ಸುಂದರ, ಸಮೃದ್ಧ ಕಾಡಿನ ರೋಚಕ ಕಥೆಗಳು: ರೂಪಾ ರವೀಂದ್ರ ಜೋಶಿ ಸರಣಿ
ತುಂಬ ದಟ್ಟವಾದ ಎತ್ತರವಾದ ಮರಗಳಿಂದ ಕಂಗೊಳಿಸುವ ಕಾಡಿನಿಂದ ಆವೃತವಾದ ಆ ಗುಡ್ಡ ನೋಡುವುದೆಂದರೆ ಎಲ್ಲಿಲ್ಲದ ಖುಶಿ ನನಗೆ. ಅದರಲ್ಲಿ ಒಂದು ವಿಚಿತ್ರ ಆಕರ್ಷಣೆ ಇತ್ತು. ಹಗಲು ಅಷ್ಟು ಪ್ರೀತಿಯಿಂದ ನೋಡುವ ಗುಡ್ಡ, ರಾತ್ರಿ ಮಾತ್ರ ಭಯ ಹುಟ್ಟಿಸುತ್ತಿತ್ತು. ರಾತ್ರಿ ಊಟ ಮಾಡಿ ಕೈತೊಳೆಯಲು, ‘ವಂದ’ ಮಾಡಲು ಹೊರಗೆ ಬಂದಾಗಲೆಲ್ಲ ನಾವು ಅತ್ತ ದೃಷ್ಟಿ ಹರಿಸುವ ಸಾಹಸವನ್ನೇ ಮಾಡುತ್ತಿರಲಿಲ್ಲ. ಆಕಸ್ಮಿಕವಾಗಿ ಕಣ್ಣು ಅತ್ತ ಹೋದರೆ ಸಾಕು, ಕಾರ್ಗತ್ತಲೆಯಲ್ಲಿ ಮಸಿ ಬಳಿದಷ್ಟು ಕರ್ರಗೆ ಬೃಹದಾಕಾರವಾಗಿ ಕುಳಿತ ಅದು, ಭಯಂಕರವಾದ ಕಲ್ಪನೆ ಮೂಡಿಸಿ, ಎದೆಯ ನಗಾರಿ ಬಡಿತ ಏರುತ್ತಿತ್ತು.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿ
ಹುಳಿ ಹಿಂಡುವವರ ಮಧ್ಯೆ ನಾವು ಹೇಗಿರಬೇಕು??: ಬಸವನಗೌಡ ಹೆಬ್ಬಳಗೆರೆ ಸರಣಿ
ನ್ಯಾಯಾಧೀಶರು ತಮ್ಮ ಮಾತನ್ನು ಮುಂದುವರೆಸಿ “ನೀನು ಹೇಗೆ ಕಿತ್ತ ಚೂರುಗಳನ್ನು ವಾಪಸ್ ತರಲು ಸಾಧ್ಯವಿಲ್ಲವೋ ಅದೇ ರೀತಿ ನೀನು ಮತ್ತೊಬ್ಬನ ಬಗ್ಗೆ ಹರಡಿದ ಸುಳ್ಳು ಸುದ್ದಿಯು ಹಲವರ ಕಿವಿ ತಲುಪಿ ಅವರು ಅದನ್ನೇ ಸತ್ಯವೆಂದು ನಂಬಿದ್ದಾರೆ. ಈ ರೀತಿ ನಂಬಿದವರೆಲ್ಲರಿಗೂ ಇದು ಸುಳ್ಳು ಎಂದು ಹೇಳಲು ಸಾಧ್ಯವಿಲ್ಲ ತಾನೇ?!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ನಲವತ್ತೆಂಟನೆಯ ಕಂತು ನಿಮ್ಮ ಓದಿಗೆ
ಬಲ್ಗೇರಿಯಾ ದೇಶದ ಕವಿ ಗ್ಯೋರ್ಗಿ ಗೊಸ್ಪೊಡಿನೊವ್ ಕಾವ್ಯ ಪರಿಚಯ: ಎಸ್. ಜಯಶ್ರೀನಿವಾಸ ರಾವ್ ಸರಣಿ
“ಗ್ಯೋರ್ಗಿ ಗೊಸ್ಪೊಡಿನೊವ್ ಅನೇಕ ವಿಧಗಳಲ್ಲಿ ಒಬ್ಬ ವಿಶಿಷ್ಟ ಬರಹಗಾರ. ನಾನು ಅವರ ಬರಹಗಳನ್ನು ಮೊದಲಿನಿಂದಲೂ ಓದುತ್ತಿದ್ದೇನೆ ಹಾಗೂ ಕುತೂಹಲಕಾರಿ ಪರಿಕಲ್ಪನೆ, ಅದ್ಭುತ ಕಲ್ಪನೆ ಮತ್ತು ನಿಖರವಾದ ಬರವಣಿಗೆಯ ತಂತ್ರವನ್ನು ಅವರ ಹಾಗೆ ಬೇರೆ ಯಾರಿಂದಲೂ ಸಂಯೋಜಿಸಲು ಸಾಧ್ಯವಿಲ್ಲ ಎಂದು ನನಗೆ ತಿಳಿದಿದೆ.”
