ದೇಸೀಧ್ವನಿಯ ಕಥೆಗಳು: ಪ್ರಕಾಶ್ ಪುಟ್ಟಪ್ಪ ಕಥಾಸಂಕಲನಕ್ಕೆ ಡಾ. ಮಹೇಶ್ವರಿ ಯು. ಮುನ್ನುಡಿ
ಕತೆಗಾರಿಕೆಯ ಕೌಶಲವನ್ನು, ಕತೆಗಾರನ ಆಳವಾದ ಸಂವೇದನಾಶೀಲತೆಯನ್ನು, ಸಮಾಜಮುಖಿಯಾದ ನೈಜ ಕಾಳಜಿಯನ್ನು ಹೊಂದಿರುವ ಗಟ್ಟಿಯಾದ ಕಥಾವಸ್ತುವುಳ್ಳ ಇನ್ನಷ್ಟು ಕತೆಗಳು ಸಂಕಲನದ ಮಹತ್ವವನ್ನು ಹೆಚ್ಚಿಸಿವೆ. ಪ್ರಕಾಶ ಅವರು ನೆಲಮೂಲದ ಸಂಸ್ಕೃತಿಯ ಸತ್ವದಿಂದ ವಿಶೇಷವಾಗಿ ಪುಷ್ಟಿಗೊಂಡವರು. ಆ ಘಮಲನ್ನೂ ಕ್ರೂರ ವಾಸ್ತವವನ್ನೂ ಜೊತೆಜೊತೆಯಾಗಿ ಕಟ್ಟಿಕೊಡುವ ‘ಕಂಡಾಯದೊಡೆಯ ಉಘೇಉಘೇ, ಐರನ್ ಆನೆಗಳು, ನಿಗಿನಿಗಿಕೆಂಡ ಮುಂತಾದ ಕತೆಗಳಲ್ಲದೆ ಭಿನ್ನಮಾದರಿಯ ಕತೆಗಳೂ ಈ ಸಂಗ್ರಹದಲ್ಲಿವೆ.. ಸಂಕಲನದ ಅತ್ಯುತ್ತಮ ಕತೆಗಳಲ್ಲಿ ಆ ಸತ್ವವೇ ಮೈದುಂಬಿದೆ.
ಪ್ರಕಾಶ್ ಪುಟ್ಟಪ್ಪ ಕಥಾಸಂಕಲನ ‘ಗಾಂಧಿಜೋಡಿನ ಮಳಿಗೆ’ಗೆ ಡಾ. ಮಹೇಶ್ವರಿ ಯು. ಮುನ್ನುಡಿ
ಲೋಕಾಂತ ಕವಿಯ ಏಕಾಂತ ಬದುಕಿನ ಅನಾವರಣ: ಡಾ. ಎ. ರಘುರಾಂ ಬರಹ
ಲೆಕ್ಕದಲ್ಲಿ ತಾನು ಅಷ್ಟೊಂದು ಪಂಡಿತನಲ್ಲ ಎನ್ನುವ ಕಾರಣಕ್ಕೆ ತಿಂಗಳಿಗೆ ಮೂವತ್ತೈದು ರೂಪಾಯಿ ಸಂಬಳದ ಪವರ್ಹೌಸ್ನ ನೌಕರಿಯನ್ನು ಬಿಟ್ಟು ಇಪ್ಪತ್ತೊಂದು ರೂಪಾಯಿಯ ಶಿಕ್ಷಕ ವೃತ್ತಿಯನ್ನು ಆಯ್ಕೆಮಾಡಿಕೊಳ್ಳುತ್ತಾರೆ. ಲೆಕ್ಕ ಬರದೇ ಇರುವ ಕಾರಣದಿಂದ ಈ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುತ್ತಾರೆಯೇ ಹೊರತು ಶಿಕ್ಷಕ ವೃತ್ತಿಯ ಕಾರಣದಿಂದಲ್ಲ. ಒಮ್ಮೆ ಮಗಳು ‘ಗಣಿತ ಕಲಿಸುವುದನ್ನು ಹೇಗೆ ನಿಭಾಯಿಸಿದೆ? ಗಣಿತ ನಿನಗೆ ಬರುವುದೇ ಇಲ್ಲವಲ್ಲ’ ಎಂದು ಕೇಳಿದ್ದಕ್ಕೆ ‘ವಿದ್ಯಾರ್ಥಿಗಳಿಗೆ ನಾನು, ನೀವು ಇಬ್ಬರೂ ಕೂಡಿಯೇ ಗಣಿತವನ್ನು ಬಗೆಹರಿಸಿಕೊಳ್ಳೋಣ..’ ಎಂದು ಹೇಳಿದೆ ಎಂದು ಗಹಗಹಿಸಿ ನಕ್ಕನು.
