ಕಣಗಾಲ ಮತ್ತು ಕಳ್ಳರು: ಎಸ್. ಗಂಗಾಧರಯ್ಯ ಅನುಭವ ಕಥನ
ಮೂರ್ತಿ ಚಕ್ಕನೆ ಎದ್ದವನೇ ನನ್ನನ್ನು `ಲೇ ಆ ಕಡಿಂದ ಓಡಿ ಬಾರೋ’ ಅಂತ ನನಗೆ ಕೂಗಿ ಹೇಳುತ್ತಾ ಕಳ್ಳನ ಹಿಂದೆ ಬಿದ್ದ. ನಾನು ಕೂತಲ್ಲಿಂದ ಬೇಗನೇ ಮೇಲೆದ್ದರೂ ಇದು ನಾನು ನೋಡಿದ್ದ ಮೊದಲ ಕಳ್ಳ ಹಾಗೂ ಕಳ್ಳತನವಾದ್ದರಿಂದ ಒಂಚೂರು ಗಲಿಬಿಲಿಗೊಂಡು ಅವರತ್ತ ತಕ್ಷಣ ಓಡಲಾಗಲಿಲ್ಲ. ಅವರಿಬ್ಬರೂ ಆಗಲೇ ನಮ್ಮ ಹೊಲವನ್ನು ದಾಟಿದ್ದರು. ಪಕ್ಕದ ಹೊಲದಲ್ಲಿ ಮೂರ್ತಿಯ ಕೂಗು ಕೇಳಿಸುತ್ತಿತ್ತು. ನಾನು ಉಸುರುಯ್ದುಕೊಂಡು ನಮ್ಮ ಹೊಲದ ಬದಿಗೆ ಬರುವಷ್ಟರಲ್ಲಿ ಮೂರ್ತಿ ಹಿಂದಿರುಗಿ ಬರುತ್ತಿದ್ದ. `
ಎಸ್. ಗಂಗಾಧರಯ್ಯ ಅನುಭವ ಕಥನ “ಕಾಡ ಕಕ್ಕೆ”ಯ ಎಂಟನೆಯ ಕಂತು
“ಹಾಸ್ಯೋತ್ಸವ” ಹೇಗಾಯ್ತು ಗೊತ್ತ?: ಎಚ್. ಗೋಪಾಲಕೃಷ್ಣ ಸರಣಿ
ನಮ್ಮ ಇಡೀ ಜೀವಮಾನದ ಮತ್ತು ಮುಂದಿನ ಹತ್ತೋ ಹನ್ನೆರಡು ಜನ್ಮದ ದುಡಿತ ಅದಕ್ಕೆ ಹಾಕಬೇಕು ಅನಿಸ್ತಾ? ಕೈನಲ್ಲಿ ಬಿಡಿಕಾಸು ಅಥವಾ ಒಂದೇ ಒಂದು ನಯಾಪೈಸೆ, ಇಲ್ಲದಿರುವಾಗ ಇಂತಹ ತಿಕ್ಕಲು ತಿಕ್ಕಲು ಐಡಿಯಾಗಳು ಮನಸಿಗೆ ಬರುತವೆ ಅಂತ ಒಬ್ಬರು ಗೊಣಗಿದರಾ….? ಕೈತುಂಬ ಕಾಸಿದ್ದು ಯಾವದಾದರೂ ಮಂತ್ರಿ ಪಂತ್ರಿನ ಇನ್ವಾಲ್ವ್ ಮಾಡಿದ್ದರೆ ಅಂವ ಲಾರಿಗಳಲ್ಲಿ ತುಂಬಿ ಜನರನ್ನ ಸಪ್ಲೈ ಮಾಡಬಹುದು! ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೯೦ನೇ ಬರಹ ನಿಮ್ಮ ಓದಿಗೆ
ಕೊಳದ ಬಕ: ಡಾ. ಎಸ್.ವಿ. ನರಸಿಂಹನ್ ಸರಣಿ
ಕೊಳದ ಬಕಗಳು ಕೊಳ, ಕೆರೆ, ಗದ್ದೆ, ಕೆರೆ-ಕಾಲುವೆ, ಮುಂತಾದ ಪ್ರದೇಶಗಳಲ್ಲಿ ಹಾಗೂ ಜೊಂಡು-ಕೆಸರು ಇರುವೆಡೆಗಳಲ್ಲಿ, ಒಂಟಿಯಾಗಿ, ಅಥವಾ ತಮ್ಮ ಕುಟುಂಬಕ್ಕೆ ಸೇರಿದ ಇತರ ಹಕ್ಕಿಗಳೊಂದಿಗೆ ಗುಂಪಿನಲ್ಲಿ, ಬೇಟೆಯರಸುವುದನ್ನು ಕಾಣಬಹುದು. ಒಂದಿಷ್ಟೂ ಅಲುಗಾಡದೆ, ಒಂಟಿಕಾಲಿನ ಮೇಲೆ ನಿಂತು, ತದೇಕಚಿತ್ತದಿಂದ ಬೇಟೆಯಾಡುವ ಕೊಳದ ಬಕ, ಕೆಲವು ಸಾರಿ ಕೊಕ್ಕಿನಲ್ಲಿ ಸಣ್ಣ ಎರೆಹುಳವನ್ನು ಹಿಡಿದುಕೊಂಡು ಅದನ್ನು ನೀರಿನಲ್ಲಿ ಹಾಕಿ, ಸುತ್ತ ಮುತ್ತಲ ಮೀನುಗಳನ್ನು ಆಕರ್ಷಿಸುವ ಪರಿ ನಿಜಕ್ಕೂ ಕುತೂಹಲಕಾರಿ!
