Advertisement

ಪ್ರವಾಸ

ನಮ್ಮಲ್ಲೆ ಅದೆಷ್ಟು ನಂದನದ ತುಣುಕುಗಳು!

ನಮ್ಮಲ್ಲೆ ಅದೆಷ್ಟು ನಂದನದ ತುಣುಕುಗಳು!

ಹಿಮಾಲಯದ ಒಳ ಸುಳಿಗಳಲ್ಲಿ ಇರುವ ದೇವಸರೋವರಗಳದ್ದೇ ಒಂದು ಲೋಕ. ಕೈಲಾಸದ ಮಾನಸಸರೋವರ, ಲೇ ಲಡಾಕ್‌ನ ಪಾಂಗಾಂಗ್‌, ಚಂದ್ರತಾಲ್‌, ನಾಕೋ, ಟ್ರೆಕ್ಕಿಂಗ್‌ ಮಾಡಿ ಮಾತ್ರ ತಲುಪಬಹುದಾದ ಹೆಸರೇ ಇಲ್ಲದ ಇನ್ನೂ ಅನೇಕ ಸರೋವರಗಳಿವೆ. ಮನುಷ್ಯ ಜಗತ್ತು ಕೊನೆಗೊಳ್ಳುತ್ತಾ ಅದು ದೇವಜಗತ್ತಾಗುತ್ತದೆ. ಅದೆಲ್ಲಾ ದೇವಸಂಚಾರಕ್ಕೆ ಮಾಡಿದ ಜಾಗಗಳೇನೋ ಅನಿಸುತ್ತದೆ. ಈ ಸುಂದರ ಸರೋವರಗಳನ್ನು ಆಸ್ವಾದಿಸಲು ಸೂರ್ಯನ ಸಹಕಾರ ಬೇಕು.
‘ದೇವಸನ್ನಿಧಿ’ ಅಂಕಣದಲ್ಲಿ ತಾವು ಕಂಡ ಸರೋವರಗಳ ಕುರಿತು ಬರೆದಿದ್ದಾರೆ ಗಿರಿಜಾ ರೈಕ್ವ

read more
ಕಾವಿಧಾರಿಗಳೊಂದಿಗೆ ಕಳೆದ ಕಾಲದ ಮೆಲುಕುಗಳು…

ಕಾವಿಧಾರಿಗಳೊಂದಿಗೆ ಕಳೆದ ಕಾಲದ ಮೆಲುಕುಗಳು…

ಜಿಪ್ಸಿಯಂತಿದ್ದ ಆತ ಎಲ್ಲರೊಡನೆ ಚಕ್ಕಲ್ಮಟ್ಟ್ಕೆ ಹಾಕಿಕೊಂಡು ಊಟ ಮಾಡುತ್ತಿದ್ದರು. ನನ್ನ ಕ್ಯಾಮೆರ ಲೆನ್ಸ್ ಆತನನ್ನು ನೋಡುತ್ತಿದ್ದದ್ದು ಗಮನಕ್ಕೆ ಬಂದೊಡನೆ ಒಂದು ನಗು ಒಂದು ಜ್ಞಾನ ಮುದ್ರೆಯನ್ನು ನನ್ನೆಡೆಗೆ ಬಿಸ್ಹಾಕಿದರು. ಈ ಮೇಳದ ಜಾಗದಲ್ಲಿ ಸ್ವಲ್ಪ ಹಳೇ ಹುಲಿಯಂತೆಯೇ ಕಂಡರವರು. ಕ್ಯಾಮೆರ ಮತ್ತು ಮೀಡಿಯಾವನ್ನು ಆಕರ್ಷಿಸಲು ಬೇಕಾದ ಹಾವಭಾವ ಅವರಲ್ಲಿತ್ತು ಅನ್ನಿಸಿತು.. ಮಾತು ಬೆಳೀತಾ ಬೆಳೀತಾ ಗೊತ್ತಾಯ್ತು ಆತ ಅಮೆರಿಕೆಯ ಅಲೆಮಾರಿ ಅಂತ. ಹಾಡು ನಟನೆ ಪ್ಯಾಷನ್. ಅದರಲ್ಲೇ ಜೀವನ ಕಂಡುಕೊಳ್ಳಲು ಸಾಕಷ್ಟು ಪರಿಶ್ರಮ ಹಾಕಿದರೂ ಉಹುಂ, ಯಶಸ್ಸು ಒಲ್ಲೆ ಅಂತ ಹಠ ಹಿಡಿದಿತ್ತು. ಅಂಜಲಿ ರಾಮಣ್ಣ ಬರಹ

