ಶ್ರೀಕೃಷ್ಣ ದೇವರು ತಂದ ಪಾರಿಜಾತದ ಗಿಡವಿದು
ಲಕ್ನೋಗೆ ಹೊರಟು ನಿಂತಾಗ ಒಂದು ವಿಷಯವನ್ನು ಗೂಗಲ್ ಹೇಳಿತು: ಕೃಷ್ಣ ಸ್ವರ್ಗದಿಂದ ಸತ್ಯಭಾಮೆಗೆಂದೇ ಭೂಮಿಗೆ ತಂದ ಪಾರಿಜಾತದ ಗಿಡ ಈಗಲೂ ಇದೆ ಎಂದು ಸೂಚಿಸಿತು. ಲಕ್ನೋದಿಂದ ಕೇವಲ 40 ಕಿಲೋಮೀಟರ್ಗಳ ದೂರದಲ್ಲಿ ದೊಡ್ಡ ಬಲುದೊಡ್ಡ ಮರವಾಗಿ ಎಂದು ಗೊತ್ತಾಯಿತು. ಸರಿ ಮತ್ತೆ, ಇಬ್ಬರು ಹೆಂಡಿರ ಜಗಳದಲ್ಲಿ ಭೂಲೋಕಕ್ಕೆ ಇಳಿದು ಬಂದ ವಿಷಯ ಎಂದರೆ ಕುತುಹಲ ಇರದಿರಲು ಸಾಧ್ಯವೇ ? ಆ ಪುರಾತನ ಮರವನ್ನು ನೋಡಿದರೆ ಅದರ ಪಕ್ಕ ಸತ್ಯಭಾಮೆಯ ಮಂದಿರಕ್ಕೆ ಬದಲಾಗಿ ರುಕ್ಮಿಣಿದೇವಿ ಮಂದಿರವಿದೆ.
ಲ್ಯಾಪ್ಲ್ಯಾಂಡ್: ಒಂದು ಕನಸಿನ ಪಯಣ
ನೋಡನೋಡುತ್ತಿದ್ದಂತೆ ಲ್ಯಾಪ್ಲಾಂಡ್ ಪ್ರವಾಸದ ದಿನ ಬಂದೆ ಬಿಟ್ಟಿತು. ಮ್ಯುನಿಕ್ನಿಂದ ಹೆಲ್ಸಿಂಕಿಗೆ ವಿಮಾನ. ಫಿನ್ಲ್ಯಾಂಡ್ ರಾಜಧಾನಿಯಾದ ಹೆಲ್ಸಿಂಕಿ ಬಾಲ್ಟಿಕ್ ಸಮುದ್ರ ತೀರದ ಒಂದು ನಗರ. ಹೆಲ್ಸಿಂಕಿ ಹತ್ತಿರ ಹತ್ತಿರ ಬರುತ್ತಿದ್ದಂತೆ ಬಾಲ್ಟಿಕ್ ಸಮುದ್ರವೂ ಹೆಪ್ಪುಗಟ್ಟಿದ ದೃಶ್ಯಗಳು ವಿಮಾನದೊಳಗೆ ಕೂತಿದ್ದ ನನ್ನ ಬೆನ್ನುಹುರಿಯಲ್ಲಿ ನಡುಕ ಹುಟ್ಟಿಸಿತು! ದೊಡ್ಡ ಹಡಗೊಂದು ಹೆಪ್ಪುಗಟ್ಟಿರುವ ಹಿಮವನ್ನು ಸೀಳಿಕೊಂಡು ಮುನ್ನುಗ್ಗುತ್ತಿರುವ ದೃಶ್ಯ ಈಗಲೂ ಕಣ್ಣಿಗೆ ಕಟ್ಟಿದಂತಿದೆ.
