ಹೊಸ ಚಿಂತನೆ..ಹೊಸ ತಿರುವು..: ಎಸ್. ಜಯಶ್ರೀನಿವಾಸ ರಾವ್ ಸರಣಿ
ಅವರ ಕೆಲವು ಕವಿತೆಗಳು ಕೇವಲ ಆರು ಪದಗಳಷ್ಟೇ ಉದ್ದವಿರುತ್ತವೆ – ಇದು ಅವಶ್ಯಕತೆ ಮತ್ತು ಸಾಧ್ಯತೆಯತ್ತ ಗಮನ ಸೆಳೆಯುವ ದಿಟ್ಟವಾದ ನಡೆ. ಅತಿ ತೆಳ್ಳನೆಯ ವಸ್ತುಗಳಿಂದ ಇಂತಹ ವಿಸ್ತೃತವಾದ ಕವಿತೆಗಳನ್ನು ರಚಿಸುವ ಅವರ ಸಾಮರ್ಥ್ಯವು ಭಾಗಶಃ, ಐಸ್ಲ್ಯಾಂಡಿಕ್ ಇತಿಹಾಸದ ಅವರ ಜ್ಞಾನದಿಂದ ಮತ್ತು ಪದಸೃಷ್ಟಿ ಬಗ್ಗೆ ಅವರಿಗಿರುವ ಒಲವಿನಿಂದ ಬರುತ್ತದೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಐಸ್ಲ್ಯಾಂಡ್ ದೇಶದ ಖ್ಯಾತ ಕವಿ ಮಾಗ್ನುಸ್ ಸಿಗುರ್ದ್ಸನ್-ರವರ
(Magnus Sigurðsson) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು ನಿಮ್ಮ ಓದಿಗೆ
ಇಲ್ಲಿ ಸೋಲೂ ಇದೆ, ಗೆಲುವೂ ಇದೆ…: ಕಾರ್ತಿಕ್ ಕೃಷ್ಣ ಸರಣಿ
ಅಂಕಗಳು ಸೋರಿಹೋಗುತ್ತಿದ್ದರೂ ಎದೆಗುಂದದೆ ಆಡುತ್ತಿದ್ದ ಮೆರಿನ್ ಕೆಲವೇ ಘಳಿಗೆಯಲ್ಲಿ ನೋವನ್ನು ತಾಳಲಾರದೆ ಮತ್ತೆ ಕುಸಿದಳು. ಈ ಬಾರಿ ಬಿಕ್ಕಿ ಬಿಕ್ಕಿ ಅಳುತ್ತಿದ್ದ ಅವಳ ನೋವಿಗೆ ಇಡೀ ಕ್ರೀಡಾಂಗಣ ಮರುಗುತ್ತಿತ್ತು. ಕುಸಿದಲ್ಲೇ ಅಳುತ್ತಿದ್ದ ಮೆರಿನ್ಳನ್ನು ತಬ್ಬಿ ಸಮಾಧಾನ ಮಾಡುತ್ತಿದ್ದ ಅವಳ ಕೋಚ್ಗೂ ಕೂಡ ತನ್ನ ಕಣ್ಣೀರನ್ನು ತಡೆಹಿಡಿಯಲಾಗಿರಲಿಲ್ಲ. ಎದುರಾಳಿ ಹೇ ಗೆ ತಾನು ಫೈನಲ್ ತಲುಪಿದ್ದಕ್ಕೆ ಖುಷಿಪಡುವುದೋ, ಅಥವಾ ಮೆರಿನ್ಳ ಸ್ಥಿತಿಯನ್ನು ನೋಡಿ ಮರುಗುವುದೋ, ಒಂದೂ ತಿಳಿಯದೆ ಮೆರೀನಳ ಬಳಿ ಬಂದು ವಿಷಾದದ ನೋಟ ಬೀರುತ್ತಾ ನಿಂತಿದ್ದಳು.
