Advertisement

ಸರಣಿ

ಹಾಡೋ ಹಕ್ಕಿಗೆ ಬೇಕೇ ಬಿರುದು ಸನ್ಮಾನ?: ಬಸವನಗೌಡ ಹೆಬ್ಬಳಗೆರೆ ಸರಣಿ

ಹಾಡೋ ಹಕ್ಕಿಗೆ ಬೇಕೇ ಬಿರುದು ಸನ್ಮಾನ?: ಬಸವನಗೌಡ ಹೆಬ್ಬಳಗೆರೆ ಸರಣಿ

ಟಿಸಿಹೆಚ್ ಕಾಲೇಜಿನಲ್ಲಿ ಬಹುತೇಕರು ಇಷ್ಟಪಡುತ್ತಿದ್ದುದು ‘ಅಪುನಾ ಸರ್’ ಅವರನ್ನೇ. ಇವರನ್ನು ನಾವು ನಮ್ಮ ಕಾಲೇಜು ಮಿತಿಯಲ್ಲಿ ‘ನಡೆದಾಡುವ ವಿಶ್ವಕೋಶ’ ಎಂದೇ ಕರೆಯುತ್ತಿದ್ದೆವು. ಅವರು ಮೂಲತಃ ‘ಜೀವ ವಿಜ್ಞಾನ ಶಿಕ್ಷಕ’ ರಾಗಿದ್ದಾಗ್ಯೂ ನಮಗೆ ಅವರ ಇಂಗ್ಲೀಷ್ ಭಾಷಾ ಪ್ರಾವೀಣ್ಯತೆ, ಸಮಾಜ ವಿಜ್ಞಾನದಲ್ಲಿ ಅವರಲ್ಲಿದ್ದ ಪಾಂಡಿತ್ಯ, ಪ್ರಖರ ದೇಶಪ್ರೇಮ, ಸಮಯಪ್ರಜ್ಞೆ, ನಾಯಕತ್ವ ಗುಣ, ಪಾಠವನ್ನು ಅರ್ಥೈಸುತ್ತಿದ್ದ ರೀತಿ ನಮ್ಮನ್ನು ಸೂಜಿಗಲ್ಲಿನಂತೆ ಆಕರ್ಷಿಸುತ್ತಿತ್ತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ನಲವತ್ತೈದನೆಯ ಕಂತು ನಿಮ್ಮ ಓದಿಗೆ

read more
ಸರ್ಕಾರಿ ಸಿಬ್ಬಂದಿಯೊಂದಿಗೆ ನಡೆದ ಜಟಾಪಟಿ: ಎಚ್. ಗೋಪಾಲಕೃಷ್ಣ ಸರಣಿ

ಸರ್ಕಾರಿ ಸಿಬ್ಬಂದಿಯೊಂದಿಗೆ ನಡೆದ ಜಟಾಪಟಿ: ಎಚ್. ಗೋಪಾಲಕೃಷ್ಣ ಸರಣಿ

ಬೆಳಿಗ್ಗೆಯಿಂದ ಸುತ್ತಿದ್ದು, ಹಸಿವಿನ ಹೊಟ್ಟೆ, ನಾಲ್ಕು ಮಹಡಿ ಹತ್ತು ಎರಡು ಮಾಡಿ ಇಳಿ… ಬಿಪಿ ಏರಿತು ಕಾಣಿರಿ… ವಾಚಾಮಗೋಚರ ಪುಂಖಾನು ಪುಂಖವಾಗಿ ಬಾಯಿಂದ ಬೈಗುಳ ಹೆಂಗೆ ಯಾವ ಡೆಸಿಮಲ್‌ನಲ್ಲಿ ಉಕ್ಕಿತು ಅಂದರೆ ಮೇಲಿನ ಮಹಡಿ ಕೆಳಗಿನ ಮಹಡಿ ನಾನು ನಿಂತಿದ್ದ ಮಹಡಿ ಜನ ಸುತ್ತಲೂ ಸೇರಿಬಿಟ್ಟರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಅರವತ್ತೆಂಟನೆಯ ಕಂತು