‘ದೂರದ ಹಸಿರು’ ಸರಣಿಯಲ್ಲಿ ಲಾಪ್ಲ್ಯಾಂಡ್ ಪ್ರವಾಸದ ಅನುಭವಗಳನ್ನು ಹಂಚಿಕೊಂಡಿದ್ದಾರೆ ಗುರುದತ್ ಅಮೃತಾಪುರ
ಬಾಬ್ಬಿ ಎಂಬ ಪ್ರೇಮದ ಕುರುಹನ್ನು ಹುಡುಕಿಕೊಂಡು…
ತಲೆಯೊಳಗೆ ಬಲ್ಬಿನ ಥಕಪಕ ಕುಣಿತ. ‘ಅರೆ, ಇವನು ಅವನೇ ಅಲ್ವಾ? ಎಲ್ಲಿದ್ದಾನೆ? ನಾನು ಯಾಕೆ ಅವನನ್ನು ನೋಡದೆಯೇ, ಭೇಟಿ ಮಾಡದೆ ವಾಪಸ್ಸು ಬಂದುಬಿಟ್ಟೆ? ಛೆ ಛೆ, ಅವನೂರಿಗೆ ಬಂದು ಅವನನ್ನು ಮುದ್ದು ಮಾಡದೆ, ಅಪ್ಪಿಕೊಳ್ಳದೆ… ಓಹ್…’ ಸ್ವಾಗತ ಕೊಠಡಿಗೆ ಕರೆ ಮಾಡಿದೆ. ಅವನ ವಿಳಾಸ ಸಿಕ್ಕಿತು. ಅಯ್ಯೋ, ಅವನನ್ನು ನೋಡದೆಯೇ ಆ ರಾತ್ರಿ ಕಳೆಯಬೇಕಿತ್ತು. ಸೂರ್ಯ ಕರೆಗಂಟೆ ಒತ್ತಿದ್ದೆ ತಡ, ಗಡಿಬಿಡಿಸಿಕೊಂಡು ಬೆಚ್ಚನೆಯ ಬಟ್ಟೆ ತೊಟ್ಟು ಅವನಲ್ಲಿಗೆ ಓಡತೊಡಗಿದೆ.
‘ಕಂಡಷ್ಟೂ ಪ್ರಪಂಚ’ ಅಂಕಣದಲ್ಲಿ ಬಾಬ್ಬಿ…
ಜೀವಂತ ಬೇರುಗಳ ಸೇತುವೆಯ ಮೇಲೆ ನಡೆಯುತ್ತಾ…
ಸದಾ ಮೇಲೆ ಅಲೆಯುತ್ತಿರುವ ಮೋಡ, ಕೆಳಗೆ ನೀರು ತುಂಬಿದ ಭೂಮಿ, ಬೀಳುವ ಸಮೃದ್ಧ ಮಳೆಯಿಂದಾಗಿ ದಟ್ಟವಾಗಿ ಬೆಳೆಯುವ ಕಾಡು ದೂರದಿಂದ ನೋಡಲು ರಮಣೀಯವೆನಿಸಿದರೂ ಅದರ ಸುತ್ತಲೂ ಜೀವನ ಕಟ್ಟಿಕೊಳ್ಳಲು ಕಠಿಣ ಸವಾಲೊಡ್ಡುತ್ತದೆ. ಆದರೆ ಮಾನವನ ಜೀವನ ಮಾಡುವ ತುಡಿತ ಎಂತಹ ಪ್ರಕೃತಿ ಸವಾಲುಗಳನ್ನೂ ಮೀರುತ್ತದೆ ಎನ್ನುವುದಕ್ಕೆ ಈ ಪ್ರದೇಶದಲ್ಲಿ ವಾಸಿಸುತ್ತಿರುವ ಖಾಸಿ ಜನಾಂಗವೇ ಸಾಕ್ಷಿ. ಖಾಸಿಗಳ ಭಾಷೆ ಖಾಸಿ, ವಾಸಿಸುವ ಬೆಟ್ಟ ಖಾಸಿ.
