Advertisement

ಪ್ರವಾಸ #-test

ಯೆಲ್ಲೋಸ್ಟೋನ್ : ಸತ್ಯಂ ಶಿವಂ ಸುಂದರಂ

ಯೆಲ್ಲೋಸ್ಟೋನ್ : ಸತ್ಯಂ ಶಿವಂ ಸುಂದರಂ

ಇಲ್ಲಿನ ಬಿಸಿನೀರ ಬುಗ್ಗೆಯ ಅನುಭವವನ್ನು ಸ್ವಲ್ಪವಾದರೂ ಪಡೆದುಕೊಳ್ಳಬೇಕೆಂದಲ್ಲಿ ನೀವು ಈ ಪರೀಕ್ಷೆ ಉತ್ತರ ಬಾಗಿಲಿನ ಹೊರಗೆ ಅನತಿ ದೂರದಲ್ಲಿ ಹರಿವ ಗಾರ್ಡನರ್ ನದೀತೀರಕ್ಕೆ ನಡೆದುಕೊಂಡು ಹೋಗಬೇಕು. ಅಲ್ಲಿ ಒಂದು ನಿರ್ದಿಷ್ಟ ಪ್ರದೇಶದಲ್ಲಿ ತಣ್ಣಗೆ ಹರಿವ ನದಿಗೆ ಪಕ್ಕದ ಭೂಮಿಯಾಳದೊಳಗಿಂದ ಬಿಸಿನೀರ ಬುಗ್ಗೆಯೊಂದು ಹರಿದು ಬಂದು ಸೇರಿಕೊಳ್ಳುತ್ತೆ. ಇಲ್ಲಿ ಕೂತರೆ ಸ್ನಾನದ ನೀರನ್ನು ಹದಮಾಡಿಕೊಳ್ಳುವಂತೆ ಬಿಸಿ ನೀರು ತಣ್ಣೀರು ಬೆರೆಸಿಕೊಳ್ಳುತ್ತ ಬೆಚ್ಚಗೆ ಕುಳಿತುಕೊಳ್ಳಬಹುದು.
ʻಜಗದ ಜಗಲಿಯಲಿ ನಿಂತುʼ ಪ್ರವಾಸ ಬರಹಗಳ ಸಾಲಿನಲ್ಲಿ ಅಮೆರಿಕಾದ ಯೆಲ್ಲೋಸ್ಟೋನ್ ರಾಷ್ಟ್ರೀಯ ಉದ್ಯಾನವನದ ಕುರಿತು ಬರೆದಿದ್ದಾರೆ ವೈಶಾಲಿ ಹೆಗಡೆ

read more
ಸ್ಥಬ್ಧ ತುಟಿಗಳು ಪಿಸುಗುಡುವ ಹೃದಯವೆಂಬ ರೂಪಕ

ಸ್ಥಬ್ಧ ತುಟಿಗಳು ಪಿಸುಗುಡುವ ಹೃದಯವೆಂಬ ರೂಪಕ

ನಾನು ಅಸ್ಸಾಮ್‌ ನ ಸಾಹಿತಿ ವೈ.ಡಿ ತೊಂಗ್ಚಿ  ಅವರನ್ನು ಭೇಟಿ ಮಾಡಿದೆ. ಭಾಷೆಯ ಬಗ್ಗೆ ಅವರ ಮಾತುಗಳು ಬಹಳ ಮುಖ್ಯವಾದವು. ʻʻಇಲ್ಲಿನ ಶಾಲೆಗಳಲ್ಲಿ ಈಗ ಅಸ್ಸಾಮಿಸ್ ಭಾಷೆಯನ್ನು ಕಲಿಸುತ್ತಿಲ್ಲ. ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳನ್ನು ಮಾತ್ರ ಕಲಿಸಲಾಗುತ್ತಿದೆ. ಅರುಣಾಚಲದ ಎಲ್ಲಾ ಭಾಷೆಗಳು ನಶಿಸಿಹೋಗಿ ಹಿಂದಿ ಈ ರಾಜ್ಯದ ಭಾಷೆಯಾಗಿ ಬಿಡುವ ದಿನ ದೂರವಿಲ್ಲ” ಎನ್ನುತ್ತಲೇ ತೊಂಗ್ಚಿಯವರು, ಲಿಪಿ ಇರುವ ಭಾಷೆಗಳನ್ನೇ ಉಳಿಸಿಕೊಳ್ಳುವುದು ಕಷ್ಟವಾಗುತ್ತಿರುವ ಈ ಕಾಲದಲ್ಲಿ ಲಿಪಿ ಇಲ್ಲದ ಭಾಷೆಯನ್ನು ಉಳಿಸಿಕೊಳ್ಳುವುದು ಅಸಾಧ್ಯವೇ ಸರಿ. ಅಂಜಲಿ ರಾಮಣ್ಣ ಬರಹ