ಕಾರ್ತಿಕ್ ಕೃಷ್ಣ ಬರೆಯುವ “ಒಲಂಪಿಕ್ಸ್ ಅಂಗಣ” ಸರಣಿ
ಮೈನಾ- ಇದು ದೇಹವಲ್ಲ, ಭಾವಗಳ ಸಂಕಲನ: ರಾಮ್ ಪ್ರಕಾಶ್ ರೈ ಕೆ. ಸರಣಿ
ಮೈನಾ ಸತ್ಯನಿಗೆ ಚಪ್ಪಲಿಯನ್ನು ಉಡುಗೊರೆಯಾಗಿ ನೀಡುತ್ತಾಳೆ. ಅದನ್ನು ಕಂಡು ಬೇಸರದಿಂದ ಇದೆಂಥಾ ಉಡುಗೊರೆ ಎಂದು ಸತ್ಯ ಎಸೆಯುತ್ತಾನೆ. ಅನಂತರ ಕಾಲಿಲ್ಲದೇ ನೆಲಕ್ಕೆ ಕೈಯ್ಯಿಟ್ಟು ನಡೆಯುವಾಗ ನೋವನುಭವಿಸಬಾರದು ಎಂದು ಇದನ್ನು ನೀಡಿದ್ದಾಳೆ ಎಂದು ತಿಳಿದು ಖೇದಗೊಳ್ಳುತ್ತಾನೆ ಆತ. ಇಲ್ಲಿ ಗಮನಿಸಬೇಕಾದ ಅಂಶವೆಂದರೆ ಕಥೆಯು ಸೆರೆ ಹಿಡಿದ ಸೂಕ್ಷ್ಮತೆ. ಈ ದೃಶ್ಯವೇನೂ ಕಥೆಯ ಮುಖ್ಯ ಭಾಗವಲ್ಲದಿದ್ದರೂ, ಅದೆಷ್ಟು ಅಧ್ಯಯನದ ದೃಷ್ಟಿಕೋನ ಈ ದೃಶ್ಯದಲ್ಲಿ ಅಡಗಿದೆ ಎಂಬುದು ಅಚ್ಚರಿಯ ಸಂಗತಿ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ
ಅಮೆರಿಕದ ಅಂಗಡಿಯಲ್ಲಿ ಗಣೇಶ ದರ್ಶನ!: ಗುರುಪ್ರಸಾದ ಕುರ್ತಕೋಟಿ ಸರಣಿ
ಆ ಅಂಗಡಿಯ ಹೆಸರು ಡಾಲರ್ ಟ್ರೀ ಅಂತ. ಅಲ್ಲಿ ಯಾವುದೇ ಸಾಮಾನು ಕೊಂಡರೂ ಅದಕ್ಕೆ ಒಂದು ಡಾಲರ್ ಮಾತ್ರ ಬೆಲೆ. ಪೆನ್ನು, ನೋಟ್ ಬುಕ್, ಆಟಿಗೆ ಸಾಮಾನು ಹೀಗೆ ಎಲ್ಲವೂ ಒಂದೇ ಡಾಲರ್. ಯಾರಿಗುಂಟು ಯಾರಿಗಿಲ್ಲ ಅಂತ ಜನರೂ ಕೂಡ ಸಿಕ್ಕಿದ್ದನ್ನೆಲ್ಲ ಬಾಚಿಕೊಂಡು ಹೋಗುತ್ತಿದ್ದರು. ಎಷ್ಟೋ ಸಾಮಾನುಗಳು ಒಂದೇ ಡಾಲರಿಗೆ ಇಷ್ಟೆಲ್ಲಾ!? ಅನ್ನಿಸುವಷ್ಟು ಇದ್ದವಾದರೂ, ಅದರ ಜೊತೆಗೆ ತೆಗೆದುಕೊಳ್ಳುವ ಎಷ್ಟೋ ಇನ್ನಿತರ ವಸ್ತುಗಳು ಡಾಲರಗಿಂತ ಕಡಿಮೆ ಬೆಲೆಯವೇ ಆಗಿದ್ದವು.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿ
ಸುತ್ತೂರ್ಗೊಂದೇ ಗೌರ್ಮೆಂಟು ಇಸ್ಕೂಲ್: ಸುಮಾ ಸತೀಶ್ ಸರಣಿ
