Advertisement

ಸಂಪಿಗೆ ಸ್ಪೆಷಲ್

ಒಂದೊಂದ್ಲೆ ಒಂದು…!: ಕ್ಷಮಾ ವಿ ಭಾನುಪ್ರಕಾಶ್ ಬರಹ

ಒಂದೊಂದ್ಲೆ ಒಂದು…!: ಕ್ಷಮಾ ವಿ ಭಾನುಪ್ರಕಾಶ್ ಬರಹ

ವೈಜ್ಞಾನಿಕ ತಳಹದಿಯೇ ಇಲ್ದೇ, ಯಾವುದೋ ಬಂಜರು ಭೂಮಿಯಲ್ಲಿ ಸುಲಭವಾಗಿ ಸಿಕ್ಕ ಯಾವುದೋ ಪ್ರಭೇದದ ಸಸಿಗಳನ್ನ ನೆಟ್ಟು, ಪರಿಸರ ದಿನ ಆಚರಿಸೋದು ಅತ್ಯಂತ ಅರ್ಥಹೀನ; ಮರಗಳನ್ನು ನೆಟ್ಟು ಎಲ್ಲೆಂದರಲ್ಲಿ ಕಾಡು ಮಾಡಿಬಿಡ್ತೀವಿ ಅಂದ್ರೆ ಹೇಗೆ? ಅಲ್ಲಿ ಯಾವ ಜೀವರಾಶಿಯಿತ್ತು? ಅಲ್ಲಿನ ಆಹಾರ ಸರಪಳಿಯ ಕಥೆಯೇನು? ಅಲ್ಲಿನ ಅಜೈವಿಕ ಹಾಗೂ ಜೈವಿಕ ಅಂಶಗಳ ನಡುವಿನ ಸಮತೋಲನದ ಕಥೆಯೇನು?
ಈ ಹೊಸ ವರ್ಷದಿಂದ ಸ್ವಲ್ಪವಾದರೂ ನಾವು ನಿಂತಿರುವ ಈ ಭೂಮಿಯ ಕುರಿತು ಯಾವೆಲ್ಲ ರೀತಿಯಲ್ಲಿ ಕಾಳಜಿ ವಹಿಸಬಹುದು ಎನ್ನುವುದರ ಕುರಿತು ಕ್ಷಮಾ ವಿ. ಭಾನುಪ್ರಕಾಶ್‌ ಬರಹ

read more
ವರ್ತಮಾನದ ಬೆಂಕಿಯಲ್ಲಿ ಅರಳಿದ ಹೂವು ಮೈ ಫ್ಯಾಮಿಲಿ: ಎಚ್. ಆರ್. ರಮೇಶ ಬರಹ

ವರ್ತಮಾನದ ಬೆಂಕಿಯಲ್ಲಿ ಅರಳಿದ ಹೂವು ಮೈ ಫ್ಯಾಮಿಲಿ: ಎಚ್. ಆರ್. ರಮೇಶ ಬರಹ

ಈ ನಾಟಕದ ಮತ್ತೊಂದು ವೈಶಿಷ್ಟ್ಯತೆಯೆಂದರೆ, ಇಂದಿನ ತಂತ್ರಜ್ಞಾನ ಮತ್ತು ಅದರ ಪರಿಣಾಮದ ಸೋ ಕಾಲ್ಡ್ ಆನ್ ಲೈನ್ ಸಾಮಾಜಿಕ ಜಾಲ ತಾಣಗಳು ಮನುಷ್ಯ ಸಂಬಂಧಗಳನ್ನು ಸಡಿಲಗೊಳಿಸುತ್ತ, ಒಂಟಿತನಗಳನ್ನು ಹುಟ್ಟುಹಾಕುತ್ತ ಮನುಷ್ಯರನ್ನು ಭಾವನಾರಹಿತರನ್ನಾಗಿಸುತ್ತಿರುವುದನ್ನು, ಇಡೀ ಮನುಕುಲವೇ ಅನುಭವಿಸುತ್ತಿರುವುದನ್ನು, ಭಾರತೀಯ ಸಂದರ್ಭದಲ್ಲಿ ಇಟ್ಟು ನೋಡಿರುವುದು. ಇದಕ್ಕೆ ಪುರಾಣ, ಇತಿಹಾಸ, ಮತ್ತು ಜ್ವಲಂತ ಸಂಗತಿಗಳು ರೂಪಕವಾಗಿ ಮೈದಾಳಿ ಬಂದಿವೆ.
ಕುಮಾರಿ ಗೌತಮಿ ಕತೆಯಾಧಾರಿತ ಮೈಸೂರಿನ ರಂಗಾಯಣದ ರೆಪರ್ಟರಿ ಕಲಾವಿದರು ಅಭಿನಯಿಸಿದ “ಮೈ ಫ್ಯಾಮಿಲಿ” ನಾಟಕದ ಕುರಿತು ಎಚ್.ಆರ್.‌ ರಮೇಶ್‌ ಬರಹ

