Advertisement

ಪ್ರವಾಸ

ನೈನಿತಾಲ್ ಟ್ರಿಪ್ ನಲ್ಲಿ ಭೇಟಿಯಾದ ಭಗಿನಿ ಮತ್ತು ಕವಿ

ನೈನಿತಾಲ್ ಟ್ರಿಪ್ ನಲ್ಲಿ ಭೇಟಿಯಾದ ಭಗಿನಿ ಮತ್ತು ಕವಿ

1929ರಲ್ಲಿ ಗಾಂಧೀಜಿ ಕೌಸಾನಿಗೆ ಬಂದು, ಒಂದು ಅತಿಥಿ ಗೃಹದಲ್ಲಿ 3 ತಿಂಗಳು ತಂಗಿದ್ದರು. ಅಲ್ಲಿ ಅವರು “ ಅನಾಸಕ್ತಿ ಯೋಗ” ದ ಬಗ್ಗೆ ಬರೆದ್ದದ್ದರಿಂದ ಆ ಗೆಸ್ಟ್ ಹೌಸ್ ಈಗ ಅನಾಸಕ್ತಿ ಆಶ್ರಮ ಎಂದು ಕರೆಸಿಕೊಳ್ಳುತ್ತಿದೆ. ಗಾಂಧಿ ಆಗ ಕೌಸಾನಿಯನ್ನು ‘ಸ್ವಿಟ್ಸರ್ ಲ್ಯಾಂಡ್’ ಎಂದು ಕರೆದಿದ್ದರಂತೆ. ಈಗ ಅನಾಸಕ್ತಿ ಆಶ್ರಮದಲ್ಲಿ ಮ್ಯೂಸಿಯಮ್, ಪುಸ್ತಗಳ ಸಂಗ್ರಹಾಲಯ ಮಾಡಲಾಗಿದೆ. ಸರ್ಕಾರದ ದೇಖ್‍ರೇಕಿಯಲ್ಲಿ ಇನ್ನೂ ಮೌನ ಮತ್ತು ಕಳಚಿಕೊಳ್ಳುವುದರ ಬಗ್ಗೆ ಆಸಕ್ತಿ ಹುಟ್ಟಿಸುತ್ತಾ ಸದ್ದು ಮಾಡದೆ ನಿಂತಿದೆ ಅನಾಸಕ್ತಿ ಆಶ್ರಮ.
ಕಂಡಷ್ಟೂ ಪ್ರಪಂಚ ಪ್ರವಾಸ ಅಂಕಣದಲ್ಲಿ  ಅಂಜಲಿ ರಾಮಣ್ಣ ಬರಹ ಇಂದಿನ ಓದಿಗಾಗಿ.

read more
ತನ್ನೋಟಿ ಮಾತಾ ಆಶೀರ್ವಾದವೇ ಸೈನಿಕರಿಗೆ ಸ್ಫೂರ್ತಿ

ತನ್ನೋಟಿ ಮಾತಾ ಆಶೀರ್ವಾದವೇ ಸೈನಿಕರಿಗೆ ಸ್ಫೂರ್ತಿ

ಇಂಡೋ-ಪಾಕ್ ಸರಹದ್ದು ನೋಡಲೇ ಬೇಕು ಎನ್ನುವ ಆಸೆ ಗುದ್ದತೊಡಗಿತು. ದೇಶಭಕ್ತಿ ಮರುಭೂಮಿಯ ಓಯಸಿಸ್ನಂತೆ ಚಿಮ್ಮುತ್ತಿತ್ತು. ಕಾಲೇಜು ದಿನಗಳಲ್ಲಿ ಎನ್.ಸಿ.ಸಿ ಜಲಸೇನೆ ವಿಭಾಗದಲ್ಲಿದ್ದೆ. ಹಿಂದೂ ಮಹಾಸಾಗರವನ್ನು ಉದ್ದಗಲಕ್ಕೂ ಈಜಿ ವರಾಹವತಾರವೆತ್ತಿ ಭಾರತ ಮಾತೆಯನ್ನು ರಕ್ಷಿಸಿಕೊಂಡು ಬಂದ್ಹಾಗೆ ಕಂಡಿದ್ದ ಕನಸು ನೆನಪಾಗುತ್ತಲೇಯಿತ್ತು. ದೇಶ ಭಕ್ತಿಯೊಂದೇ ಸ್ಥಾಯಿ ಭಾವ ಅಂದುಕೊಂಡು ಅಲ್ಲಿದ್ದ ಸೈನಿಕರನ್ನು ನೋಡುತ್ತಾ ತನ್ನೋಟಿ ಮಾತಾಳನ್ನು ‘ಬಾರ್ಡರ್ ಗೆ ಕರೆದುಕೊಂಡು ಹೋಗು ‘ ಎಂದು ಬೇಡಿಕೊಳ್ಳುತ್ತಿದ್ದೆ.‌ ಕಂಡಷ್ಟೂ ಪ್ರಪಂಚ ಅಂಕಣದಲ್ಲಿ ಅಂಜಲಿ ರಾಮಣ್ಣ ಅವರ ಬರಹ.

