ಸಾಧಿಸುವುದು ಗರಿಮೆಯ ಸಂಗತಿಯೇ. ಇಲ್ಲಿನ ಹದಿಮೂರು ಕಥೆಗಳು ಓದುಗರಿಗೆ ನೀಡುವ ಅನುಭವ, ಲೋಕದೃಷ್ಟಿ, ಆರ್ದ್ರತೆಯ ಸ್ಪರ್ಶದಿಂದಾಗಿ ಅವರು ನಮ್ಯವಾಗಬಲ್ಲರು. ಅರೆಚಣ ಚಿಂತಿತರಾಗಬಲ್ಲರು.
ಅನುಪಮಾ ಪ್ರಸಾದ್‌ ಕಥಾ ಸಂಕಲನ “ಚೋದ್ಯ”ಕ್ಕೆ ಕೇಶವ ಮಳಗಿ ಬರೆದ ಮಾತುಗಳು

read more
ಹೊನ್ನೆಯ ಹಾಡಿನಂಥಾ ಆತ್ಮಕಥನ: ಕೆ.ಎನ್.ಲಾವಣ್ಯ ಪ್ರಭಾ ಬರಹ

ಹೊನ್ನೆಯ ಹಾಡಿನಂಥಾ ಆತ್ಮಕಥನ: ಕೆ.ಎನ್.ಲಾವಣ್ಯ ಪ್ರಭಾ ಬರಹ

ಕರ್ನಾಟಕ ಸಂಗೀತವನ್ನು ಶಾಸ್ತ್ರೀಯವಾಗಿ ಕಲಿತು ಆಕಾಶವಾಣಿ ಗಾಯಕಿಯಾಗಿ ಭಾವಗೀತೆಯನ್ನು ಪಿ. ಕಾಳಿಂಗರಾವ್ ಅವರ ಜೊತೆಯಲ್ಲಿ ಹಾಡಿ ಪ್ರಚಾರ ನೀಡಿದ್ದು ಮೊದಲಿಗೆ ಲೀಲಾವತಿಯವರೇ. ಭಾವಗೀತೆ ಭಕ್ತಿಗೀತೆ ಕೀರ್ತನೆಗಳು ವಚನಗಳು ಗಜಲ್‌ಗಳು ಜನಪದಗೀತೆಗಳು, ರವೀಂದ್ರ ಸಂಗೀತ ಹೀಗೆ ಬೇರೆ ಭಾಷೆಯ ಇತರ ಪ್ರಾಕಾರಗಳನ್ನೂ ಕಲಿತು ಹಾಡಿರುವುದಲ್ಲದೇ ಮಕ್ಕಳ ಕತೆಗಳು ರಂಗರೂಪಕಗಳು ಎಲ್ಲಾ ರೀತಿಯಲ್ಲಿ ಅವರು ಆಕಾಶವಾಣಿಯಲ್ಲಿ ಕೆಲಸ ನಿರ್ವಹಿಸುತ್ತಲೇ ಮುಂದೆ ಆಕಾಶವಾಯ ಸಂಗೀತ ಸಂಯೋಜಕಿಯೂ ಆಗುತ್ತಾರೆ.
ಎಚ್. ಆರ್. ಲೀಲಾವತಿ ಆತ್ಮಕಥನ “ಹಾಡಾಗಿ ಹರಿದಾಳೆ” ಕೃತಿಯ ಕುರಿತು ಕೆ.ಎನ್.ಲಾವಣ್ಯ ಪ್ರಭಾ ಬರಹ

