Advertisement

ವ್ಯಕ್ತಿ ವಿಶೇಷ

ಮೂವತ್ತು ವರ್ಷಗಳ ಹಿಂದೆ ಸಾರಾ ಉಮ್ಮಾ ಜೊತೆಗೆ

ಮೂವತ್ತು ವರ್ಷಗಳ ಹಿಂದೆ ಸಾರಾ ಉಮ್ಮಾ ಜೊತೆಗೆ

ನಾಲ್ಕು ದಶಕಗಳ ಹಿಂದೆ ತನ್ನ ನಲವತ್ತೆರಡನೆಯ ವಯಸ್ಸಿನಲ್ಲಿ ಬರೆಯಲು ಶುರು ಮಾಡಿದ ಸಾರಾ ಅಬೂಬಕ್ಕರ್ ಕನ್ನಡಕ್ಕೆ ಸಂಭವಿಸಿದ ಒಂದು ಅಚ್ಚರಿ. ಬಹುಶಃ ಕನ್ನಡಕ್ಕೆ ಸಂಭವಿಸಿದ ಇನ್ನೊಂದು ಅಚ್ಚರಿಯಾದ ಪಿ. ಲಂಕೇಶರು ಇಲ್ಲದಿದ್ದರೆ ಸಾರಾ ಕನ್ನಡದಲ್ಲಿ ಬರೆಯುತ್ತಲೇ ಇರಲಿಲ್ಲವೇನೋ.ಸುಮಾರು ಮೂವತ್ತು  ವರ್ಷಗಳ ಹಿಂದೆ ಆಗ ಇನ್ನೂ ಮೂವತ್ತರ ಹರೆಯದ ತರುಣನಾಗಿದ್ದ ಕನ್ನಡದ ಕಥೆಗಾರ ಅಬ್ದುಲ್ ರಶೀದ್ ಲಂಕೇಶ್ ಪತ್ರಿಕೆಗಾಗಿ ಸಾರಾ ಅವರೊಡನೆ ನಡೆಸಿದ್ದ ಮಾತುಕತೆಯ ಪಠ್ಯ ಇಲ್ಲಿದೆ

read more
ಸಾರಾ ಉಮ್ಮಾ ತೀರಿಕೊಂಡರು…

ಸಾರಾ ಉಮ್ಮಾ ತೀರಿಕೊಂಡರು…

ಕನ್ನಡ ಸಾಹಿತ್ಯ ಲೋಕದ ಹಿರಿಯ ಲೇಖಕಿ ಸಾರಾ ಅಬೂಬಕ್ಕರ್ ಮಂಗಳವಾರ ಮಧ್ಯಾಹ್ನ ತೀರಿಕೊಂಡರು. ಚಂದ್ರಗಿರಿಯ ತೀರದಲ್ಲಿ ಕಾದಂಬರಿಯ ಮೂಲಕ ಕನ್ನಡ ಸಾಹಿತ್ಯ ಲೋಕವನ್ನು ಪ್ರವೇಶಿಸಿದ ಸಾರಾ, ಲೇಖಕಿಯಾಗಿಯಷ್ಟೇ ಅಲ್ಲ, ಉದಾರವಾದಿ ಚಿಂತಕಿಯಾಗಿಯೂ ಗುರುತಿಸಿಕೊಂಡರು. ಅವರ ಕುರಿತು ಕಳೆದ ವರ್ಷ ಕೆಂಡಸಂಪಿಗೆಯಲ್ಲಿ ಪ್ರಕಟವಾದ ಬರಹವೊಂದು ಇಲ್ಲಿದೆ.

read more
ಕೋಲಾರದಲ್ಲಿ ಕಂಡ ‘ಕಾಮರೂಪಿ

ಕೋಲಾರದಲ್ಲಿ ಕಂಡ ‘ಕಾಮರೂಪಿ

‘ಅಯ್ಯೋ ನನ್ನ ಇಂಟರ್ನೆಟ್ ಹಾಳಾಗಿ ಹೋಗಿದೆ. ನಿನ್ನಂತಹ ಖಳರೊಡನೆ ಸಂಪರ್ಕಿಸಲು ಇದ್ದ ಈ ಭೂಲೋಕದ ಇದೊಂದು ಕೊಂಡಿಯೂ ಹೊರಟು ಹೋಗಿದೆ’ ಎಂದು ಪರದಾಡುತ್ತಿರುವ ಮಗುವಿನಂತಹ ಹಿರಿಯ ಲೇಖಕ ಕಾಮರೂಪಿ. `ತಡೀರಿ ಸಾರ್ ನಾನೂ ಒಂದು ಕೈ ನೋಡಿಯೇ ಬಿಡುತ್ತೇನೆ’ ಎಂದು ಕಲಿತ ವಿದ್ಯೆಯನ್ನೆಲ್ಲ ಬಳಸಿ ಇಂಟರ್ನೆಟ್ ಸರಿ ಮಾಡಲು ನೋಡಿದೆ. ಆಗಲಿಲ್ಲ. ನೋಡಿದರೆ ಫೋನೇ ಸತ್ತು ಹೋಗಿತ್ತು.

