Advertisement

ವ್ಯಕ್ತಿ ವಿಶೇಷ

ನಾನೆಂಬ ‘ನನ್ನ’ನ್ನು ಅಳಿಸುವ ಆಧ್ಯಾತ್ಮಿಕ ಜಗತ್ತು: ಜುಲೇಖಾ ಬೇಗಂ ಜೀವನ ವೃತ್ತಾಂತ

ಕುರ್ಚಿ ಅಡಿಗಳಲ್ಲಿ, ನೆಲ ಮತ್ತು ಚಾಪೆಯ ಸ್ಥಳಗಳನ್ನು ಗುಡಿಸಿ ಸ್ವಚ್ಛಗೊಳಿಸುವುದೆಂದರೆ ಬರೋಬ್ಬರಿ ಎರಡು ಗಂಟೆಗಳ ಕೆಲಸ. ನನ್ನ ಎಳೆ ರಟ್ಟೆಯಲ್ಲಿದ್ದ ಶಕ್ತಿಯೆಲ್ಲವೂ ಸೋರಿ ಹೋದಂತೆ ಅನಿಸುತ್ತಿತ್ತು. ನಟಿ ಫ್ಲೋರಿನಾ ಬಾಯಿಯವರದ್ದೇ ಮೇಲುಸ್ತುವಾರಿ. ‘ಇನ್ನೂ ಆಗಿಲ್ಲವಾ?’ ಎಂದು ಅಧಿಕಾರ ಸಾಧಿಸುವ ಮಾತುಗಳನ್ನೇ ಪ್ರಶ್ನೆಯಾಗಿ ಕೇಳುತ್ತಿದ್ದರು. ಅಂದಹಾಗೆ, ಇದೆಲ್ಲದರ ನಡುವೆ ಅವರ ಸಾಕಿದ ಮಗಳು ದೂರದ ಹಾಸ್ಟೆಲ್‌ನಲ್ಲಿ ಓದುತ್ತಿದ್ದಳು. ರಜೆಗೆಂದು ಬಂದಾಗ ನನ್ನನ್ನು ಕಂಡಳು. ಆಡಲು ಜೊತೆಯಾಗುತ್ತಾಳೆ ಎಂದುಕೊಂಡಿದ್ದಳೋ ಏನೊ, ಅದಕ್ಕಾಗಿ ನನ್ನ ಬರುವಿಕೆಯನ್ನೇ ದೂರದಲ್ಲೇ ನಿಂತು ಕಾಯುತ್ತಿದ್ದಳು.
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ”

read more
ಅಭಿಮಾನಿಗಳ ಆಯರಿಯೂ, ಅಮ್ಮ ಹಾಕುತ್ತಿದ್ದ ಬರೆಗಳೂ….: ಜುಲೇಖಾ ಬೇಗಂ ಜೀವನ ವೃತ್ತಾಂತ

ಅಭಿಮಾನಿಗಳ ಆಯರಿಯೂ, ಅಮ್ಮ ಹಾಕುತ್ತಿದ್ದ ಬರೆಗಳೂ….: ಜುಲೇಖಾ ಬೇಗಂ ಜೀವನ ವೃತ್ತಾಂತ

ಒಂದೊಂದು ಪ್ರಯೋಗದಲ್ಲೂ ಲೋಹಿತಾಶ್ವನ ಪಾತ್ರವನ್ನು ನಿಭಾಯಿಸುವ ಸಾಮರ್ಥ್ಯವನ್ನು ಹೆಚ್ಚುಮಾಡಿಕೊಳ್ಳುತ್ತಿದ್ದೆ. ಜನರೆಲ್ಲ ಮನೆಗೆ ಬರಲು ಶುರುವಿಟ್ಟರು. ಭಾಗಮ್ಮನವರು ಇಂತಹದಕ್ಕೆಲ್ಲ ಸೊಪ್ಪೇ ಹಾಕುತ್ತಿರಲಿಲ್ಲ. ಎಂಟು ವರ್ಷ ಮೀರಿದಂತೆ ದೇಹ ಬದಲಾವಣೆಯಾಗುತ್ತಿತ್ತು. ನನ್ನ ಮುಖ, ಗಲ್ಲ, ಎದೆ, ಕೈ ತೋಳುಗಳು, ಇಡೀ ದೇಹವೇ ಅಗಲಿಸುತ್ತಿದ್ದ ವಯಸ್ಸು. ಅದಕ್ಕಾಗೋ ಅಥವಾ ಅಸೂಯೆಯಿಂದಲೋ ನಾನ್ಯಾರ ಬಳಿಯಾದರೂ ಮಾತಿಗೆಂದು ನಿಂತರೂ ಬೈದು, ಹೊಡೆದು ರಾದ್ಧಾಂತ ಮಾಡುತ್ತಿದ್ದರು.
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ” ಎಂಟನೆಯ ಕಂತು

