ಇರುವಲ್ಲೇ ಖುಷಿ ಕಾಣುವ ಪಾಠ: ಗುರುಪ್ರಸಾದ ಕುರ್ತಕೋಟಿ ಸರಣಿ
ಅಲ್ಲಿ ಇರೋದೇ ಬೇಡ, ನನ್ನ ದೇಶವೇ ನನಗೆ ಚಂದ, ಅಲ್ಲಿಯೇ ಸುಖ ಇದೆ, ವಾಪಸ್ಸು ಹೋಗಿಯೇ ತೀರುತ್ತೇನೆ ಅಂತೆಲ್ಲ ಬಡಬಡಿಸುತ್ತಿದ್ದ ನನಗೆ, ನಲವತ್ತು ವರ್ಷಗಳಿಗಿಂತ ಹೆಚ್ಚು ಕಾಲ ಅಲ್ಲಿದ್ದು, ತಾವು ಅಲ್ಲಿ ಸುಖವಾಗಿ ಇದ್ದೇವೆ, ಯಾವುದೇ ವಿಷಾದ ಇಲ್ಲ ಅಂತ ಮಾತು ಹಾಗೂ ಕೃತಿಯಿಂದ ತೋರಿಸಿದ ನನ್ನ ಅಕ್ಕ ಬೆರಗು ಮೂಡಿಸಿದ್ದಳು! ಆ ಕ್ಷಣದಿಂದ ಬೇರೆಯವರಿಗೆ, ನೀವ್ಯಾಕೆ ಅಮೆರಿಕೆಯಲ್ಲಿಯೇ ಇರಲು ಬಯಸುತ್ತೀರಿ…?
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿಯ ಇಪ್ಪತ್ಮೂರನೆಯ ಬರಹ
ಕದಿರಪ್ಪನ ಪರಿಷೆ: ಸುಮಾ ಸತೀಶ್ ಸರಣಿ
ಸ್ಯಾನೆ ವಿಸೇಸವಾದ್ದು ಅಂದ್ರೆ ಆಟುದ್ ಸಾಮಾನಿನ ಬುಟ್ಟಿಗ್ಳು. ಕಾರು ಬೈಕು ಅಲ್ಲ ಬುಡಿ. ಆ ಬುಟ್ಟಿಗ್ಳಾಗೆ ಬುಡಿಗೆಗಳು ಇರ್ತಿದ್ವು. ಎಲ್ಡು-ಮೂರು ಬೆಟ್ಟಿನ ಗಾತ್ರದ ಮಣ್ಣಿನ ಮಡಿಕೆ ಕುಡಿಕೆಗಳು, ಒಲೆ, ಬಟ್ಟಲು, ಮುಚ್ಚಳ, ಸೌಟು, ಹಂಚು ಇಂತಾ ಅಡ್ಗೆ ಮನೆ ಸಾಮಾನು. ಹುಡುಗೀರೆಲ್ಲಾ ಅಲ್ಲೇ ಸೇರ್ಕಂಡು ಒಬ್ಬಳು ಬಟ್ಟಲು ತಕಂಡ್ರೆ, ಇನ್ನೊಬ್ಬಳು ಒಲೆ ತಕಣಾದು. ಐದು ಪೈಸೆ, ಹತ್ತು ಪೈಸೆ, ಜಾಸ್ತಿ ಅಂದ್ರೆ ನಾಕಾಣೆ ಇರ್ತಿದ್ವು. ನಮ್ಗೋ ತಲಾಕೈವತ್ತು ಪೈಸೇ ಸಿಕ್ತಿದ್ರೆ ಹೆಚ್ಚು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿ
ನಾವೆಂದೂ ಮರೆಯಲಾಗದ ಹಾಸ್ಟೆಲ್ ಕಲಿಸಿದ ಪಾಠ…: ಬಸವನಗೌಡ ಹೆಬ್ಬಳಗೆರೆ ಸರಣಿ