read more
ಗಣಪನ ಸಂಗಡ ವ್ಯಾಕರಣ: ಸುಮಾವೀಣಾ ಸರಣಿ

ಗಣಪನ ಸಂಗಡ ವ್ಯಾಕರಣ: ಸುಮಾವೀಣಾ ಸರಣಿ

ರುಚಿನೋಡಿ ರವೆಯನ್ನು ನೋಡುತ್ತಿದ್ದಂತೆ 12 ವರ್ಷದ ಮಗನ ನೆನಪಿಗೆ ಬಂದದ್ದೆ “ರವೆ ಉಂಡೆ ರವೆ ಉಂಡೆ ಬೀರಿನಲ್ಲಿ ಕಂಡೆ” ಎಂಬ ಶಿಶುಪದ್ಯದ ಸಾಲುಗಳು ಬಂದರೆ ನನಗೆಂತೂ ಆ ರವಮಂ ನಿರ್ಜಿತ ಕಂಠೀರವಮಂ ನಿರಸ್ತಘನ ರವಮಂ ಕೋಪಾರುಣ ನೇತ್ರಂ ಕೇಳ್ದಾ ನೀರೊಳಗಿರ್ದುಂ ಬೆಮರ್ತನ್ ಉರಗಪತಾಕಂ ಎಂಬ ರನ್ನನ ಕೃತಿಯ 6ನೇ ಸಂಧಿಯ 22 ನೆಯ ಪದ್ಯ. ಇದು ದುರ್ಯೋಧನನ್ನು ಆತನ ಕೋಪವನ್ನು ವಿವರಿಸುವ ಪದ್ಯ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಇಪ್ಪತ್ನಾಲ್ಕನೆಯ ಬರಹ ನಿಮ್ಮ ಓದಿಗೆ

read more
ಪುಸ್ತಕ ಕೊಳ್ಳಲು ಹೋದವನಿಗೆ ಲೈಬ್ರರಿ ಕೊಟ್ಟವರು: ದರ್ಶನ್‌ ಜಯಣ್ಣ ಸರಣಿ

ಪುಸ್ತಕ ಕೊಳ್ಳಲು ಹೋದವನಿಗೆ ಲೈಬ್ರರಿ ಕೊಟ್ಟವರು: ದರ್ಶನ್‌ ಜಯಣ್ಣ ಸರಣಿ

ಮಾತು ಕಥೆಯೆಲ್ಲ ಮುಗಿದಮೇಲೆ ಕಾರಿನ ಡಿಕ್ಕಿ ಮತ್ತೊಮ್ಮೆ ತೆಗೆಯಲು ಹೇಳಿದರು. ನಾನೂ ಹಾಗೆಯೇ ಮಾಡಲಾಗಿ ಸಾರಾ ಮತ್ತು ಆಲ್ವಿನ್ ದಂಪತಿಗಳು ತಮ್ಮ ಕಾರಿನಿಂದ ಹಲವು ಬ್ಯಾಗುಗಳಲ್ಲಿದ್ದ ನೂರಾರು ಪುಸ್ತಕಗಳನ್ನು ನಾನು ಕೇಳದೆಯೇ ಉಚಿತವಾಗಿ ನನ್ನ ಕಾರಿಗೆ ಸೇರಿಸಿದರು. ನಾನು ಇವೆಲ್ಲವನ್ನೂ ಯಾವಾಗ ಓದುವುದು ಎಂದು ಯೋಚಿಸುತ್ತಿದ್ದೆ! ಬೇಡವೆಂದರೂ ಅವರು ಕೇಳಲಿಲ್ಲ. ಹೀಗೆ ಪುಸ್ತಕ ಕೊಳ್ಳಲು ಹೊರಟವನಿಗೆ ಲೈಬ್ರರಿಯೇ ದೊರಕಿದ್ದು ಅತ್ಯಂತ ಚೇತೋಹಾರಿ ಸಂಗತಿ.
ದರ್ಶನ್‌ ಜಯಣ್ಣ ಬರೆಯುವ “ಸೌದಿ ಡೇಟ್ಸ್”‌ ಸರಣಿ

