Advertisement

ಸರಣಿ

ನೆನಪಾಗಿ ಕಾಡುವ ಆ ಪಟಗಳು: ಮಾರುತಿ ಗೋಪಿಕುಂಟೆ ಸರಣಿ

ನೆನಪಾಗಿ ಕಾಡುವ ಆ ಪಟಗಳು: ಮಾರುತಿ ಗೋಪಿಕುಂಟೆ ಸರಣಿ

ಇಷ್ಟಕ್ಕೆಲ್ಲ ಕಾರಣವಾದ ಕಪ್ಪು ಬಿಳುಪಿನ ಪಾಸ್ಪೋರ್ಟ್ ಸೈಜ್ ಫೋಟೊ ಸರ್ಕಾರವು ಉಚಿತವಾಗಿ ಕೊಟ್ಟ ಅಂಗಿಯಲ್ಲಿ ಕಪ್ಪು ಮಿಶ್ರಿತ ನೀಲಿಯ ನನ್ನ ಪಟ ಚಂದವಾಗಿ ಕಾಣುತ್ತಿತ್ತು. ಅದನ್ನೆ ನವೋದಯ ಪರೀಕ್ಷೆಯ ಪ್ರವೇಶ ಪತ್ರದಲ್ಲಿ ಅಂಟಿಸಲಾಯಿತು. ಸ್ವಲ್ಪ ತಯಾರಿಯೊಂದಿಗೆ ಪರೀಕ್ಷೆಯನ್ನು ಬರೆದರೂ ಮತ್ತೆ ಅದರ ಬಗ್ಗೆ ಯಾವ ವಿಚಾರವೂ ತಿಳಿಯಲಿಲ್ಲ. ನಂತರದ ವರ್ಷಗಳಲ್ಲಿ ಅನೇಕರು ಪರೀಕ್ಷೆ ಬರೆದರು. ಆದರೆ ಯಾರೂ ಆಯ್ಕೆಯಾಗಲಿಲ್ಲ. ಅದ್ಹೇಗೆ ಅಂತ ಇವತ್ತಿಗೂ ತಿಳಿದಿಲ್ಲ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಹತ್ತನೆಯ ಕಂತು ನಿಮ್ಮ ಓದಿಗೆ

read more

ಕೇರಳಿಗರ ಬೆಂಗಳೂರ ನಂಟು: ಎಚ್.ಗೋಪಾಲಕೃಷ್ಣ ಸರಣಿ

ಅಯ್ಯಪ್ಪ ದೇವರ ಮೂಲ ಕೇರಳ. ಅಂದ ಹಾಗೆ ನಾನು ಬೆಳೆದು ಓದಿ ನಂತರ ಕೆಲಸ ಮಾಡುತ್ತಿದ್ದ ಕಡೆ ಕೇರಳದವರ ಸಂಖ್ಯೆ ಹೆಚ್ಚು ಮತ್ತು ತುಂಬಾ ಚಟುವಟಿಕೆಯಿಂದಲೂ ಕೂಡಿದ್ದರು. ಕೇರಳದ ಸುಮಾರು ಹುಡುಗಿಯರು ಕನ್ನಡದ ಹುಡುಗರ ಕೈ ಹಿಡಿದಿದ್ದರು. ಸಮುದ್ರ ತೀರದ ಹುಡುಗಿಯರು ಅಂದರೆ ಆಕರ್ಷಕ ಮೈಕಟ್ಟು, ಗುಂಗುರು ಕೂದಲು ಮತ್ತು ಕೊಂಚ ಮುಂದೆ ಬಂದ ಹಲ್ಲುಗಳು. ಬಹುಶಃ ಆಡುವ ಭಾಷೆಯ ಪ್ರಭಾವ ಇರಬಹುದು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಹತ್ತನೆಯ ಕಂತು ನಿಮ್ಮ ಓದಿಗೆ