ಶನಿವಾರ ಶಾಲೆ ಬಿಟ್ಟಾಗಿನಿಂದ ಹಿಡಿದು ಸಂಜೆ 5;30 ವರೆಗೂ ನಾವು ವಿಶ್ರಾಂತಿ ತೆಗೆದುಕೊಳ್ಳದೆ ಕ್ಲೀನ್ ಮಾಡಿದರೆ ಮಾತ್ರ ಎಲ್ಲಾ ತೊಟ್ಟಿಗಳು ಕ್ಲೀನ್ ಮಾಡೋಕೆ ಸಾಧ್ಯ ಆಗ್ತಾ ಇತ್ತು. ಆ ನಂತರ ಸ್ನಾನ ಮಾಡಿ ನಮಗೆ ಸಿಕ್ಕ ಮೆಸ್ಸಿನಲ್ಲಿ ರಾತ್ರಿ ಊಟ ಮಾಡುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ತಾ ಇದ್ವಿ!! ‘ಭೂತಯ್ಯನ ಮಗ ಅಯ್ಯ’ ಫಿಲಮ್ಮಿನಲ್ಲಿ ಬರೋ ಸೀನಿನ ತರಹ ಕೆಲವರು ಸಾಕಷ್ಟು ಬಡಿಸಿಕೊಂಡು ತಿನ್ತಾ ಇದ್ರು. ನಮಗೆ ತುಂಬಾ ಖುಷಿ ಆಗ್ತಾ ಇತ್ತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಇಪ್ಪತ್ತೊಂದನೆಯ ಕಂತು ನಿಮ್ಮ ಓದಿಗೆ
ಬರಲು ಹೇಳಿ ಭೇಟಿಯಾಗದೆ ಹೋದರು!: ರಂಜಾನ್ ದರ್ಗಾ ಸರಣಿ
ಅವರು ಏನೇ ಆದರೂ ನನ್ನ ಜೊತೆಗಿನ ಸಂಪರ್ಕವನ್ನು ಎಂದೂ ಕಳೆದುಕೊಳ್ಳಲಿಲ್ಲ. ಸುಬ್ಬಯ್ಯಶೆಟ್ಟಿ ಅವರು ಮೊದಲು ಮಾಡಿ ಆ ಕಾಲದ ಎಲ್ಲ ಹಿರಿಯ ಕಿರಿಯ ಗೆಳೆಯರು ಇಂದಿಗೂ ಸಂಪರ್ಕದಲ್ಲಿದ್ದಾರೆ. ಈ ಕಾರಣದಿಂದಲೇ ಮೊಹಿದ್ದೀನ್ ಅವರು ನಿಧನರಾಗುವ ಮೂರು ದಿನಗಳ ಮುಂಚೆ ಫೋನ್ ಮಾಡಿದ್ದು. ನಾವು ಸಮಯ ಸಿಕ್ಕಾಗಲೆಲ್ಲ ಭೇಟಿಯಾಗುತ್ತಲೇ ಇದ್ದೆವು. ನಡೆದಾಡಲಿಕ್ಕಾಗದೆ ಬಹಳ ನೋವು ಅನುಭವಿಸಿದರು. ಅವರಿಗೆ ತಮ್ಮ ಅನಾರೋಗ್ಯದ ಬಗ್ಗೆ ಬಹಳ ಬೇಸರವಾಗಿತ್ತು. ಏಕೆಂದರೆ ಸದಾ ಚಟುವಟಿಕೆಯಿಂದ ಇರಬೇಕೆನ್ನುವ ಸೇವಾ ಮನೋಭಾವದ ಗಂಭೀರ ವ್ಯಕ್ತಿ ಅವರಾಗಿದ್ದರು.