read more
ಬಸವರಾಜು ಕುಕ್ಕರಹಳ್ಳಿ ಎಂಬ ಕಥೆಗಾರನೊಟ್ಟಿಗಿನ ಕೆಲವು ನೆನಪುಗಳು

ಬಸವರಾಜು ಕುಕ್ಕರಹಳ್ಳಿ ಎಂಬ ಕಥೆಗಾರನೊಟ್ಟಿಗಿನ ಕೆಲವು ನೆನಪುಗಳು

ಈ ಹಿಂದಿನಿಂದಲೂ ಕಾವ್ಯ ಬರೆಯಿರಿ ಎಂದು ಪೀಡಿಸುತ್ತದ್ದ ನನಗೆ ಕರೋನಾ ಸಂದರ್ಭದಲ್ಲಿ ಕರೆ ಮಾಡಿ ಭೇಟಿ ಮಾಡುವಂತೆ ತಿಳಿಸಿದರು ಅಂತೂ ಖುಷಿಪಟ್ಟು ಅವರನ್ನು ರಾಮಕೃಷ್ಣ ನಗರದ ಪಾರ್ಕೊಂದರಲ್ಲಿ ಭೇಟಿಯಾದೆ. ಒಂದು ಟೈಪಿಸಿದ ಹಾಳೆಗಳ ಗುಚ್ಚವನ್ನು ನೀಡುತ್ತಾ “ನೋಡಪ್ಪ ಇವು ಕವಿತೆ ಎನಿಸಿದರೆ ಪ್ರಕಟಿಸೋಣ, ಇಲ್ಲವೆಂದರೆ ಬೇಡ” ಎಂದು ಮೌನವಾದರು.
ನೆನ್ನೆ ಕತೆಗಾರ ಬಸವರಾಜು ಕುಕ್ಕರಹಳ್ಳಿ ನಿಧನರಾದರು. ಅವರೊಂದಿಗೆ ಒಡನಾಡಿದ ಒಂದಷ್ಟು ನೆನಪುಗಳನ್ನು ಅಭಿಷೇಕ್‌ ವೈ.ಎಸ್. ಇಲ್ಲಿ ಹಂಚಿಕೊಂಡಿದ್ದಾರೆ.

read more
ಬೆಟ್ಟ ಅಗೆದು ಗಂಗೆಯನ್ನು ತಂದವರು

ಬೆಟ್ಟ ಅಗೆದು ಗಂಗೆಯನ್ನು ತಂದವರು

ಅಮೈ ಮಹಾಲಿಂಗ ನಾಯ್ಕ ಅವರು ಬಂಟ್ವಾಳದ ತಾಲೂಕಿನ ಅಡ್ಯನಡ್ಕ ಸಮೀಪದ ಅಮೈ ಎಂಬ ಊರಿನ ನಿವಾಸಿ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷಿ ಜೀವನವು ಮರೆಯಾಗುತ್ತಿದೆ ಎಂಬ ಆತಂಕ ಕವಿಯುತ್ತಿರುವ ಸಂದರ್ಭದಲ್ಲಿ ಅಮೈ ಮಹಾಲಿಂಗ ನಾಯ್ಕರು ಬೋಳುಗುಡ್ಡವನ್ನು ಹಸನು ಮಾಡುವ ಕಾಯಕದಲ್ಲಿ ನಿರತರಾಗಿದ್ದರು. ಕೃಷಿ ಕಾಯಕದ ಮೂಲಕ ಸ್ವಾವಲಂಬಿ ಜೀವನ ಸಾಧ್ಯ ಎಂಬುದನ್ನು ಆಧುನಿಕ ತಲೆಮಾರಿಗೆ ತೋರಿಸಿಕೊಟ್ಟಿದ್ದಾರೆ. ಅವರು ಜೀವನದಲ್ಲಿ ಪ್ರಯತ್ನಗಳಿಗೆ ಎಂದೂ ‘ರಜಾ’ ತೆಗೆದುಕೊಂಡಿದ್ದೇ ಇಲ್ಲ. ಅವರ ಬಗ್ಗೆ ಕೋಡಿಬೆಟ್ಟು ರಾಜಲಕ್ಷ್ಮಿ ಅವರ ಬರಹ ಇಲ್ಲಿದೆ.