read more
ಬಯೊಲುಮಿನಿಸೆನ್ಸ್ ಎಂಬ ಬೆಳಕಿನ ಮಾಯಾಲೋಕ

ಬಯೊಲುಮಿನಿಸೆನ್ಸ್ ಎಂಬ ಬೆಳಕಿನ ಮಾಯಾಲೋಕ

ಅಷ್ಟಷ್ಟೇ ವೇಗವನ್ನು ಹೆಚ್ಚಿಸಿಕೊಳ್ಳುತ್ತಾ, ಜಾರುವ ಸೂರ್ಯನೊಂದಿಗೆ ಪೈಪೋಟಿ ನಡೆಸುತ್ತ ನಮ್ಮ ದೋಣಿ ಕರಿಬಿಯನ್ ನೀಲ ಕಡಲನ್ನು ಸೀಳಿಕೊಂಡು ಸುತ್ತಲ ಅಂದವನ್ನೆಲ್ಲ ಉಣಿಸುತ್ತ ಸಾಗುತ್ತಿತ್ತು. ಅಂಚಲ್ಲಿ ಕಾಣುವ ಮನೆ, ತೋಟಗಳ ಇತಿಹಾಸ ಇತ್ಯಾದಿ ವಿವರಣೆ ನೀಡುತ್ತಾ ನಮ್ಮ ಗೈಡ್ ಅಲ್ಲದೆ ಚಾಲಕನೂ ಆದ ಮ್ಯಾಟ್ ಹರಟುತ್ತಿದ್ದ. ಪೋರ್ತೋರಿಕನ್ ಮೂಲದವನೇ ಆದ ಮ್ಯಾಟ್ ನಡುವೆ ಒಂದಷ್ಟು ವರುಷ ಫ್ಲರಿಡಾದಲ್ಲಿದ್ದು, ನೆಲದ ಕರೆಯ ಸೆಳೆತಕ್ಕೆ ಹಿಂತಿರುಗಿ ಬಂದು ಇಲ್ಲಿಯೇ ನೆಲೆಯೂರಿದ್ದ.
ʻಜಗದ ಜಗಲಿಯಲಿ ನಿಂತುʼ ಪ್ರವಾಸ ಬರಹಗಳ ಸಾಲಿನಲ್ಲಿ ಲಾ ಪ್ಯಾರ್ಗೇರದ ಬಯೊಲುಮಿನಿಸೆನ್ಸ್ ಮಾಯಾಲೋಕದ ಕುರಿತು ಬರೆದಿದ್ದಾರೆ ವೈಶಾಲಿ ಹೆಗಡೆ

