Advertisement

ಸಂಪಿಗೆ ಸ್ಪೆಷಲ್

ಕಥೆಯಾದಳು ಸೀತಕ್ಕ… : ವಿನಾಯಕ‌ ಅರಳಸುರಳಿ ಅಂಕಣ

ಕಥೆಯಾದಳು ಸೀತಕ್ಕ… : ವಿನಾಯಕ‌ ಅರಳಸುರಳಿ ಅಂಕಣ

ಸೀತಕ್ಕನ ಗಂಡನಿಗೆ ಕೊನೆಗೊಂದು ದಿನ ಡಿಸ್ಚಾರ್ಜಾಯಿತು. ಮನೆಗೆ ಹೋದ ಮೇಲೂ ಸೀತಕ್ಕ ಆಗಾಗ ಕರೆ ಮಾಡುತ್ತಿದ್ದರು. ಆಕೆಯ ಬದುಕು ಮೂರು ನಿಮಿಷದಲ್ಲಿ ಕಂಡ ಎಪಿಸೋಡಿನಂತೆ ನನ್ನೆದುರು ಪ್ರಸಾರವಾಗುತ್ತಿತ್ತು.‌ ಊರಿನಲ್ಲಿ ಸೀತಕ್ಕನಿಗೆ ಅವಳದೇ ಆದ ಒಂದಷ್ಟು ಸ್ನೇಹಗಳಿದ್ದವು. ಆಕೆ ಮಾತ್ರ ಮಾಡಬಹುದಾದ, ಅರ್ಧ ಸಂಬಳದ ಕೆಲಸಗಳಿದ್ದವು....

read more
ನವರಾತ್ರಿಯಲ್ಲಿ ನನಗೆ ಅಮ್ಮ ಸಿಕ್ಕಳು…: ಗಾಯತ್ರಿ ರಾಜ್ ಬರಹ

ನವರಾತ್ರಿಯಲ್ಲಿ ನನಗೆ ಅಮ್ಮ ಸಿಕ್ಕಳು…: ಗಾಯತ್ರಿ ರಾಜ್ ಬರಹ

ಕಣ್ಣು ತೇವಗೊಂಡು, ಭಾವ ಗಂಟಲುಬ್ಬಿ ಬಂದು, ಆ ನವದುರ್ಗೆಯರಲ್ಲೂ, ನನ್ನಲ್ಲೂ, ನನ್ನ ಮಗಳಲ್ಲೂ ಅಮ್ಮನನ್ನೇ ಗುರುತಿಸುತ್ತಾ ಅವಳು ಕಲಿಸಿದ ದೇವರ ನಾಮ ಗುನುಗುತ್ತೇನೆ. ಅವಳನ್ನೇ ಮೈವೆತ್ತಂತೆ ಮತ್ತೆ ಮತ್ತೆ ಮೈದುಂಬಿ ಹಾಡುವಾಗ, ನನ್ನ ಮಗಳು ಕೂಡ ನನ್ನ ಜೊತೆ ಗುನುಗುತ್ತಾ ಮುಗುಳ್ನಗುತ್ತಾಳೆ. ತಲೆಮಾರುಗಳ ಸಂಯೋಜನೆಯೊಂದು ಸಜೀವವಾಗಿ ಕಣ್ಣೆದುರು ನಿಂತಂತಾಗುತ್ತದೆ. ನನ್ನೊಳಗಿನ ಅಮ್ಮ ಈಗ ಅವಳ ತುಟಿಯಲ್ಲಿ ಮೂಡುತ್ತಿದ್ದಳೆ. ಅವಳೂ ಕೂಡ ನಾಳೆ ನಾ ಅಮ್ಮನಿಂದ ಕಲಿತು, ಕಲಿಸಿದ ಹಾಡನ್ನೇ ತನ್ನದೇ ದನಿಯಲ್ಲಿ, ತನ್ನದೇ ಭಾವದಲ್ಲಿ ಪುನರ್ಜೀವಗೊಳಿಸುತ್ತಾಳೆ.
ನವರಾತ್ರಿ ಆಚರಣೆಯಲ್ಲಿ ಅಮ್ಮನ ನೆನಪುಗಳ ಕುರಿತು ಗಾಯತ್ರಿ ರಾಜ್ ಬರಹ

