ಮುದ್ದೆಯಾದ ಕಾಗದ!
ಮರುದಿನ ಅಜ್ಜಿಯ ಆರೋಗ್ಯ ಮತ್ತಷ್ಟು ಹದೆಗೆಟ್ಟಿತು. ಅವಳಿಗೆ ಎದ್ದು ತಿರುಗಾಡಲು ಆಗಲಿಲ್ಲ. ಮಲಗಿದ್ದಲ್ಲೇ ಮಲಗಿ ಒಂದೇ ಸವನೆ ನರಳತೊಡಗಿದಳು. ಆಗಲೂ ಅಮ್ಮನ ಮನಸ್ಸು ಕರಗಲಿಲ್ಲ. ಊಟ ತಿಂಡಿಯೂ ಹಾಕಲಿಲ್ಲ. ಇವಳಿಗೆ ಮನೆಯಲ್ಲಿಟ್ಟುಕೊಂಡರೆ ನಮಗೂ ರೋಗ ಬರಬಹುದು ಅಂತ ಯೋಚಿಸಿ ಮನೆಯ ಅಂಗಳದಲ್ಲಿ ಮಲಗಲು ಖಡಕ್ಕಾಗಿ ಸೂಚಿಸಿ ಅವಳ ಹಾಸಿಗೆ ಹೊಚ್ಚಿಗೆ ತಾಟು ತಂಬಿಗೆ ಎಲ್ಲವೂ ಬೇರ್ಪಡಿಸಿ ಕೈ ತೊಳೆದುಕೊಂಡಳು. ಈ ಎಲ್ಲ ದೃಶ್ಯಾವಳಿ ನೋಡಿ ರಾಜೂನ ದುಃಖ ಉಕ್ಕಿ ಬಂದಿತು. ಮಲ್ಲಿಕಾಳ ಕರುಳು ಹಿಂಡಿದಂತಾಯಿತು.
ಶರಣಗೌಡ ಬಿ ಪಾಟೀಲ ತಿಳಗೂಳ ಪ್ರಬಂಧ
ನೆನಪಿನ ಮಳೆ ಹನಿಗಳು…
ಬದುಕು ಎಲ್ಲವನ್ನು ಮರೆಸುತ್ತದೆ ನೆನಪಿಸುತ್ತದೆ ಕೂಡ. ಭೂಮಿ ಗುಂಡಾಗಿದೆ ಅಲ್ಲವೇ. ತಿರುಗುವ ಭೂಮಿಯಲ್ಲಿ ಒಬ್ಬರಿಗೊಬ್ಬರು ಸಂದಿಸಲೇಬೇಕು. ನಮ್ಮಿಬ್ಬರ ಬೇಟಿಯಾಗಿ ಎರಡು ವರ್ಷಗಳು ಕಳೆದಿರಬೇಕು ಆಕಸ್ಮಿಕವಾಗಿ ಬಸ್ಸಿನಲ್ಲಿ ಸಿಕ್ಕಾಗ ಇಬ್ಬರು ಒಬ್ಬರಿಗೊಬ್ಬರು ನೋಡಿದರೂ ನೋಡಿಲ್ಲವೆಂಬಂತೆ ದೃಷ್ಟಿ ಬದಲಿಸಿದ್ದು ಬದುಕಿನಲ್ಲಿ ಹೀಗೂ ನಡೆಯಬಹುದು ಅನ್ನಿಸಿದ್ದು ನಿಜ. ನನ್ನೊಳಗಿನ ಮನಸ್ಸು ಯೋಚನೆಯಲ್ಲಿ ಮುಳುಗಿತ್ತು ಇಬ್ಬರಲ್ಲೂ ಗುರುತು ಸಿಗಲಾರದಷ್ಟು ಬದಲಾವಣೆಗಳೇನು ಆಗಿರಲಿಲ್ಲ.