read more
ಮಾರ್ಕೋನಿ ಬೀಚ್: ತೆರೆಯ ಮೇಲಣ ತರಂಗಾಂತರಂಗ

ಮಾರ್ಕೋನಿ ಬೀಚ್: ತೆರೆಯ ಮೇಲಣ ತರಂಗಾಂತರಂಗ

ಸಾಮಾನ್ಯ ಜನರು ಮಾರ್ಕೋನಿ ರಿಸೀವರ್‌ಗಳನ್ನು ಕೊಂಡು ಬೇರೆ ಬೇರೆ ತರಂಗಗಳನ್ನು ಕೈಯಲ್ಲಿ ಕಟ್ಟಿ ಹಾಕಿ ಆಲಿಸುವ ತಂತ್ರಜ್ಞಾನ ಹುಟ್ಟಿದ್ದು ಇಲ್ಲೇ, ಈ ವೆಲ್ಫ್ಲೀಟ್ ಎಂಬ ಚಿಕ್ಕ ಊರಿನಲ್ಲಿ. ರೇಡಿಯೋ ತರಂಗಗಳು ಹುಟ್ಟುಹಾಕಿದ ಕ್ರಾಂತಿ ಅದೆಷ್ಟು ಬೇಗ ಹಬ್ಬಿತೆಂದರೆ ಎಲ್ಲ ಹಡಗುಗಳಲ್ಲೂ ಮಾರ್ಕೋನಿ ಉಪಕರಣವಿತ್ತು. ಸುಪ್ರಸಿದ್ಧ ಟೈಟಾನಿಕ್ ಹಡಗು ಕೂಡ ಮುಳುಗುವ ಮೊದಲು ಮಾರ್ಕೊನಿ ಉಪಕರಣದ ಮೂಲಕ “SOS” ಸಂದೇಶ ಕಳಿಸಿತ್ತು.
ವೈಶಾಲಿ ಹೆಗಡೆ ಬರೆಯುವ ಪ್ರವಾಸ ಲೇಖನ ಮಾಲೆ

read more
ನೆದರ್ಲ್ಯಾಂಡ್ಸ್ ನೆನಪು: ಕಂದಪುಷ್ಪದ ಕಥೆ

ನೆದರ್ಲ್ಯಾಂಡ್ಸ್ ನೆನಪು: ಕಂದಪುಷ್ಪದ ಕಥೆ

ಟುಲಿಪ್ ಹೂವು ಒಂದು ಪದರದ ಹೂವು. ಮೊಗ್ಗಾಗಿದ್ದಾಗ ಅಷ್ಟು ವಿಶೇಷವಾಗಿ ಕಾಣುವುದಿಲ್ಲ. ಪೂರ್ಣ ಅರಳಿ, ದಳಗಳು ತೆರೆದರೂ ಅಷ್ಟು ವಿಶೇಷ ಅನ್ನಿಸುವುದಿಲ್ಲ. ಅರಳುವ ಹಂತಗಳಲ್ಲಿ ಬಹಳ ಸುಂದರವಾಗಿ ಕಾಣುವುದು ಇವೆರಡರ ಮಧ್ಯದ “ಬಲ್ಬ್” ಹಂತ. ಟುಲಿಪ್ ಬಲ್ಬ್ ಗಳ ಅವಧಿ ಎರಡರಿಂದ ಮೂರೂ ವಾರಗಳು ಅಷ್ಟೇ. ಸಂಪೂರ್ಣ ಅರಳುವ ಪ್ರಕ್ರಿಯೆ ಆಯಾ ವರ್ಷದ ಚೈತ್ರ ಕಾಲದ ಹವಾಮಾನಕ್ಕೆ ತಕ್ಕಂತೆ ಒಂದೆರೆಡು ವಾರ ಅತ್ತಿಂದಿತ್ತ ಬದಲಾಗುತ್ತಿರುತ್ತದೆ.
“ದೂರದ ಹಸಿರು” ಸರಣಿಯಲ್ಲಿ ಗುರುದತ್ ಅಮೃತಾಪುರ ಬರಹ

