ಪದಗಳಲ್ಲಡಗಿದ ಅನೇಕಾರ್ಥ ಮತ್ತು ನ್ಯಾಂಡೊ ಪೆರಾಡೊ: ಸುಮಾವೀಣಾ ಸರಣಿ
ಈ ‘ಮಾನ’ ಎಂದಾಗ ಮೊನ್ನೆ ಅಹಮದಾಬಾದ್ನಲ್ಲಿ ನಡೆದ ವಿಮಾನ ದುರಂತವೇ ನೆನಪಾಗುತ್ತದೆ. ‘ವಿಮಾನ’ ಬರೆ ಪ್ರಯಾಣಿಕರನ್ನು ಹೊತ್ತು ಸಾಗುವುದಲ್ಲ. ದೇವಾಲಯದ ಗರ್ಭಗುಡಿಯ ಮೇಲ್ಭಾಗದ ಗೋಪುರಕ್ಕೂ ‘ವಿಮಾನ’ ಎಂದು ಕರೆಯುತ್ತಾರೆ. ವಿಚಿತ್ರ ಎಂದರೆ ಪಾರ್ಥೀವ ಶರೀರವನ್ನು ಸಾಗಿಸುವ ಬಿದಿರಿನ ಜೋಡಣೆಗೂ ವಿಮಾನವೆನ್ನುವರು. ಒಂದೊಮ್ಮೆ ತಿರುಪತಿ ಗೋವಿಂದರಾಜ ದೇವಸ್ಥಾನವನ್ನು ವೀಕ್ಷಣೆ ಮಾಡುತ್ತಾ ಇದು ‘ವಿಮಾನ ಗೋಪುರ’ ಎಂದು ವಿವರಿಸುತ್ತಿದ್ದಂತೆ ನಿಜವಾಗಿ ವಿಮಾನವೊಂದು ಹಾರಿ ಹೋಗಿದ್ದು ಇಲ್ಲಿ ನೆನಪಾಗುತ್ತಿದೆ…
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿ
ಮಲೆನಾಡಿನ ಗದ್ದೆಗಳಲ್ಲಿ ನೆಟ್ಟಿ ಸಂಭ್ರಮ: ಭವ್ಯ ಟಿ. ಎಸ್. ಸರಣಿ
ಹೂಟಿ ಮಾಡಿದ ನೆಲದ ಮಣ್ಣು ಉಬ್ಬು ತಗ್ಗುಗಳಿಂದ ಕೂಡಿದ್ದು ಅದನ್ನು ನೆಟ್ಟಿಗೆ ಸಹಾಯಕವಾಗುವಂತೆ ಸಮತಟ್ಟು ಮಾಡಲು ನಳ್ಳಿ ಬಳಸುತ್ತಾರೆ. ಹಿಂದೆ ಎತ್ತುಗಳನ್ನು ಬಳಸಿ ಹೂಟಿ ಮಾಡುತ್ತಿದ್ದರಿಂದ ಇದಕ್ಕಾಗಿ ಬಳಸುವ ನೊಗ ಮತ್ತು ನೇಗಿಲು ಪ್ರತಿ ಮನೆಗಳಲ್ಲಿ ಇರುತ್ತಿತ್ತು. ಕಾಲ ಬದಲಾದಂತೆ ಇವುಗಳ ಸ್ಥಾನವನ್ನು ಆಧುನಿಕ ಕೃಷಿ ಸಲಕರಣೆಗಳು ಆಕ್ರಮಿಸಿವೆ. ಈ ಎತ್ತುಗಳಿಗೆ ಆಹಾರವಾಗಿ ಕೊಡಲು ಹುರುಳಿಯನ್ನು ಬೇಯಿಸುತ್ತಿದ್ದರು. ಇದನ್ನು ಬೇಯಿಸಿದ ನೀರೇ ಹುರುಳಿಕಟ್ಟು. ಮಳೆಗಾಲದಲ್ಲಿ ಹುರುಳಿ ಕಟ್ಟಿನ ಘಮ ತೇಲಿ ಬಂದರೆ ಆಹಾ ಎಷ್ಟು ಸುಂದರ ಅನುಭೂತಿ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ
ಸೌದಿ ದೇಶದ ಹಿನ್ನೆಲೆ…: ದರ್ಶನ್ ಜಯಣ್ಣ ಸರಣಿ
