ಅಜ್ಜರಕಾಡು ಮತ್ತು ಅಜ್ಜ
ಆಸ್ಪತ್ರೆಗೆ ಸೇರಿಸಿದ ಒಂಬತ್ತು ದಿನದವರೆಗೆ ಶೆಟ್ರು ಅರೆ ಪ್ರಜ್ಞಾವಸ್ಥೆಯಲ್ಲಿದ್ದರು. ಅವರು ನಂಬಿಕೊಂಡು ಬಂದ ಮನೆ ದೈವವಾದ ಅಬ್ಬಗ-ದಾರಗೆಯ ದಿನನಿತ್ಯದ ಪೂಜೆ ಪುನಸ್ಕಾರ ಮಾತ್ರವಲ್ಲದೆ ವರ್ಷಾವಧಿ ಜಾತ್ರೆಯ ಎಲ್ಲ ವಿಧಿ ವಿಧಾನಗಳನ್ನು ನಿಷ್ಠೆಯಿಂದ ಮಾಡಿಕೊಂಡು ಬಂದವರು. ಈಗ ಆ ದೇವಾಲಯದ ಪೂಜೆ ಮಾಡುವ ಭಟ್ರು ವಿಠ್ಠಲಶೆಟ್ಟಿಗಾಗಿ ವಿಶೇಷ ಹೂವಿನ ಪೂಜೆಯನ್ನು ಮಾಡಿ ಅದರ ಗಂಧ ಪ್ರಸಾದವನ್ನು ಆಸ್ಪತ್ರೆಗೆ ತಂದು ವಿಠಲ ಶೆಟ್ರ ಹಣೆಗೆ ಹಚ್ಚಿದ ನಂತರ ಅವರ ದೇಹಸ್ಥಿತಿಯಲ್ಲಿ ತುಸು ತುಸುವೇ ಬದಲಾವಣೆ ಆಗಿ ಅವರು ಚೇತರಿಸತೊಡಗಿದ್ದರು.
ದೇವಿಕಾ ನಾಗೇಶ್ ಬರೆದ ಪ್ರಬಂಧ ನಿಮ್ಮ ಓದಿಗೆ
ಸ್ತ್ರೀ ವೇಷ: ಕೆಲವು ಬಿಡಿ ಆಲೋಚನೆಗಳು
ಶೈಲೀಕೃತ ಮಾಧ್ಯಮವಾದ ಯಕ್ಷಗಾನದಲ್ಲಿನ ಸ್ತ್ರಿ ಪಾತ್ರದ ಅತೀ ನಾಟಕೀಯತೆಯ ಶಕ್ತಿಯನ್ನು ಅರ್ಥಮಾಡಿಕೊಳ್ಳುವುದಕ್ಕೆ, ಅದು ನನಗೆ ಪ್ರತಿರೋಧದ ಮಾದರಿಯಾಗಿ ಕಾಣುವುದಕ್ಕೆ ಅಥವಾ ಹಲವು ಸಾಧ್ಯತೆಗಳಿವೆ ಎಂದು ಅನ್ನಿಸುವುದಕ್ಕೆ ಸ್ವಲ್ಪ ವಿವರಣೆ ಬೇಕಾಗಬಹುದು. ಪ್ರಸಂಗಗಳನ್ನು ನೋಡುವಾಗ ಸ್ತ್ರೀ ಪಾತ್ರಗಳ ಆಯಾಮ ಹೆಚ್ಚಾಗಿ ಹೇಗಿರುತ್ತದೆ ಎಂದರೆ ಮೇಲೆ ಹೇಳಿದ ಮೌಲ್ಯಗಳ ಪ್ರಸಾರ ಅಥವಾ ಬೋಧನೆ ರೂಪದಲ್ಲಿರುತ್ತದೆ. ಅಂದರೆ ಹೆಣ್ಣು ಹೇಗಿರಬೇಕೆಂದು ಉಪದೇಶ ಮುಗಿಸಿ, ಈಗ ಮುಂದಿನ ಕತೆಯೊ, ದೃಶ್ಯಕ್ಕೊ ಹೋಗುವುದು ಅನ್ನುವ ಹಾಗಿರುತ್ತದೆ.