read more
ಮಾನವನ ವಿಕಾಸಕ್ಕೆ ಪ್ರಶ್ನಿಸುವುದೇ ಆಧಾರ: ನಮ್ರತಾ ಪೊದ್ದಾರ್‌ ಬರಹ

ಮಾನವನ ವಿಕಾಸಕ್ಕೆ ಪ್ರಶ್ನಿಸುವುದೇ ಆಧಾರ: ನಮ್ರತಾ ಪೊದ್ದಾರ್‌ ಬರಹ

ಬಹಳ ಪೋಷಕರು ಮಕ್ಕಳ ಕುತೂಹಲಭರಿತ ಪ್ರಶ್ನೆಗಳಿಗೆ ನಕ್ಕು ಸುಮ್ಮನಾಗಿಯೋ ಅಥವಾ ಅರೆಬರೆ ಉತ್ತರ ಕೊಟ್ಟೋ ಜಾರಿಕೊಳ್ಳುತ್ತಾರೆ. ತಮ್ಮ ನಂಬಿಕೆಗಳಿಗೆ ಹಾಗೂ ಆಚಾರ, ವಿಚಾರಕ್ಕೆ ಸರಿಹೊಂದದೆ ಇರುವ ಪ್ರಶ್ನೆಗಳನ್ನು ಮಕ್ಕಳು ಕೇಳಿದಾಗ ಕಸಿವಿಸಿಗೊಂಡು ಕೋಪಿಸಿಕೊಳ್ಳುವುದನ್ನು ನೋಡಿದ್ದೇವೆ. ಯಾವುದೇ ವಿಷಯದ ಬಗ್ಗೆ ಗೊತ್ತಿಲ್ಲದಿರುವುದು ಅವಮಾನದ ಮಾತಲ್ಲ. ನಾವೇ ಏನೋ ಊಹೆ ಮಾಡಿಕೊಂಡು, ಖಾಲಿ ಇರುವ ಜಾಗದಲ್ಲಿ ಏನೋ ತುಂಬಿಕೊಂಡು ಸತ್ಯವನ್ನು ಹುಡುಕುವ ಗೋಜಿಗೆ ಹೋಗದಿರುವುದು ತಪ್ಪು.
ನಮ್ರತಾ ಪೊದ್ದಾರ್‌ ಬರಹ ನಿಮ್ಮ ಓದಿಗೆ

read more
ಅಪರೂಪದ ಗ್ರೂಪ್ ಫೋಟೋ: ಜಯಂತ ಕಾಯ್ಕಿಣಿ ಬರಹ

ಅಪರೂಪದ ಗ್ರೂಪ್ ಫೋಟೋ: ಜಯಂತ ಕಾಯ್ಕಿಣಿ ಬರಹ

ವ್ಯಕ್ತಿಗತವಾಗಿ ವಿಭಿನ್ನ ಹುಡುಕಾಟ, ನೋಟ, ನಿಲುವುಗಳಿದ್ದರೂ, ಒಟ್ಟಾರೆ ಸೇರಿ ಏನೋ ಒಂದು ಒಳ್ಳೆಯದರಲ್ಲಿ ತೊಡಗಿರುವ ಭಾವವೊಂದು ಇಲ್ಲಿ ನಿಚ್ಚಳವಾಗಿದೆ. ‘ಬೇಂದ್ರೆ-ತರಾಸು ತೊಡೆನಾಟʼ ಇದಕ್ಕೆ ಸೊಗಸಾದ ಸಾಕ್ಷಿ. ಬೇಂದ್ರೆ ಮತ್ತು ಅಡಿಗರ ನಡುವೆ ಕಾಯ್ಕಿಣಿ, ಎಕ್ಕುಂಡಿ, ಶರ್ಮ ಇರುವುದೇ ಒಂದು ರೂಪಕ. ಬಹುಶಃ ಇದು ಆಗ ನಡೆದಿದ್ದ ಕುಮಟಾ ಸಾಹಿತ್ಯ ಸಮ್ಮೇಳನಕ್ಕೆ ಬಂದ ಕೆಲವು ಅತಿಥಿಗಳು ಗೋಕರ್ಣವನ್ನೂ ನೋಡಿಕೊಂಡು ಹೋಗಲು ಬಂದಾಗ ನಡೆದ ಕೂಟ ಕಲಾಪ….
ಕವಿ, ಕತೆಗಾರ, ಸಿನಿಮಾ ಹಾಡುಗಳ ಸರದಾರ, ಜಯಂತ ಕಾಯ್ಕಿಣಿ ತಮ್ಮ ತಂದೆ; ವಿದ್ವಾಂಸ, ವಿಮರ್ಶಕ, ಸಂಶೋಧಕ ಗೌರೀಶ ಕಾಯ್ಕಿಣಿ ಮತ್ತು ಅವರ ಸಮಕಾಲೀನ ಬರಹಗಾರರರನ್ನು ಅಪರೂಪದ ಫೋಟೋವೊಂದರ ಮೂಲಕ ನೆನಪಿಸಿಕೊಂಡಿದ್ದಾರೆ.

