Advertisement

ಸರಣಿ

ಅಪ್ಪನ ಅಲ್ಸರ್ ಖಾಯಿಲೆ ಮತ್ತು ಅಂಕಗಳ ವ್ಯಾಮೋಹ

ಅಪ್ಪನ ಅಲ್ಸರ್ ಖಾಯಿಲೆ ಮತ್ತು ಅಂಕಗಳ ವ್ಯಾಮೋಹ

ಈಗಿನಂತೆ ಮೊಬೈಲ್ ಕಾಲವೂ ಅಲ್ಲ. ಊರಿಗೆ ಲ್ಯಾಂಡ್ ಫೋನ್‌ ಸಹ ಇರಲಿಲ್ಲ. ಅಪ್ಪನ ಜೊತೆಯಲ್ಲಿ ಹೋಗಿದ್ದ ಕೆಲವರು ಬೆಳಿಗ್ಗೆ ಬಂದು ಹೇಳಿದಾಗಲೆ ನಮಗೆ ತಿಳಿದಿದ್ದು. ಅಪ್ಪನಿಗೆ ‘ಅಲ್ಸರ್’ ಆಗಿದೆ ವಿಪರೀತ ಹಾಲ್ಕೋಹಾಲ್ ಸೇವನೆಯಿಂದ ಹೀಗಾಗಿದೆ ಎಂದು. ಬೆಳಗ್ಗೆಯಷ್ಟರಲ್ಲಿ ಶಸ್ತ್ರಚಿಕಿತ್ಸೆ ಮುಗಿದು, ಯಶಸ್ವಿಯಾಗಿತ್ತು. ಜೀವಕ್ಕೆ ಅಪಾಯವಿರಲಿಲ್ಲ. ಆದರೆ ಮೂರು ತಿಂಗಳು ಆಸ್ಪತ್ರೆಯಲ್ಲಿಯೇ ಇರಬೇಕು ಎಂಬ ವಿಷಯವನ್ನು ತಿಳಿಸಿದ್ದರು. ರಾತ್ರಿ ಇಡೀ ನಿದ್ದೆಯಿಲ್ಲದೆ ಆತಂಕದಿಂದಲೇ ಕಳೆದಿದ್ದ ನಾವೆಲ್ಲ ನಿಟ್ಟುಸಿರು ಬಿಟ್ಟಿದ್ದೆವು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಆರನೆಯ ಕಂತು ನಿಮ್ಮ ಓದಿಗೆ

read more
ಕನ್ನಡ ಚಳವಳಿಯ ಕಾಲದಲ್ಲಿ…

ಕನ್ನಡ ಚಳವಳಿಯ ಕಾಲದಲ್ಲಿ…

ಕನ್ನಡ ಸಂಯುಕ್ತ ರಂಗ ಎನ್ನುವ ಸಂಘಟನೆ ಚಳವಳಿಗೆ ಅಂತಲೇ ರೂಪುಗೊಂಡಿತ್ತು. ರಾಮಮಂದಿರದ ಬಳಿಯ ಒಂದು ಅಂಗಡಿಯ ಮೇಲೆ ಎರಡು ಮೈಕ್ ಸ್ಟಾಂಡ್ ಇಟ್ಟು ಮೂರು ನಾಲ್ಕು ಕಬ್ಬಿಣದ ಫೋಲ್ಡಿಂಗ್ ಖುರ್ಚಿ ಹಾಕುತ್ತಿದ್ದ ವೇದಿಕೆ ಅದು. ಪಕ್ಕದಲ್ಲೇ ಇಪ್ಪತ್ತು ಮೂವತ್ತು ಅಡಿ ಎತ್ತರದ ಬೊಂಬಿನ ಏಣಿ ಇಟ್ಟಿರುತ್ತಿದ್ದರು. ಅದರ ಮೂಲಕ ಅಂಗಡಿ ಚಾವಣಿ ಏರುತ್ತಿದ್ದರು, ಭಾಷಣಕಾರರು. ಒಬ್ಬೊಬ್ಬರ ಭಾಷಣವೂ ಉದ್ರೇಕ ರಹಿತ ಮತ್ತು ಅತ್ಯಂತ ಸೌಮ್ಯ. ಹೇಳಬೇಕಾದ್ದನ್ನು ಅತಿಶಯೋಕ್ತಿ ಇಲ್ಲದೆ ಚಿಕ್ಕ ಚೊಕ್ಕದಾಗಿ ಹೇಳುತ್ತಿದ್ದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಆರನೆಯ ಕಂತು ನಿಮ್ಮ ಓದಿಗೆ

