Advertisement

ಪ್ರವಾಸ

ಕಲ್ಲಿನಲ್ಲಿ ಕಡೆದ ಆಲ್ಬಮ್‌, ತಾಡಿಪತ್ರಿ

ಕಲ್ಲಿನಲ್ಲಿ ಕಡೆದ ಆಲ್ಬಮ್‌, ತಾಡಿಪತ್ರಿ

ನಾನು ಮೊದಲು ಹೋಗಿದ್ದು ಬುಗ್ಗ ರಾಮಲಿಂಗೇಶ್ವರಕ್ಕೆ. ನಿತ್ಯ ಬರುವ ಭಕ್ತಾದಿಗಳನ್ನು ಬಿಟ್ಟರೆ ಹೆಚ್ಚು ಜನ ಇರಲಿಲ್ಲ. ವಿಜಯನಗರ ಶೈಲಿಯ ದೇವಾಲಯಗಳಲ್ಲಿ ಇರುವಂತೆ ಪ್ರವೇಶ ದ್ವಾರ ಎತ್ತರವಾಗಿದ್ದು, ಎರಡೂ ಬದಿಗಳಲ್ಲಿ ಗಂಗಾ, ಯಮುನೆಯರ ಶಿಲ್ಪಗಳಿಂದ ಕೂಡಿದೆ. ಇವು ಮಾನಸಿಕವಾಗಿ ನಮ್ಮನ್ನು ಗಂಗೆ, ಯಮುನೆಯರಿಂದ ಶುಚಿಗೊಳಿಸಿಕೊಂಡು ಒಳಕ್ಕೆ ಹೋಗುವ ಪ್ರತೀಕ. ದೇವಾಲಯದ ಪ್ರಶಾಂತತೆ ಹಾಗೂ ಅದರ ಬೃಹತ್‌ ಗಾತ್ರವನ್ನು ಕಂಡು ನನಗೆ ಒಂದು ಕಡೆ ಬೆರಗು ಜೊತೆಗೆ ಏನು ನೋಡಲಿ ಏನು ಬಿಡಲಿ ಅಂತ ಸ್ವಲ್ಪ ಹೊತ್ತು ತಲೆ ಕೆಟ್ಟ ನೊಣದ ಹಾಗೆ ಕ್ಯಾಮೆರಾ ಹಿಡಿದುಕೊಂಡು ಓಡಾಡಿದೆ.
‘ದೇವ ಸನ್ನಿಧಿ’ ಅಂಕಣದಲ್ಲಿ ತಾಡಿಪತ್ರಿ ಎಂಬ ಅಪರೂಪದ ಜಾಗದ ಕುರಿತು ಬರೆದಿದ್ದಾರೆ ಗಿರಿಜಾ ರೈಕ್ವ

read more
ದೇವಾಲಯಗಳ ಕಣಿವೆಯಲ್ಲಿ ಈಗ ಹಸಿರು ಚಿತ್ರಗಳು

ದೇವಾಲಯಗಳ ಕಣಿವೆಯಲ್ಲಿ ಈಗ ಹಸಿರು ಚಿತ್ರಗಳು

ನಾನು ನೆಲೆಸಿರುವ ಜರ್ಮನಿ ಹಾಗೂ ಸುತ್ತಲಿನ ದೇಶಗಳ ಇತಿಹಾಸ ಬಹಳ ಸಪ್ಪೆ ಎನ್ನಿಸುತ್ತದೆ. ಇವರು ಅರಮನೆ ಎಂದು ಕರೆಯುವ ಕಟ್ಟಡಗಳನ್ನು ಮೀರಿಸುವ ಮನೆಗಳನ್ನು ನಮ್ಮ ದೇಶದಲ್ಲಿ ಈಗಿನ ರಾಜಕಾರಣಿಗಳು, ಉದ್ಯಮಿಗಳು ಹೊಂದಿದ್ದಾರೆ. ಇಷ್ಟು ವರ್ಷಗಳ ಪ್ರವಾಸದಲ್ಲಿ ನಮ್ಮ ಮೈಸೂರಿನ ಭವ್ಯ ಅರಮನೆಯಂತಹ ಮತ್ತೊಂದನ್ನು ಇಲ್ಲಿ ನೋಡಲಿಲ್ಲ. ಸಾವಿರಾರು ವರ್ಷಗಳ ಹಿಂದಿನ, ಗತ-ವೈಭವಗಳಿಂದ ಕೂಡಿದ ಇತಿಹಾಸ ಅತಿ ವಿರಳ. ಆದರೆ ಯೂರೋಪಿನ ದಕ್ಷಿಣಕ್ಕೆ ಚಲಿಸಿದಂತೆ ಗ್ರೀಕ್, ರೋಮನ್ ಸಾಮ್ರಾಜ್ಯಗಳ ಕುರುಹುಗಳು ಕಾಣುತ್ತಿದ್ದಂತೆ ಕಣ್ಣು, ಕಿವಿ ಅರಳಿಬಿಡುತ್ತದೆ. ಗುರುದತ್ ಅಮೃತಾಪುರ ಬರಹ

