“ಧೈರ್ಯಶಾಲಿ ಮತ್ತು ಬಂಡಾಯಗಾರ ಅರಬ್ ಕವಿ”: ಎಸ್. ಜಯಶ್ರೀನಿವಾಸ ರಾವ್ ಸರಣಿ
ಅಡೋನೀಸ್ ಅವರ ಕಾವ್ಯ ಮತ್ತು ವಿಮರ್ಶೆ ಅರೇಬಿಕ್ ಕಾವ್ಯದ ಬೆಳವಣಿಗೆಯ ಮೇಲೆ ದೂರಗಾಮಿ ಪ್ರಭಾವ ಬೀರಿವೆ. ಶಾಸ್ತ್ರೀಯ ಕಾವ್ಯದಲ್ಲಿ ಆಳವಾಗಿ ಬೇರೂರಿದ್ದಾಗ್ಯೂ ಸಮಕಾಲೀನ ಅರೇಬಿಕ್ ಸಮಾಜದ ಅವಸ್ಥೆ ಮತ್ತು ಪ್ರತಿಕ್ರಿಯೆಗಳನ್ನು ತೋರಿಸುವಂತಹ ಹೊಸ ಕಾವ್ಯಾತ್ಮಕ ಭಾಷೆ ಮತ್ತು ಲಯಗಳನ್ನು ಸೃಷ್ಟಿಸಿದೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಸಿರಿಯಾ (Syria) ದೇಶದ ಅರೇಬಿಕ್ (Arabic) ಭಾಷಾ ಕವಿ ಅಡೋನೀಸ್-ರವರ (Adonis – Ali Ahmad Said Esber) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು ನಿಮ್ಮ ಓದಿಗೆ
ಲೋನ್ ಸಿಕ್ಕಲು ಇಂಟರ್ವ್ಯೂ!: ಎಚ್. ಗೋಪಾಲಕೃಷ್ಣ ಸರಣಿ
ಮನೆ ಒಳಗೆ ಸೇರಿಕೊಂಡು ಬಿಟ್ಟರೆ ಯಾವ ಓನರಿಣಿ ಕಾಟವೂ ಇರುದಿಲ್ಲ, ರಾತ್ರಿ ಹನ್ನೆರಡಕ್ಕೆ ಯಾರೂ ಬಾಡಿಗೆ ವಸೂಲಿಗೆ ಬರುಲ್ಲ, ಬೆಳಿಗ್ಗೆ ಬೆಳಿಗ್ಗೆ ಬಂದು ಬಾಡಿಗೆ ಕೊಡಿ ಅಂತ ಕೇಳೋದಿಲ್ಲ, ಅದಕ್ಕಿಂತ ಮುಖ್ಯವಾಗಿ ಹೆಂಡತಿಯ ಒಂದೇ ಒಂದು ಆಸೆ ಸಂಬಳದ ಮೊದಲ ಹತ್ತು ರುಪಾಯಿ ದೇವರಿಗೆ ಅದರಲ್ಲೂ ರಾಘವೇಂದ್ರ ಸ್ವಾಮಿಗೆ ರಾಯರ ಮಠಕ್ಕೆ ಅಭಿಷೇಕಕ್ಕೆ ಕೊಡಬೇಕು ಅನ್ನುವುದು…
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐವತ್ತೆರಡನೆಯ ಕಂತು
“ಎತ್ತಿನ ಜ್ವರಕ್ಕೆ ಎಮ್ಮೆಗೆ ಬರೆ -ನೆನಪಿನ ಬಾಳೆ”: ಪೂರ್ಣೇಶ್ ಮತ್ತಾವರ ಸರಣಿ
ಕಾಲು ಗಂಟೆಗೂ ಮೊದಲು ನಾನು “ಬಾಳೆ ಎಲೆಯ ಛತ್ರಿ” ನಡಿಗೆ ನಡೆಸಿದ್ದು ನಮ್ಮ ಜೂನಿಯರ್ಗಳಿಗೆ ನನ್ನ ನಿರೀಕ್ಷೆಯನ್ನೂ ಮೀರಿ ಅತ್ಯಾಕರ್ಷಕವಾಗಿ ಕಂಡಿದೆ. ಅದೆಷ್ಟು ಅತ್ಯಾಕರ್ಷಕವೆಂದರೆ ಅವರು ಊಟ ಮುಗಿಸಿ ತಮ್ಮ ತಮ್ಮ ಡಾರ್ಮಿಟರಿಗಳಿಗೆ ಹೋಗುವ ಬದಲು ನೇರ ಎಂ.ಪಿ.ಹಾಲ್ ನ ಹಿಂಬದಿಯಲ್ಲಿದ್ದ ಬಾಳೆ ತೋಟಕ್ಕೆ ನುಗ್ಗಿದ್ದಾರೆ. ಎಲ್ಲರೂ “ನನಗೊಂದು ಎಲೆ.. ನನಗೊಂದು ಎಲೆ..” ಎನ್ನುತ್ತಾ ಇಡೀ ಬಾಳೆ ತೋಟವನ್ನೇ ಲೂಟಿ ಮಾಡಲು ಶುರು ಮಾಡಿದ್ದಾರೆ.
