Advertisement

ಸರಣಿ

ಸ್ವಾಭಿಮಾನದ ಸಂಕೇತ “ವಿ. ಶ್ರೀನಿವಾಸಪ್ರಸಾದ”: ರಂಜಾನ್ ದರ್ಗಾ ಸರಣಿ

ಸ್ವಾಭಿಮಾನದ ಸಂಕೇತ “ವಿ. ಶ್ರೀನಿವಾಸಪ್ರಸಾದ”: ರಂಜಾನ್ ದರ್ಗಾ ಸರಣಿ

12ನೆಯ ಶತಮಾನದ ಬಸವಾದಿ ಶರಣರು ಈ ಹಿಂಸಾಯಂತ್ರಕ್ಕೆ ನೇರವಾದ ಸವಾಲೆಸೆದರು. ಕಾಯಕ ಸಿದ್ಧಾಂತದ ಮೂಲಕ ಇದರ ಮರ್ಮವನ್ನು ಹೊರಗೆಳೆದರು. ಈ ಹಿಂಸಾಯಂತ್ರದ ಬಿಡಿ ಉಪಕರಣಗಳಾದ ಜಾತಿ, ಅಸ್ಪೃಶ್ಯತೆ, ಅಸಮಾನತೆ ಮತ್ತು ಲಿಂಗಭೇದದ ವಿರುದ್ಧ ಶರಣರು ಹೋರಾಡಿದರು. ತನ್ನ ಎಲ್ಲ ಸಾಮರ್ಥ್ಯವನ್ನು ಬಳಸಿಕೊಂಡು ತಮ್ಮ ಸವರ್ಣೀಯ ಚಾಲಕರ ಆರ್ಥಿಕ ವ್ಯವಸ್ಥೆಯನ್ನು ಸದೃಢಗೊಳಿಸುತ್ತ ಅದನ್ನು ಕಾಪಾಡುವುದಲ್ಲೇ ಹಿಂಸಾಯಂತ್ರ ತಲ್ಲೀನವಾಗಿತ್ತು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

read more
ಎಂ.ಎಸ್.‌ ರಾಮಯ್ಯ ಕುರಿತು ಮತ್ತಷ್ಟು…: ಎಚ್. ಗೋಪಾಲಕೃಷ್ಣ ಸರಣಿ

ಎಂ.ಎಸ್.‌ ರಾಮಯ್ಯ ಕುರಿತು ಮತ್ತಷ್ಟು…: ಎಚ್. ಗೋಪಾಲಕೃಷ್ಣ ಸರಣಿ

ಇನ್ನೊಂದು ಪ್ರಚಲಿತ ಇದ್ದ ಗಾಳಿಮಾತು ಎಂದರೆ ಅವರು ಕಟ್ಟಡ ನಿರ್ಮಾಣಕ್ಕೆ ಸಿಮೆಂಟ್ ಬೇಕು ಅಂದರೆ ಸಿಮೆಂಟ್ ಕಾರ್ಖಾನೆಯನ್ನು ಶುರುಮಾಡುತ್ತಾರೆ, ಕಬ್ಬಿಣ ಬೇಕು ಅಂದರೆ ಕಬ್ಬಿಣ ತಯಾರಿಕೆ ಫ್ಯಾಕ್ಟರಿ ಶುರುಮಾಡ್ತಾರೆ ಎನ್ನುವಂತಹ ರೆಕ್ಕೆ ಪುಕ್ಕ ಹುಟ್ಟಿಸಿಕೊಂಡ ಸುದ್ದಿಗಳು. ಬಿಲ್ಡಿಂಗ್ ಕಟ್ಟಲು ಇಟ್ಟಿಗೆ ಬೇಕು ತಾನೇ ಇವರದ್ದು ಇಟ್ಟಿಗೆ ಉದ್ಯಮ ಇತ್ತು ಮತ್ತು ಇದರಿಂದ ಈ ಸುದ್ದಿ ಹುಟ್ಟಿತೋ ತಿಳಿಯದು. ಇದಕ್ಕೆ ಪರ್ಯಾಯವಾಗಿ ಒಂದು ಜೋಕು ಹುಟ್ಟಿತ್ತು….
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ನಲವತ್ತೈದನೆಯ ಕಂತು ನಿಮ್ಮ ಓದಿಗೆ

