Advertisement

ಸಂಪಿಗೆ ಸ್ಪೆಷಲ್

ಊರು ಬಿಟ್ಟವರ ಹಾಡುಪಾಡು

ಊರು ಬಿಟ್ಟವರ ಹಾಡುಪಾಡು

ಜೀವದಿಂದಿಡಿದು ಜೀವನದೊಟ್ಟಿಗೆ ಬೆರೆತುಹೋಗಬೇಕಿದ್ದ ಭಾಷೆಯನ್ನು ನಿಧಾನಕ್ಕೆ ಮರೆಯಲಾರಂಭಿಸಿ, ಸಾಂಸ್ಕೃತಿಕ ಕೇಂದ್ರಗಳಾಗಿದ್ದ ಹಳ್ಳಿಗಳನ್ನ ತೊರೆದು ಎಲ್ಲವೂ ವ್ಯಾಪಾರವಾಗಿರುವ ಪಟ್ಟಣದ ಮೋಹಕ್ಕೆ ಒಂದು ತಲೆ ಮಾರನ್ನೇ ವರ್ಗಾಯಿಸಿದ್ದು ದುರಂತವಲ್ಲದೇ ಮತ್ತೇನು? ಪಟ್ಟಣದಲ್ಲಿ ಸೈಟು ಮಾಡಿ, ದೊಡ್ಡ ದೊಡ್ಡ ಬಂಗಲೆ ಕಟ್ಟುವುದನ್ನೇ ಜೀವನದ ಅತಿದೊಡ್ಡ ಯಶಸ್ಸು ಎಂಬ ಹುಸಿ ಸುಳ್ಳನ್ನು ಮುಗ್ಧ ಮನಸ್ಸುಗಳಲ್ಲಿ ಬಿತ್ತಲಾರಂಭಿಸಿದ ಪರಿಣಾಮ ಬಾಗಿಲು ಹಾಕಿದ ದೊಡ್ಡ ದೊಡ್ಡ ಬಂಗಲೆಗಳಲ್ಲಿ ವೈಚಾರಿಕತೆ ಹಳ್ಳಿಯ ಹೆಂಚಿನ ಮನೆಗಳಲ್ಲೇ ಉಳಿದುಬಿಟ್ಟವು.
ಪ್ರಕಾಶ್‌ ಪೊನ್ನಾಚಿ ಬರಹ

read more
ನಂದೂ ಮಾಮನ ಕಥೆಯ ಕೇಳಿ…

ನಂದೂ ಮಾಮನ ಕಥೆಯ ಕೇಳಿ…

“ಅವಳು ಮಲಗಬೇಕಿದ್ದರೆ ಆಕಾಶವಾಣಿಯವರು ನಮಸ್ಕಾರ ಹೇಳಿ… ಕೇಂದ್ರದ ಬಾಗಿಲು ಹಾಕಿ ಹೋಗಬೇಕು” ಎಂದು ನನ್ನ ಅಪ್ಪ ನನ್ನನ್ನು ಪ್ರೀತಿಯಿಂದ ಬೈಯುತ್ತಿದ್ದ ದಿನಗಳು ನೆನಪಾದರೆ… ನಗು ಉಕ್ಕಿ ಬರುತ್ತದೆ. ಈಗಲೂ ಟಿ.ವಿ ಯಲ್ಲಿ ಕ್ರಿಕೆಟ್ ನೇರ ಪ್ರಸಾರವಿದ್ದರೂ… ರೇಡಿಯೋದಲ್ಲಿ ಸ್ವಲ್ಪ ಹೊತ್ತಾದರೂ.. ವೀಕ್ಷಕ ವಿವರಣೆ ಕೇಳಿದರಷ್ಟೇ ಸಮಾಧಾನ. ಮೆಚ್ಚಿನ ಚಿತ್ರಗೀತೆಗೆ ಸಂದೇಶದ ಮೂಲಕ ಕೋರಿಕೆ ಸಲ್ಲಿಸಿ… ನನ್ನಿಷ್ಟದ ಹಾಡುಗಳನ್ನು ಆಲಿಸುತ್ತೇನೆ..
ಅರುಣಾ.ಜಿ. ಭಟ್. ಬದಿಕೋಡಿ ಬರಹ

