Advertisement

ಸಾಹಿತ್ಯ

ಸ್ಫೋಟಕ್ಕೆ ಬಲಿಯಾದ ಬದುಕು..: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಸ್ಫೋಟಕ್ಕೆ ಬಲಿಯಾದ ಬದುಕು..: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಸೆಲ್ವಮ್ ದೇಹದ ಹತ್ತಿರ ಕನಕ, ಮಣಿ ಮತ್ತು ಸುಮತಿ ನಿಂತುಕೊಂಡು ರೋದನೆ ಮಾಡುತ್ತಿದ್ದರು. ಸಾರ್ವಜನಿಕರು, ಕಾರ್ಮಿಕರು, ಅಧಿಕಾರಿಗಳು ಎಲ್ಲರೂ ಬಂದು ಸತ್ತವರಿಗೆ ಹೂಮಾಲೆಗಳನ್ನು ಅರ್ಪಿಸಿದರು. ಹೂಮಾಲೆಗಳು ಎತ್ತಿನ ಬಂಡಿಗಳು ತುಂಬುವಷ್ಟು ಬಿದ್ದಿದ್ದವು. ಕೊನೆಗೆ ಐದೂ ಮೃತ ದೇಹಗಳನ್ನು ಮೂರು ವ್ಯಾನ್‌ಗಳಲ್ಲಿ ಹಾಕಿಕೊಂಡು ಕುಪ್ಪಂ ರಸ್ತೆಯಲ್ಲಿ ರೋಜರಸ್ ಕ್ಯಾಂಪ್ ಹತ್ತಿರ ಇರುವ ಗಣಿ ಕಾರ್ಮಿಕರ ಸಮಾಧಿ ಕಡೆಗೆ ಮೆರವಣಿಗೆಯಲ್ಲಿ ಹೋಗಿ ಗೌರವಪೂರ್ವಕವಾಗಿ ಅವರವರ ಕುಟುಂಬಗಳಿದ್ದ ಸಮಾಧಿಗಳ ಮಧ್ಯೆ ಸಮಾಧಿ ಮಾಡಲಾಯಿತು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿ

read more
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಶ್ರೀನಾಥ್ ರಾಯಸಂ ಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಶ್ರೀನಾಥ್ ರಾಯಸಂ ಕತೆ

ಹಾಲುಸೇವೆ ಮುಗಿಸಿಕೊಂಡು ಗೋಪಾಲಿ ನಾಗೇನಹಳ್ಳಿಗೆ ಮರಳುತ್ತಾನೆ ಎಂದು ನಂಬಿಕೆಯೇ ಇಟ್ಟುಕೊಂಡಿರದ ಜನಕ್ಕೆ ಆಗಬಾರದಷ್ಟು ನಿರಾಶೆಯಾಯಿತು. ‘ಇಂಥ ಪಾಖಂಡಿಯೊಬ್ಬ ಹಾಲುಸೇವೆ ಮಾಡಿ ಮರಳಿಬರುತ್ತಾನೆ ಅಂದರೆ ಅದರರ್ಥ ಏನು?’ ಎಂಬ ಪ್ರಶ್ನೆ ಎಲ್ಲರ ಮನಸ್ಸಿನಲ್ಲಿ ಏಕಕಾಲಕ್ಕೆ ಮೂಡಿತು. ಸತ್ಯವಂತದೇವರಾದ ನಾಗಲಿಂಗಸ್ವಾಮಿ ಗೋಪಾಲಿಯಂಥ ಅಪವಿತ್ರ ದೇಹಿಯಿಂದ ಸ್ಪರ್ಷಕ್ಕೆ ಒಳಗಾಗಿ ಅದ್ಹೇಗೆ ಪರಿಣಾಮ ತೋರಿಸಲಿಲ್ಲ? ಸಾಯುವ ಘಳಿಗೆಯಲ್ಲಿ ಗುರುಶಾಂತಯ್ಯನವರು ಹಾಗೇಕೆ ಎಚ್ಚರಿಸುವ ದನಿಯಲ್ಲಿ, ಶಾಪ ಹಾಕುವ ರೀತಿಯಲ್ಲಿ ನುಡಿದರು?
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಶ್ರೀನಾಥ್ ರಾಯಸಂ ಕತೆ “ಹಾಲುಸೇವೆ” ನಿಮ್ಮ ಓದಿಗೆ