read more
ಜ್ವಾಲಾಮುಖಿಯ ತಪ್ಪಲು ಜೀವನ್ಮುಖಿ

ಜ್ವಾಲಾಮುಖಿಯ ತಪ್ಪಲು ಜೀವನ್ಮುಖಿ

ಕಾರಿನ ಪಯಣದಲ್ಲಿ ನೋಡಿದ್ದು ಎಟ್ನಾ ಪರ್ವತದ ಐದು ಸೂಕ್ಷ್ಮ ವಲಯಗಳನ್ನು. ಜ್ವಾಲಾಮುಖಿಯ ತಪ್ಪಲಿನ ಜಾಗ ವ್ಯರ್ಥ ಭೂಮಿಯೆಂದು ಭಾವಿಸಿದ್ದ ನನಗೆ ಇದೊಂದು ಆಶ್ಚರ್ಯಕರ ಸಂಗತಿಯಾಗಿತ್ತು. ಈ ಪರ್ವತದ ಮಣ್ಣಿನ ಫಲವತ್ತತೆ ಹೆಚ್ಚಿರುವುದರಿಂದ ಇಲ್ಲಿನ ಕೃಷಿ ಉತ್ಪನ್ನಗಳಿಗೆ ಪ್ರಪಚದಾದ್ಯಂತ ಒಂದು ಗರಿಮೆಯಿದೆ. ನನ್ನ ಕಲ್ಪನೆಗೆ ಇದು ತದ್ವಿರುದ್ಧವಾಗಿತ್ತು. ಪರ್ವತದ ತಪ್ಪಲಿನ ಕೆಳ ಹಂತದಲ್ಲಿ ಕಿತ್ತಳೆ, ಗಜ ನಿಂಬೆ ಬೆಳೆಯುತ್ತಾರೆ.
ಸಿಸಿಲಿಯನ್‌ ಓಡಾಟದ ಮತ್ತಷ್ಟು ಅನುಭವಗಳನ್ನು ಗುರುದತ್ ಅಮೃತಾಪುರ ಅವರು ತಮ್ಮ ‘ದೂರದ ಹಸಿರು’ ಅಂಕಣದಲ್ಲಿ ಹಂಚಿಕೊಂಡಿದ್ದಾರೆ.