read more
ಛಡಿ ಚಂ ಚಂ….: ಜುಲೇಖಾ ಬೇಗಂ ಜೀವನ ವೃತ್ತಾಂತ

ಛಡಿ ಚಂ ಚಂ….: ಜುಲೇಖಾ ಬೇಗಂ ಜೀವನ ವೃತ್ತಾಂತ

ಗಂಟಲಿನಿಂದ ಅದೆಷ್ಟೇ ಉಸಿರೆಳೆದರೂ, ನಾಲಗೆಯನ್ನು ಹೊರಳಿಸಿ ಉರುಳಿಸಿದರೂ ಊಹೂಂ, ಹಾಲು ಹಣ್ಣು ಬರಲೊಲ್ಲದು. ಅವರೂ ಹಿಡಿದ ಪಟ್ಟು ಬಿಡುವಂತೆ ಕಾಣಲಿಲ್ಲ. ಪಕ್ಕದಲ್ಲಿ ಪುಂಡಿ ಸೊಪ್ಪನ್ನು ಬಿಡಿಸಿಟ್ಟಿದ್ದರು. ಆ ಪುಂಡಿ ಕೋಲು ದಪ್ಪವಾಗಿರುತ್ತದೆ. ಮುಂದೇನು ಆಗಿರಬಹುದು ಹೇಳಿ? ಅನುಮಾನವೇ ಬೇಡ, ಬೆನ್ನಿಗೆ ಎರಡೇಟು ಬಾರಿಸಿದರು. ಚುರ್ ಎಂದು ಬಿದ್ದ ಏಟಿಗೆ ಕಣ್ಣಲ್ಲಿ ನೀರು ಜಿನುಗಿಸಿತು.
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ” ಏಳನೆಯ ಕಂತು

read more
ಹೊಸ ಬದುಕಿಗೆ ಬಿದ್ದ ಬುನಾದಿ: ಜುಲೇಖಾ ಬೇಗಂ ಜೀವನ ವೃತ್ತಾಂತ

ಹೊಸ ಬದುಕಿಗೆ ಬಿದ್ದ ಬುನಾದಿ: ಜುಲೇಖಾ ಬೇಗಂ ಜೀವನ ವೃತ್ತಾಂತ

ಬಿಡುವಿದ್ದಾಗೆಲ್ಲ ಅವರ ಮನೆಗೆ ಹೋಗುವುದು ಸಾಮಾನ್ಯವಾಯಿತು. ಸುಮ್ಮನಿರುವ ಗೆಜ್ಜೆ ನನ್ನ ಮನಸ್ಸಲ್ಲೇನೊ ಸದ್ದು ಮಾಡಿದರಂತೆ. ‘ನಾನೂ ಗೆಜ್ಜೆ ಕಟ್ಬೇಕು. ಕಟ್ರಿ’ ಎಂದು ಅಲವತ್ತುಕೊಂಡೆ. ‘ಹಾಗೆಲ್ಲ ಕಟ್ಬಾರ್ದವ್ವಾ, ದೇವ್ರಿಗೆ ಪೂಜೆ ಮಾಡಿ ಕಟ್ಟೋದು ಗೊತ್ತೇನು?’ ಎಂದು ಸುಮ್ಮನಿರಿಸಲು ನೋಡಿದರು. ಬಿಡುವವಳಲ್ಲ ನಾನು, ‘ಹಾಂ, ನಾನೂ ಪೂಜೆ ಮಾಡ್ತೇನಿ. ಕಟ್ರಲಾ’ ಎನ್ನುತ್ತಿದ್ದೆ. ನನ್ನ ಚಾಲಾಕಿತನ ಕಂಡು ನಕ್ಕು, ತಲೆ ಬಡಿದುಕೊಂಡು, ‘ನಿಮ್ಮವ್ವ ಬಿಟ್ಟಾಳ ನಮ್ಮನ್ನ, ಕಸಬರಿಕಿ ತಗೊಂಡು ಓಡ್ಸ್ಕೋತಾ ಬರ್ತಾರ’ ಎಂದು ತಮಾಷೆ ಮಾಡಿಬಿಡುತ್ತಿದ್ದರು.
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ”

