ಸುಂದರ ಕಾಡಿನ ರೋಚಕ ಕಥೆಗಳು-5: ರೂಪಾ ರವೀಂದ್ರ ಜೋಶಿ ಸರಣಿ
ನಮ್ಮಲ್ಲಿ ತಂಪು ಜಾಸ್ತಿಯಾದ್ದರಿಂದ ಹಾವುಗಳು ಹೆಚ್ಚಾಗಿ ಇರಲಿಲ್ಲವೆನ್ನಿಸುತ್ತದೆ. ಒಂದು ನಿರುಪದ್ರವಿ ಹಾವಿನ ಬಗ್ಗೆ ಹೇಳಬೇಕು ಅದೆಂದರೆ ಹಸಿರು ಹಾವು. ಹಸಿರು ದಂಟಿಗೆ ಸುತ್ತಿಕೊಂಡು, ಸಪೂರ ಕೋಲಿನಂತೇ ಡೊಂಕಾಗಿ ನಿಂತು ಹುಳ ಹುಪ್ಪಡಿ ಹಿಡಿಯುವ ಈ ಹಾವನ್ನು ಗುರುತಿಸುವುದೇ ಕಷ್ಟ. ನಾವೇ ಅದೆಷ್ಟೋ ಸಲ, ಮುಳ್ಳಣ್ಣು ಕೊಯಿದು ಕೊಳ್ಳುವಾಗಲೋ, ಜಾಜಿ ಹೂ ಕೊಯ್ಯುವಾಗಲೋ ಟೊಂಗೆಯ ಜೊತೆಗೇ ಎಳೆದು ಬಿಡುತ್ತಿದ್ದೆವು. ಆಗ ಅದು ಗಾಬರಿಬಿದ್ದು, ಸರಕ್ಕನೆ ಕೆಳಗಿಳಿದು ಓಡುತ್ತಿತ್ತು. ಅದು ಹೋಗಿ ಎಷ್ಟು ಹೊತ್ತಿನ ತನಕ, ನಾವು ಜೀವ ಬಾಯಿಗೆ ಬಂದವರಂತೇ ಭಯದಿಂದ ಇಷ್ಟಗಲ ಕಣ್ಣುಮಾಡಿ ಮಾತು ಮರೆತು ನಿಂತಿರುತ್ತಿದ್ದೆವು!!
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿ
ಸುವರ್ಣ ಚೆಳ್ಳೂರು ಹೊಸ ಸರಣಿ “ಆಕಿ” ಇಂದಿನಿಂದ
ಆ ಕತಿ ಮತ್ತೆ ಆ ಬಾಯೊಳಗೆ ಮುರಿದ ಕಾಲಿಟ್ಟ ಚಿತ್ರ ನನ್ನೊಳಾಗ ಒಂದಷ್ಟು ಪ್ರಶ್ನೆಗಳನ್ನ ಹುಟ್ಟಿಸಿತು. ಅದನ್ನೆ ಯೋಚಿಸ್ತಿರುವಾಗ ಊರೊಳಾಗ ದೇವಿ ಮೆರವಣಿಗೆ ಬಂದಿತ್ತು, ನೋಡೊಕಂತ ಹೋದಾಗ ಹಳೆ ಗೆಳತ್ಯಾರೆಲ್ಲ ಸಿಕ್ಕಿದ್ದು, ಮನಿಯೊಳಾಗ ಕೆಲಸ ಮಾಡಿ ಅಲ್ಲೆ ಇರ್ತಿದ್ದ ಹೆಣ್ಮಕ್ಕಳು ಜಾತ್ರಿ ನೆಪದಾಗ ಹೊರಾಗ ಬಂದು ಒಬ್ರನ್ನೊಬ್ರು ಖುಷಿಯಿಂದ ಮಾತಾಡಿಸ್ತಾ ನಿಂತಿದ್ದು, ಊರಿನ ಹಾದಿಯೊಳಾಗ ಜಾತಿ ಜನಾಂಗ ಎಲ್ಲಾ ಮರತು ಎಲ್ಲಾರೂ ಒಟ್ಟಾಗಿ ಸೇರಿ ಒಂದೆ ಮನ್ಯಾರೇನೊ ಅನ್ನುವಂಗ ಜಾತ್ರಿ ಕೆಲಸಾನ ಎಲ್ಲಾರೂ ಸೇರಿ ಹಂಚಿಗ್ಯಂಡು ಮಾಡಿದ್ದು ನೋಡಿ, ಎಲ್ಲಾರೂ ಒಟ್ಟಿಗೆ ಸೇರಾಕ ನಾವೆಲ್ಲಾರೂ ಒಂದSS ಅನ್ನೊದು ಮನದಟ್ಟು ಮಾಡಿಕ್ಯಳಾಕ ಜಾತ್ರಿ ಒಂದು ನೆಪ… ಅದ್ರಲ್ಲಿರೊ ಆಕಿ ಕೂಡ!