read more
ಮೌಂಟ್‌ಅಬುವಿನ ಒಳಹೊರಗೆಲ್ಲ ಸುತ್ತುತ್ತಾ…

ಮೌಂಟ್‌ಅಬುವಿನ ಒಳಹೊರಗೆಲ್ಲ ಸುತ್ತುತ್ತಾ…

ಬೆಟ್ಟದ ದಾರಿ. ಸಂಜೆಯಾಗುವ ಮೊದಲೇ ಮೇಲೇರಬೇಕು ಎನ್ನುವ ಧಾವಂತದಲ್ಲೇ ಹೊರಟೆ. ಇಕ್ಕೆಲಗಳಲ್ಲೂ ಅರಾವಳಿ ಪರ್ವತಶ್ರೇಣಿಯ ಸ್ನಿಗ್ಧ ಸೌಂದರ್ಯಾಸ್ವಾದನೆ. ಸ್ವಪ್ನಲೋಕದ ದಾರಿಯಲ್ಲಿ ಪಯಣಿಸಿ ಸೂರ್ಯಾಸ್ತದ ವೇಳೆಗೆ ತಲುಪಿದ್ದು ಸಮುದ್ರಮಟ್ಟದಿಂದ 1200 ಮೀಟರುಗಳಷ್ಟು ಮೇಲಿರುವ, ಬೇಸಿಗೆ ಅರಮನೆಗಳ ನಗರ ಮೌಂಟಬುವನ್ನು. ಥಾರ್ ಮರುಭೂಮಿಯ ಈ ನಾಡಿಗೆ ಉಣ್ಣೆ ಬಟ್ಟೆಯನ್ನು ಹೊತ್ತಿ ಹೋಗುವ ಕಲ್ಪನೆಯೂ ನನಗಿರಲ್ಲಿಲ್ಲ. ಆದರೆ ಕಾಲಿಟ್ಟೊಡನೆ ಮೈನಡುಗಿಸಿತ್ತು ಅಲ್ಲಿನ ಹವೆ.
‘ಕಂಡಷ್ಟೂ ಪ್ರಪಂಚʼ ಪ್ರವಾಸ ಅಂಕಣದಲ್ಲಿ ಅಂಜಲಿ ರಾಮಣ್ಣ ಬರಹ

read more
ಕಾಟ್ಸ್ ವೋಲ್ಡ್ಸ್: ಸಿಂಹದ ಒನಪಿರುವ ಕುರಿಗಳ ಸಾಮ್ರಾಜ್ಯ

ಕಾಟ್ಸ್ ವೋಲ್ಡ್ಸ್: ಸಿಂಹದ ಒನಪಿರುವ ಕುರಿಗಳ ಸಾಮ್ರಾಜ್ಯ

ಕುರಿಯು ಸಿಂಹ ಎನಿಸಿಕೊಳ್ಳುವ ಏಕೈಕ ಜಾಗ ಕಾಟ್ಸ್ ವೋಲ್ಡ್ಸ್, ಹದಿನಾರು, ಹದಿನೇಳನೆಯ ಶತಮಾನದಿಂದಲೋ ಕುರಿ ಸಂತೆಗೆ ಪ್ರಖ್ಯಾತವಾಗಿರುವ ಜಾಗ. ಈ ರಾಜ್ಯದಂತಹಾ ಸಂಸ್ಥಾನದಲ್ಲಿ ಮೊನ್ನೆಮೊನ್ನೆಯವರೆಗೂ ಒಂದೇ ದಿನದಲ್ಲಿ ಇಪ್ಪತ್ತು ಸಾವಿರ ಕುರಿಗಳು ಮಾರಾಟವಾದ ಹೆಗ್ಗಳಿಕೆ. ಇಲ್ಲಿನ ಕುರಿಗಳು ಸಹಜವಾಗಿಯೇ ಒಮ್ಮೆಲೆ ಇನ್ನೂರು ಕಿಲೋಗ್ರಾಮ್ಗಳಷ್ಟು ಬೆಳೆಯಬಲ್ಲವು. ತಮ್ಮ ಮೈಮೇಲೆಲ್ಲಾ ಹೊನ್ನ ಬಣ್ಣದ ಕೂದಲನ್ನು ಬೆಳೆಸಿಕೊಂಡು ವಿಶ್ವದ ಗಮನವನ್ನು ತಮ್ಮೆಡೆಗೆ ಸೆಳೆದುಕೊಂಡವು ಇಲ್ಲಿನ ಕುರಿಗಳು. ‘ಕಂಡಷ್ಟೂ ಪ್ರಪಂಚ ಅಂಕಣದಲ್ಲಿ ಇಂಗ್ಲೆಂಡ್ ನ ಕುರಿ ಸಂಸ್ಥಾನದ ಕುರಿತು ಬರೆದಿದ್ದಾರೆ ಅಂಜಲಿ ರಾಮಣ್ಣ