read more
ಮನುಷ್ಯನ ಪ್ರಸ್ತಾಪನೆ ದೇವರ ನಿರಾಕರಣೆ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಮನುಷ್ಯನ ಪ್ರಸ್ತಾಪನೆ ದೇವರ ನಿರಾಕರಣೆ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಮಣಿ ಅವಳನ್ನು ತಬ್ಬಿಕೊಂಡು ಮಲಗೇ ಇದ್ದನು. ಸೆಲ್ವಿ, “ಇದಕ್ಕೆ ನಾನು, ನಿನ್ನನ್ನು ಹತ್ತಿರಕ್ಕೆ ಸೇರಿಸ್ತಾಇರಲಿಲ್ಲ” ಎಂದಳು. ಆದರೆ ಅವನು ಅವಳನ್ನು ಬಿಡಲಿಲ್ಲ. ಸೆಲ್ವಿ ಮಣಿಯಿಂದ ಬಿಡಿಸಿಕೊಳ್ಳಲು ಹರಸಾಹಸ ಮಾಡಬೇಕಾಯಿತು. ಸೆಲ್ವಿ ಮತ್ತೆ, “ನಿನ್ನನ್ನ ಮನೆಗೆ ಸೇರಿಸಿಕೊಂಡಿದ್ದೆ ತಪ್ಪಾಯಿತು” ಎಂದು ಅವನಿಂದ ಬಿಡಿಸಿಕೊಂಡು ಎದ್ದು ಬಾಗಿಲನ್ನು ನಿಧಾನವಾಗಿ ತೆರೆದು ಹೊರಕ್ಕೆ ನೋಡಿದಳು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿ

read more
ಪ್ರಾಣಪಕ್ಷಿಗಳು ಹಾರಿಹೋದವು: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಪ್ರಾಣಪಕ್ಷಿಗಳು ಹಾರಿಹೋದವು: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಕೊನೆಗೆ ರಾತ್ರಿ 12 ಗಂಟೆಗೆ ಯೂನಿಫಾರ್ಮ್ ಬಟ್ಟೆ ಕಾಣಿಸಿಕೊಂಡಿತು. ನಿಧಾನವಾಗಿ ಉಸಿರಿಡಿದುಕೊಂಡು ಬಾಬು ದೇವವನ್ನು ಕಲ್ಲುಮಣ್ಣಿನ ಕೆಳಗಿಂದ ಹೊರಕ್ಕೆ ತೆಗೆದು ನೋಡಿದರು! ಆತನ ದೇಹದ ಮೇಲಿನ ಯೂನಿಫಾರ್ಮ್ ಬಟ್ಟೆಗಳು ರಕ್ತದಿಂದ ಹೆಪ್ಪು ಕಟ್ಟಿಕೊಂಡಿದ್ದವು. ದೇಹ ನುಜ್ಜುಗುಜ್ಜಾಗಿ ಹೋಗಿತ್ತು. ದೊಡ್ಡ ಕಲ್ಲುಮಣ್ಣಿನ ರಾಶಿ ಅವನ ಮೇಲೆ ಕುಸಿದು ಬಿದ್ದು ಕೆಲವೇ ನಿಮಿಷಗಳಲ್ಲಿ ಅವನ ಪ್ರಾಣಪಕ್ಷಿ ಹಾರಿಹೋಗಿತ್ತು. ಅವನ ದೇಹವನ್ನು ನೋಡಿದ ಕಾರ್ಮಿಕರು ಸ್ವಲ್ಪ ಹೊತ್ತು ಏನೂ ಮಾತನಾಡದೆ ವಿದ್ಯುತ್ ಶಾಕ್ ಹೊಡೆದುಕೊಂಡಂತೆ ಹಾಗೇ ನಿಂತುಕೊಂಡೇ ಇದ್ದರು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿ

read more
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸುನಂದಾ ಪ್ರಕಾಶ ಕಡಮೆ ಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸುನಂದಾ ಪ್ರಕಾಶ ಕಡಮೆ ಕತೆ