ಈ ದೇಶದ ಮೊದಲ ಹೆಸರು ನಜ್ದ್ ಮತ್ತು ಹೇಜಾಜ್ ಎಂದಾಗಿತ್ತು. ಹೆಜಾಜ್ನಲ್ಲಿಯೇ ಮೆಕ್ಕಾ- ಮದೀನಾ ಎಲ್ಲ ಇರುವುದು ಮತ್ತು ನಜ್ದ್ ಎಂದರೆ ಇಂದಿನ ಸೌದಿಯ ಮಧ್ಯ ಭಾಗವಾಗಿದೆ. ಅಬ್ದುಲ್ ಅಜೀಜ್(1875 – 1953) ಈ ಎರಡು ಭಾಗಗಳ ಜೊತೆಗೆ ತಂಪಾದ ಬೆಟ್ಟಗುಡ್ಡಗಳಿಂದ ಕೂಡಿರುವ ಯೆಮೆನ್ಗೆ ಹೊಂದಿಕೊಂಡಿರುವ ದಕ್ಷಿಣದ ನಜ್ರನ್, ಅಸಿರ್ ಮತ್ತು ಉತ್ತರದ ಅಂದರೆ ಸಿರಿಯಾ ಇರಾಕ್ನ ಕಡೆಯ ನಾರ್ದರ್ನ್ ಗಡಿಯನ್ನು ಹಾಗೆಯೇ ಇಂದಿನ ತೈಲದ ತೊಟ್ಟಿಲಾದ ಈಸ್ಟರ್ನ್ ಪ್ರಾವಿನ್ಸ್ ಅನ್ನು ನಂತರದ ವರ್ಷಗಳಲ್ಲಿ ದಂಗೆ ಹೊರಟು ಸೌದಿಗೆ ಸೇರಿಸಿಕೊಳ್ಳುತ್ತಾನೆ.
ದರ್ಶನ್ ಜಯಣ್ಣ ಬರೆಯುವ “ಸೌದಿ ಡೇಟ್ಸ್” ಸರಣಿಯ ನಾಲ್ಕನೆಯ ಬರಹ
ಬರೀ ನಾಲ್ಕು ಗೋಡೆಯ ಮಧ್ಯೆ ಕಲಿಯುವುದೇ ಶಿಕ್ಷಣವಲ್ಲ…!!: ಬಸವನಗೌಡ ಹೆಬ್ಬಳಗೆರೆ ಸರಣಿ
ಒಮ್ಮೆ ಪಟ್ಟಣದ ಮಕ್ಕಳಿಗೆ ಭತ್ತ, ಕುಂಬಳಕಾಯಿ ಇಟ್ಟು ಭತ್ತ ಬೆಳೆಯುವ ಗಿಡ ತೋರಿಸಿ ಕುಂಬಳಕಾಯಿ ಬೆಳೆಯುವ ಗಿಡ ಹೇಗಿರಬಹುದು ಎಂದು ಕೇಳಿದರಂತೆ. ಆಗ ಅವರು ಚಿಕ್ಕ ಭತ್ತವನ್ನು ಬೆಳೆಯುವ ಗಿಡವೇ ಈ ರೀತಿ ಇರಬೇಕಾದರೆ ಇಷ್ಟು ದಪ್ಪನೆಯ ಕುಂಬಳಕಾಯಿಯ ಬೆಳೆಯುವ ಗಿಡದ ಕಾಂಡ ಇನ್ನೂ ದಪ್ಪದಾಗಿರಬೇಕು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಮೂವತ್ತೊಂಭತ್ತನೆಯ ಕಂತು ನಿಮ್ಮ ಓದಿಗೆ
ಕಾವ್ಯದ ಮಳೆ ಸುರಿಸಿ ಮುಕ್ತರಾದ ವೆಂಕಟೇಶಮೂರ್ತಿಗಳು: ಸುಮಾವೀಣಾ ಸರಣಿ
