ವೈದ್ಯರ ಬದುಕಿನ ಪಡಿಪಾಟಲ ಕನ್ನಡಿ: ಕೊಟ್ರೇಶ್ ಅರಸೀಕೆರೆ ಬರಹ
ಇಡೀ ಕಾದಂಬರಿ, ಒಬ್ಬ ಪ್ರಾಮಾಣಿಕ ವೈದ್ಯ ದೇಶ ಆರೋಗ್ಯ ತುರ್ತು ಪರಿಸ್ಥಿತಿಯಲ್ಲಿದ್ದಾಗಲೂ ಹೇಗೆ ಭ್ರಷ್ಟ ವ್ಯವಸ್ಥೆಗೆ ಬಲಿಯಾಗುತ್ತಾನೆ ಎನ್ನುವ ಕರಾಳ ಕಥನ. ಕೋವಿಡ್ ಕಾಲದಲ್ಲಿ ಸರ್ಕಾರದ ವ್ಯವಸ್ಥೆ ಮೇಲೆ ಆ ಸಮಯದಲ್ಲಿ ಚಾಲ್ತಿಯಲ್ಲಿದ್ದ ಶ್ರೀ ಸಾಮಾನ್ಯನ ಎಲ್ಲ ಆರೋಪಗಳೂ ಸತ್ಯವೆಂದು ಬಿಂಬಿಸುತ್ತದೆ. ವೈದ್ಯಕೀಯ ವ್ಯವಸ್ಥೆಯ ಭ್ರಷ್ಟತೆ ಹೇಗೆ ಲಕ್ಷಾಂತರ ಜನರ ಜೀವನ, ಜೀವದ ಜತೆ ಆಟವಾಡಿದ ಕರಾಳ ಕಥೆಯೇ ಈ ಕಾದಂಬರಿ.
ಡಾ. ಲಕ್ಷ್ಮಣ ವಿ.ಎ. ಕಾದಂಬರಿ ‘ಪಿ. ಎಚ್. ಸಿ ಕವಲುಗುಡ್ಡ’ ಕುರಿತು ಕೊಟ್ರೇಶ್ ಅರಸೀಕೆರೆ ಬರಹ
ಆವರಣ ಭಂಗ ಮಾಡಿಸುವ “ಪರಿಸರದ ಒಡನಾಟ”: ನಾರಾಯಣ ಯಾಜಿ ಬರಹ
ಯಾವುದೋ ಕಾಲದಲ್ಲಿ ‘ಮುದ್ದಳ’ ಎನ್ನುವ ಸಾಮಂತನಾಳಿದ ಈ ಊರಿನಲ್ಲಿ ಆತನ ನೆನಪು ಮರೆಯಾಗಿದೆ. ಆತನ ಅರಮನೆ ಇದೆ ಎನ್ನುವ ಜಾಗ ಅಸ್ಪಷ್ಟವಾಗಿ ಇದೆ. ಹಳ್ಳಿಗರ ಭಿತ್ತಿಯಲ್ಲಿ ಮಾಸಲು ತೊಡಗಿರುವ ಆ ಗುತ್ತುಗಳ ವಿಚಾರವನ್ನು ಹೇಳುತ್ತಲೇ, ತನ್ನ ಬಾಲ್ಯದ ಪರಿಸರದಲ್ಲಿ ಇದೀಗ ಮರೆಯಾಗುತ್ತಿರುವ ಹಳೆಯ ಕಾಡು, ಕರಡ ಹುಲ್ಲಿನ ಬೇಣ, ಒಳ್ಳೆ ಹಾವು, ವಿಷದ ಹಾವುಗಳೊಡನೆಯ ಬದುಕೆಲ್ಲವನ್ನೂ ಆಧುನಿಕ ಬದುಕು, ನಿಧಾನಕ್ಕೆ ಕಸಿಯತೊಡಗಿವೆ ಎನ್ನುವ ನೋವನ್ನು ಪರೋಕ್ಷವಾಗಿ ಲೇಖಕರು ತೋಡಿಕೊಳ್ಳುತ್ತಿದ್ದಾರೆ.
