Advertisement

ಪ್ರವಾಸ #-test

ದೀಪಧಾರಿಣಿಯ ಬೆಳಕಿನಲ್ಲಿ ಹೊಳೆದ ಮಿಂಚು

ದೀಪಧಾರಿಣಿಯ ಬೆಳಕಿನಲ್ಲಿ ಹೊಳೆದ ಮಿಂಚು

ಹೀಗೆಲ್ಲಾ ಓದುತ್ತಾ, ಫೋಟೊ ತೆಗೆಯುತ್ತಾ ಮುಂದೆ ಹೋಗುತ್ತಿದ್ದೆ. ಅಲ್ಲೇ ಅಲ್ಲೇ ಇನ್ನೊಂದು ಫಲಕ. ಅದರಲ್ಲಿ ಸಣ್ಣಸಣ್ಣ ಅಕ್ಷರಗಳು. ಆಸ್ಪತ್ರೆಯಲ್ಲಿ ಒಳರೋಗಿಯಾಗಿದ್ದವರಿಗೆಲ್ಲಾ ತಿಳಿದೇ ಇರುತ್ತದೆ ರೋಗಿಯ ಹಾಸಿಗೆಯ ಪಕ್ಕದಲ್ಲಿ ಒಂದು ಕರೆಗಂಟೆಯ ಸ್ವಿಚ್ ಇರುತ್ತದೆ ಎನ್ನುವುದು. ಆಮ್ಲಜನಕದ ಸಿಲಿಂಡರ್ ಒಂದೊಮ್ಮೆ ಖಾಲಿಯಾಗಿದ್ದರೂ ಆತಂಕಗೊಳ್ಳದ ವ್ಯಕ್ತಿ ಈ ಕರೆಗಂಟೆ ಕೆಲಸ ಮಾಡದಿದ್ದರೆ ಮಾತ್ರ ಸಾವಿನಷ್ಟೇ ಭಯಬೀಳುವುದು ಖಚಿತ.
ಅಂಜಲಿ ರಾಮಣ್ಣ ಬರೆಯುವ ಪ್ರವಾಸ ಅಂಕಣ

read more
ಸಿಸಿಲಿಯನ್ ಡೈರೀಸ್: ಯುರೇಕಾ ನಗರಿ ಸಿರಕುಸಾ

ಸಿಸಿಲಿಯನ್ ಡೈರೀಸ್: ಯುರೇಕಾ ನಗರಿ ಸಿರಕುಸಾ

ಸಿಸಿಲಿಯ ಹತ್ತು ದಿನದ ಪ್ರವಾಸದಲ್ಲಿ ಮೊದಲು ಭೇಟಿ ಕೊಟ್ಟಿದ್ದು “ಸಿರಕುಸಾ”ಗೆ. ಹೌದು! ಇದು ಆರ್ಕಿಮಿಡಿಸ್ ನ ಜನ್ಮಸ್ಥಳ ಹಾಗೂ ವಾಸಸ್ಥಳವಾಗಿತ್ತು. ಆರ್ಕಿಮಿಡಿಸ್ ಎಂದಾಕ್ಷಣ ಯುರೇಕಾ ಎಂದು ಮಾತ್ರ ತಿಳಿದಿದ್ದ ನನಗೆ, ಈ ಪ್ರವಾಸ ಬೇರೆಯ ಪ್ರಪಂಚವನ್ನೇ ತೆರೆದಿಟ್ಟಿತು.  ಆರ್ಕಿಮಿಡಿಸ್  ತನ್ನ ಬುದ್ಧಿಮತ್ತೆಯನ್ನು ಉಪಯೋಗಿಸಿ  ರಾಜ್ಯವು ಭದ್ರವಾಗಿರಲು ಬೇಕಾದ ಅನೇಕ ಸಲಹೆಗಳನ್ನು ಕೊಡುತ್ತಿದ್ದ. ಅವನ ರಾಜ್ಯ ಸಿರಕುಸಾದಲ್ಲಿ ಓಡಾಡಿದ ಅನುಭವಗಳನ್ನು ಗುರುದತ್ ಅಮೃತಾಪುರ ಅವರು ತಮ್ಮ ‘ದೂರದ ಹಸಿರು’ ಅಂಕಣದಲ್ಲಿ ಪ್ರಸ್ತುತಪಡಿಸಲಿದ್ದಾರೆ.