ಬೆಂಗಳೂರಿನ ಸಂತಜೋಸೆಫರ ಕಾಲೇಜಿನಲ್ಲಿ ಸತತ 27 ವರ್ಷ ಒಂದೇ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ ಇವರು ಮಾಯವಾಗಿದ್ದ ಕನ್ನಡವನ್ನು ಕನ್ನಡ ಸಂಘ ಮಾಡುವ ಮೂಲಕ ಕನ್ನಡಮಯವಾಗಿಸಿದ್ದರು. ತಮ್ಮ ಪುಸ್ತಕಗಳಲ್ಲದೆ ತಮ್ಮ ವಿದ್ಯಾರ್ಥಿಗಳಿಂದಲೂ ಪುಸ್ತಕವನ್ನು ಹೊರತಂದವರು.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಹತ್ತೊಂಭತ್ತನೆಯ ಬರಹ ನಿಮ್ಮ ಓದಿಗೆ
ಬಾರ್ಬೆಡೋಸ್ ದೇಶದ ಕವಿ ಎಸ್ಟರ್ ಫಿಲಿಪ್ಸ್: ಎಸ್. ಜಯಶ್ರೀನಿವಾಸ ರಾವ್ ಸರಣಿ
ಫಿಲಿಪ್ಸ್ ಅವರ ಕವಿತೆಗಳಲ್ಲಿ ಅಪಾರವಾದ ಉದಾರ ಮನೋಭಾವವಿದೆ. ‘ವ್ಯಕ್ತಪಡಿಸಿದ ಪ್ರತಿಯೊಂದು ಕಲ್ಪನೆ ಅಥವಾ ಭಾವನೆಯು ಜನರು ಅಥವಾ ಅವರ ಸುತ್ತಲಿನ ಪ್ರಪಂಚದ ಮೇಲೆ ಅವಲಂಬಿತವಾಗಿರುವುದರಿಂದ ತನಗಾಗಿ ಮಾತ್ರ ಬರೆಯಲು ಎಂದಿಗೂ ಸಾಧ್ಯವಿಲ್ಲ’ ಎಂದು ಅವರು ಹೇಳಿದ್ದಾರೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ವೆಸ್ಟ್ ಇಂಡೀಸ್-ನ ಬಾರ್ಬೆಡೋಸ್ ದೇಶದ ಕವಿ ಎಸ್ಟರ್ ಫಿಲಿಪ್ಸ್-ರವರ (ESTHER PHILLIPS) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು ನಿಮ್ಮ ಓದಿಗೆ
ಕುಸಿದ ನೆಲದ ಕೆಳಗಿದ್ದ ಅದೃಷ್ಟ: ಎಚ್. ಗೋಪಾಲಕೃಷ್ಣ ಸರಣಿ
ಇಂದಿನವರೆಗೆ ಸುತ್ತ ಪರಿಸರ ಹೀಗಿರಬೇಕಾದರೆ ಚಾವಣಿಯ ಮೇಲೆ ಜಗ್ಗದೆಯೇ ಕುಗ್ಗದೆಯೇ ಹಿಗ್ಗಿ ಹಿಗ್ಗಿ ನಡೆ ಮುಂದೆ ಮಾಡುತ್ತಿದ್ದ ನಾನು ಎಲ್ಲೋ ಕಾಲು ಇಟ್ಟಿದ್ದೆ ಅಂತ ಕಾಣುತ್ತದೆ. ಏಕ್ ದಂ ಡಿವಿಜಿ ಪ್ರತ್ಯಕ್ಷ ಆದರು. ಪದ ಕುಸಿಯೆ ನೆಲವಿಹುದು… ಅಂತ ಅವರು ತಾನೇ ಹೇಳಿದ್ದು? ಕಾಲು ಕುಸಿಯಿತು ಮತ್ತು ನೆಲ ಸಹ ಇತ್ತು. ಆದರೆ ಅದು ಕೆಳಗೆ ಇದ್ದದ್ದು. ನಾನು ಸುಮಾರು ಹತ್ತು ಹನ್ನೆರೆಡು ಅಡಿ ಮೇಲಿಂದ ನೆಲಕ್ಕೆ ಕುಸಿದೆ…
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಅರವತ್ತೊಂದನೆಯ ಕಂತು