read more
ಬಿಡದೇ ಸುರಿವ ಮಳೆಯೂ.. ಜೊತೆಗೆ ಕೊಡೆಯೂ: ಸುಮಾವೀಣಾ ಸರಣಿ

ಬಿಡದೇ ಸುರಿವ ಮಳೆಯೂ.. ಜೊತೆಗೆ ಕೊಡೆಯೂ: ಸುಮಾವೀಣಾ ಸರಣಿ

ಮಧ್ಯಾಹ್ನ ಶಾಲೆಯಲ್ಲಿ ಮಕ್ಕಳು ಪಾಠ ಕೇಳಬೇಕು. ಆಗ ಈ ರೌದ್ರಮಳೆಯಾಗಮನವಾಗುತ್ತಿತ್ತು. ನಾವು ಶಾಲೆಗೆ ಹೊರಡುವ ಸಮಯಕ್ಕೆ ಸರಿಯಾಗಿ ಶಾಲೆ ಬಿಡುವ ಕಡೆಯ ಅವಧಿಯಲ್ಲಿ ಮಳೆ ಹಾಜರಿ ಹಾಕುತ್ತಿತ್ತು. ಜೊತೆಗೆ ಮೈ ಕೊರೆಯುವ ಚಳಿ. ಈ ಕಾರಣಕ್ಕೆ ಮೊದಲ ಬೆಂಚ್ ಬೇಡ ಅನ್ನಿಸುತ್ತಿತ್ತು ಹಿಂದಿನ ಬೆಂಚ್ ಆದರೆ ಕಾಲ ಮೇಲೆ ಕಾಲು ಹಾಕಿ ಚಳಿ ಕಡಿಮೆ ಮಾಡಿಕೊಳ್ಳಬಹುದಲ್ಲ ಅನ್ನುವ ಉಪಾಯ ಅಷ್ಟೇ.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

read more
ಜಾರುವ ಜಡೆಯ ಹುಡುಗಿಯ ಪಾತ್ರ!: ಮಾರುತಿ ಗೋಪಿಕುಂಟೆ ಸರಣಿ

ಜಾರುವ ಜಡೆಯ ಹುಡುಗಿಯ ಪಾತ್ರ!: ಮಾರುತಿ ಗೋಪಿಕುಂಟೆ ಸರಣಿ

ಈ ಸಲ ತಲೆಗೆ ಜೋಡಿಸಿಕಟ್ಟಿದ್ದ ಜಡೆಕುಚ್ಚು ಬಿಚ್ಚಿಕೊಳ್ಳುವ ಸಂಭವವೆ ಜಾಸ್ತಿ ಇತ್ತು. ಹೇಗೊ ನೃತ್ಯವಂತೂ ಮುಗಿದಿತ್ತು. ಆದರೆ ನಂತರದ್ದು ಇನ್ನೊಂದು ಸಂಕಟ ದೃಶ್ಯ ಮುಂದುವರಿದಿತ್ತು. ಜಡೆ ಬೀಳಬಾರದು ಬಿದ್ದರೆ ಅಸಹ್ಯವಾಗಿ ಕಾಣುತ್ತದೆ ಎಂಬ ಭಯದಿಂದಲೆ ನಿಂತ ಸ್ಥಳದಲ್ಲಿಯೇ ನಿಂತು ಸಂಭಾಷಣೆ ಹೇಳುವುದಕ್ಕೆ ಪ್ರಾರಂಭಿಸಿದೆ. ನನ್ನ ಎದುರಿನ ಪಾತ್ರಧಾರಿ ಈ ಕಡೆಯಿಂದ ಆ ಕಡೆಯಿಂದ ಓಡಾಡುತ್ತ ಸಂಭಾಷಿಸುತ್ತಿದ್ದಾನೆ. ಆತ ನೀನು ಓಡಾಡುತ್ತ ಸಂಭಾಷಿಸು ಎಂಬ ಕಣ್ಸನ್ನೆ ನೀಡುತ್ತಿದ್ದಾನೆ. ಆದರೆ ನನ್ನ ಕಷ್ಟ ಅವನಿಗೆ ಅರ್ಥವಾಗುತ್ತಿಲ್ಲ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಒಂಭತ್ತನೆಯ ಕಂತು ನಿಮ್ಮ ಓದಿಗೆ