ಅಲ್ಲಾ ನಮ್ ಮೇಷ್ಟ್ರು ಹೇಳಿರೋ ಸಿನ್ಮಾ ಇದೇನಾ ಅಂತ ಕಣ್ಣು ತಿಕ್ಕೊಂಡು ಇನ್ನೊಂದು ದಪ ನೋಡಿದ್ರೂ ಆ ಪಟಗ್ಳು ವಸೀನೂ ಬದಲಾಗ್ಲೇ ಇಲ್ಲ. ‘ಅಯ್ ಇದೇನಮ್ಮಿ ನಮ್ಮೇಷ್ಟ್ರು ಕುಲಗೆಟ್ಟೋಗವ್ರೆ. ಅಲ್ಲಾ ವಾಗಿ ವಾಗಿ ಇಂತ ಸಿನಿಮ್ವೇ ನಮ್ಮಂತ ಸಣ್ಣೈಕ್ಳುಗೆ ನೋಡಾಕ್ ಯೇಳಾದು. ತಗ್ ತಗಿ ಯಾರಾದ್ರೂ ಮರ್ವಾದಸ್ಥರು ನೋಡೋ ಸಿನಿಮ್ವೇ ಇದು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಮಕ್ಕಳು ಸಿನಿಮಾ ನೋಡಿದ ಪ್ರಸಂಗ ನಿಮ್ಮ ಓದಿಗೆ
ಶಾಲೆ ಬಿಡಿಸಿದ ಲವ್ ಲೆಟರ್…!!: ಬಸವನಗೌಡ ಹೆಬ್ಬಳಗೆರೆ ಸರಣಿ
ಒಂಬತ್ತನೇ ಕ್ಲಾಸಲ್ಲಿ ನಾನು ಸಾಕಷ್ಟು ಓದುತ್ತಿದ್ದೆ. ಈ ಓದಿನ ಫಲ ನನಗೆ ಫಲಿತಾಂಶದಲ್ಲಿ ಸಿಕ್ಕಿತ್ತು. ಮೂರೂ ಸೆಕ್ಷನ್ಗಳಿಗೂ ಸೇರಿ ಕೊಡುತ್ತಿದ್ದ ರ್ಯಾಂಕಿನಲ್ಲಿ ನನಗೆ ಎರಡನೇ ರ್ಯಾಂಕ್ ಲಭಿಸಿತ್ತು. ಕನ್ನಡ ಮೀಡಿಯಂನ ಶಿವಶಂಕರ್ ಪ್ರಥಮ ರ್ಯಾಂಕ್ ಪಡೆದಿದ್ದ. ನನಗೆ ಎರಡು ಅಂಕಗಳಲ್ಲಿ ಪ್ರಥಮ ರ್ಯಾಂಕ್ ಮಿಸ್ಸಾಗಿತ್ತು. ಇದರ ಬಗ್ಗೆ ಅಷ್ಟು ಫೀಲ್ ಆಗಿರಲಿಲ್ಲ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಇಪ್ಪತ್ತೆರಡನೆಯ ಕಂತು ನಿಮ್ಮ ಓದಿಗೆ
ಭಕ್ತವತ್ಸಲ ಸಿದ್ಧಗಂಗಾ ಶ್ರೀಗಳು: ರಂಜಾನ್ ದರ್ಗಾ ಸರಣಿ
ಎಲ್ಲ ಜಾತಿ ಜನಾಂಗಗಳ ಮಕ್ಕಳ ಶೈಕ್ಷಣಿಕ ಏಳ್ಗೆಯೆ ಅವರ ಬಹುದೊಡ್ಡ ಗುರಿಯಾಗಿತ್ತು. ಪ್ರತಿ ವರ್ಷ ಹತ್ತುಸಾವಿರ ಮಕ್ಕಳನ್ನು ಸಾಕುತ್ತ, ಅವರಿಗೆ ಯಾವುದೇ ರೀತಿಯ ಕೊರತೆಯಾಗದಂತೆ ನೋಡಿಕೊಳ್ಳುತ್ತ, ಶೈಕ್ಷಣಿಕವಾಗಿ ಅವರನ್ನು ಉನ್ನತ ಸ್ಥಾನಕ್ಕೇರಿಸುವುದು ಸಾಮಾನ್ಯ ಮಾತಲ್ಲ. ಅವರ ಮಠದ ಎಲ್ಲ ವಿಭಾಗಗಳಲ್ಲಿ ನಿಷ್ಠೆಯಿಂದ ಎಲೆ ಮರೆಯ ಕಾಯಿಯಂತೆ ಕಾರ್ಯನಿರ್ವಹಿಸುವ ಪ್ರತಿಯೊಬ್ಬರೂ ಗೌರವಕ್ಕೆ ಅರ್ಹರಾಗಿದ್ದಾರೆ. ಅವರ ಮಠದ ಆವರಣವು ಪುಟ್ಟ ಭಾರತವೇ ಆಗಿದೆ.