read more
ಮಾರ್ಟಿನ್ ಲೂಥರ್ ಕಿಂಗ್ ನೆನಪಿನಲ್ಲಿ ಹಾಕಿದ ಹೆಜ್ಜೆಗಳು

ಮಾರ್ಟಿನ್ ಲೂಥರ್ ಕಿಂಗ್ ನೆನಪಿನಲ್ಲಿ ಹಾಕಿದ ಹೆಜ್ಜೆಗಳು

ನಾನು ವಿದೇಶದಲ್ಲಿರುವ ಪರದೇಶಿ ಎನ್ನಿಸಲಿಲ್ಲ. ಅಮೆರಿಕ  ದೇಶವನ್ನು ನೋಡುವ ದೃಷ್ಟಿಕೋನವೇ ಬದಲಾಯ್ತು. ಆ ದಿನ ನನ್ನುಸಿರಿಗೆ ಉಸಿರು ಕೊಟ್ಟ ಮಾರ್ಟಿನ್. ನನಗೀಗ ಜೀವನ ಬೇಕು ಅನಿಸಲು ಶುರುವಾಯ್ತು. ಒಳಗಿನ ಕಣ್ಣು ಇಂಚಿಂಚೇ ತೆರೆಯ ಹತ್ತಿತು. ಮುಂದಿನ ಎಲ್ಲಾ ದಿನಗಳ ಪ್ರಯಾಣದಲ್ಲಿ ಅಲ್ಲಿನ ಎಲ್ಲೆಡೆಯಲ್ಲೂ ಕೆಳಮಟ್ಟದ ಕೆಲಸ ಎಂದು ಗುರುತಿಸಲ್ಪಟ್ಟಿರುವ ಎಲ್ಲಾ ಕೆಲಸಗಳನ್ನು ಕಪ್ಪು ಜನರೇ ಮಾಡುತ್ತಿದ್ದದ್ದು ಎದ್ದು ಕಾಣುತ್ತಿತ್ತು. ಬಿಳಿಯರ ಜೊತೆಗೆ ತಮ್ಮನ್ನು ಗುರುತಿಸಿಕೊಳ್ಳಬೇಕೆನ್ನುವ ಹಪಾಹಪಿ ಅವರಲ್ಲಿ ಇನ್ನೂ ಜೀವಂತವಿರುವುದನ್ನು ಕಂಡೆ.
‘ಕಂಡಷ್ಟು ಪ್ರಪಂಚ’ ಪ್ರವಾಸ ಅಂಕಣದಲ್ಲಿ ಅಂಜಲಿ ರಾಮಣ್ಣ ಬರಹ

read more
ಟ್ಯಾಗೋರರ ಮನೆಯಂಗಳದಲ್ಲಿ ಕಂಡ ಸತ್ಯಗಳು

ಟ್ಯಾಗೋರರ ಮನೆಯಂಗಳದಲ್ಲಿ ಕಂಡ ಸತ್ಯಗಳು

ತಮ್ಮ 77ನೇ ಹುಟ್ಟುಹಬ್ಬದಂದು ಟ್ಯಾಗೋರರು ಇದೇ ಮನೆಯಿಂದ ’ಜನಮ್ ದಿನ್’ ಎನ್ನುವ ತಮ್ಮ ಕವಿತೆಯನ್ನು ಆಕಾಶವಾಣಿಯ ನೇರ ಪ್ರಸಾರದಲ್ಲಿ ಓದಿದ್ದರು. ದೇಶದ ಮೊಟ್ಟಮೊದಲ ನೇರ ಪ್ರಸಾರ ಆಕಾಶವಾಣಿಯಲ್ಲಿ ಅದಾಗಿತ್ತು. ಆದರೀಗ ಆ ಮನೆ ಇಳಿ ವೇಳೆಯ ಎಲ್ಲಾ ಅಪರ ಕೃತ್ಯಗಳಿಗೆ ಚಾವಡಿಯಾಗಿದೆಯೆಂದು ತಿಳಿಯಿತು. ಎಷ್ಟು ಆಸಕ್ತಿ ಉತ್ಸಾಹದಿಂದ ಅಲ್ಲಿಗೆ ಬಂದಿದ್ದೆನೋ ಅಷ್ಟೇ ಮನನೊಂದು ಅಲ್ಲಿ ನಿಂತಿದ್ದೆ. ಅಂಜಲಿ ರಾಮಣ್ಣ ಬರಹ 