ಡಾ. ಎಸ್.ವಿ. ನರಸಿಂಹನ್ ಬರೆಯುವ “ಹಕ್ಕಿಪಕ್ಷಿ ಚಿತ್ರ ಸಂಪುಟ” ಸರಣಿಯಲ್ಲಿ “ಕೊಳದ ಬಕ” ಹಕ್ಕಿಯ ಕುರಿತ ಬರಹ ಇಲ್ಲಿದೆ
ವಾರಾನ್ನದ ಅರೆ ಆತ್ಮಚರಿತ್ರೆ: ಕೆ. ಸತ್ಯನಾರಾಯಣ ಕಥಾ ಸರಣಿ
ಅರ್ಧ ಮನೆಗಳಲ್ಲಿ ವರ್ಷಕ್ಕೆ ಒಂದು ದಿನವೂ ಉಪ್ಪಿನಕಾಯಿ ಹಾಕ್ತಾ ಇರಲಿಲ್ಲ. ಆಯ್ತು ತಿಂಡಿ-ತೀರ್ಥ ಸಿಗುತ್ತಲ್ಲ ಅಂತ ಅಂದುಕೊಂಡರೆ, ವಿಪರೀತ ಪಾತ್ರೆ, ಪಡಗ, ನೆಂಟರಿಷ್ಟರ ಊಟದ ಎಲೆಗಳು. ಇಂತಹ ದಿನಗಳಲ್ಲಿ ರಾತ್ರಿ ಕೂಡ ಊಟ ಮಾಡಿಕೊಂಡು ಹೋಗು ಎಂದರೂ ಭಯವೇ! ಊಟ ಸಿಗುತ್ತೆ ಅಂತ ಉಳಿದುಕೊಂಡರೆ, ಮತ್ತೆ ಪಾತ್ರೆ, ಪಗಡಿ, ಎಂಜಲು, ಗೋಮ. ಮಕ್ಕಳೇ ಧೈರ್ಯ ಮಾಡಿ ಊಟ ಏನೂ ಬೇಡ, ಮಧ್ಯಾಹ್ನ ತಿಂದದ್ದೇ ಇನ್ನೂ ಅರಗಿಲ್ಲ ಅಂತ ಅರ್ಧ ಸುಳ್ಳು ಹೇಳೋರು.
ಕೆ. ಸತ್ಯನಾರಾಯಣ ಬರೆಯುವ ಕಥಾಸರಣಿ “ರೂಪಕಗಳಿಗೆ ಕೊರತೆಯಿಲ್ಲ”
ಮಿಂಚುಳಗಳು ಮತ್ತು ಕಲ್ಬಾವಿ: ಎಸ್. ಗಂಗಾಧರಯ್ಯ ಅನುಭವ ಕಥನ
ಇವರು ಯಾರೊಬ್ಬರನ್ನು ಬೈದದ್ದಾಗಲಿ, ಯಾರ ಮೇಲೆ ಆಗಲಿ ಸಿಟ್ಟು ಮಾಡಿಕೊಂಡಿದ್ದನ್ನಾಗಲಿ ನಾನು ಯಾವತ್ತೂ ಕಂಡಿರಲಿಲ್ಲ. ಚಂದದ ನಗು ಹಾಗೂ ಮೌನ ಇವರ ಬಲು ದೊಡ್ಡ ಶಕ್ತಿಗಳಾಗಿದ್ದವು. ಇನ್ನೊಬ್ಬರಿಗೆ ಭಾರವಾಗದಂತೆ ಬದುಕಬೇಕು ಅಂತ ಯಾವಾಗಲೂ ಹೇಳುತ್ತಿದ್ದ ಗೋವಿಂದಪ್ಪ ತನ್ನ ಕೈಲಾದ ಕೆಲಸವನ್ನು ಮಾಡುತ್ತಿದ್ದರು. ಅಂತೆಯೇ ಯಾರಾದರೂ ಯಾವುದಾದರೂ ಕೆಲಸವನ್ನು ಹೇಳಿದರೆ ಒಂಚೂರೂ ಬೇಸರವಿಲ್ಲದೆ ಪಾಲಿಸುತ್ತಿದ್ದರು. ಒಂಥರಾ ನಿರುಮ್ಮಳ ಜೀವಿ. ಆದರೆ ಇಂಥ ಗೋವಿಂದಪ್ಪ ನಿದ್ದೆಗೆ ಜಾರಿದಾಗ ಮಾತ್ರ ಸಹಿಸಲಸಾಧ್ಯದ ವ್ಯಕ್ತಿಯಾಗಿಬಿಡುತ್ತಿದ್ದರು. ಏಕೆಂದರೆ ಇವರು ಹೊಡೆಯುತ್ತಿದ್ದ ಗೊರಕೆಯ ಸದ್ದು ಅವರು ಮಲಗಿದ್ದ ಮನೆಯವರಿಗೆ ಮಾತ್ರವಲ್ಲ ಸುತ್ತಲ ಯಾವ ಜೀವಿಯನ್ನೂ ಬಡಪಟ್ಟಿಗೆ ಬಿಡುತ್ತಿರಲಿಲ್ಲ.