ಕೃತಿ ಆರ್ ಪುರಪ್ಪೇಮನೆ ಬರೆಯುವ ಅಂಕಣ “ಯಕ್ಷಾರ್ಥ ಚಿಂತಾಮಣಿ”
ಸ್ಪರ್ಧೆಗಳ ಗುಂಗಿನಲ್ಲೊಂದು ಕಥಾ ಕಾಲಕ್ಷೇಪ
ಕಾವ್ಯ, ಪ್ರಬಂಧ, ನಾಟಕ, ಪದ್ಯ, ಕಂದ ಪದ್ಯಗಳು, ಚುಟುಕು, ಸುನೀತ ಎಂದೆಲ್ಲ ಹತ್ತಾರು ಪ್ರಕಾರಗಳನ್ನು ನಾವು ಸಾಹಿತ್ಯ ಲೋಕದಲ್ಲಿ ಗುರುತಿಸಿದರೂ, ಈ ಕತೆಯೆಂಬ ಮಾಯಾವಿ ಮಾತ್ರ ಈ ಎಲ್ಲ ಪ್ರಕಾರದೊಳಗೂ, ಹೂವೊಳಗೆ ಕಂಪು ಸೇರಿದಂತೆ ವ್ಯಾಪಿಸಿಕೊಂಡುಬಿಡುತ್ತದೆ. ಕಾವ್ಯದೊಳಗೊಂದು ಕತೆಯ ಛಾಯೆಯಿರುತ್ತದೆಯಲ್ಲವೇ. ಪ್ರಸ್ತುತ ಸಾಹಿತ್ಯ ಲೋಕದ ಸ್ಪರ್ಧೆಗಳನ್ನು ತೆಗೆದುಕೊಂಡರೂ, ಕಥಾ ಸ್ಪರ್ಧೆಗಳು ಸದ್ದು ಮಾಡಿದಷ್ಟು ಇತರ ಸ್ಪರ್ಧೆಗಳು ಸದ್ದು ಮಾಡುವುದು ಅಪರೂಪ. ಕೋಡಿಬೆಟ್ಟು ರಾಜಲಕ್ಷ್ಮಿ ಬರಹ ಇಲ್ಲಿದೆ.
ಸಹೃದಯರ ಅಂತರಂಗವನ್ನು ಘಾಸಿಗೊಳಿಸುವ ಕ್ಷಣಗಳಿವು
ಕಲೆ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಭಿನ್ನಾಭಿಪ್ರಾಯಗಳನ್ನು ಒಪ್ಪಿಕೊಳ್ಳುವ, ತಪ್ಪುಗಳನ್ನು ತಿದ್ದಿಕೊಳ್ಳುವ ಸುಂದರ ವಾತಾವರಣವು ಮಾಸಿ ಹೋಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿರುವ ಸಂದರ್ಭದಲ್ಲಿ ಬರಹಗಾರರು ಗೊಂದಲದ ಮನಸ್ಥಿತಿಯಲ್ಲಿದ್ದಾರೆ. ನಿಜವಾಗಿಯೂ ಸಾಹಿತ್ಯ ಕೃತಿಯೊಂದರ ಉದ್ದೇಶವೇನಪ್ಪಾ ಎಂಬ ಪ್ರಶ್ನೆಯೊಂದು ಧುತ್ತನೇ ನಮ್ಮೆದುರು ನಿಂತಿರುವಂತಿದೆ. ಈ ಹಿನ್ನೆಲೆಯಲ್ಲಿ ಕಾದಂಬರಿಕಾರ ಶ್ರೀಧರ ಬಳಗಾರ ಅವರೊಡನೆ ಕೋಡಿಬೆಟ್ಟು ರಾಜಲಕ್ಷ್ಮಿ ನಡೆಸಿದ ಮಾತುಕತೆಯ ತುಣುಕೊಂದು ಇಲ್ಲಿದೆ.
ಚಹಾ ಎಂಬ ಖಾಸಾ ದೋಸ್ತನ ಕತಿಯಿದು
ಉತ್ತರ ಕರ್ನಾಟಕದ ವಿದ್ಯಾರ್ಥಿಗಳಿಗೆ ಚಹದಷ್ಟು ಪ್ರಿಯವಾದ ಪಾನೀಯ ಮತ್ತೊಂದಿಲ್ಲ. ಪರೀಕ್ಷೆಗೆ ಸಿದ್ಧತೆ ನಡೆಸುವ ಸಂದರ್ಭದಲ್ಲಿ ಚಹದ ಬೇಡಿಕೆ ಮತ್ತು ಪೂರೈಕೆ ತುಂಬ ಹೆಚ್ಚಾಗಿರುತ್ತದೆ. ಅರ್ಧ ತಾಸಿಗೊಮ್ಮೆ ಚಹ ಕುಡಿಯದಿದ್ದರೆ ಓದಲು ಮನಸ್ಸೇ ಬರುವುದಿಲ್ಲ. ಪರೀಕ್ಷೆಯ ಸೀಜನ್ನು ಬಂದಾಗ ಧಾರವಾಡದಲ್ಲಿ ಅರ್ಧ ರಾತ್ರಿಯವರೆಗೂ ಚಹದಂಗಡಿಗಳು ತೆರೆದಿರುತ್ತವೆ.