read more
ವೆರೋನಾ: ಅಮರ ಪ್ರೇಮದ ನಿದರ್ಶನ

ವೆರೋನಾ: ಅಮರ ಪ್ರೇಮದ ನಿದರ್ಶನ

ರೋಮಿಯೋ ಜೂಲಿಯೆಟ್ ದುರಂತ ಪ್ರೇಮ ಕಥೆಯ ಎಳೆಯ ಮೇಲೆ ಇಂದಿಗೂ ಬರುತ್ತಿವೆ, ಮುಂದೆಯೂ ಬರುತ್ತವೆ. ಆದರೆ ಈ ಕಥೆ ಕಾಲ್ಪನಿಕವಲ್ಲ ಎಂಬುದು ಗೊತ್ತೇ? ಇದು ನಿಜವಾಗಿಯೂ ಇಟಾಲಿಯ “ವೆರೋನಾ” ಎಂಬಲ್ಲಿ ನಡೆದಿರುವ ಘಟನೆ! ಈ ಅಮರ ಪ್ರೇಮದ ಘಟನೆಗಳು ಅನೇಕ ಸಾಹಿತಿಗಳನ್ನು ಪ್ರಭಾವಿಸಿದೆ. ಅದರಲ್ಲಿ ವಿಲಿಯಂ ಷೇಕ್ಸ್‌ಪಿಯರ್ ಕೂಡ ಒಬ್ಬರು!
‘ದೂರದ ಹಸಿರು’ ಸರಣಿಯಲ್ಲಿ ರೋಮೀಯೋ-ಜೂಲಿಯಟ್‌ ಕಥೆ ನಡೆದ ಸ್ಥಳದ ಕುರಿತು ಬರೆದಿದ್ದಾರೆ ಗುರುದತ್‌ ಅಮೃತಾಪುರ

read more
‘ಬದಲಾಗದೆ ಉಳಿದವರು ಮಾತ್ರ ಪುರುಷರು’

‘ಬದಲಾಗದೆ ಉಳಿದವರು ಮಾತ್ರ ಪುರುಷರು’

ಬಹುತೇಕ ಎಲ್ಲಾ ವಸ್ತು ಸಂಗ್ರಹಾಲಯಗಳಲ್ಲಿ ಇರುವಂತೆ ಇಲ್ಲಿಯೂ ಸಹ ಕಜಾರ್ ಮಹಿಳೆಯರು ಕರಕುಶಲದಲ್ಲಿ, ಅಡುಗೆ ವಿಧಾನದಲ್ಲಿ, ಸೌಂದರ್ಯ ಕಲೆಯಲ್ಲಿ, ಕಾವ್ಯ ಕಟ್ಟುವಿಕೆಯಲ್ಲಿ ಬೆಳೆದು ಬಂದ ಬಗೆಗಳ ಬಗ್ಗೆ ಸಾಕ್ಷಿಸಹಿತ ಪ್ರದರ್ಶನ ಇತ್ತು. 1789-1925 ಈ ಕಾಲದಲ್ಲಿ ಇರಾನ್ ದೇಶವನ್ನು ಆಳಿದ ಕಜಾರ್ ಮನೆತನದ ಹೆಣ್ಣು ಮಕ್ಕಳು ಇಸ್ಲಾಮೀಯರಲ್ಲೇ ಅತ್ಯಂತ ಆಧುನಿಕ ಆಲೋಚನೆ ಇದ್ದವರು ಎಂದು ಹೆಸರಾಗಿದ್ದಾರೆ. ಅಂಜಲಿ ರಾಮಣ್ಣ ಬರಹ  

read more
ಪಂಜಾಬಿಗೆ ಹೋಗಿ ಲಸ್ಸಿ ಕುಡಿಯದಿರೆ ಮೆಚ್ಚನಾ ಪರಮಾತ್ಮನು

ಪಂಜಾಬಿಗೆ ಹೋಗಿ ಲಸ್ಸಿ ಕುಡಿಯದಿರೆ ಮೆಚ್ಚನಾ ಪರಮಾತ್ಮನು

ಅಮೃತಸರ ಸಿಖ್ಖರ ಮುಖ್ಯ ಸ್ಥಳವಾದರೂ ಇಲ್ಲಿಂದ 11 ಕಿಲೋಮೀಟರ್ ದೂರದಲ್ಲಿ ಇದೆ ಲವ-ಕುಶರ ಜನ್ಮಸ್ಥಾನ. ಈಗ ಅದನ್ನು ರಾಮತೀರ್ಥ ಮಂದಿರ ಎಂದು ಗುರುತಿಸಲಾಗಿದೆ. ಅಲ್ಲೊಂದು ಸಣ್ಣ ಗುಡಿ ಇದೆ. ಅದರ ಮುಂದೆ ಕುಳಿತಿದ್ದ ಹಿರಿಯರೊಬ್ಬರು ‘ಇಲ್ಲಿಗೆ ಯಾರೂ ಬರುವುದೇ ಇಲ್ಲ ಅದಕ್ಕೇ ನಿತ್ಯ ಪೂಜೆಯೂ ಇಲ್ಲ’ ಎಂದರು. ಸಲಾಕೆಯಿಂದ ಮಾಡಿದ್ದ ಬಾಗಿಲಿಗೆ ಬೀಗ ಹಾಕಿತ್ತು. ಅಂಜಲಿ ರಾಮಣ್ಣ ಬರೆಯುವ ಪ್ರವಾಸ ಅಂಕಣ