read more
ಕಾಶಿಗೆ ಹೋಗಲೂ ಚೌಕಾಶಿಯೇ: ಡಾ. ಚಂದ್ರಮತಿ ಸೋಂದಾ ಸರಣಿ

ಕಾಶಿಗೆ ಹೋಗಲೂ ಚೌಕಾಶಿಯೇ: ಡಾ. ಚಂದ್ರಮತಿ ಸೋಂದಾ ಸರಣಿ

ಕೆಲವು ಬಾರಿ ಮನೆಯ ತಾಪತ್ರಯವಿದ್ದಾಗ ಸುಗ್ಗಿ ಮಾಡಲು ಕಷ್ಟ ಅಂತ ಫಸಲುಗುತ್ತಿಗೆ ಅಂತ ಕೊಡುವ ರೂಢಿಯಿತ್ತು. ಬೆಳೆಯ ಅಂದಾಜು ಮಾಡಿ ಇಂತಿಷ್ಟು ಹಣ ಅಂತ ನಿಗದಿಮಾಡಿ ಒಟ್ಟಾಗಿ ಹಣವನ್ನು ಸಂದಾಯ ಮಾಡುತ್ತಿದ್ದರು. ಆ ವರ್ಷ ಬೆಳೆ ಅಂದಾಜಿಗಿಂತ ಹೆಚ್ಚಾದರೆ ಅಥವಾ ಇವರ ಬೆಳೆಗೆ ಒಳ್ಳೆಯ ದರ ಬಂದರೆ ಬೆಳೆಗಾರರು ಕೈಕೈ ಹಿಸುಕಿಕೊಳ್ಳುತ್ತಿದ್ದರು. ʻಅಯ್ಯೋ! ಅನ್ಯಾಯವಾಗಿ ದುಡ್ಡು ಕಳಕಂಡೆ.ʼ ಅಂತ.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಎರಡನೆಯ ಬರಹ

read more
ತಾವಾಗೇ ಬಿದ್ದವರು ನನ್ನ ಬೈದಿದ್ದರು!: ಎಚ್. ಗೋಪಾಲಕೃಷ್ಣ ಸರಣಿ

ತಾವಾಗೇ ಬಿದ್ದವರು ನನ್ನ ಬೈದಿದ್ದರು!: ಎಚ್. ಗೋಪಾಲಕೃಷ್ಣ ಸರಣಿ

ಬರ್ತಾ ಬರ್ತಾ ಅಜ್ಜಿ ಒಂದು ಗುಂಡಿಯಲ್ಲಿ ನೋಡದೆ ಕಾಲು ಇಟ್ಟಿತು. ಮೊಗಚಿಕೊಂಡು ಹಳ್ಳದಲ್ಲಿ ಮುಖಾಡೆ ಬಿದ್ದು ಬಿಡ್ತು. ಎಪ್ಪತ್ತು ವರ್ಷದ ಕೆಂಪು ಸೀರೆ ಉಟ್ಟ ಮಡಿ ಹೆಂಗಸು ಅಜ್ಜಿ ಆಗ. ತೆಳು ದೇಹ, ಮುಟ್ಟಿದ ಕಡೆ ಎಲ್ಲಾ ಮೂಳೆಗಳೇ, ಬೊಚ್ಚು ಬಾಯಿ ವಟ ವಟ ವಟ ನಾನ್ ಸ್ಟಾಪ್ ಮಾತು. ಅದು ಹೇಗೋ ಅವರನ್ನು ಮೇಲೆ ಎಬ್ಬಿಸಿದೆ. ದಾರಿ ಉದ್ದಕ್ಕೂ ಅದರ ಕೈಲಿ ಸಹಸ್ರ ನಾಮ ಮಾಡಿಸಿಕೊಂಡೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಒಂಭತ್ತನೆಯ ಕಂತು ನಿಮ್ಮ ಓದಿಗೆ

read more
ಅರ್ಧ ಶತಮಾನದ ರಾಜಕೀಯ ಅರಿವು: ರಂಜಾನ್‌ ದರ್ಗಾ ಸರಣಿ

ಅರ್ಧ ಶತಮಾನದ ರಾಜಕೀಯ ಅರಿವು: ರಂಜಾನ್‌ ದರ್ಗಾ ಸರಣಿ

ಚುನಾವಣೆಯ ದಿನ ವಿಜಾಪುರದ ಒಂದು ಹಳ್ಳಿಯಲ್ಲಿ ನಡೆದ ಘಟನೆಯೊಂದು ನೆನಪಿಗೆ ಬರುತ್ತಿದೆ. ಆಗ ಹತ್ತಿ ಬಿಡಿಸುವ ಕಾಲವಾಗಿತ್ತು. ಜಮೀನುದಾರರು ಚುನಾವಣೆಯ ಹಿಂದಿನ ದಿನ ಆ ಹಳ್ಳಿಯಲ್ಲಿ ಘೋಷಣೆ ಮಾಡಿದ್ದು ಬಹಳ ಹೊಸದಾಗಿತ್ತು. ಚುನಾವಣೆ ದಿನ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ತಮ್ಮ ಹೊಲಗಳಲ್ಲಿ ಬೇಕಾದಷ್ಟು ಹತ್ತಿ ಬಿಡಿಸಿಕೊಂಡು ಹೋಗಬಹುದೆಂದು ಘೋಷಿಸಿದರು. ಆದರೆ ಹಳ್ಳಿಗರು ಹತ್ತಿಯ ಆಸೆಗಾಗಿ ಮತ ಚಲಾಯಿಸುವುದನ್ನು ಬಿಡಲಿಲ್ಲ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 66ನೇ ಕಂತು ನಿಮ್ಮ ಓದಿಗೆ