read more
ನೆತ್ತರ ಇತಿಹಾಸ ಕೇಳಿ, ಕೈಬಿಟ್ಟ ಬಳೆಗಳು

ನೆತ್ತರ ಇತಿಹಾಸ ಕೇಳಿ, ಕೈಬಿಟ್ಟ ಬಳೆಗಳು

ಜಯದ್ವಾರದಿಂದ ಒಳಹೊಕ್ಕು ಲೋಹದ್ವಾರದಿಂದ ಹೊರಬರುವ ವ್ಯವಸ್ಥೆಯಿರುವ ಈ ಕೋಟೆ ಅನ್ನೋ ಮತ್ತೊಂದು ಜಗತ್ತನ್ನು ಅನುಭವಿಸೋದಕ್ಕೆ ಅದೆಷ್ಟು ಪುನರ್ಭೇಟಿಗಳು ಬೇಕೋ ಅಂದುಕೊಳ್ಳುತ್ತಾ, ಇತಿಹಾಸದೊಳಗಿನ ಯಾನದಾನಂದದಿಂದ ಹಗುರವಾಗಿದ್ದ ಮೈಮನಸು ಹೊತ್ತು ಕಲ್ಲು ಹಾಸಿನ ಗುಂಟ ಹೆಜ್ಜೆಯಿಡುತ್ತಾ ಹೊರ ಬರುತ್ತಿದ್ದೆ. ತಕ್ಷಣ ನನ್ನ ಬಲಗೈ ತುದಿಗಣ್ಣಿಗೆ ಕಂಡದ್ದು ಅಚ್ಚಕೆಂಪಿನ ಹದಿನೈದು ಜೊತೆ ಹಸ್ತಗಳ ಗುರುತು ಗೋಡೆಯ ಮೇಲೆ!
‘ಕಂಡಷ್ಟೂ ಪ್ರಪಂಚ’ ಪ್ರವಾಸ ಅಂಕಣದಲ್ಲಿ ಜೋಧ್‌ಪುರ ಪ್ರವಾಸದ ಕುರಿತು ಬರೆದಿದ್ದಾರೆ ಅಂಜಲಿ ರಾಮಣ್ಣ

read more
ಶ್ರದ್ಧೆಯ ಮೂಲ ಎಲ್ಲಿದೆ?

ಶ್ರದ್ಧೆಯ ಮೂಲ ಎಲ್ಲಿದೆ?

ಆತ ಮೇಲೆ ಹೋಗಿ ಗಂಧದ ಕಡ್ಡಿ ಹಚ್ಚಿ ಅಷ್ಟೂ ದಿಕ್ಕಿಗೆ ಭಕ್ತಿಯಿಂದ ಪೂಜೆ ಮಾಡಿದ. ಆಮೇಲೆ ನಮಸ್ಕರಿಸಿದ. ಹೊರಡುವ ಮುಂಚೆ ಕೇಳಿದೆ. ಏನಿದು ಅಂತ. ಆತ “ಸುತ್ತ ದೇವರುಗಳಿದ್ದಾರೆ, ಪೂಜೆ ಮಾಡದಿದ್ದರೆ ಆಗುತ್ತಾ? ದಿನ ಬೆಳಿಗ್ಗೆ ಸಾಯಂಕಾಲ ನಾವು ಯಾರೇ ಶಿಫ್ಟ್‌ ನಲ್ಲಿರಲಿ ಪೂಜೆ ಮಾತ್ರ ತಪ್ಪಿಸಲ್ಲ” ಎಂದ. ಅವರು ಅದ್ಯಾವುದೂ ಮಾಡದಿದ್ದರೂ ನಡೆಯುತ್ತೆ. ಆರ್ಕಿಯಾಲಜಿಯವರ ಪ್ರಕಾರ ಅದೊಂದು ಸ್ಮಾರಕ. ಪೂಜೆಗೆ ದುಡ್ಡು ಕೊಡೋಲ್ಲ. ಅದು ನಿತ್ಯಪೂಜೆ ನಡೆಯುವ ದೇವಾಲಯವಲ್ಲ. ಆದರೆ ಇದು ಅಲ್ಲಿರುವ ಸೆಕ್ಯುರಿಟಿಗಳು ನಡೆಸಿಕೊಂಡು ಬಂದಿರುವ ಪರಿಪಾಠ.
ಗಿರಿಜಾ ರೈಕ್ವ ಬರೆಯುವ ಪ್ರವಾಸ ಅಂಕಣ