read more
ತಾವರೆಯ ಧ್ಯಾನ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಲಲಿತ ಪ್ರಬಂಧ

ತಾವರೆಯ ಧ್ಯಾನ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಲಲಿತ ಪ್ರಬಂಧ

ರೀಲ್ಸ್‌ನಲ್ಲಿ ತೋರಿಸಿದ ಹಾಗೆ ಎರಡು ದಿನಗಳಲ್ಲಿ ಅದರಲ್ಲಿ ಸೃಷ್ಟಿಯ ಕುರುಹುಗಳು ಕಂಡುಬರಬೇಕಿತ್ತು. ದಿನ ಎರಡಾಯಿತು ಮೂರಾಯಿತು ಬೀಜ ಕದಲಲಿಲ್ಲ. ಬೀಜಗಳನ್ನು ಹೊರತೆಗೆದು ಕೈಯಲ್ಲಿಟ್ಟು ನೋಡಿದ. ತಿರುಗಿಸಿ ತಿರುಗಿಸಿ ನೋಡಿದರೂ ಬೀಜ ನಿಸ್ತೇಜವಾಗಿ ಬಿದ್ದುಕೊಂಡಿತ್ತು. ಅದು ಮೊಳಕೆಯೊಡೆಯುವ ಯಾವ ಮನಸ್ಸನ್ನೂ ಮಾಡಲಿಲ್ಲ. ಮೊದಮೊದಲು ಧ್ರುವನ ಈ ತಳಮಳವನ್ನು ನೋಡಿ ನಾನು ಜೋರಾಗಿ ನಗುತ್ತಿದ್ದೆ. ಮೊದಲೇ ಹೇಳಿದ್ದೆ ನಿಂಗೆ ಇದು ವರ್ಕ್ ಔಟ್ ಆಗಲ್ಲ ಅಂತ. ಸುಮ್ನೆ ಟೈಮ್ ವೇಸ್ಟ್. ರೀಲ್ಸ್‌ನಲ್ಲಿ ಸುಮ್ನೆ ತೋರಿಸಿ ನಮ್ಮನ್ನು ಮಂಗ ಮಾಡ್ತಾರೆ.
ರವೀಂದ್ರ ನಾಯಕ್‌ ಸಣ್ಣಕ್ಕಿಬೆಟ್ಟು ಬರೆದ ಲಲಿತ ಪ್ರಬಂಧ ನಿಮ್ಮ ಓದಿಗೆ