ಶಶಿಧರ ಹಾಲಾಡಿಯವರ “ಪರಿಸರದ ಒಡನಾಟ”ಕೃತಿಯ ಕುರಿತು ನಾರಾಯಣ ಯಾಜಿ ಬರಹ
ನಿತ್ಯ ಜಂಜಡದ ಸಣ್ಣ ಪುಟ್ಟ ಸಂಗತಿಗಳಲ್ಲಿ ಕತೆಗಳ ಹುಡುಕಾಟ: ಎಚ್ ಆರ್ ರಮೇಶ್ ಬರಹ
ಇಲ್ಲಿನ ಎಲ್ಲ ಕತೆಗಳ ಹಿಂದಿನ ಕಾಳಜಿ ಮನುಷ್ಯ ಎದುರಿಸುತ್ತಿರುವ ಬಿಕ್ಕಟ್ಟು, ಹಾಗೂ, ಮಾನಸಿಕವಾಗಿ ಉಸಿರುಗಟ್ಟಿಕೊಂಡು ಬಿದ್ದು ಒದ್ದಾಡುತ್ತಿರುವ ಇಕ್ಕಟ್ಟುಗಳಿಂದ ಪಾರಾಗಿ ಹಸನಾದ ಬದುಕನ್ನು ಕಟ್ಟಿಕೊಳ್ಳಲು ಹೆಣಗಾಡುತ್ತಿರುವವರ ಚಿತ್ರಣಗಳನ್ನು ಭಾಷೆಯಲ್ಲಿ ರೂಪಕಗಳಾಗಿ ಹಿಡಿದಿಡುವುದಾಗಿದೆ. ತಮ್ಮ ಮೊದಲ ಪ್ರಯತ್ನದಲ್ಲಿಯೇ ಶೃತಿ ಬಿ. ಆರ್ ಅವರು ತಮ್ಮೀ ಕತೆಗಳ ಮುಖೇನ ಹೊಸ ಸಾಧ್ಯತೆಗಳನ್ನು ನಿರೀಕ್ಷೆಗಳನ್ನು ಇಟ್ಟುಕೊಳ್ಳುವಂತೆ ಮಾಡಿದ್ದಾರೆ.
ಶೃತಿ ಬಿ.ಆರ್. ಕಥಾ ಸಂಕಲನ “ಎಲ್ಲೆಗಳ ದಾಟಿದವಳು” ಕುರಿತು ಎಚ್.ಆರ್. ರಮೇಶ್ ಬರಹ
ಭೂಮಾನುಭೂತಿಯ ಬರಹಗಳು: ನಾರಾಯಣ ಯಾಜಿ ಕೃತಿಯ ಕುರಿತ ಹರೀಶ್ ಕೇರ ಮುನ್ನುಡಿ
ಈ ಬರಹಗಳು ಆಕಾಶ ಹಾಗೂ ಭೂಮಿಯ ನಡುವೆ ಸಲೀಸಾಗಿ ಯಾನ ಕೈಗೊಳ್ಳುತ್ತವೆ. ಪುರಾಣೇತಿಹಾಸಗಳ ಕ್ಲಾಸಿಕ್ ಸಾಹಿತ್ಯಗಳ ಆಕಾಶ ತತ್ವಗಳ ಜೊತೆಜೊತೆಗೇ ನಮ್ಮಂಥ ಸಾಮಾನ್ಯ ಮಾನವರ ನೆಲಕ್ಕಂಟಿದ ಬದುಕಿನ ಭೂಮಿ ತತ್ವವೂ ಹದವಾಗಿ ಬೆರೆತುಕೊಂಡಿವೆ. ಮಹಾತ್ಮ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಹಾಗೂ ಸ್ವಾತಂತ್ರ್ಯ ಹೋರಾಟದ ಬಗ್ಗೆ ಇರುವ ಲೇಖನಗಳು ಈ ಕೃತಿಯ ಪ್ರಮುಖ ಲೇಖನಗಳಲ್ಲಿ ಕೆಲವು. ಇವು ನಮ್ಮ ಐತಿಹಾಸಿಕ ನೆಲೆಗಟ್ಟಿನಲ್ಲಿ ಈ ಅದ್ವಿತೀಯ ಪುರುಷರ ಆದರ್ಶಗಳು ಕಾಣ್ಕೆಗಳು ಹೇಗಿದ್ದವು ಎಂಬುದರ ನಿಡುನೋಟವನ್ನು ನೀಡುತ್ತವೆ.