read more
ಲಲಿತಾಸಹಸ್ರನಾಮ ಹುಟ್ಟಿದ್ದು ಈ ದೇವಾಯದಲ್ಲೇ

ಲಲಿತಾಸಹಸ್ರನಾಮ ಹುಟ್ಟಿದ್ದು ಈ ದೇವಾಯದಲ್ಲೇ

ಅಲ್ಲಿನ ಅರ್ಚಕರು ಒಂದು ಘಟನೆಯನ್ನು ಹೇಳಿದರು. ೧೯೯೯ ರಲ್ಲಿ ಬೆಂಗಳೂರಿನ ಒಬ್ಬ ಮಹಿಳೆಗೆ ಕನಸಿನಲ್ಲಿ ದೇವಿಯ ದರ್ಶನವಾಗಿ ತನಗೆ ಕಾಲ್ಗೆಜ್ಜೆ ನೀಡೆಂದು ತಿಳಿಸಿದಳಂತೆ. ಆದರೆ ಆ ದೇವಿ ಯಾರು, ದೇವಸ್ಥಾನ ಎಲ್ಲಿದೆ ಅನ್ನುವುದು ಆಕೆಗೆ ತಿಳಿದಿರಲಿಲ್ಲ. ಯಾವುದೋ ಪತ್ರಿಕೆಯಲ್ಲಿನ ಚಿತ್ರ ನೋಡಿ ಇದೇ ಕನಸಿನಲ್ಲಿ ಬಂದ ದೇವಿ ಎಂದು ಗುರುತಿಸಿ ತಿರುಮೀಯಚೂರಿಗೆ ಹೋಗುತ್ತಾಳೆ. ಅಲ್ಲಿ ಕಾಲ್ಗೆಜ್ಜೆಯನ್ನು ದೇವರಿಗೆ ತೊಡಿಸಿರೆಂದು ಕೇಳಿದಾಗ ಅರ್ಚಕರು ಹಾಗೆ ಹಾಕಲು ಆಗುವುದಿಲ್ಲ ಎನ್ನುತ್ತಾರೆ. ಆಕೆ ಪದೇ ಪದೇ ಕೇಳಿಕೊಂಡು ತನ್ನ ಕನಸನ್ನು ಹೇಳಿಕೊಂಡ ಮೇಲೆ ಪರಿಶೀಲಿಸಿದಾಗ ಕಾಲಿನ ಸುತ್ತ ಗೆಜ್ಜೆ ತೊಡಿಸಲು ಸಣ್ಣ ತೂತು ಇರುವುದು ಕಂಡುಬರುತ್ತದೆ.
ಗಿರಿಜಾ ರೈಕ್ವ ಬರೆಯುವ ಅಂಕಣ ‘ದೇವಸನ್ನಿಧಿ’

read more
ಅಂದುಕೊಳ್ಳದ ಪವಾಡ ಹೇಗೆ ಸಂಭವಿಸಿತು?

ಅಂದುಕೊಳ್ಳದ ಪವಾಡ ಹೇಗೆ ಸಂಭವಿಸಿತು?

ಬೆಳಗ್ಗೆ ನಾಲ್ಕಕ್ಕೇ ಆಶ್ರಮಕ್ಕೆ ಹೋದರೆ ಬಾಬಾರ ದರ್ಶನವಾಗುತ್ತೆ ಅಂತ ಅಲ್ಲಿ ಯಾರೋ ಹೇಳಿದರು. ಸರಿರಾತ್ರಿಯವರೆಗೂ ಬೀದಿ ಸುತ್ತಿ ಮೀನಖಂಡ ಮುನಿಸಿಕೊಂಡರೂ ನಿದ್ದೆಯ ಸುಳಿವಿಲ್ಲ. ನಾಲ್ಕಕ್ಕೆ ಎದ್ದೆ ಆದರೆ ಬಿಳಿಬಣ್ಣದ ಬಟ್ಟೆ ನನ್ನ ಬಳಿ ಇರಲಿಲ್ಲ. ಅಲ್ಲಿ ಬಾಬಾ ಭಕ್ತರೆಲ್ಲಾ ಬೆಳ್ಳಂಬಿಳಿ ಬಿಟ್ಟರೆ ಕೇಸರಿ ಬಟ್ಟೆನೇ ತೊಡುವುದು. ನಾನು ಹೇಗೂ ಭಕ್ತೆ ಅಲ್ಲವಲ್ಲ, ಹಾಗಾಗಿ ಹಸಿರಾದರೂ ಏನಂತೆ ಎಂದುಕೊಂಡು ಇದ್ದ ಒಂದು ಹಸಿರು ಬಣ್ಣದ ಚೂಡಿದಾರ್ ಹಾಕಿಕೊಂಡು ಹೊರಟೆ. “ಕಂಡಷ್ಟೂ ಪ್ರಪಂಚ” ಪ್ರವಾಸ ಅಂಕಣದಲ್ಲಿ ಅಂಜಲಿ ರಾಮಣ್ಣ ಬರಹ

