ಲೆನಿನ್ಗ್ರಾಡ್ನಲ್ಲಿ ತಿರುಗಾಡಿದ ನೆನಪುಗಳು…
ಗಲೀನಾ ಹೇಳಿದ ಮೊದಲ ಪ್ರಸಂಗವೆಂದರೆ ತಾಯಿಯೊಬ್ಬಳು ತನ್ನ ಕೂಸನ್ನು ನೀರಲ್ಲಿ ಮುಳುಗಿಸಿದ ಹೃದಯವಿದ್ರಾವಕ ಘಟನೆ. ಹಿಟ್ಲರನ ಸೈನ್ಯ ಸೋವಿಯತ್ ದೇಶದ ಹಳ್ಳಿಯೊಂದನ್ನು ಸುತ್ತುವರಿದಿತ್ತು. ರಾತ್ರಿಯ ಗಾಢಾಂಧಕಾರ ಕಳೆದ ಕೂಡಲೆ ಆ ದಟ್ಟ ಅರಣ್ಯದ ಮಧ್ಯದಲ್ಲಿನ ಹಳ್ಳಿಯ ಮೇಲೆ ಬೆಳಗಿನ ಜಾವ ದಾಳಿ ಮಾಡುವ ಯೋಜನೆಯನ್ನು ಹಿಟ್ಲರನ ಸೈನ್ಯ ರೂಪಿಸಿತ್ತು. ಈ ಸುದ್ದಿ ಗೊತ್ತಾಗಿದ್ದರಿಂದ ಆ ಹಳ್ಳಿಗರು ರಾತ್ರಿಯೆ ಹಳ್ಳಿಯನ್ನು ಬಿಟ್ಟು ಬೇರೆಕಡೆ ಹೋಗಬೇಕಿತ್ತು. ರಂಜಾನ್ ದರ್ಗಾ ಬರೆಯುವ ಆತ್ಮಕತೆಯ ಸರಣಿ
ಮಹಾಮರ್ಕಟ ಮನಸ್ಸಿನ ಸುತ್ತ…
ಮಾರ್ಟಿನ್ ಸಾಮಾನ್ಯರಂತಿರಲು ಮತ್ತು ಕಿರು ಪ್ರಮಾಣದ ಸಾವಧಾನದಿಂದಿರಲು ಬೇಕಾದ ಆಂತರಿಕ ಜೀವರಸವೇ ಇಲ್ಲದವನ ಹಾಗೆ ಕಾಣುತ್ತಾನೆ.. ಯಾವ ಬಗೆಯಲ್ಲಿ ಯೋಚಿಸಿದರೂ ಅವನ ಬುದ್ಧಿ, ಮನಸ್ಸಿನ ಎಳೆಗಳಲ್ಲಿ ಹಿಂಸಿಸುವುದಲ್ಲದೆ ಬೇರೆ ಬಣ್ಣಗಳ ಛಾಯೆಯೇ ಇರುವಂತೆ ಕಾಣುವುದಿಲ್ಲ. ಅವನು ಇತರ ಸಾಮಾನ್ಯರೊಂದಿಗೆ ಹೋಲಿಸಿಕೊಳ್ಳುವ ಮಾತಂತೂ ಹತ್ತಿರ ಸುಳಿಯುವ ಹಾಗೆಯೇ ಇರುವುದಿಲ್ಲ. ಅವನು ಸದಾಕಾಲ ಉಳಿದವರಿಗಿಂತ ಭಿನ್ನವಾಗಿ ರಚಿಸಿಕೊಂಡ ಮತ್ತು ಅದನ್ನೇ ಸಹಜವೆಂದು ನಂಬಿರುವ ಮನೋನೆಲೆಯಲ್ಲಿರುವ ವ್ಯಕ್ತಿ.
ಎ.ಎನ್. ಪ್ರಸನ್ನ ಸರಣಿ
ಚೋಳರ ರಾಜ್ಯಾಡಳಿತವೂ… ಕಾರ್ಯಕಲಾಪಗಳೂ
ನಾಗಪಟ್ಟಣದಲ್ಲಿ ಒಂದು ಬೌದ್ಧ ದೇವಾಲಯವನ್ನು ಕಟ್ಟಿಸಿ ಮತ್ತು ವೈಷ್ಣವ ಮತಕ್ಕೂ ಪ್ರೋತ್ಸಾಹವನ್ನಿತ್ತು, ಪರಧರ್ಮ ಸಹಿಷ್ಣುತೆಯನ್ನು ಪ್ರದರ್ಶಿಸಿರುವನು. ರಾಜ್ಯಾಡಳಿತದಲ್ಲಿ ಸುಧಾರಣೆಯನ್ನು ತಂದು ಹೆಸರುವಾಸಿಯಾದನು. ಕಂದಾಯವನ್ನು ನಿರ್ಧರಿಸಲು ಭೂಮಿಯ ಸರ್ವೆ ಮಾಡಿಸಿದನಲ್ಲದೆ, ತನ್ನ ವಿಶ್ವಾಸಕ್ಕೆ ಯೋಗ್ಯರಾದ ಜನರನ್ನು ಪ್ರತಿನಿಧಿಗಳಾಗಿ ಅಲ್ಲಲ್ಲಿ ನಿಯಮಿಸಿ ಆಡಳಿತವು ಸರಿಯಾಗಿ ನಡೆಯುವಂತೆ ನೋಡಿಕೊಂಡನು.
ಕೆ.ವಿ. ತಿರುಮಲೇಶ್ ಬರೆಯುವ ಸರಣಿ
ಲಂಡನ್ನಿನಲ್ಲಿ ಹುಟ್ಟಿ ಮದ್ರಾಸಿನಲ್ಲಿ ಮಡಿದ ಸುಧಾರಕಿಯ ವೃತ್ತಾಂತ…
ಸಾಂಪ್ರದಾಯಿಕ ಸಾಂಸಾರಿಕ ಬದುಕಿನಿಂದ ಬೇರೆಯಾದ ಒಂದು ದಶಕದ ನಂತರ ಬೆಸಂಟ್, ಫ್ಯಾಬಿಯನ್ ಸಮಾಜ ಎನ್ನುವ ಸಮಾಜವಾದಿ ಸಂಘಟನೆಯ ಪ್ರಾಥಮಿಕ ಸದಸ್ಯೆ ಆದರು. ಬಿಯಾಟ್ರಿಸ್, ಸಿಡ್ನಿ ವೆಬ್ ಹಾಗು ಜಾರ್ಜ್ ಬರ್ನಾರ್ಡ್ ಷಾ ರಂತಹ ಪ್ರಸಿದ್ಧ ಚಿಂತಕರೂ ಆಗ ಸಂಘಟನೆಯ ಸಹಸದಸ್ಯರು. ಅವರೆಲ್ಲ ಐರಿಶ್ ಹೋಂ ರೂಲ್ ಚಳವಳಿಯನ್ನು ಬೆಂಬಲಿಸಿದವರು. ಬೆಸೆಂಟ್ “ಬ್ಲಡಿ ಸಂಡೆ” ಪ್ರದರ್ಶನದ ಭಾಗವಾದರು.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಅನ್ನಿ ಬೆಸೆಂಟ್ ಜೀವನ ವೃತ್ತಾಂತದ ಕುರಿತು ಬರೆದಿದ್ದಾರೆ ಯೋಗೀಂದ್ರ ಮರವಂತೆ
ಆ ತಂಪು ವಾತಾವರಣದಲ್ಲೂ ಬೆವರಿದೆ…
ಕೊನೆಗೆ ಗಲೀನಾಗೆ ವಿವರಿಸಬೇಕಾಯಿತು. ನಾನು ಬಹಳ ದುಃಖಿಯಾಗಿದ್ದೇನೆ. ನನ್ನ ಯುವಜನಾಂಗವನ್ನು ನಿಮ್ಮ ಯುವಜನಾಂಗದ ಜೊತೆ ಹೋಲಿಕೆ ಮಾಡಿಕೊಂಡು ನೋವನ್ನು ಅನುಭವಿಸುತ್ತಿದ್ದೇನೆ. ಅಲ್ಲದೆ ನನ್ನ ಸಂಸ್ಕಾರ ಬೇರೆಯೆ ಇದ್ದುದರಿಂದ ಈ ಕುಣಿತ ಸಾಧ್ಯವೇ ಇಲ್ಲದ ಮಾತು ಎಂದೆ. ಅವಳು ಅರ್ಥ ಮಾಡಿಕೊಂಡಳು. ‘ನಾನು ಉತ್ತರ ಭಾರತದ ಪ್ರವಾಸದಲ್ಲಿದ್ದಾಗ ಅಲ್ಲಿನ ಬಡತನ ನೋಡಿ ಮರುಗಿದ್ದೆ’ ಎಂದು ತಿಳಿಸಿದ ಅವಳು, ‘ಐ ಯಾಮ್ ಸೋ ಪ್ರೌಢ ಆಫ್ ಯು’ ಎಂದಳು. ಆ ಸ್ಥಳದಿಂದ ವಾಪಸ್ ಬಂದೆವು.
ರಂಜಾನ್ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 52ನೇ ಕಂತು ನಿಮ್ಮ ಓದಿಗೆ.
ಕಲ್ಲು ಕಲ್ಲಿನಲಿ… ಆನೆ ಕುದುರೆ…
ಎರಡನೇ ಪ್ರತಾಪರುದ್ರ ಯಾ ರುದ್ರದೇವ ರುದ್ರಾಂಬಳ ಮೊಮ್ಮಗನಾಗಿದ್ದು, ಆಕೆಯ ಅನಂತರ ಪಟ್ಟಕ್ಕೆ ಬಂದು ಅಕ್ಕ ಪಕ್ಕದ ದಂಗೆಗಳನ್ನು ಅಣಗಿಸಿ ಪ್ರಬಲನಾದನು. ದೆಹಲಿಯ ಸುಲ್ತಾನರು ದಕ್ಷಿಣವನ್ನು ಪ್ರವೇಶಿಸಿದುದು ಇವನ ಕಾಲದಲ್ಲೇ. ವಾರಂಗಲ್ಲಿಗೆ ಲಗ್ಗೆಯಿಟ್ಟ ಮುಸ್ಲಿಮ್ ಸೈನ್ಯವನ್ನು ಮೂರು ಬಾರಿ ಅವನು ಎದುರಿಸಬೇಕಾಯಿತು. 1309ರಲ್ಲಿ ಅಲ್ಲಾ ಉದ್ದೀನ ಖಿಲ್ಜಿಯಿಂದ ದಂಡನಾಯಕನಾಗಿ ನಿಯುಕ್ತನಾದ ಮಾಲಿಕ್ ಕಾಫಿರನು ವಾರಂಗಲ್ಲಿನ ಮೇಲೆ ಲಗ್ಗೆಯಿಟ್ಟನು. ಇದರಲ್ಲಿ ಜಯಶಾಲಿಯಾದ ಕಾಫಿರನು ನಗರವನ್ನೆಲ್ಲ ಲೂಟಿ ಮಾಡಿದನು.
ಕೆ.ವಿ. ತಿರುಮಲೇಶ್ ಬರೆಯುವ ‘ನನ್ನ ಹಿಸ್ಟರಿ ಪುಸ್ತಕ’ ಸರಣಿಯ ಮತ್ತೊಂದು ಬರಹ ಇಲ್ಲಿದೆ.
ದೂರ ದೂರ ಹೋದರೆ…
ನಾಯಕಿ ನೇಯ್ಗೆ ಮಾಡಿದ ಕೆಂಪು ವಸ್ತ್ರವನ್ನು ಶಾಲಾ ಕಟ್ಟಡದಲ್ಲಿ ಕಟ್ಟಲಾಗುತ್ತದೆ. ಈ ಎಲ್ಲ ಘಟನೆಗಳು ಜರುಗಿದರೂ ಒಮ್ಮೆಯೂ ನಾಯಕ-ನಾಯಕಿಯರ ಮುಖಾಮುಖಿಯಾಗಿರುವುದಿಲ್ಲ. ಶಾಲೆಯಲ್ಲಿ ಮಕ್ಕಳಿಗೆ ಪಾಠ ಹೇಳಿಕೊಡುತ್ತಿರುವುದರಿಂದ ಉಂಟಾಗುವ ಕಲರವವನ್ನು ಮನೆಯಲ್ಲಿರುವ ನಾಯಕಿ ತನ್ನಜ್ಜಿಯ ಜೊತೆಗೆ ಕೇಳಿಸಿಕೊಳ್ಳುತ್ತ ತನ್ನಷ್ಟಕ್ಕೆ ಸಂಭ್ರಮಿಸುತ್ತಾಳೆ. ಶಿಕ್ಷಕ ನಾಯಕನಿಗೆ ಪ್ರತಿದಿನ ಮಕ್ಕಳ ಜೊತೆ ಊರಾಚೆ ಓಡಾಡುವುದು ವಾಡಿಕೆ. ಅವನು ಹೀಗೆ ಮಾಡುವುದನ್ನು ನಿರೀಕ್ಷೆಯಿಂದ ಕಾಯುವ ಆತಂಕ, ಲಜ್ಜೆ ಸಂತೋಷ ಇವುಗಳನ್ನು ಒಳಗೊಂಡ ನಾಯಕಿಗೆ ನಾಯಕನ ಪ್ರಥಮ ಭೇಟಿಯಾಗುತ್ತದೆ.
ಎ.ಎನ್. ಪ್ರಸನ್ನ ಬರೆಯುವ ಸಿನಿಮಾ ಸರಣಿ
ಯುದ್ಧದಲ್ಲಿ ಗೆಲ್ಲುವುದು ಸಾವು ಮಾತ್ರ…
ಯುಸಿ಼ಫ್ ತನ್ನ ಹದಿನೈದು ವರ್ಷದ ಮಗ ಆದಮ್ನ ಹಿಂದೆ ನಿಂತ. ಅಂಬೆಗಾಲು ಹಾಕುತ್ತ ಜನರ ಕಾಲೊಳಗಿಂದ ಬಾಗಿಲ ಬಳಿ ಹೋಗಲು ಮಗನಿಗೆ ತಿಳಿಸಿದ. ಆದಮ್ ಪ್ರಯತ್ನಪಟ್ಟು ಬಾಗಿಲ ಬಳಿ ಬಂದು ಹೊರಗೆ ನುಸುಳಿ ಓಡತೊಡಗಿದ. ಆದರೆ ನಾಜಿಗಳ ಗುಂಡಿಗೆ ಗುರಿಯಾದ. ಮಗನನ್ನು ಹಿಂಬಾಲಿಸಿದ ಯುಸಿ಼ಫ್ ಮೇಲೂ ಗುಂಡು ಹಾರಿಸಲಾಯಿತು. ನಾಜಿಯೊಂದು ಓಡಿ ಬಂದು ಬಿದ್ದ ಯುಸಿ಼ಫ್ನನ್ನು ಬೂಟುಗಾಲಿನಿಂದ ಒದ್ದು, ಬಂದೂಕಿನಿಂದ ತಿವಿಯಲಾಯಿತು. ಖತಿನ್ ಅನುಭವಿಸಿದ ಕೊನೆ ಗಳಿಗೆಯನ್ನು ಮೂರ್ಛಾವಸ್ಥೆಯಲ್ಲಿದ್ದ ಯುಸಿ಼ಫ್ ನೋಡಲಾಗಲಿಲ್ಲ. ನಾಜಿಗಳು ಅಲ್ಲಿಂದ ಹೋದ ನಂತರ ನೆರೆ ಗ್ರಾಮದ ಜನರು ಯುಸಿ಼ಫ್ನನ್ನು ಬದುಕಿಸಿದರು.
ರಂಜಾನ್ ದರ್ಗಾ ಬರೆಯುವ ಆತ್ಮಕತೆ ಸರಣಿ
ಮದ್ರಾಸಿನಂತಹ ಲಂಡನ್ನಿನಲ್ಲಿದ್ದ ತಪಸ್ವಿ
ಲಂಡನ್ ಬದುಕಿನ ದೀರ್ಘ ಅನುಭವವನ್ನು ಹೀಗೆ ಬರೆದುಕೊಂಡಿದ್ದ ವಿ.ಕೆ. ಕೃಷ್ಣ ಮೆನನ್, ಅದಕ್ಕಿಂತ 43 ವರ್ಷಗಳ ಹಿಂದೆ 1920ರಲ್ಲಿ, ವಕೀಲಿಕೆಯ ವಿದ್ಯಾರ್ಥಿಯಾಗಿ ಮದ್ರಾಸಿನಲ್ಲಿದ್ದಾಗ ಅನ್ನಿ ಬೆಸೆಂಟರ ಹೋಂ ರೂಲ್ ಚಳವಳಿಯ ಪ್ರಭಾವಕ್ಕೆ ಒಳಗಾಗಿದ್ದರು. ಬೆಸೆಂಟರೂ ರಾಷ್ಟ್ರೀಯತೆಯ ಖಾತೆಗೆ ಇನ್ನೊಬ್ಬ ವ್ಯಕ್ತಿಯನ್ನು ಜಮಾ ಮಾಡುವ ಉದ್ದೇಶ ಇಟ್ಟು ಹುಡುಕಾಟದಲ್ಲಿ ಇದ್ದವರು. ಮೆನನ್ರನ್ನು “ಹೋಮ್ ರೂಲ್” ಕುಟುಂಬದ ಸದಸ್ಯನನ್ನಾಗಿ ಸ್ವೀಕರಿಸಿದರು ಮತ್ತು ಇಂಗ್ಲೆಂಡ್ನಲ್ಲಿ ಮೆನನ್ರ ಥಿಯೋಸ್ಪಿಯನ್ ಅರಿವನ್ನು ಹೆಚ್ಚಿಸಬಹುದಾದ ಓದಿನ ವಿದ್ಯಾರ್ಥಿವೇತನಕ್ಕಾಗಿ ಓಡಾಡಿದರು.
ಯೋಗೀಂದ್ರ ಮರವಂತೆ ಬರಹ