read more
ಹಿಂಗೊಂದಿತ್ತು ಕಾಲ…: ವಸಂತಕುಮಾರ್‌ ಕಲ್ಯಾಣಿ ಬರಹ

ಹಿಂಗೊಂದಿತ್ತು ಕಾಲ…: ವಸಂತಕುಮಾರ್‌ ಕಲ್ಯಾಣಿ ಬರಹ

ತರಕಾರಿ ಗುಣಮಟ್ಟ ನೋಡುವುದು, ಚೌಕಾಶಿ ಮಾಡುವುದು ಮೊದಲಾದರಲ್ಲಿ ತೊಡಗಿಕೊಂಡರೆ, ಈ ಸಮೂಹದಲ್ಲಿದ್ದ ರಾಮಕ್ಕ, ಚೆನ್ನಮ್ಮಕ್ಕ, ಜೊತೆ ಇನ್ನೊಬ್ಬರು ಇದ್ದರು -ಒಂದು ಹೂವಿನ ಹೆಸರು ಅವರದು- ಯಾವ ಮಾಯದಲ್ಲೋ ಎರಡು ಬದನೆಕಾಯಿಯನ್ನೋ, ಒಂದು ಮಾವಿನ ಹಣ್ಣನ್ನೋ ‘ಅಬೇಸ್’ ಮಾಡಿ ಸೆರಗಿನಲ್ಲಿ ಮುಚ್ಚಿಟ್ಟುಕೊಂಡು ಗಾಡಿ ಹೋದ ನಂತರ ಉಳಿದವರಿಗೆ ತಮ್ಮ ಕೈಚಳಕದ ಬಗ್ಗೆ ಬಡಾಯಿ ಕೊಚ್ಚಿಕೊಳ್ಳುವುದೂ, ಉಳಿದವರು ಅದಕ್ಕೆ ಕೊಂಕಿನ, ಮೆಚ್ಚುಗೆಯ ಮಾತಾಡುತ್ತಾ ಒಂದಷ್ಟು ಸಮಯ ಕಳೆಯುತ್ತಿದ್ದರೆ, ನಮ್ಮಮ್ಮ ಪಾಪ ಭೀರು, “ಪಾಪ ಯಾಕೆ ಹಾಗೆ ಮಾಡಿದೆ, ಈ ಬಿಸಿಲಿನಲ್ಲಿ ಸುತ್ತುವ ಅವನಿಗೆ ನಷ್ಟವಾಯಿತಲ್ಲ” ಎಂದು ಕೊರಗುತಿದ್ದರು.
ವಸಂತಕುಮಾರ್‌ ಕಲ್ಯಾಣಿ ಬರಹ ನಿಮ್ಮ ಓದಿಗೆ