read more
ಏಳು ಪುಣ್ಯದ ಕೆರೆಗಳನ್ನು ಕೊಟ್ಟವರು ತೀರಿಹೋದರು

ಏಳು ಪುಣ್ಯದ ಕೆರೆಗಳನ್ನು ಕೊಟ್ಟವರು ತೀರಿಹೋದರು

ನೋಡಲು ಬಿಕಾರಿಯಂತೆ ತೋರುವ ಆದರೆ ಮಾತನಾಡಲು ತೊಡಗಿದರೆ ಸಂತನಂತೆ ಕಾಣುವ ಕಾಮೇಗೌಡರು ಒಣ ಪ್ರದೇಶವಾದ ಮಳವಳ್ಳಿ ತಾಲ್ಲೂಕಿನ ಕುಂದೂರು ಬೆಟ್ಟದ ಪಾದದಲ್ಲಿ ಕೈಯ್ಯಾರೆ ತೋಡಿರುವ ಈ ಏಳು ಕೆರೆಗಳು ಕರ್ಮಯೋಗಿಯೊಬ್ಬ ನಲವತ್ತು ವರ್ಷಗಳಿಂದ ನಡೆಸಿರುವ ಕಾಯಕದಂತೆ ಬೆಳಗುತ್ತಿವೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕು ದಾಸನದೊಡ್ಡಿ ಗ್ರಾಮದ ಕಲ್ಮನೆ ಕಾಮೇಗೌಡರು ತಾವು ಕಟ್ಟಿದ ಹದಿನಾರು ಕೆರೆಗಳನ್ನು ಇಲ್ಲೇ ಬಿಟ್ಟು ತಾವು ಮಾತ್ರ ಇಂದು ಬೆಳಗ್ಗೆ ತೀರಿಹೋದರು. ಅವರ ಕುರಿತು ಅಬ್ದುಲ್ ರಶೀದ್ ಬರೆದಿದ್ದ ವ್ಯಕ್ತಿಚಿತ್ರ ನಿಮ್ಮ ಓದಿಗೆ

read more
ಕತೆ ಹೇಳಿಸಿಕೊಳ್ಳುವ ಉಮ್ಮ, ಪುಸ್ತಕ ಕೊಡಿಸು ಎನ್ನುವ ಬಾಪಾ

ಕತೆ ಹೇಳಿಸಿಕೊಳ್ಳುವ ಉಮ್ಮ, ಪುಸ್ತಕ ಕೊಡಿಸು ಎನ್ನುವ ಬಾಪಾ

ತಾನು ಕತೆಗಾರನೆಂದು ಹೇಳಿಕೊಳ್ಳುವ ಮುನವ್ವರ್‌ ಜೋಗಿಬೆಟ್ಟು ಅವರ ಅಂತರಂಗದಲ್ಲೊಂದು ಹಾಡಿದೆ. ಅದು ಅವರ ಪರಿಸರ ಪ್ರೀತಿಯ ಹಾಡು. ಅದೇ ಪ್ರೀತಿಯಲ್ಲಿ ಅವರು ಕೆಂಡಸಂಪಿಗೆಗೆ ಸರಣಿ ಬರಹಗಳನ್ನು ಬರೆಯುತ್ತಾ ತಮ್ಮ ಬರವಣಿಗೆಯನ್ನು ಮತ್ತಷ್ಟು ಚಂದಮಾಡಿಕೊಂಡರು. ʻಇಷ್ಕಿನ ಒರತೆಗಳುʼ ಎಂಬ ಕವನ ಸಂಕಲನ ಪ್ರಕಟಿಸಿದರು. ಅವರಿಗೆ ಇಂದು ವಿಜಯಕರ್ನಾಟಕ ಕಥಾ ಸ್ಪರ್ಧೆಯಲ್ಲಿ ಮೊದಲ ಬಹುಮಾನ ಬಂದಿದೆ. ಈ ಬಹುಮಾನ ಬಂದ ಖುಷಿಯಲ್ಲಿ ತುಂಬಾ ಮಾತನಾಡಿದರು.

read more
ಛಂದ ಪ್ರಶಸ್ತಿ ಪಡೆದ ಫಾತಿಮಾ ರಲಿಯಾ….

