ಹಸಿರಿನ ಮಡಿಲಲ್ಲಿ ಕುಣಬಿಯವರ ಹಾಡುಹಬ್ಬ
“ಒಂದು ನಿರ್ದಿಷ್ಟ ಮರದ ಬುಡದಿಂದ ತುದಿಯವರೆಗೂ ಹಣ್ಣುಗಳು ಇದ್ದರೆ ಬಹಳ ಮಳೆಯೆಂದು, ಕಡಿಮೆ ಹಣ್ಣು ಇದ್ದರೆ ಮಳೆ ಕಡಿಮೆ ಎಂದು, ನಡು ನಡುವೆ ಹಣ್ಣು ಇದ್ದರೆ ಮಳೆ ಒಮ್ಮೊಮ್ಮೆ ಹೆಚ್ಚು ಕಡಿಮೆ ಆಗಬಹುದೆಂದೂ ಖಚಿತವಾಗಿ ಹೇಳುತ್ತಾರೆ. ಕುಣಬಿ ಸಮುದಾಯಕ್ಕೆ ಯುಗಾದಿಯೆಂದರೆ ಪ್ರಕೃತಿಯ ಮಡಿಲಿನಲ್ಲಿ ಕುಳಿತೊಂದು ಹಾಡು ಹಾಡಿದಂತೆ.
ಈ ವರ್ಷದ ಯುಗಾದಿಯ ಸಂಭ್ರಮಕ್ಕೆ ಅಕ್ಷತಾ ಕೃಷ್ಣಮೂರ್ತಿ ಬರಹ ನಿಮ್ಮ ಓದಿಗೆ…”
ಔಷಧಿಗಳೇಕೆ ಕೆಲಸ ಮಾಡುತ್ತಿಲ್ಲ?
“ಔಷಧಿಗಳ ಹೆಸರಿನಲ್ಲಿ ದೇಹದೊಳಗೆ ಸೇರುವ ಸೂಕ್ಷ್ಮ ಜೀವಿಗಳನ್ನು ರೋಗಾಣುಗಳು ಕ್ಯಾರೇ ಅನ್ನುತ್ತಿಲ್ಲ. ಅಂದರೆ ಸೂಕ್ಷ್ಮ ಜೀವಿಗಳ ಲೋಕದಲ್ಲಿ ಬದಲಾವಣೆಗಳು ಆಗುತ್ತಿವೆ ಎಂದಾಯಿತು. ಆ ಬದಲಾವಣೆಗಳಿಂದ ಮನುಷ್ಯರಿಗೆ ಸಮಸ್ಯೆ ಸೃಷ್ಟಿ ಆಗುತ್ತದೆಯೇ. ಒಂದುವೇಳೆ ಸಮಸ್ಯೆಗಳು ಸೃಷ್ಟಿ ಆಗುತ್ತಿವೆ ಎಂದಾದರೆ, ಅವುಗಳ ಪ್ರಮಾಣ ಎಂತಹುದು ಎಂಬುದು ಕುತೂಹಲದ ಸಂಗತಿ. ಕೊರೊನಾ ಓಡಿಸುವ ಭರದಲ್ಲಿ ನಾವು ನೆನಪಿಡಬೇಕಾದ..”
ಚಂದ್ರಮತಿ ಸೋಂದಾ ಬರೆದ ಪ್ರಬಂಧ, ‘ಬಹುರೂಪಿ ಮಂಡಕ್ಕಿ’
“ಮನೆಗೆ ಯಾರಾದ್ರೂ ಬರುತ್ತಾರೆ ಎಂದಾಗ ಕಾಫಿ, ಟೀ ಜೊತೆಗೆ ಸಾಥ್ ನೀಡುವ ಮಂಡಕ್ಕಿ ಬಗ್ಗೆ ಮಹಿಳೆಯರಿಗೆ ಅಕ್ಕರೆ ಹೆಚ್ಚು. ಶೇಂಗಾ, ಹುರಿಗಡಲೆ, ಕೊಬ್ಬರಿ, ಬೆಳ್ಳುಳ್ಳಿ, ಮೆಣಸಿನಪುಡಿ ಎಲ್ಲವನ್ನೂ ಹಾಕಿ ಒಗ್ಗರಣೆ ಮಾಡಿ ಇಟ್ಟರೆ ನಾಲ್ಕಾರು ದಿನ ಚಹಾ ಅಥವಾ ಕಾಫಿ ಜೊತೆಗೆ ತಿನ್ನಬಹುದು. ಒಂದಿಷ್ಟು ಸ್ಟಾಕಿದ್ರೆ, ಬೇಕಾದಾಗ ಈರುಳ್ಳಿ ಹೆಚ್ಚಿ ಕ್ಯಾರೆಟ್ ತುರಿದು ಚುರುಮುರಿ ಮಾಡುವುದೇನು ಕಷ್ಟವಲ್ಲ….”
ಇಲ್ಲೇ ಆಡಿಕೊಂಡಿದ್ದ ಗುಬ್ಬಚ್ಚಿ ಎಲ್ಲಿಗೆ ಹೋಯಿತು?