read more
ಮಹಾರಾಜಾ ಕಾಲೇಜಿನ ಮಧುರ ನೆನಪು ……: ಮೂರ್ತಿ ದೇರಾಜೆ ಬರಹ

ಮಹಾರಾಜಾ ಕಾಲೇಜಿನ ಮಧುರ ನೆನಪು ……: ಮೂರ್ತಿ ದೇರಾಜೆ ಬರಹ

ಮೈಸೂರಿಗೆ ಬಂದು ಮಹಾರಾಜಾ ಕಾಲೇಜು ನೋಡಿ ನಾವು ಮಾತ್ರ ಅಲ್ಲ…. ನನ್ನ ಅಪ್ಪನೂ ಕಂಗಾಲು. ಕಾಲೇಜು ಕಛೇರಿಯಲ್ಲಿ, “ಮಾರ್ಕ್ಸ್ ಎಷ್ಟಿದೆ…? ಬೇಕಾದ ಸಬ್ಜೆಕ್ಟ್ ಅಷ್ಟು ಸುಲಭದಲ್ಲೆಲ್ಲಾ ಸಿಗಲ್ಲ….” ಅಂತೆಲ್ಲ ಸ್ವಲ್ಪ ಹೆಚ್ಚೇ ಹೆದರಿಸಿದರೂ…… ಸೀಟಂತೂ ಸಿಕ್ಕಿತು. ನಮ್ಮ ಪೂರ್ವಜನ್ಮದ ಪುಣ್ಯ ಅಂತ ಭಾವಿಸಿದ್ದೆವು…… ಆಗ ನಮಗೇನು ಗೊತ್ತು….!! ವರ್ಷ ಕಳೆಯುವಾಗ ಗೊತ್ತಾಯ್ತು, ಇಲ್ಲಿ ಮಾರ್ಕ್ಸ್ ವಿಷಯ ಬಿಡಿ…. ! ೪-೫ ಭಾರಿ ಫೈಲ್ ಆದವರಿಗೂ ಎಡ್ಮಿಶನ್ ಕಷ್ಟವಿಲ್ಲ ಅಂತ.
ಮೈಸೂರಿನ ಮಹಾರಾಜಾ ಕಾಲೇಜು ದಿನಗಳ ಕುರಿತು ಮೂರ್ತಿ ದೇರಾಜೆ ಬರಹ ನಿಮ್ಮ ಓದಿಗೆ

read more
ಕಾಡು ಮತ್ತು ಕಾಡಬೆಳುದಿಂಗಳು… ಶ್ರೀಧರ ಪತ್ತಾರ ಬರಹ

ಕಾಡು ಮತ್ತು ಕಾಡಬೆಳುದಿಂಗಳು… ಶ್ರೀಧರ ಪತ್ತಾರ ಬರಹ

ನೀರವ ರಾತ್ರಿಗಳಲ್ಲಿ ನನ್ನಲ್ಲಿ ಆಗಾಗ ಒಂಟಿತನ ಹೆಡೆಯಾಡಿಸುವುದೂ ಉಂಟು. ಮಾತುಗಳು ಜಾರಿ ನನ್ನನ್ನು ಮೌನ ಕವಚಿಕೊಂಡಾಗ ಸಹಜವಾಗಿಯೇ ಮುಗಿಲು ದಿಟ್ಟಿಸುತ್ತೇನೆ. ಅಂತೆಯೇ ಈಗೀಗ ಚಂದ್ರನನ್ನು ದಿಟ್ಟಿಸುತ್ತಾ ಚುಕ್ಕಿಗಳೆಣಿಸುವ ಅಭ್ಯಾಸ ಶುರುವಾಗಿದೆ ನನಗೆ. ಆಗ ಚಂದಿರನ ಮೊಗದಲ್ಲಿ ಪ್ರತಿಫಲಿಸುವ ಅವಳಂತದೇ ನಗು ಕಾಣುತ್ತದೆ. ನಗೆಯುಕ್ಕಿಸುತ್ತಿರುವುದು ಚಂದ್ರನೋ ಇಲ್ಲ ಅವಳೋ… ಹೀಗೂ ಒಮ್ಮೊಮ್ಮೆ ಗೊಂದಲವಾಗುವುದು.
ಶ್ರೀಧರ ಪತ್ತಾರ ಬರಹ ನಿಮ್ಮ ಓದಿಗೆ