read more
ಬರಿ ಬಿಯರಿನ ಕತೆಯಲ್ಲ ಇದು…

ಬರಿ ಬಿಯರಿನ ಕತೆಯಲ್ಲ ಇದು…

ಬಹಳಷ್ಟು ಪಬ್‌ಗಳು ಹತ್ತು, ಹನ್ನೆರಡನೇ ಶತಮಾನದಲ್ಲಿ ಡಬ್ಲಿನ್ ಬೀದಿಗಳಲ್ಲಿ ತಲೆದೋರಿದವು. ಮುಂದೆ ಇವು ಸಮಾನ ಆಸಕ್ತರ ಕೇಂದ್ರಗಳಾಗಿ ಸಾಮಾಜಿಕ ಹರಟೆಕಟ್ಟೆಗಳಾಗಿ ಬೆಳೆದವು. ಕೆಲವು ಪಬ್‌ಗಳಲ್ಲಿ ಬರೀ ವ್ಯಾಪಾರಸ್ಥರು ಸೇರಿಕೊಂಡರೆ, ಮತ್ತೆ ಹಲವು ಸಂಗೀತಗಾರರ ಕೇಂದ್ರಗಳಾದವು. ಮತ್ತೆ ಹಲವು ಸಾಹಿತಿಗಳೂ ಕವಿಗಳೂ ಸೇರುವ ಸ್ಥಳಗಳಾದವು. ಮತ್ತೆ ಕೆಲವು ರಾಜಕೀಯದವರು, ಗಣ್ಯರು, ಶ್ರೀಮಂತರು ಸೇರುವ ಜಾಗಗಳು… ವೈಶಾಲಿ ಹೆಗಡೆ ಐರಿಷ್ ಬರಹ

read more
ಮನದೊಳಗೆ ಅಚ್ಚಾಗಿದೆ ಸ್ಲೊವೇನಿಯಾ ಫೋಟೊಫ್ರೇಮ್

ಮನದೊಳಗೆ ಅಚ್ಚಾಗಿದೆ ಸ್ಲೊವೇನಿಯಾ ಫೋಟೊಫ್ರೇಮ್

ಜಸ್ನಾ ಸರೋವರದ ಪ್ರವಾಸಿಗರಿಗೆ ಒಂದು ಅನಿರೀಕ್ಷಿತ ಉಡುಗೊರೆ ಕಾದಿರುತ್ತದೆ. ಅದು ಇಲ್ಲಿನ ಪ್ರಮುಖ ಆಕರ್ಷಣೆ – ಫೋಟೋ ಫ್ರೇಮ್! ಇಲ್ಲಿ ಬರುವ ಪ್ರವಾಸಿಗಳಿಗೆ ಫೋಟೊಗೋಸ್ಕರವಾಗಿ ಮರದಲ್ಲಿ ಮಾಡಿದ ಒಂದು ಸುಂದರವಾದ ಫೋಟೋ ಫ್ರೇಮ್ ಇದೆ. ಅದರ ಕೊನೆಯಲ್ಲಿ ಸ್ಲೋವೇನಿಯಾದ ಅಜ್ಜ ಪ್ರತಿಯೊಬ್ಬರ ಜೊತೆಗೂ ನೆನಪಾಗಿ ಅವರವರ ಮನೆಗಳಿಗೆ ತೆರಳುತ್ತಾನೆ. ನಾವೆಲ್ಲರೂ ಕೂತು ತೆಗೆಸಿಕೊಂಡಿರುವ ಫೋಟೋ ನೋಡಿದರೆ ನಿಮಗೊಂದು ಕ್ಷಣಕ್ಕೆ ಅಚ್ಚರಿಯಾಗುವುದು ಖಚಿತ. ಆ ಅಜ್ಜ ನಮ್ಮಲ್ಲಿಯ ಯಾರೋ ಒಬ್ಬರು ಎಂಬಂತೆ ಕಾಣುವಷ್ಟು ಚೆನ್ನಾಗಿ ಮೂಡಿ ಬಂದಿರುವ ಕೆತ್ತನೆಯ ಕಲಾವಿದನಿಗೆ ಹಾಗೂ ಈ ಕಲ್ಪನೆಯನ್ನು ಸಾಕಾರಗೊಳಿಸಿದ ಇಲ್ಲಿಯ ಪ್ರವಾಸೋದ್ಯಮ ಇಲಾಖೆಗೆ ನನ್ನ ಧನ್ಯವಾದಗಳು.

