ಸದ್ದಿಲ್ಲದೆ ಕಾಣೆಯಾಗುವ ನಾಡಿನ ಶಿಲ್ಪ ಸಂಪತ್ತು
ಹಾಸನದ ಚನ್ನರಾಯಪಟ್ಟಣದ ಬಳಿ ಹರಿಹರಪುರ ಅಂತ ಒಂದು ಸ್ಥಳವಿದೆ. ಅಲ್ಲೊಂದು ಹರಿಹರೇಶ್ವರನ ದೇವಾಲಯವಿದ್ದರೂ ಒಳಗೆ ದೇವರಿಲ್ಲ. ತ್ರಿಕೂಟೇಶ್ವರ ಅಂದರೆ ಮೂರು ಗರ್ಭಗುಡಿಗಳು ಒಂದು ನವರಂಗವನ್ನು ಹೊಂದಿರುತ್ತದೆ. ಅದರ ಪ್ರಕಾರ ಅಲ್ಲಿ ಮೂರು ಮೂರ್ತಿಗಳಿರಬೇಕಿತ್ತು. ಮುಖ್ಯ ದೇವರು ಹರಿಹರೇಶ್ವರ. ಇನ್ನೆರಡು ರಂಗನಾಥ ಮತ್ತು ಸರಸ್ವತಿಗೆ ಸೇರಿದ್ದು. ಆದರೆ ಇವತ್ತು ಮೂರೂ ಖಾಲಿ. ಎಲ್ಲಿ ಹೋದವು ಆ ಮೂರ್ತಿಗಳು ? ಅವು ಹರಿಹರಪುರದಿಂದ ೬೫೦೦ ಕಿ.ಮೀ ದೂರದಲ್ಲಿರುವ ಡೆನ್ಮಾರ್ಕಿನ ಕೋಪನ್ ಹೇಗನ್ ಮ್ಯೂಸಿಯಂನ ಏರ್ ಕಂಡೀಷನ್ ರೂಮಿನಲ್ಲಿ ತಣ್ಣಗೆ ಕುಳಿತಿವೆ. ಇಲ್ಲಿಂದ ಅಲ್ಲಿಗೆ ಹೋಗಿದ್ದಾದರೂ ಹೇಗೆ? ಗಿರಿಜಾ ರೈಕ್ವ ಬರೆಯುವ ಅಂಕಣ.
ದೇಮಾಜಿ ಎಂಬ ಸುಂದರ ತಾಣದಲ್ಲೊಂದು ತಂಗುದಾಣ
ಅಸ್ಸಾಮಿನ ಹಳ್ಳಿಗಳು, ತಾಲೂಕುಗಳು ಅರುಣಾಚಲ ಪ್ರದೇಶದಂತೆ ಅಲ್ಲ. ಟಾರು ಮೆತ್ತಿಸಿಕೊಂಡ ವಿಶಾಲ ರಸ್ತೆಗಳು ಪ್ರಯಾಣಿಗರಿಗೆ ಹಿತವಾಗಿವೆ. ಒಂದೊಂದೇ ಮರಗಿಡಗಳು ಕಿಟಿಕಿಯಿಂದಾಚೆಗೆ ನನ್ನಿಂದ ದೂರದೂರವಾಗುತ್ತಿರುವುದನ್ನು ನೋಡುತ್ತಲೇ ಮುಂದೆ ಹೋಗುತ್ತಿದ್ದೆ. ಅಸ್ಸಾಂ ಪೂರ್ತೀ ತುಂಬಾ ಖುಷಿ ನೀಡುವ ನೋಟವೆಂದರೆ ಅಲ್ಲಿನ ಹೆಣ್ಣು ಮಕ್ಕಳು ವಯೋಬೇಧವಿಲದೆ ಸೀರೆಗಳನ್ನುಟ್ಟು ಸೈಕಲ್ಗಳಲ್ಲಿ ಓಡಾಡುತ್ತಾರೆ. ರಸ್ತೆಯ, ಅಲ್ಲಿನ ಜನರ, ವಾಹನಗಳ, ಇಕ್ಕೆಲಗಳ ಹಸುರಿನ ಉಸಿರಿನಂಥಾ ಹೆಣ್ಣುಗಳು.