read more
ಪ್ರಾರ್ಥನೆಯೊಂದೇ ಆಯ್ಕೆಯಾಗಿ ಉಳಿದಾಗ…

ಪ್ರಾರ್ಥನೆಯೊಂದೇ ಆಯ್ಕೆಯಾಗಿ ಉಳಿದಾಗ…

ಆ ದಿನ ಅಲ್ಲಿ ಹಾಗೆ ಆದಾಗ ಆಕೆಗೆ ಒಳಿತಾಗಲಿ ಎಂದು ಬಯಸಿದ್ದು ಅಲ್ಲಿದ್ದ ನೂರಾರು ಮನಸ್ಸುಗಳು. ಅನುಮಾನವೇ ಇಲ್ಲ. ಆದರೆ ನನ್ನ ಗಮನ ಆಕೆಯ ಇಬ್ಬರು ಹರೆಯದ ಹೆಣ್ಣುಮಕ್ಕಳಾದ ಶ್ರದ್ಧಾ ಮತ್ತು ಪೂಜಾರೆಡೆಗೆ ಇದ್ದದ್ದೂ ಸುಳ್ಳಲ್ಲ. ಇಡೀ ಗುಂಪಿನಲ್ಲಿ ಅವರಿಬ್ಬರಿಗೇ ಇಂಗ್ಲಿಷ್ ಬರುತ್ತಿದ್ದದ್ದು. ಸ್ವಂತ ತಾಯಿ ಕುಸಿದು ಬಿದ್ದಿದ್ದಾಳೆ. ಅಪ್ಪನಿಗೆ ದಿಗ್ಭ್ರಮೆಯಾಗಿದೆ. ಪುಟ್ಟ ತಮ್ಮ ಅಳುತ್ತಿದ್ದಾನೆ. ವಯಸ್ಸಾದ ನೆಂಟರಿಷ್ಟರೆಲ್ಲಾ ಆತಂಕಗೊಂಡಿದ್ದಾರೆ. ಡಾಕ್ಟರ್‌ಗಳು ಹತ್ತು ಪ್ರಶ್ನೆಗಳನ್ನು ಕೇಳುತ್ತಿದ್ದಾರೆ.
“ಕಂಡಷ್ಟೂ ಪ್ರಪಂಚ” ಪ್ರವಾಸ ಅಂಕಣದಲ್ಲಿ ವಿಮಾನ ಪ್ರಯಾಣದ ಒಂದು ಭಿನ್ನ ಅನುಭವವನ್ನು ಹಂಚಿಕೊಂಡಿದ್ದಾರೆ ಅಂಜಲಿ ರಾಮಣ್ಣ