ರಂಜಾನ್ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ
ಗೋ ಮಾಂಡೋ…. ಗೋ…!!: ಕಾರ್ತಿಕ್ ಕೃಷ್ಣ ಸರಣಿ
ಮೊದಲ ಪ್ರಯತ್ನ…. ಕೋಲನ್ನು ಹಿಡಿದು ಅಷ್ಟು ದೂರದಿಂದ ಓಡುತ್ತಾ ಬಂದ ಡೂಪ್ಲ್ಯಾಂಟೀಸ್ನನ್ನು ಎರಡನೇ ಸ್ಥಾನದಲ್ಲಿದ್ದ ಅಮೆರಿಕಾದ ಕೆಂಡ್ರಿಕ್ಸ್ ಹುರಿದುಂಬಿಸುತ್ತಿದ್ದ… ಪ್ರೋತ್ಸಾಹಿಸುತ್ತಿದ್ದ… ಎಲ್ಲರದ್ದೂ ಒಂದೇ ಚೀತ್ಕಾರ… “ಗೋ ಮಾಂಡೋ… ಗೋ..” ಮಾಂಡೋ… ಕೋಲನ್ನು ಬಾಕ್ಸ್ಗೆ ನೆಟ್ಟು ಗಾಳಿಯಲ್ಲಿ ಗಿರಕಿ ಹೊಡೆದು, ಅಡ್ಡ ಕೋಲನ್ನು ದಾಟಿ, ಇನ್ನೇನು ಕೈಯನ್ನು ಮೇಲೆತ್ತಬೇಕು.. ಮಾಂಡೋನೊಡನೆ ಅಡ್ಡ ಕೋಲೂ ಕೆಳಗುರುಳಿತ್ತು… ನಿಶ್ಯಬ್ದ… ಲಯಬದ್ಧವಾಗಿ ಚೀರುತ್ತಿದ್ದವರೆಲ್ಲಾ ‘ಓ….’ ಎಂದು ನಿಟ್ಟುಸಿರುಬಿಟ್ಟಿದ್ದರು.
ಕಾರ್ತಿಕ್ ಕೃಷ್ಣ ಬರೆಯುವ “ಒಲಂಪಿಕ್ಸ್ ಅಂಗಣ” ಸರಣಿ
ಕಿಶೋರ್ ಕುಮಾರ್ ಎಲ್ಲಿ ಹೋದ್ರು?: ಎಚ್. ಗೋಪಾಲಕೃಷ್ಣ ಸರಣಿ
ಆಗತಾನೇ ಅಡಿಗರ ಕವನಗಳನ್ನು ಓದಿ ಅರ್ಥ ಮಾಡಿಕೊಳ್ಳುವ ಪ್ರಯತ್ನ ಶುರು ಮಾಡಿದ್ದೆ. ಅವರ ಮತ್ತು ಇತರ ಕವಿಗಳ ಹಲವು ಪದ್ಯಗಳ ಆರಂಭಿಕ ಸಾಲು ನೆನಪಿನಲ್ಲಿ ಇತ್ತು. ಕಟ್ಟುವೆವು ನಾವು ಹೊಸ ನಾಡೊಂದನು…., ನಾನು ಮಾಯವಾದಿಯಾಗಿ ಬಂದೆ, ಇದು ನಮ್ಮ ಮನೆಯ ಕಥೆ, ಕಾಲವ ನಾನು ನಿಂತೆ, ಮರಳಿನಿಂದ ಎಣ್ಣೆ ಹಿಂಡುವ ಗಾಣ ಮೊದಲಾದ ಸಾಲುಗಳು ತಲೆಯಲ್ಲಿ ಆಳವಾಗಿ ಹುದುಗಿತ್ತು…… ಇವು ಅಲ್ಪ ಸಲ್ಪ ಬದಲಾವಣೆ ಒಂದಿಗೆ ಪೇಪರಿನ ಮೇಲೆ ಮೂಡಿದವು..
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ
ಗಡಗಡ ನಡುಗಿಸಿದ ಪಾವಗಡದ ತೋಳ: ಸುಮಾ ಸತೀಶ್ ಸರಣಿ