read more
ಝಂಡಾ ಊಂಚಾ ಬಿಟ್ಟು.. ಘಮಘಮಿಸುವ ಊಟದ ಹಿಂದೆ ಹೊರಟೂ…

ಝಂಡಾ ಊಂಚಾ ಬಿಟ್ಟು.. ಘಮಘಮಿಸುವ ಊಟದ ಹಿಂದೆ ಹೊರಟೂ…

ಮೌಂಟ್ ಅಬುನಲ್ಲಿನ ಆಶ್ರಮಕ್ಕೆ ಹೋಗಿದ್ದೆ. ಅಲ್ಲಿ ಇಪ್ಪತ್ತು ನಾಲ್ಕು ಗಂಟೆ ಊಟದ ಮನೆ ಸೇವೆ ಇರುತ್ತೆ ಅಂತ ಯಾರೋ ಹೇಳಿದ್ದರು. ಇಪ್ಪತ್ತು ನಾಲ್ಕು ಗಂಟೆ ಊಟದ ಮನೆ ಸೇವೆ ಇದ್ದರೆ ದೇವರನ್ನ ಯಾವಾಗ ನೋಡೋದು ಅನ್ನುವ ಸಂಶಯ ಹುಟ್ಟಿತ್ತು. ನನ್ನಾಕೆ ಒಂದು ಮೊಟಕು ಕೊಟ್ಟು ಇಪ್ಪತ್ನಾಲ್ಕು ಗಂಟೇನೂ ತಿಂತಲೇ ಕೂಡು ಹಾಗಿಲ್ಲ ಅಂತ ಭೋಜನ ಶಾಲೆಯಿಂದ ಆಚೆಗೆ ದರ ದರ ಎಳೆದುಕೊಂಡು ಹೋಗಿದ್ದಳು. ಊಟಕ್ಕೆ ಅಲ್ಲೂ ಚಪಾತಿ, ಅದಕ್ಕೆ ನೆಂಚಿಕೊಳ್ಳೂಕ್ಕೆ ಅದೇನೋ ಒಂದು.
ಎಚ್. ಗೋಪಾಲಕೃಷ್ಣ ಬರೆದ ಹಾಸ್ಯ ಪ್ರಬಂಧ ನಿಮ್ಮ ಓದಿಗೆ

read more
ಅವ್ವ ಮತ್ತು ಅವಳ ಕಾಪಿಟ್ಟ ಟ್ರಂಕು

ಅವ್ವ ಮತ್ತು ಅವಳ ಕಾಪಿಟ್ಟ ಟ್ರಂಕು

ಅವಳು ಸತ್ತು, ಅವಳ ತಿಥಿ ಮಾಡಿದ ಮೇಲೆ ನಾನು ಮಾಡಿದ ಮೊದಲ ಕೆಲಸ ಅವಳ ಟ್ರಂಕನ್ನು ಮನೆಯಿಂದ ಸ್ವಲ್ಪ ದೂರದಲ್ಲಿದ್ದ ವೃದ್ಧಾಶ್ರಮಕ್ಕೆ ಕೊಟ್ಟು ಟ್ರಂಕಲ್ಲಿ ಸಿಕ್ಕ ಐನೂರು ರುಪಾಯಿಯ ಮಾಸಲು ನೋಟನ್ನು ಆಶ್ರಮಕ್ಕೆ ಕೊಟ್ಟಿದ್ದು, ಆಮೇಲೆ ತಡೆಯಲಾರದೆ ಅವಳ ಇಷ್ಟದ ಕೆಂಪು ಕಾಟನ್ ಸೀರೆ, ಅವಳ ಆರೆಂಜ್ ಕಲರಿನ ಜಾಕೆಟ್, ಅವಳು ಬಳಸುತ್ತಿದ್ದ ಉಮಾ ಗೋಲ್ಡ್ ಬಳೆ ತೆಗೆದುಕೊಂಡೆ, ಅವು ಇನ್ನೂ ನನ್ನ ಬೀರುವಿನಲ್ಲಿದೆ, ಆ ಜಾಕೆಟ್ ಸೀರೆ ಈಗಲೂ ಮುಟ್ಟಿದರೆ ಅವಳ ಕೊನೆಯೇ ಕಾಣದ ಮಮತೆಯಿಂದ ಮೈ ತಡುವಿಕೆ ನೆನಪಾಗುತ್ತದೆ, ಕಣ್ಣಲ್ಲಿ ನೀರು ತುಂಬಿಕೊಳ್ಳುತ್ತದೆ.
ಜಯರಾಮಚಾರಿ ಬರಹ