read more
ಬಂಗಾಳಕೊಲ್ಲಿಯ ಮೂಗುತಿ ವಜ್ರ ಅಂಡಮಾನ್‌

ಬಂಗಾಳಕೊಲ್ಲಿಯ ಮೂಗುತಿ ವಜ್ರ ಅಂಡಮಾನ್‌

ಸಮುದ್ರದೆದುರು ನಾವೆಲ್ಲರೂ ಗುಬ್ಬಚ್ಚಿಗಳಂತೆ ಹಾರಾಡೋ ಹಕ್ಕಿಗಳು, ಒಮ್ಮೆ ನೀಲಿ ಮತ್ತೊಮ್ಮೆ ಕೆಂಪಾದ ಆಕಾಶ, ಕನಸಿನಲೋಕಕ್ಕೆ ಜಾರುಬಂಡಿಯಾಗೋ ನುಣುಪು ಪಾಚಿ ಕಟ್ಟೆಗಳು, ಎಲ್ಲಿಯೂ ಕಾಣದ ಆದಿವಾಸಿಗಳು, ಹೂವು ಮುಡಿದು ಓಡಾಡೋ ತಮಿಳು-ಬೆಂಗಾಳಿ ಹೆಣ್ಮಕ್ಕಳು, ಎಂದಿನಂತೆ ಏನೇನೋ ಧಾವಂತಹೊತ್ತ ಚಡಪಡಿಸೋ ಗಂಡಸರು, ಬೆರಳುಗಳು ಬೆಸಗೊಂಡಂತೆ ಇಷ್ಟಿಷ್ಟೇ ದೂರದಲ್ಲಿ ಅಂಟಿಕೊಂಡಿರೋ ಚಿಕ್ಕ ಚಿಕ್ಕ ದ್ವೀಪಗಳು, ಭೂಮಿಯೊಂದಿಗಿನ ರೋಮ್ಯಾನ್ಸ್‌ಗಾಗಿಯೇ ಹುಟ್ಟೋ ಸೂರ್ಯ ಇದು ಅಂಡಮಾನ್!
ಅಂಡಮಾನ್‌ ಪ್ರವಾಸದ ಕುರಿತು ಬರೆದಿದ್ದಾರೆ ಅಂಜಲಿ ರಾಮಣ್ಣ

read more
ಸಿಸಿಲಿಯ ಹಾಳು ಹಂಪೆ ಈ ಸಿರಕುಸಾ

ಸಿಸಿಲಿಯ ಹಾಳು ಹಂಪೆ ಈ ಸಿರಕುಸಾ

ಇಲ್ಲೊಂದು ಕ್ಯಾಥೆಡ್ರೆಲ್ ಇದೆ. ಇದರ ಮೂಲ ಗ್ರೀಕ್ ದೇವಾಲಯ. ಕ್ರಿ.ಪೂ. ಐದನೇ ಶತಮಾದಲ್ಲಿ ಕಟ್ಟಿದ ಈ ದೇವಾಲಯದ ಕಂಬಗಳು ಈಗಲೂ ಹಾಗೆಯೇ ಇವೆ. ರೋಮನ್ ಆಳ್ವಿಕೆಯಲ್ಲಿ ರೋಮನ್ ದೇವಾಲಯವಾಗಿತ್ತು. ನಂತರ ಕ್ರೈಸ್ತ ಧರ್ಮ ಬಂದ ನಂತರ ಇದನ್ನು ಚರ್ಚ್ ಆಗಿ ಮಾರ್ಪಾಡು ಮಾಡಲಾಯಿತು. ಆಮೇಲೆ ಅರಬ್ಬರ ಆಳ್ವಿಕೆಯಲ್ಲಿ ಮಸೀದಿ ಮಾಡಲಾಯಿತು. ನಂತರ ಮತ್ತೆ ಇಟಾಲಿಯನ್ ಆಳ್ವಿಕೆ ಬಂದ ನಂತರ ಇದನ್ನು ಪುನಃ ಚರ್ಚ್ ಮಾಡಲಾಯಿತು. ನನಗೆ ತಿಳಿದ ಮಟ್ಟಿಗೆ ಗ್ರೀಕ್ ದೇವಾಲಯದಿಂದ ಹಿಡಿದು ರೋಮನ್ ದೇವಾಲಯವಾಗಿ, ನಂತರ ಚರ್ಚ್ ಆಗಿ, ತದನಂತರ ಮಸೀದಿಯಾಗಿ ಮತ್ತೆ ಚರ್ಚ್ ಆದ ಇತಿಹಾಸವಿರುವ ಸ್ಥಳ ಇದೊಂದೇ! ದೂರದ ಹಸಿರು ಸರಣಿಯಲ್ಲಿ ಗುರುದತ್ ಅಮೃತಾಪುರ ಬರಹ

read more

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