ಒಂದೇ ಉಸಿರ್ನಾಗೆ ಅಂಗೇ ವಾಪಸ್ ತಿರುಗ್ದೆ. ಒಂದು ಕಿತ, ಅಲ್ಲಾ ಕಾಲು ನೋಡ್ಬೇಕಿತ್ತು. ತಿರುಗ್ಸಿದ್ರೆ ಮಾತ್ರ ದೆವ್ವ ಅಲ್ವಾ ಅಂತ ಅನ್ನುಸ್ತು. ಇನ್ನೊಂದು ಕಿತ ಬ್ಯಾಡ್ವೇ ಬ್ಯಾಡ, ತೋಳ ದೆವ್ವ ಅಲ್ಲ. ಒಂದ್ಕಿತ ಹಿಂದುಕ್ ತಿರ್ಗಿ ನೋಡ್ತಿವ್ನಿ, ಅನುಮಕ್ಕ ಕೈ ತೋರ್ಸಿ ನಿಲ್ಲು ಅಂತಾವ್ಳೆ. ಹಿಂದಿಂದೇನೆ ಬರ್ತಾವ್ಳೆ. ದ್ಯಾವ್ರೆ ಏನ್ ಮಾಡ್ಲಿ. ಈಗೇನಾರಾ ಈ ತೋಳುದ್ ಕೈಯಾಗೆ ಸಿಕ್ಕಿ ಸತ್ತು ನರಕುಕ್ಕೇನಾರೂ ಹೋದ್ರೆ, ದರದರನೆ ಎಳ್ಕೋ ಹೋಗಿ ಬಿಸಿ ಬಿಸಿ ಎಣ್ಣೆ ಕುದಿಯೋ ಬಾಂಡ್ಲೀಗೆ ಹಾಕಿ ಬೋಂಡಾ ಬಜ್ಜಿ ತರ ತೇಲುಸ್ತಾರೆ ಅನ್ನೋದು ನೆಪ್ಪಾತು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯ
ಕೂರಾಪುರಾಣ ೪: ಸೂಜಿಗಳೆಂದರೆ ಸಂಕಷ್ಟವೇ…
ಎರಡು ನಿಮಿಷಗಳ ಕಾಲ ಕೂರಾ ಅವಳನ್ನು ನಮ್ಮೊಡನೆ ಮಾತನಾಡಲು ಬಿಡಲೇ ಇಲ್ಲ. ಅವಳ ಮೇಲೆ ಹತ್ತುವುದು, ಅವಳ ಸುತ್ತ ಸುತ್ತುವುದು, ಅವಳ ಕೆನ್ನೆಯನ್ನು ನೆಕ್ಕುವುದು.. ಎಲ್ಲ ಮಾಡುತ್ತಿದ್ದ. ಒಳಗೆ ಬಂದಾಗ ಆಕೆ ಅವನಿಗೆ ಒಂದೆರಡು ಟ್ರೀಟಿನ ತುಂಡುಗಳನ್ನು ಕೊಟ್ಟಿದ್ದಳು. ಇದೆಲ್ಲ ಅವಳನ್ನು ಒಲಿಸಲಿಕ್ಕೆ ಮತ್ತು ಇನ್ನೆರಡು ತುಂಡುಗಳನ್ನು ಪಡೆಯಲಿಕ್ಕೆ ಎಂದು ನಮಗೆ ಗೊತ್ತಿತ್ತು. ನಿಧಾನವಾಗಿ ಆಕೆ ನಮ್ಮೊಡನೆ ಮಾತನಾಡುತ್ತ ನಾಯಿಗಳ ಆರೋಗ್ಯದ ಬಗ್ಗೆ ವಿವರಿಸತೊಡಗಿದಳು.
ಸಂಜೋತಾ ಪುರೋಹಿತ ಬರೆಯುವ “ಕೂರಾಪುರಾಣ” ಸರಣಿಯ ನಾಲ್ಕನೆಯ ಕಂತು
ಸಿಂಗಾಪುರವೆಂಬ ಶಿಸ್ತಿನ ಸಿಪಾಯಿ: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಸರಣಿ
ಸಿಂಗಾಪುರ ಶಿಸ್ತಿನ ದೇಶ ಎನ್ನುವುದನ್ನು ಸಮರ್ಥಿಸಬಲ್ಲಂತಹ ಅನೇಕ ವಿಚಾರಗಳಿವೆ. ಅತ್ಯಂತ ಸಣ್ಣ ಸಂಗತಿಗಳನ್ನೂ ನಿಯಮಗಳಿಗೆ ಒಳಪಡಿಸುವುದು ಸಿಂಗಾಪುರದ ಮೂಲಭೂತ ಗುಣ. ಇದಕ್ಕೆ ನಿದರ್ಶನವಾಗಿ ಕೆಲವು ಅಂಶಗಳನ್ನು ಗಮನಿಸಿಕೊಳ್ಳಬಹುದು. ಚ್ಯೂಯಿಂಗ್ ಗಮ್ ಅನ್ನು ಸಂಪೂರ್ಣವಾಗಿ ನಿಷೇಧಿಸಿರುವ ರಾಷ್ಟ್ರ ಸಿಂಗಾಪುರ.
ಡಾ. ವಿಶ್ವನಾಥ ಎನ್. ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಸಿಂಗಾಪುರ ದೇಶದ ಕುರಿತ ಬರಹ










