Advertisement

ಸಂಪಿಗೆ ಸ್ಪೆಷಲ್

ಬಾಪುವಿನ ನೆರಳಲ್ಲಿ ಬೆಳಕು ಕಾಣಿಸುವ ‘ನಮ್ಮೊಳಗೊಬ್ಬ ಗಾಂಧಿ’ಯ ಸತ್ಯಾನ್ವೇಷಣೆ: ಡಾ.ರಾಜೇಂದ್ರಕುಮಾರ್ ಕೆ ಮುದ್ನಾಳ್

ಬಾಪುವಿನ ನೆರಳಲ್ಲಿ ಬೆಳಕು ಕಾಣಿಸುವ ‘ನಮ್ಮೊಳಗೊಬ್ಬ ಗಾಂಧಿ’ಯ ಸತ್ಯಾನ್ವೇಷಣೆ: ಡಾ.ರಾಜೇಂದ್ರಕುಮಾರ್ ಕೆ ಮುದ್ನಾಳ್

ಮಹಿಳೆಯರ ಬದುಕು ಸ್ವಾವಲಂಬಿಯಾಗಿರಬೇಕೆಂದು ಶಕ್ತಿದಾಯಕವಾಗಿ ಇರಬೇಕೆಂದು ಗಾಂಧಿ ಬಯಸಿದ್ದರು ಎಂಬುದನ್ನು ಮೂಕಮ್ಮ ಮತ್ತು ರಮಾ ಪಾತ್ರದ ಮೂಲಕ ನಾಟಕಕಾರರು ಕಟ್ಟಿಕೊಡಲು ಪ್ರಯತ್ನಿಸಿದ್ದಾರೆ. ರಮಾ ವಿಧವೆಯಾಗಿದ್ದರು ಮತ್ತೊಬ್ಬನನ್ನು ಪ್ರೀತಿಸಿ ಮರು ಮದುವೆ ಮಾಡಿಕೊಳ್ಳುವ ಉತ್ಸಾಹವನ್ನು ತೋರಿಸಿದ್ದು ಕೂಡ ಗಾಂಧಿ ವಿಚಾರಧಾರೆಗಳಿಗೆ ಮನಸೋತು. ರಮಾ ಮತ್ತು ರಹಿಮರ ಪ್ರೇಮ ಭಾವೈಕ್ಯತೆಯ ಪ್ರತೀಕವಾಗಿ ಹೊರಹೊಮ್ಮಿದೆ.
‘ನಮ್ಮೊಳಗೊಬ್ಬ ಗಾಂಧಿ’ ನಾಟಕದ ಕುರಿತು ಡಾ. ರಾಜೇಂದ್ರಕುಮಾರ್‌ ಕೆ. ಮುದ್ನಾಳ್‌ ಬರಹ

read more
ಮುನ್ನೂರು ರಾಮಾಯಣಗಳು ಮತ್ತು…: ಸುಕನ್ಯಾ ಕನಾರಳ್ಳಿ ಬರಹ

ಮುನ್ನೂರು ರಾಮಾಯಣಗಳು ಮತ್ತು…: ಸುಕನ್ಯಾ ಕನಾರಳ್ಳಿ ಬರಹ

ಶತಮಾನಗಳ ಅವಧಿಯಲ್ಲಿ ಈ ಭಾಷಾಪಟ್ಟಿಯಲ್ಲಿರುವ ಕೆಲವಂತೂ ಒಂದಕ್ಕಿಂತ ಹೆಚ್ಚು ರಾಮನ ಕಥೆಗಳನ್ನು ಹೊಮ್ಮಿಸಿವೆ. ಸಂಸ್ಕೃತ ಒಂದರಲ್ಲೇ ಕಾವ್ಯ, ಪುರಾಣಗಳ ರೂಪದಲ್ಲಿ ಇಪ್ಪತ್ತೈದಕ್ಕಿಂತಲೂ ಹೆಚ್ಚು ರಾಮಕಥೆಗಳಿವೆ. ಶಾಸ್ತ್ರೀಯ ಮತ್ತು ಜಾನಪದೀಯ ನೆಲೆಗಳೆರಡರಲ್ಲೂ ನಾಟಕ, ನೃತ್ಯ-ನಾಟಕ ಮತ್ತು ಇತರ ರೂಪಗಳನ್ನು ಸೇರಿಸಿದರೆ ಅದರ ಸಂಖ್ಯೆ ಇನ್ನೂ ಹೆಚ್ಚು. ದಕ್ಷಿಣ ಮತ್ತು ಆಗ್ನೇಯ ಏಷ್ಯಾದ ಸಂಸ್ಕೃತಿಗಳಲ್ಲಿ ಇರುವ ಎಲ್ಲ ಶಿಲ್ಪ, ಉಬ್ಬುಶಿಲ್ಪ, ಮುಖವಾಡ, ನೆರಳಿನಾಟ, ಮತ್ತು ಚಕ್ಕಳಗೊಂಬೆ ಪ್ರದರ್ಶನಗಳನ್ನೂ ಸೇರಿಸಬೇಕು.
ಎ. ಕೆ. ರಾಮಾನುಜನ್ನರ ಸಂಶೋಧನಾ ಲೇಖನ ‘ಮುನ್ನೂರು ರಾಮಾಯಣಗಳು, ಐದು ಉದಾಹರಣೆಗಳು ಮತ್ತು ಅನು-ವಾದದ ಬಗೆಗಿನ ಮೂರು ಚಿಂತನೆಗಳು’ ಕುರಿತು ಸುಕನ್ಯಾ ಕನಾರಳ್ಳಿ ಬರಹ