read more
ಕಳ್ಳರು ಹಾಕಿದ ಕೊಡಲಿಯೇಟು…: ಜುಲೇಖಾ ಬೇಗಂ ಜೀವನ ವೃತ್ತಾಂತ

ಕಳ್ಳರು ಹಾಕಿದ ಕೊಡಲಿಯೇಟು…: ಜುಲೇಖಾ ಬೇಗಂ ಜೀವನ ವೃತ್ತಾಂತ

ಒಮ್ಮೆ ಆಡುತ್ತಾ, ಮನೆಗೆ ಬರುವುದು ತಡವಾಯಿತು. ಬಾಗಿಲೆದುರು ಬಂದು ನಿಂತೊಡನೆ, ಅವ್ವ ಸಿಟ್ಟಿನಿಂದ ನನ್ನ ಬಟ್ಟೆಯನ್ನೆಲ್ಲ ಬಿಚ್ಚಿ ಒಳಗೆಸೆದು, ‘ಈಗ್ ಹೋಗು. ನೋಡಾನ’ ಎಂದಿದ್ದಷ್ಟೇ ಅಲ್ಲ, ದಢಾರನೇ ಬಾಗಿಲನ್ನೂ ಮುಚ್ಚಿದಳು. ಆ ವಯಸ್ಸಿಗೆ ಅವ್ವ ತೋರುತ್ತಿದ್ದ ಪ್ರೀತಿಯ ಕದವೂ ಮುಚ್ಚಿದಂತೆನಿಸಿತು. ಈಗೆಲ್ಲಿಯಾದರೂ ಜೀವನದಲ್ಲಿ ಕಳೆದ ಘಟನೆಯೊಂದನ್ನು ಅಳಿಸಿಹಾಕುವ ಅವಕಾಶ ಸಿಕ್ಕರೆ ಬಹುಶಃ ಇದಕ್ಕೇ ಬಳಸಿಕೊಳ್ಳುತ್ತೇನೆ.
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ”