read more
ದಂಡಕಾರಣ್ಯದ ಆದಿವಾಸಿಗಳ ದೇವ-ದೇವಿಯರು

ದಂಡಕಾರಣ್ಯದ ಆದಿವಾಸಿಗಳ ದೇವ-ದೇವಿಯರು

ಶಿವ ಶಕ್ತಿಯ ಸಂಗಮವು ನಾನಾರೀತಿಯಲ್ಲಿ ನಮ್ಮ ಸಂಸ್ಕೃತಿಯಲ್ಲಿ ಹಾಸುಹೊಕ್ಕಾಗಿದೆ ಮತ್ತು ವಿಸ್ಮಯವೆನಿಸುವ ರೀತಿಗಳಲ್ಲಿ ಅದು ಅಭಿವ್ಯಕ್ತಿ ಹೊಂದಿದೆ. ಬುಡಕಟ್ಟಿನವರ ದೇವಲೋಕವೂ ಇದಕ್ಕೆ ಹೊರತಾಗಿಲ್ಲ. ನದಿಯ ನಡುವೆ ಒಂದು ಕಲ್ಲಿದೆ. ಅಲ್ಲಿ ತ್ರಿಶೂಲದ ಹಾಗೂ ಒಂದು ಪಾದದ ಗುರುತಿದೆ. ದಂತೇಶ್ವರಿ ಮತ್ತು ಭೈರವರು ಕಣ್ಣಾಮುಚ್ಚಾಲೆ ಆಟ ಆಡುತ್ತಿದ್ದಾಗ ದೇವಿಯು ಶಿವ ಮೋಸ ಮಾಡಿದ ಎಂದು ಕೋಪದಿಂದ ಅವನ ಮೇಲೆ ಎಸೆದ ತ್ರಿಶೂಲ ಅಲ್ಲಿ ಸಿಕ್ಕಿಕೊಂಡಿದೆ ಎನ್ನುವುದು ನಂಬಿಕೆ. ಅದಕ್ಕೇ ತಪ್ಪಿಸಿಕೊಂಡು ಹೋದ ಭೈರವನ ದೇವಾಲಯ ನದಿಯ ಆಚೆ ದಡದಲ್ಲಿದೆ.
ಗಿರಿಜಾ ರೈಕ್ವ ಬರೆಯುವ ಅಂಕಣ ‘ದೇವಸನ್ನಿಧಿ’

read more
‘ವೈನು’ಗಾರಿಕೆಯ ಸೀಮೆಯಲಿ ಸುತ್ತಾಡುತಾ…

‘ವೈನು’ಗಾರಿಕೆಯ ಸೀಮೆಯಲಿ ಸುತ್ತಾಡುತಾ…

ಮಿನೋವನ್ ನಾಗರೀಕತೆಯನ್ನು ಯೂರೋಪ್ ಖಂಡದ ಮೊದಲ ಮುಂದುವರೆದ ನಾಗರೀಕತೆ ಎಂದು ಗುರುತಿಸಲಾಗಿದೆ. ಆಧುನಿಕ ಕಲೆ, ಸುಧಾರಿತ ಒಲೆ, ಎಲ್ಲಾ ಕಾಲಕ್ಕೂ ಸಲ್ಲುವ ಒಳಚರಂಡಿ ವ್ಯವಸ್ಥೆ, ತಮ್ಮದೇ ಆದ ಭಾಷೆ, ಲಿಪಿ, ವೈದ್ಯ ಪದ್ಧತಿ ಎಲ್ಲವನ್ನೂ ಹೊಂದಿದ್ದ ಜನ. ವಿಶೇಷತೆ ಎಂದರೆ ಅವರ ದ್ರಾಕ್ಷಿ ಮತ್ತು ಅಂಜೂರದ ಕೃಷಿ. ಕ್ರಿಸ್ತ ಪೂರ್ವದಿಂದಲೂ ಒಂದು ಜಾತಿಯ ದ್ರಾಕ್ಷಿ ಗಿಡದ ಬೇರನ್ನು ಸಂರಕ್ಷಿಸಿಕೊಂಡು ಬಂದಿದ್ದಾರೆ ಇಲ್ಲಿನ ಜನ. ಅದರಿಂದ ತಯಾರಿಸಿದ ವೈನ್ ಪೇಯ ಇಲ್ಲಿನ ವ್ಯಾಪಾರದ ಆಕರ್ಷಣೆ.
ಕಂಡಷ್ಟೂ ಪ್ರಪಂಚ ಪ್ರವಾಸ ಅಂಕಣದಲ್ಲಿ ಅಂಜಲಿ ರಾಮಣ್ಣ ಬರಹ

read more
ಮೋಡದ ಮೇಲೆ…. ತೇಲುತ್ತಾ ತೇಲುತ್ತಾ..

ಮೋಡದ ಮೇಲೆ…. ತೇಲುತ್ತಾ ತೇಲುತ್ತಾ..

