Advertisement
ಶರತ್ ಪಿ.ಕೆ. ಬರೆದ ಹೊಸ ಕವಿತೆ

ಶರತ್ ಪಿ.ಕೆ. ಬರೆದ ಹೊಸ ಕವಿತೆ

ಬಿಟ್ಟ ಜಾಗ ಭರ್ತಿ ಮಾಡುವುದು ಅಷ್ಟು ಸುಲಭವಲ್ಲ

ಬಿಟ್ಟ ಜಾಗ ಭರ್ತಿ ಮಾಡುವುದು
ಅಷ್ಟು ಸುಲಭವಲ್ಲ,
ಸರತಿಯಲ್ಲಿ ನಿಂತು
ಬ್ಯಾಂಕಿನ ಚಲನ್ ತುಂಬಿದಂತಲ್ಲ.
ಸರಳ ವಾಕ್ಯದ ಪೂರ್ವಪರವನ್ನೆಲ್ಲಾ ಅಳೆದು ಅರಿತು,
ಸಂದರ್ಭದೊಡನೆ ಬೆರೆತು,
ಹೊಂದಿಕೊಳ್ಳುವ ಪದವ
ರಿಕ್ತ ಗೆರೆಯ ಮೇಲೆ ಬರೆಯಬೇಕು.
ತುಂಬಬೇಕು ಏಕಾಗ್ರತೆಯಿಂದ
ತುಳುಕದಂತೆ ಎಣ್ಣೆ ಹಣತೆಗೆ.

ಗುಂಪಿನಲ್ಲಿ ಎಗರಾಡಿ
ಸುತ್ತಲೂ ತಳ್ಳಾಡಿ
ಕಿಟಕಿಗೆ
ಕರವಸ್ತ್ರ ತೂರಿಸಿ ಎಸೆದು
ಬಸ್ಸಿನಲ್ಲಿ ಹಿಡಿದಂತಲ್ಲ ಸೀಟು ,
ಖಾಲಿ ಇದ್ದರೆ ಸೀಟು
ಯಾರು ಬೇಕಾದರೂ ಕೂರಬಹುದು
ಅದು ಮೀಸಲಾಗದ ಹೊರತು.
ಹೃದಯಕ್ಕೆ ಹಾಗೆಲ್ಲ
ಎಲ್ಲರನ್ನೂ ಕೂರಿಸಿಕೊಳ್ಳಲಾಗದು.
ದೇವರಿಗಷ್ಟೆ ಗರ್ಭಗುಡಿ
ದೇವರಿದ್ದರಷ್ಟೇ ಅದು ಗರ್ಭಗುಡಿ.

ಹೊಂದಿಸಿ ಬರೆಯಿರಿ ಎಂದರೇ
ಹೇಗೋ ಅಂದಾಜಿಸಿ ಬರೆದು ಬಿಡಬಹುದು.
ಖಾಲಿ ಜಾಗವನ್ನು ಭರ್ತಿ ಮಾಡುವುದು
ಬಿಟ್ಟ ಸ್ಥಳ ತುಂಬುವುದು ಒಂದೇ ಅನಿಸಿದರೂ
ಅಪ್ಪ ಅಮ್ಮನಷ್ಟೇ ಬೇರೆ ಬೇರೆ.
ಬಿಟ್ಟ ಸ್ಥಳ ಭರ್ತಿಮಾಡುವುದು ಸುಲಭದ ಮಾತಲ್ಲ
ಬಿಟ್ಟು ಹೋದ ಬಳಿಕ.

ಬಿಟ್ಟು ಹೋದ ಪದ
ಅದೆಲ್ಲಿಗೆ ಬಿಟ್ಟು ಹೋಯಿತೋ..
ಕಳೆದ ಉಂಗುರ ಕೈ ಬೆರಳಲಿ
ಗುರುತು ಉಳಿಸಿದಂತೆ,
ಕರವಸ್ತ್ರದ ಎಳೆ ಎಳೆಯಲಿ
ನೆನಪು ಮಿಳಿತಂತೆ.

ಬಿಟ್ಟು ಹೋಗಿರುವ ಪದವೆಂದರೆ
ಕೆಂಡಸಂಪಿಗೆಯಲ್ಲಿನ ಕೆಂಡ
ಅಮ್ಮನ ಹಣೆಯ ಸಿಂಧೂರ
ನೆನಪಾಗದ ಕನಸಿನ ಅಸ್ಪಷ್ಟ ವೃತ್ತಾಂತ.
ಶಂಖದೊಳಗಿನ ಹುಳು
ಮೌನದ ಮೌನ
ದೇಹದೊಳಿಗನ ಆತ್ಮ.

 

ಶರತ್ ಪಿ.ಕೆ. ಹಾಸನದವರು.
ನಗರ ಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
“ಗುಂಪಿಗೆ ಸೇರದ ಪದಗಳು” ಇವರ ಪ್ರಕಟಿತ ಕವನ ಸಂಕಲನ.

About The Author

ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

Leave a comment

Your email address will not be published. Required fields are marked *


ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ�‌ ಗೋಪಾಲ�‌ ಬರೆದ ಈ ಭಾನ�ವಾರದ ಕತೆ “ಆಟ�
https://tinyurl.com/5575hs6r

ಮದ�ವೆ ಮದ�ವೆ ಆ ಸಿಹಿ ಪದವೆ
ಲಾಸ�‌ ವೇಗಸ�‌ನ ‘ಲಿಟಲ� ವೈಟ� ವೆಡ�ಡಿಂಗ� ಚಾಪೆಲ�’ ಕ�ರಿತ� ಅಚಲ ಸೇತ� ಬರಹ
https://tinyurl.com/2v28abrv

ಭಾರತಕ�ಕೆ ಹತ�ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜ� ಅಂಕಣ “ಅನೇಕ ಅಮೆರಿಕಾ� ನಿಮ�ಮ ಓದಿಗೆ
https://tinyurl.com/35mrwwsn

ಭವ�ಯ ಟಿ.ಎಸ�. ಬರೆದ ಈ ದಿನದ ಕವಿತೆ

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