read more
ಗಾಂಧಿತಾತನ ಜೊತೆಗೆ ಒಲಿವಿಯಾಳೂ ಸಿಕ್ಕಳು

ಗಾಂಧಿತಾತನ ಜೊತೆಗೆ ಒಲಿವಿಯಾಳೂ ಸಿಕ್ಕಳು

ವಿದ್ಯಾರ್ಥಿಗಳು, ಕಲಾವಿದರು ತಮ್ಮ ಖರ್ಚು ಸರಿದೂಗಿಸಿಕೊಳ್ಳಲು ಹೀಗೆ ಸ್ವಯಂಸೇವೆ ಮಾಡುತ್ತಾರೆ ಮತ್ತು ಪಗಾರ ಪಡೆಯುತ್ತಾರೆ. ಬಹಳಷ್ಟು ಸ್ಮಶಾನಗಳಿಗೆ ಭೇಟಿ ನೀಡಿದ್ದೇನೆ. ಅವುಗಳು ಪಾರ್ಕ್‌ನಂತೆ ಬಳಸಲ್ಪಡುತ್ತವೆ. ಸ್ವಚ್ಛತೆ ಮತ್ತು ಮೌನವು ಮಾರ್ದನಿಸುತ್ತಿರುತ್ತವೆ. ಕೆಲವು ಕಡೆ ಸಮಯ ನಿಗಧಿಯಾಗಿರುತ್ತದೆ, ಆದರೆ ಬಹುಪಾಲು ಸ್ಮಶಾನಗಳಿಗೆ ಸಾರ್ವಜನಿಕರು ದಿನದ ಯಾವ ಸಮಯದಲ್ಲಿಯಾದರೂ ಹೋಗಬಹುದು, ಅಲ್ಲಿ ಕುಳಿತು ಸಮಯ ಕಳೆಯಬಹುದಾಗಿರುತ್ತದೆ.
ಅಂಜಲಿ ರಾಮಣ್ಣ ಬರಹ

read more
ಗಗನಚುಂಬಿ ಬೆಟ್ಟಗಳ ಸಂದಿಯಲ್ಲಿ ಬುದ್ಧಗಂಟೆಯ ಸದ್ದು

ಗಗನಚುಂಬಿ ಬೆಟ್ಟಗಳ ಸಂದಿಯಲ್ಲಿ ಬುದ್ಧಗಂಟೆಯ ಸದ್ದು

ನದಿ, ಜಲಪಾತಗಳೆಲ್ಲಾ ಹೆಪ್ಪುಗಟ್ಟಿದ್ದ ಚಳಿಗಾಲದಲ್ಲೊಮ್ಮೆ ನಾನು ಚೀನಾದ ದಟಾಂಗ್ ಎನ್ನುವ ಊರಿನಲ್ಲಿದ್ದೆ. ಇದು ಉತ್ತರ ಚೀನಾದ ಶಾಂಕ್ಷಿ ಪ್ರಾಂತ್ಯದಲ್ಲಿದೆ, ಇದರ ಸುತ್ತಮುತ್ತ ಯುನೆಸ್ಕೋ ತಾಣಗಳೂ ಸೇರಿದಂತೆ ಅನೇಕ ಪ್ರಾಚೀನ ಬೌದ್ಧತಾಣಗಳಿವೆ. ಅಲ್ಲೊಂದು ಹಳೆಯ ಬೌದ್ಧವಿಹಾರ. ಬೋಳುಬೆಟ್ಟಗಳ ಜೊತೆ ತಾನೂ ಒಂದಾಗಿರುವಂತೆ ತೋರುವ ಆ ವಿಹಾರ ನೆಲದಿಂದ ೭೫ ಮೀ ಎತ್ತರದಲ್ಲಿ ಬೆಟ್ಟದ ಮೇಲ್ಮೈನಲ್ಲಿ ೧೫೦೦ ವರ್ಷಗಳಿಂದ ಬೀಳದೆ, ಅಲ್ಲಾಡದೆ, ಮಳೆಗೆ ಜಗ್ಗದೆ, ಬಿಸಿಲಿಗೆ ಕುಗ್ಗದೆ, ಹಿಮಕ್ಕೆ ಕರಗದೆ, ಗಾಳಿಗೆ ಹಾರಿ ಹೋಗದೆ ಹಾಗೇ ಉಳಿದುಕೊಂಡು ನಮ್ಮಂತಹ ನೋಡುವ ಕಣ್ಣಿಗೆ ವಿಸ್ಮಯವಾಗಿ ಉಳಿದುಬಿಟ್ಟಿದೆ.
‘ದೇವ ಸನ್ನಿಧಿ’ ಅಂಕಣದಲ್ಲಿ ಗಿರಿಜಾ ರೈಕ್ವ ಬರಹ