read more
ವಿಫುಲ ರೂಪ ಧಾರಿಣಿ ಹುಡುಕಾಡುತಿದೆ ಮನುಷ್ಯ ಪ್ರೀತಿಗಾಗಿ….: ಡಾ. ರಾಜೇಂದ್ರಕುಮಾರ್  ಕೆ. ಮುದ್ನಾಳ್ ಬರಹ

ವಿಫುಲ ರೂಪ ಧಾರಿಣಿ ಹುಡುಕಾಡುತಿದೆ ಮನುಷ್ಯ ಪ್ರೀತಿಗಾಗಿ….: ಡಾ. ರಾಜೇಂದ್ರಕುಮಾರ್  ಕೆ. ಮುದ್ನಾಳ್ ಬರಹ

ಇಂದಿನ ಆಧುನಿಕ ತಂತ್ರಜ್ಞಾನ ಕೃತಕ ಬುದ್ಧಿಮತ್ತೆಯಲ್ಲಿ ನಿಸರ್ಗದ ಚೈತನ್ಯವನ್ನು ನೋಡುವುದನ್ನು ಮರೆತುಬಿಟ್ಟಿದ್ದೇವೆ. ಗುಬ್ಬಿ ಗೂಡು ಕಟ್ಟುವುದನ್ನು,ಸೂರ್ಯೋದಯ ಚಂದ್ರೋದಯಗಳ ನಯನ ಮನೋಹರ ದೃಶ್ಯವನ್ನು, ಕರು ಆಕಳ ಕೆಚ್ಚಲನ್ನು ಹುಡುಕುವ ಹೊತ್ತನ್ನು ಮರೆತುಬಿಟ್ಟಿದ್ದೇವೆ. ಆಕಾಶದಿಂದ ಜಾರುವ ಮಳೆ, ಕಾಮನಬಿಲ್ಲು, ಇಬ್ಬನಿಯ ರೂಪ, ಪ್ರೀತಿ -ವಿರಹಗಳ ನಡುವಿನ ಬಾಂಧವ್ಯ, ಮೌನ ರಹಸ್ಯಗಳ ನಡುವಿನ ವಿಸ್ಮಯ. ಇವುಗಳ ನಡುವಿನ ಪ್ರೀತಿಯನ್ನು ಗಳಿಸುವ, ಬೆಳೆಸುವ, ಉಳಿಸುವ ದಾಹ ನಮ್ಮದಾಗಲಿ ಎಂಬ ಆಶಯ ವಿಫುಲ ರೂಪ ಧಾರಣಿಯದು. ಏಕೆಂದರೆ ‘ದಾರಿ ನೂರಾರಿವೆ ಬಿಡುಗಡೆಯ ಬೆಳಕಿನ ಅರಮನೆಗೆ’ ಎಂಬ ಸಾಲುಗಳು ನಮ್ಮಲ್ಲಿ ಪ್ರೀತಿಯ ಬುಗ್ಗೆ ಚಿಮ್ಮುವಂತಾಗಲಿ.
ಜಿ.ಎಸ್.‌ ಶಿವರುದ್ರಪ್ಪನವರ ಕವಿತೆಗಳನ್ನು ಆಧರಿಸಿದ ‘ವಿಫುಲ ರೂಪ ದಾರಿಣಿ’ ಕಾವ್ಯ ಅಭಿನಯದ ಕುರಿತು ಡಾ. ರಾಜೇಂದ್ರಕುಮಾರ್ ಕೆ. ಮುದ್ನಾಳ್ ಬರಹ