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಬಲ್ಗೇರಿಯಾ ದೇಶದ ಕವಿ ಗ್ಯೋರ್ಗಿ ಗೊಸ್ಪೊಡಿನೊವ್-ರವರ(Georgi Gospodinov) ಕಾವ್ಯದ ಕುರಿತ ಬರಹ
ಅರ್ಧ ಕತೆಯೇ ಪ್ರಕಟಗೊಂಡಿತ್ತು: ಎಚ್. ಗೋಪಾಲಕೃಷ್ಣ ಸರಣಿ
ಆ ಗುಂಪಿನ ತಮಿಳರನ್ನು ನೋಡಿ ಕೆಲವು ಸಲ ಹೊಟ್ಟೆ ಉರಿಯೋದು. ಆ ಭಾಷೆಯಲ್ಲಿ ಬರುವ ಎಲ್ಲಾ ಪತ್ರಿಕೆಗಳನ್ನು ತರಿಸೋರು ಮತ್ತು ಹತ್ತು ಹದಿನೈದು ಜನ ಗ್ರೂಪ್ ಮಾಡಿಕೊಂಡು ಅದರ ಖರ್ಚು ಶೇರ್ ಮಾಡುತ್ತಿದ್ದರು. ಇನ್ನೂ ವಿಶೇಷ ಅಂದರೆ ಡಿ ಎಂ ಕೆ ಅವರು ತರಿಸುತ್ತಿದ್ದ ಪತ್ರಿಕೆ ಡಿ ಎಂ ಕೆ ವಿರೋಧಿಗಳು ತರಿಸುತ್ತಾ ಇರಲಿಲ್ಲ. ಅವರು ಇವರು ಪರಸ್ಪರ ಮಾತು ಕತೆ ಸಹ ಇಲ್ಲ! ಕೆಲವು ಸಲ ಇದೇ ವಿಷಯವಾಗಿ ತಮಿಳಿನಲ್ಲಿ ಜೋರು ಜೋರು ಮಾತುಕತೆ ಜಗಳ ಆಗುತ್ತಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೧ನೇ ಬರಹ ನಿಮ್ಮ ಓದಿಗೆ
ಮನದಂಗಳದಲ್ಲಿ ಬೆಳಗುವ ಮಲೆನಾಡಿನ ದೀಪಾವಳಿ: ಭವ್ಯ ಟಿ.ಎಸ್. ಸರಣಿ
ಬೇರೆಲ್ಲ ಹಬ್ಬಗಳು ಒಂದು ಎರಡು ದಿನಗಳಲ್ಲಿ ಮುಗಿದುಹೋದರೆ, ದೀಪಾವಳಿ ಮಾತ್ರ ನಾಲ್ಕು ಐದು ದಿನ ಮನೆಗಳಲ್ಲಿ ಸಂಭ್ರಮ ತುಂಬಿಸುತ್ತದೆ. ಕಾರ್ತಿಕ ಮಾಸ ಪೂರ್ತಿ ದೇವಾಲಯಗಳಲ್ಲಿ ಮನೆಗಳಲ್ಲಿ ನಿರಂತರ ದೀಪೋತ್ಸವ ಜರಗುತ್ತದೆ. ದೀಪಾವಳಿ ಹಬ್ಬಕ್ಕೆ ಪೂರ್ವ ಸಿದ್ಧತೆ ಸಾಕಷ್ಟು ಬೇಕು. ಭೂರೆ ತುಂಬಿಸುವುದು ಎಂಬ ಪದ್ಧತಿಯಿಂದ ಶುರುವಾಗುವ ಈ ಹಬ್ಬ ಎಣ್ಣೆ ಸ್ನಾನ, ಗೋಪೂಜೆ ಲಕ್ಷ್ಮೀ ಪೂಜೆ, ನರಕ ಚತುರ್ದಶಿ, ಬಲಿಪಾಡ್ಯಮಿ, ಕರಿ ಎಂಬ ದಿನಗಳನ್ನು ಮುಗಿಸಿ ಹೊಸ ತೊಡಕುವಿನೊಂದಿಗೆ ಬೀಳ್ಕೊಡುತ್ತದೆ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ ನಿಮ್ಮ ಓದಿಗೆ
ಸವಿಯ ಬನ್ನಿ ಮಲೆನಾಡ ಊಟವ…: ರೂಪಾ ರವೀಂದ್ರ ಜೋಶಿ ಸರಣಿ
ನಮ್ಮನೆಯ ಬೇಸಿಗೆಯ ಹಿತ್ತಲಲ್ಲಿ ಆಯಿ, ಹೂ ಕೋಸು, ಗಡ್ಡೆ ಕೋಸು ಮೂಲಂಗಿ, ಬೀಟ್ರೂಟ್ಗಳನ್ನು ಕೂಡಾ ಸಮೃದ್ಧವಾಗಿ ಬೆಳೆಸುತ್ತಿದ್ದಳು. ಮುಂದಿನ ಮೂರು ತಿಂಗಳು ನಾವೆಲ್ಲ ಯಥೇಚ್ಛವಾಗಿ ತರಕಾರಿಯನ್ನು ಉಪಯೋಗಿಸಬಹುದಾಗಿತ್ತು. ಎಲ್ಲಕ್ಕಿಂತ ವಿಶೇಷವಾಗಿ ಮೊಗೇ ಕಾಯಿ ಬೆಳೆಸುವುದು ಬೇಸಿಗೆಯ ಹಿತ್ತಲಿನ ವಿಶೇಷ. ಈ ಮೊಗೆ ಕಾಯಿ (ಬಣ್ಣದ ಸೌತೆ ಕಾಯಿ) ಯೆಂಬುದು ಮಲೆನಾಡಿಗರ ಆಪದ್ಬಾಂಧವನಿದ್ದಂತೆ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿಯ ಒಂಭತ್ತನೆಯ ಕಂತು
ಬಸ್ ಒಡೆಯನೆಂದು ನಂಬಿ, ನಾನು ಯಾಮಾರಿದ್ದು!!!: ಬಸವನಗೌಡ ಹೆಬ್ಬಳಗೆರೆ ಸರಣಿ
ನಾನು ಅಂದು ಪ್ರವಾಸಕ್ಕೆ ಹೊರಟಿದ್ದೆ. ನನಗಾಗಿ ಹುಡುಗರು ಕಾಯುತ್ತಿದ್ದರು. ಪದೇ ಪದೇ ಕಾಲ್ ಬೇರೆ ಮಾಡುತ್ತಿದ್ದರು. ಹೋಗುವ ಧಾವಂತ ಬೇರೆ. ಆಸಾಮಿ ಬಿಡಲೇ ಇಲ್ಲ. ಅವನ ಮಾತನ್ನು ನಿಜವೆಂದು ನಾನು ಅವನಿಗೆ ಮತ್ತೆ 500 ರುಪಾಯಿಗಳನ್ನು ಕೊಟ್ಟೆ. ಕೊಟ್ಟಾಕ್ಷಣ “ನಾಳೇನೇ ನಿಮ್ಮ ಖಾತೆಗೆ ಹಾಕ್ತೇನೆ” ಎಂದ. ನಾನು ನನ್ನ ಮೊಬೈಲ್ ಸಂಖ್ಯೆಯನ್ನೂ ಕೊಟ್ಟೆ. ಕೊಟ್ಟ ತಕ್ಷಣ ನಾನು ಕಾಯುತ್ತಿದ್ದ ಬಸ್ ಬಂತು. ಅವನು ಲಗುಬಗೆಯಿಂದಲೇ ನನ್ನನ್ನು “ಹೋಗಿ ಹೋಗಿ” ಎಂದು ಬಸ್ ಹತ್ತಿಸಿದ. ಮಾರನೇ ದಿನ ಅವನು ಕಾಲ್ ಮಾಡುತ್ತಾನೆಂದು ಕಾದೆ. ಮಾಡಲಿಲ್ಲ!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ನಲವತ್ತೇಳನೆಯ ಕಂತು ನಿಮ್ಮ ಓದಿಗೆ
ಅನುರೂಪ ವಸ್ತುಗಳ ಸಂಚಯನ ಎಲೆ ಅಡಿಕೆ ಚೀಲ: ಸುಮಾವೀಣಾ ಸರಣಿ
ನಮ್ಮ ಮೊಬೈಲ್ಗೆ ಈಗ ಫಿಂಗರ್ ಪ್ರಿಂಟ್ಸ್ ಲಾಕ್ ಇದೆಯಲ್ಲಾ ಹಾಗೆ ಅಜ್ಜಿ ತನ್ನ ಚೀಲಕ್ಕೆ ಹಾಕುತ್ತಿದ್ದ ನ್ನಾಟಿ ನ್ನಾಟ್ ಅನ್ನು ಯಾರಿಗು ಬಿಚ್ಚಲಾಗುತ್ತಿರಲಿಲ್ಲ. ಮುರಿದ ಆಭರಣದ ಚೂರುಗಳು ಬೆಳ್ಳಿಯ ಚೂರುಗಳನ್ನು ಚಿಕ್ಕ ಪ್ಲಾಸ್ಟಿಕ್ನಲ್ಲಿ ಹಾಕಿ ಚೀಲದ ಒಳ ಪದರದ ಒಳ ಪದರದಲ್ಲಿ ಇಡುವುದು, ಅವರ ಇವರ ತೋಟಕ್ಕೆ ಹೋದಾಗ ಅಪರೂಪದ ತರಕಾರಿ ಬೀಜ ಸಿಕ್ಕರೆ ಅದನ್ನು ಅದರಲ್ಲೆ ಇಡುವುದು, ಅಲ್ಲೇ ಬಿಡಿಸಿ ಅಲ್ಲೇ ಮುಡಿದುಕೊಳ್ಳಲು ಹೂ ಕಟ್ಟುವ ದಾರವೂ ಅಲ್ಲೇ ಇರುತ್ತಿತ್ತು. ದೇವಸ್ಥಾನಕ್ಕೆ ಹೋದರೆ ಕುಂಕುಮ ಪ್ರಸಾದ, ಗಂಧ ಅದರಲ್ಲೇ ಇಡುವುದು. ತಲೆಸುತ್ತುವಿಕೆಗೆ, ಅಜೀರ್ಣಕ್ಕೆ, ಬಾಯಿ ವಾಸನೆ ಬರದಂತೆ ತಡೆಯಲು, ಹಲ್ಲು ನೋವಿಗೆ, ಶೀತಕ್ಕೆ ನಶ್ಯ ಎಲ್ಲಾ ಅದರಲ್ಲೇ ಇರುತ್ತಿತ್ತು.ಸುಮಾವೀಣಾ ಬರೆಯುವ “ಮಾತು ಖ್ಯಾತೆ” ಸರಣಿ ಸರಣಿ
ಹೊಸ ಮನೆ… ಹೊಸ ಏರಿಯಾ.. ಹೊಸ ಸಮಸ್ಯೆಗಳು…: ಎಚ್. ಗೋಪಾಲಕೃಷ್ಣ ಸರಣಿ
ಅವತ್ತು ಜೋರು ಮಳೆ. ಮಳೆ ಬಂದು ನಿಂತ ನಂತರ ನಮ್ಮ ಸೈಕಲ್ ಜಾಥಾ ಶುರು ಆಯಿತು. ರಾಮಚಂದ್ರಪುರದ ಕಿರು ರಸ್ತೆಗೆ ಬಂದೆವು. ಕತ್ತಲಿನಲ್ಲಿ ಒಬ್ಬ ಮಧ್ಯ ವಯಸ್ಕರು ಕೈಯಲ್ಲಿ ಒಂದು ಟಾರ್ಚ್ ಹಿಡಿದು ನಿಂತಿದ್ದರು. ಸ್ವಾಮೀ ನಿಲ್ಲಿ, ನಿಲ್ಲಿ ಸಾರ್ ಅಂತ ನಮ್ಮನ್ನು ತಡೆದರು. ಎಲೆಕ್ಟ್ರಿಕ್ ವೈರ್ ರಸ್ತೆ ಮೇಲೆ ಅಲ್ಲೆಲ್ಲಾ ಬಿದ್ದು ಕರೆಂಟ್ ಹರಿತಾ ಇದೆ. ಈ ರೋಡಿನಲ್ಲಿ ಹೋಗಬೇಡಿ ಅಂತ ಹೇಳಿ ಎಂ ಎಸ್ ಪಾಳ್ಯದ ಮೂಲಕ ಹೋಗಿ ಅಂತ ಸೂಚಿಸಿದರು. ಇದು ನಾಲ್ಕು ಕಿಮೀ ಹೆಚ್ಚು ದೂರ. ಆದರೂ ಜೀವ ನಮ್ಮದು ತಾನೇ?
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೦ನೇ ಬರಹ ನಿಮ್ಮ ಓದಿಗೆ