ನಾರಾಯಣ ಯಾಜಿ ಹೊಸ ಕೃತಿ “ಧವಳ ಧಾರಿಣಿ”ಗೆ ಹರೀಶ್ ಕೇರ ಬರಹ
ಅಂಪೈರ್ ಮೇಡಂ: ಕೆ. ಸತ್ಯನಾರಾಯಣ ಕಾದಂಬರಿಯ ಪುಟಗಳು…
ಹುಡುಗನ ತಮ್ಮನಿಗೆ ಪೋಲಿಯೋದಿಂದ ಕಾಲು ತಿರುಚಿಕೊಂಡು ಪೇಟೆ ಬೀದಿಯ ಒಳ ಓಣಿಯ ಬಲಗಡೆ ಕ್ರಾಸಿನಲ್ಲಿ ಒಂದು ಕಾಂಡಿಮೆಂಟ್ ಸ್ಟೋರ್ಸ್ ಹಾಕಿಕೊಟ್ಟಿದ್ದು ವ್ಯಾಪಾರ ಚೆನ್ನಾಗಿ ನಡೆಯುತ್ತಿತ್ತು. ಶ್ರೀದೇವಿಯ ಗಂಡನಾಗುವವನು ಕೂಡ ಲ್ಯಾಂಡ್ ಬ್ಯಾಂಕ್ ಕೆಲಸದಲ್ಲಿ ಎಷ್ಟೇ ಹೊತ್ತು ತಡವಾದರೂ ಒಂದು ಸಲ ಸಂಜೆ ಅಂಗಡಿಗೆ ಹೋಗಿ, ಸಾಮಾನು, ಕ್ಯಾಶ್ ಎಲ್ಲ ಲೆಕ್ಕ ನೋಡಿ ತಮ್ಮನಿಗೆ ಸಹಾಯ ಮಾಡುತ್ತಿದ್ದ. ನೋಡಿ, ಈಗಿನ ಕಾಲದಲ್ಲೂ ಇಂತಹ ಗುಣವಂತ, ನೀತಿವಂತ ಹುಡುಗರು ಇರುತ್ತಾರಾ ಅಂತ ಕಿರಂಗೂರಿನ ಸಮಸ್ತ ಪ್ರಜೆಗಳಿಗೆ ಕೊನೇ ಪಕ್ಷ ಮೂರು ನಾಲ್ಕು ಸಲವಾದರೂ ಗೋದಾದೇವಿ ಹರಿಕತೆ ಮಾಡಿ ತಿಳಿಸಿದ್ದಳು.
ಕೆ. ಸತ್ಯನಾರಾಯಣ ಹೊಸ ಕಾದಂಬರಿ “ಅಂಪೈರ್ ಮೇಡಂ” ಕೃತಿಯ ಕೆಲವು ಪುಟಗಳು ನಿಮ್ಮ ಓದಿಗೆ
ಸಾಕುನಾಯಿಗಳೊಂದಿಗಿನ ಅನನ್ಯ ಮೈತ್ರಿ…: ಪ್ರೊ. ಎಂ. ನಾರಾಯಣ ಸ್ವಾಮಿ ತ್ಯಾವನಹಳ್ಳಿ ಬರಹ
ಅದೊಂದು ಶನಿವಾರ. ರಾಮು ನಾಯಿ ಉಪವಾಸ ಮಾಡುತ್ತದೆ. ಇಡೀ ದಿನ ಯಾವ ಆಹಾರ ಕೊಟ್ಟರೂ ತಿನ್ನುವುದಿಲ್ಲ. ಮನೆಯ ಸದಸ್ಯರು ವಾರದ ಉಪವಾಸ ಮಾಡುತ್ತಿದ್ದರು. ಅದನ್ನು ಅನುಕರಣೆ ಮಾಡಿ ನಾಯಿಯೂ ಉಪವಾಸ ಮಾಡಿರಬಹುದು. ಬಾಲಕರು ಮನೆಯಿಂದ ಹೊರಗೆ ಹೊರಟರೆ ಅವರಿಗೆ ಬೆಂಗಾವಲಾಗಿ ಹಾಗೂ ಮನೆಗೆ ಮಕ್ಕಳನ್ನು ವಾಪಸ್ಸು ಕರೆತರಲು ನಾಯಿಗಳು ಅವರನ್ನು ಹಿಂಬಾಲಿಸಿ ಹೊರಟುಬಿಡುತ್ತಿದ್ದವು. ಮಕ್ಕಳಿಗೆ ಮನೆಯ ದಾರಿ ತಿಳಿಯದಾದಾಗ ಮುದ್ದುನಾಯಿಗಳು ದಾರಿ ತೋರಿಸುತ್ತಾ ಮನೆಗೆ ಕರೆತಂದ ಸಂದರ್ಭವಿದೆ.
