ಅಬ್ದುಲ್ ರಶೀದ್ ಬರೆದ ಈ ಭಾನುವಾರದ ಕತೆ
‘ಟಿ ಎಸ್ ಎಲಿಯಟ್ ಹೇಳುವ ಪ್ರತಿಭೆ ಮತ್ತು ಪರಂಪರೆ ಅಥವಾ ಪರಂಪರೆ ಮತ್ತು ಪ್ರತಿಬೆ ಒಂದನ್ನೊಂದು ನುಂಗಲು ಹೊರಟಿರುವ ಎರಡು ಹಲ್ಲಿಗಳ ಹಾಗೆ. ಯಾವುದು ತಿನ್ನುತ್ತಿರುವುದು, ಯಾವುದು ಸಾಯುತ್ತಿರುವುದು ಎಂದು ಗೊತ್ತಾಗುವುದಿಲ್ಲ. ಕನ್ನಡದ ದೊಡ್ಡ ಕಥೆಗಾರ್ತಿಯೊಬ್ಬಳು ಸುಳಿಯಲ್ಲಿ ಸಿಲುಕಿ ಮೃತಳಾದ ನದಿಯ ಪಕ್ಕದಲ್ಲೇ ಕುಳಿತು ಕನ್ನಡದ ಎಳೆಯ ಕಥೆಗಾರ ನಚಿಕೇತ ತನ್ನ ಹೊಸ ಕಥೆಗಳನ್ನು ಬರೆಯುತ್ತಿದ್ದಾನೆ.
ಅಬ್ದುಲ್ ರಶೀದ್ ಬರೆದ ಈ ಭಾನುವಾರದ ಕತೆ “ಸುಳಿಹೊಳೆ ಕಥಾಧಾಮ” ನಿಮ್ಮ ಓದಿಗೆ
ಕೆನ್ನೆಮೇಲೆ…. ಕೆಂಪು ಬಾಸುಂಡೆ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ
ಸ್ವಲ್ಪ ಹೊತ್ತಾದ ಮೇಲೆ ಏನೋ ಜ್ಞಾಪಕ ಬಂದಂತೆ ಎದೆಯ ಮೇಲಿನ ಶರ್ಟ್ ನೋಡಿಕೊಂಡ. ಶರ್ಟ್ ಮೇಲೆ ಎರಡು ತೊಟ್ಟ ರಕ್ತ ಬಿದ್ದಿರುವುದು ಕಾಣಿಸಿತು. ಈಗ ಏನು ಮಾಡುವುದು? ಮನೆಗೋದರೆ ಅಮ್ಮ ಇಲ್ಲ ಸುಮತಿ ನೋಡೇನೋಡುತ್ತಾರೆ. ಮೂಗು ಊದಿಕೊಂಡಿದೆಯೇನೊ ಎನ್ನುವ ಅನುಮಾನ ಬಂದು, ಗುಡಿಯ ಒಳಗಡೆ ಹೋಗಿ ಕನ್ನಡಿಯಲ್ಲಿ ನೋಡಿದರೆ ಹೇಗೆ ಎನ್ನುವ ಆಲೋಚನೆ ಬಂದರೂ ಗುಡಿಯಲ್ಲಿ ಸಾಕಷ್ಟು ಜನರಿದ್ದು ಹೋಗುವುದು ಸರಿಇಲ್ಲ ಎಂದು ಅಲ್ಲೇ ಕುಳಿತುಕೊಂಡ.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿ
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಶುಭಶ್ರೀ ಪ್ರಸಾದ್ ಕತೆ
ಒಮ್ಮೆ ನಾವಿಬ್ಬರೂ ಮಾತನಾಡುವ ಪ್ರಸಂಗ ಬಂದಾಗ ನಾನು ನನ್ನ ಕುಲದ ಬಗ್ಗೆ ಹೇಳಿದೆ; ಆ ಸಾಂಪ್ರದಾಯಿಕ ಬೇಲಿಯನ್ನು ಹಾರಬೇಕೆಂಬ ಆಸೆಯನ್ನು ತೋಡಿಕೊಂಡೆ. ಬಿಸಿ ರಕ್ತ, ವಿಚಾರವಂತಿಕೆಯ ಮೆದುಳು ಅವನಿಗೆ ಬಲ ತುಂಬಿತ್ತು. ಊರಿನ ಹಿರೀಗೌಡನಾದರೋ ಸರ್ವಾಂಗ ಸುಂದರಿ-ತೊಳೆದ ಮುತ್ತಿನಂತಿದ್ದ ನನ್ನನ್ನು ನೋಡಿ ಜೊಲ್ಲು ಸುರಿಸಿದ್ದು ತಿಳಿದ ದಿನ ಮೈಮೇಲೆ ಹಾವು-ಚೇಳು ಹರಿದಂತಾಗಿತ್ತು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಶುಭಶ್ರೀ ಪ್ರಸಾದ್ ಕತೆ “ನಾ ಸಾಯಬೇಕು…”