ವಿಶ್ವನಾಥನಿಗೆ ಸಹನೆಯ ಕಟ್ಟೆಯೊಡಯತೊಡಗಿತ್ತು. ‘ನೀವು ನಮ್ಮನ್ನು ಕರೆಸಿದ್ದು ನಿಮ್ಮ ಫೋನ್ ನಂಬರಿಗೆ ಲಾಟರಿ ಹತ್ತಿದೆ, ಬಹುಮಾನ ಗಳಿಸಿದ್ದೀರಿ ಬನ್ನಿ ಅಂತ, ಸುಮ್ಮನೇ ನಮ್ಮ ಬಹುಮಾನ ನಮಗೆ ಕೊಟ್ಟು ನಂತರ ಮಾತಾಡಿ, ನಾವು ನಮ್ಮ ಕೆಲಸ ಬೊಗಸೆ ಎಲ್ಲ ಬಿಟ್ಟು ಇಲ್ಲಿ ಬಂದಿದ್ದೇವೆ, ಕಂಪ್ಲೆಂಟು ಕೊಡ್ತೇನೆ ಕಂಪ್ಲೆಂಟು’ ಅಂತ ಎದ್ದು ನಿಂತು ದೊಡ್ಡ ದನಿಯಲ್ಲಿ ಕೂಗಾಡತೊಡಗಿದ್ದೇ, ಅಲ್ಲಿಯ ವ್ಯವಸ್ಥಾಪಕರು ಕಸಿವಿಸಿಗೊಂಡರು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸುನಂದಾ ಪ್ರಕಾಶ ಕಡಮೆ ಕತೆ “ನೀರ ಮಣಿಗಳ ಮಾಲೆ”

read more
ದಾರಿ ತಪ್ಪಿದ ಪ್ರೀತಿ ಬದುಕು ಕಟ್ಟಿಕೊಳ್ಳುವುದನ್ನು ತಪ್ಪಿಸುವುದೇ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ದಾರಿ ತಪ್ಪಿದ ಪ್ರೀತಿ ಬದುಕು ಕಟ್ಟಿಕೊಳ್ಳುವುದನ್ನು ತಪ್ಪಿಸುವುದೇ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಕಾಲಿನ ಹೆಬ್ಬೆರಳಲ್ಲಿ ರಕ್ತ ಒಸರುತ್ತಿದೆ. ಕನಕ, “ಅಯ್ಯೋ ಏನ್ರಿ ಇದು?” ಎಂದಳು. ಸೆಲ್ವಮ್, “ಏನೂ ಇಲ್ಲ. ಅಲ್ಲೊಂದು ಕಲ್ಲು ಹೊಡೆದುಬಿಟ್ಟಿತು. ಒಂದಷ್ಟು ಅರಿಶಿನ, ಒದ್ದೆಬಟ್ಟೆ ತೆಕೊಂಡು ಬಾ” ಎಂದ. ಕನಕ ಮನೆ ಒಳಕ್ಕೆ ಹೋಗಿ ಚೆಂಬಿನಲ್ಲಿ ನೀರು ತಂದು “ಸುಮತಿ ನೀರಾಕು ನಿಮ್ಮಪ್ಪ ಬೆರಳುಗಳನ್ನು ತೊಳೆದುಕೊಳ್ಳಲಿ. ನಾನು ಅರಿಶಿನ ಬಟ್ಟೆ ತರ್ತೀನಿ” ಎಂದು ಮತ್ತೆ ಮನೆ ಒಳಕ್ಕೆ ಹೋದಳು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಐದನೆಯ ಕಂತು ನಿಮ್ಮ ಓದಿಗೆ