read more
ಶ್ರಾವಣ ಬಂತೂ ನಾಡಿಗೆ….: ಮಹಾಲಕ್ಷ್ಮೀ ಕೆ. ಎನ್. ಬರಹ

ಶ್ರಾವಣ ಬಂತೂ ನಾಡಿಗೆ….: ಮಹಾಲಕ್ಷ್ಮೀ ಕೆ. ಎನ್. ಬರಹ

ಈ ಹಸಿರ ಬಸಿರ ತಿಳಿಗಾಳಿಯನ್ನು ಉಸಿರಾಡುವವರು ನಾವುಗಳು. ಜೀವರಾಶಿಗಳ ಚಟುವಟಿಕೆಗಳು ಕೂಡ ಹೆಚ್ಚಾಗುತ್ತವೆ. ಪ್ರಕೃತಿ ಮತ್ತು ಜೀವಿಗಳ ನಡುವಿನಲ್ಲಿ ನಡೆಯುವ ಭಾವನಾತ್ಮಕ ಸಂವಾದ ಹೆಚ್ಚಾಗುತ್ತದೆ. ಭೂಮಿಯನ್ನು ಚುಂಬಿಸುವ ಮಳೆರಾಯ, ಅವಕಾಶ ಸಿಕ್ಕಾಗ ಮಳೆಯಲ್ಲೇ ಚೂರು ಬಂದು ಹೋಗುವ ಸೂರ್ಯ. ಅದ್ಭುತ ಋತುಚಕ್ರ. ನಿಸರ್ಗದ ಕಲಾತ್ಮಕತೆಗೆ ಜೀವವೈವಿಧ್ಯದ ಸಂಗಮಕ್ಕೆ ಕಾರಣವಾಗಿದೆ ಈ ಶ್ರಾವಣ ಮಾಸ. ಪ್ರಕೃತಿಯ ಹೃದಯಧ್ವನಿಯ ಹಬ್ಬ. ಮರದ ರೆಂಬೆ ಕೊಂಬೆಗಳಲ್ಲಿ ಅಳಿಲುಗಳು ಮಾತಿಗಿಳಿಯುತ್ತವೆ, ಕೆಲವೊಮ್ಮೆ ಕೀಟಗಳು ಬಂದು ಇಣುಕಿ ಹೋಗುತ್ತವೆ.
ಶ್ರಾವಣ ಸಂದರ್ಭದಲ್ಲಿ ಪ್ರಕೃತಿಯಲ್ಲಾಗುವ ಬದಲಾವಣೆಗಳ ಕುರಿತು ಮಹಾಲಕ್ಷ್ಮೀ ಕೆ. ಎನ್. ಬರಹ ನಿಮ್ಮ ಓದಿಗೆ

read more
ದೇವರಂಥಾ ಗೆಳೆಯ… ನನ್ನ ಗಣೇಶ: ಆಶಾ ಜಗದೀಶ್ ಬರಹ

ದೇವರಂಥಾ ಗೆಳೆಯ… ನನ್ನ ಗಣೇಶ: ಆಶಾ ಜಗದೀಶ್ ಬರಹ

ನನ್ನ ಬಾಲ್ಯದ ಪುಟಗಳ ಮೇಲೆ ಅಚ್ಚೊತ್ತಿರುವ ಗಣೇಶನ ನೆನಪುಗಳು, ಬೆಳೆಯುತ್ತಾ ಬೆಳೆಯುತ್ತಾ ದೊಡ್ಡವರು ಎನಿಸಿಕೊಳ್ಳುವ ಹೊತ್ತಿಗೆ, ತೀವ್ರತೆಯನ್ನು ಕಳೆದುಕೊಳ್ಳತೊಡಗಿದ್ದವು. ಹಾಸ್ಟೆಲ್‌ನಲ್ಲಿ ಮನೆಯಲ್ಲಿ ಮಾಡುವಂತೆ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಗೆಳತಿಯರ ಮುಂದೆ ನಗೆಪಾಟಲಿಗೆ ಈಡಾಗುವ ಭಯವಿತ್ತು. ಆದರೆ ಗಣೇಶ ಆ ಹೊತ್ತಿಗೆಲ್ಲಾ ಗೆಳೆಯನಂತಾಗಿ ಹೋಗಿದ್ದ. ಎಂಥದ್ದೇ ಸಮಸ್ಯೆ ಎದುರಾದರೂ, ‘ವಿಘ್ನೇಶ್ವರ ಕಾಪಾಡು ತಂದೆ’ ಎಂದುಕೊಂಡರೆ ಸಾಕು ಅವ ಕಾಪಾಡೇ ಕಾಪಾಡ್ತಾನೆ ಎನ್ನುವುದೊಂದು ಬಲವಾದ ನಂಬಿಕೆಯಾಗಿ ಮನಸಿನಲ್ಲಿ ಆಳವಾಗಿ ಬೇರೂರಿತ್ತು. ಈಗಲೂ ಹಾಗೇ, ಸಮಸ್ಯೆ ಎಂದರೆ ಸಾಕು ಮೊದಲು ನಾಲಿಗೆ ನೆನೆಸಿಕೊಳ್ಳುವುದು ಅವನನ್ನೇ.
ತಮ್ಮ ಪಾಲಿಗೆ ಗೆಳೆಯನಂತೆ ಆಗಿರುವ ಗಣೇಶನ ಕುರಿತು ಆಶಾ ಜಗದೀಶ್‌ ಬರಹ ನಿಮ್ಮ ಓದಿಗೆ