ರಂಜಾನ್ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ
ಕೈ ಹಿಡಿದು ನೀ ನಡೆಸು ಮುಂದೆ…: ಕಾರ್ತಿಕ್ ಕೃಷ್ಣ ಸರಣಿ
ಡೆರೆಕ್ ರೆಡ್ಮಂಡ್ ಆ ದಿನ ಪದಕವನ್ನು ಗೆಲ್ಲಲಿಲ್ಲ. ಆದರೆ ಅವನು ಅದಕ್ಕಿಂತ ಹೆಚ್ಚು ಬೆಲೆಬಾಳುವ ಪ್ರಪಂಚದಾದ್ಯಂತದ ಲಕ್ಷಾಂತರ ಹೃದಯಗಳನ್ನು ಗೆದ್ದಿದ್ದ. ಬಾರ್ಸಿಲೋನಾ ಒಲಿಂಪಿಕ್ಸ್ನ ಆ ಘಟನೆ, ರೆಡ್ಮಂಡ್ನ ಪರಿಶ್ರಮ, ಮಾನವ ಸಂಬಂಧಗಳ ಶಕ್ತಿ, ತಂದೆ ಮತ್ತು ಮಗನ ನಡುವಿನ ಮುರಿಯಲಾಗದ ಬಂಧದ ಸಂಕೇತವಾಗಿ ಅಜರಾಮರವಾಗಿ ಉಳಿಯಿತು. ನಿಜವಾದ ಯಶಸ್ಸು ಅಡಗಿರುವುದು ಗೆಲ್ಲುವುದರಲ್ಲಿ ಮಾತ್ರವಲ್ಲ, ಎಂತಹದೇ ಅಡೆತಡೆಗಳು ಎದುರಾದರೂ ಮುಂದುವರಿಯುವ ಧೈರ್ಯವಿರುವುದರಲ್ಲಿ ಎಂದು ಎಲ್ಲರಿಗೂ ಸಾರಿ ಹೇಳಿತು.
ಕಾರ್ತಿಕ್ ಕೃಷ್ಣ ಬರೆಯುವ “ಒಲಂಪಿಕ್ಸ್ ಅಂಗಣ” ಸರಣಿ
ಸನ್ಯಾಸಿನ್ ಅಂದ್ರೆ ಯಾರು?: ಎಚ್. ಗೋಪಾಲಕೃಷ್ಣ ಸರಣಿ
ಸಂಸ್ಥೆಯ ಹಿಂದಿರುವ ವಿವೇಕಾನಂದರ ಒತ್ತಾಸೆಯ ಸ್ಪೂರ್ತಿದಾಯಕ ನಿಲುವು ಸಾರ್ವಜನಿಕರಲ್ಲಿ ಹೆಚ್ಚು ಪ್ರಚಾರ ಪಡೆದಿಲ್ಲ ಮತ್ತು ಸಹೋದರಿ ನಿವೇದಿತಾ ಅವರ ಕೊಡುಗೆಯನ್ನು ಸಂಪೂರ್ಣವಾಗಿ ಮರೆತುಬಿಡಲಾಗಿದೆ. ಅದೇ ರೀತಿಯಲ್ಲಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಸಂಸ್ಥೆಗೆ ೩೭೦ಎಕರೆ ಜಮೀನು ದಾನವಾಗಿ ನೀಡಿದ ಮೈಸೂರು ಮಹಾರಾಜರಾಗಿದ್ದ ಕೃಷ್ಣರಾಜ್ ಒಡೆಯರ್ ಅವರನ್ನು ಸಹ ಸಂಪೂರ್ಣವಾಗಿ ಮರೆಯಲಾಗಿದೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ನಲವತ್ತೆರಡನೆಯ ಕಂತು ನಿಮ್ಮ ಓದಿಗೆ