read more
ಅಬ್ದುಲ್ ರಶೀದ್ ಬರೆದ ಈ ಭಾನುವಾರದ ಕತೆ

ಅಬ್ದುಲ್ ರಶೀದ್ ಬರೆದ ಈ ಭಾನುವಾರದ ಕತೆ

‘ಟಿ ಎಸ್ ಎಲಿಯಟ್ ಹೇಳುವ ಪ್ರತಿಭೆ ಮತ್ತು ಪರಂಪರೆ ಅಥವಾ ಪರಂಪರೆ ಮತ್ತು ಪ್ರತಿಬೆ ಒಂದನ್ನೊಂದು ನುಂಗಲು ಹೊರಟಿರುವ ಎರಡು ಹಲ್ಲಿಗಳ ಹಾಗೆ. ಯಾವುದು ತಿನ್ನುತ್ತಿರುವುದು, ಯಾವುದು ಸಾಯುತ್ತಿರುವುದು ಎಂದು ಗೊತ್ತಾಗುವುದಿಲ್ಲ. ಕನ್ನಡದ ದೊಡ್ಡ ಕಥೆಗಾರ್ತಿಯೊಬ್ಬಳು ಸುಳಿಯಲ್ಲಿ ಸಿಲುಕಿ ಮೃತಳಾದ ನದಿಯ ಪಕ್ಕದಲ್ಲೇ ಕುಳಿತು ಕನ್ನಡದ ಎಳೆಯ ಕಥೆಗಾರ ನಚಿಕೇತ ತನ್ನ ಹೊಸ ಕಥೆಗಳನ್ನು ಬರೆಯುತ್ತಿದ್ದಾನೆ.
ಅಬ್ದುಲ್‌ ರಶೀದ್‌ ಬರೆದ ಈ ಭಾನುವಾರದ ಕತೆ “ಸುಳಿಹೊಳೆ ಕಥಾಧಾಮ” ನಿಮ್ಮ ಓದಿಗೆ

read more
ಕೆನ್ನೆಮೇಲೆ…. ಕೆಂಪು ಬಾಸುಂಡೆ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಕೆನ್ನೆಮೇಲೆ…. ಕೆಂಪು ಬಾಸುಂಡೆ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಸ್ವಲ್ಪ ಹೊತ್ತಾದ ಮೇಲೆ ಏನೋ ಜ್ಞಾಪಕ ಬಂದಂತೆ ಎದೆಯ ಮೇಲಿನ ಶರ್ಟ್ ನೋಡಿಕೊಂಡ. ಶರ್ಟ್ ಮೇಲೆ ಎರಡು ತೊಟ್ಟ ರಕ್ತ ಬಿದ್ದಿರುವುದು ಕಾಣಿಸಿತು. ಈಗ ಏನು ಮಾಡುವುದು? ಮನೆಗೋದರೆ ಅಮ್ಮ ಇಲ್ಲ ಸುಮತಿ ನೋಡೇನೋಡುತ್ತಾರೆ. ಮೂಗು ಊದಿಕೊಂಡಿದೆಯೇನೊ ಎನ್ನುವ ಅನುಮಾನ ಬಂದು, ಗುಡಿಯ ಒಳಗಡೆ ಹೋಗಿ ಕನ್ನಡಿಯಲ್ಲಿ ನೋಡಿದರೆ ಹೇಗೆ ಎನ್ನುವ ಆಲೋಚನೆ ಬಂದರೂ ಗುಡಿಯಲ್ಲಿ ಸಾಕಷ್ಟು ಜನರಿದ್ದು ಹೋಗುವುದು ಸರಿಇಲ್ಲ ಎಂದು ಅಲ್ಲೇ ಕುಳಿತುಕೊಂಡ.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿ

read more
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಶುಭಶ್ರೀ ಪ್ರಸಾದ್ ಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಶುಭಶ್ರೀ ಪ್ರಸಾದ್ ಕತೆ

ಒಮ್ಮೆ ನಾವಿಬ್ಬರೂ ಮಾತನಾಡುವ ಪ್ರಸಂಗ ಬಂದಾಗ ನಾನು ನನ್ನ ಕುಲದ ಬಗ್ಗೆ ಹೇಳಿದೆ; ಆ ಸಾಂಪ್ರದಾಯಿಕ ಬೇಲಿಯನ್ನು ಹಾರಬೇಕೆಂಬ ಆಸೆಯನ್ನು ತೋಡಿಕೊಂಡೆ. ಬಿಸಿ ರಕ್ತ, ವಿಚಾರವಂತಿಕೆಯ ಮೆದುಳು ಅವನಿಗೆ ಬಲ ತುಂಬಿತ್ತು. ಊರಿನ ಹಿರೀಗೌಡನಾದರೋ ಸರ್ವಾಂಗ ಸುಂದರಿ-ತೊಳೆದ ಮುತ್ತಿನಂತಿದ್ದ ನನ್ನನ್ನು ನೋಡಿ ಜೊಲ್ಲು ಸುರಿಸಿದ್ದು ತಿಳಿದ ದಿನ ಮೈಮೇಲೆ ಹಾವು-ಚೇಳು ಹರಿದಂತಾಗಿತ್ತು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಶುಭಶ್ರೀ ಪ್ರಸಾದ್ ಕತೆ “ನಾ ಸಾಯಬೇಕು…”

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