“ಹಿಂಗೆಲ್ಲ ನಡೆದಾಗ ನನ್ನ ಅಣ್ಣ ಮಾತ್ರ ಅಂಥ ಮರಿಯನ್ನು ಅಕ್ಕರೆಯಿಂದ ಜೋಪಾನ ಮಾಡುತ್ತಿದ್ದ. ಹಕ್ಕಿ ಮರಿಗೆ ಇಂಕ್ ಫಿಲ್ಲರ್ ನಿಂದ ನೀರು, ಕುಡಿಸಿ, ಕಾಳು ತಿನ್ನಿಸಿ ಅದು ಸುಧಾರಿಸಿಕೊಳ್ಳುವವರೆಗೆ ಆರೈಕೆ ಮಾಡುತ್ತಿದ್ದ. ಅದು ಬೆಳೆದಂತೆ ಅದರ ಗರಿಗಳಿಗೆ ಚಂದನೇ ಬಣ್ಣ ಹಚ್ಚಿ… ನಮಗೆಲ್ಲ ತೋರಿಸಿ ಅದನ್ನು ಮುಚ್ಚಟೆಯಿಂದ ಬೆಳೆಸುತ್ತಿದ್ದ ಚಿತ್ರಣ ಈಗಲೂ ಕಣ್ಣಿಗೆ ಕಟ್ಟಿದಂತಿದೆ.
ವಿಶ್ವ ಗುಬ್ಬಚ್ಚಿಗಳ ದಿನದ ನಿಮಿತ್ತ”
ಎಫ್. ಆರ್. ಲೀವಿಸ್ ಕುರಿತು ಕೆ. ವಿ. ತಿರುಮಲೇಶ್ ಐವತ್ತೈದು ವರ್ಷಗಳ ಹಿಂದೆ ಬರೆದದ್ದು
“ಲೀವಿಸ್ ಎಂದರೆ ತುಂಬ ಹಟಮಾರಿಯೂ ಹೌದು, ತನ್ನ ತಪ್ಪನ್ನು ಒಪ್ಪಿಕೊಳ್ಳುವುದೇ ಇಲ್ಲ. ಇದರಿಂದಾಗಿ ಲೀವಿಸ್ ನ ಬೆಂಬಲಿಗರೇ ಅವನ ಕೈಬಿಟ್ಟದ್ದುಂಟು. ತನ್ನ ‘ಮೌಲ್ಯ’ಗಳಿಗಾಗಿ ಲೀವಿಸ್ ಹೋರಾಡಿದ್ದಾನೆ. ಲೀವಿಸ್ ತಾನೊಂದು ಸರ್ವಸಾಮಾನ್ಯ ನಿಲುಮೆ ತಳೆಯಲು ನಿರಾಕರಿಸುವುದೇ ಇದಕ್ಕೆ ಕಾರಣ. ಇದು ಲೀವಿಸ್ ನ ಸಾಧನೆಯ ಕೇಂದ್ರ ವಿರೋಧಾಭಾಸ. ವಿಮರ್ಶೆಯ ಪರಮತತ್ವಗಳ ಕುರಿತಾಗಿ…”
ಅಜ್ಜಯ್ಯನ ಸವಾರಿ: ಚಂದ್ರಮತಿ ಸೋಂದಾ ಬರೆದ ಪ್ರಬಂಧ
“ಅಜ್ಜಯ್ಯ ನೆಂಟರ ಮನೆಗೆ ಹೋದರೂ ತಮ್ಮ ದಿನಚರಿಯನ್ನು ಬದಲಿಸಿದವರಲ್ಲ. ಸಂಜೆಹೊತ್ತಿಗೆ ಮನೆಯ ಸುತ್ತಮುತ್ತ ಇರುವ ಕೋಲು, ಕಡ್ಡಿ, ತೆಂಗು, ಅಡಿಕೆಮರಗಳ ಒಣಗಿದ ತುಂಡು ಹೀಗೆ ಬಚ್ಚಲೊಲೆಗೆ ಬೇಕಾಗುವ ಎಲ್ಲವನ್ನು ಒಟ್ಟುಗೂಡಿಸುತ್ತಿದ್ದರು. ಅವನ್ನೆಲ್ಲ ಬಚ್ಚಲ ಒಲೆಯ ಹತ್ತಿರ ಜೋಡಿಸಿಡುತ್ತಿದ್ದರು. ಬೆಳಗ್ಗೆ ಐದುಗಂಟೆಗೆ ಎದ್ದು ಒಲೆಗೆ ಉರಿ ಮಾಡುವುದು ಅವರ ರೂಢಿ. ರಾತ್ರೆ ಮಲಗುವಾಗ ತಲೆಯ ಹತ್ತಿರ ತಮ್ಮ ಲಾಟೀನನ್ನು ಸಣ್ಣಗೆ ಉರಿಸುವ ಅವರಿಗೆ ಒಲೆಗೆ ಬೆಂಕಿ ಹಿಡಿಸುವುದು ಸುಲಭವಾಗಿತ್ತು…”
ಆನೆ ಬಂತೊಂದಾನೆ… ಅಲ್ಲ.. ಮೂರಾನೆ!