read more
ಕರುಣಾಳು ಬಾ ಬೆಳಕೆ…

ಕರುಣಾಳು ಬಾ ಬೆಳಕೆ…

ಅಂಗಳದಲ್ಲಿ ಯಾರೂ ಕಾಣಲಿಲ್ಲ. ಅಲ್ಲಿ ಯಾವ ಮರ್ಸಿಡಿಸ್, ಬೆನ್ಝ್ ಕಾರುಗಳೂ ನಿಂತಿರಲಿಲ್ಲ. ಭಕ್ತಾದಿಗಳ ಜನಜಂಗುಳಿ ಇರಲಿಲ್ಲ. ಝಗ ಝಗಿಸುವ ದೀಪಾಲಂಕೃತ ವೇದಿಕೆ, ಮೆತ್ತನೆಯ ಗಾದಿ ಯಾವುದೂ ಇರಲಿಲ್ಲ. ಇದ್ದುದೆಲ್ಲ ಕೇವಲ ನೀರವತೆ. ಒಳಗೆ ಯಾವುದೋ ಕೋಣೆಯೊಳಗಿಂದ ಬೆಳಕು ಕಾಣುತ್ತಿತ್ತು. ಆ ಕೋಣೆಯ ಕಿಟಕಿಯ ಬಳಿ ನಿಂತೆವು.
ಗಿರಿಜಾ ಶಾಸ್ತ್ರಿ ಬರೆಯುವ “ಆ ಕಾಲದ ರಾಜಲಕ್ಷ್ಮಿ” ಸರಣಿಯಲ್ಲಿ ಹೊಸ ಬರಹ

read more
ಲಂಡನ್ನಿನ ಸ್ಮರಣೆಯಲ್ಲಿ ದೇಶಭಕ್ತ ತಾತ್ವಿಕರು…

ಲಂಡನ್ನಿನ ಸ್ಮರಣೆಯಲ್ಲಿ ದೇಶಭಕ್ತ ತಾತ್ವಿಕರು…

ನ್ಯಾಯಾಂಗ ಹೋರಾಟದ ಸೋಲು ತಿಲಕರ ಖ್ಯಾತಿಯನ್ನು ವರ್ಚಸ್ಸನ್ನು ಹೆಚ್ಚಿಸಿತ್ತು. ದಂತಕತೆಯಾಗಿದ್ದ ಪ್ರಸಿದ್ಧ ಪತ್ರಿಕೋದ್ಯಮಿ ಬೆಂಜಮಿನ್ ಹಾರ್ನಿಮನ್ ಸಂಪಾದಕತ್ವದ “ಬಾಂಬೆ ಕ್ರೋನಿಕಲ್” ಪತ್ರಿಕೆ “ಬ್ರಿಟಿಷ್ ಜ್ಯೂರಿ ಮತ್ತು ನ್ಯಾಯಾಧೀಶರು ಲೋಕಮಾನ್ಯ ತಿಲಕರ ಬಗ್ಗೆ ಹೇಳಿದುದನ್ನು ಯಾರು ಗಂಭೀರವಾಗಿ ತೆಗೆದುಕೊಳ್ಳುತ್ತಾರೆ? ಜನರ ಪ್ರೀತಿಯ ಹೃದಯಸಿಂಹಾಸನದಿಂದ ತಿಲಕರನ್ನು ಕೆಳಗಿಳಿಸುವಲ್ಲಿ ಕೋರ್ಟಿನ ನಿರ್ಣಯಗಳೆಲ್ಲ ನಿರರ್ಥಕ” ಎಂದು ಬರೆದಿತ್ತು.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯ ಕೊನೆಯ ಕಂತಿನಲ್ಲಿ ಯೋಗೀಂದ್ರ ಮರವಂತೆ ಬರಹ