ಅಂಜಲಿ ರಾಮಣ್ಣ ಬರೆಯುವ ಪ್ರವಾಸ ಅಂಕಣ
ಸಿಸಿಲಿಯ ಬೀಳ್ಕೊಡುಗೆ ಸಿಕ್ಕ ಅನಿರೀಕ್ಷಿತ ಉಡುಗೊರೆ!
ಇತಿಹಾಸದ ಅನರ್ಘ್ಯ ರತ್ನಗಳ ಸುತ್ತ ಅಲೆದಾಟ. ಆರ್ಕಿಮಿಡಿಸ್ ತವರೂರಿನಿಂದ ಹಿಡಿದು ದೇವಾಲಯಗಳ ಕಣಿವೆಯವರೆಗೆ ಇತಿಹಾಸದ ರಸದೌತಣ ಬೇಕೆಂದರೆ ಸಿಸಿಲಿಗೆ ಬರಬೇಕು. ಇತಿಹಾಸದ ಕಥೆಗಳಲ್ಲಿ ಕಳೆದುಹೋಗುವ ಹವ್ಯಾಸವಿರುವವರಿಗೆ ಸಿಸಿಲಿ ಲೆಕ್ಕವಿಲ್ಲದಷ್ಟು ಅವಕಾಶಗಳನ್ನು ತೆರೆದಿಡುತ್ತದೆ. ಕ್ರಿ.ಪೂ. ಆರನೇ ಶತಮಾನದ ದೇವಾಲಯಗಳ ಭೇಟಿ, ನನ್ನ ಈವರೆಗಿನ ಯೂರೋಪಿನ ಪ್ರವಾಸಗಳಲ್ಲೇ ಅನನ್ಯ! ಪ್ರಪಂಚದಾದ್ಯಂತ ಇರುವ ಗ್ರೀಕ್ ದೇವಾಲಯಗಳಲ್ಲಿ ಅತ್ಯಂತ ಸುಸ್ಥಿತಿಯಲ್ಲಿರುವ “Temple of Concordia”ದ ಆಕಾರ, ರಚನೆ – ನೋಡಿ ನಿಬ್ಬೆರಗಾಗಿಬಿಟ್ಟೆ.
“ದೂರದ ಹಸಿರು” ಸರಣಿಯಲ್ಲಿ ಗುರುದತ್ ಅಮೃತಾಪುರ ಬರಹ
ಆಪರೇಷನ್ ವಿಜಯ್ ನ ಜೀವಂತ ನೆನಪುಗಳು
ಹಾಲ್ ಆಫ್ ಫೇಂನಲ್ಲಿ ಆಪರೇಷನ್ ವಿಜಯ್ ಹೆಸರಿನಲ್ಲೇ ಒಂದು ಗ್ಯಾಲೆರಿ ತೆರೆದಿದ್ದಾರೆ. ಅಲ್ಲಿ ಕಾರ್ಗಿಲ್ ಯುದ್ಧಕ್ಕೆ ಬಳಸಲಾದ ಗನ್ನುಗಳನ್ನು ಇಡಲಾಗಿದೆ. ಮಾರ್ಗದರ್ಶನ ಮಾಡುತ್ತಿದ್ದ ಆ ಯೋಧ “ಈ ಗನ್ನ್ ಅನ್ನು ಕೈಯಲ್ಲಿ ಹಿಡಿದು ಫೋಟೋ ತೆಗೆಸಿಕೊಳ್ಳಿ” ಎಂದ. ನನ್ನ ಆನಂದಕ್ಕೆ ಮಿತಿಯೇಯಿರಲಿಲ್ಲ. ನಿಜಕ್ಕೂ ನಾನು ಆ ಘಳಿಗೆಯಲ್ಲಿ ವೈರಿಪಡೆಯನ್ನು ಸೆದೆಬಡಿದು ಬಿಡುತ್ತೇನೆ ಎನ್ನುವ ಭಾವದಿಂದ ಗನ್ನೊಂದನ್ನು ಕೈಗೆತ್ತಿಕೊಳ್ಳಲು ಹೋದೆ. ಉಹುಂ, ಆಗಲೇ ಇಲ್ಲ! ಎಷ್ಟೊಂದು ಭಾರವಿತ್ತು. ನಗರ ಜೀವನ ಶೈಲಿಗೆ ಹೊಂದಿಕೊಂಡ ನನ್ನ ತಾಕತ್ತು ಸೈನಿಕನ ಉಂಗುಷ್ಠವನ್ನೂ ಹೋಲಲು ಸೋತಿತು. ಕೊನೆಗೆ ಅಲ್ಲಿದ್ದ ಆ ಯೋಧ, ಗನ್ ಎತ್ತಿ ನನ್ನ ಕೈಯಲ್ಲಿ ತೂರಿಸಿದ, ಫೋಟೊ ಸೆರೆಹಿಡಿದ. ‘ಕಂಡಷ್ಟೂ ಪ್ರಪಂಚ’ ಅಂಕಣದಲ್ಲಿ ಅಂಜಲಿ ರಾಮಣ್ಣ ಅವರ ಲೇಖನ ಇಲ್ಲಿದೆ.
