ಪೊಟ್ಟಣದ ಮೆಲುಕಿನಲ್ಲಿ..
ಅಶ್ವತ್ಥ ಕಟ್ಟೆಯ ದೊಡ್ಡ ಮರದ ಕೊಂಬೆಗಳಲ್ಲಿ, ಬೀದಿಯ ಸುತ್ತಮುತ್ತಲ ಮನೆಗಳು, ಕಾಂಪೌಂಡ್ ಗೋಡೆಗಳ ಮೇಲೆ, ರಾಮಮಂದಿರದೊಳಗೆ ಹಾಗೂ ದಾರಿಯುದ್ದಕ್ಕೂ ಇರುತ್ತಿದ್ದ ಕೋತಿಗಳ ಗುಂಪಿನ ದಾಳಿಯ ಭೀತಿಯಲ್ಲೇ ದಿನಸಿ ಬ್ಯಾಗನ್ನು ಉದ್ದನೆಯ ಲಂಗದ ನೆರಿಗೆಗಳಲ್ಲಿ ಮುಚ್ಚಿಟ್ಟುಕೊಂಡು ಅವುಗಳಿಂದ ತಪ್ಪಿಸಿಕೊಂಡು ಮನೆಗೆ ಹೋಗುವಷ್ಟರಲ್ಲಿ ಹೈರಾಣಾಗುತ್ತಿದ್ದೆ.
ಎಂ.ಜಿ. ಶುಭಮಂಗಳ ಬರೆದ ಪ್ರಬಂಧ ನಿಮ್ಮ ಓದಿಗೆ
ಮುಸ್ಸಂಜೆಯ ಮಧುರವಾಗಿಸುವ ಪರಿ
ಅವರು ಅಪ್ಪನ ಚಡ್ಡಿ ದೋಸ್ತ್. ಅದೊಂದು ಕಾಲ್ ಇಡೀ ವಾತಾವರಣವನ್ನು ತಿಳಿಯಾಗಿಸಿತು. ಹೋದವರು ಹೋಗೇ ಬಿಟ್ಟರು. ಎಲ್ಲಿ ಹುಡುಕಿದರೂ ಸಿಗುವುದೂ ಇಲ್ಲ, ಹಿಂದಿರುಗಿ ಬರುವುದೂ ಇಲ್ಲ. ಆದರೆ ಇದ್ದವರು ಇನ್ನೂ ಇರಲೇ ಬೇಕಾದ ಅನಿವಾರ್ಯ. ತಮ್ಮ ಸಮಯ ಬರುವವರೆಗೆ… ಅದೂ ಇದ್ದಷ್ಟು ಕಾಲ ನೆಮ್ಮದಿಯಿಂದ ದಿನಗಳೆಯಬೇಕು ಎನಿಸಿ ಈ ರೀತಿ ಮಾಡಿದೆ. ಆದರೂ ಅಪ್ಪನ ಜೀವನೋತ್ಸಾಹ ಎಲ್ಲರಿಗೂ ಮಾದರಿಯಾಗುವಂತಿದೆ.
ಕಾವ್ಯಶ್ರೀ ಮಹಾಗಾಂವಕರ ಬರಹ ನಿಮ್ಮ ಓದಿಗೆ
ವೀರಭುಜಬಲದ ದುಂಡಿಯೋ… ಸುಕೋಮಲ ಸುಂದರಿಯೋ…
ಎರಡೂ ಕೈಗಳಿಗೂ ಅಮ್ರದ ದುಂಡಿಯನ್ನು ಪಟ್ಟಗಣಿಯಿಂದ ಸುತ್ತಿ ಬಿಗಿಯಾಗಿ ಹಿಡಿದುಕೊಂಡು ಮೊಣಕಾಲಿನವರೆಗೂ ತಿರಿವಿಕೊಂಡ. ಮೊಣಕಾಲಿನ ಮೇಲೆ ಜಪ್ಪಯ್ಯ ಎಂದರೂ ದುಂಡಿ ಒಂದಿಂಚೂ ಮೇಲೇಳಲಿಲ್ಲ. ಸ್ವಲ್ಪ ಸಾವರಿಸಿಕೊಂಡು ನರನಾಡಿಗಳಲ್ಲಿನ ಸಮಸ್ತ ಶಕ್ತಿಯನ್ನು ಒಟ್ಟು ಮಾಡಿ ಉಡ ಕೂಡಾ ನಾಚುವಂತೆ ಬಿಗಿಯಿಡಿದು ಬಿಲ್ಲಿನಂತೆ ಹಿಂದಕ್ಕೆ ಬಾಗಿ ದುಂಡಿಯನ್ನು ಮೇಲೆಳೆದುಕೊಂಡ.