ಸುವರ್ಣ ಚೆಳ್ಳೂರು ಹೊಸ ಸರಣಿ “ಆಕಿ”
ಡಾ. ಎಸ್.ವಿ. ನರಸಿಂಹನ್ ಹೊಸ ಸರಣಿ “ಹಕ್ಕಿಪಕ್ಷಿ ಚಿತ್ರ ಸಂಪುಟ” ಇಂದಿನಿಂದ
ಸ್ವಭಾವತಃ ಚಲನಾಶಕ್ತಿಯಿಲ್ಲದ ಮರ-ಗಿಡ ಸಸ್ಯಗಳು ತಮ್ಮ ಸಂತಾನೋತ್ಪತ್ತಿಗಾಗಿ ಅವಶ್ಯವಿರುವ ಬೀಜಪ್ರಸರಣ ಕಾರ್ಯಕ್ಕಾಗಿ ಇತರ ಜೀವಿಗಳನ್ನೇ ಅವಲಂಬಿಸುವುದು ಅನಿವಾರ್ಯವಾಗಿದೆ. ಇದಕ್ಕಾಗಿ ವಿವಿಧ ಬಣ್ಣಗಳಿಂದ ಕೂಡಿದ, ರುಚಿಕರವಾದ, ಮತ್ತು ಇವೆಲ್ಲಕಿಂತ ಮಿಗಿಲಾಗಿ ಎಲ್ಲ ಪೌಷ್ಟಿಕ ಅಂಶಗಳಿಂದಲೂ ಕೂಡಿದ ಸುಮಧುರ ಹಣ್ಣುಗಳ ಮೂಲಕ ಆಕರ್ಷಿಸುತ್ತವೆ. ಈ ಕಾರ್ಯದಲ್ಲಿ ಕೂಡ ಉಳಿದ ಜೀವಿಗಳಿಗಿಂತ ಹಕ್ಕಿಗಳ ಪಾತ್ರ ಗಮನೀಯ. ತಿಂದ ಹಣ್ಣಿನ ಬೀಜವನ್ನು ದೂರದೂರದೆಡೆಗಳಲ್ಲಿ ಉಗಿಯುವುದು ಒಂದು ರೀತಿಯಾದರೆ, ತಿಂದ ಹಣ್ಣಿನ ಬೀಜ ಹಕ್ಕಿಯ ಉದರ ಸೇರಿ, ಹಿಕ್ಕೆಯ ಮೂಲಕವೂ ಹರಡಬಲ್ಲದು.