“ಆ ಸುದ್ದಿ ಓದಿ ಎರಡು ಮೂರು ದಿನವಾಗಿರಲಿಲ್ಲ, ಮನೆ ಕೆಲಸಕ್ಕೆ ಬರುವ ಗಂಗೆ ಒಂದು ಬೆಳಗ್ಗೆ ಅತ್ತೆ ಹತ್ತಿರ ಕೊಡವ ಭಾಷೆಯಲ್ಲಿ ಗಂಭೀರವಾಗಿ ಏನನ್ನೋ ಮಾತನಾಡುತ್ತಿದ್ದರು. “ರಾತ್ರಿ ಎಲ್ಲ ನಿದ್ದೆಯೇ ಇಲ್ಲ ಅಕ್ಕಯ್ಯಾ… ಹೀಗೇ ಇವು ಬರ್ತಾ ಹೋದ್ರೆ, ಎಂತ ಮಾಡೋದು ನಾವು? ಗಾಬರಿಯಾಯ್ತದೆ. ಬೆಳಗ್ಗೆ ಬೆಳಗ್ಗೆ ಬೇಗ ಕೆಲಸಕ್ಕೆ ಬಾ ಅಂತಾರೆ. ಒಂದೊಂದ್ ಸಲಾ.ಕೆಲ್ಸಾ ಮುಗ್ಸಿ ಮನೇಗ್ ಹೋಗೋದು ಲೇಟಾಯ್ತದೆ. ರಾತ್ರಿ ಒಬ್ಬರೇ ಸಿಕ್ರೆ ಬಿಡ್ತಾವ..? ತುಳ್ದು ಜಜ್ಜಿ ಹಾಕ್ತವೆ…”..”
ಊರು, ಉರಿಬಿಸಿಲು ಮತ್ತು ಉಪ್ಪಿಟ್ಟು-ಚಹಾ
“ಅಲ್ಲಿನ ಉಪ್ಪಿಟ್ಟಿಗಿರುವ ರುಚಿಯೇ ಬೇರೆ. ಬೆಂಗಳೂರಿನವರ ಹಾಗೆ ಬನ್ಸಿ ರವೆಯಲ್ಲೋ, ಅಥವಾ ನಾಲಿಗೆ ಹೆಚ್ಚು ರುಚಿಯನ್ನು ಬಯಸುವಾಗ, ತುಪ್ಪದಲ್ಲಿ ಹುರಿದ ಚಿರೋಟಿ ರವೆಯಲ್ಲೋ ಮಾಡುವ ಉಪ್ಪಿಟ್ಟಲ್ಲ ಅದು. ದಪ್ಪ ರವೆಯ ಒಂಚೂರು ಹೆಚ್ಚಿಗೆಯೇ ಅನ್ನಿಸುವಷ್ಟು ಎಣ್ಣೆಯ ಒಗ್ಗರಣೆಯಲ್ಲಿ ಯಥೇಚ್ಚವಾಗಿ ಸುರಿದ ಉಳ್ಳಾಗಡ್ಡಿ (ಈರುಳ್ಳಿ), ಕರಿಬೇವು, ಸಾಸಿವೆ, ಜೀರಿಗೆ ಮತ್ತು ತಿಂದವರ ಮೂಗು ಸೋರುವಷ್ಟು ಖಾರದ ಮೆಣಸನ್ನು ಹಾಕಿದ ಉಪ್ಪಿಟ್ಟದು. ಅದರ ರುಚಿ ತಿಂದವರಿಗೇ ಗೊತ್ತು”
ಬಾಲ್ಯವೆನ್ನುವ ರಾತ್ರಿರಾಣಿಯ ಪರಿಮಳ
“ಒದ್ದೆಯಾಗಿರುತ್ತಿದ್ದ ಯೂನಿಫಾರ್ಮು ಎಲ್ಲರ ಮಾತುಗಳನ್ನು ಆಲಿಸುತ್ತಲೇ ಮರದ ಮಣೆಯ ಮೇಲೆ ಕುಳಿತು ಇಂಚಿಂಚಾಗಿ ಒಣಗುತ್ತ ಮರುದಿನದ ಕ್ಲಾಸಿಗೆ ರೆಡಿಯಾಗುತ್ತಿತ್ತು. ಬಣ್ಣಬಣ್ಣದ ಕರ್ಟನ್ನುಗಳನ್ನು ಆಗೊಮ್ಮೆ ಈಗೊಮ್ಮೆ ಒದ್ದೆಯಾಗಿಸುವ ಮಳೆಹನಿಗಳನ್ನು ನೋಡುತ್ತ ಸೋಫಾದ ಮೇಲೆ ಕುಳಿತು ಟೀ ಕುಡಿಯುವಾಗಲೆಲ್ಲ, ಬಚ್ಚಲೊಲೆಯ ಬಿಸಿಬೂದಿಯಲ್ಲಿ ಸಿಡಿಯುತ್ತ ಬಾಯಲ್ಲಿ ನೀರೂರಿಸುತ್ತಿದ್ದ. ಹಲಸಿನಬೀಜವನ್ನು ನೆನಪಿಸಿಕೊಂಡು….”