read more
ಬಾಂಬುದಾಳಿಗೀಡಾಗಿ ಬಾನುಲಿ ಬರಿದಾಗಿದೆ ಮೌನವಾಗಿದೆ…

ಬಾಂಬುದಾಳಿಗೀಡಾಗಿ ಬಾನುಲಿ ಬರಿದಾಗಿದೆ ಮೌನವಾಗಿದೆ…

ಭಾಷಣ ಸ್ಪರ್ಧೆಯ ದಿನ ಬಂದಿತು. ಹೈಸ್ಕೂಲು ಕಟ್ಟಡದ ಹಿಂದಿನ ಗೋಡೆಯ ಮೇಲೆ ಹೋಗಿ ಕುಳಿತೆ. ಗೋಡೆ ಜಿಗಿದು ಸಭಾಭವನಕ್ಕೆ ಹೋಗಬೇಕೆಂದರೆ ಧೈರ್ಯ ಸಾಲದು. ಹಾಫ್ ಪ್ಯಾಂಟ್ ಹರಿದಿತ್ತು. ಷರ್ಟ್ ಗಲೀಜಾಗಿತ್ತು. ಕ್ಷೌರಿಕರಿಗೆ ಕೊಡಲಿಕ್ಕೆ ಹಣವಿಲ್ಲದ್ದಕ್ಕಾಗಿ ಕೂದಲು ಬೆಳೆದಿತ್ತು. ಕೊಬ್ಬರಿ ಎಣ್ಣೆ ಇಲ್ಲದ್ದಕ್ಕಾಗಿ ಕೂದಲು ಒಣಗಿದ್ದರಿಂದ ಕಾಡು ಮನುಷ್ಯನ ಹಾಗೆ ಕಾಣುತ್ತಿದ್ದೆ. ಭಾಷಣ ಮಾಡುವ ಸ್ಫೂರ್ತಿಗೆ ಪೂರಕವಾಗಿರುವಂಥ ಯಾವುದೂ ಇರಲಿಲ್ಲ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 63ನೇ ಕಂತು ನಿಮ್ಮ ಓದಿಗೆ

read more
“ಆ ಕಾಲದ ರಾಜಲಕ್ಷ್ಮಿ…” ಸರಣಿ ಆರಂಭ

“ಆ ಕಾಲದ ರಾಜಲಕ್ಷ್ಮಿ…” ಸರಣಿ ಆರಂಭ

ರಾಜಲಕ್ಷ್ಮಿ ಎನ್. ರಾವ್ ಅವರನ್ನು ಅವರ ಕತೆಗಳ ಮೂಲಕ ಪರಿಚಯ ಮಾಡಿಕೊಂಡು ಸುಮಾರು ಮೂವತ್ತು ವರುಷಗಳ ಮೇಲಾಯಿತು. ನನ್ನ ಅಧ್ಯಯನ ಮತ್ತು ವೆಂಕಟಲಕ್ಷ್ಮಿಯವರ ಸಂದರ್ಶನದ ಒಟ್ಟು‌ ಮೊತ್ತವಾಗಿ ನಾನು ಕಂಡುಕೊಂಡ ಕತೆಗಾರ್ತಿ ರಾಜಲಕ್ಷ್ಮಿಯವರು ಬೆರಗು ಹುಟ್ಟಿಸಿದರು. ಸುಮಾರು ಹತ್ತು ಹನ್ನೆರೆಡು ವರ್ಷಗಳ ಹಿಂದೆ ಸನ್ಯಾಸಿನಿಯಾದ ಅವರನ್ನು ನಾನು ಅವರ ಆಶ್ರಮದಲ್ಲಿ ಭೇಟಿಯಾದಾಗ ಆ ಬೆರಗು ಬೆಳಕಾಗಿ ನನ್ನ ಮುಂದೆ ನಿಂತಿತ್ತು. ಆ ಬೆಳಕು ಈಗ ವಿಸ್ಮಯವಾಗಿದೆ.
ಗಿರಿಜಾ ಶಾಸ್ತ್ರಿ ಬರೆಯುವ ಸರಣಿ “ಆ ಕಾಲದ ರಾಜಲಕ್ಷ್ಮಿ” ಪ್ರತಿ ಶುಕ್ರವಾರದಂದು ನಿಮ್ಮ ಕೆಂಡಸಂಪಿಗೆಯಲ್ಲಿ

read more
ಮಾಡಿದ ತಪ್ಪುಗಳು ಮತ್ತು ಅಪ್ಪನ ಶಿಕ್ಷೆ…

ಮಾಡಿದ ತಪ್ಪುಗಳು ಮತ್ತು ಅಪ್ಪನ ಶಿಕ್ಷೆ…

ಇಬ್ಬರ ನಾಗಾಲೋಟದ ಓಟ ರೇಸಿಗೆ ಬಿದ್ದಂತೆ ಸಾಗುತ್ತಿದೆ. ನಾನು ಮುಂದೆ ಅಪ್ಪ ಹಿಂದೆ. ಓಡಿದೆ ಓಡಿದೆ….. ಅಪ್ಪನೂ ನಿಲ್ಲಿಸಲಿಲ್ಲ… ಊರ ಹೊರಭಾಗದ ರಸ್ತೆಯನ್ನು ಒಂದು ಸುತ್ತು ಸುತ್ತಿಸಿದೆ. ಅಪ್ಪ ಸುಸ್ತಾದ ಅಂತ ಕಾಣುತ್ತದೆ. ಊರಿಗೆ ಹತ್ತಿರವಾಗಿ ನಮ್ಮ ಮನೆಗೆ ಹೋಗುವ ದಾರಿಯಲ್ಲಿ ಜೋಳದ ಹೊಲ ಇತ್ತು ಅದು ಗುಂಪು ಗುಂಪಾಗಿತ್ತು. “ನಿಲ್ಲು ಓಡ್ಬೇಡ… ಓಡ್ಬೇಡ…” ಅಪ್ಪ ಕೂಗುತ್ತಲೆ ಇದ್ದ. ಅದಕ್ಕಾಗಿ ನಾನು ಓಡುವುದನ್ನು ನಿಲ್ಲಿಸಲಿಲ್ಲ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಐದನೆಯ ಕಂತು ನಿಮ್ಮ ಓದಿಗೆ