ಉತ್ತರ ಕರ್ನಾಟಕದಲ್ಲಿ ಜನಜೀವನದ ಭಾಗವೇ ಆಗಿರುವ ಚಹ ಸೇವನೆಯ ಕುರಿತು ವಿಕಾಸ ಹೊಸಮನಿ ಬರೆದ ಪ್ರಬಂಧ ನಿಮ್ಮ ಓದಿಗೆ
ಕಷ್ಟಸುಖಗಳಿಗೆ ಹೆಗಲಾಗಿದ್ದ ಶೆಟ್ಟರಂಗಡಿ
ಮುದ್ರಾಡಿ ಕೃಷ್ಣ ಶೆಟ್ಟರೆಂದರೆ ಸದಾ ಸುದ್ದಿಯಲ್ಲಿದ್ದ ಗಣ್ಯವ್ಯಕ್ತಿಯೇನಲ್ಲ. ಆದರೆ ಬಹರೈನ್ ಕನ್ನಡಿಗರಿಗೆ ಸದಾ ಬೇಕಾಗಿದ್ದ ಪ್ರೀತಿ ಪಾತ್ರರಾಗಿದ್ದ ಸರಳ ವ್ಯಕ್ತಿ. ಪುಟ್ಟದೊಂದು ಟೈಲರ್ ಅಂಗಡಿ ಇಟ್ಟುಕೊಂಡು ಅವರು ಕಳೆದ 21 ವರ್ಷಗಳಿಂದ ಬಹರೈನ್ ನಲ್ಲಿ ಜೀವನ ಸಾಗಿಸುತ್ತಿದ್ದರು. ತಮ್ಮೂರನ್ನುಬಿಟ್ಟು ಬಂದು ಸದಾ ದುಡಿಮೆಯಲ್ಲಿಯೇ ತೊಡಗಿಕೊಂಡು ಬಾಳುವ ಕರ್ನಾಟಕದ ಕರಾವಳಿಯ ಬೃಹ ತ್ ಸಮುದಾಯದ ಪ್ರತಿನಿಧಿಯಂತೆ ಗೋಚರಿಸುತ್ತಿದ್ದರು. ಅವರು ಇತ್ತೀಚೆಗೆ ಅಗಲಿದಾಗ, ಕಾಡಿದ ನೋವನ್ನೇ ಬರಹವಾಗಿಸಿದ್ದಾರೆ ಬಹರೈನ್ ನಿವಾಸಿ, ಕನ್ನಡಿಗ ವಿನೋದ್.
ನಾವು ತಿನ್ನುವ ಆಹಾರದ ಮೂಲ ಯಾವುದು?
ನಾವು ತಿನ್ನುವ ಆಹಾರದ ಬಗ್ಗೆ ಬೆಳೆದ ಪ್ರಜ್ಞೆಯಿಂದ ಒಂದಷ್ಟು ಕಂಪೆನಿಗಳು ಹೊಸ ರೀತಿಯಲ್ಲಿ ಲಾಭಮಾಡಿಕೊಳ್ಳಲಾರಂಭಿಸಿದ್ದು ಒಂದೆಡೆಯಾದರೆ, ಮತ್ತೊಂದಷ್ಟು ಜನ ತೀರಾ ಮತ್ತೊಂದು ಹಾದಿಯಲ್ಲಿ ಯೋಚಿಸಲಾರಂಭಿಸಿದ್ದರು. ನಾವು ತಿನ್ನುವ ತರಕಾರಿಗಳನ್ನು ನಾವೇ ಬೆಳೆದುಕೊಂಡರೆ ಹೇಗೆ? ಹೀಗಂದುಕೊಂಡ ಬಹುತೇಕ ಜನರು ಇದ್ದದ್ದು ಬೆಂಗಳೂರಿನಂಥ ಮಹಾನಗರಗಳಲ್ಲಿ. ಮನೆ ಕಟ್ಟಲಿಕ್ಕೆ ಒಂದು ಸೈಟಿಗೆ ಸಾಕಷ್ಟು ಒದ್ದಾಡಬೇಕಾದಾಗ ಇನ್ನು ತರಕಾರಿಗಳನ್ನು ಬೆಳೆದುಕೊಳ್ಳುವುದು ಹೇಗೆ ಅನ್ನುವ ಜಿಜ್ಞಾಸೆಯ ಸಮಯದಲ್ಲೇ ಕೆಲವೊಂದಷ್ಟು ಜಾಣರು ಟೆರೆಸ್ ಗಾರ್ಡನಿಂಗ್ ಆರಂಭಿಸಿಯೇ ಬಿಟ್ಟರು. ರೂಪಶ್ರೀ ಕಲ್ಲಿಗನೂರ್ ಬರಹ
ಗಂಟಿನೊಳಗಿದ್ದ ಹೆಬ್ಬಾವು ಮಾಯವಾಗಿದೆಯೆಂದರೆ..