ಡಾ. ಎಸ್.ವಿ. ನರಸಿಂಹನ್ ಹೊಸ ಸರಣಿ “ಹಕ್ಕಿಪಕ್ಷಿ ಚಿತ್ರ ಸಂಪುಟ” ಇಂದಿನಿಂದ ಹದಿನೈದು ದಿನಗಳಿಗೊಮ್ಮೆ
ಗೋಹರ್ಬಾಯಿ ಕತೆ ಹೇಳಿದ ‘ಪ್ರತಿಗಂಧರ್ವʼ: ಚಿತ್ರಾ ವೆಂಕಟರಾಜು ಸರಣಿ
‘ಪ್ರತಿಗಂಧರ್ವʼ ದಂತಹ ನಾಟಕದ ಅಭಿನಯ ಬಹಳ ಸವಾಲಿನದು. ಏಕೆಂದರೆ ಹೆಚ್ಚಿನ ಪಾತ್ರಗಳು ಕಲಾವಿದರದ್ದು. ಗೋಹರ್ ಬಾಯಿ ಪಾತ್ರ ಮಾಡುವ ಕಲಾವಿದೆ, ನಾಟಕದ ಪಾತ್ರ ಮಾಡುವುದರ ಜತೆಗೆ ನಾಟಕದೊಳಗಿರುವ ರಂಗಸ್ಥಳದಲ್ಲಿ ಅಭಿನಯ ಮಾಡಬೇಕಾಗುತ್ತದೆ. ಅಂದರೆ ನಾವು ನೋಡುತ್ತಿರುವ ಪಾತ್ರ ಗೋಹರ್ ಬಾಯಿ. ಗೋಹರ್ ಬಾಯಿ ನಾಟಕದೊಳಗೆ ಮಾಡಿದ ಪಾತ್ರ ಗೂಢಾಚಾರಿಣಿಯದು. ಗೂಢಾಚಾರಿಣಿಯ ಪಾತ್ರ ಮಾಡಿದ ಗೋಹರ್ ಬಾಯಿ ಪಾತ್ರಧಾರಿ, ಅದು ಮುಗಿದ ಮೇಲೆ ಮತ್ತೆ ಗೋಹರ್ ಆಗಬೇಕು. ಆಗ ಅಲ್ಲಿನ ಅಭಿನಯಗಳೆರಡೂ ಬೇರೆಯಾಗಬೇಕಾಗುತ್ತದೆ.
ಚಿತ್ರಾ ವೆಂಕಟರಾಜು ಬರೆಯುವ “ಚಿತ್ತು-ಕಾಟು” ಸರಣಿ
ಪೋಸ್ಟರ್ ಬಳಿಯೋ ಕೆಲಸದಾಗಿನ ಕೆಲ ಅನುಭವಗಳು… ಬಸವನಗೌಡ ಹೆಬ್ಬಳಗೆರೆ ಸರಣಿ
ನಾವು ಪೋಸ್ಟರನ್ನು ಅಂಟಿಸುತ್ತಾ ಲಕ್ಷ್ಮೀ ಮೆಕ್ಕೆಜೋಳದ ಬೀಜಗಳ ಬಗ್ಗೆ ಪ್ರಚಾರ ಮಾಡುತ್ತಾ ಹೋಗುತ್ತಿದ್ದಾಗ ಒಂದು ಹಳ್ಳಿಯವರು ನಮ್ಮನ್ನು ಸುತ್ತುವರೆದು “ಕಳೆದ ವರ್ಷ ಇದೇ ಬೀಜಗಳನ್ನು ಬಿತ್ತಿದ್ದೆವು. ನಮಗೆ ಬೆಳೆ ಲಾಸ್ ಆಗಿದೆ. ಅವು ಸರಿಯಾಗಿ ಹುಟ್ಟಿಲ್ಲ. ಆದ್ದರಿಂದ ಆ ನಷ್ಟವನ್ನು ನೀವೇ ಭರಿಸಬೇಕು” ಎಂದು ನಮ್ಮನ್ನು ಕೇಳಲು ಶುರು ಮಾಡಿದರು. ಅದೇನೋ ಹೇಳ್ತಾರಲ್ಲಾ. ‘ಮದುವೆ ಆಗೋ ತಿಮ್ಮ ಅಂದ್ರೆ ನೀನೇ ನನ್ನ ಹೆಂಡ್ತಿ ಆಗೋ ಅಂದ್ನಂತೆ’ ಅನ್ನೋ ಹಾಗಾಯ್ತು ನಮ್ಮ ಪರಿಸ್ಥಿತಿ. ನಮ್ಮನ್ನು ಹಳ್ಳಿಯವರು ಹಾಗೇ ಕೇಳಿದಾಗ ನಾವು ನಮ್ಮ “ಮ್ಯಾನೇಜರ್ನ ಕರೆದುಕೊಂಡು ಬರ್ತೀವಿ” ಎಂದು ಹೇಳಿ ಅಲ್ಲಿಂದ ತಪ್ಪಿಸಿಕೊಂಡು ಓಡಿದೆವು!!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ
ಭಾರತಕ್ಕೆ ಬಂದ ಕಾಫಿ: ದರ್ಶನ್ ಜಯಣ್ಣ ಸರಣಿ
ಮೊದಮೊದಲು ಇದನ್ನು ಶೈತಾನನ ಪೇಯವೆಂದು ನಿರ್ಬಂಧಿಸಿದ್ದ ಒಟ್ಟೋಮನ್ ಸುಲ್ತಾನ ನಂತರದ ದಿನಗಳಲ್ಲಿ ಇದು ಮದ್ಯ ಅಥವಾ ಮದಿರೆಯಂತಲ್ಲ ಎಂದು ಮನಗಂಡು ಸ್ವತಃ ತಾನೇ ಅದನ್ನು ಕುಡಿದು ಪರೀಕ್ಷಿಸಿ ಆ ನಿರ್ಬಂಧವನ್ನು ಸಡಿಲಿಸುತ್ತಾನೆ. ಹಾಗೆಂದ ಮಾತ್ರಕ್ಕೆ ಎಲ್ಲರಿಗೂ ಎಲ್ಲಕಾಲಕ್ಕೂ ಇದು ಸಿಗುವಂತಿರಲಿಲ್ಲ. ಸೂಫಿಗಳು, ಸೈನಿಕರು, ಸಮಾಜದ ಗಣ್ಯರು, ಆಸ್ಥಾನ ವಿದ್ವಾಂಸರು, ಅಧಿಕಾರಿಗಳಿಗೆ ಮತ್ತು ಸಮರಕ್ಕೆ ಹೊರಟವರಿಗೆ ಮಾತ್ರ ಇದು ಸೀಮಿತವಾಗಿತ್ತು ಎಂದರೆ ಇವತ್ತಿಗೆ ನಂಬಲು ಕಷ್ಟವಾಗಬಹುದೇನೋ! ಇದರ ಕಾರಣವೇ ಇಂದು ನಾವು “ಟರ್ಕಿಶ್ ಕಾಫಿಯ” ಬಗ್ಗೆ ಆಗಾಗ ಕೇಳುತ್ತಿರುತ್ತೇವೆ.
ದರ್ಶನ್ ಜಯಣ್ಣ ಬರೆಯುವ “ಸೌದಿ ಡೇಟ್ಸ್” ಸರಣಿಯ ಹದಿಮೂರನೆಯ ಕಂತು
ಕಥಾ ಗಾಳಕ್ಕೆ ಸಿಕ್ಕ ಮೀನು…: ಎಚ್. ಗೋಪಾಲಕೃಷ್ಣ ಸರಣಿ
ಆರ್ಥಿಕ ಸಂಪನ್ಮೂಲದ ವಿಷಯಕ್ಕೆ ಬಂದಾಗ ನಮ್ಮ ಕನಸುಗಳು ಯೋಜನೆಗಳು ಶ್ರಿಂಕ್ ಆಗುತ್ತಿದ್ದವು! ಒಂದು ವಾರದ ದೊಡ್ಡಮಟ್ಟದ ಕಾರ್ಯಕ್ರಮಗಳು ಕೆಲವು ಗಂಟೆಗಳಿಗೆ ಕುಗ್ಗುತ್ತಿದ್ದವು. ನಮ್ಮ ಬಜೆಟ್ಗೆ ನಿಲುಕುವಂತಹ ಸಭಾಭವನ ಅಂದರೆ ಆಗ ಮಲ್ಲೇಶ್ವರದ ಗಾಂಧಿ ಸಾಹಿತ್ಯ ಸಂಘದ ಹಾಲ್ ಒಂದೇ. ಇಪ್ಪತ್ತೈದು ರೂಪಾಯಿ ಅದರ ಬಾಡಿಗೆ. ಅದರಲ್ಲೇ ಎಲ್ಲವೂ ಅಂದರೆ ಮೈಕು, ಲೈಟು ಸೇರುತ್ತಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೫ನೇ ಬರಹ ನಿಮ್ಮ ಓದಿಗೆ