read more
ಕೂರಾಪುರಾಣ ೮: ಸ್ವಪ್ರೇಮ ಮತ್ತು ನಾಯಿಪ್ರೇಮ ಎಂಬ ಪರಿಶುದ್ಧ ಪ್ರೇಮಗಳು

ಕೂರಾಪುರಾಣ ೮: ಸ್ವಪ್ರೇಮ ಮತ್ತು ನಾಯಿಪ್ರೇಮ ಎಂಬ ಪರಿಶುದ್ಧ ಪ್ರೇಮಗಳು

ಎಲ್ಲರಿಗು ಪರಮಶ್ರೇಷ್ಟರಾಗುವುದು ಸಾಧ್ಯವಿಲ್ಲ ಆದರೆ ಶ್ರೇಷ್ಟರಾಗುವುದು ಖಂಡಿತ ಸಾಧ್ಯವಿದೆ ಎಂದು ನನ್ನ ನಂಬಿಕೆ. ನಿಮಗೆ ನಾಯಿಯ ಬಗ್ಗೆ ಭಯ ಅಥವಾ ಅನಾದರ ಅಥವಾ ಮತ್ತೇನೋ ಇದ್ದರೂ ನಾಯಿಯೊಂದನ್ನು ಹತ್ತಿರದಿಂದ ನೋಡಲು ಶುರು ಮಾಡಿದಾಗ ಅದು ಖಂಡಿತ ದೂರವಾಗಿ ಶುದ್ಧವಾದ ಅಂತಃಕರಣವೊಂದು ಹುಟ್ಟುತ್ತದೆ. ಇದಕ್ಕೆ ನಾನೇ ಉದಾಹರಣೆ. ನಾನೊಬ್ಬಳು ನಾಯಿಪ್ರೇಮಿಯಾಗುತ್ತೇನೆ, ಆಗಬಲ್ಲೆ ಎಂದು ನಾನು ಯಾವತ್ತು ಯೋಚಿಸಿರಲಿಲ್ಲ.
ಸಂಜೋತಾ ಪುರೋಹಿತ ಬರೆಯುವ “ಕೂರಾಪುರಾಣ” ಸರಣಿಯ ಎಂಟನೆಯ ಕಂತು

read more
ಬೇಸಾಯ ಬದಲಾದದ್ದು: ಸುಮಾ ಸತೀಶ್ ಸರಣಿ

ಬೇಸಾಯ ಬದಲಾದದ್ದು: ಸುಮಾ ಸತೀಶ್ ಸರಣಿ

ಇದೊಂದು ಕಾರು ಎಲ್ಲಾರ ಕಣ್ಗೂ ಬಿತ್ತು. ಪುಸುಕ್ ಅಂತ ಕಾರು ಕೇಳೋಕೆ ಶುರು ಆತು. ದಾಕ್ಷಿಣ್ಯ ಬ್ಯಾರೆ.‌ ಕೊಡದಿದ್ರೆ ಕೆಲ್ಸ‌ ಮಾಡದೆ ಸತಾಯಿಸ್ತಾರೆ. ಒಳ್ಳೆ ಪೀಕಲಾಟ ಆಯ್ತು. ಥತ್ ತೇರಿಕೆ ಯಾಕಾನಾ ಕಾರು ಅಂತ ಆಸೆ ಬಿದ್ನೋ… ಯಾಕೆ ಬೇಕಿತ್ತು ಈ ಉಸಾಬರಿ ಅಂತ ಬ್ಯಾಸ್ರ ಬಂದೋತು ಅಪ್ಪಂಗೆ. ಕಾರೂ ಪುಗ್ಸಟ್ಟೆ ಕೊಡಾದಲ್ದೆ, ಪೆಟ್ರೋಲ್ ಹಾಕ್ಸಿ, ಡ್ರೈವರ್ ಇಕ್ಕಿ ಕಳ್ಸೋದು ಬ್ಯಾರೆ. ಅದೋ ಬಿಳೇ ಆನೆ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಹೊಸ ಬರಹ ಇಲ್ಲಿದೆ