read more
ನಂಜುಂಡಿ ಕಲ್ಯಾಣವೂ ಮತ್ತು ‘ಮಿಲ್ಟ್ರೀ’ ಗ್ಯಾಂಗೂ

ನಂಜುಂಡಿ ಕಲ್ಯಾಣವೂ ಮತ್ತು ‘ಮಿಲ್ಟ್ರೀ’ ಗ್ಯಾಂಗೂ

ಅಂತೂ ನಮ್ಮೂರಿಗೆ ನಂಜುಂಡಿ ಕಲ್ಯಾಣದ ಭಾಗ್ಯ. ಬರೋಬ್ಬರಿ ಒಂದು ವರ್ಷದ ನಂತರ. ಆದರೂ ನಮ್ಮ ಜನಕ್ಕೆ ಅದು ರಿಲೀಜ್ ಪಿಕ್ಚರ್. ಜಟಕಾ ಲೌಡ್ ಸ್ಪೀಕರ್ ಕಟ್ಟಿಕೊಂಡು ಸುತ್ತ ಹತ್ತೂರುಗಳಿಗೆ ಹೋಗಿ… “ಪ್ರೀಯ ಕಲಾಭಿಮಾನಿಗಳೆ.. ಕಲಾ ರಸಿಕರೆ.. ಒಮ್ಮೆ ನೋಡಿದರೆ ಮತ್ತೊಮ್ಮೆ ಮಗದೊಮ್ಮೆ.. ಮತ್ತೆ ಮತ್ತೆ ನೋಡಲೇಬೇಕಾದ ಸಿನೇಮಾ..” ಎನ್ನುತ್ತ.. “ಮರೆಯದಿರಿ.. ಮರೆತು ನಿರಾಶರಾಗದಿರಿ..…” ಎನ್ನುವ ನೊಟೀಸ್ ನೀಡಿ ಮರಳಿತು. ಸೈಕಲ್ ರಂಗ ಬಸ್ ಸ್ಟಾಪು ಸಲೂನು ಕೂಟು ಸರ್ಕಲ್‌ಗಳಲ್ಲಿ ಪೋಸ್ಟರ್ ಅಂಟಿಸಿದ.
ಲಿಂಗರಾಜ ಸೊಟ್ಟಪ್ಪನವರ ಬರೆದ ಪ್ರಬಂಧ

read more
ಅಣ್ಣನೆಂಬ ಅಕ್ಕರೆಯ ಅಪ್ಪ….

ಅಣ್ಣನೆಂಬ ಅಕ್ಕರೆಯ ಅಪ್ಪ….