ಮಳೆ ತಂದ ನೆನಪಿನ ಚಿತ್ರಮಾಲೆ!!: ಭವ್ಯ ಟಿ.ಎಸ್. ಸರಣಿ
ಶಾಲೆಗೆ ಹೋದೊಡನೆ ನಮ್ಮ ಕೊಪ್ಪೆ ತೆಗೆದು, ತೊಯ್ದು ತೊಪ್ಪೆಯಾದ ಯೂನಿಫಾರಂ ಲಂಗಗಳನ್ನು ಹಿಂಡಿ ಕೊಡವಿಕೊಂಡು ಹೋಗಿ ತರಗತಿಯಲ್ಲಿ ಕೂರುತ್ತಿದ್ದೆವು. ಇಡೀ ದಿನ ಸುತ್ತೆಲ್ಲ ಬಟ್ಟೆಯ ಹಸಿವಾಸನೆ ಹರಡಿರುತ್ತಿತ್ತು. ಜೋರಾಗಿ ಮಳೆ ಬರುವಾಗ ಮೇಷ್ಟ್ರು ಪಾಠ ಮಾಡುತ್ತಿರುವಾಗಲೂ ಗಲಾಟೆ ಮಾಡುತ್ತಿದ್ದೆವು. ಇನ್ನೂ ಶಿಕ್ಷಕರು ಬರದ ತರಗತಿಯಲ್ಲಿ ಮಳೆ ಸುರಿಯುವಾಗ ಮನಸೋ ಇಚ್ಛೆ ಕೂಗುತ್ತ ಮಳೆಯೊಂದಿಗೆ ಜುಗಲ್ ಬಂಧಿ ನಡೆಸುತ್ತಿದ್ದೆವು.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿಯಲ್ಲಿ ಮಳೆದಿನಗಳಲ್ಲಿ ಶಾಲಾಮಕ್ಕಳ ಸಂಭ್ರಮದ ಕುರಿತ ಬರಹ ನಿಮ್ಮ ಓದಿಗೆ
ಏಳು ಸುತ್ತಿನ ಕೋಟೆಯ ನಡುವೆ ಜಾಂಬಿಯಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ
ಜಾಂಬಿಯಾದ ಸುಮಾರು ಅರುವತ್ತೇಳು ಸಾವಿರ ಚದರ ಕಿಲೋಮೀಟರ್ಗಳಷ್ಟು ಕಾಡನ್ನು ಮೀಸಲು ಅರಣ್ಯ ಪ್ರದೇಶ ಎಂದು ಗುರುತಿಸಲಾಗಿದೆ. ಕಾಪರ್ಬೆಲ್ಟ್ನಲ್ಲಿ ವ್ಯಾಪಾರದ ಉದ್ದೇಶಕ್ಕಾಗಿಯೇ ಮರಗಳನ್ನು ನೆಡಲಾಗಿದೆ. ಇಲ್ಲಿ ಪ್ರಮುಖವಾಗಿ ಸಾಫ್ಟ್ವುಡ್ ಮರಗಳಿವೆ. ನೈಋತ್ಯ ಭಾಗದಲ್ಲಿ ಜಾಂಬೆಜಿ ನದಿತೀರದ ಪ್ರದೇಶಗಳಲ್ಲಿ ತೇಗದ ಮರಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತವೆ. ಜಾಂಬಿಯಾದಲ್ಲಿ ಅರಣ್ಯ ನಾಶವಾಗುತ್ತಿರುವುದಕ್ಕೆ ಪ್ರಮುಖ ಕಾರಣ ಅಡುಗೆಗಾಗಿ ಇದ್ದಿಲಿನ ಬಳಕೆ.
ಡಾ. ವಿಶ್ವನಾಥ ಎನ್. ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಜಾಂಬಿಯಾ ದೇಶದ ಕುರಿತ ಬರಹ ನಿಮ್ಮ ಓದಿಗೆ