ಮಾರುತಿ ಗೋಪಿಕುಂಟೆ ಬರಹ
ಮಗಳು ಇಂದಿರಾಗೆ ನೆಹರೂ ಬರೆದ ಮೂರು ಪತ್ರಗಳು
ನಗರಗಳು ಬೆಳೆಯುತ್ತಾ ಹೋದಂತೆ, ಪಟ್ಟಣಗಳು ಮತ್ತು ದೇಶಗಳು ರೂಪುಗೊಳ್ಳತೊಡಗಿದವು. ಒಂದೇ ದೇಶದಲ್ಲಿ ಹತ್ತಿರ ವಾಸಿಸುವ ಜನರು ಪರಸ್ಪರರನ್ನು ಹೆಚ್ಚು ಹೆಚ್ಚು ಅರ್ಥಮಾಡಿಕೊಳ್ಳತೊಡಗಿದರು. ಅವರು ತಮ್ಮಿಂದ ದೂರದಲ್ಲಿ ಬೇರೆ ದೇಶಗಳಲ್ಲಿ ವಾಸಿಸುವ ಜನರಿಗಿಂತ ತಾವೇ ಶ್ರೇಷ್ಟರು ಎಂದು ಯೋಚಿಸತೊಡಗಿದರು. ಜವಾಹರಲಾಲ್ ನೆಹರೂ ತಮ್ಮ ಮಗಳು ಇಂದಿರಾಗಾಂಧಿಗೆ ಬರೆದಿದ್ದ ಪತ್ರಗಳನ್ನು ಸುಧಾ ಆಡುಕಳ ಕನ್ನಡಕ್ಕೆ ಅನುವಾದಿಸಿದ್ದು, ಮಕ್ಕಳ ದಿನಾಚರಣೆಯ ಈ ದಿನ ಅವುಗಳಲ್ಲಿನ ಮೂರು ಪತ್ರಗಳು ನಿಮ್ಮ ಓದಿಗೆ ಇಲ್ಲಿವೆ…
ಕನಕದಾಸರು ಕಟ್ಟಿದ ‘ಕಲ್ಯಾಣ’
ಗುಣ ಕರ್ಮಕ್ಕೆ ಅನುಸಾರಿಯಾಗಿ ವರ್ಣ ಸೃಷ್ಟಿಯಾಗಿದೆ ಅನ್ನುತ್ತದೆ ಭಗವದ್ಗೀತೆ. ಆದರೆ ಇಲ್ಲಿ ಗುಣ ಕರ್ಮ ಹುಟ್ಟುವ ಮೊದಲೇ ನಿಶ್ಚಯವಾಗಿರುತ್ತದೆ, ಎಂಬುದನ್ನು ಕಾಣಿಸಿಕೊಟ್ಟ ವಚನ ಚಳುವಳಿ ಇದಕ್ಕೊಂದು ಹೊಸ ಭಾಷ್ಯ ಬರೆಯಿತು. ‘ಕಾಸಿ ಕಮ್ಮಾರನಾದ, ಬೀಸಿ ಮಡಿವಾಳನಾದ’ ಎನ್ನುತ್ತ ಜಾತಿ ಸಾಂಸ್ಥಿಕತೆಗೆ ಪ್ರತಿಭಟನೆ ತೋರಿತು. ‘ಉಳ್ಳವರು ಶಿವಾಲಯ ಮಾಡುವರು’ ಎನ್ನುತ್ತ ಸಾಂಸ್ಕೃತಿಕ ರೂಪದ ಪ್ರತಿಭಟನೆಯನ್ನೂ ರೂಪಿಸಿತು. ‘ಕೊಲುವವನೆ ಮಾದಿಗ’ ಎನ್ನುತ್ತ ಪಂಪನಕಾಲದ ಕುಲದ ಮರು ವ್ಯಾಖ್ಯಾನವನ್ನು ಮುಂದುವರಿಸಿತು.
ಕನಕ ಜಯಂತಿಯಂದು ಡಾ. ಶ್ರೀಪಾದ ಭಟ್ ಬರಹ
ನಡುಗನ್ನಡ ಕಾಲದ ಶತಕ ಸಾಹಿತ್ಯ ಸಮೀಕ್ಷೆ
ಶತಕಸಾಹಿತ್ಯವು ಪ್ರಾಕೃತ ಸಾಹಿತ್ಯದಲ್ಲಿ ಉದಯಗೊಂಡು ಸಂಸ್ಕೃತ ಸಾಹಿತ್ಯದಲ್ಲಿ ಸರ್ವತೋಮುಖವಾಗಿ ಬೆಳೆದು ದ್ರಾವಿಡ ಭಾಷೆಗಳಲ್ಲಿ ತನ್ನ ತಣಿಯಾದ ಫಲಗಳನ್ನು ನೀಡಿದೆ. ಸಂಸ್ಕೃತ ಶತಕಗಳ ಪ್ರೇರಣೆಯಿಂದ ಉಭಯಭಾಷಾವಿಶಾರದರಾದ ಕನ್ನಡದ ಅನೇಕ ಮಹಾಕವಿಗಳು ಶತಕಗಳನ್ನು ಬರೆದು ಇದಕ್ಕೊಂದು ಮೆರುಗು ಕೊಟ್ಟಿದ್ದಾರೆ. ಸಂಸ್ಕೃತ ಸಾಹಿತ್ಯದಲ್ಲಿ ಶತಕಗಳು ಕೇವಲ ವೃತ್ತ ರೂಪದಲ್ಲಿ ಕಾಣಿಸಿಕೊಂಡಿವೆ.