ರಸ್ತೆಗಳಲ್ಲಿ ಇಳಿಮುಖವಾಗಿ ಕಾರು ಚಲಿಸುತ್ತಿತ್ತು. ಸ್ವಲ್ಪ ದೂರ ಚಲಿಸಿದ ಮೇಲೆ ಒಂದು ಕಡಿದಾದ ತಿರುವು ದಾಟಿದ ತಕ್ಷಣ, ಕಣ್ಣ ಮುಂದೆ ಏನಿದೆ ಎಂದು ಅರ್ಥೈಸಲು ಸ್ವಲ್ಪ ಕಾಲಾವಕಾಶ ಬೇಕಾಯಿತು. ಒಂದು ಬಿಳಿಯ ಚಾದರ ಹಾಸಿದಂತೆ ಮೋಡಗಳು ಭಾಸವಾದವು. ಅದಕ್ಕಿಂತಲೂ ಎತ್ತರದ ಜಾಗದಲ್ಲಿ ನಾನು ಕಾರು ಓಡಿಸುತ್ತಿದ್ದರಿಂದ, ನಾವು ಮೋಡದ ಮೇಲೆ ಇರುವಂತೆ ಭಾಸವಾಯಿತು. ನನ್ನ ಪ್ರವಾಸದ ಅನುಭವಗಳಲ್ಲಿ ಅತ್ಯಂತ ಆಪ್ಯಾಯಮಾನವಾದ ದೃಶ್ಯ ಎಂದರೆ ಮೋಡದ ಸಾಲುಗಳ ಮೇಲಿಂದ ನಿಂತು ಮೋಡದ ಸಾಗರವನ್ನು ವೀಕ್ಷಿಸುವುದು.
ಲೆಚೆನ್ಸ್‌ಟೈನ್‌ ದೇಶದ ಪ್ರವಾಸದ ಕುರಿತು ಬರೆದಿದ್ದಾರೆ ಗುರುದತ್ ಅಮೃತಾಪುರ

read more
ಎಲ್ಲಿ ಹೋದರೇನು… ಮನ ಮರೆಯುವುದಿಲ್ಲ ನಿನ್ನನು

ಎಲ್ಲಿ ಹೋದರೇನು… ಮನ ಮರೆಯುವುದಿಲ್ಲ ನಿನ್ನನು

ಚಾಲಕ ಖಾನ್ ಅಲ್ಲಿಂದ ಒಂದು ಗಂಟೆ ಐದು ನಿಮಿಷಗಳ ಪ್ರಯಾಣದಲ್ಲಿ ತಲುಪಿಸಿದ್ದು ನೀರ್ದೇವನ ಪಾದಕ್ಕೆ. ಒಂದು ಬದಿ ಪ್ರಪಾತ ಮತ್ತೊಂದು ಬದಿ ಸಮುದ್ರ… ನಡುವೆ ಈ ನೀರ್ಮಕ್ಕಳ ಕಾಯ್ವ ದೇವನ ಪಳಿಯುಳಿಕೆ. ಸೂರ್ಯ ಮುಳುಗುತ್ತಿದ್ದ, ಬಂದಿದ್ದವರು ವಿಧವಿಧ ಭಂಗಿಯಲ್ಲಿ ಫೋಟೊ ತೆಗೆಸಿಕೊಳ್ಳುತ್ತಿದ್ದರು. ಜೋರು ಗಾಳಿ, ತಂಪು ಸಮಯ ಸಮುದ್ರ ನೋಡುತ್ತಾ ಕೂರಲು ಒಂಟಿ ನಿಂತ ಸಣ್ಣ ಬಂಡೆ. ಅದೆಷ್ಟು ಚಂದಿತ್ತು ಅಲ್ಲಿ ಕೂತು ಇಹಪರವನ್ನು ಮರೆತಿದ್ದು. ಸಾಯಂಕಾಲ 6 ಗಂಟೆಯ ನಂತರ ಅಲ್ಲಿ ಇರಲು ಬಿಡುವುದಿಲ್ಲ.
ಕಂಡಷ್ಟೂ ಪ್ರಪಂಚ ಪ್ರವಾಸ ಅಂಕಣದಲ್ಲಿ ಗ್ರೀಸ್‌ ಪ್ರವಾಸದ ಅನುಭವಗಳನ್ನು ಹಂಚಿಕೊಂಡಿದ್ದಾರೆ ಅಂಜಲಿ ರಾಮಣ್ಣ ಬರಹ

read more

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