ಮಂಜಯ್ಯ ದೇವರಮನಿ, ಸಂಗಾಪುರ ಬರೆದ ಪ್ರಬಂಧ ನಿಮ್ಮ ಓದಿಗೆ
ಊರು ಬಿಟ್ಟವರ ಹಾಡುಪಾಡು
ಜೀವದಿಂದಿಡಿದು ಜೀವನದೊಟ್ಟಿಗೆ ಬೆರೆತುಹೋಗಬೇಕಿದ್ದ ಭಾಷೆಯನ್ನು ನಿಧಾನಕ್ಕೆ ಮರೆಯಲಾರಂಭಿಸಿ, ಸಾಂಸ್ಕೃತಿಕ ಕೇಂದ್ರಗಳಾಗಿದ್ದ ಹಳ್ಳಿಗಳನ್ನ ತೊರೆದು ಎಲ್ಲವೂ ವ್ಯಾಪಾರವಾಗಿರುವ ಪಟ್ಟಣದ ಮೋಹಕ್ಕೆ ಒಂದು ತಲೆ ಮಾರನ್ನೇ ವರ್ಗಾಯಿಸಿದ್ದು ದುರಂತವಲ್ಲದೇ ಮತ್ತೇನು? ಪಟ್ಟಣದಲ್ಲಿ ಸೈಟು ಮಾಡಿ, ದೊಡ್ಡ ದೊಡ್ಡ ಬಂಗಲೆ ಕಟ್ಟುವುದನ್ನೇ ಜೀವನದ ಅತಿದೊಡ್ಡ ಯಶಸ್ಸು ಎಂಬ ಹುಸಿ ಸುಳ್ಳನ್ನು ಮುಗ್ಧ ಮನಸ್ಸುಗಳಲ್ಲಿ ಬಿತ್ತಲಾರಂಭಿಸಿದ ಪರಿಣಾಮ ಬಾಗಿಲು ಹಾಕಿದ ದೊಡ್ಡ ದೊಡ್ಡ ಬಂಗಲೆಗಳಲ್ಲಿ ವೈಚಾರಿಕತೆ ಹಳ್ಳಿಯ ಹೆಂಚಿನ ಮನೆಗಳಲ್ಲೇ ಉಳಿದುಬಿಟ್ಟವು.
ಪ್ರಕಾಶ್ ಪೊನ್ನಾಚಿ ಬರಹ
ನಂದೂ ಮಾಮನ ಕಥೆಯ ಕೇಳಿ…
“ಅವಳು ಮಲಗಬೇಕಿದ್ದರೆ ಆಕಾಶವಾಣಿಯವರು ನಮಸ್ಕಾರ ಹೇಳಿ… ಕೇಂದ್ರದ ಬಾಗಿಲು ಹಾಕಿ ಹೋಗಬೇಕು” ಎಂದು ನನ್ನ ಅಪ್ಪ ನನ್ನನ್ನು ಪ್ರೀತಿಯಿಂದ ಬೈಯುತ್ತಿದ್ದ ದಿನಗಳು ನೆನಪಾದರೆ… ನಗು ಉಕ್ಕಿ ಬರುತ್ತದೆ. ಈಗಲೂ ಟಿ.ವಿ ಯಲ್ಲಿ ಕ್ರಿಕೆಟ್ ನೇರ ಪ್ರಸಾರವಿದ್ದರೂ… ರೇಡಿಯೋದಲ್ಲಿ ಸ್ವಲ್ಪ ಹೊತ್ತಾದರೂ.. ವೀಕ್ಷಕ ವಿವರಣೆ ಕೇಳಿದರಷ್ಟೇ ಸಮಾಧಾನ. ಮೆಚ್ಚಿನ ಚಿತ್ರಗೀತೆಗೆ ಸಂದೇಶದ ಮೂಲಕ ಕೋರಿಕೆ ಸಲ್ಲಿಸಿ… ನನ್ನಿಷ್ಟದ ಹಾಡುಗಳನ್ನು ಆಲಿಸುತ್ತೇನೆ..