ನಡುಗನ್ನಡ ಕಾಲದ ಶತಕ ಸಾಹಿತ್ಯದ ಕುರಿತು ಡಾ. ರಾಜಶೇಖರ ಜಮದಂಡಿ ಬರಹ
ಕ್ಯಾತನಮಕ್ಕಿಯ ಕಾಲಮೇಲೆ ಕೂತು ಗಾಳಿಗುಡ್ಡವ ನೆನೆದು
ಕಿಲೋಮೀಟರ್ ದೂರದಲ್ಲಿ ಬೈಕು ನಿಲ್ಲಿಸಿ ನಮ್ಮ ಟ್ರೆಕಿಂಗ್ ಆರಂಭಿಸಿದಾಗ ಇದ್ದ ಉತ್ಸಾಹ, ಕ್ಯಾತನಮಕ್ಕಿಯನ್ನು ಅರ್ಧ ಹತ್ತಿದಾಗಲೇ ಬತ್ತುವುದರಲ್ಲಿತ್ತು. ಒಂಚೂರು ಕುಳಿತು ನೀರು ಕುಡಿದು ಕಚ್ಚಾ ರಸ್ತೆಯಲ್ಲಿ ಬೆವರಿಳಿಸಿ, ತುದಿ ತಲುಪುವಾಗ ಜೀಪಿನಲ್ಲಿ ಬಂದವರ ದರ್ಬಾರಿಗೆ ಮನವೊಮ್ಮೆ ಪಿಚ್ಚೆಂದಿತ್ತು. ಆದರೂ ನಡೆದು ಗಮ್ಯ ತಲುಪುವ ಸಾರ್ಥಕ ಭಾವ ಆರಾಮಾಗಿ ತೇಲಿ ಬಂದವರಿಗೆಲ್ಲಿ ಬರಬೇಕು ಎಂದು ನಮಗೆ ನಾವೇ ಬೆನ್ತಟ್ಟಿಕೊಂಡು ಮುನ್ನಡೆದೆವು.
ಚಿಕ್ಕಮಗಳೂರಿನ ‘ಕ್ಯಾತನಮಕ್ಕಿʼ ಪ್ರವಾಸಿ ತಾಣಕ್ಕೆ ಭೇಟಿ ನೀಡಿದ ಅನುಭವಗಳನ್ನು ಇಲ್ಲಿ ಹಂಚಿಕೊಂಡಿದ್ದಾರೆ ಶುಭಶ್ರೀ ಭಟ್ಟ
ಚುಕ್ಕೆ ರಾಟುವಾಳ, ನಾನು ಮತ್ತು ನಂಬಿಕೆ
ಬಹುಶಃ ಒಂದು ತಿಂಗಳಲ್ಲಿ ಅವುಗಳ ಗೂಡು ತಯಾರಾಗಿತ್ತು. ಅದಾದ ಕೆಲವೇ ದಿನಗಳಲ್ಲಿ ೧೨-೧೩ ದಿನಗಳಲ್ಲಿ ಆ ಎರಡು ಲವ್ ಬರ್ಡ್ಸ್ ತಮ್ಮ ಗೂಡಿಗೆ ನಾಲ್ಕು ಹೊಸ ಅತಿಥಿಗಳ ಕೊಡುಗೆಯನ್ನು ಜಗತ್ತಿಗೆ ನೀಡಿದವು. ಕಿಟಗಿ ಹಿಂಭಾಗದಲ್ಲಿ ಅರೆ ಪಾರದರ್ಶಕ ಗಾಜಿನೊಳಗಿಂದ ಅವುಗಳನ್ನು ನೋಡುತ್ತಾ ಬಹಳ ಖುಷಿಯಾದೆ. ಅವುಗಳನ್ನು ಕಂಡು ಮಕ್ಕಳಂತೂ ಹಿಗ್ಗಿ ಕುಣಿದಾಡಿದರು. ಬೆಳಿಗ್ಗೆ ಎದ್ದೊಡನೆ ಅವುಗಳ ದರ್ಶನ..