ಕಪ್ಪು ನೆಲದಲ್ಲಿ ಹುಟ್ಟಿಕೊಂಡಿತು ಚಿನ್ನದ ನಗರ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ
ಎಲ್ಲರೂ ಅವರನ್ನೇ ನೋಡುತ್ತಿದ್ದರು. ಸೆಲ್ವಿಗೆ ಬೇರೆ ದಾರಿ ಕಾಣದೇ ಇನ್ನೊಂದು ಕೈಯಲ್ಲಿದ್ದ ಪುಸ್ತಕಗಳನ್ನು ನೆಲಕ್ಕೆ ಹಾಕಿ ಮಣಿ ಕೆನ್ನೆಗೆ ಜೋರಾಗಿ ಬಾರಿಸಿದಳು. ಬಾರಿಸಿದ ಏಟಿಗೆ ಆ ಮರದಲ್ಲಿದ್ದ ಹಕ್ಕಿಗಳೆಲ್ಲ ಹಾರಿಹೋದವು. ಸುತ್ತಲೂ ನಿಂತು ನೋಡುತ್ತಿದ್ದ ಹುಡುಗರಲ್ಲಿ ಕೆಲವರು ತಮ್ಮ ಕೆನ್ನೆಗಳನ್ನು ಮುಟ್ಟಿನೋಡಿಕೊಂಡು ಕಣ್ಣುಕಣ್ಣುಬಿಟ್ಟರು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಮೂರನೆಯ ಕಂತು ನಿಮ್ಮ ಓದಿಗೆ
ಡಾ. ದಿಲೀಪ್ ಕುಮಾರ್ ಎನ್.ಕೆ. ಬರೆದ ಈ ಭಾನುವಾರದ ಕತೆ
ಗುಂಡನಿಗೆ ನಿದ್ರೆಯೇ ಬರುತ್ತಿಲ್ಲ. ಆತ ಏನೇನೋ ಯೋಚಿಸುತ್ತಾ ಎಚ್ಚರವಾಗೇ ಇದ್ದಾನೆ. ನಿದ್ದೆ ತಾನೇ ಅವನಿಗೆ ಎಲ್ಲಿಂದ ಬರಬೇಕು? ಅವನ ಮನಸ್ಸಿನ ತುಂಬೆಲ್ಲಾ ಅವನ ಅಪ್ಪ ಅಮ್ಮರೇ ತುಂಬಿಹೋಗಿದ್ದಾರೆ. ಅವನಿಗೆ ಏನನ್ನಿಸಿತೋ ಏನೋ? ಮೆಲ್ಲಗೆ ಎದ್ದು ಮಲಗಿದ್ದ ಅಪ್ಪನನ್ನೇ ಕಣ್ತುಂಬಿಕೊಳ್ಳುತ್ತಾ ಅಪ್ಪನ ಮಟ್ಟಗುಂಜಿನಂತಿದ್ದ ತಲೆಗೂದಲ ಮೇಲೆ ಕೈಯಾಡಿಸುತ್ತಾನೆ. ಅವನ ಚಕ್ಕಳವಾದ ದೇಹ. ಅವನ ನೋವಿನ ಕಾಲು. ಇತ್ತ ತನ್ನ ಮಗ್ಗುಲಲ್ಲೇ ಮಲಗಿದ್ದ ಅವ್ವನನ್ನು ನೋಡುತ್ತಾನೆ.
ಡಾ. ದಿಲೀಪ್ ಕುಮಾರ್ ಎನ್.ಕೆ. ಬರೆದ ಈ ಭಾನುವಾರದ ಕತೆ “ಸುಟ್ಟಿರದೇ ಮೂರ್ ದ್ವಾಸ…” ನಿಮ್ಮ ಓದಿಗೆ
ಮಣಿ…: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ
ನೂರು ವರ್ಷಗಳಿಂದ ಗಣಿ ಸುರಂಗಗಳಿಂದ ತೆಗೆದ ಕಲ್ಲುಗಳ ಅದಿರನ್ನು ಪುಡಿಮಾಡಿ ಚಿನ್ನ ತೆಗೆದುಕೊಂಡು ಬಿಸಾಕಿರುವ ಗಣಿ ತ್ಯಾಜ್ಯದ ಗುಡ್ಡ ಅದು. ನೆಲದ ಮೇಲೆ ಇಷ್ಟು ದೊಡ್ಡ ಗುಡ್ಡ ಬಿದ್ದಿದೆ ಎಂದರೆ ಎಷ್ಟು ಜನರು ಗಣಿ ಸುರಂಗಗಳಲ್ಲಿ ಕೆಲಸ ಮಾಡಿರಬೇಕು? ಎಷ್ಟು ಬೆವರು ಸುರಿದಿರಬೇಕು? ಎಷ್ಟು ಜನರು ಸತ್ತಿರಬೇಕು? ಈ ಗುಡ್ಡಗಳು ಬೀಳಲು ನಮ್ಮ ಪೂರ್ವಜರೆ ಕಾರಣ ಎಂದುಕೊಂಡ. ಮಣಿ ತಂದೆ ಸೆಲ್ವಮ್. ಸೆಲ್ವಮ್ ತಂದೆ ಕುಪ್ಪ ಹೇಳುತ್ತಿದ್ದ ಅನೇಕ ಗಣಿ ದುರಂತಗಳ ಕರಾಳ ಕಥೆಗಳು ಮಣಿ ತಲೆಯಲ್ಲಿ ಹಾವುಗಳಂತೆ ಹರಿದಾಡತೊಡಗಿದವು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಎರಡನೆಯ ಕಂತು ನಿಮ್ಮ ಓದಿಗೆ