ಎಸ್. ಗಂಗಾಧರಯ್ಯ ಅನುಭವ ಕಥನ “ಕಾಡ ಕಕ್ಕೆ”
ಬಾಸ್ಗಳು ಹೀಗಿದ್ರೆ ಎಷ್ಟು ಚೆಂದ ಅಲ್ವಾ??: ಬಸವನಗೌಡ ಹೆಬ್ಬಳಗೆರೆ ಸರಣಿ
ಒಮ್ಮೆ ಹೀಗೆ ಆಯ್ತಂತೆ: ಒಮ್ಮೆ ಒಂದು ಕಚೇರಿಯವರ ಬಳಿ ದೇವರು ಪ್ರತ್ಯಕ್ಷನಾಗಿ ‘ನಿಮಗೇನು ವರ ಬೇಕು’ ಎಂದು ಕೇಳಿದನಂತೆ. ಆಗ ಬಾಸಿಗೂ ಮೊದಲೇ ಅವರ ಸಿಬ್ಬಂದಿಯೊಬ್ಬನು ‘ನಾನು ಅಮೇರಿಕಾಗೆ ಹೋಗುವ ವರ ನೀಡು’ ಎಂದನಂತೆ. ತಕ್ಷಣ ದೇವರು ‘ತಥಾಸ್ತು’ ಎಂದನಂತೆ. ಮತ್ತೊಬ್ಬನೂ ಸಹ ‘ನಾನು ಲಂಡನ್ಗೆ ಹೋಗುವಂತೆ ಮಾಡು’ ಎಂದಾಗ ದೇವರು ಹಾಗೆ ಮಾಡಿದನಂತೆ. ಆಗ ಬಾಸಿನ ಸರದಿಯಲ್ಲಿ ದೇವರ ವರ ಕೇಳುವಾಗ ಅವನಿಗಿಂತ ಮುಂಚೆ ಅವರ ನೌಕರರು ವರ ಕೇಳಿದ್ದಕ್ಕೆ ಸಿಟ್ಟು ಬಂದು ಅವರಿಬ್ಬರೂ ಕಚೇರಿಗೆ ವಾಪಸ್ಸು ಬರುವ ಹಾಗೆ ಮಾಡು ಎಂದು ಕೇಳಿದನಂತೆ!!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ
ಬದುಕಿನ ನಾಟಕ ನೋಡಿ…: ಜುಲೇಖಾ ಬೇಗಂ ಜೀವನ ವೃತ್ತಾಂತ
ಈ ಗಂಡಾಂತರವೊಂದು ಕಳೆಯುತ್ತಿದ್ದಂತೆ ನನ್ನನ್ನು ಬೇರೆ ಕಂಪೆನಿಗೆ ಸದ್ದಿಲ್ಲದೆ ಕರೆದೊಯ್ದಿದ್ದರು. ಲಕ್ಷ್ಮೀಬಾಯಿಯವರ ಗಂಡ ವೆಂಕಟ ರೆಡ್ಡಿ ಅವರ ಜೊತೆ ನಂಜಪ್ಪ, ಜಕ್ಲಿ ಈಶ್ವರ ಎಲ್ಲ ಸೇರಿಕೊಂಡು ಬೇರೆ ಕಂಪೆನಿಗೆ ಹೋಗೋಣ ಎಂದು ಸೂರ್ಯಬಾನುಗೆ ಕರೆದುಕೊಂಡು ಹೋದರು. ಹೋದದ್ದೇ, ಇನ್ನು ಐದೇ ದಿನಗಳಲ್ಲಿ ನಾಟಕ ಶುರು ಮಾಡುತ್ತೇವೆ ಎಂದರು. ಇನ್ನೂ ಐದು ದಿನಗಳು! ಹಾಗಿದ್ದರೆ ಊರಿಗೆ ಹೋಗಿ ಬರಬಹುದಲ್ಲಾ ಎನಿಸಿತು. ತಕ್ಷಣ ಮಾಲೀಕರಲ್ಲಿ ಹೋಗಿ ಕೇಳಿದೆ. ಊರಿಗೆ ಹೋಗಿಬರಬೇಕಿದೆ. ನಾಟಕ ಶುರುವಾಗುವುದರೊಳಗೆ ಇಲ್ಲಿಗೆ ಬಂದು ಸೇರುವಂತೆ ನೋಡಿಕೊಳ್ಳುವ ಹೊಣೆ ನನ್ನದು.