read more
ಹಿಮಹಾಸಿನ ಮೇಲೆ ಚುಕ್ಕಿ ಎಣಿಸಿದ ಖುಷಿ

ಹಿಮಹಾಸಿನ ಮೇಲೆ ಚುಕ್ಕಿ ಎಣಿಸಿದ ಖುಷಿ

ಚಾರಣ ಪ್ರಾಂಭವಾದ ಸುಮಾರು ಒಂದು ಘಂಟೆಯ ನಂತರ ಎಲ್ಲರನ್ನೂ ಹಿಮದ ಮೇಲೆ ಮಲಗಿ ಸುಧಾರಿಸಲು ಹೇಳಿದ ನಮ್ಮ ಗೈಡ್ ಇನ್ನೊಂದು ಸೂಚನೆಯನ್ನೂ ಕೊಟ್ಟರು. ಕಣ್ಣು ಮುಚ್ಚಿ ಮೌನವನ್ನು ಆನಂದಿಸಬೇಕು. ಅಲ್ಲಿಯವರೆಗೂ ಗಿಜಿ ಗಿಜಿ ಎನ್ನುತ್ತಿದ್ದ ಗುಂಪು ತಕ್ಷಣ ಮೌನವಾಯಿತು. ಮೌನ ಆಚರಿಸಿ ಅಂತರ್ಮುಖಿಯಾಗುವುದೊ ಅಥವಾ ಕಣ್ಣಿನ ಮೇಲಿರುವ ತಾರಾಗಣವನ್ನು ಲೆಕ್ಕ ಹಾಕುವುದೋ ಎನ್ನುವ ಗೊಂದಲ. ಗುರುದತ್ ಅಮೃತಾಪುರ ಪ್ರವಾಸ ಕಥನ

read more
ಆನೆಗಳ ಅನಾಥಾಶ್ರಮದಲ್ಲಿ ಮಂಡೋದರಿಯ ನೆನಪಾಯಿತು

ಆನೆಗಳ ಅನಾಥಾಶ್ರಮದಲ್ಲಿ ಮಂಡೋದರಿಯ ನೆನಪಾಯಿತು

ರಾಜೀವ್ ಗಾಂಧಿಯ ನಡೆಯನ್ನು ಕಂಡ ಈ ನೆಲದ ಜನರಿಗೆ ಭಾರತದ ವಿಸ್ತಾರತೆಯ ಬಗ್ಗೆ ಆಸ್ಥೆ ಏನಿಲ್ಲ, ಬೆಂಗಳೂರು ಗೊತ್ತಿಲ್ಲ ಮತ್ತು ಚೆನ್ನೈ ತಮ್ಮದು ಎನ್ನುವುದನ್ನು ಬಿಟ್ಟಿಲ್ಲ. ಎಲ್‌ಟಿಟಿಈ ಜೊತೆ ಸಂಬಂಧ ಇತ್ತು ಎಂದು ನ್ಯಾಯಾಲಯದಲ್ಲಿ ಪ್ರಕರಣ ಎದುರಿಸುತ್ತಿರುವವರು ಸಂಸದರಾಗಿದ್ದಾರೆ ಎಂದರೆ ನಾವೆಲ್ಲರೂ ಒಂದೇ ಎಂದು ಹಾಡಿಕೊಳ್ಳಲು ಅಡ್ಡಿಯಿಲ್ಲ ಎನ್ನಿಸಿತು. ನಮ್ಮಲ್ಲಿ ಸಿಗುವ ನಾಗಣ್ಣ ಸ್ಟೋರ್ಸ್, ಮಲ್ಲಪ್ಪನ ಅಂಗಡಿ ವಗೈರೆಗಳಂತೆ ಅಲ್ಲಿಯೂ ಗಲ್ಲಿಗಲ್ಲಿಗಳಲ್ಲಿ ಹೇರಳವಾಗಿ ಸಿಗುತ್ತವೆ ಕಾಕಾ ಅಂಗಡಿಗಳು ಮತ್ತು ಮ್ಯಾಗಿ ಮ್ಯಾಗಿ ಮ್ಯಾಗಿ ಟು ಮಿನಿಟ್ಸ್‌ನಲ್ಲೇ ಸಿಗುತ್ತವೆ. ಅಂಜಲಿ ರಾಮಣ್ಣ ಅವರ ಪ್ರವಾಸ ಕಥನ.

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