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸಂತೋಷ್ ಅನಂತಪುರ ಕತೆ
ತನ್ನ ಮಗಳು ಕಣ್ಣೆದುರಿಗೆ ಅಳುತ್ತಿರುವುದನ್ನು ಕಂಡೂ ಯಾವುದೇ ವಿಕಾರಗಳನ್ನು ಹರಿಸದೆ ಮೌನದಿಂದ ಶೂನ್ಯವನ್ನು ದಿಟ್ಟಿಸುತ್ತಾ, ಅಜ್ಜನನ್ನು ತಬ್ಬಿಕೊಂಡ ಮಗಳನ್ನು ಮತ್ತು ಅಪ್ಪ ಶೇಖರಪ್ಪಯ್ಯರನ್ನು ನಿರ್ಭಾವದಿಂದ ನೋಡುತ್ತಿದ್ದ. ಶೇಖರಪ್ಪಯ್ಯರ ಹೊಟ್ಟೆ ಹೊತ್ತಿಯೇ ಹೋಯಿತೇನೋ ಎನ್ನುವಂತೆ ಎಡಗೈಯಿಂದ ಹೊಟ್ಟೆಯನ್ನು ಹಿಡಿದು ಹಿಚುಕುತ್ತಾ ಸವರುತ್ತಾ, ಮೊಮ್ಮಗಳನ್ನು ಬಿಗಿದಪ್ಪಿಕೊಂಡು ಮಗನೇ… ಸೂರ್ಯ…. ನಾನು ಕಣೋ ಅಪ್ಪಾ… ಮಾತಾಡೋ, ಮಾತಾಡು ಕಂದ ಎಂದು ಸೂರ್ಯನಿಗೆ ಹೇಳುತ್ತಿದ್ದರೆ….
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸಂತೋಷ್ ಅನಂತಪುರ ಕತೆ “ಗಂಧ”
ಡಾ. ಎಂ. ವೆಂಕಟಸ್ವಾಮಿ ಕಾದಂಬರಿ “ಒಂದು ಎಳೆ ಬಂಗಾರದ ಕಥೆ” ಶುರು…
ಕೆ.ಜಿ.ಎಫ್ ಎಂಬ ನೆಲದಲ್ಲಿ, ಚಿನ್ನದ ಅದಿರಿನ ಶೋಧನೆಯ ಸಮಯದಲ್ಲಿ ಅಲ್ಲಿನ ಜನರು ಹಾಗೂ ಕಾರ್ಮಿಕರು ಅನುಭವಿಸಿದ ತಲ್ಲಣಗಳ ಕುರಿತು ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” (ಕೆಜಿಎಫ್ ಗಣಿಗಳ ತವಕ ತಲ್ಲಣಗಳು) ಕಾದಂಬರಿ ಪ್ರತಿ ಶನಿವಾರಗಳಂದು ನಿಮ್ಮ ಕೆಂಡಸಂಪಿಗೆಯಲ್ಲಿ ಪ್ರಕಟವಾಗಲಿದೆ.
ಕರುಣ ಪ್ರಸಾದ್ ಕೆ ಎಸ್ ಬರೆದ ಈ ಭಾನುವಾರದ ಕಿರುಕತೆ
ಅವರೇನಾದರೂ ಅಸೂಯೆಯಿಂದ ನಿಂದಿಸಿದರೆ ನಾನು ಸಿಟ್ಟುಗೊಳ್ಳುವುದಿಲ್ಲ ಮತ್ತೆ ಗುಡ್ಡದ ತರ ಸ್ತಬ್ಧನಾಗುತ್ತೇನೆ. ಮತ್ತೆ ಅವರಿಗೆ ನಿಲುಕದ ಪರ್ವತವಾಗುತ್ತೇನೆ. ಇದು ಇಷ್ಟು ದಿನ ಅವರು ನನ್ನನ್ನು ತಯಾರು ಮಾಡಿದ ರೀತಿಗೆ ನನ್ನ ಪ್ರತಿಭಟನೆ. ಇದರಲ್ಲಿ ಅವರ ರೀತಿಯಲ್ಲಿ ಬದುಕುವುದು ನಾನೆಯಾದರು ಸೋಲುವುದು ಮಾತ್ರ ಅವರು, ಅದನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ, ನಾನು ನಿಸರ್ಗದ ತತ್ವಕ್ಕೆ ತಕ್ಕನಾಗಿ ನಾನು ನಿಸರ್ಗವಾಗಿದ್ದೇನೆ.
ಕರುಣ ಪ್ರಸಾದ್ ಕೆ ಎಸ್ ಬರೆದ ಈ ಭಾನುವಾರದ ಕಿರುಕತೆ “ಓಡುವವನ ಅಂತರಾಳ”