read more
ಸರ್ಕೀಟ್: ದಿಕ್ಕು ತೋಚದ ಬದುಕಿನ ಸಿಕ್ಕುಗಳು: ಶರೀಫ್ ಕಾಡುಮಠ ಬರಹ

ಸರ್ಕೀಟ್: ದಿಕ್ಕು ತೋಚದ ಬದುಕಿನ ಸಿಕ್ಕುಗಳು: ಶರೀಫ್ ಕಾಡುಮಠ ಬರಹ

ಒಂದು ಮಗುವಿನ ವರ್ತನೆ ಅಸಹಜವಾಗಿ ಕಾಣಿಸುವಂತೆ, ಪುಟ್ಟ ಹುಡುಗನೊಬ್ಬ ಈ ಪರಿ ನಟಿಸುವುದು ಖಂಡಿತ ಸಾಮಾನ್ಯ ಸಂಗತಿಯಲ್ಲ. ಚಿತ್ರದುದ್ದಕ್ಕೂ ಜೆಫ್ರನ್ ಎಷ್ಟು ತೀವ್ರವಾಗಿ ಕಾಡುತ್ತಾನೆ ಎಂದರೆ, ಆತನ ಚೇಷ್ಟೆ, ಅಕ್ವೇರಿಯಂ ಒಡೆದು ಹಾಕುವ ದೃಶ್ಯ, ಟ್ರೇ ಪೂರ್ತಿ ಮೊಟ್ಟೆ ಎತ್ತಿಕೊಂಡು ಹೋಗಿ ಟೆರೇಸ್ ಮೇಲೆ ಕೂತು ಹಾಯಾಗಿ ಕೆಳಗೆ ಎಸೆಯುವ ದೃಶ್ಯ, ತಾನಿಚ್ಛಿಸಿದ್ದು ಈ ಕ್ಷಣವೇ ಬೇಕು ಎಂದು ಬಿಡದೇ ಹಠ ಮಾಡಿ ಕೂಗಾಡುವ ದೃಶ್ಯ, ಅವನ ಮಿತಿಯಿಲ್ಲದ ತರಲೆಗಳೆಲ್ಲವೂ ನಮ್ಮ ಸಹನೆಯನ್ನೂ ಮೀರಿಸುವಷ್ಟು.
ಮಲಯಾಳಂನ “ಸರ್ಕೀಟ್‌” ಚಿತ್ರದ ಕುರಿತು ಶರೀಫ್‌ ಕಾಡುಮಠ ಬರಹ

read more
‘ಕಾಲ ನದಿಯಲಿ ನಮ್ಮ ಬಾಳ ದೋಣಿ’: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರಹ

‘ಕಾಲ ನದಿಯಲಿ ನಮ್ಮ ಬಾಳ ದೋಣಿ’: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರಹ

ಈ ಮೇಲು ಕೀಳುಗಳ ಕೀಲುಗೊಂಬೆ ಆಟದಲಿ ಜೊತೆಗಿದ್ದು ಬದುಕನ್ನು ಸಹ್ಯ ಮಾಡಿದ್ದಕ್ಕೆ ದಾರಿಯ ಪ್ರಯಾಣದ ಸಂಭ್ರಮವನ್ನು ಹೆಚ್ಚಿಸಿದ್ದಕ್ಕೆ ಯಾರಿಗೋ ಧನ್ಯವಾದ ಹೇಳಬೇಕು. ನನ್ನ ಅಹಂಗಳಲ್ಲಿ ಕುಳಿತು ಯಾರಿಗೋ ಚುಚ್ಚಿ ಮಾತಾಡಿದ್ದ ನೆನಪಾಗಿ ಸಾರಿ ಕೇಳಬೇಕು. ಸುಮ್ಮನೆ ಇಲ್ಲದ ಅವಸರವನ್ನು ಆರೋಪಿಸಿಕೊಂಡು ಬೇರುಗಳನ್ನು ಮರೆತಿದ್ದೇನೆ. ಹತ್ತಿರ ಕೂತು ಆ ಜೀವದ ಹೃದಯದ ಮಾತುಗಳನ್ನು ಕೇಳಿಸಿಕೊಳ್ಳುವುದಿತ್ತು. ಸಂಜೆಗಣ್ಣಿನ ನಿರೀಕ್ಷೆಯ ನೋಟದ ಅಪ್ಪ ಅಮ್ಮ ಇನ್ನೂ ಊರಿನ ಮನೆಯಲ್ಲಿದ್ದಾರೆ. ಹೇಗಾದರೂ ಮಾಡಿ ಈ ಸಲವಾದರೂ ಜೊತೆಗೆ ಕರೆದುಕೊಂಡು ಬರಬೇಕಿತ್ತು…
ಹೊಸ ವರ್ಷದ ಆಚರಣೆಯ ಈ ಹೊತ್ತಿಗೆ ರವೀಂದ್ರ ನಾಯಕ್‌ ಸಣ್ಣಕ್ಕಿಬೆಟ್ಟು ಬರಹ ನಿಮ್ಮ ಓದಿಗೆ

read more
ಕನ್ನಡ ಕಾವ್ಯದಲ್ಲಿ ಸಮಾಧಾನದ ಪ್ರಭು ಯೇಸುವಿನ ಆರಾಧನೆ: ಡಾ. ರಾಜೇಂದ್ರಕುಮಾರ್ ಮುದ್ನಾಳ್ ಬರಹ

ಕನ್ನಡ ಕಾವ್ಯದಲ್ಲಿ ಸಮಾಧಾನದ ಪ್ರಭು ಯೇಸುವಿನ ಆರಾಧನೆ: ಡಾ. ರಾಜೇಂದ್ರಕುಮಾರ್ ಮುದ್ನಾಳ್ ಬರಹ

ಯಾರು ಏನೇ ಅಂದರೂ ಯಾರು ಏನೇ ತಿಳಿದುಕೊಂಡರು ನಾವು ನಂಬಿರುವ ಪರಿಶುದ್ಧ ಮೌಲ್ಯಗಳೊಂದಿಗೆ ಜೀವಿಸಿದರೆ ಸಕಲವೂ ಸಾಧ್ಯ ಎಂಬುದನ್ನು ಮಹಾತ್ಮರು ತಿಳಿಸಿದ್ದಾರೆ. ಮೌಲ್ಯಗಳು ಇಂದು ಪ್ರತಿಯೊಂದು ಕ್ಷೇತ್ರದಲ್ಲಿ ಕುಸಿಯುತ್ತಿವೆ. ಅದನ್ನು ಹೇಗೆ ಕಾಪಾಡಿಕೊಳ್ಳಬೇಕು, ಸುಧಾರಿಸಿಕೊಳ್ಳಬೇಕು ಹೇಗೆ ಪುನರ್ ಸ್ಥಾಪಿಸಿಕೊಳ್ಳಬೇಕೆಂಬ ಗೊಂದಲದಲ್ಲಿದ್ದೇವೆ. ಮೌಲ್ಯಗಳು ಇಂದು ಬರಿ ಬಾಯಿ ಮಾತಾಗಿವೆ ಹೊರತು ಪ್ರಾಯೋಗಿಕವಾಗಿ ಮೌನವಾಗಿವೆ ಎಂಬ ಅಳಲು ಕವಿತೆಯದು.
ಕನ್ನಡ ಕಾವ್ಯದಲ್ಲಿ ಯೇಸುವಿನ ಕುರಿತ ಬರೆಯಲ್ಪಟ್ಟ ಕವಿತೆಗಳ ಕುರಿತು ಡಾ. ರಾಜೇಂದ್ರಕುಮಾರ್ ಮುದ್ನಾಳ್ ಬರಹ

