ಕೆಂಪು ಟಿಟ್ಟಿಭ: ಡಾ. ಎಸ್.ವಿ. ನರಸಿಂಹನ್ ಸರಣಿ
ಕೆಂಪು ಟಿಟ್ಟಿಭ, ಗೂಡು ಕಟ್ಟುವ ಪರಿ, ವಿಚಿತ್ರ ಮತ್ತು ವಿಶಿಷ್ಟ! ಮಾರ್ಚ್ನಿಂದ ಆಗಸ್ಟ್ ತಿಂಗಳುಗಳಲ್ಲಿ ಇವುಗಳ ಸಂತಾನಾಭಿವೃದ್ಧಿ. ಗಂಡು ಮತ್ತು ಹೆಣ್ಣು ಹಕ್ಕಿಗಳು ಸೇರಿ, ನೇರವಾಗಿ ನೆಲದ ಮೇಲೆಯೇ ಗೂಡನ್ನು ನಿರ್ಮಿಸುತ್ತವೆ. 3-4 ಮೊಟ್ಟೆಗಳನ್ನು ಇಟ್ಟು, ಮರಿ ಮಾಡುತ್ತದೆ. ಮೊಟ್ಟೆಗಳು ಕಂದು ಬಣ್ಣದ ಮೇಲೆ ವಿವಿಧ ಗಾತ್ರದ ಗಾಢ ಮಣ್ಣಿನ ಚುಕ್ಕೆಗಳಿದ್ದು, ಗೂಡುಗಳು ಮತ್ತು ಮೊಟ್ಟೆಗಳು ಅವುಗಳಿರುವ ನೆಲದ ಬಣ್ಣ ಹಾಗೂ ಸುತ್ತಲಿನ ವಸ್ತುಗಳನ್ನು ಹೋಲುವುದರಿಂದ ಅವುಗಳನ್ನು ಗುರುತಿಸುವುದು ಬಹಳ ಕಷ್ಟ.
ಡಾ. ಎಸ್.ವಿ. ನರಸಿಂಹನ್ ಬರೆಯುವ “ಹಕ್ಕಿಪಕ್ಷಿ ಚಿತ್ರ ಸಂಪುಟ” ಸರಣಿಯಲ್ಲಿ ಕೆಂಪು ಟಿಟ್ಟಿಭ ಹಕ್ಕಿಯ ಕುರಿತ ಬರಹ ಇಲ್ಲಿದೆ
ಎಸ್. ಗಂಗಾಧರಯ್ಯ ಅನುಭವ ಕಥಾನಕ “ಕಾಡ ಕಕ್ಕೆ” ಇಂದಿನಿಂದ…
ನಾನು ಸೋಮ್ಲಾನಾಯಕ್ರನ್ನು ಎಷ್ಟು ಹಚ್ಚಿಕೊಂಡಿದ್ದೆ ಅಂದರೆ ಅವರೊಂದಿಗೆ ಕೆಲವೊಮ್ಮೆ ಅವರುಗಳು ಮಲಗುತ್ತಿದ್ದ ಆ ಹೊಂಗೆಯ ಮರದಡಿಯಲ್ಲೇ ಮಲಗುತ್ತಿದ್ದೆ. ಬೇಸಿಗೆಯ ಬೆಳದಿಂಗಳಿನಲ್ಲಿ ಆ ಏಕಾಂತ, ಆ ಹಾಲು ಚೆಲ್ಲಿದಂತ ಬೆಳದಿಂಗಳು, ಹೊಂಗೆ ಸೀಗೆ ಹೂಗಳ ಆಹ್ಲಾದಕರ ಘಮಲು ಇಂದಿಗೂ ಮಾಸಿಲ್ಲ. ಆ ತಂಗಾಳಿ, ಅದರೊಂದಿಗೆ ಅಡ್ಡಾಡುತ್ತಿದ್ದ ಯಾರದೋ ಹೊಲದಲ್ಲಿ ಹಾಕಿರುತ್ತಿದ್ದ ಮಂದೆಯಿಂದ ಕುರಿ, ಮೇಕೆಗಳ ಕೂಗು, ನಾಯಿಗಳ ಬೊಬ್ಬಿರಿಯುವಿಕೆ, ಕುರಿಗಾಹಿಗಳು ಹಾಡುತ್ತಿದ್ದ ಹಾಡುಗಳು, ಜಲ್ಲೆ ಗಾಡಿಯವರ ಅರ್ಥವಾಗದ ಭಾಷೆಯ ಮಾತುಗಳ ಸಂಗೀತ ಮಾಧುರ್ಯ ಇಂದಿಗೂ ಮರೆಯಾಗಿಲ್ಲ.
ಕನ್ನಡದ ಕತೆಗಾರ ಎಸ್. ಗಂಗಾಧರಯ್ಯ ಬರೆಯುವ ಅನುಭವ ಕಥನ “ಕಾಡ ಕಕ್ಕೆ” ಇಂದಿನಿಂದ
ನಂಬಿ ಕೆಟ್ಟವರಿಲ್ಲವೋ ಮನುಜ….: ಬಸವನಗೌಡ ಹೆಬ್ಬಳಗೆರೆ ಸರಣಿ
ಅವನ ಮಾತು ಕೇಳಿದ ಮನಸ್ಸು ಇನ್ನೊಂದು ರೀತಿ ಯೋಚನೆ ಮಾಡಲು ಶುರು ಮಾಡ್ತು. ಸುಮ್ಮನೇ ಕೆಲಸಕ್ಕೆ ಸೇರದೇ ಮೆಡಿಕಲ್ ರೆಪ್ ಕೆಲಸದಲ್ಲಿ ಮುಂದುವರೆದರೆ ಹೇಗೆ? ಎಂದು ಯೋಚಿಸಿದೆ. ಇದಕ್ಕೆ ಪೂರಕವಾಗಿ ಹಲವಾರು ನನ್ನ ಮೆಡಿಕಲ್ ರೆಪ್ ಗೆಳೆಯರು ಅಲ್ಲಿ ಪೆನ್ಶನ್ ಇಲ್ವಂತೆ. ಸುಮ್ನೇ ಇಲ್ಲೇ ಇದ್ಬಿಡು ಎಂದರು. ನಾನು ಇದೇ ರೀತಿ ಮಾಡಬೇಕು ಎಂದುಕೊಂಡರೆ ನಮ್ಮ ಸಂಬಂಧಿಕರು ಇದಕ್ಕೆ ಒಪ್ಪಲಿಲ್ಲ. ಸರ್ಕಾರಿ ಕೆಲಸ ಸಿಗೋಕೂ ಪುಣ್ಯ ಮಾಡಿರಬೇಕು ಈ ರೀತಿ ಮಾಡಿ ತಿನ್ನೋ ಅನ್ನದಾಗೆ ಕಲ್ಲು ಹಾಕಿಕೊಳ್ಳಬೇಡ ಎಂದರು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಅರವತ್ತೆರಡನೆಯ ಕಂತು ನಿಮ್ಮ ಓದಿಗೆ
ಅರಾ ಮಿತ್ರರನ್ನು ಅರಸಿ…: ಎಚ್. ಗೋಪಾಲಕೃಷ್ಣ ಸರಣಿ
ಹೋಮ್ ಸೈನ್ಸ್ ಕಾಲೇಜಿನಲ್ಲಿ ಕನ್ನಡ ಡಿಪಾರ್ಟ್ಮೆಂಟ್ ಇರುತ್ತೆ ಅಂತ ಮೊದಲೇ ತಿಳಿದುಕೊಳ್ಳದ ನನ್ನ ಬುದ್ಧಿಗೆ ಎಕ್ಕಡದಲ್ಲಿ ಬಾರಿಸಬೇಕು ಎಂದುಕೊಂಡು ನೇರ ನಡೆದೆ. ಎಡಕ್ಕೆ ತಿರುಗಿದೆ. ಅಲ್ಲಿ ಕನ್ನಡ ವಿಭಾಗ ಅಂತ ಬೋರ್ಡ್ ಕಾಣಿಸಲಿಲ್ಲ. ತೆರೆದ ಬಾಗಿಲು, ಒಳಗಡೆಯಿಂದ ನಗುವಿನ ಪ್ರವಾಹ ಹರಿದು ಬರುತ್ತಿತ್ತು, ಜತೆಗೆ ಕನ್ನಡದಲ್ಲಿ ಮಾತು ಮಾತು. ರೂಮಿನ ಒಳಗೆ ನಡೆದೆ. ಮೂರು ಜನ ಟೇಬಲ್ಲಿನ ಆಕಡೆ ಇಬ್ಬರು ಈಕಡೆ ಒಬ್ಬರು ಕೂತಿದ್ದರು. ಮೂರೂ ಜನ ಸೂಟು ಟೈ ಧಾರಿಗಳು! ಅದರಿಂದ ಗುಂಪಿನಲ್ಲಿ ಮಿತ್ರ ಸಾರ್ ಇಲ್ಲ ಎನ್ನುವುದು ಖಚಿತ ಆಯಿತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೮೬ನೇ ಬರಹ ನಿಮ್ಮ ಓದಿಗೆ
ಒಡಪು ಗೌರಮ್ಮ ಮತ್ತು ಆಕಿ: ಸುವರ್ಣ ಚೆಳ್ಳೂರು ಸರಣಿ
ಆ ದಾರಿಯೊಳಾಗ ನಡಕೊಂತ ಹೋಗೊದಂದ್ರ ಅದೊಂಥರಾ ಸಮಾಧಾನ ಅನ್ಸೋದು, ಆಕಡೆ ಈಕಡಿಗೆ ಹಸರು, ಗಿಡಗಳು ಅದರಾಗೂ ಹುಂಚಿ ಹೂವು ಬಿಟ್ಟಾಗ ಅದನ್ನ ಹರದು ತಿನ್ನಾಕ ಇನ್ನಷ್ಟು ಖುಷಿ ಆಗ್ತಿತ್ತು. ಆ ದಾರಿ ನಡಕ ಹೋದಾಗೆಲ್ಲಾ ಆ ಒಡಪಿನ ಕಟ್ಟಿ ಕಾಣ್ತಿತ್ತು. ಊರು ಬಿಟ್ಟು ದೂರ ಇದ್ದ ಆ ಕಟ್ಟಿ ಹತ್ರ ಗೌರಮ್ಮಜ್ಜಿ ಯಾವಾಗಲೂ ಇರ್ತಿದ್ಲು. ಆಕಿಗೆ ಗೊತ್ತಿರುವಷ್ಟು ಒಡಪುಗಳು ಆ ಊರಿನ್ಯಾಗ ಯಾರಿಗೂ ಗೊತ್ತಿರ್ಲಿಲ್ಲ, ಊರಾಗ ಯಾವ್ದನ ಮದುವಿ ಆದ್ರ ಅಕಿನ ಎಲ್ಲಾರೂ ಕರಿತಿದ್ರು, ಹಂಗಾಗಿ ಆಕಿ ಒಡಪು ಗೌರಮ್ಮ ಅಂತ ಕರಿತಿದ್ರು.