read more
ಗೌರಮ್ಮನ ಜತ್ಯಾಗೇ ಬರಾ ಗಣಪ್ಪ: ಸುಮಾ ಸತೀಶ್ ಸರಣಿ

ಗೌರಮ್ಮನ ಜತ್ಯಾಗೇ ಬರಾ ಗಣಪ್ಪ: ಸುಮಾ ಸತೀಶ್ ಸರಣಿ

ನಮ್ಮೂರಿನ್ ಗೌರೀಗೆ ಪೂಜೆ ಮಾಡ್ತಿದ್ದಿದ್ದು ವಸಿ ಜನ್ವೇಯಾ. ಆದ್ರೆ ಗಣೇಶುನ್ನ ಬಿಡಾಕೇಂತ್ಲೇ ಊರಿನ್ ಜನ್ವೆಲ್ಲಾ ಮೇಲ್ ಬಿದ್ದು ಕಾದ್ಕಂಡು ಕುಂತಿರ್ತಿದ್ವಿ. ಐದನೇ ದಿನ ಸಂಜೀ ಹೊತ್ನಾಗೆ, ಗೌರಮ್ಮುಂಗೆ ಮಡ್ಲು ತುಂಬಿ, ಮಗುನ್ನ ಮುಂದಿಟ್ಗಂಡು, ಅವ್ವನ್ನ ಹಿಂದ್ ಕುಂಡ್ರಿಸಿ ಮೆರೋಣಿಗೆ ಹೊಂಡುತಿತ್ತು. ರಾಮ ದ್ಯಾವ್ರ ಗುಡೀಗ್ಳಿಂದ ನಮ್ಮನೆ ಆಸಿ, ಕೆರೆ ಏರಿ ಕಡೆ ಊರ ಗಂಡಸರು, ಹೆಂಗಸರು, ಚಳ್ಳೆ ಪಿಳ್ಳೆಗ್ಳು ಜೈಕಾರ ಹಾಕ್ಕಂಡು ಗಣಪತಿ ಬಾಪ್ಪ ಮೋರ್ಯಾ ಅಂತ ಕಿರುಚ್ಕಂಡು ಅವುರ್ ಹಿಂದಿಂದ್ಲೇ ಸಾಗುಸ್ಕಂಡು ಹೋಗ್ತಿದ್ವಿ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಗಣೇಶ ಚತುರ್ಥಿಯ ಆಚರಣೆಯ ಕುರಿತು ಹೇಳುತ್ತಲೇ ಈ ಸರಣಿ ಇಲ್ಲಿಗೆ ಮುಕ್ತಾಯವಾಗುತ್ತದೆ

read more
ಮಲೆನಾಡಿನ ಹಬ್ಬಗಳ ಸಂಭ್ರಮ: ರೂಪಾ ರವೀಂದ್ರ ಜೋಶಿ ಸರಣಿ

ಮಲೆನಾಡಿನ ಹಬ್ಬಗಳ ಸಂಭ್ರಮ: ರೂಪಾ ರವೀಂದ್ರ ಜೋಶಿ ಸರಣಿ

ಅಂಥ ಬಡತನದಲ್ಲೂ, ಅಪ್ಪಯ್ಯ ಉಮೇದಿಯಿಂದ, ಅದಕ್ಕೆ ಬೇಕಾಗುವ ವಿವಿಧ ಬಣ್ಣದ ಹಾಳೆ, ಝರಿ ಎಲ್ಲವನ್ನೂ ಕೊಂಡು ತರುತ್ತಿದ್ದರು. ಆಗೆಲ್ಲ ಈಗಿನಂತೆ ವಿದ್ಯುತ್ ಸೌಲಭ್ಯ ನಮ್ಮಲ್ಲಿ ಇರಲಿಲ್ಲ. ಆದರೂ ಅದೊಂದು ಬಗೆಯ ಬಣ್ಣದ ಹಾಳೆಗಳನ್ನು ಕಲಾತ್ಮಕವಾಗಿ ಕತ್ತರಿಸಿ ಅಂಟಿಸಿ, ಕೇವಲ ಎಣ್ಣೆಯ ದೀಪದಲ್ಲೂ ಆ ಮಂಟಪ ಝಗಮಗಿಸುವಂತೆ ಮಾಡುತ್ತಿದ್ದರು. ಕೈಲಿ ಹಿಡಿದರೆ, ಸಣ, ಸಣ ಎಂದು ಸದ್ದಾಗುವಂತಿದ್ದ ಆ ಬಣ್ಣದ ಕಾಗದವನ್ನು “ಸಂತ್ರ ತಗಡು” ಅಂತ ಕರೆಯುತ್ತಿದ್ದರು. ಅದನ್ನು ಕಲಾತ್ಮಕವಾಗಿ ಕತ್ತರಿಸಿ, ಗುಬ್ಬಿ ಮಾಡಿ, ಮಂಟಪದ ಕಂಬಕ್ಕೆ, ಅಕ್ಕ ಪಕ್ಕದ ಪಟ್ಟಿಗಳಿಗೆ ಅಂಟಿಸಿ, ಅದಕ್ಕೆ ಝರಿಯ ಪುಡಿಯನ್ನು ಅಂಟಿಸಿ, ನಮ್ಮಣ್ಣ ಅದ್ಭುತವಾದ ಝಗಮಗ ಮಂಟಪ ಮಾಡುತ್ತಿದ್ದ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿ

read more
ಕಲಾ ಅಸೈನ್‌ಮೆಂಟ್ ಪುರಾಣ!!!: ಬಸವನಗೌಡ ಹೆಬ್ಬಳಗೆರೆ ಸರಣಿ

ಕಲಾ ಅಸೈನ್‌ಮೆಂಟ್ ಪುರಾಣ!!!: ಬಸವನಗೌಡ ಹೆಬ್ಬಳಗೆರೆ ಸರಣಿ

ಆಗ ಈಗಿನಂತೆ ಇರಲಿಲ್ಲ. ಸಣ್ಣಪುಟ್ಟ ತಪ್ಪಿಗೂ ಅಂಕಗಳನ್ನು ಕಳೆಯಲು ನೋಡಲಾಗುತ್ತಿತ್ತು!! ಆಗ ತಿಂಗಳಿಗೊಮ್ಮೆ ಕಿರುಪರೀಕ್ಷೆಗಳು ಇರಲಾಗುತ್ತಿತ್ತಾದರೂ ಆ ಅಂಕಗಳನ್ನು ವಾರ್ಷಿಕ ಪರೀಕ್ಷೆಯ ಅಂಕಗಳಿಗೆ ಲೆಕ್ಕಕ್ಕೆ ತೆಗೆದುಕೊಳ್ಳುತ್ತಿರಲಿಲ್ಲ. ಸೆಮಿಸ್ಟರ್ ಪದ್ಧತಿ ಇರಲಿಲ್ಲ. ಇಡೀ ವರ್ಷ ಮಾಡಿದ ಪಾಠಗಳನ್ನು ಒಳಗೊಂಡ ವಾರ್ಷಿಕ ಪರೀಕ್ಷೆ ಮಾಡಲಾಗುತ್ತಿತ್ತು. ಪರೀಕ್ಷೆಯಲ್ಲಿ ಕೇಳಲಾಗುತ್ತಿದ್ದ ಪ್ರಶ್ನೆಗಳೂ ಹೆಚ್ಚು ಅಂಕಗಳಿಗೆ, ದೀರ್ಘ ಉತ್ತರ ಬಯಸುವ ಪ್ರಶ್ನೆಗಳನ್ನೂ ಕೇಳಲಾಗುತ್ತಿತ್ತು. ಆಗ ಪರೀಕ್ಷೆಯಲ್ಲಿ 35 ಅಂಕಕ್ಕಿಂತ ಕಮ್ಮಿ ತೆಗೆದರೆ ಫೇಲ್ ಮಾಡುವ ವ್ಯವಸ್ಥೆಯಿತ್ತು. ಈಗ ಆ ವ್ಯವಸ್ಥೆಯು ಸಂಪೂರ್ಣ ಬದಲಾಗಿದೆ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ನಲವತ್ನಾಲ್ಕನೆಯ ಕಂತು