ಪೂರ್ಣೇಶ್ ಮತ್ತಾವರ ಬರೆಯುವ “ನವೋದಯವೆಂಬ ನೌಕೆಯಲ್ಲಿ…” ಸರಣಿಯ ಹತ್ತನೆಯ ಬರಹ
ಭೂಮ್ತಾಯಿ ಮ್ಯಾಗ್ಳ ಗಿಡ ಗಂಟಿ ಬುಟ್ರೆ ದಿಷ್ಟಿ ನಿವಾಳ್ಸೋದೇ ದೊಡ್ಡ ಮದ್ದು: ಸುಮಾ ಸತೀಶ್
ನಾವು ಉಣ್ಣಾವಾಗ ಒಂದು ಕಡಿಕ್ಕೆ ಕುಂತು ಉಂಡು, ಗೋಮೆ ಇಕ್ಕಿ ಎದ್ದೇಳ್ ಬೇಕು. ಅದ್ ಬುಟ್ಟಿ ಓಡಾಡೋ ಜಾಗದಾಗೆ ಉಂಡ್ರೆ, ತಟ್ಟೆಗ್ಳಾಗಿಂದ ಮುಸ್ರೆ ಪಸ್ರೆ ಚೆಲ್ಲಾಕಿಲ್ವೇ? ಅದುನ್ನ ಯಾರಾನಾ ತುಳುದ್ರೆ ಕಾಲ ರಂಜು ಆಗ್ತೈತೆ ಅಂತಿದ್ರು. ಭೂಮ್ತಾಯಿ ಕೊಡಾ ಅನ್ನವಾ ಅಂಗೆ ಮರ್ವಾದೆ ಇಲ್ದಂಗೆ ಚೆಲ್ಲೀರೆ, ಅದ್ನ ತುಳ್ದು ಪಳ್ದು ಮಾಡೀರೆ ನಮ್ಗೆ ಒಳ್ಳೇದಾಯ್ತೈತೆ? ಅಂಬೋರು. ಇದೂ ಒಂತರಾ ದಿಟವೇಯಾ. ಕಿಲೀನ್ ಆಗಿರ್ಬೇಕು ಅಂಬ್ತ ಪಾಠ ಹೇಳ್ತೈತೆ. ಭೂಮ್ತಾಯಿ ಕೊಡಾ ಪ್ರಸಾದ್ವ ಚೆಲ್ಬಾರ್ದು ಅಂತ್ಲೂ ಹೇಳ್ತೈತೆ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಹಳ್ಳಿ ಮದ್ದುಗಳ ಕುರಿತ ಬರಹ ನಿಮ್ಮ ಓದಿಗೆ
ಚಿನ್ನದ ದ್ವೀಪ, ಶವದ ಹೂವು ಮತ್ತು ಮಲೇಷ್ಯಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ
ಮಲಯ ಪೆನಿನ್ಸುಲಾ ಮತ್ತು ಬೋರ್ನಿಯೊದ ಉತ್ತರ ಕರಾವಳಿ ಪ್ರದೇಶವು ಪ್ರಪಂಚದ ಪ್ರಮುಖ ಕಡಲ ವ್ಯಾಪಾರ ಮಾರ್ಗಗಳಲ್ಲಿ ಒಂದಾಗಿದೆ. ಏಷ್ಯಾದ ಇತರ ಭಾಗಗಳ ಜನರು ಇಲ್ಲಿಗೆ ಭೇಟಿ ಕೊಡುತ್ತಾರೆ. ಈ ಕಾರಣದಿಂದಾಗಿ ಆಗ್ನೇಯ ಏಷ್ಯಾದ ಬೇರೆ ರಾಷ್ಟ್ರಗಳಲ್ಲಿ ಕಂಡುಬರುವಂತೆ ಮಲೇಷ್ಯಾದಲ್ಲಿಯೂ ಜನಾಂಗೀಯ ವೈವಿಧ್ಯತೆಯಿದೆ.