ಸುವರ್ಣ ಚೆಳ್ಳೂರು ಬರೆಯುವ “ಆಕಿ” ಸರಣಿಯ ಹನ್ನೊಂದನೆಯ ಬರಹ
ಕೆಂದಲೆ ಗಿಳಿ: ಡಾ. ಎಸ್.ವಿ. ನರಸಿಂಹನ್ ಸರಣಿ
ಗಿಳಿಗಳು ಗೂಡುಗಳನ್ನು ನಿರ್ಮಿಸುವುದಿಲ್ಲ, ಮರದ ಒಣ ಕಾಂಡಗಳಲ್ಲಿ ಅಥವಾ ಹಳೆಯ ಗೋಡೆಗಳಲ್ಲಿ, ಕೊರೆದ ತೂತುಗಳೊಳಗೆ ಗುಂಪಾಗಿ ಗೂಡು ಕಟ್ಟುತ್ತವೆ. ಸಂತಾನೋತ್ಪತ್ತಿ ಮತ್ತು ವಾಸ, ಎರಡನ್ನೂ ಗಿಳಿಗಳು ಮರದ ಪೊಟರೆಯಲ್ಲಿಯೆ ನಡೆಸುತ್ತವೆ. ಈ ಅವಧಿಯಲ್ಲಿ, ಹೆಣ್ಣು ಗಿಳಿಗಳು 2-8 ಅಚ್ಚ ಬಿಳಿ ಮೊಟ್ಟೆಗಳನ್ನು ಇಡುತ್ತವೆ. ಮೊಟ್ಟೆಗೆ 17-20 ದಿನಗಳ ಕಾಲ, ಕಾವು ಕೊಡುವ ಇಡೀ ಕೆಲಸವನ್ನು ಹೆಣ್ಣು ಹಕ್ಕಿಯೇ ನಿರ್ವಹಿಸುತ್ತದೆ. ಆ ಸಮಯದಲ್ಲಿ ಗಂಡು ತನ್ನ ಸಂಗಾತಿಗೆ ಆಹಾರ ತಂದೊದಗಿಸುವುದು.
ಡಾ. ಎಸ್.ವಿ. ನರಸಿಂಹನ್ ಬರೆಯುವ “ಹಕ್ಕಿಪಕ್ಷಿ ಚಿತ್ರ ಸಂಪುಟ” ಸರಣಿಯಲ್ಲಿ ಕೆಂದಲೆ ಗಿಳಿ ಕುರಿತ ಬರಹ ಇಲ್ಲಿದೆ
ಆಡೂ ಆಟ ಆಡೂ…: ಬಸವನಗೌಡ ಹೆಬ್ಬಳಗೆರೆ ಸರಣಿ
ಒಳಾಂಗಣ ಆಟವಾಗಿ ಹುಣಸೇ ಬೀಜಗಳನ್ನು ಗೆಲ್ಲುವ ಆಟವಾಡಿ ಬೀಜಗಳನ್ನು ಆಡುತ್ತಿದ್ದೆವು. ಆಗ ಹುಣಸೇಬೀಜಗಳನ್ನು ಕೊಂಡುಕೊಳ್ಳುವವರು ಮನೆ ಮನೆಗೆ ಬರುತ್ತಿದ್ದರಿಂದ ಅವರು ಕೊಡುತ್ತಿದ್ದರಿಂದ ಚಿಲ್ಲರೆ ಕಾಸಿಗೆ ಆಸೆಪಟ್ಟು ಹುಣಸೇಬೀಜಗಳನ್ನು ಗೆಲ್ಲುವುದನ್ನು ಚಾಲೆಂಜ್ ಆಗಿ ಸ್ವೀಕರಿಸುತ್ತಿದ್ದೆವು. ಆದರೆ ಗೋಲಿಯಾಟ ಆಡಿ ಗೋಲಿಗಳನ್ನು ಗೆಲ್ಲುವುದೂ ಸಹ ಪ್ರತಿಷ್ಟೆಯ ವಿಷಯ ಎನಿಸಿಕೊಳ್ಳುತ್ತಿತ್ತಾದರೂ ಗೆದ್ದ ಗೋಲಿಗಳಿಂದ ಒಂದು ರೂಪಾಯಿಯೂ ಲಾಭವಿರಲಿಲ್ಲ. ಚೌಕಾಬಾರ ಆಡಲು ಕವಡೆಗಳನ್ನು ಕೆಲವರು ಬಳಸುತ್ತಿದ್ದರಾದರೂ ನಾವು ಹುಣಸೆಬೀಜಗಳನ್ನು ತೇದುಕೊಂಡೇ ಅವನ್ನೇ ಬಳಸಿಕೊಂಡು ಆಡುತ್ತಿದ್ದೆವು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಅರವತ್ತೊಂದನೆಯ ಕಂತು ನಿಮ್ಮ ಓದಿಗೆ