read more
ಸಾಂಸ್ಕೃತಿಕ ಲೋಕಕ್ಕೆ ವೇದಿಕೆಯಾಗಿದ್ದ ನಗರ…

ಸಾಂಸ್ಕೃತಿಕ ಲೋಕಕ್ಕೆ ವೇದಿಕೆಯಾಗಿದ್ದ ನಗರ…

ಪವರ್ ಹೌಸ್ ಹಿಂಭಾಗವೇ ಶಿವನ ಹಳ್ಳಿ. ಆಗ ಅರವತ್ತರ ದಶಕದಲ್ಲಿ ಒಂದು ಹದಿನೈದು ಅಡಿ ಅಗಲದ ಮಣ್ಣಿನ ರಸ್ತೆ ಇವೆರೆಡರ ಮಧ್ಯೆ ಹಾದು ಹೋಗುತ್ತಿತ್ತು. ಪೂರ್ತಿ ಏರಿಯಾ ರೆವೆನ್ಯೂ ನಿವೇಶನಗಳು. ಅರವತ್ತು ನೂರರ ಸೈಟುಗಳು ಐನೂರು ಆರು ನೂರು ರೂಪಾಯಿ. ಸುಮಾರು ಜನ ನಿವೇಶನ ಕೊಂಡವರು ರೆವೆನ್ಯೂ ಆಸ್ತಿ, ಸೈಟು ರೋಡ್ ಆಗುತ್ತೆ ಅಂತ ಹೆದರಿ ಮಾರಿದರು. ಎಷ್ಟೋ ಜನರಿಗೆ ಈ ರೀತಿ ಆಗಿ ಆಗಿ ಹೆದರಿದ್ದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐದನೆಯ ಕಂತು ನಿಮ್ಮ ಓದಿಗೆ

read more
ಬಾರ್ಡೋಲಿಯ ಸರ್ದಾರರ ಬ್ಯಾರಿಸ್ಟರ್ ದಿನಗಳು

ಬಾರ್ಡೋಲಿಯ ಸರ್ದಾರರ ಬ್ಯಾರಿಸ್ಟರ್ ದಿನಗಳು

ಹೈಸ್ಕೂಲಿನಲ್ಲಿ ಕೋಲಿನಿಂದ ಯಾವಾಗಲೂ ಮಕ್ಕಳನ್ನು ವಿಪರೀತ ಹೊಡೆಯುತ್ತಿದ್ದ, ವಿದ್ಯಾರ್ಥಿಗಳಿಗೆ ದೊಡ್ಡ ದಂಡ ವಿಧಿಸುತ್ತಿದ್ದ ಶಿಕ್ಷಕರೊಬ್ಬರ ವರ್ತನೆಯನ್ನು ಪ್ರತಿಭಟಿಸಿ ಗಲಾಟೆ ಮಾಡಿದ್ದರು. ಸಹವಿದ್ಯಾರ್ಥಿಗಳನ್ನು ಸಂಘಟಿಸಿ ತರಗತಿ ಬಹಿಷ್ಕರಿಸಿದ್ದರು. ಪಟೇಲರು ಸಂಘಟಿಸಿದ ಶಾಲಾದಿನಗಳ ಮೊದಲ ಮುಷ್ಕರ ಮೂರನೆಯ ದಿನಕ್ಕೆ ಕಾಲಿಟ್ಟಾಗ, ಹುಡುಗನ ನಾಯಕತ್ವ ಮತ್ತು ಸಂಘಟನೆಯನ್ನು ಗುರುತಿಸಿದ ಪ್ರಾಂಶುಪಾಲರು ಮಧ್ಯ ಪ್ರವೇಶಿಸಿ, ವಿದ್ಯಾರ್ಥಿಗಳನ್ನು ಮುಂದೆಂದೂ ಆ ಅಧ್ಯಾಪಕರು ಕಟುವಾಗಿ ಶಿಕ್ಷಿಸದಿರುವ ಆಶ್ವಾಸನೆ ನೀಡಿದರು.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಯೋಗೀಂದ್ರ ಮರವಂತೆ ಬರಹ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