ಅರುಣಾ.ಜಿ. ಭಟ್. ಬದಿಕೋಡಿ ಬರಹ
ಝಂಡಾ ಊಂಚಾ ಬಿಟ್ಟು.. ಘಮಘಮಿಸುವ ಊಟದ ಹಿಂದೆ ಹೊರಟೂ…
ಮೌಂಟ್ ಅಬುನಲ್ಲಿನ ಆಶ್ರಮಕ್ಕೆ ಹೋಗಿದ್ದೆ. ಅಲ್ಲಿ ಇಪ್ಪತ್ತು ನಾಲ್ಕು ಗಂಟೆ ಊಟದ ಮನೆ ಸೇವೆ ಇರುತ್ತೆ ಅಂತ ಯಾರೋ ಹೇಳಿದ್ದರು. ಇಪ್ಪತ್ತು ನಾಲ್ಕು ಗಂಟೆ ಊಟದ ಮನೆ ಸೇವೆ ಇದ್ದರೆ ದೇವರನ್ನ ಯಾವಾಗ ನೋಡೋದು ಅನ್ನುವ ಸಂಶಯ ಹುಟ್ಟಿತ್ತು. ನನ್ನಾಕೆ ಒಂದು ಮೊಟಕು ಕೊಟ್ಟು ಇಪ್ಪತ್ನಾಲ್ಕು ಗಂಟೇನೂ ತಿಂತಲೇ ಕೂಡು ಹಾಗಿಲ್ಲ ಅಂತ ಭೋಜನ ಶಾಲೆಯಿಂದ ಆಚೆಗೆ ದರ ದರ ಎಳೆದುಕೊಂಡು ಹೋಗಿದ್ದಳು. ಊಟಕ್ಕೆ ಅಲ್ಲೂ ಚಪಾತಿ, ಅದಕ್ಕೆ ನೆಂಚಿಕೊಳ್ಳೂಕ್ಕೆ ಅದೇನೋ ಒಂದು.
ಎಚ್. ಗೋಪಾಲಕೃಷ್ಣ ಬರೆದ ಹಾಸ್ಯ ಪ್ರಬಂಧ ನಿಮ್ಮ ಓದಿಗೆ
ಅವ್ವ ಮತ್ತು ಅವಳ ಕಾಪಿಟ್ಟ ಟ್ರಂಕು
ಅವಳು ಸತ್ತು, ಅವಳ ತಿಥಿ ಮಾಡಿದ ಮೇಲೆ ನಾನು ಮಾಡಿದ ಮೊದಲ ಕೆಲಸ ಅವಳ ಟ್ರಂಕನ್ನು ಮನೆಯಿಂದ ಸ್ವಲ್ಪ ದೂರದಲ್ಲಿದ್ದ ವೃದ್ಧಾಶ್ರಮಕ್ಕೆ ಕೊಟ್ಟು ಟ್ರಂಕಲ್ಲಿ ಸಿಕ್ಕ ಐನೂರು ರುಪಾಯಿಯ ಮಾಸಲು ನೋಟನ್ನು ಆಶ್ರಮಕ್ಕೆ ಕೊಟ್ಟಿದ್ದು, ಆಮೇಲೆ ತಡೆಯಲಾರದೆ ಅವಳ ಇಷ್ಟದ ಕೆಂಪು ಕಾಟನ್ ಸೀರೆ, ಅವಳ ಆರೆಂಜ್ ಕಲರಿನ ಜಾಕೆಟ್, ಅವಳು ಬಳಸುತ್ತಿದ್ದ ಉಮಾ ಗೋಲ್ಡ್ ಬಳೆ ತೆಗೆದುಕೊಂಡೆ, ಅವು ಇನ್ನೂ ನನ್ನ ಬೀರುವಿನಲ್ಲಿದೆ, ಆ ಜಾಕೆಟ್ ಸೀರೆ ಈಗಲೂ ಮುಟ್ಟಿದರೆ ಅವಳ ಕೊನೆಯೇ ಕಾಣದ ಮಮತೆಯಿಂದ ಮೈ ತಡುವಿಕೆ ನೆನಪಾಗುತ್ತದೆ, ಕಣ್ಣಲ್ಲಿ ನೀರು ತುಂಬಿಕೊಳ್ಳುತ್ತದೆ.