ಸುಂದರ ಕಾಡಿನ ರೋಚಕ ಕಥೆಗಳು-4: ರೂಪಾ ರವೀಂದ್ರ ಜೋಶಿ ಸರಣಿ
ಇನ್ನೊಂದು ಎಂಟು ಹತ್ತು ಮಾರು ದೂರ ಸಾಗಿದರೆ, ಆ ದಾರಿ ಸಿಗುತ್ತಿತ್ತು. ನಾನು ರಸ್ತೆಗುಂಟ ಓಡುತ್ತ ಬರುತ್ತಿದ್ದೆ. ಮಬ್ಬುಗತ್ತಲು ಬೇರೆ. ಸುಮಾರು ನಾಲ್ಕುಮಾರು ದೂರದಲ್ಲಿ, ರಸ್ತೆಯ ನಡುವೆ ಒಂದು ಕಪ್ಪು ಆಕಾರ ಕೆಟ್ಟರೂಪದಲ್ಲಿ ಕೂಗುತ್ತ ಇಷ್ಟೆತ್ತರ ಎದ್ದು ನಿಂತಿತು. ಅದು ಕರಡಿ ಎಂದು ಒಂದು ಅಂದಾಜಿನಲ್ಲಿ ನಾನು ಗುರುತಿಸಿ, ನಡುಗಿ ಹೋದೆ. ಒಂದು ಕ್ಷಣ ಏನೂ ಮಾಡಲೂ ತೋಚಲಿಲ್ಲ. ನನ್ನ ಎಡಕ್ಕೆ ಒಂದು ಚಿಕ್ಕ ಕಾಲುದಾರಿ ಕಂಡಿತು. ಅದು ನಮ್ಮನೆಗೆ ಹೋಗುವ ದಾರಿ ಅಲ್ಲವೆಂದು ಗೊತ್ತಿದ್ದರೂ ಅನಿವಾರ್ಯವಾಗಿ ಅದೇ ದಾರಿ ಹಿಡಿದು ಓಡತೊಡಗಿದೆ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿ
ಪ್ರಸಿದ್ಧ ಫೋಟೋದ ಹಿಂದಿನ ರಹಸ್ಯ: ಶೇಷಾದ್ರಿ ಗಂಜೂರು ಸರಣಿ
ಆ ಫೋಟೊ ನೋಡಿದ ತಕ್ಷಣವೇ ಅವಳಿಗೆ ಅದು ಕಂಡಿತು. ಆ ಫೋಟೋದಲ್ಲಿನ ಸ್ಪಷ್ಟತೆ, ಅದರಲ್ಲೂ ಫ್ರಾಂಕ್ಲಿನ್ಳಂತಹ ಅನುಭವ-ಪಾಂಡಿತ್ಯ ಎರಡೂ ಇದ್ದ ಮೇಧಾವಿಗೆ, ಒಂದರೆ ಕ್ಷಣ ಅವಳ ಉಸಿರುಗಟ್ಟಿಸಿರಬಹುದು. ಆ ಫೋಟೋ ಮುಖಾಂತರ, ಡಿಎನ್ಎ ಗಟ್ಟಿದನಿಯಲ್ಲಿ, ಖಡಾಖಂಡಿತವಾಗಿ ಸಾರುತ್ತಿತ್ತು: “ನಾನೊಂದು ಸುರುಳಿ!”. ಪೈಥಾಗೊರಾಸನಿಂದ ಹಿಡಿದು, ಕೊನೆಗೂ ಡಾರ್ವಿನ್ನನವರೆಗೆ ಸಾವಿರಾರು ವರ್ಷಗಳ ಸಿದ್ಧಾಂತಗಳ, ಮೆಂಡೆಲ್-ಮಾರ್ಗನ್ ಅಂತಹವರ ಪ್ರಯೋಗಗಳ ಗುರಿಯ ಸ್ವರೂಪದ ದರ್ಶನವಾಗಿತ್ತು.
ಶೇಷಾದ್ರಿ ಗಂಜೂರು ಬರೆಯುವ ವಿಜ್ಞಾನ ಸರಣಿ “ವಿಜ್ಞಾನದ ಕಥಾ ಪ್ರಸಂಗಗಳು”ಯಲ್ಲಿ ಹೊಸ ಬರಹ