read more
ಭಾವವಿರೇಚನಗೊಳಿಸುವ ದೃಶ್ಯಕಾವ್ಯ ‘ಬಂಧಮುಕ್ತ’: ಡಾ. ಪ್ರಭು ಗಂಜಿಹಾಳ ಬರಹ

ಭಾವವಿರೇಚನಗೊಳಿಸುವ ದೃಶ್ಯಕಾವ್ಯ ‘ಬಂಧಮುಕ್ತ’: ಡಾ. ಪ್ರಭು ಗಂಜಿಹಾಳ ಬರಹ

`ಬಂಧಮುಕ್ತ’ ಚಿತ್ರ ಇಂದಿನ ಕಾಲಘಟ್ಟದಲ್ಲಿ ಯಾಕೆ ವಿಶೇಷವಾದದ್ದು ಎಂಬುದರ ಕುರಿತು ವಿವರಿಸುವುದಾದರೆ; ಮೊದಲನೇಯದಾಗಿ ಈ ಚಿತ್ರದ ಶೀರ್ಷಿಕೆಯೇ ಒಂದು ಸಕಾರಾತ್ಮಕ ಸಂದೇಶ ನೀಡುವಂತಹದು. ಮನುಷ್ಯ ಹುಟ್ಟಿನಿಂದ ಸಾವಿನವರೆಗೆ ಯಾವುದಾದರೊಂದು ಹಿಡಿತಕ್ಕೆ ಸಿಲುಕಿ ಅದರಿಂದ ಹೊರ ಬರಲು ಹೆಣಗಾಡುತ್ತಿರುತ್ತಾನೆ. ಸಾವು ಮಾತ್ರ ಮನುಷ್ಯನ ನಿಜವಾದ ಬಿಡುಗಡೆ ಎಂದು ಹೇಳಬಹುದಾದರೂ ಸಾವಿಗೂ ಮುನ್ನವೇ ಬಂಧನಗಳಿಂದ ಮುಕ್ತವಾಗುವ ಮನಸ್ಥಿತಿಯೇ ಬಿಡುಗಡೆಯ ಮಾರ್ಗ ಎಂದು ವಾಖ್ಯಾನಿಸಬಹುದು. ಇದು ಮನೋವಿಜ್ಞಾನ ಮತ್ತು ಆಧ್ಯಾತ್ಮಿಕ ತತ್ವವನ್ನು ತಿಳಿಸುವ ವಿಚಾರ.
ಕುಮಾರ ಬೇಂದ್ರೆ ನಿರ್ದೇಶನದ “ಬಂಧಮುಕ್ತ” ಸಿನಿಮಾದ ಕುರಿತು ಡಾ. ಪ್ರಭು ಗಂಜಿಹಾಳ ಬರಹ

read more
‘ಡಿಸೆಂಬರ್ ಬಂದಿತು, ಚಳಿಯಾಕೆ ಬಂದಳು’: ಮಹಾಲಕ್ಷ್ಮೀ ಕೆ.ಎನ್.‌ ಬರಹ

‘ಡಿಸೆಂಬರ್ ಬಂದಿತು, ಚಳಿಯಾಕೆ ಬಂದಳು’: ಮಹಾಲಕ್ಷ್ಮೀ ಕೆ.ಎನ್.‌ ಬರಹ

ಈ ಬೆಟ್ಟಕ್ಕೆ, ಆ ಮರಕ್ಕೆ, ಹೆಂಚಿನ ಪುಟ್ಟ ಮನೆಗೆ ಹಿಮದ ಹೊದಿಕೆ ಬಂದುಬಿಡುತ್ತೆ. ನಮ್ಮನ್ನೂ ಆ ಹೊದಿಕೆ ಆವರಿಸಿಬಿಡುತ್ತದೆ. ವಿಸ್ಮೃತ ದೃಶ್ಯವನ್ನು ತಂದಿಟ್ಟುಬಿಡುತ್ತದೆ. ಹೆಜ್ಜೆ ಇಟ್ಟಲ್ಲೆಲ್ಲಾ ಹಿಮಮಣಿ ಕಾಲಿಗೆ ಮುತ್ತಿಡುತ್ತದೆ. ಎಳೆಕೂಸಿನ ಕೈ ಕಾಲುಗಳ ಮೆತ್ತಗೆ ಹಿಡಿದು ತೊಳೆಯುವಂತೆ ನಮ್ಮನ್ನು ತಣ್ಣಗೆ ಸೋಕಿ ತೊಳೆಯುತ್ತದೆ ಮಂಜು. ಹಿಮವು ನೆಲದ ಮೇಲೆ ಆವರಿಸಿದಾಗ ಧ್ವನಿ ಹೀರಿಕೊಳ್ಳುವ ಸಾಧನವಾಗಿ ಕಾರ್ಯನಿರ್ವಹಿಸುವುದರಿಂದ ಇಷ್ಟು ದಿನದ ಸದ್ದು ಸಪ್ಪಳ ಸುಮ್ಮನಾಗುತ್ತದೆ.
ಡಿಸೆಂಬರ್‌ ಚಳಿಯ ಕುರಿತು ಮಹಾಲಕ್ಷ್ಮೀ ಕೆ.ಎನ್.‌ ಬರಹ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