ಜಯರಾಮಚಾರಿ ಬರಹ
ನಂಜುಂಡಿ ಕಲ್ಯಾಣವೂ ಮತ್ತು ‘ಮಿಲ್ಟ್ರೀ’ ಗ್ಯಾಂಗೂ
ಅಂತೂ ನಮ್ಮೂರಿಗೆ ನಂಜುಂಡಿ ಕಲ್ಯಾಣದ ಭಾಗ್ಯ. ಬರೋಬ್ಬರಿ ಒಂದು ವರ್ಷದ ನಂತರ. ಆದರೂ ನಮ್ಮ ಜನಕ್ಕೆ ಅದು ರಿಲೀಜ್ ಪಿಕ್ಚರ್. ಜಟಕಾ ಲೌಡ್ ಸ್ಪೀಕರ್ ಕಟ್ಟಿಕೊಂಡು ಸುತ್ತ ಹತ್ತೂರುಗಳಿಗೆ ಹೋಗಿ… “ಪ್ರೀಯ ಕಲಾಭಿಮಾನಿಗಳೆ.. ಕಲಾ ರಸಿಕರೆ.. ಒಮ್ಮೆ ನೋಡಿದರೆ ಮತ್ತೊಮ್ಮೆ ಮಗದೊಮ್ಮೆ.. ಮತ್ತೆ ಮತ್ತೆ ನೋಡಲೇಬೇಕಾದ ಸಿನೇಮಾ..” ಎನ್ನುತ್ತ.. “ಮರೆಯದಿರಿ.. ಮರೆತು ನಿರಾಶರಾಗದಿರಿ..…” ಎನ್ನುವ ನೊಟೀಸ್ ನೀಡಿ ಮರಳಿತು. ಸೈಕಲ್ ರಂಗ ಬಸ್ ಸ್ಟಾಪು ಸಲೂನು ಕೂಟು ಸರ್ಕಲ್ಗಳಲ್ಲಿ ಪೋಸ್ಟರ್ ಅಂಟಿಸಿದ.
ಲಿಂಗರಾಜ ಸೊಟ್ಟಪ್ಪನವರ ಬರೆದ ಪ್ರಬಂಧ
ಅಣ್ಣನೆಂಬ ಅಕ್ಕರೆಯ ಅಪ್ಪ….
ಈಗಿನಂತೆ ಬೀದಿ ದೀಪಗಳು, ಕೈಯಲ್ಲೊಂದು, ಜೇಬಲ್ಲೊಂದು ಟಾರ್ಚು ಇಲ್ಲದ ದಿನಗಳವು. ಅಣ್ಣ ನನ್ನ ಕೈಯನ್ನು ಹಿಡಿದುಕೊಂಡೆ ಮೆಲ್ಲಗೆ ಸಾಗತೊಡಗಿದ. ನನಗೆ ಇದ್ದ ಅತಿ ಮುಖ್ಯ ಭಯವೆಂದರೆ ಹಾವಿನದ್ದು. ಒಂದೆರಡು ದಿನಗಳ ಹಿಂದೆ ಎಮ್ಮೆ ಕಾಯಲು ಹೋದಾಗ ಹನುಮಪ್ಪನ ನಾಲಿನಲ್ಲಿ ನನ್ನ ಕಾಲಿನ ನಡುವೆ ಸರ ಸರನೆ ಹಾದು ಹೋಗಿ ಹೆಡೆ ಎತ್ತಿ ಆಡಿದ್ದ “ನಾಗರಾಜ”ನನ್ನು ನೆನೆದು ನಾನು ಇನ್ನಷ್ಟು ಭಯಭೀತನಾಗಿದ್ದೆ, ಮತ್ತು ಈಗ ಹೆಚ್ಚೇ ಎನ್ನುವಷ್ಟು ಜೋರಾಗಿ ಅಳತೊಡಗಿದೆ. ನನ್ನನ್ನು ಸುಮ್ಮನಾಗಿಸಲು ಹರ ಸಾಹಸ ಪಟ್ಟ ಅಣ್ಣ, ನನ್ನ ಅಳುವಿಗೆ ನೈಜ ಕಾರಣ ತಿಳಿದುಕೊಂಡ.
ಸಾವನ್ ಕೆ ಸಿಂಧನೂರು ಬರಹ