read more
ನೈನಿತಾಲ್ ಟ್ರಿಪ್ ನಲ್ಲಿ ಭೇಟಿಯಾದ ಭಗಿನಿ ಮತ್ತು ಕವಿ

ನೈನಿತಾಲ್ ಟ್ರಿಪ್ ನಲ್ಲಿ ಭೇಟಿಯಾದ ಭಗಿನಿ ಮತ್ತು ಕವಿ

1929ರಲ್ಲಿ ಗಾಂಧೀಜಿ ಕೌಸಾನಿಗೆ ಬಂದು, ಒಂದು ಅತಿಥಿ ಗೃಹದಲ್ಲಿ 3 ತಿಂಗಳು ತಂಗಿದ್ದರು. ಅಲ್ಲಿ ಅವರು “ ಅನಾಸಕ್ತಿ ಯೋಗ” ದ ಬಗ್ಗೆ ಬರೆದ್ದದ್ದರಿಂದ ಆ ಗೆಸ್ಟ್ ಹೌಸ್ ಈಗ ಅನಾಸಕ್ತಿ ಆಶ್ರಮ ಎಂದು ಕರೆಸಿಕೊಳ್ಳುತ್ತಿದೆ. ಗಾಂಧಿ ಆಗ ಕೌಸಾನಿಯನ್ನು ‘ಸ್ವಿಟ್ಸರ್ ಲ್ಯಾಂಡ್’ ಎಂದು ಕರೆದಿದ್ದರಂತೆ. ಈಗ ಅನಾಸಕ್ತಿ ಆಶ್ರಮದಲ್ಲಿ ಮ್ಯೂಸಿಯಮ್, ಪುಸ್ತಗಳ ಸಂಗ್ರಹಾಲಯ ಮಾಡಲಾಗಿದೆ. ಸರ್ಕಾರದ ದೇಖ್‍ರೇಕಿಯಲ್ಲಿ ಇನ್ನೂ ಮೌನ ಮತ್ತು ಕಳಚಿಕೊಳ್ಳುವುದರ ಬಗ್ಗೆ ಆಸಕ್ತಿ ಹುಟ್ಟಿಸುತ್ತಾ ಸದ್ದು ಮಾಡದೆ ನಿಂತಿದೆ ಅನಾಸಕ್ತಿ ಆಶ್ರಮ.
ಕಂಡಷ್ಟೂ ಪ್ರಪಂಚ ಪ್ರವಾಸ ಅಂಕಣದಲ್ಲಿ  ಅಂಜಲಿ ರಾಮಣ್ಣ ಬರಹ ಇಂದಿನ ಓದಿಗಾಗಿ.

read more
ತನ್ನೋಟಿ ಮಾತಾ ಆಶೀರ್ವಾದವೇ ಸೈನಿಕರಿಗೆ ಸ್ಫೂರ್ತಿ

ತನ್ನೋಟಿ ಮಾತಾ ಆಶೀರ್ವಾದವೇ ಸೈನಿಕರಿಗೆ ಸ್ಫೂರ್ತಿ

ಇಂಡೋ-ಪಾಕ್ ಸರಹದ್ದು ನೋಡಲೇ ಬೇಕು ಎನ್ನುವ ಆಸೆ ಗುದ್ದತೊಡಗಿತು. ದೇಶಭಕ್ತಿ ಮರುಭೂಮಿಯ ಓಯಸಿಸ್ನಂತೆ ಚಿಮ್ಮುತ್ತಿತ್ತು. ಕಾಲೇಜು ದಿನಗಳಲ್ಲಿ ಎನ್.ಸಿ.ಸಿ ಜಲಸೇನೆ ವಿಭಾಗದಲ್ಲಿದ್ದೆ. ಹಿಂದೂ ಮಹಾಸಾಗರವನ್ನು ಉದ್ದಗಲಕ್ಕೂ ಈಜಿ ವರಾಹವತಾರವೆತ್ತಿ ಭಾರತ ಮಾತೆಯನ್ನು ರಕ್ಷಿಸಿಕೊಂಡು ಬಂದ್ಹಾಗೆ ಕಂಡಿದ್ದ ಕನಸು ನೆನಪಾಗುತ್ತಲೇಯಿತ್ತು. ದೇಶ ಭಕ್ತಿಯೊಂದೇ ಸ್ಥಾಯಿ ಭಾವ ಅಂದುಕೊಂಡು ಅಲ್ಲಿದ್ದ ಸೈನಿಕರನ್ನು ನೋಡುತ್ತಾ ತನ್ನೋಟಿ ಮಾತಾಳನ್ನು ‘ಬಾರ್ಡರ್ ಗೆ ಕರೆದುಕೊಂಡು ಹೋಗು ‘ ಎಂದು ಬೇಡಿಕೊಳ್ಳುತ್ತಿದ್ದೆ.‌ ಕಂಡಷ್ಟೂ ಪ್ರಪಂಚ ಅಂಕಣದಲ್ಲಿ ಅಂಜಲಿ ರಾಮಣ್ಣ ಅವರ ಬರಹ.