ಮರವನ್ನು ಸುತ್ತಿದ್ದ ಹೆಬ್ಬಾವು ಪೊಟರೆಯೊಳಕ್ಕೆ ಬಾಯಿಡಲು ಹವಣಿಸುತ್ತಿದೆ. ಒಂದೆಡೆ ಅಳಿವಿನಂಚಿನ ಜೀವಿಯ ಭವಿಷ್ಯದ ಆಶಾಕಿರಣವಾದ ಮೂರು ಮರಿಹಕ್ಕಿಗಳು. ಮತ್ತೊಂದೆಡೆ ಪ್ರಕೃತಿ ಸಹಜವಾಗಿ ಹಸಿದ ಹಾವು. ಏನೂ ಮಾಡದೇ ಹಾವು ಆ ಹಕ್ಕಿ ಮರಿಗಳನ್ನು ನುಂಗಲು ಬಿಡಲೇ ಅಥವಾ ಮಧ್ಯ ಪ್ರವೇಶಿಸಿ ಅದರ ಊಟವನ್ನು ಕಸಿದುಕೊಳ್ಳಲೇ? ವಿಚಿತ್ರ ಸಂದಿಗ್ಧ ಪರಿಸ್ಥಿತಿ. ಅದು ಅಳಿವಿನಂಚಿನ ಹಕ್ಕಿಯೆಂದು ಹೆಬ್ಬಾವಿಗೇನು ಗೊತ್ತು ಪಾಪ.
ಹಕ್ಕಿ ಮತ್ತು ಹಾವುಗಳ ಒಡನಾಟದಲ್ಲಿ ಪುಟಿದ ಜಿಜ್ಞಾಸೆಗಳಿಗೆ ಅಕ್ಷರ ರೂಪ ನೀಡಿದ್ದಾರೆ ಪ್ರಸನ್ನ ಆಡುವಳ್ಳಿ.
ಸುರಿವ ಮಳೆಯಲ್ಲಿ ಅಪ್ಪ ಮತ್ತು ನಾನು
ಈ ಯೂರಿಯಾ ಹಾಕುವ ದಿನಗಳಲ್ಲಿ ಗದ್ದೆಗಳನ್ನು ಬಹಳ ಜಾಗುರೂಕತೆಯಿಂದ ಕಾವಲು ಕಾಯಬೇಕಾಗುತ್ತದೆ. ಆ ದಿನ ಮಳೆ ಬಂದರೆ ಎಲ್ಲವೂ ಹರಿದು ಹೋಗುವ ಭಯ ಒಂದು ಕಡೆಯಾದರೆ ಇನ್ನೊಂದು ಭಯವೂ ಇದೆ. ಸಂಜೆಯ ವೇಳೆಗೆ ಯೂರಿಯಾ ಹಾಕಿ ಹಾಗೆಯೇ ಹೋದರೆ ಮರುದಿನ ಬೆಳಗ್ಗೆ ಅದು ಬೇರೆ ಗದ್ದೆಯ ಪಾಲಾಗುವುದು ಹೆಚ್ಚು. ಕೆಳಗಿನ ಗದ್ದೆಗಳಿಗೆ ನೀರಿಲ್ಲ ಅಂತ ನೆಪ ಮಾಡಿ ನಮ್ಮ ಗದ್ದೆಯಿಂದ ಅವರ ಗದ್ದೆಗಳಿಗೆ ನೀರು ಹಾಯಿಸುವ ನೆಪದಲ್ಲಿ ಗದ್ದೆಯ ಬದು ಸ್ವಲ್ಪ ಸರಿಸಿದರೆ ಯೂರಿಯವೆಲ್ಲಾ ಆ ಗದ್ದೆಯ ಪಾಲು. ಉಳುಮೆಯ ಸುಖದುಃಖಗಳ ಕುರಿತು ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅವರ ಲೇಖನ ಇಲ್ಲಿದೆ.