read more
‘ಹಿಮಾಲಯ’ದೆದುರಿನ ಜ್ಞಾನೋದಯ!: ಪೂರ್ಣೇಶ್‌ ಮತ್ತಾವರ ಸರಣಿ

‘ಹಿಮಾಲಯ’ದೆದುರಿನ ಜ್ಞಾನೋದಯ!: ಪೂರ್ಣೇಶ್‌ ಮತ್ತಾವರ ಸರಣಿ

ಈ ನಮ್ಮ ಶೋಕತಪ್ತತೆಯು ಸಹಜವಾಗಿಯೇ ಕಡಿಮೆಯಾಗುತ್ತಿತ್ತೇನೋ. ಆದರೆ, ಹಾಗಾಗಲು ಬಿಡದಂತ ತೀರ್ಮಾನವನ್ನು ನಮ್ಮ ಪ್ರಾಂಶುಪಾಲರೇ ತೆಗೆದುಕೊಂಡಿದ್ದರು. ನಮಗೆ ಅನುಮತಿಯನ್ನು ನಿರಾಕರಿಸಿದವರು ಹನ್ನೊಂದು ಹನ್ನೆರಡನೇ ತರಗತಿಯ ಹುಡುಗರಿಗಾದರೋ ತಮ್ಮ ನಿರಾಕರಣೆಯನ್ನು ಪ್ರದರ್ಶಿಸಿರಲಿಲ್ಲ. ಅದರ ಫಲವಾಗಿ ಅವರು ರಾತ್ರಿ ಊಟದ ನಂತರ ಗುರು ವೃಂದದವರೊಡನೆ ಮತ್ತದೇ ಗ್ರೀನ್ ರೂಮ್ ಸೇರಿ, ಕಿಟಕಿ ಬಾಗಿಲುಗಳನ್ನೆಲ್ಲಾ ಹಾಕಿ, ಸಂದುಗೊಂದುಗಳಿಗೆಲ್ಲಾ ಮುಚ್ಚಿಕೆ ಹಾಕಿಕೊಂಡು ವಿಶ್ವ ಸುಂದರಿಯರ ದರ್ಶನ ಪಡೆಯತೊಡಗಿದ್ದರು.
ಪೂರ್ಣೇಶ್‌ ಮತ್ತಾವರ ಬರೆಯುವ “ನವೋದಯವೆಂಬ ನೌಕೆಯಲ್ಲಿ…” ಸರಣಿ

read more
ಯುದ್ಧದ ಬಿಸಿ ನೀಗಿಕೊಂಡು ತಂಪಗಾಗಬೇಕಿದೆ ರಷ್ಯಾ: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಸರಣಿ

ಯುದ್ಧದ ಬಿಸಿ ನೀಗಿಕೊಂಡು ತಂಪಗಾಗಬೇಕಿದೆ ರಷ್ಯಾ: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಸರಣಿ

ಕಮ್ಯುನಿಸ್ಟ್‌ ಆಳ್ವಿಕೆಯ ಸಮಯದಲ್ಲಿ ರಷ್ಯನ್ ಬರಹಗಾರರು ನಿರ್ಬಂಧಕ್ಕೆ ಒಳಗಾದರು. ಮುಕ್ತವಾಗಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಲಾಗದ ದುಃಸ್ಥಿತಿಗೆ ಸಿಲುಕಿಕೊಂಡರು. ಮರೀನಾ ಟ್ವೆಟೇವಾ ಅವರು ರಷ್ಯಾದ ಹೊರಗಡೆ ಇದ್ದುಕೊಂಡೇ ಕಾವ್ಯರಚನೆ ಮಾಡಿದ್ದು, ರಷ್ಯಾಕ್ಕೆ ಮರಳಿ ಬಂದು ಎರಡೇ ವರ್ಷಗಳಲ್ಲಿ ಆತ್ಮಹತ್ಯೆ ಮಾಡಿಕೊಂಡದ್ದು ಇವೆಲ್ಲಾ ಸಾಹಿತ್ಯ ಕ್ಷೇತ್ರದ ಮೇಲೆ ಕಮ್ಯುನಿಸ್ಟ್‌ ಪ್ರಾಬಲ್ಯವನ್ನು ಸೂಚಿಸುತ್ತವೆ. ಸ್ಟಾಲಿನ್ ಮರಣದ ಬಳಿಕ ರಷ್ಯನ್ ಸಾಹಿತ್ಯದಲ್ಲಿ ಹೊಸ ಬಗೆಯ ಬರಹಗಳು ಮತ್ತು ಪ್ರವೃತ್ತಿಗಳು ಕಾಣಿಸಿಕೊಂಡವು.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿ

read more
ಪದಗಳಷ್ಟೇ ಅಲ್ಲದ ಕವಿತೆಗಳು: ಎಸ್. ಜಯಶ್ರೀನಿವಾಸ ರಾವ್ ಸರಣಿ

ಪದಗಳಷ್ಟೇ ಅಲ್ಲದ ಕವಿತೆಗಳು: ಎಸ್. ಜಯಶ್ರೀನಿವಾಸ ರಾವ್ ಸರಣಿ

‘ಒಂದು ಕವಿತೆ ಕೆಲಸ ಮಾಡುತ್ತಿದೆಯೆ ಎಂದು ತಿಳಿಯುವುದು ಹೇಗೆ’ ಎಂಬ ಕವಿತೆಯಲ್ಲಿ, ಇನ್ನೊಬ್ಬರ ಕವಿತೆ ಓದುವಿಕೆಯ ಮೌನವನ್ನು ಆಲಿಸುವ ಮೂಲಕ ಮಾತ್ರ ನಿಮ್ಮ ಮುಂದೆ ಇರುವ ಕವಿತೆ ನಿಜವಾಗಿಯೂ ಯಶಸ್ವಿಯಾಗುತ್ತದೆ. ಅಂತೆಯೇ ‘Harmony’ ಎಂಬ ಕವಿತೆಯಲ್ಲಿ “ವಸ್ತುಗಳು” ಮತ್ತು “ಪದಗಳಲ್ಲದವು” ಪ್ರಾಸದ ಸ್ಥಿತಿಗೆ ಮರಳಬೇಕು ಎಂದು ಸೂಚಿಸುತ್ತದೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿ

read more
ವಿವಿದಾರ್ಥದಿ ಪದನಾರಿ: ಸುಮಾವೀಣಾ ಸರಣಿ

ವಿವಿದಾರ್ಥದಿ ಪದನಾರಿ: ಸುಮಾವೀಣಾ ಸರಣಿ

ಏನೋ ಹುಷಾರಿಲ್ವೇನೋ ಎನ್ನುತ್ತಾ… ಟೈಂ ಆಗ್ತಾ ಇದೆ ಎಷ್ಟು ಸಾಧ್ಯನೋ ಅಷ್ಟು ಬರಿಯಮ್ಮ! ಬರಿ! ಎನ್ನುತ್ತಲೇ ಇದ್ದೆ ಅವಳು ‘ನೋ’ ‘ನೋ’ ಎನ್ನುವಂತೆ ತಲೆ ಆಡಿಸಿದಳು ಕಡೆಗೆ ಅವಳೆ “ಏನೂ ಪ್ರಿಪೇರ್ ಆಗಿಲ್ಲ ಮೇಡಮ್ ಹೇಗ್ ಬರೀಲಿ?” ಎಂದಾಗಂತೂ ಈಕೆ ಎಷ್ಟು ಸಾಧ್ಯನೋ ಅಷ್ಟು ಬರಿಯಮ್ಮ ಎಂದದ್ದಕ್ಕೆ ಸಾಧ್ಯ… ನೋ! ನೋ ಸಾಧ್ಯ …! ಎಂದು ತಲೆ ಆಡಿಸಿರುವಳಲ್ಲ… ನಿಜ!
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ನಾಲ್ಕನೆಯ ಬರಹ

read more
ಮನಸ್ಸಿನ ಮಾರ್ಗದಲ್ಲೊಂದು ವೈಚಾರಿಕ ರಾಗಾಲಾಪಗಳು: ರಾಮ್ ಪ್ರಕಾಶ್ ರೈ ಕೆ ಸರಣಿ

ಮನಸ್ಸಿನ ಮಾರ್ಗದಲ್ಲೊಂದು ವೈಚಾರಿಕ ರಾಗಾಲಾಪಗಳು: ರಾಮ್ ಪ್ರಕಾಶ್ ರೈ ಕೆ ಸರಣಿ

ಚಿತ್ರದ ಕಟ್ಟುವಿಕೆ ವಿಶೇಷವೆನಿಸಿಕೊಳ್ಳುವುದು ಪಿ. ವಾಸು ಆಯ್ದುಕೊಳ್ಳುವ ಕಥಾವಸ್ತು ಹಾಗೂ ಅದರ ಮೌಲ್ಯದ ಕಾರಣಕ್ಕೆ. ಅವರ ಆಪ್ತಮಿತ್ರ, ಆಪ್ತ ರಕ್ಷಕ, ಶಿವಲಿಂಗ ಹಾಗೂ ಆಯುಷ್ಮಾನ್‌ಭವ ಚಿತ್ರಗಳೆಲ್ಲವೋ ಮನೋ ವೈಜ್ಞಾನಿಕ ಅಂಶಗಳನ್ನು ಆಧರಿಸಿದವೇ ಆಗಿವೆ ಹಾಗೂ ಸಂಗೀತದ ಬಳಕೆಯೂ ಅತೀ ವಿಶೇಷವಾಗಿರುವಂಥದ್ದು. ಇಲ್ಲಿ ಚಿತ್ರದ ಅಭೂತ ಪೂರ್ವ ವಿಜಯಕ್ಕೆ ಇನ್ನೊಂದು ಕಾರಣವೆಂದರೆ ತಾರಾಗಣ. ವಿಜಯ್ ಪಾತ್ರದಲ್ಲಿ ಸಾಹಸಸಿಂಹ ವಿಷ್ಣುವರ್ಧನ್ ಅಮೋಘ ಅಭಿವ್ಯಕ್ತಿ..
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿಯಲ್ಲಿ ಪಿ. ವಾಸು ನಿರ್ದೇಶನದ ‘ಆಪ್ತಮಿತ್ರ’ ಸಿನಿಮಾದ ವಿಶ್ಲೇಷಣೆ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