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ”
ಜೇನು ಪೊಟರೆಯ ಹಾವು, ಕ್ವಾಕ್ ಡಾಕ್ಟರ್ ಮತ್ತವಳ ಹಾವು ಹಿಡಿವ ಗಂಡ: ಎಸ್. ಗಂಗಾಧರಯ್ಯ ಅನುಭವ ಕಥನ
ಅಲ್ಲಿನ ಪರಿಸ್ಥಿಯನ್ನು ಅವಲೋಕಿಸಿ ನಾನು ಹಾವು ಹಿಡಿಯುವಾಗ ಮನೆಯೊಳಕ್ಕೆ ಯಾರೂ ಬರಬಾರದೆಂದೂ ಬಾಗಿಲು ಹಾಕಿಕೊಂಡಿದ್ದಾನೆ. ಅದಾದ ಅರ್ಧ ಗಂಟೆಗೆ ಕೈಯಲ್ಲಿ ಮಾರುದ್ದದ ನಾಗರ ಹಾವನ್ನು ಹಿಡಿದು ಹೊರ ಬಂದು ನೆರೆದಿದ್ದ ಜನರಿಗೆಲ್ಲಾ ಹಾವನ್ನು ತೋರಿಸಿ ಶಬ್ಬಾಶ್ಗಿರಿಯನ್ನು ಪಡೆದು ಐನೂರು ರೂಪಾಯಿಯನ್ನೂ ನಾಲ್ಕೈದು ಸೇರು ರಾಗಿಯನ್ನೂ ಇಸುಕಂಡು ಬಂದಿದ್ದಾನೆ. ನಿಟ್ಟುಸಿರುಬಿಟ್ಟ ಮನೆಯವರು ಬಾಣದ ದೇವರ ಹಟ್ಟಿಯ ಜುಂಜಪ್ಪ ದೇವರಿಗೆ ಹರಕೆ ಕಟ್ಟಿಕೊಂಡು ಮನೆಯೊಳಕ್ಕೆ ಹೋಗಿದ್ದಾರೆ.
ಎಸ್. ಗಂಗಾಧರಯ್ಯ ಅನುಭವ ಕಥನ “ಕಾಡ ಕಕ್ಕೆ”ಯ ಆರನೆಯ ಕಂತು
ಕಾರ್ಯಕ್ರಮದ ಲೆಕ್ಕಾಚಾರಗಳು: ಎಚ್. ಗೋಪಾಲಕೃಷ್ಣ ಸರಣಿ
ಇದೇ ತರಹದ ಅನುಭವ ಎರಡು ಮೂರು ಸಲ ಬೇರೆ ಬೇರೆ ಸಂದರ್ಭಗಳಲ್ಲಿ ಆಯಿತು. ಜತೆಯಲ್ಲಿದ್ದವರು ಹುರಿದುoಬಿಸಿ ನನ್ನ ಹಕ್ಕುಗಳ ರಕ್ಷಣೆಗಾಗಿ ಜಗಳಕ್ಕೆ ಪ್ರೆರೇಪಿಸಿದ್ದರು. ಜಗಳ ಸಹ ಆಡಿದ್ದೆ! ಜಗಳದ ಎಫೆಕ್ಟ್ ಬೇರೆ ರೀತಿ ಆಯಿತು. ಆಗಿದ್ದು ಬೇರೆ ರೀತಿ ಅಂದರೆ ಕಾಸು ಗೀಸು ಹೆಸರು ಬರುವಂತಹ ಸರ್ಕಾರದ ಪ್ರಾಯೋಜಿತ ಕೆಲಸಗಳಿಂದ ದೂರ ಆದೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ










