ಸೀರೆಯ ಸೆರಗಿನಲ್ಲಿ ಅನ್ನ-ಸಾರು….!
ಹೊಸಪೇಟೆಯ ಬಡತನ ನನ್ನನ್ನು ದಿಗಿಲು ಬಡಿಸಿತು. ಬೆಳಗಿನ ನಾಷ್ಟಾ ಮತ್ತು ಮಧ್ಯಾಹ್ನದ ಊಟದ ವೇಳೆ, ತಂತಿಬೇಲಿಯ ಆಚೆ ಬಡವರು ಅನ್ನಕ್ಕಾಗಿ ಕಾಯುತ್ತಿದ್ದರು. ನಮಗೆ ಇಲ್ಲಿ ಬೇಕಾದಷ್ಟು ಆಹಾರ ನೀಡುತ್ತಿದ್ದರು. ನನ್ನ ಕೆಲವರು ಗೆಳೆಯರಿಗೆ ಆ ನಿರ್ಗತಿಕರ ಬಗ್ಗೆ ತಿಳಿಸಿ ಒಂದು ಯೋಜನೆ ರೂಪಿಸಿದೆ. ನಾವೆಲ್ಲ ಹೆಚ್ಚಿಗೆ ಅನ್ನ ಹಾಕಿಸಿಕೊಳ್ಳುವುದು. ಸ್ವಲ್ಪ ತಿಂದ ಹಾಗೆ ಮಾಡಿ ಅವರ ಬಳಿ ಹೋಗುವುದು. ಆ ಬಡ ಹೆಣ್ಣುಮಕ್ಕಳು ಸೆರಗೊಡ್ಡುವುದು.
ರಂಜಾನ್ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 62ನೇ ಕಂತು ನಿಮ್ಮ ಓದಿಗೆ.
ಗಂಟಲೊಳಗಿನ ನಾಣ್ಯ ಮತ್ತು ಆಸೆಯ ಕಣ್ಣು
ಹಟ್ಟಿಯ ಅಂಗಳಕ್ಕೆ ಬಂದವನೆ ಸಡನ್ನಾಗಿ ನಿಂತುಕೊಂಡೆ. ಅಪ್ಪ ಎದುರಿಗೆ ನಿಂತಿದ್ದಾನೆ. ಭೀಮನ ಗದೆಯಂತ ಕೋಲು ಹಿಡಿದು ತೇಪೆಯ ಅಂಗಿಯ ತೊಟ್ಟು.. ಸಿಟ್ಟಿಗೆ ಮುಖ ನಡುಗುತ್ತಿದೆ… ಕೈಯಲ್ಲಿನ ಕೋಲು ಕುಣಿಯುತ್ತಿದೆ. ನನಗೆ ಎಲ್ಲವೂ ಅರ್ಥವಾಗಿತ್ತು. ಅಪ್ಪನಿಗೆ ನಾನು ಹಣ ತೆಗೆದುಕೊಂಡಿದ್ದು ಗೊತ್ತಾಗಿದೆ. ಪಕ್ಕದಲ್ಲಿ ಅಕ್ಕ ನಿಂತಿದ್ದಳು. ಅವಳ ಮುಖದಲ್ಲಿ ನಗು ನೋಡಿ ಅರ್ಥವಾಯಿತು. ಓ.. ನಾನು ಬೆಳಿಗ್ಗೆ ತೆಗೆದುಕೊಳ್ಳುವಾಗ ಇವಳು ನೋಡಿರಬೇಕು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ನಾಲ್ಕನೆಯ ಕಂತು ನಿಮ್ಮ ಓದಿಗೆ
ಮರೆಯಲಾಗದ ಸಾವಿನ ನೋವು…
ಈ ದಾರುಣ ಸಾವಿನ ಪ್ರಕರಣದ ನಂತರ ಸುಮಾರು ದಿವಸ ನಮಗೆ ಇಡೀ ಪ್ರಪಂಚ ಖಾಲಿ ಖಾಲಿ ಅನಿಸಿತ್ತು. ಈ ಹುಡುಗರ ಸಂಪರ್ಕ ಹೆಚ್ಚಿದ್ದ ಮನೆಯವರ ಪಾಡು ಯಾರಿಗೂ ಬೇಡ. ಮಕ್ಕಳನ್ನು ಈ ದುಃಖದ ಮಡುವಿನಿಂದ ಆಚೆ ಸೆಳೆಯಲು ಕೆಲವರು ಅವರ ಮಕ್ಕಳು ಮತ್ತು ಅವರ ಸ್ನೇಹಿತರನ್ನು ದೂರದ ಊರಿಗೆ ಕಳಿಸಿದ್ದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ನಾಲ್ಕನೇ ಕಂತು ನಿಮ್ಮ ಓದಿಗೆ
ಪ್ರಬಂಧಕಾರನಿಗೆ ಉಪದೇಶಾಮೃತ
ಪ್ರಾಮಾಣಿಕವಾದದ್ದಾಗಲೀ, ಯಥೋಚಿತವಾದದ್ದಾಗಲೀ, ದುರುದ್ದೇಶಪೂರ್ವಕವಾದದ್ದಾಗಲೀ ಉಪದೇಶವೆಂಬುದು ಉಪದೇಶವೇ! ಈ ಜಗತ್ತಿನಲ್ಲಿ ಉಪದೇಶಗಳಿಂದ ಆಗಿರುವಷ್ಟು ಹಾವಳಿ ಇನ್ನು ಯಾವುದರಿಂದಲೂ ಆಗಿಲ್ಲ. ಎಲ್ಲ ಬಣ್ಣದ, ಎಲ್ಲ ನೆರಳಿನ, ಎಲ್ಲ ಧರ್ಮದ, ಎಲ್ಲ ವಿತಂಡವಾದದ ಸಕಲ ರೀತಿಯ ಆಧ್ಯಾತ್ಮಿಕ, ಸಾಂಸ್ಕೃತಿಕ ಉಪದೇಶಗಳಿಂದ ಈ ಜಗತ್ತು ನಲುಗಿ ನಲುಗಿ ಬಸವಳಿದುಹೋಗಿದೆ. ಈಗಾಗಲೇ ಸತ್ಯವನ್ನು ಕಂಡಾಗಿದೆ, ಹೇಳಿಯೂ ಆಗಿದೆ ಎಂಬ ಬಾಲಿಶ ಧೋರಣೆಯಿಂದ ಕೊನೆಗೂ ನಾನು ಒಂದು ಮಾತು ಹೇಳುತ್ತೇನೆ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಕೊನೆಯ ಪ್ರಬಂಧ ನಿಮ್ಮ ಓದಿಗೆ
ಇಲ್ಲಿದ್ದಾನೆ… ನೀರಿನಲ್ಲಿ ಹೆಸರು ಕೆತ್ತಲಾದವನು
ಸಹೋದರನನ್ನು ಕಳೆದುಕೊಂಡ ಶೋಕ ದುಮ್ಮಾನ ಒಂದು ಕಡೆ, ಹೊಸ ಸ್ನೇಹ ಪ್ರೇಮಾಂಕುರಗಳ ಜೀವಸೆಲೆ ಇನ್ನೊಂದೆಡೆ, ಅವನ ಕವಿತೆಗಳು ಆ ಇಡೀ ವರ್ಷ ನೋವು ನಲಿವುಗಳ, ಖಿನ್ನತೆ ಉತ್ಸಾಹಗಳ ಉಯ್ಯಾಲೆಯಲ್ಲಿ ತೂಗಿ ತೇಲಿದವು. ವಾಸ್ತವದಲ್ಲಿ ಹರುಷ ಹಾಗು ವ್ಯಥೆಗಳು ಜೊತೆಜೊತೆಗೆ ಬದುಕಿ ಸಾಗುವುದನ್ನು ಪ್ರದರ್ಶಿಸಿದವು. ಬೇರೆಬೇರೆ ವಸ್ತುಗಳ ಪದ್ಯಗಳನ್ನು ಬೇರೆಬೇರೆ ಛಂಧಸ್ಸಿನಲ್ಲಿ ಬರೆಯುವ ಕೌಶಲ ಆತನಿಗಿತ್ತು.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಕವಿ ಜಾನ್ ಕೀಟ್ಸ್ ಕುರಿತ ಬರೆದಿದ್ದಾರೆ ಯೋಗೀಂದ್ರ ಮರವಂತೆ
ವಿದ್ಯಾರ್ಥಿಗಳ ಓದಿಗೆ ಆಸರೆಯಾಗುತ್ತಿದ್ದ ಮಹಲುಗಳು…
ನಾನಿದ್ದಲ್ಲಿಂದ ಅಲ್ಲಿಗೆ ಹೋಗಲು 10 ನಿಮಿಷ ಬೇಕಿತ್ತು. ಅಲ್ಲಿಗೇ ಹೊರಟೆ. ‘ಮನೆಯಲ್ಲಿ ಎಲ್ಲರೂ ಕೂಡಿ ತಿನ್ನುವುದು ಒಳ್ಳೆಯದು’ ಎಂದು ಒಳತೋಟಿ ಹೇಳುತ್ತಿತ್ತು. ಆದರೆ ನಾನು ಕೇಳುವ ಪರಿಸ್ಥಿತಿಯಲ್ಲಿರಲಿಲ್ಲ. ಹೋಗಿ ಒಂದು ಕಡೆ ಹುಲ್ಲುಹಾಸಿನ ಮೇಲೆ ಕುಳಿತು ಸ್ವಲ್ಪ ತಿನ್ನುವುದರೊಳಗಾಗಿ ಗಾರ್ಡ್ ಬಂದು ‘ಎಂಟು ಗಂಟೆ ಆಗಿದೆ’ ಎಂದು ಸೀಟಿ ಹೊಡೆದು ಎಚ್ಚರಿಸಿ ಹೊರಗೆ ಹೋಗಲು ಸೂಚಿಸಿದ.
ರಂಜಾನ್ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ
ಇತರೆಯವರು ಮತ್ತು ನಾವುಗಳು…
ಇತರೆಯವರಿಗೆ ಯಾವತ್ತೂ ನಮ್ಮಷ್ಟು ಸೂಕ್ಷ್ಮತೆ, ಅಭಿರುಚಿ, ಸಾಮರ್ಥ್ಯ ಇದೆಯೆಂದು ಯಾವ ಜಾತಿಯವರೂ ಒಪ್ಪುವುದಿಲ್ಲ. ಮೇಲು ಮತ್ತು ಕೀಳು ಜಾತಿಗಳಲ್ಲಿರುವ ತುದಿ ನಿಲುವಿನ ಮಂದಿ ಮಾತ್ರವಲ್ಲ, ಈ ಎರಡು ತುದಿ-ತುದಿಗಳ ನಡುವೆ ಇರುವ ಸಾವಿರಾರು ಜಾತಿಗಳಲ್ಲಿ ಪ್ರತಿಯೊಂದು ಜಾತಿಯವರಿಗೂ “ಇತರೆ”ಯವರ ಅಗತ್ಯವಿದೆ – ದ್ವೇಷಿಸಲು, ವಿನಾಶ ಬಯಸಲು, ಭ್ರಮಾಲೋಕದಲ್ಲಿ ಬದುಕಲು.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಹದಿಮೂರನೆಯ ಪ್ರಬಂಧ ನಿಮ್ಮ ಓದಿಗೆ
ಬಾಯಿಗೆ ಸಿಗದ ಗೆಣಸು ಮತ್ತು ಮೇಷ್ಟ್ರು ಎಸೆದ ನೋಟ್ಬುಕ್
ಎಲ್ಲರಿಗಿಂತ ಚೆನ್ನಾಗಿಯೇ ಬರೆದಿದ್ದ ನನಗೆ, ಹಾಗೆ ಮೇಷ್ಟ್ರು ಹೊಡೆದದ್ದರಿಂದ ದಿಗ್ಬ್ರಾಂತನಾಗಿ ನೋಡುತ್ತಿದ್ದೆ. ನಾನು ಸಾವರಿಸಿಕೊಳ್ಳಲು ಬಹಳ ಸಮಯ ಬೇಕಾಯಿತು. ಕಣ್ಣಿನಿಂದ ನೀರು ಸುರಿಯುತ್ತಿತ್ತು. ನೋಟ್ ಬುಕ್ ನನ್ನಿಂದ ಇಪ್ಪತ್ತೈದು ಮೀಟರ್ನಷ್ಟು ದೂರ ಬಿದ್ದಿತ್ತು. ಹಾಳೆಗಳು ಗಾಳಿಗೆ ಹಾರುತ್ತಿದ್ದವು. ಅವರ ತರಗತಿ ಮುಗಿದ ಮೇಲೆ ಈ ಹಿಂದೆ ನಮಗೂ ಹೀಗೆ ಮಾಡಿದ್ದರು ಎಂದು ನನ್ನ ಗೆಳೆಯರು ನನ್ನನ್ನು ಸಮಾಧಾನ ಮಾಡಿದರು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ
ನಮ್ಮ ಕಾಲೋನಿಯ ಮೊದಲ ಸಾವು…
ನಮ್ಮ ಎದುರು ರಸ್ತೆಯ ಎಚ್ ಎಂ ಟಿ ಕೆಲಸಗಾರ ಗೋಪಾಲರಾವ್ ಎನ್ನುವವರು ಕೊಂಚ ಮೈ ಬಿಸಿ, ಜರ ಬಂದಿದೆ ಎಂದು ವೈದ್ಯರಿಗೆ ತೋರಿಸಲು ಹೋದರು. ವೈದ್ಯರು ಚಿಕಿತ್ಸೆ ನೀಡಬೇಕಾದರೆ ಅಂದರೆ ಇಂಜೆಕ್ಷನ್ ಕೊಟ್ಟಾಗ ಅವರ ಜೀವ ಹೋಯಿತು. ವೈದ್ಯರ ನಿರ್ಲಕ್ಷ್ಯ ಎಂದು ಕಾರ್ಮಿಕರು ಕೋಪಾವೇಶಗೊಂಡರು. ಈ ಎಸ್ ಐ ಆಸ್ಪತ್ರೆ ಮುಂದೆ ಕಾರ್ಮಿಕ ಸಾಗರ ನೆರೆಯಿತು ಮತ್ತು ಪರಿಸ್ಥಿತಿ ವಿಕೋಪಕ್ಕೆ ಹೋಯಿತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಮೂರನೇ ಕಂತು ನಿಮ್ಮ ಓದಿಗೆ