ತಮ್ಮ ತಂದೆ ಶಾಂತರಸರೊಂದಿಗಿನ ಒಡನಾಟದ ಕುರಿತು ಎಚ್.ಎಸ್. ಮುಕ್ತಾಯಕ್ಕ ಬರೆದ “ಅಪ್ಪ ನಾನು ಕಂಡಂತೆ” ಕೃತಿಯ ಕುರಿತು ಡಾ. ಎ. ರಘುರಾಂ ಬರಹ ನಿಮ್ಮ ಓದಿಗೆ
ಬನ್ನಿ ನಾವೆಲ್ಲರೂ ಕಾಣೆಯಾಗೋಣ…: ಕನ್ನಡಕ್ಕೆ ಬಂದ ಮೇರಿ ಆಲಿವರ್ ಕವಿತೆಗಳು
“ನನ್ನ ಚಿತ್ತವನ್ನ ಅನಂತದ ಮೇಲೆ ಇರಿಸಲಿಲ್ಲವೆಂದಾದರೆ ಏನೋ ಸರಿ ಇಲ್ಲ ಅಂತ ಅನ್ನಿಸುವುದು. ಲೋಕದಲ್ಲಿ ನಾನೊಂದು ಪುಟಾಣಿ ಮೊಳೆಯಾಗಬೇಕು, ಪುಟ್ಟದಾದರೂ ಉಪಯೋಗಕ್ಕೆ ಬರುವಂಥದ್ದು. ಎಂದೆಂದಿಗೂ ಈ ತೊರೆಯಲ್ಲಿಯೇ ಇದ್ದು ಬಿಡಬೇಕೆನಿಸುತ್ತದೆ. ಗಾಳಿಮಡಿಲ ಹೂ, ಮುಳ್ಳು ಕಂಟಿಯ ಹೂ, ಬೇಲಿ ಹೂಗಳನ್ನ ತುಂಬು ಗೌರವದಿಂದ ಕಾಣಬೇಕೆನಿಸಿದೆ.”
ಅಮೆರಿಕದ ಕವಯತ್ರಿ ಮೇರಿ ಆಲಿವರ್ ಅವರ ಕೆಲವು ಕವಿತೆಗಳನ್ನು ಚೈತ್ರಾ ಶಿವಯೋಗಿಮಠ ಕನ್ನಡಕ್ಕೆ ತಂದಿದ್ದು “ಆಕಾಶ ನದಿ ಬಯಲು” ಶೀರ್ಷಿಕೆಯಡಿಯಲ್ಲಿ ಸಂಗ್ರಹ ಪ್ರಕಟವಾಗಿದೆ. ಈ ಕೃತಿಯ ಒಂದಷ್ಟು ಕವಿತೆಗಳು ಹಾಗೂ ಮೇರಿ ಆಲಿವರ್ ಪರಿಚಯಾತ್ಮಕ ಪುಟಗಳು ನಿಮ್ಮ ಓದಿಗೆ
ತಂದೆಯವರೊಂದಿಗಿನ, ಮಗನ ನೆನಪುಗಳು: ಪಾಲಾಕ್ಷಪ್ಪ ಎಸ್.ಎನ್. ಬರಹ
ಕುವೆಂಪುರವರನ್ನು ನೋಡಲು ಬರುವವರ ಬಗ್ಗೆ, ಸಂದರ್ಶನಗಳಿಂದ ವಿಶ್ರಾಂತಿಗೆ ಆಗುತ್ತಿದ್ದ ತೊಂದರೆ ಬಗ್ಗೆ, ಆಚರಿಸಿಕೊಳ್ಳದ ಹುಟ್ಟು ಹಬ್ಬದ ಬಗ್ಗೆ, ಅಣ್ಣನನ್ನು ಪ್ರೀತಿಸುವ ಜನರ ಬಗ್ಗೆ, ಸಾಹಿತ್ಯವಲಯದ ಪಿತೂರಿ, ಶೀತಲ ಸಮರದ ಬಗ್ಗೆ, ಎದುರಿಸಿದ ವಿರೋಧಗಳ ಬಗ್ಗೆ, ತಮ್ಮ ಹುದ್ದೆಯ ನಿರ್ವಹಣೆ ಸಂದರ್ಭದ ಕೆಲ ಘಟನೆಗಳ ಬಗ್ಗೆ, ಬಸವೇಶ್ವರ, ವಿವೇಕಾನಂದರ ಬಗೆಗಿನ ಅಭಿಪ್ರಾಯ, ಅಡ್ಡಪಲ್ಲಕ್ಕಿ, ಪಾದಪೂಜೆಗಳ ಬಗೆಗಿನ ತಿರಸ್ಕಾರ, ‘ಮಂತ್ರ ಮಾಂಗಲ್ಯ’ ಸರಳ ವಿವಾಹದ ಬಗ್ಗೆ, ಮಕ್ಕಳ ಮದುವೆಯನ್ನು ಸರಳವಾಗಿ ನೆರವೇರಿಸಿದ ಬಗ್ಗೆ ಒಂದಿಷ್ಟು ವಿವರಗಳು ಈ ಕೃತಿಯಲ್ಲಿವೆ.
ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಬರೆದ “ಅಣ್ಣನ ನೆನಪು” ಕೃತಿಯ ಕುರಿತು ಪಾಲಾಕ್ಷಪ್ಪ ಎಸ್.ಎನ್. ಬರಹ ನಿಮ್ಮ ಓದಿಗೆ
ಬಹು ಆಯಾಮದ ಕವಿತೆಗಳು: ಎನ್.ಎಸ್. ಶ್ರೀಧರ ಮೂರ್ತಿ ಮುನ್ನುಡಿ
ಕವಿತೆಯ ಆರಂಭದಲ್ಲಿ ಕವಿ ಸತ್ತು ಹೋಗಲು ಬಯಸುವ ಚಿತ್ರಣ ಬರುತ್ತದೆ. ಅದೂ ಹಾಡ ಹಗಲು, ಸಾವಿನ ಕಾರಣ ಜೇಡದ ಉದರದ ಎಳೆ ಕಾಣಲು.. ದಾರಿಯ ತೋರಲು ಮೀಮಾಂಸಾ ಶಾಸ್ತ್ರದಲ್ಲಿ ಶಬ್ದ ಪ್ರಮಾಣಕ್ಕೆ ಮಹತ್ವದ ಸ್ಥಾನವಿದೆ, ಪ್ರತ್ಯಕ್ಷ, ಅನುಮಾನ, ಉಪಮಾನ, ಪ್ರಮಾಣಗಳಿಂದ ತಿಳಯಲಾಗದ್ದನ್ನು ‘ಶಬ್ದ ಪ್ರಮಾಣ’ದಿಂದ ತಿಳಿಯಬಹುದು. ಕಾರಣ ಧರ್ಮ ಭೌತವಸ್ತುವಲ್ಲ. ಧರ್ಮವನ್ನು ತಿಳಿಯಲು ವೇದ -ಅರ್ಥಾತ್ ಶಬ್ದವೊಂದೇ ಸಾಧನ ಅಥವಾ ಪ್ರಮಾಣ.
ಡಾ. ಅಜಿತ್ ಹರೀಶಿ ಕವನ ಸಂಕಲನ “ತೇಲಿಬಿಟ್ಟ ಆತ್ಮಬುಟ್ಟಿ”ಗೆ ಎನ್.ಎಸ್. ಶ್ರೀಧರ ಮೂರ್ತಿ ಮುನ್ನುಡಿ
ಕಾವ್ಯದಿಂದ ಏನನ್ನು ನಿರೀಕ್ಷಿಸುತ್ತೇವೆ?: ಕಮಲಾಕರ ಕಡವೆ ಕೃತಿಗೆ ಸಿರಾಜ್ ಅಹಮದ್ ಮುನ್ನುಡಿ
‘ಮುಗಿಯದ ಮಧ್ಯಾಹ್ನʼ ಸಂಕಲನದಲ್ಲಿ ಸೂಚಿಸುವ ಹಾಗೆ ನಿಧಾನ ನಿಧನದತ್ತ ಸಾಗಿರುವ ಸುತ್ತಲಿನ ಜಗತ್ತಿನ ಬಗೆಗೆ ಕವಿ ಬಹಳ ವ್ಯಾಕುಲನಾಗಿದ್ದಾನೆ. ಇನ್ನೊಂದು ಬಗೆಯಲ್ಲಿ ಇದರಿಂದ ಅವನ ಅಂತರಂಗವೂ ಕ್ರಮೇಣ ವಿಕೃತಗೊಂಡಿರುವ ಸೂಚನೆಗಳು ಇಲ್ಲಿ ಸಿಗುತ್ತವೆ. ಹಕ್ಕಿ ಕಂಡರೂ ಅದು ಏರುವ ವಿಸ್ತಾರವನ್ನು ಕಾಣದ ಅದರ ಹಾರಾಟವನ್ನು ಶಂಕಿಸುವ ಮನಸುಗಳಿಗೆ ಮೊದಲು ಅವರದೇ ಎದೆಯೊಳಗಿನ ಹಕ್ಕಿಯೊಂದು ಸೊರಗಿ ಹೋಗುವ ದುರಂತವನ್ನು ಕವಿ ಕಾಣಿಸುತ್ತಾನೆ.