ಕಲ್ಲಿನಲ್ಲಿ ಕಡೆದ ಆಲ್ಬಮ್, ತಾಡಿಪತ್ರಿ
ನಾನು ಮೊದಲು ಹೋಗಿದ್ದು ಬುಗ್ಗ ರಾಮಲಿಂಗೇಶ್ವರಕ್ಕೆ. ನಿತ್ಯ ಬರುವ ಭಕ್ತಾದಿಗಳನ್ನು ಬಿಟ್ಟರೆ ಹೆಚ್ಚು ಜನ ಇರಲಿಲ್ಲ. ವಿಜಯನಗರ ಶೈಲಿಯ ದೇವಾಲಯಗಳಲ್ಲಿ ಇರುವಂತೆ ಪ್ರವೇಶ ದ್ವಾರ ಎತ್ತರವಾಗಿದ್ದು, ಎರಡೂ ಬದಿಗಳಲ್ಲಿ ಗಂಗಾ, ಯಮುನೆಯರ ಶಿಲ್ಪಗಳಿಂದ ಕೂಡಿದೆ. ಇವು ಮಾನಸಿಕವಾಗಿ ನಮ್ಮನ್ನು ಗಂಗೆ, ಯಮುನೆಯರಿಂದ ಶುಚಿಗೊಳಿಸಿಕೊಂಡು ಒಳಕ್ಕೆ ಹೋಗುವ ಪ್ರತೀಕ. ದೇವಾಲಯದ ಪ್ರಶಾಂತತೆ ಹಾಗೂ ಅದರ ಬೃಹತ್ ಗಾತ್ರವನ್ನು ಕಂಡು ನನಗೆ ಒಂದು ಕಡೆ ಬೆರಗು ಜೊತೆಗೆ ಏನು ನೋಡಲಿ ಏನು ಬಿಡಲಿ ಅಂತ ಸ್ವಲ್ಪ ಹೊತ್ತು ತಲೆ ಕೆಟ್ಟ ನೊಣದ ಹಾಗೆ ಕ್ಯಾಮೆರಾ ಹಿಡಿದುಕೊಂಡು ಓಡಾಡಿದೆ.
‘ದೇವ ಸನ್ನಿಧಿ’ ಅಂಕಣದಲ್ಲಿ ತಾಡಿಪತ್ರಿ ಎಂಬ ಅಪರೂಪದ ಜಾಗದ ಕುರಿತು ಬರೆದಿದ್ದಾರೆ ಗಿರಿಜಾ ರೈಕ್ವ
ದೇವಾಲಯಗಳ ಕಣಿವೆಯಲ್ಲಿ ಈಗ ಹಸಿರು ಚಿತ್ರಗಳು
ನಾನು ನೆಲೆಸಿರುವ ಜರ್ಮನಿ ಹಾಗೂ ಸುತ್ತಲಿನ ದೇಶಗಳ ಇತಿಹಾಸ ಬಹಳ ಸಪ್ಪೆ ಎನ್ನಿಸುತ್ತದೆ. ಇವರು ಅರಮನೆ ಎಂದು ಕರೆಯುವ ಕಟ್ಟಡಗಳನ್ನು ಮೀರಿಸುವ ಮನೆಗಳನ್ನು ನಮ್ಮ ದೇಶದಲ್ಲಿ ಈಗಿನ ರಾಜಕಾರಣಿಗಳು, ಉದ್ಯಮಿಗಳು ಹೊಂದಿದ್ದಾರೆ. ಇಷ್ಟು ವರ್ಷಗಳ ಪ್ರವಾಸದಲ್ಲಿ ನಮ್ಮ ಮೈಸೂರಿನ ಭವ್ಯ ಅರಮನೆಯಂತಹ ಮತ್ತೊಂದನ್ನು ಇಲ್ಲಿ ನೋಡಲಿಲ್ಲ. ಸಾವಿರಾರು ವರ್ಷಗಳ ಹಿಂದಿನ, ಗತ-ವೈಭವಗಳಿಂದ ಕೂಡಿದ ಇತಿಹಾಸ ಅತಿ ವಿರಳ. ಆದರೆ ಯೂರೋಪಿನ ದಕ್ಷಿಣಕ್ಕೆ ಚಲಿಸಿದಂತೆ ಗ್ರೀಕ್, ರೋಮನ್ ಸಾಮ್ರಾಜ್ಯಗಳ ಕುರುಹುಗಳು ಕಾಣುತ್ತಿದ್ದಂತೆ ಕಣ್ಣು, ಕಿವಿ ಅರಳಿಬಿಡುತ್ತದೆ. ಗುರುದತ್ ಅಮೃತಾಪುರ ಬರಹ
ಪ್ರಾರ್ಥನೆಯೊಂದೇ ಆಯ್ಕೆಯಾಗಿ ಉಳಿದಾಗ…
ಆ ದಿನ ಅಲ್ಲಿ ಹಾಗೆ ಆದಾಗ ಆಕೆಗೆ ಒಳಿತಾಗಲಿ ಎಂದು ಬಯಸಿದ್ದು ಅಲ್ಲಿದ್ದ ನೂರಾರು ಮನಸ್ಸುಗಳು. ಅನುಮಾನವೇ ಇಲ್ಲ. ಆದರೆ ನನ್ನ ಗಮನ ಆಕೆಯ ಇಬ್ಬರು ಹರೆಯದ ಹೆಣ್ಣುಮಕ್ಕಳಾದ ಶ್ರದ್ಧಾ ಮತ್ತು ಪೂಜಾರೆಡೆಗೆ ಇದ್ದದ್ದೂ ಸುಳ್ಳಲ್ಲ. ಇಡೀ ಗುಂಪಿನಲ್ಲಿ ಅವರಿಬ್ಬರಿಗೇ ಇಂಗ್ಲಿಷ್ ಬರುತ್ತಿದ್ದದ್ದು. ಸ್ವಂತ ತಾಯಿ ಕುಸಿದು ಬಿದ್ದಿದ್ದಾಳೆ. ಅಪ್ಪನಿಗೆ ದಿಗ್ಭ್ರಮೆಯಾಗಿದೆ. ಪುಟ್ಟ ತಮ್ಮ ಅಳುತ್ತಿದ್ದಾನೆ. ವಯಸ್ಸಾದ ನೆಂಟರಿಷ್ಟರೆಲ್ಲಾ ಆತಂಕಗೊಂಡಿದ್ದಾರೆ. ಡಾಕ್ಟರ್ಗಳು ಹತ್ತು ಪ್ರಶ್ನೆಗಳನ್ನು ಕೇಳುತ್ತಿದ್ದಾರೆ.