ಚುಕ್ಕೆ ರಾಟುವಾಳ ಹಕ್ಕಿಯೊಂದಿಗಿನ ಪ್ರಸಂಗವನ್ನು ಬರೆದಿದ್ದಾರೆ ಮಹಮ್ಮದ್ ರಫೀಕ್ ಕೊಟ್ಟೂರು
ಲೇಖಕರ ಮತ್ತು ಓದುಗರ ನಡುವಿನ ಕೊಂಡಿ ಹೊಸೆಯುತ್ತಾ…
ಪ್ರಕಾಶಕರು, ಲೇಖಕರ ಮತ್ತು ಓದುಗರ ನಡುವಿನ ಬಹುಮುಖ್ಯ ಕೊಂಡಿ. ಅವರ ಸಹಾಯವಿಲ್ಲದೇ ಯಾವುದೇ ಲೇಖಕರ ಕೃತಿಯು ಓದುಗರನ್ನು ತಲುಪಲು ಸಾಧ್ಯವಿಲ್ಲ. ನಮ್ಮ ಭಾಷೆಯಲ್ಲಿ ಯಾವೆಲ್ಲ ತರಹದ ಸಾಹಿತ್ಯ ಕೃಷಿ ನಡೆಯುತ್ತಿದೆ ಅನ್ನುವುದನ್ನು ಓದಿ, ಓದುಗರ ಮುಂದಿಟ್ಟಾಗಲೇ ಒಬ್ಬ ಓದುಗನಿಂದ ಮತ್ತೊಂದು ಓದುಗ ಹುಟ್ಟಿಕೊಳ್ಳುವುದು. ಅದರ ಜೊತೆಗೇ ಎಂಥ ಪ್ರಕಾರದ ಪುಸ್ತಕವನ್ನು ಓದುಗರ ಕೈಗಿಡಬೇಕು, ಮತ್ತೆ ಓದುಗನಿಗೆ ಪುಸ್ತಕ ತಲುಪಿಸುವ ಮಾರ್ಗಗಳೇನು ಎಂಬುದೂ ಈ ಹೊತ್ತಿನಲ್ಲಿ ಚರ್ಚಿಸಬೇಕಾದ ವಿಷಯ. ರೂಪಶ್ರೀ ಕಲ್ಲಿಗನೂರ್ ಬರಹ ಇಲ್ಲಿದೆ
ಶರಣಪ್ಪ ಮೇಷ್ಟ್ರು ಸೈಕಲ್ ಮತ್ತು ನಾನು
ಸೈಕಲ್ನ ಯಾವ ಭಾಗವೂ ಹೊಳಪು ಕಾಣದ… ಬಿಸಿಲು ಮಳೆಗೆ ನೆಂದು ಕಪ್ಪಾದ ಕೃಷ್ಣಸುಂದರಿ ನನ್ನ ಸೈಕಲ್… ವಿಧಿಯಿಲ್ಲದೆ ಅದನ್ನೇ ಚೆನ್ನಾಗಿ ತೊಳೆದು ಸಿಂಗಾರ ಮಾಡಿದ್ದಾಯಿತು. ನನಗೋ ಅದನ್ನು ತುಳಿಯುವ ಕಾತರ. ಪೂಜೆ ಮಾಡಿ ಊರೆಲ್ಲಾ ಸುತ್ತಿಕೊಂಡು ಬರೋಣ ಎಂದು ಸವಾರಿ ಹೊರಟೇ ಬಿಟ್ಟೆ. ಊರ ಮಂದಿಯೆಲ್ಲಾ ನನ್ನನ್ನೆ ನೋಡುತ್ತಿದ್ದಾರೆ. ಶರಣಪ್ಪ ಮೇಷ್ಟ್ರು ಸೈಕಲ್ ಇವ ಹೇಗೆ ತುಳಿದಾನು ಎಂಬ ಕುತೂಹಲ ಅವರದು.
ಮಾರುತಿ ಗೋಪಿಕುಂಟೆ ಬರೆದ ಲಲಿತ ಪ್ರಬಂಧ ನಿಮ್ಮ ಈ ದಿನದ ಓದಿಗೆ