read more
ದಿವಾನಿಯಾದ ಮಸ್ತಾನಿಯ ಕತೆ

ದಿವಾನಿಯಾದ ಮಸ್ತಾನಿಯ ಕತೆ

ಹೌದಲ್ಲ. ಇವಳು ಎಲ್ಲಿಂದ ಬಂದಳು ಎಲ್ಲಿಗೆ ಹೋದಳು? ಸಂಜಯ್ ಲೀಲಾ ಬನ್ಸಾಲಿಯ ವೈಭವಪರದೆಯಲ್ಲಿ ದೀಪಿಕಾಳ ಮೂಲಕ ಅನಾವರಣಗೊಂಡವಳು.. ಕೊಟ್ಟಿಗೆಯಂತಾಗಿದ್ದ ಮನದ ನಡುವಿನಲ್ಲಿ ನೊರೆ ಹಾಲ್ಗರೆದುಕೊಟ್ಟ, ಬಾಜಿರಾಯನ ‘ಮಸ್ತಾನಿ’ಯನ್ನು ಹುಡುಕಿ ನಾನು ಹೊರಟೆ. ಹಾಡುತ್ತಿದ್ದೆ ನಾನೂ “ಕಹತೆ ಹೆ ಯೇ ದಿವಾನಿ ಮಸ್ತಾನೀ ಹೋಗಯೀ…” ಅವಳು ಇರಲೇ ಇಲ್ಲ, ಅವಳು ಮುಸ್ಲಿಂ ಆಗಿರಲಿಲ್ಲ, ಅವಳು ಬಾಜಿರಾಯನಿಗಿಂತ ಮೊದಲೇ ಸತ್ತಳು, ಆತ್ಮಹತ್ಯೆ ಮಾಡಿಕೊಂಡಳು ವಗೈರೆ ವಗೈರೆ ಎಂದು ಮಾಧ್ಯಮಗಳು ಟಿಆರ್‌ಪಿ ಸಂಕಷ್ಟದಲ್ಲಿ ಹೊರಳಿ ಧುಮ್ಮಿಕ್ಕುತ್ತಿರುವಾಗ ನಾನು ಹಾಡುತ್ತಿದ್ದೆ “ಜ಼್ಅಖಮ್ ಐಸ ತೂನೇ ಲಗಾಯಾ… ಮರ್ಹಮ್ ಐಸ ತೂನೇ ಲಗಾಯಾ… ಮೇ ದಿವಾನಿ ಹೋಗಯೀ… ಹಾಂ ದಿವಾನೀ ಹೋಗಯೀ” ಅಂಜಲಿ ರಾಮಣ್ಣ ಬರೆಯುವ `ಕಂಡಷ್ಟೂ ಪ್ರಪಂಚ’ ಅಂಕಣದಲ್ಲಿ ಹೊಸ ಬರಹ

read more
ದೇವರು ಧರಿಸುವ ಬಟ್ಟೆಯೂ ದೇವರಿಗೆ ಕೊಟ್ಟ ಮಾತೂ..

ದೇವರು ಧರಿಸುವ ಬಟ್ಟೆಯೂ ದೇವರಿಗೆ ಕೊಟ್ಟ ಮಾತೂ..

ದೇವರಿಗೆ ಉಡುಪಾಗಿ ನೇಯುವುದು ಒಂದಾದರೆ, ದೇವರನ್ನೇ ನೇಯುವುದು  ಕೂಡ ಇನ್ನೊಂದು ಬಗೆಯ  ವಸ್ತ್ರಕಲೆ. ಗುಜರಾತಿನಲ್ಲಿ ಬಟ್ಟೆಯ ಮೇಲೆ ಚಿತ್ರ ಬರೆಯುವ ಮಾತಾ ನಿ ಪಚ್ಚೆಡಿ ಅನ್ನುವ ಸಂಪ್ರದಾಯ ಇದೆ. ಇದನ್ನು ಮಾಡುವವರು ಜಲ್ಲಿ ಕಲ್ಲು ಒಡೆಯುವ, ಅಷ್ಟೇನೂ ಅನುಕೂಲಸ್ಥರಲ್ಲದ ವರ್ಗ.  ಅವರಿಗೆ ದೇವಾಲಯಕ್ಕೆ ಪ್ರವೇಶ ಕೊಡಲಿಲ್ಲ ಅಂತ ಬಟ್ಟೆಯ ಮೇಲೆ ದೇವಿಯ ಚಿತ್ರ ಬರೆದರು. ಅದನ್ನೇ ಪೂಜೆ ಮಾಡುತ್ತಾ ಬಂದರು. ಅವರು ಸೀರೆಗಳ ಮೇಲೆ ವಿಧವಿಧವಾದ ದೇವಿಚಿತ್ರಗಳನ್ನು ಕಲಾತ್ಮಕವಾಗಿ, ಗಾಢ ಬಣ್ಣಗಳಲ್ಲಿ ಬಿದಿರಿನ ಕಡ್ಡಿಗಳಿಂದ ಮೂಡಿಸುತ್ತಾರೆ. ಅದನ್ನು ಗುಜರಾತಿನ ಕಲಮ್‌ಕಾರಿ ಎನ್ನುತ್ತಾರೆ. ಅವರಿಗೆ ಅದು ಬರಿ ಬಟ್ಟೆಯಲ್ಲ, ದೇವಿಯ ಆರಾಧನೆ.
ಗಿರಿಜಾ ರೈಕ್ವ ಬರೆಯುವ ಅಂಕಣ ‘ದೇವಸನ್ನಿಧಿ’

read more
ಉತ್ಸಾಹ ಚಿಲುಮೆಯ ತೋಳಿಗೆ ಬಳ್ಳಿಯಾಗಿದ್ದ ನಾನು!

ಉತ್ಸಾಹ ಚಿಲುಮೆಯ ತೋಳಿಗೆ ಬಳ್ಳಿಯಾಗಿದ್ದ ನಾನು!

ಧರ್ಮಶಾಲಾದಿಂದ 112 ಕಿಲೋಮೀಟರ್‌ಗಳಷ್ಟು ದೂರದಲ್ಲಿ ಆಕರ್ಷಿಸುತ್ತದೆ ಖಜ್ಜಿಯಾರ್ ಗಿರಿಧಾಮ. ದೌಲಾದರ ಪರ್ವತಶ್ರೇಣಿಯ ನಡುವೆ 12ನೆಯ ಶತಮಾನದಲ್ಲಿ ಚಂಬಾ ರಾಜಮನೆತನದವರು ಕಟ್ಟಿಸಿರುವ, ಸಂಪೂರ್ಣ ಮರದಿಂದ ಮಾಡಿರುವ ಅರಮನೆ. ಅದರ ಬಾಗಿಲುವಾಡಗಳಿಗೆ ಕಟ್ಟಿಕೊಂಡಿರುವ ಚಿನ್ನದ ತಗಡು, ಅರಮನೆಯ ಒಳಗೇ ಇರುವ ಖಾಜ್ಜಿ ನಾಗಮಂದಿರ. ಶಿವ ಮತ್ತು ಹಿಡಿಂಬೆಯ ಮೂರ್ತಿಗಳೂ ಇರುವುದು ಇಲ್ಲಿನ ಆಕರ್ಷಣೆ. ನವರಾತ್ರಿಯಲ್ಲಿ ಮಾತ್ರ ಇಲ್ಲಿ ಪೂಜೆ ನಡೆಯುತ್ತದೆ. ಬಾಕಿಯಂತೆ ದೈವಭಕ್ತ ಪ್ರವಾಸಿಗರು ತಾವೇ ಕುಂಕುಮವಿಟ್ಟು ಪೂಜೆ ಮಾಡಿ ಬರಬಹುದು.
ʻಕಂಡಷ್ಟೂ ಪ್ರಪಂಚʼ ಪ್ರವಾಸ ಅಂಕಣದಲ್ಲಿ ಅಂಜಲಿ ರಾಮಣ್ಣ ಬರಹ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