ಈಗಿನಂತೆ ಬೀದಿ ದೀಪಗಳು, ಕೈಯಲ್ಲೊಂದು, ಜೇಬಲ್ಲೊಂದು ಟಾರ್ಚು ಇಲ್ಲದ ದಿನಗಳವು. ಅಣ್ಣ ನನ್ನ ಕೈಯನ್ನು ಹಿಡಿದುಕೊಂಡೆ ಮೆಲ್ಲಗೆ ಸಾಗತೊಡಗಿದ. ನನಗೆ ಇದ್ದ ಅತಿ ಮುಖ್ಯ ಭಯವೆಂದರೆ ಹಾವಿನದ್ದು. ಒಂದೆರಡು ದಿನಗಳ ಹಿಂದೆ ಎಮ್ಮೆ ಕಾಯಲು ಹೋದಾಗ ಹನುಮಪ್ಪನ ನಾಲಿನಲ್ಲಿ ನನ್ನ ಕಾಲಿನ ನಡುವೆ ಸರ ಸರನೆ ಹಾದು ಹೋಗಿ ಹೆಡೆ ಎತ್ತಿ ಆಡಿದ್ದ “ನಾಗರಾಜ”ನನ್ನು ನೆನೆದು ನಾನು ಇನ್ನಷ್ಟು ಭಯಭೀತನಾಗಿದ್ದೆ, ಮತ್ತು ಈಗ ಹೆಚ್ಚೇ ಎನ್ನುವಷ್ಟು ಜೋರಾಗಿ ಅಳತೊಡಗಿದೆ. ನನ್ನನ್ನು ಸುಮ್ಮನಾಗಿಸಲು ಹರ ಸಾಹಸ ಪಟ್ಟ ಅಣ್ಣ, ನನ್ನ ಅಳುವಿಗೆ ನೈಜ ಕಾರಣ ತಿಳಿದುಕೊಂಡ.
ಸಾವನ್ ಕೆ ಸಿಂಧನೂರು ಬರಹ

read more
ರೂಪಾಂತರದ ಆಯಾಮಗಳು

ರೂಪಾಂತರದ ಆಯಾಮಗಳು

ಮಾನವರು ಯಕ್ಷರಾಗುವ ಪ್ರಕ್ರಿಯೆ ನಮ್ಮೊಳಗೆ ಅಡಕವಾಗುತ್ತ ನಡೆದಾಗಲೂ ಕೆಲವೊಮ್ಮೆ ಭ್ರಮೆ ಮತ್ತು ವಾಸ್ತವಗಳು ಮನಸ್ಸಿನಲ್ಲಿ ತಾಡಿಸುತ್ತಲೇ ಇರುತ್ತಿದ್ದವು. ದುಃಶ್ಶಾಸನನ ವೇಷ ತೊಟ್ಟ ಅಪ್ಪ, ಭೀಮನಿಂದ ಪೆಟ್ಟುತಿಂದು ಯುದ್ಧರಂಗದಲ್ಲಿ ಓಡುತ್ತಿರುವಾಗ ಅವನೆಲ್ಲಾದರೂ ಅಪ್ಪನನ್ನು ಗದೆಯಿಂದ ಹೊಡೆದು ಕೊಂದಾನೆಂಬ ಭ್ರಮೆಯಲ್ಲಿ ‘ಬೇಡಾ’ ಎಂದು ಕಿರುಚಿದ್ದೂ ಇತ್ತು. ಕೌರವನನ್ನು ಬೆನ್ನಟ್ಟುವ ರೌದ್ರ ಭೀಮನ ಕಣ್ಣಿನ ಕೆಂಪಿಗೆ ಹೆದರಿ, ಅವನೆಲ್ಲಿಯಾದರೂ ಕೌರವನ ವೇಷಧಾರಿಯಾದ ನನ್ನಪ್ಪನ ತೊಡೆಯನ್ನೇ ಮುರಿದಾನೆಂದು ಚಡಪಡಿಸುತ್ತಿದ್ದುದು ಅತ್ತೆಗೆ ಇರಿಸುಮುರಿಸು ಮಾಡುತ್ತಿತ್ತು.
ಮನುಷ್ಯ ಹೊಂದಬಹುದಾದ ರೂಪಾಂತರಗಳ ಕುರಿತು ಸುಧಾ ಆಡುಕಳ ಬರಹ ನಿಮ್ಮ ಓದಿಗೆ