ಡಾ. ವಿಶ್ವನಾಥ ಎನ್. ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಮಲೇಷ್ಯಾ ದೇಶದ ಕುರಿತ ಬರಹ ನಿಮ್ಮ ಓದಿಗೆ
ಮೊರಸಾರ್ಸಕೆ….. ಮರಾ….ಕಲ್ಮುಳ್ಳು…. ಕಲ್ಮುಳ್ಳು…..: ಸುಮಾವೀಣಾ ಸರಣಿ
ಬಿದಿರಿನ ನಾನಾ ರೀತಿಯ ಮನೆ ಬಳಕೆ ವಸ್ತುಗಳು ಅಂದರೆ ಕುಕ್ಕೆ, ಗೂಡೆ, ಅನ್ನ ಬಸಿಯುವ ಚಿಬ್ಬಲು ಮಳೆಗಾಲದಲ್ಲಿ ಬಟ್ಟೆ ಒಣಗಿಸುವ ಪಂಜರಗಳು ಆಧುನಿಕತೆ ಬಂದಂತೆ ಕಡಿಮೆಯಾಗುತ್ತಿವೆ. ಅದಕ್ಕೆ ಪರ್ಯಾಯವಾಗಿ ಮೇದಾರರು ಬಿದಿರಿನಲ್ಲಿಯೇ ಗೃಹಾಂಲಕಾರಿಕ ವಸ್ತುಗಳು ಅಂದರೆ ಹೂದಾನಿಗಳು, ಗೋಡೆಗೆ ಆನಿಸುವಂಥ ಫಲಕಗಳು ಇತ್ಯಾದಿಗಳನ್ನು ಮಾಡಿ ಮಾರಾಟ ಮಾಡುತ್ತಿದ್ದಾರೆ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಹತ್ತನೆಯ ಬರಹ ನಿಮ್ಮ ಓದಿಗೆ
ಕವಿ ಒಬ್ಬ ಎಂಜಿನಿಯರ್; ಕವಿತೆ ಒಂದು ಯಂತ್ರ: ಎಸ್. ಜಯಶ್ರೀನಿವಾಸ ರಾವ್ ಸರಣಿ
ಡಿ ಮೆಲೊ ನೆಟೊ ಅವರು ತಮ್ಮ ಕಾವ್ಯದಲ್ಲಿ ‘ವಸ್ತು’-ಗಳಿಗೆ ನೀಡುವ ವಿಶೇಷ ಸ್ಥಾನಮಾನವನ್ನು ಅವರ ಕಾವ್ಯದ ವಿಮರ್ಶಕರು ಗಮನಿಸಿದ್ದಾರೆ. ಡಿ ಮೆಲೊ ನೆಟೊ ಅವರ ಕಾವ್ಯದಲ್ಲಿ ಕಾಣುವ ಕಲ್ಲು, ಚಾಕು, ಗಾಳಿ, ನೀರು – ಇಂತಹ ‘ವಸ್ತು’-ಗಳು ಮತ್ತೆ ಮತ್ತೆ ಎಡೆಬಿಡದೆ ಬರುವ ಪ್ರತಿಮೆಗಳಾಗುತ್ತವೆ; ಜೊತೆಗೆ ಪ್ರಪಂಚದಾದ್ಯಂತದ ವಿಷಯಗಳು ಸಹ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಬ್ರೆಜಿಲ್ (Brazil) ದೇಶದ ಪೋರ್ಚುಗೀಸ್ (Portuguese) ಭಾಷಾ ಕವಿ ಜುವಾವ್ ಕೆಬ್ರಾಲ್ ಡಿ ಮೆಲೊ ನೇಟೊ-ರವರ (Joao Cabral De Melo Neto, 1920-1999) ಕಾವ್ಯದ ಕುರಿತ ಬರಹ
ಹತ್ತು ಮಹಡಿಯ ಭರ್ಜರಿ ಪ್ಲಾನು….: ಎಚ್.ಗೋಪಾಲಕೃಷ್ಣ ಸರಣಿ