ಕಮಲಾಕರ ಕಡವೆ “ವಲಸೆ ಹಕ್ಕಿಗಳ ಹುಯಿಲು” ಕವನ ಸಂಕಲನಕ್ಕೆ ಎಸ್ ಸಿರಾಜ್ ಅಹಮದ್ ಮುನ್ನುಡಿ
“ಚಾಂಡಾಳನೊಬ್ಬನ ಆತ್ಮ ವಿಮರ್ಶೆ”: ದೇವಿಕಾ ನಾಗೇಶ್ ಬರಹ
ಬಂಗಾಳದ ರಕ್ತ ಚರಿತ್ರೆಯನ್ನು ಲಕ್ಷಾಂತರ ಜನರ ನಿತ್ಯ ನರಕವನ್ನು ಪ್ರಭುತ್ವಗಳ ನಾಚಿಕೆಗೇಡಿನ ಹುಸಿತನವನ್ನು ಯಾವುದೇ ಮುಚ್ಚುಮರೆಯಿಲ್ಲದೆ ಈ ಕೃತಿ ತೆರೆದಿಡುತ್ತದೆ. ಹಳೆಯ ಕಳೆದ ಶತಮಾನದ ಕೊನೆಯಲ್ಲಿ ನಮ್ಮ ದೇಶದಲ್ಲಿ ಹಲವು ಹೆಸರಾಂತ ರಾಜಕಾರಣಿಗಳು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ನಡೆಸಿದ ತಂತ್ರಗಾರಿಕೆಯನ್ನು ಅವರ ಅಸಲಿ ಮುಖವನ್ನು ತೆರೆದಿಡುತ್ತದೆ. “ವಿರೋಧಿಗಳು ನನಗೆ ಪ್ರೀತಿ ತೋರಿಸಿದಾಗ ಸಾಧ್ಯವಾಗದ್ದು, ಕೋಪ ತೋರಿಸಿದಾಗ ಸಾಧ್ಯವಾಗಿದೆ. ನನ್ನ ಕೋಪವನ್ನು ಅವರು ಜೀವಂತವಾಗಿಟ್ಟಿದ್ದಾರೆ. ಅವರ ಕೋಪದ ಫಲ ಶ್ರುತಿಯೇ ನನ್ನ ಪುಸ್ತಕ.” ಬ್ಯಾಪಾರಿಯವರ ಮಾತಿದು.
ಮನೋರಂಜನ್ ಬ್ಯಾಪಾರಿಯವರ ಆತ್ಮಕತೆಯನ್ನು ಡಾ. ಎಚ್. ಎಸ್.ನಾಗಭೂಷಣ “ಚಾಂಡಾಳನೊಬ್ಬನ ಆತ್ಮ ವಿಮರ್ಶೆ” ಹೆಸರಿನಲ್ಲಿ ಕನ್ನಡಕ್ಕೆ ತಂದಿದ್ದು ಇದರ ಕುರಿತು ದೇವಿಕಾ ನಾಗೇಶ್ ಬರಹ ನಿಮ್ಮ ಓದಿಗೆ
ಭಾವ ಬಿಡುಗಡೆಯ ನಿರುಮ್ಮಳ ಕಥೆಗಳು: ಪೂರ್ಣಿಮಾ ಭಟ್ಟ ಸಣ್ಣಕೇರಿ ಕಥಾಸಂಕಲನಕ್ಕೆ ಅಬ್ದುಲ್ ರಶೀದ್ ಮುನ್ನುಡಿ
ಪೂರ್ಣಿಮಾ ಅವರದು ಅವರೇ ತಮ್ಮ ಮಾತಿನಲ್ಲಿ ಹೇಳುವ ಹಾಗೆ ‘ಕತೆಗಾತಿಯ ವೇಷ’. ಕಥೆಯ ನಿರುದ್ವಿಗ್ನತೆ ಮತ್ತು ನೆಮ್ಮದಿಯ ದೃಷ್ಟಿಯಿಂದ ಈ ವೇಷ ಅಗತ್ಯ ಎಂದು ನನಗೆ ಇಷ್ಟೆಲ್ಲ ಬರೆದಾದ ಮೇಲೆ ಈಗ ಅನ್ನಿಸುತ್ತದೆ. ಬರೆಯುವವರು ತಮ್ಮದೇ ಕಥೆಯಲ್ಲಿ ಕಳೆದುಹೋಗುವ ಅಪಾಯದಿಂದ ಬಿಡುಗಡೆಗೊಳ್ಳುವ ದಾರಿ ಇದು. ಇದು ಬಹು ದೊಡ್ಡ ಸವಾಲಿನ ದಾರಿಯೂ ಹೌದು. ಬರೆಯುವವರಿಗೆ ಈ ದಾರಿಯಲ್ಲಿ ಕ್ರಮಿಸಲು ಬಹಳ ಲೋಕಜ್ಞಾನ ಇರಬೇಕಾಗುತ್ತದೆ. ಸಕಲ ಜೀವ ವ್ಯಾಪಾರಗಳ ಕುರಿತು ಒಂದು ಸಮತೂಕದ ನಿರ್ಲಿಪ್ತತೆ ಬೇಕಾಗುತ್ತದೆ.
ಪೂರ್ಣಿಮಾ ಭಟ್ಟ ಸಣ್ಣಕೇರಿ ಕಥಾಸಂಕಲನ “ಕತೆ ಜಾರಿಯಲ್ಲಿರಲಿ” ಕೃತಿಗೆ ಅಬ್ದುಲ್ ರಶೀದ್ ಬರೆದ ಮುನ್ನುಡಿ
`ಅಂತರಿಕ್ಷದಲ್ಲಿ ವಿಹಾ’ ಮಕ್ಕಳ ವೈಜ್ಞಾನಿಕ ಫ್ಯಾಂಟಸಿಯ ಲೋಕ: ಮಂಡಲಗಿರಿ ಪ್ರಸನ್ನ ಬರಹ
ವಿಹಾ ಮತ್ತು ಆಕೆಯ ಗೆಳೆಯ ಚಿಂಟು ಅವರ ಕೆಲ ವೈಜ್ಞಾನಿಕ ಸಂಭಾಷಣೆಗಳು ಆಸಕ್ತಿದಾಯಕ. ನಿದ್ದೆಯಲ್ಲೂ ಅಂತರಿಕ್ಷ, ರಾಕೇಟ್, ಪ್ಯಾರಾಚೂಟ್….. ಎಂದೆಲ್ಲ ಬಡಬಡಿಸುವ ವಿಹಾ, ಸ್ವೀಟೋ ಏಲಿಯನ್ಸ್ ಜೊತೆ ನಡೆಸುವ ಸಂಭಾಷಣೆ ಮಕ್ಕಳ ಯೋಚನಾ ಲಹರಿಯ ವಿಸ್ತಾರಕ್ಕೆ ಇಂಬುಕೊಟ್ಟಂತಿದೆ. ವಿಹಾಳ ಕನಸು, ಸ್ವೀಟೋ ಬಂದ ದಿನ, ಫ್ಲೈಯಿಂಗ್ ಸಾಸರ್ನಲ್ಲಿ ಏಲಿಯನ್ಸ್, ಅಂತರಿಕ್ಷದಲ್ಲಿ ವಿಹಾ, ಮೊದಲಾದ ಅಧ್ಯಾಯಗಳಲ್ಲಿ ವಿಹಾಳ ಸಾಹಸ, ಆಕೆಯ ಕಲ್ಪನಾ ಶಕ್ತಿ, ಧೈರ್ಯ, ಹೊಸತನ್ನು ಕಲಿಯಬೇಕು, ಮಾಡಬೇಕೆನ್ನುವ ಹಂಬಲದ ತುಡಿತವಿದೆ.
ವಸು ವತ್ಸಲೆ ಬರೆದ `ಅಂತರಿಕ್ಷಾದಲ್ಲಿ ವಿಹಾʼ ಮಕ್ಕಳ ಕೃತಿಯ ಕುರಿತು ಮಂಡಲಗಿರಿ ಪ್ರಸನ್ನ ಬರಹ