read more
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ ಆರಂಭ

ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ ಆರಂಭ

ಒಂದು ಕಾಲಕ್ಕೆ ಭರ್ಜರಿ ಭತ್ತ ಬೆಳೆಯುತ್ತಿದ್ದ ಗದ್ದೆಗಳು ಈಗ ವಾಸದ ಮನೆಗಳಾಗಿವೆ. ತಿಳಿ ನೀರು ಹರಿಯುತ್ತಿದ್ದ ತೋಡು ಮನುಷ್ಯನ ಕೊಳಕು ಆ ತೋಡನ್ನು ಸೇರಿ ಸೇರಿಸಿಕೊಂಡು ಕಪ್ಪಗೆ ಹರಿಯುತ್ತಿದ್ದರೆ ಇದು ಮನುಷ್ಯನ ನಾಗರೀಕತೆಯ ಹಂಬಲದ ಮುಖವಾಣಿ ಅನ್ನಿಸುತ್ತದೆ. ಒಟ್ಟು ನಮ್ಮೂರು ಮಡಿಕೇರಿ ಅಲ್ಲ ಮಡಿಯಾದಕೇರಿ ಈಗ ನಗರೀಕರಣಕ್ಕೆ ಒಳಗುಗೊಳ್ಳುವ ಹಂಬಲದಲ್ಲಿ ಮೂಲ ಸೌಂದರ್ಯವನ್ನು ಕಳೆದುಕೊಳ್ಳುತ್ತಿದೆ.
ಸುಮಾವೀಣಾ ಬರೆಯುವ ಮಡಿಕೇರಿಯಲ್ಲಿ‌ ಕಳೆದ ಬಾಲ್ಯದ‌ ನೆನಪುಗಳ ಸರಣಿ “ಕೊಡಗಿನ ವರ್ಷಕಾಲ” ಇಂದಿನಿಂದ ಹದಿನೈದು ದಿನಗಳಿಗೊಮ್ಮೆ

read more
“ಆ ಸಾವು ಮತ್ತು ಹಸಿವು”: ಮಾರುತಿ ಗೋಪಿಕುಂಟೆ ಸರಣಿ

“ಆ ಸಾವು ಮತ್ತು ಹಸಿವು”: ಮಾರುತಿ ಗೋಪಿಕುಂಟೆ ಸರಣಿ

ಅಂದು ಮಧ್ಯಾಹ್ನದ ಉಪ್ಪಿಟ್ಟು ತರುವವನು ಮಧ್ಯಾಹ್ನ ಒಂದುಗಂಟೆಯಾದರೂ ಬಂದಿರಲಿಲ್ಲ. ಈಗಿನಂತೆ ಅವಾಗ ಯಾವ ಫೋನು ಸಹ ಇರಲಿಲ್ಲ. ಹಾಗಾಗಿ ಅವನು ಯಾಕೆ ಬರಲಿಲ್ಲ ಎಂದು ತಿಳಿದುಕೊಳ್ಳುವುದು ಹೇಗೆ ಎಂದು, ಹಿರಿಯ ವಿದ್ಯಾರ್ಥಿಯೊಬ್ಬನನ್ನು ಸೈಕಲ್ಲಿನಲ್ಲಿ ಆತ ಬರುವ ಹಾದಿಗೆ ಹೋಗಿ ನೋಡಿಕೊಂಡು ಬರುವಂತೆ ಕಳುಹಿಸಲಾಯ್ತು. ಆದರೆ ರಸ್ತೆಯಲ್ಲಿ ಆತನ ಸುಳಿವಿರಲಿಲ್ಲ. ಆದರಲ್ಲಿ ಮಕ್ಕಳು ಮಧ್ಯಾಹ್ನದ ಫಲಹಾರಕ್ಕಾಗಿ ಕಾದಿದ್ದರು. ಕೆಲವರ ಮುಖಗಳು ಬಾಡಿಹೋಗಿದ್ದವು. ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಎಂಟನೆಯ ಕಂತು ನಿಮ್ಮ ಓದಿಗೆ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