read more
ಕಣ್ಣೊರಿಸಿಕೊಂಡ ಪುಟ್ಟ ದೇವರು…

ಕಣ್ಣೊರಿಸಿಕೊಂಡ ಪುಟ್ಟ ದೇವರು…

ತರಗತಿಯಿಂದ ತರಗತಿಗೆ ಹಾರಿ ಅದೇ ಶಾಲೆಯಲ್ಲಿ ಕೂತವರಿಗೆ ಒಂದು ರೂಮಿನ ಬದಲಾವಣೆ ಅಷ್ಟೇ.. ತರಗತಿಯಿಂದ ಉಸಿರು ಬಿಗಿ ಹಿಡಿದು ಹಾರಿ ಜಿಗಿದು ಮತ್ತೆಲ್ಲೊ ಮತ್ಯಾವ ಶಾಲೆ, ಕಾಲೇಜಿನ ರೂಮಿನಲ್ಲೊ ಇಲ್ಲಿ ಕಿತ್ತುಕೊಂಡು ಬಂದ ಓದಿನ ಗಿಡವನ್ನು ಅಲ್ಲಿ ನೆಟ್ಟು ಪೋಷಿಸಬೇಕು. ಕಿತ್ತು ನಡೆಯುವ ಹೊತ್ತಲ್ಲಿ ಗಂಟಲಿಗೆ ಬಂದು ಆತು ಕೂತುಕೊಳ್ಳುತ್ತಲ್ಲಾ ಆ ದುಃಖ ಮತ್ತು ಅದನ್ನು ನುಂಗಿ ಸಾಯಿಸಿ ಸಾಯಿಸಿ ನಗಬೇಕಲ್ಲ ಆ ಸಂಕಟ, ಮತ್ತು ಪಿಳಿಪಿಳಿ ಕಣ್ಣುಗಳಿಂದ ಬಂದೇ ಬಿಡುತ್ತಲ್ಲ ಆ ಪವಿತ್ರ ಕಣ್ಣೀರು.. ಓ ಎಂತ ಪಾಪಿಷ್ಟ ಗಳಿಗೆ ಅದು.
ಸದಾಶಿವ ಸೊರಟೂರು ಬರೆದ ಪ್ರಬಂಧ ನಿಮ್ಮ ಓದಿಗೆ

read more
ಕನ್ನಡಕ್ಕೆ ಮತ್ತೊಂದು ಗರಿ ʻಹದಿನೇಳೆಂಟುʼ

ಕನ್ನಡಕ್ಕೆ ಮತ್ತೊಂದು ಗರಿ ʻಹದಿನೇಳೆಂಟುʼ

ಹರಿ ಒಬ್ಬ ಸದ್ಗುಣ ಯುವಕನೇ ಆಗಿದ್ದರೂ ಅರಿವಿನ ಕೊರತೆಯಿಂದ ಆ ವಿಡಿಯೋವನ್ನು ತನ್ನ ಸ್ನೇಹಿತರಿಗೆ ತೋರಿಸಿ ಅದು ತನ್ನ ಸಾಧನೆ ಎಂಬಂತೆ ಬಿಂಬಿಸಿಕೊಂಡ. ಅಲ್ಲಿಗೆ ಸುಮ್ಮನಾಗದೇ, ತನ್ನ ಮೇಲೆ ನಂಬಿಕೆ ವಿಶ್ವಾಸವಿಟ್ಟು ತನ್ನ ದೇಹವನ್ನೇ ಹಂಚಿಕೊಂಡ ದೀಪಾಳಿಗೆ ಅದರಿಂದ ಏನಾದೀತು ಎನ್ನುವ ಸಾಮಾನ್ಯ ವಿವೇಚನೆಯನ್ನೂ ಮಾಡದೇ ಆ ವಿಡಿಯೋವನ್ನು ಒಬ್ಬ ಫೇಸ್‌ಬುಕ್‌ಸ್ನೇಹಿತನೊಂದಿಗೆ ಹಂಚಿಕೊಂಡ!
ಈ ವರ್ಷದ ಪನೋರಮಕ್ಕೆ ಆಯ್ಕೆಯಾದ ಮತ್ತೊಂದು ಚಲನಚಿತ್ರ ʻಹದಿನೇಳೆಂಟುʼ ಕುರಿತು ಕುಮಾರ ಬೇಂದ್ರೆ ಬರಹ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