read more
ಕಾವ್ಯಕುತೂಹಲ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರಹ

ಕಾವ್ಯಕುತೂಹಲ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರಹ

ಕೆಲವು ಸಾಲುಗಳು ಹುಟ್ಟಿಸುವ ಬೆರಗು ಮಾತ್ರ ಸಾಕು ಒಂದೀಡಿ ಕವಿತೆಯನ್ನು ಓದಲು. ಬಿಡಿಬಿಡಿಯಾಗಿ ಎದೆಹೊಕ್ಕುವ ಸಾಲುಗಳು ಮತ್ತೆಂದೋ ಯಾವುದೋ ಅನುಭವದಲ್ಲಿ ಯಾರದ್ದೋ ಸಾನಿಧ್ಯದಲ್ಲಿ ಪೂರ್ಣಗೊಳ್ಳುತ್ತವೆ. ಅವಳಲ್ಲಿ ಬಿಡಿಬಿಡಿಯಾಗಿದ್ದ ಹೂಗಳು ಅವನು ಸಿಕ್ಕಿದಾಗ ಮಾಲೆಯಾಗುವ ಸೋಜಿಗದಂತೆ! ಬಿಡಿಸಲಾಗದ ಅಚ್ಚರಿ ಇದು. ಅಚ್ಚರಿಯೇ ಪ್ರೇಮ. ಅದೇ ಕವಿತೆ.
ಕಾವ್ಯದ ಕುರಿತು ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರಹ ನಿಮ್ಮ ಓದಿಗೆ

read more
ಎಂದೊ ಯಾರಿಗೊ ತೋರಿದ ಮಮತೆ..ವಾತ್ಸಲ್ಯ..: ಗೊರೂರು ಶಿವೇಶ್‌ ಬರಹ

ಎಂದೊ ಯಾರಿಗೊ ತೋರಿದ ಮಮತೆ..ವಾತ್ಸಲ್ಯ..: ಗೊರೂರು ಶಿವೇಶ್‌ ಬರಹ

ಎಲ್ಲವನ್ನು ತೊರೆದು ಬಂದ ವ್ಯಕ್ತಿಗೆ ಹುಟ್ಟಿದ ಊರನ್ನು, ಶಿಕ್ಷಕನೊಬ್ಬನಿಗೆ ಬಿಟ್ಟು ಬಂದ ಶಾಲೆಯನ್ನು ಮರು ಭೇಟಿಯಾಗುವ ಕ್ಷಣಗಳು ಬಹಳಷ್ಟು ಸಂದರ್ಭದಲ್ಲಿ ಖುಷಿ ನೀಡುವ ಸಂಗತಿಯಾಗಿರುವುದಿಲ್ಲ. ಮೇಯಳಗನ್ ಚಿತ್ರದ ನಾಯಕನಿಗೂ ಅದೇ ಹೆದರಿಕೆ. ಬದಲಾದ ಸಂದರ್ಭ ಬದಲಾದ ಪರಿಸ್ಥಿತಿ ಅಲ್ಲಿನ ಜನ ಗುರುತಿಸುತ್ತಾರೋ ಇಲ್ಲವೋ? ಎಂಬುದು ನನ್ನನ್ನು ಕಾಡಿದ್ದಿದೆ. ಅಲ್ಲಿನ ಘಟನೆಗಳು, ಊರಿನ, ಗೆಳೆಯರ ಸ್ಥಿತಿ ಮನಸ್ಸಿಗೆ ಅಹಿತವನ್ನು ಇಲ್ಲವೇ ವಿಷಾದದ ಪರಿಸ್ಥಿತಿಗೆ ದೂಡಿದರೆ ಹೀಗೆ ಏನೇನೋ ಯೋಚನೆ ಬರುವುದುಂಟು.
‌ತಮಿಳಿನ “ಮೇಯಳಗನ್” ಚಲನಚಿತ್ರದ ಕುರಿತು ಗೊರೂರು ಶಿವೇಶ್‌ ಬರಹ