ಬೆಳಗಿಂದ ಸಂಜೆವರೆಗೂ ನನ್ನ ಸಂಗಡವೆ ಇತ್ತು ಅದು. ಮಧ್ಯಾಹ್ನ ನಿದ್ದೆ ಕೂಡ ಮಾಡದೇ ನನ್ನ ಜತೆಗೆ ಇದ್ದುಬಿಡ್ತು. ಮನೆಗೆ ಹೊರಡ್ತಾ ಮಗೂನ ಮುದ್ದಿಸಿದೆ. “ಮಗು ತುಂಬಾ ಮುದ್ದು, ನನ್ನನ್ನ ತುಂಬಾ ಹಚ್ಚಿಕೊಂಡಿದೆ “ಅಂದೆ. ಬೆಳಿಗ್ಗೆಯಿಂದ ನನ್ನ ಸಂಗಡವೇ ಇತ್ತು. ಪುಟ್ಟ ಕೂಸು, “ಅಂಕಲ್ನ ಒಬ್ಬರನ್ನೇ ಬಿಡಬೇಡ, ಸಿಕ್ಕಿದ್ದೆಲ್ಲಾ ಜೇಬಲ್ಲಿ ಹಾಕ್ಕೊಳತ್ತೆ ಅದು, ಅದರ ಹಿಂದೇನೆ ಇರು ಅಂತ ಅಜ್ಜಿ ಹೇಳಿತ್ತು…” ಅಂತ ಸತ್ಯ ಬಯಲು ಮಾಡಿತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ
ಬೀಳ್ಕೊಡುಗೆ…: ಕೆ. ಸತ್ಯನಾರಾಯಣ ಪ್ರವಾಸ ಸರಣಿ
ಬೆಂಗಳೂರಿನ ಧ್ಯಾನ ಹೆಚ್ಚುತ್ತಿದ್ದಂತೆ, ಹೊರಡುವ ದಿನ ಸಮೀಪಿಸುತ್ತಿದ್ದಂತೆ ಗೆಳೆಯರ ಜೊತೆ ನೆಂಟರಿಷ್ಟರ ಜೊತೆ ಕಲ್ಪನಾ ಸಂಭಾಷಣೆಗೆ ಪ್ರಾರಂಭವಾಯಿತು. ಒಂದು ಬೆಳಿಗ್ಗೆ ವಾಕಿಂಗ್ ಮುಗಿಸಿಕೊಂಡು ಮನೆಗೆ ವಾಪಸ್ ಆಗುತ್ತಿದ್ದಾಗ, ಪರಿಚಿತ ಕಟ್ಟಡ ಸಂಕೀರ್ಣವೊಂದರ ಮುಂದೆ ನಿಂತಿದ್ದೆ. ಒಬ್ಬರು ಕೈ ಗಾಡಿಯಲ್ಲಿ ತಂದು ಟೀ, ಕೇಕ್, ಚಿಪ್ಸ್, ಸಿಗರೇಟ್ ಮಾರುತ್ತಿದ್ದರು. ಥೇಟ್ ನಮ್ಮ ಪೆಟ್ಟಿ ಅಂಗಡಿಯ ರೀತಿ, ದರ್ಶಿನಿ ಕೆಫೆಗಳ ರೀತಿ. ಇಂತಹದೊಂದು ದೃಶ್ಯವನ್ನೇ ನಾನು ಇಷ್ಟು ದಿನ ನೋಡಿರಲಿಲ್ಲ. ಇದು ಟಿಪಿಕಲ್ ಬೆಂಗಳೂರು ದೃಶ್ಯ. ಈ ದೃಶ್ಯವನ್ನು ನೋಡುತ್ತಾ ಸಂತೋಷ ಪಡುತ್ತಲೇ ನಾನು ನೆದರ್ಲ್ಯಾಂಡ್ಸ್ನಿಂದ ಬೀಳ್ಕೊಡುಗೆ ಪಡೆದು ಹೊರಡಬೇಕೆನ್ನಿಸಿತು.
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್ಲ್ಯಾಂಡ್ಸ್ ಬಾಣಂತನ” ಸರಣಿಯ ಹದಿಮೂರನೆಯ ಬರಹ