read more
ನವಿರು ಪ್ರೇಮದ ಆಲಾಪ: ಅನಸೂಯ ಯತೀಶ್ ಬರಹ

ನವಿರು ಪ್ರೇಮದ ಆಲಾಪ: ಅನಸೂಯ ಯತೀಶ್ ಬರಹ

ಇಲ್ಲಿ ನಲವತ್ತೊಂಬತ್ತು ಪುಟ್ಟ ಪುಟ್ಟ ಅಧ್ಯಾಯಗಳು ಇಡೀ ಕಾದಂಬರಿಯ ಸಾರಸತ್ವವನ್ನು ಉಣಬಡಿಸುತ್ತವೆ. ಹದವರಿತ ಭಾಷೆಯಲ್ಲಿ ಮೈನವಿರೇಳಿಸುವ ಸಂಭಾಷಣೆಗಳು ಓದುಗರಿಗೆ ಕಚಗುಳಿ ಇಡುತ್ತವೆ. ಲೇಖಕರ ಬಾಲ್ಯದ ಅನುಭವಗಳ ಒಟ್ಟು ಮೊತ್ತ ಈ ಕನಸೇ ಕಾಡು ಮಲ್ಲಿಗೆ. ಇಲ್ಲಿ ಬಹುತೇಕ ನೈಜ ಅನುಭವಗಳೆ ಕಾದಂಬರಿಯ ಜೀವ ದ್ರವ್ಯವಾಗಿದ್ದರೂ ಲೇಖಕರು ತಮ್ಮ ಬರಹದ ಸ್ವಾತಂತ್ರ್ಯವನ್ನು ಬಳಸಿಕೊಂಡು ಸಂದರ್ಭೋಚಿತವಾಗಿ ಪೂರಕ ಪಾತ್ರಗಳನ್ನ ಕಲ್ಪಿಸಿಕೊಂಡು ಆ ಕಥೆಗೆ ವಿಭಿನ್ನ ಆಯಾಮಗಳನ್ನು ಕಲ್ಪಿಸಿದ್ದಾರೆ.
ಮಧು ವೈ.ಎನ್.‌ ಕಾದಂಬರಿ “ಕನಸೇ ಕಾಡುಮಲ್ಲಿಗೆ” ಕುರಿತು ಅನಸೂಯ ಯತೀಶ್‌ ಬರಹ

read more
‘ದಾರಿ ತಪ್ಪಿಸುವ ಗಿಡʼಕ್ಕೆ ಓ.ಎಲ್. ನಾಗಭೂಷಣ ಸ್ವಾಮಿ ಮುನ್ನುಡಿ

‘ದಾರಿ ತಪ್ಪಿಸುವ ಗಿಡʼಕ್ಕೆ ಓ.ಎಲ್. ನಾಗಭೂಷಣ ಸ್ವಾಮಿ ಮುನ್ನುಡಿ

ಆಚಾರ ಕೆಟ್ಟರೂ ಆಕಾರ ಕೆಡಬಾರದು ಅನ್ನುವ ಗಾದೆಯನ್ನು ನಾನು ಚಿಕ್ಕಂದಿನಲ್ಲಿ ಕೇಳುತ್ತಿದ್ದೆ. ಸಂಸ್ಕೃತಿ ಅನ್ನುತ್ತೇವಲ್ಲ ಅದರ ಆಕಾರ, ವ್ಯವಸ್ಥೆಗೆ ಇರುವ ಆಕಾರ ಇವು ಕೆಡದೆ ಮುಂದುವರೆಯಬೇಕು, ವರ್ತನೆ ಕೆಟ್ಟರೂ ಗೊತ್ತಾಗದ ಹಾಗೆ ಗುಟ್ಟು ಕಾಪಾಡಬೇಕು ಅನ್ನುವ ಮನೋಧರ್ಮವೇ ನಮ್ಮನ್ನು ‘ದಾರಿ ತಪ್ಪಿಸುವ ಗಿಡʼ ಆಗಿರಬಹುದು. ಈ ಆಕಾರವನ್ನು ಕಾಪಾಡಿಕೊಳ್ಳುವ ಒತ್ತಡವೇ ವ್ಯಕ್ತಿಗಳನ್ನು ದುರ್ಬಲರನ್ನಾಗಿಸಿ ರಾಜಿಗೆ ಒಲಿಯುವಂತೆ ಮಾಡುತ್ತದೆ ಅನಿಸುತ್ತದೆ. ಹಾಗೆ ನೋಡಿದರೆ ಆಳು ಕೂಗಿನ ಹಕ್ಕಿಗಿಂತ ದಾರಿ ತಪ್ಪಿಸುವ ಗಿಡ ಹೆಚ್ಚು ಅರ್ಥವ್ಯಾಪ್ತಿ ಇರುವ ರೂಪಕ.
ಕತೆಗಾರ ಸ್ವಾಮಿ ಪೊನ್ನಾಚಿ ಹೊಸ ಕಥಾ ಸಂಕಲನ “ದಾರಿ ತಪ್ಪಿಸುವ ಗಿಡ”ಕ್ಕೆ ಓ ಎಲ್‌ ನಾಗಭೂಷಣ ಸ್ವಾಮಿ ಬರೆದ ಮುನ್ನುಡಿ

read more
ಹೆಗ್ಗೋಡಿನ ಪ್ರಾಣೇಶಾಚಾರ್ಯ, ನಾರಣಪ್ಪ: ಟಿ.ಎನ್.‌ ಸೀತಾರಾಮ್‌ ಬದುಕಿನ ಪುಟಗಳು

ಹೆಗ್ಗೋಡಿನ ಪ್ರಾಣೇಶಾಚಾರ್ಯ, ನಾರಣಪ್ಪ: ಟಿ.ಎನ್.‌ ಸೀತಾರಾಮ್‌ ಬದುಕಿನ ಪುಟಗಳು

ಆಗ ಎನ್‌ಎಸ್‌ಡಿಯಲ್ಲಿ ಅಲ್ಕಾಜೀ ಎನ್ನುವವರು ಮುಖ್ಯಸ್ಥರಾಗದ್ದಿರು. ಶ್ರೀರಂಗರ ಕಾಗದದಿಂದಾಗಿ ಪ್ರಸನ್ನನಿಗೆ ಎನ್‌ಎಸ್‌ಡಿಯಲ್ಲಿ ಪ್ರವೇಶ ಸಿಕ್ಕಿತು. ಎನ್‌ಎಸ್‌ಡಿ ಎಂದರೆ ನ್ಯಾಷನಲ್‌ ಸ್ಕೂಲ್‌ ಆಫ್‌ ಡ್ರಾಮ. ದೆಹಲಿಯಲ್ಲಿರುವ ಅತಿ ಪ್ರತಿಷ್ಠಿತ ನಾಟಕ ಕಲಿಸುವ ಶಾಲೆ. ಅದಕ್ಕೆ ಸೀಟುಗಳು ಬಹಳ ಕಡಿಮೆ ಇರುತ್ತದ್ದಿವು. ಇಡಿಯ ಭಾರತಕ್ಕೆ 8-10 ಸೀಟುಗಳು ಮಾತ್ರ ಇರುತ್ತದ್ದಿವು. ನಮ್ಮ ಈಗಿನ ಕಾಲದ ಅನೇಕ ಹೊಸ ಬಗೆಯ ಚಿತ್ರಗಳನ್ನು ಮಾಡುವ ನಿರ್ದೇಶಕರು ಮತ್ತು ನಟರು ಅಲ್ಲಿಂದಲೇ ಬಂದವರು. ಈಗ ಎನ್‌ಎಸ್‌ಡಿಯ ಬ್ರಾಂಚ್‌ಗಳು ದೇಶದ ನಾನಾ ಕಡೆ ಇವೆ. ಬೆಂಗಳೂರಿನಲ್ಲೂ ಒಂದಿದೆ.
ಟಿ.ಎನ್.‌ ಸೀತಾರಾಮ್‌ ಅವರ ಆತ್ಮಕಥನ “ಬದುಕಿನ ಪುಟಗಳು” ಕೃತಿಯ ಕೆಲವು ಪುಟಗಳು