ವೇದವತಿ ಕೋದಂಡರಾಮ್ ತಮ್ಮ ಮನೆಯ ಸಾಕುಪ್ರಾಣಿಗಳ ಕುರಿತು ಬರೆದ “ಯಾವ ಜನ್ಮದ ಮೈತ್ರಿ” ಕೃತಿಯ ಕುರಿತು ಪ್ರೊ. ಎಂ. ನಾರಾಯಣ ಸ್ವಾಮಿ ತ್ಯಾವನಹಳ್ಳಿ ಬರಹ
ಮನದಲ್ಲೇ ಉಳಿದುಹೋದ ಪತ್ರಗಳು: ದೀಪಾ ಗೋನಾಳ ಬರಹ
ಒಬ್ಬ ಸಂತನಂತವನನ್ನ ನಂಬಿ ಭಾರತಕ್ಕೆ ಬಂದು ಆತನ ಮಗಳಾಗಿ ಆತನ ಹೋರಾಟಗಳಿಗೆ ಹೆಗಲಾದ ಮೆಡಲಿನ್ ಸ್ಲೇಡ್ಗೆ ಬಾಪು ಯಕಃಶ್ಚಿತ್ ಒಂದು ಪಾನ್ ಬೀಡ ತಿಂದರೂ ಕ್ಲಾಸ್ ತೆಗೆದುಕೊಂಡ ಪತ್ರವಿದೆಯಲ್ಲ ಅದು ಒಬ್ಬ ಆದರ್ಶ ತಂದೆ ತನ್ನ ಮಗಳ ಕುರಿತ ಅಪರಿಮಿತ ಅಪ್ಯಾಯತೆ ಮತ್ತು ಕಾಳಜಿಯಿಂದ ಮಾಡಿದ ಕೆಲಸವೆಂದೇ ನನ್ನ ದೃಢಭಾವನೆ. ಈ ಪತ್ರಗಳು ಒಮ್ಮೊಮ್ಮೆ ಖಂಡಕಾವ್ಯದಂತೆಯೂ ಭಾಸವಾಗಿದ್ದು ನನಗೆ ಆಶ್ಚರ್ಯ ಹುಟ್ಟಿಸಿದೆ.
ಎಂಕೆ ಗಾಂಧಿ ರಚಿತ “ಪ್ರಿಯ ಮೀರಾ” ಬಾಪು ಮಗಳಿಗೆ ಬರೆದ ಪ್ರೇಮ ಪತ್ರಗಳನ್ನು ಮಂಜುನಾಥ್ ಚಾಂದ್ ಕನ್ನಡಕ್ಕೆ ತಂದಿದ್ದು ಈ ಕೃತಿಯ ಕುರಿತು ದೀಪಾ ಗೋನಾಳ ಬರಹ
ಸಂರಚನೆಯಲ್ಲಿ ಹೊಸತನ ಹುಡುಕುವ ಕಥೆಗಳು: ಎನ್.ಎಸ್.ಶ್ರೀಧರ ಮೂರ್ತಿ ಬರಹ
‘ಅಂತರ್ಗತ’ ದಲ್ಲಿ ಕಥೆಯಲ್ಲಿದ್ದಾತ ಎದುರಿಗೂ ಬರುತ್ತಾನೆ, ಚಿತ್ತಾಲರ ಕಥೆಯಂತೆ ಸೃಜನಶೀಲತೆಯ ನೆಲೆಗಳನ್ನು ಪರಿವೀಕ್ಷಿಸುವ ಇದು ಆ ಮೂಲಕ ಬದುಕಿನ ಮೂಲ ಆತಂಕಗಳನ್ನೂ ಗುರುತಿಸುತ್ತದೆ. ‘ತಾರೆ’ಕತೆಯಲ್ಲಿ ಕೂಡ ಇಂತಹ ಸೂಕ್ಷ್ಮಗಳನ್ನು ಗಮನಿಸ ಬಹುದು. ಅಜಿತ್ ಅವರ ಕಥನದ ಹಿರಿಮೆಯೆಂದರೆ ಅವರಿಗೆ ಓದುಗರ ಗ್ರಹಿಕೆಯ ಕುರಿತು ಇರುವ ನಂಬಿಕೆ. ಕಥನದ ಹಲವು ನೆಲೆಗಳನ್ನು ಅವರು ಮುಕ್ತವಾಗಿರಿಸಿ ಅವು ಓದುಗರ ಮನೋಭೂಮಿಕೆಯಲ್ಲಿ ಬೆಳೆಯಲು ಬಿಡುತ್ತಾರೆ. ‘ತುಂಬೀತೆ ಒಲವು’ ಈ ನೆಲೆಯಲ್ಲಿ ಬಹು ಯಶಸ್ವಿಯಾದ ಕಥೆ.
ಡಾ. ಅಜಿತ್ ಹರೀಶಿ ಹೊಸ ಕಥಾ ಸಂಕಲನ “ಉಪರಿ”ಯ ಕುರಿತು ಎನ್.ಎಸ್.ಶ್ರೀಧರ ಮೂರ್ತಿ ಬರಹ
ಪೌರಾಣಿಕ ಚೌಕಟ್ಟಿನಲ್ಲಿ ವರ್ತಮಾನದ ಕರ್ಣನನ್ನು ದರ್ಶಿಸಿದ ಕಾದಂಬರಿ ‘ಕವಚ’: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರಹ
‘ಕವಚ’ ಕಾದಂಬರಿಯು ಸಮಕಾಲೀನ ಬದುಕಿಗೆ ಅನ್ವಯವಾಗಬಲ್ಲ ಅನೇಕ ಸಂಗತಿಗಳನ್ನು ಪ್ರಸ್ತಾಪಿಸಿದೆ. ಗುರು ಪರಶುರಾಮರು ಅಸ್ತ್ರಗಳ ಪ್ರಯೋಗಕ್ಕೆ ಸಂಬಂಧಪಟ್ಟಂತೆ ಬೋಧನೆಯನ್ನು ನೀಡುವ ಸಂದರ್ಭದಲ್ಲಿ, ಆಕ್ರಮಣಗಳು ಸ್ವ-ರಕ್ಷಣೆಗಾಗಿಯೇ ಹೊರತು ಆಕ್ರಮಣಕ್ಕಲ್ಲ. ದುರ್ಗುಣಗಳಿಗೆ ಈಡಾದರೆ ಸಿದ್ಧಿಯಾದ ಮಂತ್ರಾಸ್ತ್ರಗಳೂ ಪ್ರಯೋಜನಕ್ಕೆ ಬರುವುದಿಲ್ಲ ಮೊದಲಾದ ವಿಚಾರಗಳನ್ನು ತಿಳಿಸಿಕೊಡುತ್ತಾರೆ. ಅರ್ಜುನನ ಚಾಪವಿದ್ಯಾ ಚಾತುರ್ಯದ ಸಮಯದಲ್ಲಿ ಕರ್ಣ ಅರ್ಜುನನ ವಿರುದ್ಧ ಹೋರಾಡಲು ನಿರ್ಧರಿಸಿದಾಗ ಜನರಿಗೆ ಅವನ ಬೆಂಬಲ ದೊರಕುತ್ತದೆ.
ರಾಧಾಕೃಷ್ಣ ಕಲ್ಚಾರ್ ಬರೆದ “ಕವಚ” ಕಾದಂಬರಿಯ ಕುರಿತು ಡಾ. ವಿಶ್ವನಾಥ ಎನ್. ನೇರಳಕಟ್ಟೆ ಬರಹ









