ಸೋಲೆಂಬ ಅಲ್ಪ ವಿರಾಮದ ನಡುವೆ: ಶ್ರೀಧರ್ ಎಸ್. ಸಿದ್ದಾಪುರ ಪ್ರವಾಸ ಸರಣಿ
ಈ ಜನ್ಮದಲ್ಲಂತು ಇಂತಹ ಭೀಕರ ಮಳೆ ಕಂಡಿದ್ದಿಲ್ಲಾ!! ಕೆಳಗಿಳಿಯುತ್ತಾ ಜೀವಾದಿಗಳು ತಲ್ಲಣಿಸುತ್ತಿದ್ದವು. ತರಗಲೆಗಳ ತೂರಾಟ, ಹನಿಗಳ ಆರ್ಭಟ. ಕೆಳಗಿಳುತ್ತಲೇ ಮಳೆ ಕಡಿಮೆ ಆಗುವುದನ್ನೇ ತಲೆಗೊಂದು ಸೂರು ಹುಡುಕಿ ಹೊರಟೆವು. ಅಷ್ಟು ಮಳೆಯಲ್ಲೂ ಒಂದೆರಡು ಚಿತ್ರ ತೆಗೆದುದರಿಂದ ಎಲ್ಲರಿಗಿಂತ ಹಿಂದುಳಿದಿದ್ದ ನಾನು ಸ್ನೇಹಿತರಿಗಾಗಿ ಹುಡುಕಿದೆ. ಯಾರೂ ಕಾಣಲಿಲ್ಲ. ಭಟ್ಟರ ಹಿಂದೇ ಹೋದರೋ ಹೇಗೆ? ಭೈರವನಿಗೆ ಪೂಜೆ ಮುಗಿಸಿ ಭಟ್ಟರು ಆಗಲೇ ಹೋಗಿಯಾಗಿತ್ತು. ಭೈರವನ ಗುಡಿಯಲ್ಲಿ ಅಡಗುವ ಆಸೆ ಬಿಟ್ಟೆವು. ಸನಿಹದಲ್ಲೇ ಚಿಕ್ಕ ಗುಡಿಸಿಲಿನಂತಹ ಮಾಡಿತ್ತು. ಕಳ್ಳನಂತೆ ಅಲ್ಲಿ ಅಡಗಿಕೊಳ್ಳಲು ಹೊರಟೆ.
ಶ್ರೀಧರ್ ಎಸ್. ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿ
ನಾಲಗೆ ಹೊರಳದ ನಾಡಿನಲ್ಲಿ ಮೂರು ದಿನ…: ಶ್ರೀಧರ್ ಎಸ್. ಸಿದ್ದಾಪುರ ಪ್ರವಾಸ ಸರಣಿ
ಸುಣ್ಣದ ಕಲ್ಲಿನ ವಿಚಿತ್ರ ವಿನ್ಯಾಸ. ಜೇನು ತಟ್ಟಿಯಂತಹ ವಿಭಿನ್ನ ಸಂಯೋಜನೆ. ಬೆಳಕಿಗೆ ಹೊಳೆವ ಕಲ್ಲಿನ ಚೂರುಗಳು. ದನದ ಕೆಚ್ಚಲಿನಾಕೃತಿಯ ವಿನ್ಯಾಸವೂ ಉಂಟು. ಹಲಸಿನ ಕಾಯಿಯಂತಹ ನೇತಾಡುವ ಮಣ್ಣ ಹೆಂಟೆಗಳು. ವಿಭಿನ್ನ ವಿನ್ಯಾಸ, ಆಕಾರ. ಹಾವು, ಶಂಕ, ಗದೆ, ರಾಕ್ಷಸ ಆಲದ ಬಿಳಲುಗಳಂತಹ ರಚನೆ. ಹತ್ತು ಹೆಡೆ ಸರ್ಪ, ಮುದುಕ, ಗಂಟಲಿನ ರಚನೆ, ಹೊಸ ಹೊಸ ವಿನ್ಯಾಸದ ಬಲ್ಬುಗಳಂತಹ ರಚನೆಗಳು, ಒಂದೇ ಎರಡೇ.
ಶ್ರೀಧರ್ ಎಸ್. ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿಯಲ್ಲಿ ಹೊಸ ಊರಿನ ಪರಿಚಯ
ಹೊಷಾಯ್ ಹೊಸೆದ ಹೊಸ ಕತೆ….: ಶ್ರೀಧರ್ ಎಸ್. ಸಿದ್ದಾಪುರ ಬರೆಯುವ ಪ್ರವಾಸ ಸರಣಿ
ನಿಧಾನಕ್ಕೆ ನಾಲ್ಕಾರು ಬಾರಿ ಹತ್ತಿ ಇಳಿಯುತ್ತಾ ನನ್ನ ಕಾಲಿಗೆ ಬಲ ಬರಲು ಪ್ರಾರಂಭವಾಯಿತು! ನಿಧಾನವಾಗಿ ನನ್ನ ಕಾಲಿನ ಶಕ್ತಿ ಮರಳಿತು. ಮೊದಲಿನಂತಾದೆ. ಕೂಡಿಕೊಂಡ ನರಗಳೆರಡು ನೈಸರ್ಗಿಕ ವಿಧಾನದಲ್ಲೇ ಬೇರ್ಪಟ್ಟವು! ವಾವ್ ಅದ್ಭುತ! ಬದುಕಿನ ಆಸೆ ಕಳಕೊಂಡ ನಾನು ಮತ್ತೆ ಬದುಕ ಜೀವಿಸತೊಡಗಿದೆ. ತಾನು ಹೊಷಾಯ್ ಆದರೂ ಬಾಹುಬಲಿಯ ಸೇವೆಗೆ ನಿಂತೆ! ಬೆಳಿಗ್ಗೆ ಬೇಗ ಬಂದು ಬಾಗಿಲು ತೆಗೆಯುವುದು. ದೇವಾಲಯದ ವಠಾರದ ಸ್ವಚ್ಛತೆ. ಬಂದವರಿಗೆ ಮಾಹಿತಿ ನೀಡುವುದು. ಪೂಜೆಗೆ ಬರುವ ಪುರೋಹಿತರಿಗೆ ಸಹಾಯ ಮಾಡುತ್ತಾ ನನ್ನ ಕೃತಜ್ಞತೆ ಸಲ್ಲಿಸುತ್ತಿದ್ದೇನೆ.
ಶ್ರೀಧರ್ ಎಸ್. ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿ
ಕೀರ್ಗಂಗಾ ದಾರಿಯಲ್ಲಿ ಸಿಕ್ಕನೊಬ್ಬ ಸಂತ: ಶ್ರೀಧರ್ ಎಸ್. ಸಿದ್ದಾಪುರ ಬರೆಯುವ ಪ್ರವಾಸ ಸರಣಿ
ಕಾಲು ಸರಿಯಿಲ್ಲದ ಬಾಣಸಿಗನೊಬ್ಬ ಕಷ್ಟಪಟ್ಟು ಮೇಲೇರಿ ಬಂದು ಅಡುಗೆ ಮಾಡಿದ್ದ. ಆತನ ಬದುಕಿನ ಕಷ್ಟಗಳು ಏನಿದ್ದವೋ? ಸದಾ ಚಡಪಡಿಸುತ್ತಲೇ ಇರುತ್ತಿದ್ದ. ಹಿಮಾಚಲ, ಮೇಘಾಲಯದಲ್ಲಿ ಹಬ್ಬುತ್ತಿರುವ ಗಾಂಜಾ ವಾಸನೆ ಇಲ್ಲಿಯೂ ನನ್ನ ಮೂಗಿಗೆ ಬಡಿದಿತ್ತು!! ರಾತ್ರಿಯಾಗುತ್ತಲೇ ಆಗಸದ ಬೀದಿಯಲ್ಲಿ ತಾರಾ ಮೆರವಣಿಗೆ. ಎಲ್ಲೂ ಜಾಗವಿಲ್ಲದಂತೆ ಹಾಸಿದ್ದ ನಕ್ಷತ್ರ ಚಾಪೆ! ಕೌತುಕಮಯ ನೀಲಾಕಾಶ.
ಶ್ರೀಧರ್ ಎಸ್. ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿ
ಶ್ರೀಧರ್ ಎಸ್. ಸಿದ್ದಾಪುರ ಬರೆಯುವ ಪ್ರವಾಸ ಸರಣಿ “ಸಾಗುತ ದೂರ ದೂರ…” ಇಂದಿನಿಂದ
ನಡುನಡುವೆ ನಗುವಿನ ಅಲೆಗಳ ವಿನಿಮಯವಾಗಿದ್ದಷ್ಟೇ ನನಗೆ ಗೊತ್ತು. ಹತ್ತಾರು ಸಿಗಡಿಗಳು, ಸ್ವಲ್ಪ ಸ್ವಲ್ಪವೇ ಪುಡಿ ಮೀನುಗಳೊಂದಿಗೆ ಮರಳುವ ಧಾವಂತದಲ್ಲಿದ್ದರು. ಆದರೂ ನಾಲ್ಕಾರು ಮೀನುಗಳನ್ನೂ ನಮಗೂ ಕಟ್ಟಿಕೊಡಲು ಬಂದರು! ನಾವು ಬೇಡವೆಂದಿದ್ದಕ್ಕೆ ಬೇಸರಿಸಿಕೊಂಡರು. ನಾಲ್ಕಾರು ಸಿಗಡಿಗಳ ತೋರಿಸಿ ಕುಶಿ ಪಟ್ಟ. ಕಡಲ ಕಿನಾರೆಗೆ ಬಡಿದು ಬಡಿದೂ ಸವೆದ ಚಪ್ಪಲಿ ಹಾಕಿ ಹೊರಟಾಗ ಮನದ ಕರಳು ಚುರುಕ್ ಎಂದಿತು. ಭೈರವಿ ರಾಗದ ಆಲಾಪದಂತೆ ಭಾಸವಾದ ಅಲೆಗಳು ಅವಳ ಕಾಲಂದುಗೆಗೆ ಮತ್ತೆ ಮತ್ತೆ ಮುತ್ತಿಕ್ಕುತಾ ಖುಷಿಯಲ್ಲಿ ಮರಳುತ್ತಲಿದ್ದವು.
ಶ್ರೀಧರ್ ಎಸ್. ಸಿದ್ದಾಪುರ ಬರೆಯುವ ಪ್ರವಾಸ ಸರಣಿ “ಸಾಗುತ ದೂರ ದೂರ…”
ಅಂಡಮಾನ್ ಪ್ರವೇಶ ಬಿಂದು ಪೋರ್ಟ್ ಬ್ಲೇರ್ ದ್ವೀಪದಲ್ಲಿ: ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ
ಸಣ್ಣಗೆ ಕುಲುಕಾಡುತ್ತಿರುವ ಸಮುದ್ರ ಆಕಾಶದ ಕೆಳಗೆ ಇನ್ನೊಂದು ಅಂಚಿನಲ್ಲಿ ನಾನು ನಿಂತಿರುವ ಮಟ್ಟಕ್ಕಿಂತ ಎತ್ತರದಲ್ಲಿರುವಂತೆ ತೋರುತ್ತಿತ್ತು. ಕಣ್ಣುಗಳ ತುಂಬಾ ತುಂಬಿಹೋದ ಸಮುದ್ರ ನನ್ನ ದೇಹವನ್ನು ತುಸು ಅಲ್ಲಾಡಿಸಿದಂತಾಗಿ ಸ್ವಲ್ಪ ಪ್ರಜ್ಞೆ ಕಳೆದುಕೊಂಡಂತಾಯಿತು. ಮನುಷ್ಯನ ದೇಹದಲ್ಲಿರುವುದು ಶೇಕಡ 65% ನೀರೆ ತಾನೆ. ಪಕ್ಕದಲ್ಲಿ ನಿಂತಿದ್ದ ಸುಶೀಲ ನನ್ನ ಮುಖವನ್ನು ಪ್ರಶ್ನಾರ್ಥಕವಾಗಿ ನೋಡಿದಳು.
ಅಂಡಮಾನ್-ನಿಕೋಬಾರ್ ದ್ವೀಪಗಳ ಪ್ರವಾಸದ ಕುರಿತು ಡಾ. ಎಂ. ವೆಂಕಟಸ್ವಾಮಿ ಬರಹ
ಅಂಡಮಾನ್-ನಿಕೋಬಾರ್ ದ್ವೀಪಗಳ ಅನುಭವಗಳು: ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ
ಪೋರ್ಟ್ ಬ್ಲೇರ್ ನಿಲ್ದಾಣದಲ್ಲಿ ಇಳಿದು ಹೊರಕ್ಕೆ ಬರುತ್ತಿದ್ದಂತೆ ಹಾರಾಡುತ್ತ ಬಂದ ಮೋಡಗಳು ಸಣ್ಣದಾಗಿ ಮಳೆ ಹನಿಯತೊಡಗಿದವು. ಇಬ್ಬರೂ ಓಡೋಡಿ ಹೋಗಿ ನಿಲ್ದಾಣದ ಒಳಕ್ಕೆ ಸೇರಿಕೊಂಡೆವು. ವಿಮಾನ ಮತ್ತು ವಿಮಾನ ನಿಲ್ದಾಣದ ಫೋಟೋಗಳನ್ನು ತೆಗೆದುಕೊಳ್ಳುತ್ತಿದ್ದ ಜನರು ಕೆಲವೇ ಕ್ಷಣಗಳಲ್ಲಿ ತೊಯ್ದು ತೊಪ್ಪೆಯಾಗಿದ್ದರು.