read more
ಜೀವಜಾಲದ ಪ್ರೋಗ್ರಾಮಿಂಗ್‌ನ ವಿಸ್ಮಯ: ಸತೀಶ್‌ ತಿಪಟೂರು ಬರಹ

ಜೀವಜಾಲದ ಪ್ರೋಗ್ರಾಮಿಂಗ್‌ನ ವಿಸ್ಮಯ: ಸತೀಶ್‌ ತಿಪಟೂರು ಬರಹ

ವ್ಯಕ್ತಿ ಪ್ರಕೃತಿಯು ತನ್ನ ಪರಿಸರದ ಪ್ರಭಾವದ ವಿರುದ್ಧ ಪ್ರತಿಭಟಿಸಿ, ಸೆಣೆಸಿ ತನ್ನದೇ ನಡೆಗಳ ದಾರಿಯಲ್ಲಿ ಚಲಿಸಲು ಯಾವುದೋ ಒಂದು ಆಂತರಿಕ ಸೆಳೆತವಿರಬೇಕು. ಈ ಸೆಳೆತ ಇಂದು ನೆನ್ನೆಯದಲ್ಲ; ಇನ್ನೂ ಹಿಂದಿನದು, ಬಹುದೂರ ಕಾಲ ಹಿಂದಿನದು. ಎಂದೋ ಯಾವ ಕಾಲದಲ್ಲೋ ಯರ‍್ಯಾರ ಕಾಲ-ದೇಶ-ಪ್ರಭಾವ-ಪ್ರವಾಹಗಳ ಹರಿವಿನಲ್ಲೋ ಮೊಳೆತಿದ್ದಿರಬೇಕು. ಹೀಗೆ ಕಾಲಾಂತರ ಕಾದು ಕಾದು ತನ್ನನ್ನು ತಾನು ಅರಿವಿನಲ್ಲಿ ಕಂಡುಕೊಂಡುದುದು. ಇದು ಮೊಳೆತು ಬೆಳೆದು ವಿಕಾಸವಾಗಬಹುದಾದ ಬೀಜರೂಪ ಮಾತ್ರ. ಇದು ಬೆಳೆದು ಬೃಹತ್ ವೃಕ್ಷವಾಗಲು ಏನೆಲ್ಲಾ ಒದಗಿ ಬರಬೇಕೋ?
ಸತೀಶ್‌ ತಿಪಟೂರು ಅವರ “ಮಣ್ಣಿನ ಬಂಡಿಯಲ್ಲಿ ಫುಕುವೋಕಾ” ಕೃತಿ ಸರಣಿಯ ಕೊನೆಯ ಕಂತು ನಿಮ್ಮ ಓದಿಗೆ

read more
ಜಾರಿದ ಬದುಕನ್ನು ಸ್ವವಿಮರ್ಶಿಸಿಕೊಂಡ ಆತ್ಮಕಥೆ: ನಾರಾಯಣ ಯಾಜಿ ಬರಹ

ಜಾರಿದ ಬದುಕನ್ನು ಸ್ವವಿಮರ್ಶಿಸಿಕೊಂಡ ಆತ್ಮಕಥೆ: ನಾರಾಯಣ ಯಾಜಿ ಬರಹ

ನಂದು ದಾದಾ ಅವಳಲ್ಲಿ ಸ್ವಾತಂತ್ರ್ಯ ಹೋರಾಟದ ಕಿಡಿಯನ್ನು ಹಚ್ಚಿದರೆ ರಮೇಶಣ್ಣ ಅವಳಿಗೆ ಬಲೆಹಾಕಿ ಅವಳನ್ನು ದುರುಪಯೋಗಪಡಿಸಿ ಮನೆಯಿಂದ ಓಡಿಸಿಕೊಂಡುಹೋಗಿ ನಡುನೀರಿನಲ್ಲಿ ಕೈಬಿಟ್ಟು ಪರಾರಿಯಾಗುತ್ತಾನೆ. ನಂದಣ್ಣನ ಆದರ್ಶಗಳು ಈಕೆಯೊಳಗೆ ಪ್ರಭಾವವನ್ನು ಬೀರಿತ್ತು ಎನ್ನುವುದಕ್ಕೆ ಆಕೆ ತಾನು ವೇಶ್ಯೆಯಾಗಿ ಇರುವಾಗಲೂ ಸಂದರ್ಭ ಬಂದಾಗ ಸ್ವಾತಂತ್ರ್ಯ ಹೋರಾಟ, ಸಮಾಜ ಸೇವೆ, ದೀನದಲಿತರಿಗೆ ನೆರವು ಹೀಗೆ ಹಲವಾರು ಸಂಗತಿಗಳನ್ನು ಮಾಡುತ್ತಲೇ ಇರುತ್ತಾಳೆ. ಆದರೆ ಸ್ವಾತಂತ್ರ್ಯ ಹೊರಾಟಗಾರರಲ್ಲಿ ಎಲ್ಲವರೂ ನಂದಣ್ಣನಂತಹ ವ್ಯಕ್ತಿಗಳಲ್ಲ. ಹೆಚ್ಚಿನವರು ರಮೇಶನಂತಹ ಗೋಮುಖರೇ.
ಬಂಗಾಳಿಯ ಮಾನದಾ ದೇವಿ ಆತ್ಮಕಥನ “ವಿದ್ಯಾವಂತ ವೇಶ್ಯೆಯ ಆತ್ಮಕಥೆ”ಯನ್ನು ನಾಗ ಎಚ್ ಹುಬ್ಳಿ ಕನ್ನಡಕ್ಕೆ ತಂದಿದ್ದು ಈ ಕೃತಿಯ ಕುರಿತು ನಾರಾಯಣ ಯಾಜಿ ಬರಹ ನಿಮ್ಮ ಓದಿಗೆ

read more

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