read more
ಜಮೈಕಾ ದೇಶದ ಖ್ಯಾತ ಕವಿ ಮರ್ವಿನ್: ಎಸ್. ಜಯಶ್ರೀನಿವಾಸ ರಾವ್ ಸರಣಿ

ಜಮೈಕಾ ದೇಶದ ಖ್ಯಾತ ಕವಿ ಮರ್ವಿನ್: ಎಸ್. ಜಯಶ್ರೀನಿವಾಸ ರಾವ್ ಸರಣಿ

ಉಗ್ರಮನಸ್ಸಿನ ಸಾಹಿತಿಗಳಲ್ಲಿ ಹಾಗೂ ಸಾಹಿತ್ಯಾಭಿಮಾನಿಗಳಲ್ಲಿ ಅವರ ಜನಪ್ರಿಯತೆ ತುಸು ಕಡಿಮೆಯೆಂದೇ ಹೇಳಬೇಕು, ಮತ್ತು ಅವರು ಎಂದಿಗೂ ಮಹಾನ್ ರಾಜಕೀಯ ಕವಿತೆ, ಪ್ರಚಾರಕರ ಸಾಂದರ್ಭಿಕ ಕವಿತೆ ಅಥವಾ ರಾಜಿಯಾಗದ, ಪಟ್ಟುಬಿಡದ ಕ್ರಾಂತಿಕಾರಿಗಳ ಘೋಷಣೆ ತುಂಬಿದ ಕವನಗಳನ್ನು ಬರೆಯುವುದಿಲ್ಲ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಇದು 50ರ ಬರಹ! ಇಂದಿನ ಸರಣಿಯಲ್ಲಿ ಜಮೈಕಾ (Jamaica) ದೇಶದ ಖ್ಯಾತ ಕವಿ ಮರ್ವಿನ್ ಮೊರಿಸ್-ರವರ (Mervyn Morris, 1937) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು

read more
ಗೃಹಪ್ರವೇಶದ ಸೀನುಗಳು….: ಎಚ್. ಗೋಪಾಲಕೃಷ್ಣ ಸರಣಿ

ಗೃಹಪ್ರವೇಶದ ಸೀನುಗಳು….: ಎಚ್. ಗೋಪಾಲಕೃಷ್ಣ ಸರಣಿ

ಬೆಳಕಿಗೆ ಅಂತ ಲಾಟೀನು, ಮೊಂಬತ್ತಿ ಬೆಂಕಿ ಪೆಟ್ಟಿಗೆ ತಂದಿಟ್ಟು ಪೆಟ್ರೋಮಾಕ್ಸ್‌ಗೆ ಹೊರಟೆ. ಅದು ಮೂರುನಾಲ್ಕು ಕಿಮೀ ದೂರದಲ್ಲಿ ನೋಡಿದ್ದೆ. ಆದರೆ ಅದನ್ನ ಯಾವತ್ತೂ ಹಚ್ಚಿ ಉಪಯೋಗಿಸಿರಲಿಲ್ಲ. ಅಂಗಡಿಗೆ ಹೋಗಿ ನಾಲ್ಕು ಪೆಟ್ರೋಮಾಕ್ಸ್ ಬಾಡಿಗೆ ತಗೊಂಡೆ. ಹೇಗೆ ಹಚ್ಚೋದು ಅಂತ ಅವನು ಅಂದರೆ ಅಂಗಡಿ ಓನರ್ ತೋರಿಸಿಕೊಟ್ಟ. ನಾಲ್ಕೂ ತಗೊಂಡು ಎರಡು ಶೌರಿ ನಮ್ಮ ವಾಚ್ಮನ್ನು, ಎರಡು ಸೈಕಲ್ ಹ್ಯಾಂಡಲ್‌ಗೆ ನೇತು ಹಾಕಿ ಮನೆ ಸೇರಿದೇವಾ? ಅವತ್ತು ರಾತ್ರಿ ಎಂಟಕ್ಕೆ ಎಲ್ಲರೂ ಸೇರಿ ನಮ್ಮ ಕಲಿತ ವಿದ್ಯೆ ಎಲ್ಲವನ್ನೂ ಖರ್ಚು ಮಾಡಿದರೂ ಒಂದೇ ಒಂದು ಪೆಟ್ರೋಮಾಕ್ಸ್ ಹತ್ತಲಿಲ್ಲ!
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