ಗುರುದತ್ ಅಮೃತಾಪುರ ಬರೆವ ಹೊಸ ಸರಣಿ ಇಂದು ಆರಂಭ
ಹೊಸ ಊರಿಗೆ ಪ್ರವಾಸ ಹೋಗುವ ಖುಷಿ ಇಮ್ಮಡಿಯಾಗುವುದು ಆ ಸ್ಥಳದ ಪೂರ್ವಾಪರವನ್ನು ತಿಳಿದಾಗ. ಗುರುದತ್ ಅಮೃತಾಪುರ ಅವರು ಪ್ರವಾಸವನ್ನು ಇಷ್ಟಪಡುವವರು. ಜೊತೆಗೆ ಆ ಜಾಗಗಳ ಇತಿಹಾಸವನ್ನೂ ಅರಿಯುವ ಕುತೂಹಲ ಹೊಂದಿದವರು. ಯುರೋಪ್ ಖಂಡದ ಈಶಾನ್ಯ ಭಾಗದಲ್ಲಿರುವ ಒಂದು ಪುಟ್ಟ ರಾಷ್ಟ್ರ. ಭಾರತದಂತೆಯೇ ಅಹಿಂಸಾತ್ಮಕ ಹೋರಾಟದ ಹಾದಿಯನ್ನು ಹಿಡಿದ ದೇಶವದು. ಎಲೆಮರೆಯ ಕಾಯಿ ಎಸ್ಟೋನಿಯಾದ ರಾಜಧಾನಿ ತಾಲಿನ್ ಕುರಿತ ಬರಹದೊಂದಿಗೆ ತಮ್ಮ ಸರಣಿಯನ್ನು ಅವರು ಆರಂಭಿಸಿದ್ದಾರೆ.
ನೂರು ಕಲ್ಲುಗಳಲ್ಲಿ ಒಂದು ಮುತ್ತು ಹುಡುಕುವ ಬಿರ್ಜು ಮಹಾರಾಜ್
ಸಿನೆಮಾ ರಂಗಕ್ಕೆ ಹೋಗಬೇಡ ಎಂದ ತಾಯಿಯ ಮಾತನ್ನು ಪಕ್ಕಕ್ಕಿಟ್ಟು ಮುಂಬೈಗೆ ಬಂದಾಗ ಜೇಬಿನಲ್ಲಿ ಕಿರುಗಾಸು ಇಲ್ಲದ ಬಿರ್ಜು ಮಹಾರಾಜ್ ಮಾಧುರಿ ದೀಕ್ಷಿತ್ ರಿಂದ ಹಿಡಿದು ದೀಪಿಕಾಳವರೆಗೂ ನೂರಕ್ಕೂ ಹೆಚ್ಚು ಸಿನೆಮಾಗಳಿಗೆ ನೃತ್ಯ ಸಂಯೋಜನೆ ಮಾಡಿದ್ದಾರೆ. ಆದರೂ ಪ್ರೀತಿ ಮಾಡುವುದು ಮಾತ್ರ ಕಮಲಹಾಸನ್ನನ್ನು. ವಿಶ್ವರೂಪಂ ಸಿನೆಮಾ ಸಮಯದಲ್ಲಿ ‘ಆತ ತರಬೇತಿ ಸಮಯದಲ್ಲಿ ನೃತ್ಯ ಮಾಡುತ್ತಿದ್ದನ್ನು ನೋಡಿ ಎಷ್ಟೋ ಬಾರಿ ನಾನೇ ನರ್ತಿಸುತ್ತಿದ್ದೇನೆ ಎನ್ನಿಸಿಬಿಡುತ್ತಿತ್ತು’ ಎನ್ನುವಾಗ ಬಿರ್ಜು ಅವರ ಉಸಿರಿನಲ್ಲಿ ಜೀವ ಆಡಿದಂತೆನಿಸಿತು.
ಅಂಜಲಿ ರಾಮಣ್ಣ ಬರೆಯುವ ಪ್ರವಾಸ ಅಂಕಣ ಇಂದು ಆರಂಭ
ಸದಾ ಹೊಸ ನೋಟವನ್ನು ಕೊಡುವ ಪ್ರವಾಸವೆಂದರೆ ಎಲ್ಲರಿಗೂ ಇಷ್ಟ. ಬೆಟ್ಟಗಳನ್ನು ಏರುವುದು, ಹೊಸ ಜನರ ಭೇಟಿ ಮಾಡುವುದು, ವಿವಿಧ ಪ್ರದೇಶಗಳ ಹಿನ್ನೆಲೆ ಅರಿಯುವುದೆಂದರೆ ಅಂಜಲಿ ರಾಮಣ್ಣ ಅವರಿಗಿಷ್ಟ. ಮಕ್ಕಳ ಹಕ್ಕುಗಳ ಹೋರಾಟಗಾರ್ತಿಯಾಗಿ, ಮಹಿಳಾ ಹಕ್ಕುಗಳ ಬಗ್ಗೆ ನಿಖರವಾದ ನಿಲುವುಗಳನ್ನು ಹೇಳಬಲ್ಲ ಅವರು, ತಮ್ಮ ಸೂಕ್ಷ್ಮ ಒಳನೋಟಗಳನ್ನು ‘ಫ್ಯಾಮಿಲಿ ಕೋರ್ಟ್ ಕಲಿಕೆ’ ಎಂಬ ಶೀರ್ಷಿಕೆಯಡಿ ಮಂಡಿಸುವುದುಂಟು.