read more
ಹೋಗುತ್ತಾ ಹೋಗುತ್ತಾ.. ಕಳೆದೇ ಹೋಗಿದ್ದೆ…: ಜುಲೇಖಾ ಬೇಗಂ ಜೀವನ ವೃತ್ತಾಂತ

ಹೋಗುತ್ತಾ ಹೋಗುತ್ತಾ.. ಕಳೆದೇ ಹೋಗಿದ್ದೆ…: ಜುಲೇಖಾ ಬೇಗಂ ಜೀವನ ವೃತ್ತಾಂತ

ಹಾಗೆ ನಡೆದುಕೊಂಡು ಹೋಗುವಾಗ, ಊರಿನ ಪಡ್ಡೆ ಹುಡುಗರೆಲ್ಲ ‘ಸೋಗಲಾಡಿ ಸುಬ್ಬಿ, ಸೋಗಲಾಡಿ ಸುಬ್ಬಿ’ ಎಂದು ತಮಾಷೆ ಮಾಡುತ್ತಿದ್ದರು. ಆರು ವರ್ಷದವಳಾಗಿದ್ದ ನಾನು, ಇವ್ಯಾವ ಮಾತು ನನಗೆ ಬೇಕಿಲ್ಲವೆಂಬಂತೆ ಅವರೆಡೆಗೆ ಕಣ್ಣು ಹಾಯಿಸಿ, ಹುಬ್ಬೇರಿಸಿ ಮುಂದೆ ಹೆಜ್ಜೆ ಹಾಕುತ್ತಿದ್ದೆ. ಶಾಲೆಗೆ ಬಂದರೆ ಕೇಳಬೇಕೇ! ಕೆಲವರು ‘ನೀನು ಮಲ್ಲವ್ವನೋ ಸಿಂಗಾರವ್ವನೋ?’ ಎಂದರೆ, ಎಲ್ಲ ಟೀಚರ್ ಸೇರಿ ‘ನಿಮ್ಮವ್ವಗ ಕೆಲ್ಸ ಇಲ್ಲ, ನಿಂಗ್ ಬ್ಯಾಸರಿಲ್ಲ ತಗ’ ಎಂದು ನಾನು ಮಾಡಿಕೊಂಡ ಸಿಂಗಾರದ ಬಗ್ಗೆಯೇ ಚರ್ಚೆ ನಡೆಸುತ್ತಿದ್ದರು.
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ”

read more
ನಾನೊಬ್ಬಳು ಚಾಣಾಕ್ಷ ಹುಡುಗಿಯೇ ಆಗಿದ್ದೆ!: ಜುಲೇಖಾ ಬೇಗಂ ಜೀವನ ವೃತ್ತಾಂತ

ನಾನೊಬ್ಬಳು ಚಾಣಾಕ್ಷ ಹುಡುಗಿಯೇ ಆಗಿದ್ದೆ!: ಜುಲೇಖಾ ಬೇಗಂ ಜೀವನ ವೃತ್ತಾಂತ

“ಕಲಾವಿದರ ಮಾತಂತಿರಲಿ, ಊರೂರಿಗೆ ಬರುತ್ತಿದ್ದ ನಾಟಕವನ್ನೂ ನೋಡದ ಮನೆತನ ಎನ್ನಬಹುದೇನೊ. ಕಾಳಮ್ಮನಿಂದ ಮಲ್ಲಮ್ಮನಾಗಿ, ಮಲ್ಲಮ್ಮನಿಂದ ಸರಸ್ವತಿಯಾಗಿ, ಕೊನೆಗೆ ಸರಸ್ವತಿಯಿಂದ ಜುಲೇಖಾ ಬೇಗಂ ಆದೆ. ಕಲೆಯ ಹಿನ್ನೆಲೆಯಿಲ್ಲದೆ ಬೆಳೆದ ನನಗೆ ಅದ್ಹೇಗೆ ಈ ಅಭಿನಯ ಕಲೆ ಒದಗಿಬಂತೋ!”
ಕನ್ನಡ ರಾಜ್ಯೋತ್ಸವದ ಶುಭ ದಿನದಂದು ಹಿರಿಯ ರಂಗ ಕಲಾವಿದೆ ರಾಜ್ಯೋತ್ಸವ ಪ್ರಶಸ್ತಿ ವಿಜೇತೆ ಜುಲೈಕಾ ಬೇಗಂ ಅವರ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ”.
ನಿರೂಪಿಸುತ್ತಾರೆ ಕೀರ್ತಿ ಬೈಂದೂರು.