ಹಾಸ್ಯೋತ್ಸವದ ಚಾಲನೆ…: ಎಚ್. ಗೋಪಾಲಕೃಷ್ಣ ಸರಣಿ
ಮಿಡಲ್ ಬರಹಗಾರರ ಗುಂಪು ಒಂದು ಶುರು ಮಾಡುವ ಐಡಿಯಾ ನಮ್ಮಲ್ಲಿ ಬಿತ್ತಿದರು. ಇದು ನಂತರ ಮಿಡಲ್ ಬದಲಿಗೆ ಹಾಸ್ಯಬರಹಗಾರರ ಸಂಘಟನೆ ಆಗಲಿ ಅಂತ ನಿರ್ಧಾರ ಆಯಿತು. ಹಿಂದೆ ಕೈಗಾರಿಕಾ ರಂಗದ ಸಾಹಿತ್ಯ ವೇದಿಕೆ ಆರಂಭಿಸಿದಾಗ ಶ್ರೀ ಆನಂದರಾಮ ಶಾಸ್ತ್ರಿ ಅವರು ನೀತಿ ನಿಯಮ ರೂಪಿಸಿದ್ದರು ಅಂತ ಹೇಳಿದ್ದೆ. ಇದಕ್ಕೂ ಅವರೇ ಆರಂಭಿಕ ಪತ್ರಗಳು ಸಿದ್ಧ ಮಾಡಿದರು. ಇದಕ್ಕೆ ಬೇಕಾದ ನಮ್ಮ ಮೀಟಿಂಗ್ಗಳು ಬೆಂಗಳೂರಿನ ಸಂಗಮ್ ಟಾಕೀಸ್ ಮುಂದೆ ಸೇರಿತು!
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೮೫ನೇ ಬರಹ ನಿಮ್ಮ ಓದಿಗೆ
ಯಾಕಂದ್ರ ನಾ ‘ಹುಡುಗಿ’ ಅದಕಾ ನಾ ಓದ್ಬೇಕು: ಸುವರ್ಣ ಚೆಳ್ಳೂರು ಸರಣಿ
ಆಕಾಶದಾಗಿನ ಸಾಲು ಚುಕ್ಕಿ ನೋಡಿ ನಾನು ನಿದ್ದಿಗೆ ಜಾರಿದೆ. ಮುಂಜೆನೆದ್ದಾಗ ಹೊಲದಾಗ ಮಂಜುಮಂಜಾಗಿತ್ತು, ಬೆಳ್ಳಕ್ಕಿ ಅದಾಗಲೇ ಎದ್ದು ಹೊಲದಾಗ ಹಾರಾಡಿಕ್ಯಂತ ಹೊಲದಿಂದ ಹೊಲಕ್ಕ ಹೊಂಟಿದ್ವು. ನಾನು ಮತ್ತ ಲಕ್ಷ್ಮಮ್ಮತ್ತಿ ಎದ್ದು ಮನಿ ದಾರಿ ಹಿಡದ್ವಿ. ಬೆಳಗಾ ಮುಂಜೇಲೆ ಹೊಲದ ದಾರಿ ಅದೊಂಥರಾ ಯಾವುದೊ ಚಿತ್ರ ಕಂಡಂಗ ಕಾಣತಿತ್ತು, ಆಕಡೆ ಇಕಡೆ ಹಸರು, ಅಲ್ಲಲ್ಲಿ ಹೊಲದಾಗಿದ್ದ ಒಂಟಿಮರ ಅದಕ್ಕಿದ್ದ ಮುಳ್ಳುಗಳು, ಹೊಲದಗುಂಟ ಹರಿತಿದ್ದ ಸಣ್ಣ ಕಾಲುವೆ ಅದರ ದಂಡಿಗಿದ್ದ ಸಮುದ್ರ ಬಾಳೆ ಹೂವು, ಸರ್ಕಾರ್ ಕಳ್ಳಿ ಇವೆಲ್ಲಾ ಆ ಹೊಲದ ಹಾದಿಗೆ ಬಿಡಿಸಿರೊ ಚಿತ್ರಗಳಿದ್ದಂಗ ಇದ್ವು.
ಸುವರ್ಣ ಚೆಳ್ಳೂರು ಬರೆಯುವ “ಆಕಿ” ಸರಣಿ