“ಕಂಡಷ್ಟೂ ಪ್ರಪಂಚ” ಪ್ರವಾಸ ಅಂಕಣದಲ್ಲಿ ವಿಮಾನ ಪ್ರಯಾಣದ ಒಂದು ಭಿನ್ನ ಅನುಭವವನ್ನು ಹಂಚಿಕೊಂಡಿದ್ದಾರೆ ಅಂಜಲಿ ರಾಮಣ್ಣ
ಗಾಂಧಿತಾತನ ಜೊತೆಗೆ ಒಲಿವಿಯಾಳೂ ಸಿಕ್ಕಳು
ವಿದ್ಯಾರ್ಥಿಗಳು, ಕಲಾವಿದರು ತಮ್ಮ ಖರ್ಚು ಸರಿದೂಗಿಸಿಕೊಳ್ಳಲು ಹೀಗೆ ಸ್ವಯಂಸೇವೆ ಮಾಡುತ್ತಾರೆ ಮತ್ತು ಪಗಾರ ಪಡೆಯುತ್ತಾರೆ. ಬಹಳಷ್ಟು ಸ್ಮಶಾನಗಳಿಗೆ ಭೇಟಿ ನೀಡಿದ್ದೇನೆ. ಅವುಗಳು ಪಾರ್ಕ್ನಂತೆ ಬಳಸಲ್ಪಡುತ್ತವೆ. ಸ್ವಚ್ಛತೆ ಮತ್ತು ಮೌನವು ಮಾರ್ದನಿಸುತ್ತಿರುತ್ತವೆ. ಕೆಲವು ಕಡೆ ಸಮಯ ನಿಗಧಿಯಾಗಿರುತ್ತದೆ, ಆದರೆ ಬಹುಪಾಲು ಸ್ಮಶಾನಗಳಿಗೆ ಸಾರ್ವಜನಿಕರು ದಿನದ ಯಾವ ಸಮಯದಲ್ಲಿಯಾದರೂ ಹೋಗಬಹುದು, ಅಲ್ಲಿ ಕುಳಿತು ಸಮಯ ಕಳೆಯಬಹುದಾಗಿರುತ್ತದೆ.
ಅಂಜಲಿ ರಾಮಣ್ಣ ಬರಹ
ಗಗನಚುಂಬಿ ಬೆಟ್ಟಗಳ ಸಂದಿಯಲ್ಲಿ ಬುದ್ಧಗಂಟೆಯ ಸದ್ದು
ನದಿ, ಜಲಪಾತಗಳೆಲ್ಲಾ ಹೆಪ್ಪುಗಟ್ಟಿದ್ದ ಚಳಿಗಾಲದಲ್ಲೊಮ್ಮೆ ನಾನು ಚೀನಾದ ದಟಾಂಗ್ ಎನ್ನುವ ಊರಿನಲ್ಲಿದ್ದೆ. ಇದು ಉತ್ತರ ಚೀನಾದ ಶಾಂಕ್ಷಿ ಪ್ರಾಂತ್ಯದಲ್ಲಿದೆ, ಇದರ ಸುತ್ತಮುತ್ತ ಯುನೆಸ್ಕೋ ತಾಣಗಳೂ ಸೇರಿದಂತೆ ಅನೇಕ ಪ್ರಾಚೀನ ಬೌದ್ಧತಾಣಗಳಿವೆ. ಅಲ್ಲೊಂದು ಹಳೆಯ ಬೌದ್ಧವಿಹಾರ. ಬೋಳುಬೆಟ್ಟಗಳ ಜೊತೆ ತಾನೂ ಒಂದಾಗಿರುವಂತೆ ತೋರುವ ಆ ವಿಹಾರ ನೆಲದಿಂದ ೭೫ ಮೀ ಎತ್ತರದಲ್ಲಿ ಬೆಟ್ಟದ ಮೇಲ್ಮೈನಲ್ಲಿ ೧೫೦೦ ವರ್ಷಗಳಿಂದ ಬೀಳದೆ, ಅಲ್ಲಾಡದೆ, ಮಳೆಗೆ ಜಗ್ಗದೆ, ಬಿಸಿಲಿಗೆ ಕುಗ್ಗದೆ, ಹಿಮಕ್ಕೆ ಕರಗದೆ, ಗಾಳಿಗೆ ಹಾರಿ ಹೋಗದೆ ಹಾಗೇ ಉಳಿದುಕೊಂಡು ನಮ್ಮಂತಹ ನೋಡುವ ಕಣ್ಣಿಗೆ ವಿಸ್ಮಯವಾಗಿ ಉಳಿದುಬಿಟ್ಟಿದೆ.
‘ದೇವ ಸನ್ನಿಧಿ’ ಅಂಕಣದಲ್ಲಿ ಗಿರಿಜಾ ರೈಕ್ವ ಬರಹ