read more
ಮಳೆ, ಮಂಜು ಮತ್ತು ಚಾರಣ: ಮುನವ್ವರ್, ಜೋಗಿಬೆಟ್ಟು ಬರಹ

ಮಳೆ, ಮಂಜು ಮತ್ತು ಚಾರಣ: ಮುನವ್ವರ್, ಜೋಗಿಬೆಟ್ಟು ಬರಹ

ಒಂದು ಶಾಂತ ಬಯಲಿನಲ್ಲಿ ಮರಗಳ ನೆರಳಲ್ಲಿ ಪ್ರತಿಷ್ಠಾಪಿಸಿದಂತಿದ್ದ ಆ ಪ್ರದೇಶ ಸೂಫಿ ಅನುಭಾವಕ್ಕೆ ನಮ್ಮನ್ನು ಬರಮಾಡಿಕೊಳ್ಳತೊಡಗಿತು. ಅದು ಹಾಸನದ ಮುಸ್ಲಿಮರ ಪಾಲಿಗೆ ವಿಶೇಷ ಸ್ಥಳ. ಅದೇ‌ ಊರಿನವರಾಗಿದ್ದ ಹಝ್ರತ್ ಖಲಂದರ್ ಶಾ ವಲಿಯುಲ್ಲಾಹಿರವರು ಆಧ್ಯಾತ್ಮಿಕವಾಗಿ ಒಂದು ತಲೆಮಾರನ್ನೇ ಮುನ್ನಡೆಸಿದವರು. ಸೂಫಿ ನೆರಳಿನಂತೆ ಜನರ ಕಷ್ಟ ಕಾರ್ಪಣ್ಯಗಳಿಗೆ ಸಲಹೆ ಸೂಚನೆಗಳನ್ನು ಕೊಟ್ಟು ಅವರಿಗೆ ಮನಶ್ಶಾಂತಿಯನ್ನು ಕರುಣಿಸುತ್ತಿದ್ದವರು. ಅವರ ಶಾಂತ ಚಿತ್ತ ಮಾತುಗಳನ್ನು ಆಲಿಸಲು ಅವರ ಹರಸುವಿಕೆಯ ಅನುಗ್ರಹವನ್ನು ಸ್ವೀಕರಿಸಲು ದೇಶದ ನಾನಾ ಭಾಗಗಳಿಂದ ಜನರು ಬರುವುದುಂಟು. ನಾವು ಬಾಬರು ಕುಳಿತುಕೊಳ್ಳುತ್ತಿದ್ದ ಸ್ಥಳವನ್ನೂ ಅವರ ಬಳಸುತ್ತಿದ್ದ ಅನುಗ್ರಹೀತ ವಸ್ತುಗಳನ್ನು ನೋಡಿ‌ ಕಣ್ತುಂಬಿಕೊಂಡು- ಅಲ್ಲಿ ಯಾತ್ರಾರ್ಥಿಗಳಿಗಾಗಿ ನೀಡುವ ಚಹಾವನ್ನು ಸವಿದೆವು.
ಮುನವ್ವರ್, ಜೋಗಿಬೆಟ್ಟು ಬರೆದ ಪ್ರವಾಸ ಕಥನ ನಿಮ್ಮ ಓದಿಗೆ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ಬದುಕಿನಲ್ಲಿ....

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