ಮಥುರಾ ನಗರಿಯಲ್ಲೊಂದು ಭಾವಯಾನ
ವ್ರಜ ಪರಿಕ್ರಮದಲ್ಲಿ ದೀರ್ಘ ಮತ್ತು ಚುಟುಕಾದ ಎರಡು ರೀತಿಯ ಪರಿಕ್ರಮಗಳಿವೆ. ಚಿಕ್ಕಮಟ್ಟದ ಪರಿಕ್ರಮದಲ್ಲಿ ಮಥುರೆಯ ಮುಖ್ಯ ದೇಗುಲ ಮತ್ತು ಪುಣ್ಯಸ್ಥಾನಗಳಿಗೆ ಭೇಟಿ ನೀಡುವುದಷ್ಟೇ ಸೇರಿದೆ. ದೀರ್ಘ ಪರಿಕ್ರಮದಲ್ಲಿ ನಂದಗಾವ್ ಮತ್ತು ಬರ್ಸಾನಾಕ್ಕೆ ಪಾದಯಾತ್ರೆಯನ್ನು ಕೈಗೊಳ್ಳುವುದು ಸೇರಿದೆ. ನಾವೆಲ್ಲ ಕೆಲವೇ ದಿನಗಳ ರಜೆಯಲ್ಲಿ ಮಥುರೆಯನ್ನು ಕ್ಷಿಪ್ರವಾಗಿ ನೋಡಿ ಬರುವವರ ಸಾಲಿಗೆ ಸೇರಿದವರು. ಮಥುರಾ ಯಾತ್ರೆಯ ಕುರಿತ ತಮ್ಮ ಅನುಭವಗಳನ್ನು ಪ್ರಿಯಾ ಭಟ್ ಕಲ್ಲಬ್ಬೆ ಅವರು ಇಲ್ಲಿ ದಾಖಲಿಸಿದ್ದಾರೆ.
ಅಚಲ ಸೇತು ಬರೆದ ‘ಕೀವೀ ನಾಡಿನ ಪ್ರವಾಸ ಕಥನ’
ಮುಗಿಲು ಮುಟ್ಟುವ ಬಂಡೆಗಳಿಂದ ಧುಮ್ಮಿಕ್ಕುವ ಬಿಳಿಯ ಜಲರಾಶಿಯನ್ನು ನೋಡುತ್ತಾ ಟಾಸ್ಮನ್ ಸಮುದ್ರದವರೆಗೆ ನೌಕಾ ವಿಹಾರ ಮಾಡುತ್ತ ಸಾಗಬಹುದು. ಅಚ್ಚರಿಯ ಸಂಗತಿಯೆಂದರೆ ಖಾರಿಯ ಉಪ್ಪು ನೀರಿನ ಕೆಳ ಪದರದ ಮೇಲೆ ಸುಮಾರು ಹತ್ತು ಅಡಿಗಳಷ್ಟು ಸಿಹಿ ನೀರಿನ ಪದರ ಸದಾ ಕಾಲ ಶೇಖರಣೆಯಾಗಿರುತ್ತದೆ. ಮೇಲಿನ ಮಳೆ ಕಾಡುಗಳಿಂದ ರೆಂಬೆ ಕೊಂಬೆಗಳ ಸಾರವನ್ನು ಹೊತ್ತು ತರುವ ಕಲಗಚ್ಚಿನಂತಹ ಈ…”