read more
ಅಜ್ಜನೂ, ಗಿಳಿಯೂ ಇಬ್ಬರೂ ವಾಪಸ್ಸು ಬರಲಿಲ್ಲ…: ಜುಲೇಖಾ ಬೇಗಂ ಜೀವನ ವೃತ್ತಾಂತ

ಅಜ್ಜನೂ, ಗಿಳಿಯೂ ಇಬ್ಬರೂ ವಾಪಸ್ಸು ಬರಲಿಲ್ಲ…: ಜುಲೇಖಾ ಬೇಗಂ ಜೀವನ ವೃತ್ತಾಂತ

ಅಂತೂ ಕಡಿದಾದ ಮಾರ್ಗದಲ್ಲಿ ಸಾಗಿ, ಜಾತ್ರೆಯಲ್ಲಿ ಸುತ್ತಾಡಿದೆವು. ತೇರಿನ್ನೂ ಎಳೆದಿರಲಿಲ್ಲ, ಕಾಯುವಷ್ಟು ವ್ಯವಧಾನವಿಲ್ಲದೆ ಸುಸ್ತಾಗುತ್ತಿದೆಯೆಂದು ಮತ್ತೆ ಅವರನ್ನು ಕರೆತಂದೆ. ಅರವತ್ತರ ವಯಸ್ಸಿನ ಡಾಕ್ಟರಜ್ಜನನ್ನು ಈ ರೀತಿಯಾಗಿ ನಡೆಸಿಕೊಂಡಿದ್ದಕ್ಕೆ ಮನೆ ಜನರಿಗೆಲ್ಲ ಸಿಟ್ಟು. ಅಷ್ಟು ದೂರದವರೆಗೆ ನಡೆಸಿ, ರಥೋತ್ಸವವನ್ನೂ ತೋರಿಸದೆ ಗಡಿಬಿಡಿಯಲ್ಲಿ ಕರೆದುಕೊಂಡು ಬಂದದ್ದಕ್ಕೆ ಎಲ್ಲರೂ ಬೈಯುವವರೇ. ಅಂದು ಸಮಯವಾಗುತ್ತಿದೆಯೆಂದು ಡಾಕ್ಟರಜ್ಜ ದದೇಗಲ್ಲಿಗೆ ಹೊರಟರು.
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ” ಎರಡನೆಯ ಕಂತು

read more
ಸಾವಿರದ ಮಕ್ಕಳ ಮಹಾಮಾತೆ: ಸುಮಾ ಸತೀಶ್ ಬರಹ

ಸಾವಿರದ ಮಕ್ಕಳ ಮಹಾಮಾತೆ: ಸುಮಾ ಸತೀಶ್ ಬರಹ

ಪ್ರಕೃತಿಯನ್ನು ತಾಯಾಗಿ ಆರಾಧಿಸುವ ಪರಂಪರೆ ನಮ್ಮದು. ಸುಗ್ಗಿಯ ಆಚರಣೆ, ಗೋಮಾಳಗಳು, ಊರಿಗೊಂದರಂತೆ ಇದ್ದ ಗುಂಡುದೋಪುಗಳು, ಇರುವೆ ಗೂಡಿಗೂ ನುಚ್ಚು ಎರೆವ ಸಂಸ್ಕೃತಿ, ಜಂಗಮಯ್ಯ, ಭಿಕ್ಷುಕ, ಆಯಗಾರರು, ದನಕರು, ಪ್ರಾಣಿ ಪಕ್ಷಿ ತಿಂದುಂಡ ನಂತರ ಮನೆಗೆ ಒಯ್ಯುವ ಸುಗ್ಗಿ ಆಚರಣೆ ಇಂತಹ ಸದಾಚಾರಗಳೆಲ್ಲಾ ನಮ್ಮ ನಡುವಿಂದ ಕಣ್ಮರೆಯಾಗಿದೆ. ಅಂತಹದ್ದರಲ್ಲಿ ಇಲ್ಲಿ ನಮಗೆ ಅನನ್ಯವೆನಿಸುವುದು ತಿಮ್ಮಕ್ಕ ಪ್ರಕೃತಿಯನ್ನು ಕೂಸಾಗಿ ಭಾವಿಸಿದ ಪರಿ. ಇದು ಇನ್ನೂ ಒಂದು ಹೆಜ್ಜೆ ಮಿಗಿಲಾದುದು. ನಮಗೊಂದು ಮಾನವೀಯ ಪರಂಪರೆಯನ್ನು ಹಾಸಿ ಕೊಟ್ಟಿರುವಂತಹದ್ದು.
ಸಾವಿರದ ಮಕ್ಕಳ ಮಹಾಮಾತೆ ಸಾಲುಮರದ ತಿಮ್ಮಕ್ಕನವರ ಕುರಿತು ಸುಮಾ ಸತೀಶ್ ಬರಹ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