ಅಂಡಮಾನ್-ನಿಕೋಬಾರ್ ದ್ವೀಪಗಳ ಪ್ರವಾಸದ ಕುರಿತು ಡಾ. ಎಂ. ವೆಂಕಟಸ್ವಾಮಿ ಬರಹ
ನೀರ ನೆಲದ ಮೇಲೆ ನೂರಾರು ಮನೆ – ಧೊದಿಯಾ: ಹೇಮಾ ನಾಯಕ ಬರಹ
ಹೀಗೆ ನೆಲದಿಂದ ಎತ್ತರಿಸಿ ಕಟ್ಟಿದ ಚಿಕ್ಕ ಚಿಕ್ಕ ಗೂಡುಗಳು ಅಲ್ಲಲ್ಲಿ ಚದುರಿಕೊಂಡಂತೆ ಇದ್ದು, ನೀರೇ ಬುಡಕ್ಕೆ ಕೈ ಹಾಕಿ ಎಬ್ಬಿಸಿ ಕೂರಿಸಿದಂತೆ ಕಾಣಿಸುತ್ತವೆ. ಹೆಚ್ಚುಕಮ್ಮಿ ಎಲ್ಲ ತೊಳೆದುಕೊಂಡು ಹೋಗುವಂತೆ ಕಾಣುತ್ತಿದ್ದ ಊರಿನಲ್ಲಿ, ಅಟ್ಟದ ಕೋಣೆಗಳಿಗೆ ಹೊಂದಿಕೊಂಡಂತೆ ಹೂವಿನ ಕುಂಡಗಳನ್ನು ಸುಂದರವಾಗಿ ಜೋಡಿಸಿದ್ದು ನೋಡಿ ಅಚ್ಚರಿಯ ಜೊತೆ ಖುಷಿಯೂ ಆಯಿತು. ಧೊದಿಯಾದಲ್ಲಿ ಒಂದೇ ಒಂದು ಕಿರಾಣಿ ಅಂಗಡಿಯಿದೆ. ಅದರ ಮಾಲೀಕ ನನ್ನನ್ನು ಕರೆದು ತನ್ನ ಮೊಟ್ಟಮೊದಲ ಅಂಗಡಿ ಅದೋ ಅಲ್ಲಿಯೇ ಇತ್ತೆಂದು ದಿಬ್ರು ನದಿಯ ನಡುವೆ ಕಾಣದ ಯಾವುದೋ ಬಿಂದುವಿನತ್ತ ಬೆರಳು ತೋರಿಸಿದ.
ಅಸ್ಸಾಮ್ ರಾಜ್ಯದ ಧೊದಿಯಾ ಹಳ್ಳಿಗೆ ನೀಡಿದ ಭೇಟಿಯ ಕುರಿತು ಹೇಮಾ ನಾಯಕ ಬರಹ
ನೆದರ್ಲ್ಯಾಂಡ್ಸ್ ರಾಜಕಾರಣ- ಒಂದು ಅಪೂರ್ಣ ಅನುಬಂಧ: ಕೆ. ಸತ್ಯನಾರಾಯಣ ಪ್ರವಾಸ ಸರಣಿ
ನಾಗರಿಕರನ್ನು ಸಾಕಬೇಕು, ಪೋಷಿಸಬೇಕು ಎನ್ನುವುದಕ್ಕಿಂತ ಹೆಚ್ಚಾಗಿ, ಅವರನ್ನು ಸಬಲಗೊಳಿಸಬೇಕು, ಅವರು ಸರ್ಕಾರ, ರಾಜ್ಯದ ಮೇಲೆ ಅವಲಂಬಿತರಾಗದ ಹಾಗೆ ನೋಡಿಕೊಳ್ಳಬೇಕು, ಹಾಗಾದಾಗ ಮುಂದೆ ಅವರೇ ದೇಶದ ಆರ್ಥಿಕ-ಸಾಮಾಜಿಕ ಅಭಿವೃದ್ಧಿಯ ಕಡೆ ಗಮನ ಹರಿಸುತ್ತಾರೆ ಎಂಬುದು ಈ ಸಮಾಜದ ನಿಲುವು. ಉನ್ನತ ಮಟ್ಟದ ರಾಷ್ಟ್ರೀಯ ಆದಾಯ, ತಲಾವಾರ್ಷಿಕ ಆದಾಯದ ಹಂತವನ್ನು ತಲುಪಿದ ದೇಶದಲ್ಲಿ ಮಾತ್ರ ಇದು ಸಾಧ್ಯ. ಶ್ರೀಮಂತರು, ಚಕ್ರವರ್ತಿಗಳು ಇಲ್ಲವೆಂದಿಲ್ಲ.
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್ಲ್ಯಾಂಡ್ಸ್ ಬಾಣಂತನ” ಸರಣಿಯ ಕೊನೆಯ ಬರಹ