read more
ಮುಂದಿನ ಭಾನುವಾರ: ಡಾ ಖಂಡಿಗೆ ಮಹಾಲಿಂಗ ಭಟ್ ಅನುವಾದಿಸಿದ ಆರ್ ಕೆ ನಾರಾಯಣ್ ಬರಹ

ಮುಂದಿನ ಭಾನುವಾರ: ಡಾ ಖಂಡಿಗೆ ಮಹಾಲಿಂಗ ಭಟ್ ಅನುವಾದಿಸಿದ ಆರ್ ಕೆ ನಾರಾಯಣ್ ಬರಹ

ಅವನಿಗೆ ಬೇಕೆಂದಿದ್ದ ಒಂದು ಮೊಳೆ, ತಂತಿ ಅಥವಾ ಮುಂದೆ ಉಪಯೋಗಿಸಲು ಇರಿಸಿದ್ದ ಸರಿಗೆ ಪ್ರಾಮುಖ್ಯವಾದ ಚಿಲಕ ಅಥವಾ ಇನ್ನೇನಾದರೂ ಸದಾ ಸಿಗದಿರುವುದು ಮತ್ತು ಇದು ಅವನಿಗೆ ಸಿಟ್ಟು ಬರಿಸುತ್ತದೆ. ಅವನಿಗೆ ಹಲವಾರು ಜನ ಮಕ್ಕಳಿದ್ದಾರೆ ಮತ್ತು ನಾಶಗಳು ಅವರ ಅನುಪಾತಕ್ಕೆ (ಪ್ರಮಾಣಕ್ಕೆ) ಸರಿಯಾಗಿ ಇವೆ. ಇದು ಈ ಸಿಟ್ಟುಗೊಳ್ಳುವ ಮನುಷ್ಯನಿಗೆ ಸುಲಭದಲ್ಲಿ ನಿಭಾಯಿಸಲು ಕಷ್ಟವಾಗುತ್ತದೆ.
“ಭಾನುವಾರ”ದ ಕುರಿತು ಆರ್ ಕೆ ನಾರಾಯಣ್ ಬರಹವನ್ನು ಡಾ ಖಂಡಿಗೆ ಮಹಾಲಿಂಗ ಭಟ್ ಕನ್ನಡಕ್ಕೆ ಅನುವಾದಿಸಿದ್ದು, ನಿಮ್ಮ ಓದಿಗೆ ಇಲ್ಲಿದೆ

read more
‘ನಾವು ಪಟಾಕಿ ಅಂಗಡಿ ಇಟ್ಟಿದ್ದು’: ಗೊರೂರು ಶಿವೇಶ್‌ ಬರಹ

‘ನಾವು ಪಟಾಕಿ ಅಂಗಡಿ ಇಟ್ಟಿದ್ದು’: ಗೊರೂರು ಶಿವೇಶ್‌ ಬರಹ

ಸಂಜೆಯಾಗುವಷ್ಟರಲ್ಲಿ ಆಟಂಬಾಂಬ್, ಆನೆ ಪಟಾಕಿ, ಲಕ್ಷ್ಮಿಪಟಾಕಿಯಂಥ ಭಯಂಕರ ಸದ್ದುಮಾಡುವ ಪಟಾಕಿಗಳನ್ನುಳಿದು ಉಳಿದ ಪಟಾಕಿಗಳೆಲ್ಲವೂ ಖಾಲಿಯಾಗಿದ್ದವು. ಸಂಜೆ, ರಾತ್ರಿಗೆ ತಿರುಗುತ್ತಿದ್ದಂತೆ ತಮ್ಮಲ್ಲಿದ್ದ ಪಟಾಕಿ ಹೊಡೆದು ತೃಪ್ತರಾಗದ ಜನ ಹೆಚ್ಚಿನ ಪಟಾಕಿಕೊಳ್ಳಲು ಬಂದು ಇಲ್ಲದೆ ನಿರಾಶರಾಗಿ ಮರಳಿದರು. ಬೆಳಿಗ್ಗೆ ತಾನೇ ‘ಲಾಸಾದ್ರೆ ಏನು ಗತಿ?’ ಎಂದು ಚಿಂತಿರಾಗಿದ್ದ ಅಣ್ಣ ಈಗ ‘ಇನ್ನಷ್ಟು ಪಟಾಕಿ ಇದ್ದಿದ್ರೆ ಒಳ್ಳೆ ವ್ಯಾಪಾರ ಆಗ್ತಿತ್ತು’ ಅನ್ನತೊಡಗಿದರು. ಆಶ್ಚರ್ಯಚಕಿತರಾಗಿ ಅವರ ಮುಖ ನೋಡುತ್ತಿದ್ದಂತೆ ‘ವ್ಯಾಪಾರ ಅಂದ್ರೆ ಹೀಗೆ, ಪ್ರತಿ ದಿನ ಲಾಭ ಸಿಗೋಲ್ಲ, ಯಾವೊತ್ತೊ ಒಂದು ದಿನ ಹೀಗೆ ಕಚ್ಗೊಳ್ಳುತ್ತೆ’ ಎಂದು ವ್ಯಾಪಾರದ ಮರ್ಮ ತೆರೆದಿಟ್ಟರು.
ಗೊರೂರು ಶಿವೇಶ್‌ ಬರಹ ನಿಮ್ಮ ಓದಿಗೆ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