ಛಂದ ಪ್ರಶಸ್ತಿ ಪಡೆದ ಫಾತಿಮಾ ರಲಿಯಾ….

ಕೆಂಡಸಂಪಿಗೆಯ ಮೂಲಕ ಬರಹಲೋಕಕ್ಕೆ ಕಾಲಿಟ್ಟ ಫಾತಿಮಾ ರಲಿಯಾ ಕವಿತೆಗಳನ್ನು ಬರೆಯಲಾರಂಭಿಸಿ ಪ್ರಬಂಧಗಳನ್ನು ತುಂಬಾ ಪ್ರೀತಿಸಿದರು. ಕರಾವಳಿಯ ಸಾಮಾಜಿಕತೆಯನ್ನು ವಿಭಿನ್ನ ದೃಷ್ಟಿಕೋನದಿಂದ ನೋಡುವ  ಭರವಸೆಯ ಲೇಖಕಿ. ಅವರ ಕಥಾ ಸಂಕಲನದ ಹಸ್ತಪ್ರತಿಗೆ ಛಂದಪುಸ್ತಕ ಬಹುಮಾನ ಬಂದಿದೆ. ಕವಿತೆಯ ಮೂಲಕ ಸಾಹಿತ್ಯ ಲೋಕ ಪ್ರವೇಶಿಸಿದ ತಾನು ಪ್ರಬಂಧಗಳ ಲೋಕದಲ್ಲಿ ವಿಹರಿಸಿ ಈ ಕಥಾಲೋಕವನ್ನು ಪ್ರವೇಶಿಸಿದ್ದೇನೆ ಎನ್ನುವ ಫಾತಿಮಾ ರಲಿಯಾ ಅವರು ತಮ್ಮಖುಷಿಯನ್ನು ಕೆಂಡಸಂಪಿಗೆಯ ಜೊತೆಗೆ ಹಂಚಿಕೊಂಡರು.  ಅವರೊಡನೆ ನಡೆಸಿದ ಮಾತುಕತೆಯ ಒಂದಿಷ್ಟು ವಿಚಾರಗಳು ಇಲ್ಲಿವೆ.

read more
ಅನುಭವ ಬುತ್ತಿಯನ್ನು ಅಕ್ಷರವಾಗಿಸಿದ ಲೇಖಕಿ ಅರ್ನಾಕ್ಸ್‌

ಅನುಭವ ಬುತ್ತಿಯನ್ನು ಅಕ್ಷರವಾಗಿಸಿದ ಲೇಖಕಿ ಅರ್ನಾಕ್ಸ್‌

ಅರ್ನಾಕ್ಸ್ ಬೆಳೆದಿದ್ದು ಫ್ರಾನ್ಸಿನ ನಾರ್ಮಂಡಿ ಪ್ರಾಂತ್ಯದ ಯ್ವೆಟೊಟ್ ಎಂಬ ಪುಟ್ಟ ನಗರದಲ್ಲಿ. ಅವರ ತಂದೆ ಅಲ್ಲಿ ಒಂದು ಕಿರಾಣಿ ಅಂಗಡಿ ಮತ್ತು ಕೆಫೆಯನ್ನು ನಡೆಸುತ್ತಿದ್ದರು. ಅಲ್ಲಿಯ ಶಾಲೆಯಲ್ಲಿ ಕಲಿಯುತ್ತಿರುವಾಗಲೇ ಅವರಿಗೆ ಬಡತನವು ತಂದಿಡಬಹುದಾದ ಸಾಮಾಜಿಕ ತಾರತಮ್ಯದ ಅರಿವಾಯಿತು. ತಮ್ಮ ಬರವಣಿಗೆಯ ಐವತ್ತು ವರ್ಷಗಳಲ್ಲಿ ಅವರು ಬರೆದ ಕೃತಿಗಳ ಸಂಖ್ಯೆ ಇಪ್ಪತ್ತಕ್ಕಿಂತಲೂ ಹೆಚ್ಚು. ಹೆಚ್ಚಿನವು ಕಾದಂಬರಿಗಳಾದರೆ ಇನ್ನು ಕೆಲವು ನಾಟಕಗಳು, ಚಿತ್ರಕಥೆಗಳು. 2022ರ ನೊಬೆಲ್ ಪಾರಿತೋಷಕ ಫ್ರಾನ್ಸಿನ ಲೇಖಕಿ ಆನ್ ಅರ್ನಾಕ್ಸ್ ಕುರಿತು ಸುಧಾ ಆಡುಕಳ ಬರಹ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