read more
ಜ್ವಾಲಾಮುಖಿಯ ತಪ್ಪಲು ಜೀವನ್ಮುಖಿ

ಜ್ವಾಲಾಮುಖಿಯ ತಪ್ಪಲು ಜೀವನ್ಮುಖಿ

ಕಾರಿನ ಪಯಣದಲ್ಲಿ ನೋಡಿದ್ದು ಎಟ್ನಾ ಪರ್ವತದ ಐದು ಸೂಕ್ಷ್ಮ ವಲಯಗಳನ್ನು. ಜ್ವಾಲಾಮುಖಿಯ ತಪ್ಪಲಿನ ಜಾಗ ವ್ಯರ್ಥ ಭೂಮಿಯೆಂದು ಭಾವಿಸಿದ್ದ ನನಗೆ ಇದೊಂದು ಆಶ್ಚರ್ಯಕರ ಸಂಗತಿಯಾಗಿತ್ತು. ಈ ಪರ್ವತದ ಮಣ್ಣಿನ ಫಲವತ್ತತೆ ಹೆಚ್ಚಿರುವುದರಿಂದ ಇಲ್ಲಿನ ಕೃಷಿ ಉತ್ಪನ್ನಗಳಿಗೆ ಪ್ರಪಚದಾದ್ಯಂತ ಒಂದು ಗರಿಮೆಯಿದೆ. ನನ್ನ ಕಲ್ಪನೆಗೆ ಇದು ತದ್ವಿರುದ್ಧವಾಗಿತ್ತು. ಪರ್ವತದ ತಪ್ಪಲಿನ ಕೆಳ ಹಂತದಲ್ಲಿ ಕಿತ್ತಳೆ, ಗಜ ನಿಂಬೆ ಬೆಳೆಯುತ್ತಾರೆ.
ಸಿಸಿಲಿಯನ್‌ ಓಡಾಟದ ಮತ್ತಷ್ಟು ಅನುಭವಗಳನ್ನು ಗುರುದತ್ ಅಮೃತಾಪುರ ಅವರು ತಮ್ಮ ‘ದೂರದ ಹಸಿರು’ ಅಂಕಣದಲ್ಲಿ ಹಂಚಿಕೊಂಡಿದ್ದಾರೆ.

read more
ಮೌಂಟ್‌ಅಬುವಿನ ಒಳಹೊರಗೆಲ್ಲ ಸುತ್ತುತ್ತಾ…

ಮೌಂಟ್‌ಅಬುವಿನ ಒಳಹೊರಗೆಲ್ಲ ಸುತ್ತುತ್ತಾ…

ಬೆಟ್ಟದ ದಾರಿ. ಸಂಜೆಯಾಗುವ ಮೊದಲೇ ಮೇಲೇರಬೇಕು ಎನ್ನುವ ಧಾವಂತದಲ್ಲೇ ಹೊರಟೆ. ಇಕ್ಕೆಲಗಳಲ್ಲೂ ಅರಾವಳಿ ಪರ್ವತಶ್ರೇಣಿಯ ಸ್ನಿಗ್ಧ ಸೌಂದರ್ಯಾಸ್ವಾದನೆ. ಸ್ವಪ್ನಲೋಕದ ದಾರಿಯಲ್ಲಿ ಪಯಣಿಸಿ ಸೂರ್ಯಾಸ್ತದ ವೇಳೆಗೆ ತಲುಪಿದ್ದು ಸಮುದ್ರಮಟ್ಟದಿಂದ 1200 ಮೀಟರುಗಳಷ್ಟು ಮೇಲಿರುವ, ಬೇಸಿಗೆ ಅರಮನೆಗಳ ನಗರ ಮೌಂಟಬುವನ್ನು. ಥಾರ್ ಮರುಭೂಮಿಯ ಈ ನಾಡಿಗೆ ಉಣ್ಣೆ ಬಟ್ಟೆಯನ್ನು ಹೊತ್ತಿ ಹೋಗುವ ಕಲ್ಪನೆಯೂ ನನಗಿರಲ್ಲಿಲ್ಲ. ಆದರೆ ಕಾಲಿಟ್ಟೊಡನೆ ಮೈನಡುಗಿಸಿತ್ತು ಅಲ್ಲಿನ ಹವೆ.
‘ಕಂಡಷ್ಟೂ ಪ್ರಪಂಚʼ ಪ್ರವಾಸ ಅಂಕಣದಲ್ಲಿ ಅಂಜಲಿ ರಾಮಣ್ಣ ಬರಹ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